Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಬೆಂಗಳೂರು : ಬೆಂಗಳೂರಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಕಾಲೇಜು ವಿದ್ಯಾರ್ಥಿಗೆ ಬಿಎಂಟಿಸಿ ಬಸ್ ಒಂದು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹರಪನಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದೆ. ಹರಪನಹಳ್ಳಿ ಬಳಿ ವಿದ್ಯಾರ್ಥಿಗೆ ಬಿಎಂಟಿಸಿ ಬಸ್ ಗುದ್ದಿಕೊಂಡು ಹೋಗಿದೆ. ವಕೀಲ ಬಡಾವಣೆ ನಿವಾಸಿ ಸಂಜಯ್ (17) ಎನ್ನುವ ವಿದ್ಯಾರ್ಥಿಗೆ ಗಂಭೀರವಾದ ಗಾಯಗಳಾಗಿವೆ. ಶಾಲಾ ಬಸ್ ಹೊರಟಿತು ಎಂದು ವಿದ್ಯಾರ್ಥಿ ಹಿಂದೆ ಓಡುತ್ತಿದ್ದ ವಿದ್ಯಾರ್ಥಿಗಳು ಇದ್ದರೂ ಗಮನಿಸದೇ ಶಾಲಾ ಬಸ್ ಚಾಲಕ ತೆರಳಿದ್ದಾನೆ. ಶಾಲಾ ಬಸ್ ಹಿಂದೆ ಓಡುತ್ತಿದ್ದ ವಿದ್ಯಾರ್ಥಿಗೆ ಹಿಂದಿನಿಂದ ಬಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ವಿದ್ಯಾರ್ಥಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
BREAKING : ಸಿಎಸ್ ಶಾಲಿನಿ ರಜನೀಶ್ ಬಗ್ಗೆ ಅವಹೇಳನಕಾರಿ ಹೇಳಿಕೆ : ಎನ್.ರವಿಕುಮಾರ್ ವಿರುದ್ಧ ಸಭಾಪತಿಗೆ ದೂರು ಸಲ್ಲಿಕೆ
ಬೆಂಗಳೂರು : ಬಿಜೆಪಿ ಎಂಎಲ್ಸಿ ಆಗಿರುವಂತಹ ಎನ್ ರವಿಕುಮಾರ್ ಅವರು ಇತ್ತೀಚಿಗೆ ಸರ್ಕಾರಿ ಅಧಿಕಾರಿಗಳ ವಿರುದ್ಧ ನಾಲಿಗೆ ಹರಿಬಿಡುತ್ತಿದ್ದಾರೆ ಇತ್ತೀಚೆಗೆ ಕಲ್ಬುರ್ಗಿಯ ಜಿಲ್ಲಾಧಿಕಾರಿ ಫೌಜಿಯಾ ತರುನ್ನಂ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದರು. ಸರ್ಕಾರದ ಸಿ.