Subscribe to Updates
Get the latest creative news from FooBar about art, design and business.
Author: kannadanewsnow05
ಮುಂಬೈ : ತೀವ್ರ ಹಗ್ಗ ಜಗ್ಗಾಟದ ನಡುವೆ ಕೊನೆಗೂ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಅವರು ಆಯ್ಕೆಯಾಗಿದ್ದಾರೆ. ಇಂದು ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ದೇವೇಂದ್ರ ಫಡ್ನವೀಸ್ ನೂತನ ಸಿಎಂ ಎಂದು ಘೋಷಣೆ ಮಾಡಲಾಯಿತು.ಇನ್ನೂ ಮಹಾಯುತಿಯಿಂದ ದೇವೇಂದ್ರ ಫಡ್ನವೀಸ್ ಹೆಸರು ಘೋಷಣೆಯೊಂದೇ ಬಾಕಿ ಇದೆ. ಹೌದು ಮಹಾರಾಷ್ಟ್ರದಲ್ಲಿ ಅಧಿಕಾರಕ್ಕೆ ಏರುವ ವಿಚಾರದಲ್ಲಿ ಬಿಜೆಪಿ ಮತ್ತು ಮಿತ್ರ ಪಕ್ಷಗಳ ನಡುವೆ ನಡೆದಿದ್ದ ಗೊಂದಲಕ್ಕೆ ಕೊನೆಗೂ ತೆರೆಬಿದ್ದಿದ್ದು, ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಅವರು ಆಯ್ಕೆಯಾಗಿದ್ದಾರೆ. ನಾಳೆ ಮಹಾರಾಷ್ಟ್ರದಲ್ಲಿ ದೇವೇಂದ್ರ ಫಡ್ನವಿಸ್ ನೇತೃತ್ವದ ಸರ್ಕಾರದಲ್ಲಿ ಏಕನಾಥ್ ಶಿಂಧೆ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. ದೇವೇಂದ್ರ ಫಡ್ನವೀಸ್ ಅವರು ನೂತನ ಸಿಎಂ ಎಂದು ಮಹಾರಾಷ್ಟ್ರ ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ ಇಂದು ಅಧಿಕೃತವಾಗಿ ಘೋಷಣೆ ಮಾಡಲಾಗಿದ್ದು, ಕೇಂದ್ರ ವೀಕ್ಷಕರದ ನಿರ್ಮಲಾ, ವಿಜಯ್ ರೂಪಾಣಿ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆಯಿತು. ಇಂದು ರಾಜ್ಯಪಾಲರನ್ನು ಮಹಾಯುತಿ ನಿಯೋಗ ಭೇಟಿಯಾಗಲಿದೆ.…
ನವದೆಹಲಿ : ಬಿಜೆಪಿ ರಾಜ್ಯಾಧ್ಯಕ್ಷ ನಾಯಕತ್ವದ ವಿರುದ್ಧ ನಿಲುವು ಹೊಂದಿದ್ದ ಕಾರಣಕ್ಕಾಗಿ ಶಾಸಕ ಬಸನಗೌಡ ಪಾಟೀಲ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಕಾರಣ ನೀಡುವಂತೆ ನೋಟಿಸ್ ನೀಡಿತ್ತು. ಈ ವಿಚಾರವಾಗಿ ಇಂದು ಶಾಸಕ ಯತ್ನಾ ಅವರು ಕೇಂದ್ರೀಯ ಶಿಸ್ತು ಸಮಿತಿಯ ಇದ್ದರೂ ಹಾಜರಾಗಿ ಉತ್ತರ ನೀಡಲಿದ್ದು, ಅದಕ್ಕೂ ಮುನ್ನ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕುಟುಂಬ ರಾಜಕಾರಣದ ವಿರುದ್ಧದ ಹೋರಾಟದಲ್ಲಿ ಯಾವುದೇ ರಾಜಿ ಇಲ್ಲ ಎಂದು ಮತ್ತೆ ಬಿಎಸ್ ಯಡಿಯೂರಪ್ಪ ಕುಟುಂಬದ ವಿರುದ್ಧ ಗುಡುಗಿದರು. ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಯತ್ನಾಳ್ ಶೋಕಾಸ್ ನೋಟಿಸ್ ಗೆ ಸಮಗ್ರವಾದಂತಹ ಉತ್ತರ ಬರೆದಿದ್ದೇನೆ. ಶೋಕಾಸ್ ನೋಟಿಸ್ ಗೆ ಆರು ಪುಟಗಳ ಸಮಗ್ರ ಉತ್ತರವನ್ನು ಸಿದ್ಧಪಡಿಸಿದ್ದೇನೆ. ಕುಟುಂಬ ರಾಜಕಾರಣ ವಿರುದ್ಧದ ಹೋರಾಟದಲ್ಲಿ ಯಾವುದೇ ರಾಜಿ ಇಲ್ಲ. ರಾಜ್ಯ ಬಿಜೆಪಿಯಲ್ಲಿ ಬಿಎಸ್ ಯಡಿಯೂರಪ್ಪ ಕುಟುಂಬ ರಾಜಕಾರಣದ ಬಗ್ಗೆ ವಿವರಣೆ ನೀಡಿದ್ದೇನೆ. ಎಲ್ಲಾ ಸಂಸದರು ಪಕ್ಷದ ಹಿತ ದೃಷ್ಟಿಯಿಂದ ಮಾತನಾಡಿದ್ದಾರೆ ಎಂದು ಅವರು ತಿಳಿಸಿದರು. ವಕ್ಫ್ ವಿರುದ್ಧ ಬಿವೈ…
ಧಾರವಾಡ : ಮನೆಯಲ್ಲಿ ಯಾರು ಇಲ್ಲದ ಸಮಯವನ್ನು ನೋಡಿಕೊಂಡು ದುಷ್ಕರ್ಮಿಗಳು, ಮನೆಗೆ ನುಗ್ಗಿ ವ್ಯಕ್ತಿ ಒಬ್ಬರನ್ನು ಮಾರಕಾಸ್ತ್ರಗಳಿಂದ ಕಂಡ ಕಂಡಲ್ಲಿ ಕೊಚ್ಚಿ ಭೀಕರವಾಗಿ ಹಲ್ಲೆ ಮಾಡಿರುವ ಘಟನೆ ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ನಡೆದಿದೆ. ಕೊಲೆ ನಂತರ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು ಗಿರೀಶ್ ಕರಡಿಗುಡ್ಡ (50) ಎಂದು ತಿಳಿದುಬಂದಿದೆ. ಗಿರೀಶ್ ಅವರು ರಿಯಲ್ ಎಸ್ಟೇಟ್ ನಡೆಸುತ್ತಿದ್ದರು ಎನ್ನಲಾಗಿದೆ. ಮನೆಯಲ್ಲಿ ಒಬ್ಬರೇ ಇದ್ದಾಗ ದುಷ್ಕರ್ಮಿಗಳು ಇದನ್ನು ಮನಗಂಡು ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಕಂಡ ಕಂಡಲ್ಲಿ ಇರಿದು, ಕೊಚ್ಚಿ ಕೊಲೆ ಮಾಡಿ ಮನೆಯ ಹಿಂದಿನ ಬಾಗಿಲಿನಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಮಗಳು ಶಾಲೆಯಿಂದ ಬಂದು ಕದ ತೆಗೆದಾಗಲೇ ಕೃತ್ಯ ನಡೆದಿರುವುದು ಬೆಳಕಿಗೆ ಬಂದಿದೆ. ಗಿರೀಶ ಗರಗ ಪೊಲೀಸ್ ಠಾಣೆ ಸಮೀಪದಲ್ಲೇ ಬಾಡಿಗೆ ಮನೆಯಲ್ಲಿದ್ದ, ತನ್ನದೇ ಗ್ರಾಮದಲ್ಲಿ ಹೊಸ ಮನೆ ಸಹ ಕಟ್ಟಿಸುತ್ತಿದ್ದರು. ಊರ ಹೊರಗೆ ಈ ಮನೆ ಇದ್ದು, ಮನೆ ಪಕ್ಕದಲ್ಲೇ ಮಾವಿನ ತೋಟವಿದೆ. ಹಂತಕರು, ಕೊಲೆ ಮಾಡಿದ ಬಳಿಕ ಮನೆಯ ಹಿಂಬದಿಯಿಂದ ಮಾವಿನ…
