Subscribe to Updates
Get the latest creative news from FooBar about art, design and business.
Author: kannadanewsnow05
ಕೊಡಗು : ಪಹಲ್ಗಾಮ್ ನಲ್ಲಿ ಉಗ್ರರ ಗುಂಡಿನ ದಾಳಿ ಗೆ ಇಬ್ಬರು ಕನ್ನಡಿಗರು ಸೇರಿದಂತೆ ಪ್ರವಾಸಿಗರು ಬಲಿಯಾಗಿದ್ದಾರೆ. ಇದೀಗ ಈ ಒಂದು ನರಮೇಧವನ್ನು ಸಮರ್ಥಿಸಿ ಕೊಡಗಿನಲ್ಲಿ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದ ಘಟನೆ ನಡೆದಿದ್ದು, ಈ ಹಿನ್ನೆಲೆಯಲ್ಲಿ ಫೇಸ್ ಬುಕ್ ಪೇಜ್ ವಿರುದ್ಧ ಮಂಗಳೂರಿನ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಳ್ಳಾಲದ ಸತೀಶ್ ಕುಮಾರ್ ಎಂಬವರು ನೀಡಿದ ದೂರಿನ ಆಧಾರದ ಮೇಲೆ FIR ದಾಖಲಾಗಿದೆ. ಹೌದು ನಿಚ್ಚು ಮಂಗಳೂರು ಎಂಬ ಫೇಸ್ಬುಕ್ ಪೇಜ್ನಲ್ಲಿ, 2023ರಲ್ಲಿ ಮಹಾರಾಷ್ಟ್ರದ ಪಾಲ್ಗರ್ನಲ್ಲಿ ಮೂವರು ಮುಸ್ಲಿಮರನ್ನು ಕೊಲ್ಲಲಾಗಿತ್ತು. ಆರೋಪಿ ಚೇತನ್ ಸಿಂಗ್ಗೆ ಸಾರ್ವಜನಿಕವಾಗಿ ನೇಣಿಗೆ ಹಾಕಲಿಲ್ಲ. ಪಾಲ್ಗರ್ ಘಟನೆ ಕಾರಣಕ್ಕೆ ಕಾಶ್ಮೀರದಲ್ಲಿ ಧರ್ಮ ಕೇಳಿ ಉಗ್ರರು ಹತ್ಯೆ ಮಾಡಿದ್ದಾರೆ” ಎಂದು ಪೋಸ್ಟ್ ಹಾಕಲಾಗಿದೆ. ಈ ಪೋಸ್ಟ್ಗೆ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಭಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಪೇಸ್ ಬುಕ್ ಪೇಜ್ನ ಡಿಪಿಯಲ್ಲಿರುವ ಯುವಕ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾಗಿದ್ದು, ಪೊಲೀಸರು ಆತನಿಗಾಗಿ ಹುಡುಕಾಟ…
ಮಡಿಕೇರಿ : ಕಾಂಗ್ರೆಸ್ಸಿನ ಹಿರಿಯ ನಾಯಕ ಮಿಟ್ಟು ಚಂಗಪ್ಪ ಅವರು ಇಂದು ನಿಧನರಾಗಿದ್ದಾರೆ. ಕೊಡಗು ಜಿಲ್ಲೆಯ ಹಿರಿಯ ಕಾಂಗ್ರೆಸ್ ನಾಯಕ ಬಿಟ್ಟು ಚಂಗಪ್ಪ ಅವರು ಇಂದು ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಇವರು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹಾಗು ಆರ್. ಗುಂಡೂರಾವ್ ಸೇರಿದಂತೆ ಹಲವು ನಾಯಕರ ಆಪ್ತರಾಗಿದ್ದರು ಎನ್ನಲಾಗಿದ್ದು, ಮಡಿಕೇರಿಯ ಗಾಂಧೀ ಮೈದಾನದಲ್ಲಿ ಇಂದು ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಮಡಿಕೇರಿ ನಗರದಲ್ಲಿ ಇಂದು ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಬೆಂಗಳೂರು : ಯುವ ವಕೀಲೆ ಹಾಗೂ ಆಕೆಯ ಮನೆಯಲ್ಲಿದ್ದ ಇನ್ನೊಬ್ಬ ವ್ಯಕ್ತಿ ಸಹ ಶವವಾಗಿ ಪತ್ತೆಯಾಗಿರುವ ಘಟನೆ ಇದೀಗ ಬೆಂಗಳೂರಿನ ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಶ್ರೀನಿವಾಸಪುರದಲ್ಲಿ ನಡೆದಿದೆ. ನೆಲಮಂಗಲ ತಾಲೂಕಿನ ಶ್ರೀನಿವಾಸಪುರದ ತೋಟದ ಮನೆಯಲ್ಲಿ ಯುವ ವಕೀಲೆ ರಮ್ಯಾ (27) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಹಾಗು ಆಕೆಯ ಮನೆಯಲ್ಲಿ ಇದ್ದಂತಹ ಪುನೀತ್ ಎನ್ನುವ ವ್ಯಕ್ತಿ ಕೂಡ ಶವವಾಗಿ ಪತ್ತೆಯಾಗಿದ್ದಾನೆ. ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಎಲ್ಲಾ ಆಯಾಮಗಳಲ್ಲೂ ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಇದೀಗ ಕರ್ನಾಟಕ ಲೋಕಸೇವಾ ಆಯೋಗವು ಸಿಹಿ ಸುದ್ದಿ ಒಂದನ್ನು ನೀಡಿದ್ದು, ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿರುವ ಮತ್ತು ಈ ಹಿಂದೆ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಕನ್ನಡ ಕಡ್ಡಾಯ ಪರೀಕ್ಷೆ ಬರೆದಿರುವಂತಹ ಅಭ್ಯರ್ಥಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್ಸಿ) ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ‘ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ’ ವಿನಾಯಿತಿ ನೀಡಿರುವುದಾಗಿ ಪ್ರಕಟಿಸಿದೆ. ಎಸ್ಸೆಸ್ಸೆಲ್ಸಿ ಅಥವಾ ರಾಜ್ಯ ಸರ್ಕಾರವು ಅದಕ್ಕೆ ತತ್ಸಮಾನವೆಂದು ಘೋಷಿಸಿದ ಯಾವುದೇ ಪರೀಕ್ಷೆಯಲ್ಲಿ ಕನ್ನಡ ವಿಷಯವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಅಭ್ಯಾಸ ಮಾಡಿರುವ, ಈ ಹಿಂದೆ ಆಯೋಗ ಅಥವಾ ಯಾವುದೇ ಆಯ್ಕೆ ಪ್ರಾಧಿಕಾರವು ನಡೆಸಿದ ಕನ್ನಡ ಭಾಷಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಗೆ ಈ ನಿಯಮ ಅನ್ವಯವಾಗಲಿದೆ ಎಂದು ತಿಳಿಸಿದೆ. ಸಾರಿಗೆ ಇಲಾಖೆಯಲ್ಲಿನ ಮೋಟಾರು ವಾಹನ ನಿರೀಕ್ಷಕರು ಉಳಿಕೆ ಮೂಲವೃಂದದ 70 ಮತ್ತು ಹೈದರಾಬಾದ್ ಕರ್ನಾಟಕ ವೃಂದದ 6 ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಕನ್ನಡ ಭಾಷಾ ಪರೀಕ್ಷೆಯ ಟ್ಯಾಬ್ನಲ್ಲಿ ಏ.24ರೊಳಗೆ ಮಾಹಿತಿ…
