Subscribe to Updates
Get the latest creative news from FooBar about art, design and business.
Author: kannadanewsnow05
ಕೇರಳ : ಕೇರಳದಲ್ಲಿ ಘೋರವಾದ ದುರಂತ ಒಂದು ನಡೆದಿದ್ದು ಮಗಳ ಮದುವೆ ಒಂದು ದಿನ ಇರುವಾಗಲೇ, ಮಹಿಳೆಯೊಬ್ಬರಿಗೆ ಗಂಟಲಲ್ಲಿ ಕೇಕ್ ಸಿಲುಕಿ ಸಾವನ್ನಪ್ಪಿರುವ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯ ತನಲೂರುನಲ್ಲಿ ನಡೆದಿರುವುದು ವರದಿಯಾಗಿದೆ. ಹೌದು ಮಲಪ್ಪುರಂ ಜಿಲ್ಲೆಯ ತನಲೂರು ನಿವಾಸಿ ಜೈನಬಾ (44) ಗಂಟಲಲ್ಲಿ ಕೇಕ್ ಸಿಲುಕಿ ಸವನತ್ತಿದ್ದಾರೆ. ಜೈನಬಾ ಅವರ ಮನೆಯಲ್ಲಿ ಮಗಳ ಮದುವೆ ಸಂಭ್ರಮ ನಡೆಯುತ್ತಿತ್ತು. ಈ ವೇಳೆ ಸಂತಸದಿಂದ ಕೇಕ್ ಕಟ್ ಮಾಡಲಾಗಿದೆ. ರಾತ್ರಿ ಕೇಕ್ ತಿಂದು ಉಳಿದಿದ್ದ ಕಪ್ ಕೇಕ್ ಮನೆಯಲ್ಲಿ ಇಡಲಾಗಿತ್ತು. ಗುರುವಾರ (ಮೇ29) ಸಂಜೆ ಜೈನಬಾ ಅವರು ಚಹಾ ಕುಡಿಯುತ್ತಿದ್ದ ವೇಳೆ ಬಾಕಿ ಉಳಿದಿದ್ದ ಕಪ್ ಕೇಕ್ ಸೇವಿಸಿದ್ದಾರೆ. ಕಪ್ ಕೇಕ್ ತಿನ್ನುತ್ತಿದ್ದಂತೆ, ಅದು ಜೈನಬಾ ಅವರ ಗಂಟಲಲ್ಲಿ ಸಿಲುಕಿಕೊಂಡಿದ್ದ, ಇದರಿಂದ ಅವರಿಗೆ ಉಸಿರಾಟಕ್ಕೆ ತೊಂದರೆ ಉಂಟಾಗಿದೆ. ಕೂಡಲೇ ಅವರನ್ನು ಕೊಟ್ಟಕ್ಕಲ್ನಲ್ಲಿರುವ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಆ ಬಳಿಕ ಕೋಝಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವೈದ್ಯರು ಎಷ್ಟೇ ಪ್ರಯತ್ನ ಪಟ್ಟರು…
ಬೆಂಗಳೂರು : ದೂರದ ಒಡಿಶಾದಿಂದ ಬೆಂಗಳೂರಿಗೆ ಗಾಂಜಾ ತಂದು ಮಾರಾಟ ಮಾಡುತ್ತಿದ್ದ, ಪಶ್ಚಿಮ ಬಂಗಾಳದ ಓರ್ವ ಡ್ರಗ್ ಪೆಡ್ಲರ್ ನನ್ನು ಇದೀಗ ಬೆಂಗಳೂರಿನ ಜಿಗಣಿ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂದಿದ್ದರಿಂದ 20 ಲಕ್ಷ ಮೌಲ್ಯದ 14 ಕೆಜಿ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಪ್ರೇಮ್ ಶರ್ಪ (25) ಎಂದು ತಿಳಿದುಬಂದಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿ ಠಾಣೆ ಪೋಲೀಸರು 20 ಲಕ್ಷ ರೂಪಾಯಿ ಮೌಲ್ಯದ 14 ಕೆಜಿ ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿ ಪ್ರೇಮ್ ಒಡಿಶಾದಿಂದ ಬೆಂಗಳೂರಿಗೆ ಗಾಂಜಾ ತಂದು ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಖಚಿತ ಮಾಹಿತಿಯ ಮೇರೆಗೆ ಜೆನೆಟ್ ಜಿಗಣಿ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ. ಬಳಿಕ ಆರೋಪಿಯನ್ನು ಅರೆಸ್ಟ್ ಮಾಡಿದ್ದು ಈ ಕುರಿತು ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಕರ್ನಾಟಕದಲ್ಲಿ ಈಗಾಗಲೇ ಮುಂಗಾರು ಪೂರ್ವ ಮಳೆ ಸುರಿಯುತ್ತಿದ್ದು, ಬೆಂಗಳೂರು ಮಹಾನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವರುಣ ಅಬ್ಬರಿಸುತ್ತಿದ್ದಾನೆ. ಇದೀಗ ಮುಂದಿನ ಮೂರು ದಿನಗಳಲ್ಲಿ ಕರ್ನಾಟಕದಲ್ಲಿ ಭಾರಿ ಮಳೆ ಆಗಲಿದ್ದು ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೌದು ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣಕನ್ನಡಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ಕೊಡಗು, ಚಿಕ್ಕಮಗಳೂರು ಸೇರಿ 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಚಾರ್ಮಾಡಿ ಘಾಟ್ನಲ್ಲಿ ದಟ್ಟ ಮಂಜು ಕವಿದ ವಾತಾವರಣವಿದೆ. ಪಶ್ಚಿಮ ಘಟ್ಟದಲ್ಲಿ ಮಳೆ ಕೊಂಚ ಬಿಡುವು ನೀಡಿದ್ದು, ಪ್ರವಾಸಿಗರು ಜಲಪಾತಗಳ ಬಳಿ ಮೋಜು ಮಸ್ತಿ ಮಾಡುತ್ತಿದ್ದಾರೆ. ಇತರ ಜಿಲ್ಲೆಗಳಾದ ಬಾಗಲಕೋಟೆ, ಯಾದಗಿರಿ, ಹಾವೇರಿ, ಗದಗ, ಹಾಸನದಲ್ಲಿ ಯಲ್ಲೋ ಅಲರ್ಟ್, ಹಾಗೆಯೇ ಬೆಳಗಾವಿ, ಕಲಬುರಗಿ, ವಿಜಯಪುರ, ಬೀದರ್ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ : 15 ವರ್ಷದ ಬಾಲಕಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಿದ್ದು, ಕಾನೂನು ಸಂಘರ್ಷಕ್ಕೆ ಒಳಪಟ್ಟ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಪರಾರಿಯಾದ ಮತ್ತೊಬ್ಬ ಆರೋಪಿ ಬಂಧನಕ್ಕೆ ಜಾಲ ಬೀಸಿದ್ದೇವೆ ಎಂದು ನಗರ ಪೊಲೀಸ್ ಕಮಿಷನರ್ ಭೂಷಣ್ ಗುಲಾಬರಾವ್ ಬೊರಸೆ ಹೇಳಿದರು. ಕಳೆದ 2024 ಡಿಸೇಂಬರ್ ನಲ್ಲಿ ಬಾಲಕಿಯನ್ನು ಆಕೆಯ ಸ್ನೇಹಿತ ಪುಸಲಾಯಿಸಿ ಕರೆದು ಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾರೆ. ಅತ್ಯಾಚಾರದ ದೃಶ್ಯವನ್ನು ಆರೋಪಿಗಳು ವಿಡಿಯೊ ರೆಕಾರ್ಡ್ ಮಾಡಿದ್ದಾರೆ. ಅದನ್ನೇ ತೋರಿಸಿ ಬ್ಲ್ಯಾಕ್ಮೇಲ್ ಮಾಡಿ, 2025ರ ಜನವರಿಯಲ್ಲಿ ಮತ್ತೆ ಮೂವರು ಅತ್ಯಾಚಾರ ಮಾಡಿದ್ದಾರೆ. ಬೇರೆ ಬೇರೆ ಸ್ಥಳಗಳಲ್ಲಿ ಅತ್ಯಾಚಾರ ಮಾಡಿದ್ದಾರೆ. ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಎಪಿಎಂಸಿ ಠಾಣೆಯಲ್ಲಿ 6 ಮಂದಿ ವಿರುದ್ಧ ಶನಿವಾರ ಎಫ್ಐಆರ್ ದಾಖಲಾಗಿತ್ತು. ಅದಾದ 24 ತಾಸಿನೊಳಗೆ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಂತ್ರಸ್ತೆ ಮತ್ತು ಆರೋಪಿಗಳು ಬೆಳಗಾವಿ ಜಿಲ್ಲೆಯವರೇ ಆಗಿದ್ದಾರೆ ಎಂದು ನಗರ ಪೊಲೀಸ್ ಕಮಿಷನರ್ ಭೂಷಣ್ ಗುಲಾಬರಾವ್…
ಬೆಂಗಳೂರು : ರಾಜ್ಯದ ಶಕ್ತಿಸೌಧ ವಿಧಾನಸೌಧ ಇಂದಿನಿಂದ ಸಾರ್ವಜನಿಕ ವೀಕ್ಷಣೆಗೆ ಮುಕ್ತವಾಗಿದೆ. ಹೀಗಾಗಿ ಶಕ್ತಿಸೌಧವನ್ನ ದೂರದಿಂದಲೇ ನೋಡಿ.. ಫೋಟೋ ಕ್ಲಿಕ್ಕಿಸಿ ಸಂತಸಪಟ್ಟುಕೊಳ್ಳುತ್ತಿದ್ದ ಜನರಿಗೆ ಹತ್ತಿರದಿಂದಲೇ ನೋಡುವ ಅವಕಾಶ ಸಿಕ್ಕಿದೆ. ಭವ್ಯ ವಿಧಾನಸೌಧ ವೀಕ್ಷಣೆಗೆ ರಾಜ್ಯ ಸರ್ಕಾರ ʻಗೈಡೆಡ್ ಟೂರ್ʼ ಹೆಸರಿನಲ್ಲಿ ಪ್ರವಾಸ ಭಾಗ್ಯ ಕಲ್ಪಿಸಿದೆ. ಹೌದು ಇತಿಹಾಸದಲ್ಲೇ ಮೊದಲ ಬಾರಿಗೆ ಸರ್ಕಾರ ವಿಧಾನಸೌಧ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ಮಾಡಿಕೊಟ್ಟಿದೆ. ಇಂದಿನಿಂದ ಸಾರ್ವಜನಿಕರಿಗೆ, ಪ್ರವಾಸಿಗರಿಗೆ ವಿಧಾನಸೌಧ ಪ್ರವಾಸಕ್ಕೆ ಮುಕ್ತ. ಮೊದಲ ದಿನವೇ ವಿಧಾನಸೌಧ ಟೂರ್ಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಮೊದಲ ದಿನ ತಲಾ 25-30 ಜನ ಇರುವ ನಾಲ್ಕೈದು ಬ್ಯಾಚ್ಗಳ ಮೂಲಕ ಪ್ರವಾಸಿಗರು ವಿಧಾನಸೌಧದ ಒಳಗೆಲ್ಲಾ ಸುತ್ತಾಡಿ, ಅದರ ಸೌಂದರ್ಯ ತಮ್ಮ ಕಣ್ಮನದೊಳಗೆ ತುಂಬಿಕೊಂಡರು. ಕುಟುಂಬ, ಸ್ನೇಹಿತರೊಂದಿಗೆ ಬಂದ ಹಲವರು ವಿಧಾನಸೌಧದ ಒಳಗೆ, ಹೊರಗೆ ಸುತ್ತಾಡಿ ಖುಷಿಪಟ್ಟರು. ಪ್ರತೀ ಭಾನುವಾರ, ಎರಡನೇ ಹಾಗೂ ನಾಲ್ಕನೇ ಶನಿವಾರ ವಿಧಾನಸೌಧ ಟೂರ್ಗೆ ಅವಕಾಶವಿರುತ್ತದೆ. 16 ವರ್ಷ ಮೇಲ್ಪಟ್ಟ ಎಲ್ಲರಿಗೂ ತಲಾ 50 ರೂ, 15 ವರ್ಷದೊಳಗಿನ…
