Subscribe to Updates
Get the latest creative news from FooBar about art, design and business.
Author: kannadanewsnow05
ಹುಬ್ಬಳ್ಳಿ : ಸಾಮಾನ್ಯವಾಗಿ ಪೊಲೀಸರು ಸಾರ್ವಜನಿಕರ ಕಣ್ಣಿಗೆ ಕೆಟ್ಟವರಾಗಿ ಕಾಣುತ್ತಾರೆ. ಆದರೆ ಅವರ ಕರ್ತವ್ಯವೆ ಹಾಗಿರುವಾಗ ಆ ರೀತಿ ಕಾಣುವುದು ಸಹಜ. ಇದೀಗ ಪೊಲೀಸರಲ್ಲಿ ಕೂಡ ಮಾನವೀಯತೆ ಇದೆ ಅನ್ನುವುದಕ್ಕೆ ಈ ಒಂದು ಘಟನೆ ಸಾಕ್ಷಿಯಾಗಿದೆ. ಹುಬ್ಬಳ್ಳಿಯಲ್ಲಿ ತಡರಾತ್ರಿ ಯುವಕನೊಬ್ಬ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಹೃದಯಘಾತವಾಗಿದೆ ಕೂಡಲೇ ಇನ್ಸ್ಪೆಕ್ಟರ್ ಒಬ್ಬರು ಆತನನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ಹುಬ್ಬಳ್ಳಿ ಧಾರವಾಡ ರಸ್ತೆಯ ಕಿಮ್ಸ್ ಮುಂಭಾಗ ತಡರಾತ್ರಿ ಯುವಕನಿಗೆ ಹೃದಯಘಾತವಾಗಿದೆ. ಹೃದಯಘಾತದಿಂದ ಯುವಕ ಮುಷ್ತಾಕ್ ಬೈಕ್ ನಿಂದ ಕೆಳಗೆ ಬಿದ್ದಿದ್ದಾನೆ. ತಕ್ಷಣ ಯುವಕನನ್ನು ಪೊಲೀಸ್ ಇನ್ಸ್ಪೆಕ್ಟರ್ ಆಸ್ಪತ್ರೆಗೆ ದಾಖಲಿಸಿದ್ದಾರೆ.ಧಾರವಾಡ ಪೂರ್ವ ಸಂಚಾರಿ ಠಾಣೆಯ ಇನ್ಸ್ಪೆಕ್ಟರ್ ಡಿಸೋಜಾ ಯುವಕನನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ಸದ್ಯ ಕಿಮ್ಸ್ ಆಸ್ಪತ್ರೆಯಲ್ಲಿ ಮುಷ್ತಾಕ್ಗೆ ಚಿಕಿತ್ಸೆ ನೀಡಲಾಗುತ್ತಿದೆ.