ಶ್ರೀನಗರ : ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಜಮ್ಮು ಕಾಶ್ಮೀರದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಇಬ್ಬರು ಭಯೋತ್ಪಾದಕರ ನಿವಾಸಗಳನ್ನು ಭಾರತೀಯ ಸೇನೆ ದ್ವಂಸಗೊಳಿಸಿದೆ. ಹೌದು ಕಳೆದ ಏಪ್ರಿಲ್ 22ರಂದು ಜಮ್ಮು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದರು. ಉಗ್ರರ ದಾಳಿಯಲ್ಲಿ ಆದಿಲ್ ಪ್ರಮುಖ ಪಾತ್ರ ವಹಿಸಿದ್ದ ಎನ್ನಲಾಗಿದ್ದು, ಪಾಕಿಸ್ತಾನದಲ್ಲಿ ಭಯೋತ್ಪಾದಕ ಆದಿಲ್ ಉಗ್ರ ತರಬೇತಿ ಪಡೆದಿದ್ದ. 2018 ರಲ್ಲಿ ಆದಿಲ್ ಪಾಕಿಸ್ತಾನಕ್ಕೆ ತೆರಳಿದ್ದ. ಇದೀಗ ಆತನ ಮನೆಯನ್ನು ಭಾರತೀಯ ಸೇನೆ ಧ್ವಂಸಗೊಳಿಸಿದೆ. ಅದೇ ರೀತಿಯಾಗಿ ದಕ್ಷಿಣ ಕಾಶ್ಮೀರದಲ್ಲಿರುವ ಮತ್ತೋರ್ವ ಉಗ್ರ ಆಸಿಫ್ ಶೇಕ್ ನಿವಾಸವನ್ನು ಭಾರತೀಯ ಸೇನೆ ಧ್ವಂಸಗೊಳಿಸಿದೆ. ಲಷ್ಕರ್ ಉಗ್ರರಾದ ಆದಿಲ್ ಹಾಗು ಆಸಿಫ್ ಶೇಕ್ ನಿವಾಸವನ್ನು ಧ್ವಂಸಗೊಳಿಸಲಾಗಿದೆ. ದಕ್ಷಿಣ ಕಾಶ್ಮೀರದಲ್ಲಿ ಇರುವಂತಹ ಜಿಲ್ಲೆಯಲ್ಲಿ ಬಿಜ್ ಬೆಹರಾದಲ್ಲಿರುವ ಆದಿಲ್ ನಿವಾಸ ಧ್ವಂಸಗೊಳಿಸಲಾಗಿದೆ. ಪಹಲ್ಗಾಮ್ ಉಗ್ರರ ದಾಳಿಯಲ್ಲಿ ಈ ಇಬ್ಬರು ಉಗ್ರರು ಪ್ರಮುಖ ಪಾತ್ರ ವಹಿಸಿದ್ದರು.
ರಾಮನಗರ : ಬೆಂಗಳೂರಿನ ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪ ರೈ ಉತ್ತರ ರಿಕ್ಕಿ ರೈ ಮೇಲೆ ಇತ್ತೀಚಿಗೆ ಬಿಡದಿಯ ಬಳಿ ಫೈರಿಂಗ್ ನಡೆದಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಪೃಕ್ಕಿರೈ ಗನ್ ಮ್ಯಾನ್ ವಿಠ್ಠಲ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ ಎನ್ನಲಾಗಿದೆ. ಹೌದು ರಿಕ್ಕಿ ರೈ ಮೇಲೆ ಫೈರಿಂಗ್ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಗನ್ ಮ್ಯಾನ್ ಅರೆಸ್ಟ್ ಆಗಿದ್ದು, ಬಂಧಿತ ಆರೋಪಿಯನ್ನು ರಾಮನಗರ ನ್ಯಾಯಾಲಯಕ್ಕೆ ಹಾಜರುಪಡಿಸಿ, 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ರಿಕ್ಕಿ ರೈ ಗನ್ ಮ್ಯಾನ್ ವಿಠ್ಠಲ್ ಬಂಧಿತ ಆರೋಪಿಯಾಗಿದ್ದು, ಅವರನ್ನು ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಪ್ರಕರಣದ ಹಿನ್ನೆಲೆ? ಬೆಂಗಳೂರಿನ ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪ ರೈ ಅವರ ಕಿರಿಯ ಪುತ್ರ ಹಾಗೂ ಉದ್ಯಮಿ ರಿಕ್ಕಿ ರೈ ಅವರ ಮೇಲೆ ಕಳೆದ ಏಪ್ರಿಲ್ 18 ರಂದು ರಾಮನಗರದ ಬಿಡದಿ ಬಳಿ ಫೈರಿಂಗ್ ನಡೆದಿತ್ತು. ರಾತ್ರಿ 11:30ರ ಸುಮಾರಿಗೆ…
ಬೆಂಗಳೂರು : ಅಧಿಕಾರದಲ್ಲಿ ಇಲ್ಲದೆ ಇದ್ದರೂ ಕೂಡ ಮಾಜಿ ಶಾಸಕರು ಸಂಸದರು ರಾಷ್ಟ್ರೀಯ ಲಾಂಛನ, ರಾಷ್ಟ್ರೀಯ ಧ್ವಜ ಹಾಗೂ ಸರ್ಕಾರದ ಲೆಟರ್ ಹೆಡ್ ಗಳನ್ನು ಬಳಸುತ್ತಿರುವುದಕ್ಕೆ ಕರ್ನಾಟಕ ಹೈಕೋರ್ಟ್ ಆಕ್ರೋಶ ಹೊರ ಹಾಕಿದ್ದು, ಇದೀಗ ರಾಷ್ಟ್ರೀಯ ಲಾಂಛನಗಳ ಬಳಕೆಗೆ ಸಂಬಂಧಿಸಿದಂತೆ ಹಲವು ಮಾರ್ಗಸೂಚಿಗಳನ್ನು ರಚಿಸಿ ಆದೇಶ ಹೊರಡಿಸಿದೆ. ಮಾಜಿ ಶಾಸಕರು, ಸಂಸದರು ರಾಷ್ಟ್ರೀಯ ಲಾಂಛನಗಳು ಮತ್ತು ಧ್ವಜಗಳನ್ನು ತಮ್ಮ ಲೆಟರ್ಹೆಡ್ ಹಾಗೂ ವಾಹನಗಳಿಗೆ ಬಳಕೆ ಮಾಡುತ್ತಿರುವುದು ನಿಜಕ್ಕೂ ದುರುದೃಷ್ಠಕರ ಎಂದಿರುವ ಹೈಕೋರ್ಟ್, ರಾಷ್ಟ್ರೀಯ ಲಾಂಚನಗಳು ಮತ್ತು ಧ್ವಜದ ಹೆಸರುಗಳನ್ನು ಬಳಕೆ ತಡೆಯಲು ಕೋರಿ ಹೈಕೋರ್ಟ್ ಕಾನೂನು ಸೇವೆಗಳ ಸಮಿತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಎಂ.ಐ.ಅರುಣ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಸಾರ್ವಜನಿಕ ಸ್ಥಳಗಳು ಮತ್ತು ವಾಹನಗಳಲ್ಲಿ ರಾಷ್ಟ್ರೀಯ ಚಿಹ್ನೆಗಳು ಮತ್ತು ಲಾಂಛನಗಳನ್ನು ಅನಧಿಕೃತ ಬಳಕೆ ಮತ್ತು ದುರುಪಯೋಗ ತಡೆಗಟ್ಟಲು 1950ರ ಲಾಂಛನಗಳು ಮತ್ತು ಹೆಸರುಗಳ (ಅನುಚಿತ ಬಳಕೆ ತಡೆಗಟ್ಟುವಿಕೆ)…
ನವದೆಹಲಿ : ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿಯಿಂದ ಇಬ್ಬರು ಕನ್ನಡಿಗರು ಸೇರಿದಂತೆ 30ಕ್ಕೂ ಹೆಚ್ಚು ಪ್ರವಾಸಿಗರು ಬಲಿಯಾಗಿದ್ದಾರೆ ಘಟನೆ ಬೆನ್ನಲ್ಲೇ ಭಾರತ ಪಾಕಿಸ್ತಾನದ ವಿರುದ್ಧ ಹಲವು ಕಠಿಣ ಕ್ರಮ ಕೈಗೊಂಡಿದ್ದು, ಇದೀಗ ಗಡಿಯಲ್ಲಿ ಮತ್ತೆ ಪಾಕಿಸ್ತಾನ ಬಾಲ ಬಿಚ್ಚಿದ್ದು, ಪಾಕ್ ಸೇನೆ ಗುಂಡಿನ ದಾಳಿ ನಡೆಸಿದೆ. ಹೌದು ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಭಾರತ ಮತ್ತು ಪಾಕಿಸ್ತಾನದ ಗಡಿ ಭಾಗದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಮಾಹಿತಿ ಪ್ರಕಾರ ಎಲ್ ಓ ಸಿ ಯಲ್ಲಿ ಪಾಕ್ ಸೇನೆಯಿಂದ ಗುಂಡಿನ ದಾಳಿ ನಡೆದಿದ್ದು, ಪಾಕ್ ದಾಳಿಗೆ ಪ್ರತಿಯಾಗಿ ಭಾರತೀಯ ಸೇನೆಯಿಂದಲೂ ಫೈರಿಂಗ್ ನಡೆಸಲಾಗಿದೆ. ಪಾಕ್ ಸೇನಾ ಶಿಬಿರಗಳ ಮೇಲೆ ಭಾರತ ಫೈರಿಂಗ್ ಮಾಡಿದೆ ಎಂದು ತಿಳಿದುಬಂದಿದೆ. ನಿಯಂತ್ರಣ ರೇಖೆಯ ಕೆಲವು ಸ್ಥಳಗಳಲ್ಲಿ ಪಾಕಿಸ್ತಾನ ಸೇನೆಯು ಸಣ್ಣ ಶಸ್ತ್ರಾಸ್ತ್ರಗಳಿಂದ ಗುಂಡು ಹಾರಿಸಿತು. ಭಾರತೀಯ ಸೇನೆಯು ಪರಿಣಾಮಕಾರಿಯಾಗಿ ಪ್ರತಿಕ್ರಿಯಿಸಿತು. ಯಾವುದೇ ಸಾವುನೋವು ಸಂಭವಿಸಿಲ್ಲ. ಹೆಚ್ಚಿನ ವಿವರಗಳನ್ನು ಖಚಿತಪಡಿಸಿಕೊಳ್ಳಲಾಗುತ್ತಿದೆ…