ಎಸ್ ಶಾಲಿನಿ ರಜನಿಶ್ ಅವರ ಕುರಿತು ಅವೆ ಹೇಳಿನ ಕಾರ್ಯ ಹೇಳಿಕೆ ನೀಡಿದ್ದಾರೆ ಈ ಕುರಿತು ಕಾಂಗ್ರೆಸ್ ತೀವ್ರ ಅಕ್ರೋಶ ವ್ಯಕ್ತಪಡಿಸಿದೆ. ಹೌದು ಸರ್ಕಾರದ ಸಿಎಸ್ ವಿರುದ್ಧ ರವಿಕುಮಾರ್ ಅವಹೇಳನ ಹೇಳಿಕೆ ನೀಡಿದ್ದು, ಸಿಎಸ್ ಶಾಲಿನಿ ರಜನೀಶ್ ಅವರನ್ನು ಎನ್ ರವಿಕುಮಾರ್ ಅವಾಚ್ಯ ಪದ ಬಳಸಿ ಅವಮಾನಿಸಿದ್ದಾರೆ. ಜೂನ್ 30 ರಂದು ಪ್ರತಿಭಟನೆ ವೇಳೆ ಶಾಲಿನಿ ರಜನಿಶ್ ಅವರನ್ನು ನಿಂದಿಸಿದ್ದಾರೆ ಬೆಂಗಳೂರಿನಲ್ಲಿ ಸಿಎಸ್ಗೆ ದೂರು ಕೊಡಲು ನಿಯೋಗ ತೆರಳಿತ್ತು. ಈ ವೇಳೆ ಬಿಜೆಪಿ MLC ಎನ್.ರವಿಕುಮಾರ್ ಅವಾಚ್ಯ ಪದ ಬಳಕೆ ಮಾಡಿರುವ ಆರೋಪ ಕೇಳಿ ಬಂದಿದೆ. ಈ ಹಿಂದೆ ಕಲ್ಬುರ್ಗಿ ಜಿಲ್ಲಾಧಿಕಾರಿಯ ವಿರುದ್ಧ ನಾಲಿಗೆ ಹರಿಬಿಟ್ಟಿದ್ದರು. ತಿಂಗಳ ಹಿಂದೆ ಅಷ್ಟೇ ಕಲ್ಬುರ್ಗಿ ಜಿಲ್ಲಾಧಿಕಾರಿ ವಿರುದ್ಧವು ರವಿಕುಮಾರ್…
ಧಾರವಾಡ : ಬೆಳಗಾವಿಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ವೇದಿಕೆ ಮೇಲೆಯೇ ಸಿಎಂ ಸಿದ್ದರಾಮಯ್ಯ ಹೆಚ್ಚುವರಿ ಎಸ್ಪಿ ಆಗಿದ್ದ ನಾರಾಯಣ ಭರಮನಿ ಅವರಿಗೆ ಕಪಾಳಮೋಕ್ಷಕ್ಕೆ ಮುಂದಾಗಿದ್ದರು. ಇದೇ ವಿಚಾರವಾಗಿ ನಾರಾಯಣ ಭರಮನಿ ಸ್ವಯಂ ನಿವೃತ್ತಿಗೆ ಮುಂದಾಗಿ ಪತ್ರ ಸಹ ಬರೆದಿದ್ದರು. ಇದೀಗ ನಾರಾಯಣ ಬರಮಣಿ ಅವರು ನಾನು ದೈನಂದಿನ ಕೆಲಸಕ್ಕೆ ಮತ್ತೆ ಹಾಜರಾಗುತ್ತಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ. ಧಾರವಾಡ ಎಎಸ್ಪಿ ನಾರಾಯಣ ಬರಮನಿ ರಾಜೀನಾಮೆ ವಿಚಾರವಾಗಿ, ನಾನು ಶಿಸ್ತಿನ ಇಲಾಖೆಯಲ್ಲಿ ಇದ್ದೇನೆ. ನನ್ನ ಭಾವನೆಗಳನ್ನು ಇಲಾಖೆ ಮೇಲಾಧಿಕಾರಿಗಳಿಗೆ ತಿಳಿಸಿದ್ದೇನೆ. ಮೇಲಾಧಿಕಾರಿಗಳು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ರಹ ಸಚಿವ ಜಿ ಪರಮೇಶ್ವರ್ ರವರು ನನ್ನ ಜೊತೆಗೆ ಮಾತನಾಡಿದ್ದಾರೆ. ಈಗ ನಾನು ದೈನಂದಿನ ಕೆಲಸಕ್ಕೆ ಹಾಜರಾಗುತ್ತಿದ್ದೇನೆ ರಾಜೀನಾಮೆ ಅಂಗೀಕಾರ ಕುರಿತು ಸರ್ಕಾರ ನಿರ್ಧರಿಸುತ್ತದೆ ನಾನೀಗ ದೈನಂದಿನ ಕೆಲಸಕ್ಕೆ ಹಾಜರಾಗುತ್ತೇನೆ ಎಂದು ಧಾರವಾಡದಲ್ಲಿ ಎಎಸ್ಪಿ ನಾರಾಯಣ ಭರಮಣಿ ಹೇಳಿಕೆ ನೀಡಿದರು.
ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಇತ್ತೀಚಿಗೆ ಭಾರಿ ಚರ್ಚೆ ನಡೆದಿತ್ತು ನಿನ್ನೆ ಚಿಕ್ಕಬಳ್ಳಾಪುರದಲ್ಲಿ ವಿಶೇಷ ಸಂಪುಟ ಸಭೆಗೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಐದು ವರ್ಷಗಳ ಕಾಲ ನಾನೇ ಸಿಎಂ ಎಂದು ಘೋಷಣೆ ಮಾಡಿದ್ದಾರೆ ಈ ವಿಚಾರವಾಗಿ ಬೆಂಗಳೂರಿನಲ್ಲಿ ಅಧ್ಯಕ್ಷ ಡಿಕೆ ಸುರೇಶ್ ಅವರು ಮಾತನಾಡಿದ್ದು ಸದ್ಯ ರಾಜ್ಯದಲ್ಲಿ ಸಿಎಂ ಕುರ್ಚಿ ಕಾಲಿ ಇಲ್ಲ ಏನು ಮಾಡೋದು? ನನಗೂ ನಮ್ಮ ಅಣ್ಣ ಸಿಎಂ ಆಗಬೇಕೆಂಬ ಆಸೆ ಇದೆ ಎಂದು ಹೇಳಿಕೆ ನೀಡಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ಬಗ್ಗೆ ಮಾತನಾಡುವಷ್ಟು ದೊಡ್ಡವನು ನಾನು ಅಲ್ಲ. ಪಕ್ಷದ ಒಳಗೊಡೆಯೋ ಎಲ್ಲರೂ ಆಯ್ಕೆ ಆಗಿರುವುದು. ಪಕ್ಷವನ್ನು ಬಲಪಡಿಸಲು ನಾವೆಲ್ಲ ಬದ್ಧರಾಗಿರಬೇಕು. ನಮ್ಮ ಅಣ್ಣ ಒಮ್ಮೆ ಸಿಎಂ ಆಗಬೇಕು ಎಂಬ ಆಸೆ ನನಗೂ ಇದೆ. ಈ ಆಸೆ ಎಂದು ಇದೆ ನಾಳೆಯು ಇರುತ್ತೆ ಮುಂದೆಯೂ ಇರುತ್ತದೆ. ರಾಜ್ಯದಲ್ಲಿ ಸದ್ಯ ಸಿಎಂ ಕುರ್ಚಿ ಕಾಲಿ ಇಲ್ಲ ಏನು ಮಾಡಬೇಕು? ಎಂದರು. ಈ ಅವಧಿಯಲ್ಲೇ CM…
ಬೆಂಗಳೂರು : ಬೆಂಗಳೂರಿನಲ್ಲಿ ಒಳ ಮೀಸಲಾತಿ ಸರ್ವೇ ಮಾಡುವ ವೇಳೆ ಸಾರ್ವಜನಿಕರೊಂದಿಗೆ ಕಿರಿಕ್ ಮಾಡಿದ್ದು ಅಲ್ಲದೆ ಹಲ್ಲೆಗೆ ಮುಂದಾಗಿದ್ದ, ಬಿಬಿಎಂಪಿ ಮೂವರು ಅಧಿಕಾರಿಗಳನ್ನು ಇದೀಗ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಸರ್ವೆ ಮಾಡದೆ ಮನೆ ಬಾಗಿಲಿಗೆ ಸ್ಟಿಕರ್ ಅಂಟಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಮನೆ ಮಾಲೀಕರ ಮೇಲೆ ಸಿಬ್ಬಂದಿಗಳು ಹಲ್ಲೆಗೆ ಯತ್ನಿಸಿದ್ದಾರೆ ಈ ಹಿನ್ನೆಲೆ ಮೂರು ಅಧಿಕಾರಿಗಳನ್ನು ಇದೀಗ ಸಸ್ಪೆಂಡ್ ಮಾಡಲಾಗಿದೆ. ಹೌದು ಕಾಟಾಚಾರಕ್ಕೆ ಸಮೀಕ್ಷೆ ನಡೆಸಿದ ಮೂವರು ಸಿಬ್ಬಂದಿಗಳು ಅಮಾನತುಗೊಂಡಿದ್ದಾರೆ. ಒಳ ಮೀಸಲಾತಿ ಸಮೀಕ್ಷೆ ವೇಳೆ ಬಿಬಿಎಂಪಿ ಸಿಬ್ಬಂದಿ ಕಿರಿಕ್ ಮಾಡಿರುವ ವಿಚಾರವಾಗಿ ಇದೀಗ ಸಮೀಕ್ಷೆ ನಡೆಸಿದ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ವಿವಿಧ ವಾರ್ಡ್ ಗಳ ಮೂರು ಅಧಿಕಾರಿಗಳು ಸಸ್ಪೆಂಡ್ ಆಗಿದ್ದಾರೆ. ಸಾರ್ವಜನಿಕರ ಜೊತೆ ಕಿರಿಕ್ ಆರೋಪ ಬೆನ್ನಲ್ಲೇ ಸಸ್ಪೆಂಡ್ ಮಾಡಲಾಗಿದೆ. 