ನವದೆಹಲಿ : ಪ್ರಧಾನಮಂತ್ರಿ ನರೇಂದ್ರ ಮೋದಿಯವರ 119ನೇ ಮನ್ ಕಿ ಬಾತ್ ಸಂಚಿಕೆ ರವಿವಾರ ಪ್ರಸಾರವಾಯಿತು. ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿಯವರು ಹಲವು ವಿಚಾರಗಳನ್ನು ಹಂಚಿಕೊಂಡರು. ಅದರಲ್ಲೂ ಕರ್ನಾಟಕದ “ಹುಲಿ ಕುಣಿತವನ್ನು” ಪ್ರಧಾನಿ ಮೋದಿ ಅವರು ಇದೆ ವೇಳೆ ಹಾಡಿ ಹೊಗಳಿದ್ದಾರೆ. ಕರ್ನಾಟಕ, ಕೇರಳ ಮತ್ತು ತಮಿಳುನಾಡಿನಲ್ಲಿ ಹುಲಿ ವೇಷ ತೊಟ್ಟು ಕುಣಿತದ ದೃಶ್ಯ ನೋಡುಗರ ಕಣ್ಮನ ಸೆಳೆಯುತ್ತದೆ. ಇದು ವಿಶೇಷ ಹಾಗೂ ಗಮನ ಸೆಳೆಯುವ ಕಾರ್ಯಕ್ರಮವಾಗಿದೆ. ಕರ್ನಾಟಕದ ಚಾಮರಾಜನಗರ ಜಿಲ್ಲೆಯಲ್ಲಿ ಬಿಆರ್ಟಿ ಅರಣ್ಯವಿದೆ. ಬಿಆರ್ಟಿ ಅರಣ್ಯ ಅತಿಹೆಚ್ಚು ಹುಲಿಗಳಿರುವ ಪ್ರದೇಶವಾಗಿದೆ. ಹುಲಿಗಳನ್ನು ಉಳಿಸುವುದರಲ್ಲಿ ಸ್ಥಳೀಯ ಸೋಲಿಗರ ಪಾತ್ರ ದೊಡ್ಡದಿದೆ. ಹುಲಿಗಳನ್ನು ಉಳಿಸಿರುವ ಕ್ರೆಡಿಟ್ ಸ್ಥಳೀಯ ಸೋಲಿಗರಿಗೆ ಸಲ್ಲಬೇಕು. ಈಗಲೂ ಪ್ರಾಣಿ-ಮಾನವನ ಸಂಘರ್ಷ ನಡೆಯುತ್ತಲೇ ಇರುತ್ತದೆ. ಆದರೂ ಅದನ್ನು ಕಾಪಾಡಿಕೊಂಡು ಹೋಗಲಾಗುತ್ತಿದೆ ಎಂದು ಅವರು ಹೇಳಿದರು. ಮಕ್ಕಳಲ್ಲಿ ಹೆಚ್ಚುತ್ತಿರುವ ಬೊಜ್ಜಿಗೆ ಮೋದಿ ಕಳವಳ ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿ ಬೊಜ್ಜಿನ ಸಮಸ್ಯೆ ಹೆಚ್ಚಾಗಿ ಕಾಡುತ್ತಿದೆ. ಹಾಗಾಗಿ ಅಡುಗೆಯಲ್ಲಿ ಎಣ್ಣೆಯನ್ನು ಆದಷ್ಟು ಕಡಿಮೆ…
ಹುಬ್ಬಳ್ಳಿ : ರೇಲ್ವೆ ಮುಖಾಂತರ ಹುಬ್ಬಳ್ಳಿಗೆ ಗಾಂಜಾ ಸಾಧಿಸುತ್ತಿದ್ದು ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಲ್ಲಿ ಒಟ್ಟು 4 ಲಕ್ಷ ರೂಪಾಯಿ ಮೌಲ್ಯದ 4 ಕೆಜಿಗೆ ಜವನು ಇದೀಗ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಪೊಲೀಸರು