Subscribe to Updates
Get the latest creative news from FooBar about art, design and business.
Author: kannadanewsnow05
ಮಂಗಳೂರು : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಮಂಗಳೂರಲ್ಲಿ ಯುವತಿಯೊರ್ವಳಿಗೆ ಮದ್ಯ ಕುಡಿಸಿ ಆಟೋ ಚಾಲಕ ಹಾಗು ಆತನ ಇಬ್ಬರು ಸ್ನೇಹಿತರು ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಮಂಗಳೂರಿನ ಉಳ್ಳಾಲದಲ್ಲಿ ನಡೆದಿದೆ. ಮುನ್ನೂರು ಗ್ರಾಮ ಮತ್ತು ಉಳ್ಳಾಲ ನಗರಸಭೆ ಗಡಿಯಲ್ಲಿರುವ ನೇತ್ರಾವತಿ ನದಿ ಸಮೀಪದ ಬೊಳ್ಳ ಹೌಸ್ ಬಳಿ ಘಟನೆ ನಡೆದಿದ್ದು, ಕುಂಪಲ ಬಗಂಬಿಲ ಮೂಲದ ರಿಕ್ಷಾ ಚಾಲಕ ಸೇರಿ ಮೂವರು ಈ ಕೃತ್ಯ ನಡೆಸಿದ್ದಾರೆ ಎನ್ನಲಾಗಿದ್ದು, ರಿಕ್ಷಾ ಚಾಲಕ ಹಾಗು ಆತನ ಇಬ್ಬರು ಸ್ನೇಹಿತರನ್ನು ಪೊಲೀಸರು ಇದೀಗ ವಶಕ್ಕೆ ಪಡೆದಿದ್ದಾರೆ.ಮುಲ್ಕಿ ನಿವಾಸಿ 10 ವರ್ಷಕ್ಕಿಂತ ಹೆಚ್ಚು ಕಾಲ ಆಟೋ ಚಾಲಕನಾಗಿ ದುಡಿಯುತ್ತಿದ್ದ ಪ್ರಭುರಾಜ್ (38), ಕುಂಪಲ ನಿವಾಸಿ ಇಲೆಕ್ಟಿಷಿಯನ್ ಕಾರ್ಯನಿರ್ವಹಿಸುವ ಮಿಥುನ್ (30) ಹಾಗೂ ಮಂಗಳೂರಿನಲ್ಲಿ ವಾಸ ಮಾಡುವ ಮತ್ತೋರ್ವ ಗೆಳೆಯ ಮಣಿಯನ್ನು ಬಂಧಿಸಲಾಗಿದೆ. ಪ.ಬಂಗಾಳ ಮೂಲದ ಯುವತಿ ಉದ್ಯೋಗ ಅರಸಿ ಬಂದಿದ್ದಳು. ಕೇರಳದ ಉಪ್ಪಳ ಎಂಬಲ್ಲಿ ವಾಸವಾಗಿದ್ದಳು. ಸ್ನೇಹಿತನ ಜೊತೆಗೆ ಮಂಗಳೂರಿಗೆ ಬಂದಿದ್ದ ವೇಳೆ…
ನವದೆಹಲಿ : ಭಾರತದ ಹೆದ್ದಾರಿ ಟೋಲ್ ಸಂಗ್ರಹ ವ್ಯವಸ್ಥೆಯಲ್ಲಿ ಕ್ರಾಂತಿಕಾರಕ ಬದಲಾವಣೆಗೆ ಸರ್ಕಾರ ಸಜ್ಜಾಗಿದೆ. ಮೇ 1ರಿಂದ ದೇಶಾದ್ಯಂತ ಫಾಸ್ಟ್ಟ್ಯಾಗ್ ಬದಲಿಗೆ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆ ಜಾರಿಗೆ ಬರಲಿದೆ. ಈ ಹೊಸ ವ್ಯವಸ್ಥೆಯು ಗ್ಲೋಬಲ್ ನ್ಯಾವಿಗೇಷನ್ ಸ್ಯಾಟ್ಲೈಟ್ ಸಿಸ್ಟಮ್ (GNSS) ತಂತ್ರಜ್ಞಾನ ಬಳಸಿಕೊಂಡು ವಾಹನಗಳ ಚಲನೆಯನ್ನು ಟ್ರ್ಯಾಕ್ ಮಾಡಿ, ಸಂಚರಿಸಿದ ದೂರದ ಆಧಾರದ ಮೇಲೆ ಟೋಲ್ ಶುಲ್ಕ ಲೆಕ್ಕಹಾಕಲಿದೆ. ಪ್ರಯಾಣಿಕರು ಸಂಚರಿಸಿದ ನಿಖರ ದೂರಕ್ಕೆ ತಕ್ಕಂತೆ ಟೋಲ್ ಶುಲ್ಕ ವಿಧಿಸಲಾಗುತ್ತದೆ. ಇದರಿಂದ ಸಣ್ಣ ಅಂತರದ ಪ್ರಯಾಣಿಕರಿಗೆ ಹಣ ಉಳಿತಾಯವಾಗಲಿದೆ. ಟೋಲ್ ಬೂತ್ಗಳನ್ನು ತೆಗೆದುಹಾಕುವುದರಿಂದ ಟ್ರಾಫಿಕ್ ಜಾಮ್ನ ಸಮಸ್ಯೆ ಕಡಿಮೆಯಾಗಿ, ವಾಹನ ಚಾಲಕರ ಮತ್ತು ಪ್ರಯಾಣಿಕರ ಸಮಯ ಉಳಿತಾಯವಾಗಲಿದೆ. ಆನ್ಬೋರ್ಡ್ ಯೂನಿಟ್ (OBU) ಮೂಲಕ ಟೋಲ್ ಶುಲ್ಕ ಸ್ವಯಂಚಾಲಿತವಾಗಿ ಲೆಕ್ಕಹಾಕಿ, ಚಾಲಕರ ಬ್ಯಾಂಕ್ ಖಾತೆಯಿಂದ ಶುಲ್ಕ ಕಡಿತಗೊಳ್ಳಲಿದೆ. ಇದರಿಂದ ಕೈಯಿಂದ ಶುಲ್ಕ ಸಂಗ್ರಹದ ದೋಷಗಳು ಮತ್ತು ವಂಚನೆ ಸಾಧ್ಯತೆ ಕಡಿಮೆಯಾಗುತ್ತದೆ. ಟ್ರಾಫಿಕ್ ಜಾಮ್ ಕಡಿಮೆಯಾಗುವುದರಿಂದ ಇಂಧನ ಬಳಕೆ ಮತ್ತು ವಾಹನ…
ತುಮಕೂರು : ನಿನ್ನೆ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಜಾತಿಗಣತಿ ವರದಿ ಕುರಿತು ವಿಶೇಷ ಸಂಪುಟ ಸಭೆ ನಡೆಯಿತು.ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಸಂದರ್ಭದಲ್ಲಿ ಕೈಗೊಂಡ ಮಾನದಂಡಗಳ ವಿವರಗಳನ್ನು ಸ್ವಲ್ಪ ಮಟ್ಟಿಗೆ ಚರ್ಚಿಸಲಾಗಿದ್ದು, ಚರ್ಚೆ ಅಪೂರ್ಣವಾಗಿರುವುದರಿಂದ ಮುಂದಿನ ಸಚಿವ ಸಂಪುಟ ಸಭೆ ಏಪ್ರಿಲ್ 24 ರಂದು ಮಲೆಮಾದೇಶ್ವರ ಬೆಟ್ಟದಲ್ಲಿ ನಡೆಯುತ್ತಿದ್ದು, ಆಯಾ ಭಾಗದ ವಿಷಯಗಳು ಹೆಚ್ಚಾಗಿ ಚರ್ಚೆಗೆ ಬರುತ್ತದೆ. ಮೇ 2 ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ಅಂತಿಮ ತೀರ್ಮಾನಕ್ಕೆ ಬರಲು ಸಚಿವ ಸಂಪುಟ ನಿರ್ಧರಿಸಿದೆ. ಇನ್ನು ಈ ವಿಚಾರವಾಗಿ ತುಮಕೂರಿನ ಸಿದ್ದಗಂಗಾ ಮಠದ ಸಿದ್ದಲಿಂಗ ಶ್ರೀಗಳು ಮಾತನಾಡಿದ್ದು, ಸಮೀಕ್ಷೆ ಮಾಡೋಕೆ ಮಠಕ್ಕೆ ಯಾರೂ ಬಂದಿಲ್ಲ ಇಲ್ಲಿ ಯಾರನ್ನ ಕೇಳಿದರೂ ಗೊತ್ತಿಲ್ಲ ಅಂತ ಹೇಳುತ್ತಿದ್ದಾರೆ. ಲಿಂಗಾಯತರಲ್ಲೂ ಕೂಲಿ ಮಾಡುವ ಜನರು ಇದ್ದಾರೆ ಇವತ್ತು ಬಡವರು ಯಾವ ಸಮಾಜದಲ್ಲಿ ಇಲ್ಲ ಹೇಳಿ? 