198ನೇ ವಾರ್ಡ್ ಕಂದಾಯ ವಸೂಲಿಗಾರ ಸೆಂದಿಲ್ ಕುಮಾರ್, ಬಿಬಿಎಂಪಿ 24ನೇ ವಾರ್ಡಿನ ಕಂದಾಯ ವಸೂಲಿಕಾರ ಪೆದ್ದರಾಜು ಹಾಗೂ ಬಿಬಿಎಂಪಿ ರೆವೆನ್ಯೂ ಇನ್ಸ್ಪೆಕ್ಟರ್ ರಮೇಶ್ ಕುಮಾರ್ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಬೆಂಗಳೂರು : ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ವೇದಿಕೆಯ ಮೇಲೆ ಹೆಚ್ಚುವರಿ ಎಸ್ಪಿ ಆಗಿದ್ದ ನಾರಾಯಣ ಬರಮನೆಗೆ ಸಿಎಂ ಸಿದ್ದರಾಮಯ್ಯ ಕಪಾಳಮೋಕ್ಷಕೆ ಮುಂದಾಗಿದ್ದ ಘಟನೆಗೆ ಸಂಬಂಧಿಸಿದಂತೆ ಇದೀಗ ತೀವ್ರವಾಗಿ ನೊಂದಿರುವ ಧಾರವಾಡ ಹೆಚ್ಚುವರಿ ಎಸ್ಪಿ ನಾರಾಯಣ ಭರಮನಿ ಸ್ವಯಂ ನಿವೃತ್ತಿ ಕೋರಿ ಪತ್ರ ಬರೆದಿದ್ದು, ಸದ್ಯ ವೈರಲ್ ಆಗಿದೆ. ಪತ್ರದಲ್ಲಿ ತಮ್ಮ ನೋವನ್ನು ತೋಡಿಕೊಂಡ ಭರಮನಿ ನಾನು ಮಾಡದೇ ಇರುವ ತಪ್ಪಿಗೆ ಅವಮಾನಕ್ಕೆ ಒಳಗಾಗಿದ್ದೇನೆ ಎಂದು ಪತ್ರದಲ್ಲಿ ಉಲ್ಲೆಖಿಸಿದ್ದಾರೆ. ಪತ್ರದಲ್ಲಿ ASP ಭರಮನಿ ಅವರು, ಸಾವಿರಾರು ಜನರು ಸೇರಿದ ಸಭೆಯಲ್ಲಿ ನನಗೆ ಅವಮಾನ ಆಗಿದೆ. ಸಾರ್ವಜನಿಕ ಸಭೆಯಲ್ಲಿ ನನ್ನ ಆತ್ಮಸ್ಥೈರ್ಯ ಕುಗ್ಗಿಸಿದ್ದಾರೆ. ನಾನು ಮಾಡದ ತಪ್ಪಿಗೆ ಅವಮಾನಕ್ಕೆ ಒಳಗಾಗಿದ್ದೇನೆ. ಏ ಯಾವನೋ ಎಸ್ ಪಿ ಬಾರಯ್ಯ ಇಲ್ಲಿ ಅಂತ ಕರೆದರು. ಸಿದ್ದರಾಮಯ್ಯ ಅವಮಾನದಿಂದ ನಾನು ನೊಂದಿದ್ದೇನೆ. ಏರು ಧ್ವನಿಯಲ್ಲಿ ಕರೆದಾಗ ಸ್ಥಳೀಯ ಎಸ್ ಪಿ ಆಗಲಿ ಡಿಸಿಪಿ ಆಗಲಿ ಯಾರು ಇರಲಿಲ್ಲ ಸಿದ್ದರಾಮಯ್ಯ ಅವರ ಮಾತಿಗೆ ಓಗೊಟ್ಟು ವೇದಿಕೆಗೆ ಹೋದೆ. ಸಿಎಂ…
BREAKING : ಬೆಂಗಳೂರಲ್ಲಿ ಚಲಿಸುತ್ತಿದ್ದ ರೈಲಿನ ಇಂಜಿನ್ ನಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ : ತಪ್ಪಿದ ಭಾರಿ ಅನಾಹುತ!