ಜಫ್ತಿ ಮಾಡಿದ್ದಾರೆ. ಹೌದು ಹುಬ್ಬಳ್ಳಿ ರೈಲ್ವೆ ನಿಲ್ದಾಣದ 4ನೇ ಫ್ಲ್ಯಾಟ್ ಫಾರ್ಮ್ ನಲ್ಲಿ ಗಾಂಜಾ ಪತ್ತೆಯಾಗಿದೆ. ಬ್ಯಾಗ್ ಒಂದರಲ್ಲಿ 4 ಲಕ್ಷ ರೂಪಾಯಿ ಮೌಲ್ಯದ 4 ಕೆಜಿ ಗಾಂಜಾ ಪತ್ತೆಯಾಗಿದೆ. ಅಬಕಾರಿ ಉಪನಿರೀಕ್ಷಕ ಐಡಿ ಕಿತ್ತೂರು ನೇತೃತ್ವದಲ್ಲಿ ಗಾಂಜಾ ಜಪ್ತಿ ಮಾಡಿಕೊಳ್ಳಲಾಗಿದೆ. ರೇಲ್ವೆ ಮೂಲಕ ಹುಬ್ಬಳ್ಳಿಗೆ ಗಾಂಜಾ ತಂದಿರುವ ಶಂಕೆ ಇದೀಗ ವ್ಯಕ್ತವಾಗಿದೆ. ಅಪರಿಚಿತ ವ್ಯಕ್ತಿಗೆ ಇದೀಗ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನವದೆಹಲಿ : ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿ ಬೊಜ್ಜಿನ ಸಮಸ್ಯೆ ಹೆಚ್ಚಾಗಿ ಕಾಡುತ್ತಿದೆ. ಹಾಗಾಗಿ ಅಡುಗೆಯಲ್ಲಿ ಎಣ್ಣೆಯನ್ನು ಆದಷ್ಟು ಕಡಿಮೆ ಬಳಸುವುದರಿಂದ ಬೊಜ್ಜಿನ ಸಮಸ್ಯೆಯಿಂದ ಪಾರಾಗಬಹುದು ಎಂದು ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಸಲಹೆ ನೀಡಿದರು. ಪ್ರಧಾನಿ ನರೇಂದ್ರ ಮೋದಿ ಭಾನುವಾರ ತಮ್ಮ ಮಾಸಿಕ ರೇಡಿಯೋ ಪ್ರಸಾರ ‘ಮನ್ ಕಿ ಬಾತ್’ ನ 119 ನೇ ಸಂಚಿಕೆಯನ್ನು ಉದ್ದೇಶಿಸಿ ಮಾತನಾಡಿದರು.ಮಕ್ಕಳಲ್ಲಿ ಬೊಜ್ಜಿನ ಬಗ್ಗೆ ಪ್ರಧಾನಿ ಮೋದಿ ಕಳವಳ ವ್ಯಕ್ತಪಡಿಸಿ, ಮಕ್ಕಳಲ್ಲಿ ಬೊಜ್ಜು ನಾಲ್ಕು ಪಟ್ಟು ಹೆಚ್ಚಾಗಿದೆ. ಆರೋಗ್ಯದ ಬಗ್ಗೆ ಕಾಳಜಿ ಅವಶ್ಯ ಎಂದು ಹೇಳಿದ್ದಾರೆ. ದೇಹದ ಬೊಜ್ಜು ಹಲವು ರೋಗಗಳಿಗೆ ಆಹ್ವಾನ ನೀಡುತ್ತದೆ. ಎಂಟು ಜನರ ಪೈಕಿ ಒಬ್ಬರು ಬೊಜ್ಜು ಸಮಸ್ಯೆಯಿಂದ ಬಳಲುತ್ತಿದ್ದಾರೆ. ಮಕ್ಕಳಲ್ಲಿ ಬೊಜ್ಜನ ಸಮಸ್ಯೆ ಶೇ. 4ರಷ್ಟು ಇದೆ. ಶೇ. 10 ಕಡಿಮೆ ಅಡುಗೆ ಎಣ್ಣೆ ಕಡಿಮೆ ಬಳಕೆಯಿಂದ ಬೊಜ್ಜು ತಗ್ಗಿಸಬಹುದು ಎಂದರು.