10 ವರ್ಷ ಹಿಂದಿನ ಜಾತಿಯ ಗಣತಿ ಅದನ್ನ ಮಾಡದಂಡವಾಗಿ ಇಟ್ಟುಕೊಳ್ಳಬೇಕಾಗುತ್ತದೆ. 10 ವರ್ಷದ ಹಿಂದಿನ ಜಾತಿಗಣತಿಯನ್ನು…
ಉತ್ತರಪ್ರದೇಶ : ಇತ್ತೀಚಿಗೆ ಗುಜರಾತಿನ ವಾರಣಾಸಿಯಲ್ಲಿ 23 ಯುವಕರು ಯುವತಿಯ ಮೇಲೆ ಐದು ದಿನಗಳ ಕಾಲ ನಿರಂತರವಾಗಿ ಅತ್ಯಾಚಾರ ಎಸಗಿದ್ದ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಇದೀಗ ಉತ್ತರ ಪ್ರದೇಶದಲ್ಲಿ ಮತ್ತೊಂದು ಅತ್ಯಾಚಾರ ನಡೆದಿದ್ದು ಕಿವಿ ಕೇಳದ ಹಾಗೂ ಮಾತು ಬಾರದ 11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ ಎನ್ನಲಾಗಿದೆ. ಹೌದು ಉತ್ತರ ಪ್ರದೇಶದ ರಾಮಂಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಕಾಲಿಗೆ ಗುಂಡು ಹಾರಿಸುವ ಮೂಲಕ ಆರೋಪಿಯನ್ನು ಬಂಧಿಸಿದ್ದಾರೆ. ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ದೇಹದ ವಿವಿಧ ಭಾಗಗಳಲ್ಲಿ ಕಚ್ಚಿದ ಹಾಗೂ ಖಾಸಗಿ ಭಾಗಗಳಿಗೆ ಸಿಗರೇಟ್ನಿಂದ ಸುಟ್ಟ ಗುರತುಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ಓರ್ವ ಶಂಕಿತನನ್ನ ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ. ನಾಪತ್ತೆಯಾಗಿದ್ದ ಬಾಲಕಿ ನಿನ್ನೆಯ ದಿನ ಮುಂಜಾನೆ ಆಕೆ ಬೆತ್ತಲೆಯಾಗಿ ಗಾಯಗೊಂಡ ಸ್ಥಿತಿಯಲ್ಲಿ ಹೊಲವೊಂದರಲ್ಲಿ ಪತ್ತೆಯಾಗಿದ್ದಳು. ಕೂಡಲೇ ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿಂದ ಮತ್ತೆ…