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ದುರಂತ ಸಂಭವಿಸಿದ್ದು ಮೈಸೂರಿನಿಂದ ಬೆಂಗಳೂರಿಗೆ ಚಲಿಸುತ್ತಿದ್ದ ಉದಯಪುರ ಎಕ್ಸ್ಪ್ರೆಸ್ ರೈಲಿನ ಇಂಜಿನ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಎಚ್ಚೆತ್ತುಕೊಂಡ ಸಿಬ್ಬಂದಿಗಳು ರೈಲನ್ನು ನಿಲ್ಲಿಸಿ ಬೆಂಕಿ ನಂದಿಸಿರುವ ಘಟನೆ ಬೆಂಗಳೂರಿನ ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನಲ್ಲಿ ನಡೆದಿದೆ. ಹೌದು ಚಲಿಸುತ್ತಿದ್ದ ರೈಲಿನ ಇಂಜಿನ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ವಂದಾರಗುಪ್ಪೆ ಬಳಿ ರೈಲು ನಿಲ್ಲಿಸಿ ಸಿಬ್ಬಂದಿಗಳು ಕೂಡಲೇ ಬೆಂಕಿ ನಂದಿಸಿದ್ದಾರೆ. ಬೆಂಗಳೂರಿಗೆ ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ವಂದಾರಗುಪ್ಪೆ ಗ್ರಾಮದಲ್ಲಿ ಒಂದು ಘಟನೆ ನಡೆದಿದ್ದು, ಉದಯಪುರ ಎಕ್ಸ್ಪ್ರೆಸ್ ರೈಲಿನ ಇಂಜಿನ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಮೈಸೂರಿನಿಂದ ಬೆಂಗಳೂರಿಗೆ ಈ ಒಂದು ಎಕ್ಸ್ಪ್ರೆಸ್ ರೈಲು ತೆರಳುತಿತ್ತು. ಸದ್ಯ ಭಾರಿ ಅನಾಹುತ ಒಂದು ತಪ್ಪಿದೆ.
