Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬಾಲ್ಯ ವಿವಾಹ ತಡೆಗಟ್ಟಲು ಸರ್ಕಾರ ನಾನಾ ರೀತಿಯ ಯೋಜನೆಗಳು ಹಾಗೂ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತದೆ. ಆದರೆ ಇಂದಿನ ಆಧುನಿಕ ಯುಗದಲ್ಲೂ ಕೂಡ ಹಳ್ಳಿ ಭಾಗಗಳಲ್ಲಿ ಬಾಲ್ಯ ವಿವಾಹ ತಡೆಗಟ್ಟುವುದು ಕಷ್ಟಕರವಾಗಿದೆ. ಇದೀಗ ರಾಜ್ಯದಲ್ಲಿ ಕಳೆದ 2024 ಮತ್ತು 25ನೇ ಸಾಲಿನಲ್ಲಿ ಒಟ್ಟು 700 ಬಾಲ್ಯ ವಿವಾಹಗಳು ನಡೆದಿವೆ. ಹೌದು 2024-25ರ ಸಾಲಿನಲ್ಲಿ ರಾಜ್ಯದಲ್ಲಿ ಒಟ್ಟು 700 ಬಾಲ್ಯ ವಿವಾಹಗಳು ನಡೆದಿವೆ. ಒಟ್ಟು 3,049 ಬಾಲ್ಯ ವಿವಾಹ ದೂರುಗಳು ಸ್ವೀಕೃತವಾಗಿವೆ. ಈ ಪೈಕಿ 2,349 ಬಾಲ್ಯ ವಿವಾಹವನ್ನು ತಡೆಯಲಾಗಿದೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಬಾಲ್ಯ ವಿವಾಹ ನಡೆಯುತ್ತಿರುವುದು ರಾಜ್ಯ ಸರ್ಕಾರಕ್ಕೆ ದೊಡ್ಡ ತಲೆನೋವಿನ ವಿಚಾರವಾಗಿದೆ. ಎರಡು ದಿನ ಸಿಎಂ ನೇತೃತ್ವದಲ್ಲಿ ನಡೆದ ಡಿಸಿ ಹಾಗೂ ಸಿಇಒಗಳ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ 2024-25ರಲ್ಲಿ 700 ಬಾಲ್ಯ ವಿವಾಹಗಳು ನಡೆದಿವೆ. ಬಾಲ್ಯ ವಿವಾಹ ಹಾಗೂ ಬಾಲ ಗರ್ಭಿಣಿಯರ ಪ್ರಮಾಣ ಅಧಿಕ…
ಬೆಂಗಳೂರು : ರಾಜ್ಯದಲ್ಲಿ ಕೋರೋನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇದೀಗ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಶಿಕ್ಷಣ ಇಲಾಖೆಯ ಮಾರ್ಗಸೂಚಿ ಪ್ರಕಟಿಸಿದೆ. ಹೌದು ಶಾಲೆಗಳಿಗೆ ಶಿಕ್ಷಣ ಇಲಾಖೆಯಿಂದ ಕೋವಿಡ್ ಗೈಡ್ಲೈನ್ಸ್ ಪ್ರಕಟಿಸಲಾಗಿದ್ದು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಶಾಲೆಗಳಿಗೆ ಇದೀಗ ಮಾರ್ಗಸೂಚಿ ಪ್ರಕಟಿಸಲಾಗಿದೆ. ಮಕ್ಕಳನ್ನು ಶಾಲೆಗೆ ಕಳುಹಿಸಬಾರದು. ರೋಗ ಲಕ್ಷಣಗಳಿದ್ದರೆ ವೈದ್ಯರ ಸಲಹೆಯಂತೆ ಚಿಕಿತ್ಸೆ ನೀಡಬೇಕು. ಸಂಪೂರ್ಣ ಗುಣಮುಖರಾದ ಮೇಲೆ ಶಾಲೆಗೆ ಕಳುಹಿಸಬೇಕು. ಗುಣಲಕ್ಷಣ ಇರುವ ಮಕ್ಕಳು ಶಾಲೆಗೆ ಬಂದರೆ ವಾಪಸ್ ಕಳುಹಿಸಬೇಕು ಹಾಗು ಪೋಷಕರಿಗೆ ತಿಳಿಸಿ ಅಂತಹ ಮಕ್ಕಳನ್ನು ಮನೆಗೆ ಕಳುಹಿಸಬೇಕು ಎಂದು ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ.
ಬೆಂಗಳೂರು : ರಾಜ್ಯಕ್ಕೆ ಕೊರೋನಾ ರೂಪಾಂತರಿ ಎಂಟ್ರಿ ಆಗಿದ್ದು, ರಾಜ್ಯದಲ್ಲಿ ಇಂದು ಹೊಸದಾಗಿ 17 ಜನರಿಗೆ ಕೊರೋನಾ ಸೋಂಕು ದೃಢವಾಗಿದೆ. ಅಲ್ಲದೆ ರಾಜ್ಯದಲ್ಲಿ ಇದುವರೆಗೂ ಕೋವಿಡ್ ಪ್ರಕರಣಗಳ ಸಂಖ್ಯೆ 442ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಹೌದು ರಾಜ್ಯದಲ್ಲಿ ಇಂದು 17 ಜನರಿಗೆ ಕೊರೋನಾ ಸೋಂಕು ದೃಢವಾಗಿದೆ. ಇನ್ನು ಕೋವಿಡ್ ಪ್ರಕರಣಗಳ ಸಂಖ್ಯೆ 442ಕ್ಕೆ ಏರಿಕೆಯಾಗಿದ್ದು, ಅಲ್ಲದೇ ರಾಜ್ಯದಲ್ಲಿ ಇದುವರೆಗೂ ಕೋವಿಡ್ ಆಕ್ಟಿವ್ ಪ್ರಕರಣಗಳ ಸಂಖ್ಯೆ 253 ಇವೆ. ಕೊರೋನಾ ಸಂಪಿಗೆ ರಾಜ್ಯದಲ್ಲಿ ಇದುವರೆಗೂ ಒಟ್ಟು ಮೂವರು ಬಲಿಯಾಗಿದ್ದಾರೆ.