ನವದೆಹಲಿ : ರಿಯಲ್ ಎಸ್ಟೇಟ್ ಡೀಲರ್ ಒಬ್ಬರು ಕ್ಯಾನ್ಸರ್ ಗೆ ವ್ಯರ್ಥವಾಗಿ ಹಣ ಖರ್ಚು ಆಗಬಾರದು ಎಂದು ತನ್ನ ಪತ್ನಿಯನ್ನು ಗುಂಡಿಕ್ಕಿ ಕೊಂದು ನಂತರ ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗಾಜಿಯಾಬಾದ್ನಲ್ಲಿ ನಿನ್ನೆ ನಡೆದಿದೆ. ಕುಲದೀಪ್ ತ್ಯಾಗಿ (46) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಆತ್ಮಹತ್ಯೆಗೂ ಮುನ್ನ ಬರೆದಿದ್ದ ಡೆತ್ನೋಟ್ನಲ್ಲಿ ನನಗೆ ಕ್ಯಾನ್ಸರ್ ಇತ್ತು. ಚಿಕಿತ್ಸೆಗೆ ಹಣ ವ್ಯರ್ಥವಾಗಬಾರದು ಎಂದು ಈ ನಿರ್ಧಾರಕ್ಕೆ ಬಂದೆವು. ಪತ್ನಿ ಅಂಶು ತ್ಯಾಗಿ ಮತ್ತು ನಾನು ಒಟ್ಟಿಗೆ ಇರುವುದಾಗಿ ನಿರ್ಧರಿಸಿದೆವು. ಹೀಗಾಗಿ, ಅವಳನ್ನೂ ಕೊಂದಿದ್ದೇನೆ ಎಂದು ಉಲ್ಲೇಖವಾಗಿದೆ. ಈ ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದರು. ಕುಲದೀಪ್ ಅವರ ತಂದೆ ನಿವೃತ್ತ ಪೊಲೀಸ್ ಅಧಿಕಾರಿ ಎಂದು ತಿಳಿದುಬಂದಿದೆ.ಪೊಲೀಸರ ಪ್ರಕಾರ, ರಾಜ್ ನಗರ ಎಕ್ಸ್ಟೆನ್ಶನ್ನ ರಾಧಾ ಕುಂಜ್ ಸೊಸೈಟಿಯಲ್ಲಿರುವ ತನ್ನ ಮನೆಯಲ್ಲಿ ನಿನ್ನೆ ಬೆಳಿಗ್ಗೆ 11 ಗಂಟೆ ಸುಮಾರಿಗೆ ಪರವಾನಗಿ ಪಡೆದ ರಿವಾಲ್ವರ್ನಿಂದ ಗುಂಡು ಹಾರಿಸಿ ಕುಲದೀಪ್ ಮೊದಲಿಗೆ ತನ್ನ ಪತ್ನಿಯನ್ನು ಕೊಂದಿದ್ದಾರೆ. ನಂತರ ತಾನು ಗುಂಡು ಹಾರಿಸಿಕೊಂಡಿದ್ದಾರೆ. ಘಟನೆ…
ಬೆಂಗಳೂರು : ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಒಂದರಲ್ಲಿ ಅನುಮಾನಾಸ್ಪದ ರೀತಿಯಲ್ಲಿ ದಂಪತಿಗಳ ಶವ ಪತ್ತೆಯಾಗಿದೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿ ಈ ಒಂದು ಘಟನೆ ನಡೆದಿದ್ದು, ನಿರ್ಮಾಣ ಹಂತದ ಕಟ್ಟಡದಲ್ಲಿ ಪರ್ವೀನ್ ಮತ್ತು ಮೆಹಬೂಬ್ ಎನ್ನುವ ದಂಪತಿಗಳ ಶವ ಪತ್ತೆಯಾಗಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಮೆಹಬೂಬ್ ಪತ್ನಿ ಪರ್ವೀನ್ ಶವ ಪತ್ತೆಯಾದರೆ, ಇನ್ನು ನೆಲದ ಮೇಲೆ ಬಿದ್ದಿರುವ ಸ್ಥಿತಿಯಲ್ಲಿ ಪತಿ ಮೆಹಬೂಬ್ ಶವ ಪತ್ತೆಯಾಗಿದೆ. ಇಬ್ಬರು ಕಟ್ಟಡ ನಿರ್ಮಾಣದ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದ್ದು, ಘಟನಾ ಸ್ಥಳಕ್ಕೆ ಸಂಜಯನಗರ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಕನಕಪುರ : ಕನಕಪುರದಲ್ಲಿ ಕಾಡಾನೆ ಹಿಂಡು ‘BMTC’ ಬಸ್ ತಡೆದು ಅಡ್ಡ ಹಾಕಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಸುತ್ತುವರೆದು ಕಾಡಾನೆಗಳು ತಳ್ಳಿವೆ. ಕಾಡಿನಲ್ಲಿ ಇರಬೇಕಾದಂತಹ ಆನೆಗಳು ಏಕಾಏಕಿ ನಾಡಿಗೆ ಬಂದಿದ್ದು, ಜನರನ್ನು ಆತಂಕಕ್ಕೆ ದೂಡಿವೆ. ಕನಕಪುರದ ಕಗ್ಗಲಿಪುರದಲ್ಲಿ ಈ ಒಂದು ಘಟನೆ ನಡೆದಿದೆ. ಹೌದು ರಾಮನಗರ ಜಿಲ್ಲೆಯ ಕನಕಪುರದಲ್ಲಿ ಏಕಾಏಕಿ ಐದಾರು ಕಾಡಾನೆಗಳು ಪ್ರತ್ಯಕ್ಷವಾಗಿದ್ದು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಐದಾರು ಆನೆಗಳನ್ನು ಕಂಡು ಕಕ್ಕಾಬಿಕ್ಕಿ ಆಗಿರುವ ಘಟನೆ ನಡೆದಿದೆ.ಐದಾರು ಕಾಡಾನೆಗಳು ಕಂಡು ಬಸ್ ನಲ್ಲಿದ್ದ ಪ್ರಯಾಣಿಕರು ಕಕ್ಕಾಬಿಕ್ಕಿಯಾಗಿದ್ದಾರೆ. ಕೆ ಆರ್ ಮಾರುಕಟ್ಟೆಯಿಂದ ಗುಲ್ಲಹಟ್ಟಿ, ಕಡೆಗೆ ಬಿಎಂಟಿಸಿ ಬಸ್ ಹೊರಟಿತ್ತು. ಕನಕಪುರ ರಸ್ತೆಯ ಕಗ್ಗಲಿಪುರ ಬಳಿಯ ಗುಲ್ಲಹಟ್ಟಿಯಲ್ಲಿ ಆನೆ ಪ್ರತ್ಯಕ್ಷವಾಗಿದೆ. ಕಾಡಾನೆ ಕಂಡು ಸ್ಥಳೀಯ ಜನರು ಮತ್ತು ಪ್ರಯಾಣಿಕರು ಏಕಾಏಕಿ ಭಯಭೀತರಾಗಿದ್ದಾರೆ ಕೂಡಲೇ ಸ್ಥಳೀಯರು ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ದೂರು ನೀಡಿದ್ದು ತಕ್ಷಣ ಸ್ಥಳಕ್ಕೆ ಸಿಬ್ಬಂದಿಗಳು ಧಾವಿಸಿದ್ದಾರೆ ಬಳಿಕ ಸಿಬ್ಬಂದಿಗಳು ಬನ್ನೇರುಘಟ್ಟ ಉದ್ಯಾನವನಕ್ಕೆ ಆನೆಯನ್ನು ಕಳುಹಿಸಿದ್ದಾರೆ.