ಬೆಂಗಳೂರು : ಬೆಳಗಾವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯರಿಂದ ಅಪಮಾನಕ್ಕೆ ಒಳಗಾಗಿದ್ದ ಧಾರವಾಡ ಎಎಸ್ಪಿ ನಾರಾಯಣ ಭರಮನಿ ಅವರ ಸ್ವಯಂ ನಿವೃತ್ತಿ ವಿಚಾರದಲ್ಲಿ ಸರ್ಕಾರ ಮತ್ತೊಂದು ಯಡವಟ್ಟು ಮಾಡಿದ್ದು, ಸ್ವಯಂ ನಿವೃತ್ತಿಗೆ ಗೃಹ ಇಲಾಖೆ ಸೂಚನೆ ನೀಡಿದೆ. ಹೌದು ಗೃಹ ಇಲಾಖೆಯಿಂದ ಸ್ವಯಂ ನಿವೃತ್ತಿ ಅಂಗೀಕಾರಕ್ಕೆ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಜುಲೈ 6ಕ್ಕೆ ಡೆಡ್ಲೈನ್ ಫಿಕ್ಸ್ ಮಾಡಿದ್ದು, ಅಷ್ಟರೊಳಗೆ ವಿಆರ್ಎಸ್ ಪತ್ರ ವಾಪಸ್ ಪಡೆಯದೇ ಇದ್ದರೆ ಸ್ವಯಂ ನಿವೃತ್ತಿ ಅಂಗೀಕರಿಸುವಂತೆ ಸೂಚನೆ ನೀಡಲಾಗಿದೆ. ವೇದಿಕೆ ಮೇಲೆಯೇ ಸಿಎಂ ಸಿದ್ದರಾಮಯ್ಯ ಅವರಿಂದ ಅಧಿಕಾರಿ ಅಪಮಾನಕ್ಕೆ ಒಳಗಾಗಿದ್ದರು. ಬೆಳಗಾವಿ ಸಮಾರಂಭದಲ್ಲಿ ಬಿಜೆಪಿ ಕಾರ್ಯಕರ್ತರು ಏಕಾಏಕಿ ಪ್ರತಿಭಟನೆಗೆ ಮುಂದಾಗಿದ್ದರಿಂದ ಆಕ್ರೋಶಗೊಂಡ ಸಿಎಂ, ಅಧಿಕಾರಿ ಮೇಲೆ ಕಪಾಳಮೋಕ್ಷಕ್ಕೆ ಮುಂದಾಗಿದ್ದರು. ಈ ಸನ್ನಿವೇಶದಿಂದ ಅಧಿಕಾರಿ ನೊಂದುಕೊಂಡಿದ್ದರು. ಸ್ವಯಂಪ್ರೇರಿತ ನಿವೃತ್ತಿಗೆ ನಾರಾಯಣ ಅವರು ಅರ್ಜಿ ಸಲ್ಲಿಸಿದ್ದಾರೆ. ತಮಗಾದ ಅವಮಾನಕ್ಕೆ ಭರಮನಿ ಅವರು ನೊಂದುಕೊಂಡಿದ್ದರು. ಹೀಗಾಗಿ, ಕೆಲಸದಿಂದಲೇ ಸ್ವಯಂ ನಿವೃತ್ತಿಗೆ ಮುಂದಾಗಿದ್ದರು. ಅಧಿಕಾರಿಯ ನಡೆಯಿಂದ ಸರ್ಕಾರಕ್ಕೆ ಮುಜುಗರ ಆಗಿದೆ. ಬಳಿಕ…
ಚಿಕ್ಕಮಗಳೂರು : ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು, ಹಾಸನ ಜಿಲ್ಲೆಯಲ್ಲಿ ಕಳೆದ ಒಂದುವರೆ ತಿಂಗಳಲ್ಲಿ 31ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇದೀಗ ಇಂದು ಬೆಳಿಗ್ಗೆ ಕಲಬುರ್ಗಿ ಯಾದಗಿರಿಯಲ್ಲಿ ಇಬ್ಬರು ಹೃದಯಘಾತಕ್ಕೆ ಬಲಿಯಾಗಿದ್ದು, ಇಂದು ಚಿಕ್ಕಮಗಳೂರಲ್ಲಿ ಓರ್ವ ಯುವಕ ಹಾಗೂ ಚಾಮರಾಜನಗರದಲ್ಲಿ ಖಾಸಗಿ ಬಸ್ ಚಾಲಕ ಸಾವನಪ್ಪಿದ್ದಾರೆ. ಹೌದು, ಚಿಕ್ಕಮಗಳೂರಲ್ಲಿ ಹೃದಯಾಘಾತಕ್ಕೆ 29 ವರ್ಷದ ಯುವಕ ಸಾವನ್ನಪ್ಪಿದ್ದಾನೆ, ಟೆಂಗಿನಕಾಯಿ ವ್ಯಾಪಾರ ಮಾಡಿಕೊಂಡಿದ್ದ ಹರೀಶ್ ಸಾವನಪ್ಪಿದ್ದಾರೆ. ತರೀಕೆರೆ ತಾಲೂಕಿನ ಶವಾನಿ ಗ್ರಾಮದಲ್ಲಿ ಘಟನೆ ನಡೆದಿದ್ದು ನಿನ್ನೆ ಬೆಳಗಿನ ಜಾವ ಯುವಕ ವಾಂತಿ ಮಾಡಿಕೊಂಡಿದ್ದ. ಕ್ಯಾಸ್ಟ್ರಿಕ್ ಎಂದು ಮಾತ್ರೆ ನುಂಗಿ ಮಲಗಿದ್ದರು ಮತ್ತೆ ವಾಂತಿಯಾಗಿ ಹರೀಶ್ ಕುಸಿದು ಬಿದ್ದು ಸಾವನಪ್ಪಿದ್ದಾರೆ. ಇನ್ನು ಮತ್ತೊಂದು ಹೃದಯಾಘಾತ ಘಟನೆ ನಡೆದಿದ್ದು, ಖಾಸಗಿ ಬಸ್ ಚಾಲಕ ಸಾವನ್ನಪ್ಪಿರುವ ಘಟನೆ ಹನೂರು ತಾಲೂಕಿನ ಮೀಣ್ಯಂ ಗ್ರಾಮದ ರಮೇಶ್ ಸಾವನಪ್ಪಿದ್ದಾರೆ. ಬಸ್ ಚಲಾಯಿಸುತ್ತಿದ್ದಂತೆ ರಮೇಶ್ (47) ಎನ್ನುವವರಿಗೆ ಎದೆನವು ಕಾಣಿಸಿಕೊಂಡಿದೆ. ಬಸ್ ನಿಲ್ದಾಣಕ್ಕೆ ಬಂದು ಜ್ಯೂಸ್ ಕುಡಿವಾಗ ಹೃದಯಾಘಾತ ಸಂಭವಿಸಿದೆ. ತಕ್ಷಣ…
ಮೈಸೂರು : ರಾಜ್ಯದಲ್ಲಿ ಒಂದಾದ ಮೇಲೊಂದು ಹೃದಯಘಾತ ಪ್ರಕರಣಗಳು ದಾಖಲಾಗುತ್ತಿವೆ. ಕಳೆದ ಒಂದುವರೆ ತಿಂಗಳಲ್ಲಿ ಹಾಸನ ಜಿಲ್ಲೆಯಲ್ಲಿ ಇದುವರೆಗೂ ಒಟ್ಟು ಹೃದಯಾಘಾತಕ್ಕೆ 31 ಜನರು ಬಲಿಯಾಗಿದ್ದಾರೆ.ಇಂದು ಬೆಳಿಗ್ಗೆ ತಾನೇ ಇಬ್ಬರೂ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದ್ದು ಇದೀಗ ಮೈಸೂರಿನಲ್ಲಿ ಹೃದಯಾಘಾತಕ್ಕೆ ಇಂಜಿನಿಯರ್ ಒಬ್ಬರು ಸಾವನಪ್ಪಿದ್ದಾರೆ. ಹೌದು ಜಿಮ್ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಹಾಸನ ಮೂಲದ ಇಂಜಿನಿಯರ್ ಒಬ್ಬರು ಸಾವನಪ್ಪಿದ್ದಾರೆ. ಹಾಸನದ ಇಂಜಿನಿಯರ್ ಶ್ರೀಧರ್ ಕೊನೆಯುಸುರಳಿದಿದ್ದಾರೆ ಶ್ರೀಧರ್ (51) ಎನ್ನುವವರು ಸಾವನಪ್ಪಿದ್ದಾರೆ. 10 ದಿನಗಳ ಹಿಂದೆ ವ್ಯಾಯಾಮ ಮಾಡುವಾಗ ಈ ಒಂದು ಘಟನೆ ನಡೆದಿದೆ. ವಿಜಯನಗರ ಬಡಾವಣೆಯ ಜಿಮ್ ನಲ್ಲಿ ವ್ಯಾಯಾಮ ಮಾಡುತ್ತಿರುವಾಗಲೇ ಶ್ರೀಧರ ಸಾವನಪ್ಪಿದ್ದಾರೆ.