ಬೆಂಗಳೂರು : ಇತ್ತೀಚಿಗೆ ಹೃದಯಘಾತ ಪ್ರಕರಣಗಳ ಸಂಖ್ಯೆ ಚಿಕ್ಕ ವಯಸ್ಸಿನವರಲ್ಲಿ ಹೆಚ್ಚಾಗಿ ಕಂಡುಬರುತ್ತಿದ್ದು, ನಿನ್ನೆ ತಾನೆ ತುಮಕೂರಿನಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿ ಹಾಗೂ ಕಲ್ಬುರ್ಗಿ ನಗರದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಇದೀಗ ಬೆಂಗಳೂರು ನಗರದ ಬ್ರೂಕ್ ಫೀಲ್ಡ್ ರಸ್ತೆಯಲ್ಲಿ ಪಾರ್ಕ್ ಮಾಡಿದ್ದ ಕಾರಿನಲ್ಲಿ ಹೃದಯಾಘಾತದಿಂದ ಯುವಕ ಸಾವನ್ನಪ್ಪಿರುವ ಘಟನೆ ಜರುಗಿದೆ. ಹೌದು ಫೆ.20ರಂದು ಈ ಅವಘಡ ಸಂಭವಿಸಿದ್ದು ತಡವಾಗಿ ಬೆಳಕಿಗೆ ಬಂದಿದೆ. ಯುವಕ ತನ್ನ ಗ್ರ್ಯಾಂಡ್ ಐಟೆನ್ ಕಾರಿನಲ್ಲಿ ಮೃತಪಟ್ಟಿದ್ದು, ಮೃತದೇಹ ನೋಡಿದ ಅಪರಿಚಿತ ವ್ಯಕ್ತಿ ಹಾಗೂ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಮೃತದೇಹವನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಘಟನೆಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಹೈದ್ರಾಬಾದ್ : ಕಾಲಿವುಡ್ ಸ್ಟಾರ್ ಹೀರೋ ಅಜಿತ್ ಇತ್ತೀಚೆಗೆ ಕಾರು ರೇಸಿಂಗ್ ನಲ್ಲಿ ಭಾಗವಹಿಸುತ್ತಿದ್ದಾರೆ. ನಾಯಕನಾಗಿ ಚಿತ್ರಗಳಲ್ಲಿ ನಟಿಸುವುದರ ಜೊತೆಗೆ, ಬೈಕ್ ಮತ್ತು ಕಾರು ರೇಸಿಂಗ್ಗಳಲ್ಲಿ ಭಾಗವಹಿಸುವ ಮೂಲಕ ಅವರು ತಮ್ಮ ಕೌಶಲ್ಯವನ್ನು ಪ್ರದರ್ಶಿಸುತ್ತಿದ್ದಾರೆ. ಇದೀಗ ಸ್ಪೇನ್ನ ವೇಲೆನ್ಸಿಯಾದಲ್ಲಿ ನಡೆದ ರೇಸಿಂಗ್ ಸ್ಪರ್ಧೆಯಲ್ಲಿ ಅವರ ಕಾರು ಭೀಕರ ಅಪಘಾತಕ್ಕೀಡಾಗಿದೆ. ಕೇವಲ ಒಂದು ತಿಂಗಳಲ್ಲಿ ಇದು ಅವರ ಎರಡನೇ ಇಂತಹ ಅಪಘಾತವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಅಜಿತ್ ಕಾರು ಆಕ್ಸಿಡೆಂಟ್ ಆಗುವ ದೃಶ್ಯ ವೈರಲ್ ಆಗಿದ್ದು, ವೈರಲ್ ಆಗಿರುವ ಭಯಾನಕ ವೀಡಿಯೊದಲ್ಲಿ, ಅಜಿತ್ ಅವರ ಕಾರು ರೇಸಿಂಗ್ ಟ್ರ್ಯಾಕ್ ನಲ್ಲಿ ಕೆಟ್ಟದಾಗಿ ಕ್ರ್ಯಾಶ್ ಆಗುವುದನ್ನು ಕಾಣಬಹುದು. ವೇಲೆನ್ಸಿಯಾದಲ್ಲಿ ನಡೆದ ಪೋರ್ಷೆ ಸ್ಪ್ರಿಂಟ್ ಚಾಲೆಂಜ್ ರೇಸಿಂಗ್ ಈವೆಂಟ್ನಲ್ಲಿ ನಟ ಚಾಲಕರಾಗಿದ್ದರು. ವೀಡಿಯೊದಲ್ಲಿ, ಅಜಿತ್ ಕುಮಾರ್ ಅಪಘಾತದ ನಂತರ ತಮ್ಮ ಕಾರಿನಿಂದ ಹೊರಬರುತ್ತಿರುವುದು ಕಾಣಬಹುದು, ಯಾವುದೇ ಹಾನಿಯಾಗದಂತೆ ಕಾಣುತ್ತಾರೆ. ಇದರಿಂದ ಅಭಿಮಾನಿಗಳು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಪ್ರಸ್ತುತ, ಅಜಿತ್ ಅವರ ಕಾರು ಅಪಘಾತಕ್ಕೆ ಸಂಬಂಧಿಸಿದ ವೀಡಿಯೊ ಸಾಮಾಜಿಕ…
ಹಾಸನ : ಆಕಸ್ಮಿಕ ಬೆಂಕಿ ತಗುಲಿ ಕೊಟ್ಟಿಗೆಯಲ್ಲಿದ್ದ 5 ಹಸುಗಳು ಹಾಗೂ 1 ಕರು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಹೆಂಜಗುಂಡನಹಳ್ಳಿ ಎಂಬ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.ಈ ಹಸುಗಳು ಹಾಗು ಕರು ರೈತ ಶಿವಣ್ಣ ಎಂಬುವವರಿಗೆ ಸೇರಿದ್ದವು ಎಂದು ತಿಳಿದುಬಂದಿದೆ. ತೋಟದ ಮನೆಗೆ ಬೆಂಕಿ ತಗುಲಿ 5 ಹಸುಗಳು 1 ಕರು ಸಾವನ್ನಪ್ಪಿದೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಹೆಂಜಗುಂಡನಹಳ್ಳಿ ಗ್ರಾಮದಲ್ಲಿ ತೋಟದ ಮನೆಯಲ್ಲಿ ಸಂಗ್ರಹಟ್ಟಿದ್ದ ತೆಂಗಿನಕಾಯಿಗಳು ಬೆಂಕಿಗೆ ಆಹುತಿ ಆಗಿವೆ.ರಾತ್ರಿ ಹಸುಗಳನ್ನು ರೈತ ಶಿವಣ್ಣ ಕೊಟ್ಟಿಗೆಯಲ್ಲಿ ಕಟ್ಟಿ ಮನೆಗೆ ಬಂದಿದ್ದ. ಆದರೆ ಬೆಳಿಗ್ಗೆ ಶಿವಣ್ಣ ಹಾಲು ಕರೆಯಲು ಹೋದಾಗ ಈ ಘಟನೆ ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಶಾಸಕ ಕೆಎಂ ಶಿವಲಿಂಗೇಗೌಡ ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಕುರಿತಂತೆ ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ : ಕನ್ನಡ ಮಾತಾಡು ಎಂದಿದ್ದಕ್ಕೆ ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ ಪ್ರಕರಣ ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದ್ದು ನಿನ್ನೆ ಚಿತ್ರದುರ್ಗದಲ್ಲಿ ಮಹಾರಾಷ್ಟ್ರ ಬಸ್ ಚಾಲಕನಿಗೆ ಕನ್ನಡ ಪರ ಕಾರ್ಯಕರ್ತರು ಮಸಿ ಬಳಿದ ನೆಲೆಯಲ್ಲಿ ಕರ್ನಾಟಕಕ್ಕೆ ಮಹಾರಾಷ್ಟ್ರ ಸರ್ಕಾರ ಬಸ್ ಸೇವೆ ಸ್ಥಗಿತಗೊಳಿಸಿದೆ. ಇದರ ಬೆನ್ನಲ್ಲೇ ಕರ್ನಾಟಕ ಕೂಡ ಮಹಾರಾಷ್ಟ್ರಕ್ಕೆ ತೆರಳುವ ಕೆಎಸ್ಆರ್ಟಿಸಿ ಬಸ್ ಸಂಚಾರ ಸ್ಥಗಿತಗೊಳಿಸಿದೆ. ಹೌದು ಕೊಲ್ಲಾಪುರದಲ್ಲಿ ಶಿವಸೇನೆ ಪ್ರತಿಭಟನೆ ಹಿನ್ನೆಲೆಯಲ್ಲಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಕೊಲ್ಲಾಪುರಕ್ಕೆ ತೆರಳುವ ಎಲ್ಲಾ ಕೆಎಸ್ಆರ್ಟಿಸಿ ಬಸ್ಗಳ ಸಂಚಾರ ಇದೀಗ ಬಂದ್ ಮಾಡಲಾಗಿದೆ. ನಿಪ್ಪಾಣಿ, ಚಿಕ್ಕೋಡಿ ಹಾಗೂ ಬೆಳಗಾವಿ ಮಾರ್ಗವಾಗಿ ಮಹಾರಾಷ್ಟ್ರಕ್ಕೆ ತೆರಳುವ ಎಲ್ಲಾ KSRTC ಬಸ್ ಗಳನ್ನು ಬಂದ್ ಮಾಡಲಾಗಿದೆ. ಪ್ರತಿದಿನ 120 ಬಸ್ ಗಳ ಸಂಚಾರ ನಡೆಸುತ್ತಿದ್ದ ಸಾರಿಗೆ ಇಲಾಖೆ ಮಧ್ಯಾಹ್ನದ ಬಳಿಕ ಪರಿಸ್ಥಿತಿ ನೋಡಿಕೊಂಡು ಮುಂದಿನ ತೀರ್ಮಾನ ಕೈಗೊಳ್ಳಲಿದೆ. ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುತ್ತಿದ್ದ ಬಸ್ಗಳ ಸಂಚಾರ ಕೂಡ ಇದೀಗ ಸ್ಥಗಿತಗೊಂಡಿದೆ. ಎಲ್ಲಾ ಬಸ್ ಸಂಚಾರವನ್ನು ಸ್ಥಗಿತಗೊಳಿಸಿದ ಮಹಾರಾಷ್ಟ್ರ…
ಬೆಂಗಳೂರು : ಸಾಮಾನ್ಯವಾಗಿ ಬೈಕ್ ಅಥವಾ ಕಾರು ಯಾವುದೇ ಇರಲಿ ನಂಬರ್ ಪ್ಲೇಟ್ ಮೇಲೆ ನಂಬರ್ ಇರುವುದನ್ನು ನೋಡಿದ್ದೇವೆ. ಅಲ್ಲದೆ ನಂಬರ್ ಜೊತೆ ಕೆಲವು ಅಡಿ ಬರಹಗಳನ್ನು ಸಹ ಕಾಣುತ್ತೆವೆ. ಕೇಂದ್ರ ಮೋಟಾರ್ ವಾಹನ ನಿಯಮದ ಪ್ರಕಾರ ವಾಹನದ ಹಿಂದೆ ಮತ್ತು ಮುಂದೆ ನಂಬರ್ ಪ್ಲೇಟ್ ಮೇಲೆ ನಂಬರ್ ಕಡ್ಡಾಯ.ಆದರೆ ಬೆಂಗಳೂರಿನಲ್ಲಿ ಕಾರು ಒಂದು ನಂಬರ್ ಪ್ಲೇಟ್ ಮೇಲೆ ನಂಬರ್ ಬದಲಾಗಿ ಮಾಫಿಯಾ ಎಂದು ಸ್ಟಿಕರ್ ಅಳವಡಿಸಿ ಓಡಾಡುತ್ತಿರುವ ಫೋಟೋ ಇದೀಗ ವೈರಲ್ ಆಗಿದೆ. ಹೌದು ಕಾರಿನ ನಂಬರ್ ಪ್ಲೇಟ್ ನಲ್ಲಿ ಮಾಫಿಯಾ ಪ್ರತ್ಯಕ್ಷವಾಗಿದೆ. ಬೆಂಗಳೂರಿನಲ್ಲಿ ಓಡಾಡುತ್ತಿದೆ ಮಾಫಿಯಾ ಎಂದು ಬರೆದ ಕಾರು. ನಂಬರ್ ಪ್ಲೇಟ್ ನಲ್ಲಿ ಮಾಫಿಯಾ ಎಂದು ಬರೆಸಿ ಉದ್ಧಟತನ ಮೆರೆಯಲಾಗಿದೆ. ಕಾರಿನ ನಂಬರ್ ಪ್ಲೇಟ್ ಮೇಲೆ ನಂಬರ್ ಬದಲಿಗೆ ಮಾಫಿಯಾ ಎಂಬ ಬರಹ ಬರೆಯಲಾಗಿದೆ.ಮಾಫಿಯಾ ಎಂದು ಬರೆದು ಏರ್ಪೋರ್ಟರ್ ರಸ್ತೆಯಲ್ಲಿ ಕಾರು ಸಂಚರಿಸಿದೆ. ಸಾರ್ವಜನಿಕರೊಬ್ಬರು ಈ ಒಂದು ಫೋಟೋವನ್ನು ತೆಗೆದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ.