ಬೆಂಗಳೂರು : ಮಾರಣಾಂತಿಕ ಹಲ್ಲೆಗೆ ಒಳಗಾಗಿದ್ದ ಬಿಬಿಎಂಪಿ ಲಾರಿ ಚಾಲಕ ಸಾವನ್ನಪ್ಪಿದ್ದಾರೆ. ಚಿಕಿತ್ಸೆ ಫಲಿಸದೇ ಬಿಬಿಎಂಪಿ ಲಾರಿ ಚಾಲಕ ಕೊಂಡಯ್ಯ ಇದೀಗ ಸಾವನ್ನಪ್ಪಿದ್ದಾರೆ.ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬಿಬಿಎಂಪಿ ಲಾರಿ ಚಾಲಕ ಕೊಂಡಯ್ಯ ಇಂದು ಸಾವನ್ನಪ್ಪಿದ್ದಾರೆ. ಕಳೆದ ಮಾರ್ಚ್ 19 ರಂದು ಬಿಬಿಎಂಪಿ ಲಾರಿ ಬೈಕ್ ಸ್ಥಳದಲ್ಲೇ ಸಾವನಪ್ಪಿದ್ದ. ಈ ವೇಳೆ ಬಿಬಿಎಂಪಿ ಲಾರಿಗೆ ಉದ್ರಿಕ್ತರ ಗುಂಪು ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದರು. ಬಳಿಕ ಸ್ಥಳೀಯ ನಿವಾಸಿಗಳು ಕೊಂಡಯ್ಯನ ಮೇಲೆ ಮನಸ್ಸೋ ಇಚ್ಛೆ ಹಲ್ಲೆ ಮಾಡಿದ್ದರು. ಲಾರಿ ಚಾಲಕ ಕೊಂಡೊಯ್ಯನ ಮೇಲೆ ಸ್ಥಳಿಯ ನಿವಾಸಿಗಳು ಭೀಕರವಾಗಿ ಹಲ್ಲೆ ಮಾಡಿದ್ದರು. ತಕ್ಷಣ ಲಾರಿ ಚಾಲಕ ಕೊಂಡಯ್ಯನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿ ಚಾಲಕ ಕೊಂಡಯ್ಯ ಗಂಭೀರ ಸ್ಥಿತಿಗೆ ತಲುಪಿದ್ದ. ಆದರೆ ಇಂದು ಚಿಕಿತ್ಸೆ ಫಲಿಸದೆ ಲಾರಿ ಚಾಲಕ ಕೊಂಡಯ್ಯ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಘಟನೆ ಸಂಭಂದ ಈಗಾಗಲೇ ಹಲ್ಲೆ ಮಾಡಿದ ಹಾಗೂ ಲಾರಿಗೆ ಬೆಂಕಿ ಹಚ್ಚಿದವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಬೆಂಗಳೂರು : ರಾಜ್ಯದ ಮಹಿಳೆಯರಿಗೆ ಉಚಿತ ಸಾರಿಗೆ ಸೌಲಭ್ಯ ನೀಡುವ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದ್ದ, ಐದು ಗ್ಯಾರಂಟಿಗಳ ಪೈಕಿ ಪ್ರಮುಖವಾದ ಶಕ್ತಿ ಯೋಜನೆಗೆ ಮತ್ತಷ್ಟು ಸೌಲಭ್ಯ ನೀಡಲು ಸರ್ಕಾರ ಮುಂದಾಗಿದೆ. ಇನ್ನು ಮುಂದೆ ಬಸ್ನಲ್ಲಿ ಪ್ರಯಾಣ ಮಾಡುವಾಗ ಆಧಾರ್ ಕಾರ್ಡ್ ತೆಗೆದುಕೊಂಡು ಹೋಗುವ ಅಗತ್ಯವಿಲ್ಲ. ಶಕ್ತಿ ಯೋಜನೆಯ ಲಾಭವನ್ನು ಇನ್ನಷ್ಟು ಸರಳವಾಗಿ ಪಡೆಯಲು ಸರ್ಕಾರ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡುವ ನಿರ್ಧಾರ ಕೈಗೊಂಡಿದೆ. ಈ ಸ್ಮಾರ್ಟ್ ಕಾರ್ಡ್ನ್ನು ಎರಡು ತಿಂಗಳೊಳಗೆ ರಾಜ್ಯದ ಎಲ್ಲಾ ಅರ್ಹ ಮಹಿಳೆಯರಿಗೆ ಉಚಿತವಾಗಿ ನೀಡಲಾಗುವುದು. ಈಗಾಗಲೇ ಈ ಕುರಿತ ಕಡತ ಹಣಕಾಸು ಇಲಾಖೆಗೆ ಹೋಗಿದ್ದು, ಕೇವಲ ಅನುಮತಿಯ ಬಾಕಿಯಿದೆ. ಸಾರಿಗೆ ಇಲಾಖೆ ಟೆಂಡರ್ ಕರೆಯಲು ಸಿದ್ಧತೆ ಮಾಡಿಕೊಂಡಿದೆ. ಸ್ಮಾರ್ಟ್ ಕಾರ್ಡ್ ಪಡೆಯಲು ಮಹಿಳೆಯರು ‘ಗ್ರಾಮ ಒನ್’ ಅಥವಾ ‘ಬೆಂಗಳೂರು ಒನ್’ ಕೇಂದ್ರಗಳಿಗೆ ಹೋಗಿ ಅರ್ಜಿ ಸಲ್ಲಿಸಬೇಕು. ಅಲ್ಲದೆ, ಸೇವಾಸಿಂಧು ವೆಬ್ಸೈಟ್ ಬಳಸಿ ಆನ್ಲೈನ್ ಮೂಲಕವೂ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಜಿ ಸಲ್ಲಿಸಿದ ನಂತರ ತಕ್ಷಣವೇ…
ನಮ್ಮ ನಿಮ್ಮೆಲ್ಲರ ಮನೆಗಳಲ್ಲಿ ಈಗಲೂ ಆರೋಗ್ಯವಂತ ವ್ಯಕ್ತಿ ಅನಾರೋಗ್ಯಕ್ಕೆ ಒಳಗಾದರೆ, ಹಣವಂತ ವ್ಯಕ್ತಿ ಹಣ ಕಳೆದುಕೊಂಡರೆ ಅಥವಾ ಇನ್ನೇನಾದರೂ ಸಂಭವಿಸಿದರೆ ಆತನಿಗೆ ದೃಷ್ಟಿಯಾಗಿರಬಹುದು ಎಂದು ಹೇಳುವ ಪರಿಪಾಠವಿದೆ.ಹೌದು, ಈಗಲೂ ಕೆಲವೊಂದು ನಂಬಿಕೆಗಳು ಬಲವಾಗಿ ಬೇರೂರಿವೆ. ಹಿಂದೂ ಪುರಾಣಗಳಲ್ಲೂ ಕಣ್ಣದೃಷ್ಟಿಯ ಬಗ್ಗೆ ಉಲ್ಲೇಖವಿದೆ. ಮಾನಸಿಕ ಶಕ್ತಿಯು ಆಲೋಚನೆ, ಏಕಾಗ್ರತೆ, ದೃಷ್ಟಿ, ಹೊಟ್ಟೆಯುರಿ ಮತ್ತು ಮಾತಿನ ಮೂಲಕ ಹೊರಬರುವುದು. ಇದು ಇನ್ನೊಬ್ಬನ ಅಭಿವೃದ್ಧಿ, ಏಳಿಗೆ ಮತ್ತು ಸೌಂದರ್ಯದ ಮೇಲೆ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಪರಿಣಾಮ ಬೀರುವುದೇ ಕಣ್ಣ ದೃಷ್ಟಿ ಎನ್ನುವುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ,…