ಉತ್ತರಪ್ರದೇಶ : ಕಳೆದ ನವೆಂಬರ್ 24 ರಂದು ಉತ್ತರಪ್ರದೇಶದ ಫರೀದ್ಪುರದಲ್ಲಿ ನಿರ್ಮಾಣ ಹಂತದಲ್ಲಿರುವ ಸೇತುವೆಯಿಂದ ಕಾರು ಸೇತುವೆಯಿಂದ ನದಿಗೆ ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿದ್ದರು. ಇದೀಗ ಅಂತದ್ದೇ ಮತ್ತೊಂದು ಘಟನೆ ನಡೆದಿದ್ದು, ಗೂಗಲ್ ಮ್ಯಾಪ್ ಅನ್ನು ನಂಬಿ ಕಾರು ಚಾಲಕನೊಬ್ಬ ನೀರು ಇಲ್ಲದಂತಹ ಕಾಲುವೆಗೆ ಕಾರನ್ನು ನುಗ್ಗಿಸಿದ್ದಾನೆ. ಪರಿಣಾಮ ಮೂವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಉತ್ತರಪ್ರದೇಶದ ಬರೆಲಿಯಲ್ಲಿ ನಡೆದಿದೆ. ಹೌದು ಗೂಗಲ್ ತೋರಿಸಿದ ಶಾರ್ಟ್ಕಟ್ ಮಾರ್ಗವನ್ನು ನಂಬಿ ಹೋಗಿ ವ್ಯಕ್ತಿಯೊಬ್ಬ ಕಾರು ಸಮೇತ ಕಾಲುವೆಗೆ ಹಾರಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಗೂಗಲ್ ತೋರಿಸಿದ ಶಾರ್ಟ್ಕಟ್ ನಂಬಿ ಕಾರು ತೆಗೆದುಕೊಂಡು ಹೋಗಿದ್ದ ಚಾಲಕ ಒಣ ಕಾಲುವೆಗೆ ಇಳಿಸಿದ್ದಾರೆ. ಕಾರಿನಲ್ಲಿದ್ದ ಮೂವರು ಗಾಯಗೊಂಡಿದ್ದಾರೆ. ಬರೇಲಿಯಿಂದ ಪಿಲಿಭಿತ್ಗೆ ಪ್ರಯಾಣಿಸುತ್ತಿದ್ದಾಗ ಕಾಲಾಪುರ ಗ್ರಾಮದ ಬಳಿ ಗೂಗಲ್ ಮ್ಯಾಪ್ ಹಾಕಿದ್ದಾರೆ ಆಗ ಅದು ಶಾರ್ಟ್ ಕಟ್ ಮಾರ್ಗವೊಂದನ್ನು ತೋರಿಸಿತ್ತು. ಅದರ ಮೂಲಕ ಹೋಗಿ ನೇರವಾಗಿ ಕಾಲುವೆಗೆ ಹಾರಿದ್ದಾರೆ. ಗ್ರಾಮಸ್ಥರು ಅವರನ್ನು ಗಮನಿಸಿ ಪೊಲೀಸರಿಗೆ ಕರೆ ಮಾಡಿದಾಗ…
ನವದೆಹಲಿ : ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ಇದೀಗ ಕೇಂದ್ರಕ್ಕೂ ತಲುಪಿದ್ದು, ಎರಡು ದಿನಗಳ ಹಿಂದೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿಯ ಕೇಂದ್ರ ಶಿಸ್ತು ಸಮಿತಿಯು ರಾಜ್ಯಾಧ್ಯಕ್ಷರ ನಾಯಕತ್ವದ ವಿರುದ್ಧ ಹಿನ್ನೆಲೆಯಲ್ಲಿ ನೋಟಿಸ್ ನೀಡಿತ್ತು. ಈ ಒಂದು ನೋಟಿಸ್ ವಿಚಾರವಾಗಿ ಇಂದು ಯತ್ನಾಳ್ ಕೇಂದ್ರದ ಶಿಸ್ತು ಸಮಿತಿಯ ಎದುರು ಹಾಜರಾಗಿ ನೋಟಿಸ್ ಗೆ ಉತ್ತರಿಸಲಿದ್ದಾರೆ. ಹಾಗಾಗಿ ಇದೀಗ ಯತ್ನಾಳ್ ಅವರಿಗೆ ನೀಡಿರುವ ಶೋಕಾಸ್ ನೋಟಿಸ್ ಗೆ ಅವರು ಉತ್ತರ ನೀಡಲಿದ್ದಾರೆ. ದೆಹಲಿಯಲ್ಲಿ ಓಂ ಪಾಟಕ್ ಅವರನ್ನು ಯತ್ನಾಳ ಭೇಟಿಯಾಗಲಿದ್ದಾರೆ. ಕೇಂದ್ರ ಶಿಸ್ತು ಸಮಿತಿ ಅಧ್ಯಕ್ಷರಾಗಿರುವ ಓಂ ಪಾಟಕ್ ಅವರನ್ನು ಭೇಟಿಯಾಗಲಿದ್ದಾರೆ.