ನವದೆಹಲಿ : ಉತ್ತರ ದೆಹಲಿಯ ರೋಹಿಣಿ ಜಿಲ್ಲೆಯ ಪ್ರೇಮ್ ನಗರದಲ್ಲಿರುವ ಸೂರ್ಯ ಮಂದಿರದಲ್ಲಿ ಶನಿವಾರ ಬೆಳಿಗ್ಗೆ ಸಂಭವಿಸಿದ ಬೆಂಕಿ ಅವಘಡದಲ್ಲಿ 65 ವರ್ಷದ ಅರ್ಚಕರೊಬ್ಬರು ಸುಟ್ಟು ಕರಕಲಾದ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.ದೆಹಲಿಯ ರೋಹಿಣಿ ಪ್ರದೇಶದ ಸೂರ್ಯ ದೇವಾಲಯದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅರ್ಚಕರು ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಅಪಘಾತದಲ್ಲಿ ದೇವಸ್ಥಾನದ ಅರ್ಚಕ ಸುಟ್ಟು ಕರಕಲಾಗಿದ್ದಾರೆ. ಹೌದು ದೆಹಲಿಯ ರೋಹಿಣಿ ಪ್ರದೇಶದ ಸೂರ್ಯ ದೇವಾಲಯದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅರ್ಚಕರು ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಅಪಘಾತದಲ್ಲಿ ದೇವಸ್ಥಾನದ ಅರ್ಚಕ ಸುಟ್ಟು ಕರಕಲಾಗಿದ್ದಾರೆ. ಘಟನೆಯಲ್ಲಿ ಸಾವನ್ನಪ್ಪಿದ ಅರ್ಚಕರನ್ನು 65 ವರ್ಷದ ಪಂಡಿತ್ ಬನ್ವಾರಿ ಲಾಲ್ ಶರ್ಮಾ ಎಂದು ಗುರುತಿಸಲಾಗಿದೆ. ಶನಿವಾರ, ಪ್ರೇಮ್ ನಗರ ಪೊಲೀಸ್ ಠಾಣೆಗೆ ಸೂರ್ಯ ದೇವಾಲಯದಲ್ಲಿ ಬೆಂಕಿ ಕಾಣಿಸಿಕೊಂಡ ಬಗ್ಗೆ ಮಾಹಿತಿ ಸಿಕ್ಕಿತು. ಅಗ್ನಿಶಾಮಕ ದಳ ಮತ್ತು ಪೊಲೀಸ್ ತಂಡ ತಕ್ಷಣ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಿಸಿತು. ಆದರೆ, ಅರ್ಚಕ ಬನ್ವಾರಿ ಲಾಲ್ ಶರ್ಮಾ ಪ್ರಜ್ಞಾಹೀನ…