ಶಿವಮೊಗ್ಗ : ಶಿವಮೊಗ್ಗದಲ್ಲಿ ನಿನ್ನೆ ರಾತ್ರಿ ಘೋರವದ ದುರಂತ ಒಂದು ಸಂಭವಿಸಿದ್ದು ಕೆಲಸ ಮುಗಿಸಿಕೊಂಡು ಮನೆಗೆ ತೆರಳುವಾಗ ರಸ್ತೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ನವವಿವಾಹಿತ ಸಾವನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹೊಳೆಜೋಳದಗುಡ್ಡೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಗ್ರಾಮದ ದೇವರಾಜ ಎಂದು ತಿಳಿದುಬಂದಿದೆ. ಅವರು ಎಂದಿನಂತೆ ಕೆಲಸ ಮುಗಿಸಿಕೊಂಡು ರಾತ್ರಿ 8 ಗಂಟೆಗೆ ಮನೆಗೆ ತೆರಳುವ ವೇಳೆ ಮನೆಯ ವಿದ್ಯುತ್ ಲೈನ್ ತುಂಡಾಗಿ ಬಿದ್ದಿರುವುದನ್ನು ಗಮನಿಸದೆ ತುಳಿದು ವಿದ್ಯುತ್ ಸ್ಪರ್ಶಸಿ ಅಸ್ವಸ್ಥರಾಗಿದ್ದರು. ಮೃತ ದೇವರಾಜ ವಿವಾಹವಾಗಿ ಕೇವಲ 10 ದಿನಗಳಾಗಿದ್ದವು ಎಂದು ತಿಳಿದುಬಂದಿದೆ. ಘಟನೆ ಬಳಿಕ ಸ್ಥಳೀಯರು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ದೇವರಾಜ್ ಮೃತಪಟ್ಟಿದ್ದಾರೆ. ಘಟನೆ ಕುರಿತು ಸೊರಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BREAKING : ಹಟ್ಟಿ ಚಿನ್ನದ ಗಣಿಯಲ್ಲಿ ಗಣಿಗಾರಿಕೆ ವೇಳೆ ಮಣ್ಣು ಕುಸಿತ : ಓರ್ವ ಕಾರ್ಮಿಕ ಸಾವು, ಮತ್ತೊರ್ವನ ಕಾಲು ಕಟ್!
ರಾಯಚೂರು : ಹಟ್ಟಿ ಚಿನ್ನದ ಗಣಿಯಲ್ಲಿ ಗಣಿಗಾರಿಕೆ ವೇಳೆ ಮಣ್ಣು ಕುಸಿತವಾಗಿ ಘೋರವಾದ ದುರಂತವೊಂದು ಸಂಭವಿಸಿದೆ. ಘಟನೆಯಲ್ಲಿ ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಮತ್ತೊಬ್ಬ ಕಾರ್ಮಿಕನಿಗೆ ಕಾಲು ಕಟ್ ಆಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿಯಲ್ಲಿ ಈ ಒಂದು ದುರಂತ ನಡೆದಿದೆ. ಸುಮಾರು 2800 ಅಡಿ ಆಳದಲ್ಲಿ ಗೋಲ್ಡ್ ಮೈನಿಂಗ್ ವೇಳೆ ಈ ಒಂದು ದುರಂತ ಸಂಭವಿಸಿದೆ. ಮೈನಿಂಗ್ ವೇಳೆ ಮಣ್ಣು ಕುಸಿದು ಕಾರ್ಮಿಕ ಶರಣಬಸವ (40) ಸಾವನ್ನಪ್ಪಿದ್ದು, ಲಿಂಗಸೂಗೂರು ತಾಲೂಕಿನ ವೀರಾಪುರ ಗ್ರಾಮದ ನಿವಾಸಿಯಾಗಿದ್ದಾನೆ. ಹಾಗೂ ಮತ್ತೊರ್ವ್ ಕಾರ್ಮಿಕ ನಿರುಪಾದಿ ಗಾಯಗೊಂಡಿದ್ದು, ಬೆಳಗಾವಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರು : ಪ್ರಶ್ನೆ ಮಾಡಿದ ಯುವತಿಯ ಮೇಲೆ ಬಿಎಂಟಿಸಿ ಬಸ್ ಹತ್ತಿಸಲು ಮುಂದಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಸೂಚನೆಯ ಮೇರೆಗೆ ಚಾಲಕನನ್ನು ಅಮಾನತುಗೊಳಿಸಲಾಗಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ಚಾಲಕನನ್ನು ಅಮಾನತುಗೊಳಿಸಿ ಆದೇಶ ಪ್ರಕಟಿಸಲಾಗಿದೆ. ಕಳೆದ ಮೇ 23 ರಂದು ಬೆಂಗಳೂರಿನ ಎಂಜಿ ರಸ್ತೆಯಲ್ಲಿ ಈ ಒಂದು ಘಟನೆ ನಡೆದಿತ್ತು.ಪ್ರಶ್ನೆ ಮಾಡಿದ ಯುವತಿ ಮೇಲೆ ಬಸ್ ಹತ್ತಿಸಲು ಯತ್ನಿಸಿದ ಡ್ರೈವರ್ ನನ್ನು ಸಸ್ಪೆಂಡ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರಶಾಂತ್ ಅಮಾನತಾದ ಚಾಲಕ ಎಂದು ಗುರುತಿಸಲಾಗಿದೆ. ಮೇ 23ರಂದು ಸಂಜೆ 5:40ಕ್ಕೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬಿಎಂಟಿಸಿ ಬಸ್ ಪಕ್ಕ ಕಾರಿನಲ್ಲಿದ್ದ ಯುವತಿ ಕಾರಿನಿಂದ ಇಳಿದು ಬಸ್ ಚಾಲಕನನ್ನು ಪ್ರಶ್ನೆ ಮಾಡಿದ್ದಾಳೆ. ಯಾವ ವಿಚಾರವಾಗಿ ಯುವತಿ ಪ್ರಶ್ನೆ ಮಾಡಿದ್ದಾಳೆ ಎಂಬ ಕುರಿತು ಸ್ಪಷ್ಟತೆ ದೊರೆತಿಲ್ಲ. ಬಳಿಕ ಬಸ್ ಚಾಲಕ ಮತ್ತು ಯುವತಿ ನಡುವೆ ಜಗಳ ನಡೆದು ಬಸ್ ಚಾಲಕನನ್ನು ಪ್ರಶ್ನೆ ಮಾಡಲು…
ಬೆಂಗಳೂರು : ಪಹಲ್ಗಾಮ್ ಉಗ್ರರ ನಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದೆ. ಇದೇ ವಿಚಾರವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಎಲ್ಲೇ ಹೋದರು ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಭಾಷಣ ಮಾಡುತ್ತಾರೆ. ಹಾಗಾಗಿ ಎಲ್ಲಾ ನನ್ನಿಂದಲೇ ಆಯ್ತು ಅನ್ನೋದನ್ನ ಮೋದಿ ಬಿಡಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿದರು. ಬೆಂಗಳೂರಲ್ಲಿ ಮಾತನಾಡಿದ ಅವರು, ಎಲ್ಲಾ ನನ್ನಿಂದಲೇ ಆಯ್ತು ಅನ್ನೋದನ್ನ ಮೋದಿ ಬಿಡಬೇಕು. ಇಡೀ ದೇಶ ನಮ್ಮ ಸೇನೆಯ ಹಿಂದೆ ಇದೆ. ಸೇನೆ ಮಾಡುವ ಕೆಲಸಕ್ಕೆ ನಮ್ಮೆಲ್ಲರ ಬೆಂಬಲವೂ ಇದೆ. ನಾನು ಅದು ಮಾಡಿದ್ದೇನೆ ಇದು ಮಾಡಿದ್ದೇನೆ ನನ್ನ ಒಬ್ಬನಿಂದಲೇ ಎಲ್ಲವೂ ಸಾಧ್ಯ ಅನ್ನೋದನ್ನ ಬಿಡಬೇಕು. ಚುನಾವಣಾ ಭಾಷಣೆಗಳಲ್ಲಿ ಮೋದಿ ಬಳಸುವುದನ್ನು ಬಿಡಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿದರು.