ಕೆಲವೇ ಕ್ಷಣಗಳಲ್ಲಿ ಶಿಸ್ತು ಸಮಿತಿ ಎದುರು ಯತ್ನಾಳ್ ಹಾಜರಾಗಲಿದ್ದು ನೋಟಿಸ್ ಗೆ ಉತ್ತರಿಸಲಿದ್ದಾರೆ ಎಂದು ತಿಳಿದುಬಂದಿದೆ. ಈ ವಿಚಾರವಾಗಿ ವಕ್ಫ್ ವಿರುದ್ಧ ನಾನು ಹೋರಾಟ ಮಾಡಿದ್ದೇನೆ. ಪಕ್ಷದ ಅಧ್ಯಕ್ಷರು ಹೋರಾಟಕ್ಕೆ ಮುಂದಾಗಿಲ್ಲ. ವಂಶ ರಾಜಕೀಯ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುತ್ತಿದ್ದೇನೆ. ಕೆಲವರನ್ನು ಕಟ್ಟಿಕೊಂಡು ಪಕ್ಷ ಮುನ್ನಡೆಸುತ್ತಿದ್ದಾರೆ. ಹೀಗಾಗಿ…
ತುಮಕೂರು : ಕಲ್ಲು ಕ್ವಾರಿಯಲ್ಲಿ ಮದ್ದು ಸ್ಫೋಟಗೊಂಡು ಇಬ್ಬರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ತುಮಕೂರಿನ ಮಧುಗಿರಿ ತಾಲೂಕಿನ ಹೊಸಹಳ್ಳಿ ಬಳಿ ಈ ಒಂದು ಘಟನೆ ನಡೆದಿದೆ. ಮದ್ದು ಸ್ಪೋಟಿಸಿದ ಕಾರಣ ನಿಷ್ಕ್ರಿಯಗೊಳಿಸಲು ಹೋದಾಗ ಮದ್ದು ಸ್ಪೋಟಗೊಂಡಿದೆ. ಮಂಜುನಾಥ್ ಹಾಗೂ ಕೋಟಪ್ಪ ಎಂಬುವವರಿಗೆ ಗಂಭೀರವಾದ ಗಾಯವಾಗಿದೆ. ಗಾಯಾಳುಗಳಿಗೆ ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಮಧುಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಪ್ರಕರಣ ನಡೆದಿದೆ.
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಂತಹ ಅಕ್ರಮ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮತ್ತೊಂದು ಸ್ಫೋಟಕವಾದ ಅಂಶ ಬಹಿರಂಗವಾಗಿದ್ದು, ಈ ಒಂದು ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದ್ದ ಇಡಿ ಅಧಿಕಾರಿಗಳು ಮುಡಾದಲ್ಲಿ ಸುಮಾರು 700 ಕೋಟಿ ರೂಪಾಯಿಗೂ ಅಧಿಕ ಅಕ್ರಮ ನಡಿದಿದೆ ಎಂದು ತನಿಖೆಯ ವೇಳೆ ದೃಢವಾಗಿದೆ ಎಂದು ಇಡಿ ತಿಳಿಸಿದೆ. ಹೌದು ಮುಡಾದ ಅಕ್ರಮ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ 700 ಕೋಟಿಗೂ ಅಧಿಕ ಹಗರಣ ನಡೆದಿರುವುದು ಬೆಳಕಿಗೆ ಬಂದಿದೆ. 