ಕೊಡಗು : ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿಯಾಗಿದ್ದು, ಕಾಡಾನೆ ದಾಳಿಯಿಂದ ಸೊಳ್ಳೆಕೊಡಿ, ಚಿನ್ನಪ್ಪ (70) ಇದೀಗ ಸಾವನ್ನಪ್ಪಿದ್ದಾರೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕರಡಿಗೋಡು ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಸಾವನ್ನಪ್ಪಿದ್ದಾರೆ. ನಿನ್ನೆ ರಾತ್ರಿ ಬಹಿರ್ದೆಸೆಗೆ ತೆರಳಿದ್ದಾಗ ವೃದ್ಧನ ಮೇಲೆ ಕಾಡಾನೆ ದಾಳಿ ಮಾಡಿದೆ. ಸ್ಥಳಕ್ಕೆ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ ಪುವಯ್ಯ ಭೇಟಿ ನೀಡಿದ್ದಾರೆ. ಎರಡು ದಿನಗಳಲ್ಲಿ ಕಾಡಾನೆಗಳಿಗೆ ಇಬ್ಬರು ಬಲಿಯಾಗಿದ್ದಾರೆ. ಪಾಲಿ ಬೆಟ್ಟದಲ್ಲಿ ನಿನ್ನೆ ಕಾಡಾನೆ ವ್ಯಕ್ತಿ ಒಬ್ಬನನ್ನು ಬಲಿ ಪಡೆದಿತ್ತು.
ಬೆಂಗಳೂರು : ಸರಕು ಸಾಗಣೆ ಮಾಡಲು 20 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಯೊಬ್ಬರು ಬೆಂಗಳೂರು ಗ್ರಾಮಾಂತರ ಲೋಕಾಯುಕ್ತ ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾರೆ. ವಾಣಿಜ್ಯ ತೆರಿಗೆ ಪರಿವೀಕ್ಷಕ ಎಂ.ಆರ್. ನಿಜಾನಂದಮೂರ್ತಿ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಯಾಗಿದ್ದಾರೆ. ಖಾಸಗಿ ವ್ಯಕ್ತಿ ಮನೋಜ್ ಎಂಬುವವರು ನೀಡಿದ ದೂರಿನ ಮೇರೆಗೆ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ನಗರದ ನಾಗರಭಾವಿ ಬಳಿಯ ನಮ್ಮೂರ ತಿಂಡಿ ಹೊಟೇಲ್ ಬಳಿ ಮನೋಜ್ ಅವರಿಂದ ಆರೋಪಿ 20 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ. ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೆಲವು ಅಧಿಕಾರಿಗಳು ಸರಕು ಸಾಗಾಣಿಕೆ ಕಂಪನಿಗಳ ಮಾಲೀಕರ ಕಡೆಯಿಂದ ಪ್ರತಿ ತಿಂಗಳು ಲಂಚದ ಹಣವನ್ನು ಪಡೆದುಕೊಂಡು, ದೆಹಲಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆದ್ದಾರಿ ಮಾರ್ಗವಾಗಿ ಪಾನ್ ಮಸಾಲವನ್ನು ಸಾಗಾಣಿಕೆ ಮಾಡಲು ಅನುಕೂಲ ಮಾಡಿಕೊಟ್ಟಿದ್ದರು. ಕಾನೂನನ್ನು ಪಾಲಿಸದೆ ಖಾಸಗಿ ಕಂಪನಿ ಹಾಗೂ ಖಾಸಗಿ ಜನರಿಗೆ ಕಾನೂನು ಬಾಹಿರ ಲಾಭ…