ಬಾಗಲಕೋಟೆ : ಈಗಾಗಲೇ ರಾಜ್ಯದಲ್ಲಿ ಕೊರೊನಾ ವೈರಸ್ಗೆ ಮೂವರು ಬಲಿಯಾಗಿದ್ದು, ಕೊರೊನಾ ಪ್ರಕರಣಗಳ ಸಂಖ್ಯೆ 425 ಕ್ಕೆ ಏರಿಕೆಯಾಗಿದೆ. ಇದರ ಮಧ್ಯ ರಾಜ್ಯಕ್ಕೆ ಮತ್ತೊಂದು ವೈರಸ್ ಎಂಟ್ರಿ ಆಗಿದ್ದು, ಬಾಗಲಕೋಟೆಯಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾಗಿದೆ. ಹೌದು ಜಿಲ್ಲೆಯ ಇಳಕಲ್ ತಾಲೂಕಿನ ಗೊರಬಾಳ ಗ್ರಾಮದಲ್ಲಿರುವ ಸಾಕಾಣಿಕೆ ಕೇಂದ್ರದಲ್ಲಿ ಇಂತಹ ರೋಗ ಪತ್ತೆಯಾಗಿದೆ. ಅನ್ಯರಾಜ್ಯದಿಂದ ಹಂದಿಗಳನ್ನು ಆಮದು ಮಾಡಿಕೊಂಡಿರುವ ವೇಳೆ ಬಂದಿರುವ ಶಂಕೆ ವ್ಯಕ್ತವಾಗಿದೆ. ಕಳೆದ ಮೇ 22ಕ್ಕೆ ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ಹಂದಿಗಳ ರಕ್ತದ ಮಾದರಿಯನ್ನು ಭೋಪಾಲ್ನ ಲ್ಯಾಬೊರೇಟರಿಗೆ ಕಳುಹಿಸಿ ಪರೀಕ್ಷಿಸಲಾಗಿದೆ. ಇಳಕಲ್ ತಾಲೂಕಿನಲ್ಲಿ ಹಂದಿ ಸಾಗಾಣಿಕೆ ಮಾಡಿ, ಕೇರಳ, ತಮಿಳುನಾಡು ಹಾಗೂ ರಾಜ್ಯದ ಕೊಡಗು ಜಿಲ್ಲೆಗಳಿಗೆ ಕಳುಹಿಸಲಾಗುತ್ತದೆ. ಹಾಗಾಗಿ ಬಾಗಲಕೋಟೆ ಜಿಲ್ಲೆಗೆ ಈ ರೋಗ ಸೀಮಿತವಾಗಿಲ್ಲ. ಈಗಾಗಲೇ ಕೇಂದ್ರ ಸರ್ಕಾರ, ಕೇರಳ ಸೇರಿದಂತೆ ಇತರ ರಾಜ್ಯಗಳಲ್ಲಿ ಹಂದಿ ಜ್ವರ ಹರಡಿರುವ ಬಗ್ಗೆ ಮಾಹಿತಿ ನೀಡಲಾಗಿದೆ. ಹೀಗಾಗಿ ಪಶು ಸಂಗೋಪನೆ ಇಲಾಖೆ ಅಧಿಕಾರಿಗಳು ಮೂರು ರ್ಯಾಪಿಡ್ ಟೀಮ್ಗಳನ್ನು ಕಾರ್ಯಾಚರಣೆಗೆ ಇಳಿಸಿದ್ದಾರೆ. 0-1…