1095 ಸೈಟ್ ಗಳು ಅಕ್ರಮ ಆಗಿರುವ ಬಗ್ಗೆ ಶಂಕೆ ವ್ಯಕ್ತವಾಗುತ್ತಿದೆ. ಬೆನಾಮಿ ವ್ಯಕ್ತಿಗಳ ಹೆಸರಿಗೆ ಸೈಟ್ ಹಂಚಿಕೆ ಆಗಿರುವುದು ಇದೀಗ ಪತ್ತೆಯಾಗಿದೆ. ಬೆನಾಮಿ ಹಾಗೂ ನಕಲಿ ವ್ಯಕ್ತಿಗಳ ಹೆಸರಿನಲ್ಲಿ ಕೂಡ ಸೈಟ್ ಹಂಚಿಕೆಯಾಗಿದೆ. ಸಿಎಂ ಸಿದ್ದರಾಮಯ್ಯ ಪತ್ನಿಗೂ ಕೂಡ 14 ಸೈಟ್ ಗಳು ಹಂಚಿಕೆಯಾಗಿದ್ದವು. ಸಿಎಂ ಪತ್ನಿ ಪಾರ್ವತಿ ಹೆಸರಿನಲ್ಲಿ 14 ಸೈಟ್ ಇದರಲ್ಲಿ ಪತ್ತೆಯಾಗಿವೆ. ಗಣ್ಯರಿಂದ ಸೈಟ್ ಹಂಚಿಕೆಗೆ ಪ್ರಭಾವ ಬೀರಿರುವುದು ಬೆಳಕಿಗೆ ಬಂದಿದೆ.…
ಕಲಬುರ್ಗಿ : ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಬೇಕು ಎಂದು ರಾಜ್ಯಪಾಲರಿಗೆ ಮನವಿ ಮಾಡಿರುವ ಕುರಿತಾಗಿ, ಯಡಿಯೂರಪ್ಪ ಅವರನ್ನು ಕಂಡರೆ ರಾಜ್ಯ ಸರ್ಕಾರಕ್ಕೆ ಈಗಲೂ ಭಯವಿದೆ. ಹೀಗಾಗಿ ದಿನ ಬೆಳಗಾದರೆ ಕೇಸ್ ಅಂತಿದ್ದಾರೆ. ಬಿಎಸ್ ಯಡಿಯೂರಪ್ಪ ಒಬ್ಬ ಹೋರಾಟಗಾರ ನಾವು ಹೆದರುವ ಮಾತೆ ಇಲ್ಲ ಎಂದು ಕಲಬುರ್ಗಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜೇಂದ್ರ ಹೇಳಿಕೆ ನೀಡಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಶೋಕ್ ದೆಹಲಿಗೆ ಭೇಟಿ ನೀಡುವ ವಿಚಾರವಾಗಿ, ಆರ್ ಅಶೋಕ್ ವಿರೋಧ ಪಕ್ಷದ ನಾಯಕ ವರಿಷ್ಠರ ಭೇಟಿಗೆ ಅಶೋಕ್ ದೆಹಲಿಗೆ ಹೋಗಿರಬಹುದು. ಆರ್ ಅಶೋಕ ದೆಹಲಿ ಭೇಟಿಯ ಬಗ್ಗೆ ನನಗೆ ಮಾಹಿತಿ ಇಲ್ಲ. ಡಿಸೆಂಬರ್ 7ರಂದು ಕೋರ್ ಕಮಿಟಿ ಸಭೆ ನಿಗದಿಯಾಗಿದೆ. ಅವತ್ತು ಎಲ್ಲವೂ ಸರಿ ಹೋಗುತ್ತೆ. ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಎಸ್ ಟಿ ಸೋಮಶೇಖರ್ ಬಗ್ಗೆ ಮಾತನಾಡಲು ಹೋಗಲ್ಲ ಎಂದರು. ವಕ್ಫ್ ಹೆಸರಿನಲ್ಲಿ ರೈತರ ಜಮೀನು ಕಬಳಿಸಲು ರಾಜ್ಯ ಸರ್ಕಾರ ಯತ್ನಿಸುತ್ತಿದೆ.ರೈತರನ್ನು ಬೀದಿಗೆ…
ಪಂಜಾಬ್ : ಪಂಜಾಬಿನ ಅಮೃತ್ ಸರದಲ್ಲಿರುವ ಗೋಲ್ಡನ್ ಟೆಂಪಲ್ ನಲ್ಲಿ ಇಂದು ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿಸಿದ್ದು, ಅಕಾಲಿ ದಳ ನಾಯಕ ಹಾಗೂ ಪಂಜಾಬ್ ನ ಮಾಜಿ ಡಿಸಿಎಂ ಸುಖ್ಬೀರ್ ಸಿಂಗ್ ಬಾದಲ್ ಮೇಲೆ ಖಾಲಿಸ್ತಾನಿ ಒಬ್ಬ ಬಂದೂಕಿನಿಂದ ಫೈರಿಂಗ್ ಮಾಡಿದ್ದು ಅವರನ್ನು ಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಹೌದು ಸುಖ್ಬೀರ್ ಸಿಂಗ್ ಬಾದಲ್ ಗುಂಡಿಕ್ಕಿ ಹತ್ಯೆಗೆ ಯತ್ನ ನಡೆದಿದ್ದು, ಖಾಲಿಸ್ತಾನಿ ಬೆಂಬಲಿತ ವ್ಯಕ್ತಿಯಿಂದ ಅವರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ನಾರಾಯಣ ಸಿಂಗ್ ಚೌರಾ ಎನ್ನುವ ವ್ಯಕ್ತಿಯಿಂದ ಹತ್ಯೆಗೆ ಯತ್ನಿಸಲಾಗಿದೆ. ಪಂಜಾಬ್ ನ ಗೋಲ್ಡನ್ ಟೆಂಪಲ್ ಗೆ ತೆರಳುತ್ತಿದ್ದಾಗ ಈ ಒಂದು ಘಟನೆ ನಡೆದಿದೆ. ದಾಳಿ ನಡೆದ ತಕ್ಷಣ ಸುಖ್ಬೀರ್ ಸಿಂಗ್ ಬಾದಲ್ ಬೆಂಬಲಿಗರು ನಾರಾಯಣ ಸಿಂಗ್ ನನ್ನು ತಡೆದಿದ್ದಾರೆ.ಪಂಜಾಬಿನ ಗೋಲ್ಡನ್ ಟೆಂಪಲ್ ನಲ್ಲಿ ಗುಂಡಿನ ಸದ್ದಿಗೆ ಸ್ಥಳೀಯ ಜನರು ಸಹಜವಾಗಿ ಬೆಚ್ಚಿ ಬಿದ್ದಿದ್ದಾರೆ. ಕೂಡಲಿ ಆತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಯಾವ ಕಾರಣಕ್ಕೆ ಹತ್ಯೆಗೆ ಯತ್ನಿಸಲಾಗಿದೆ ಎಂಬುದನ್ನು ತನಿಖೆ…
ಮಂಗಳೂರು : ಕಳೆದ ಮಾರ್ಚ್ 1 ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣ ಎಲ್ಲರಿಗೂ ಗೊತ್ತಿರುವ ವಿಷಯ. ಇದೀಗ ಮಂಗಳೂರಿನ ವಿಮಾನ ನಿಲ್ದಾಣಕ್ಕೂ ಇದೇ ರಾಮೇಶ್ವರಂ ಕೆಫೆ ಮಾದರಿಯಲ್ಲಿ ಬಾಂಬ್ ಬ್ಲಾಸ್ಟ್ ಮಾಡುವುದಾಗಿ ಬೆದರಿಕೆ ಕರೆ ಸಂದೇಶವೊಂದು ಬಂದಿದೆ. ಹೌದು ತಮಿಳುನಾಡಿನಲ್ಲಿ ಬಂಧನಕ್ಕೀಡಾಗಿರುವ ಡ್ರಗ್ ಕಿಂಗ್ ಪಿನ್ ಎನ್ನಲಾದ ಜಾಫರ್ ಸಾದಿಕ್ ಮತ್ತು ಡಿಸಿಎಂ ಉದಯನಿಧಿ ಸ್ಟಾಲಿನ್ ಅವರ ಪತ್ನಿ, ಚಿತ್ರ ನಿರ್ಮಾಪಕಿ ಕೃತಿಗಾ ಉದಯನಿಧಿ ಅವರ ಮೇಲಿರುವ ಕೇಸನ್ನು ವಾಪಸ್ ಪಡೆಯಬೇಕು. ತಿರುಚ್ಚಿ ಸೆಂಟ್ರಲ್ ಜೈಲಿನಲ್ಲಿರುವ ಟಿಎನ್ಎಲ್ಎ ಉಗ್ರ ಸಂಘಟನೆಯ ಮುಖ್ಯಸ್ಥ ಎಸ್. ಮಾರನ್ ಅವರನ್ನು ಬಿಡುಗಡೆ ಮಾಡಬೇಕು ಎಂಬ ಬೇಡಿಕೆ ಮುಂದಿಡಲಾಗಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಸಂದೇಶ ಬಂದ ಬಗ್ಗೆ ತಡವಾಗಿ ವರದಿಯಾಗಿದೆ. ನ.30ರಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಅಕ್ರಮ್ ವಾಯ್ಕರ್ ಎನ್ನುವ ಹೆಸರಲ್ಲಿದ್ದ ಇಮೇಲ್ನಿಂದ ಬೆದರಿಕೆ ಸಂದೇಶ ಬಂದಿದೆ. ಈ ಬಗ್ಗೆ ಬಜಪೆ ಠಾಣೆಗೆ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ…