ಚಿಕ್ಕಮಗಳೂರು : ಚಾಲಕನ ನಿಯಂತ್ರಣದ ತಪ್ಪಿ ಪಿಕಪ್ ವಾಹನವೊಂದು ಕಂದಕಕ್ಕೆ ಉರುಳಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಸಮೀಪದ ಜಲದುರ್ಗದಲ್ಲಿ ನಡೆದಿದೆ. ಅಪಘಾತದಲ್ಲಿ ಪಿಕಪ್ ವಾಹನದ ಚಾಲಕ ಸೇರಿದಂತೆ ಇಬ್ಬರಿಗೆ ಗಂಭೀರವಾದ ಗಾಯಗಳಾಗಿದ್ದು ಚಿಕ್ಕಮಗಳೂರು ನಿಂದ ಪಿಕಪ್ ವಾಹನದಲ್ಲಿ ಉಡುಪಿಗೆ ತರಕಾರಿ ಸಾಗಿಸಲಾಗುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಾಹನ ಕಂದಕಕ್ಕೆ ಉರುಳಿದೆ. ಅಪಘಾತದ ಕುರಿತು ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೋಲಾರ : ಕೆಮಿಕಲ್ ಮಿಶ್ರಿತ ಹಾಲು ತಯಾರಿಸುತ್ತಿದ್ದ ಘಟಕದ ಮೇಲೆ ದಾಳಿ ಪೊಲೀಸರು ಹಾಗೂ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸವಟೂರು ಗ್ರಾಮದಲ್ಲಿರುವ ಹರೀಶ್ ರೆಡ್ಡಿ ಎಂಬವರ ಘಟಕದ ಮೇಲೆ ದಾಳಿ ನಡೆಸಲಾಗಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಸವಟೂರು ಗ್ರಾಮದಲ್ಲಿ ಹರೀಶ್ ರೆಡ್ಡಿ ತಿರುಮಲ ಹಾಲಿನ ಡೇರಿಗೆ ಹಾಲು ಪೂರೈಸುತ್ತಿದ್ದ. ಈ ವೇಳೆ ಖಚಿತ ಮಾಹಿತಿಯ ಮೇರೆಗೆ ಡಿವೈಎಸ್ಪಿ ನಂದಕುಮಾರ್ ನೇತೃತ್ವದಲ್ಲಿ ದಾಳಿ ಮಾಡಿ ಪರಿಶೀಲನೆ ನಡೆಸಲಾಗುತ್ತಿದೆ. ಕೆಮಿಕಲ್ ಸೇರಿದಂತೆ ಸಿಬ್ಬಂದಿಗಳು ಉಪಕರಣಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹಾಲಿನ ಮಾದರಿ ಸಂಗ್ರಹಿಸಿ ಅಧಿಕಾರಿಗಳು ಟೆಸ್ಟ್ ಗೆ ಕಳುಹಿಸಿದ್ದಾರೆ. ನಂಗಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಬೆಂಗಳೂರು : ಕನ್ನಡ ತಮಿಳಿನಿಂದ ಹುಟ್ಟಿದ್ದು ಎಂದು ನಟ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ ನೀಡಿರುವ ವಿಚಾರವಾಗಿ, ನಟ ಶಿವರಾಜ್ ಕುಮಾರ್ ಅವರು ಕಮಲ್ ಹಾಸನ್ ಪರವಾಗಿ ಮಾತನಾಡಿದ್ದಾರೆ ಎಂದು ಕನ್ನಡದ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಅವರು, ಶಿವರಾಜ್ ಕುಮಾರ್ ಅಷ್ಟೇ ಅಲ್ಲದೆ ಕಮಲ್ ಹಾಸನ್ ಪರವಾಗಿ ಯಾರ್ಯಾರು ಮಾತನಾಡಿದ್ದಾರೋ ಅವರೆಲ್ಲರೂ ನಾಡ ದ್ರೋಹಿ ಎಂದು ಆಕ್ರೋಶ ಹೊರಹಾಕಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕನ್ನಡದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಕಮಲ್ ಹಾಸನ್ ಒಬ್ಬ ಅಯೋಗ್ಯ, ಯಾವುದೇ ಕಾರಣಕ್ಕೂ ಕ್ಷಮೆ ಕೇಳಲ್ಲ ಎಂದ ದುರಹಂಕಾರಿ.ಅವ್ನು ಹೇಳಿದ ಹೇಳಿಕೆ ನಮ್ಮ ನಾಡಿಗೆ ಅವಮಾನ ಆಗಿದೆ. ಆ ಘಟನೆಗೆ ಸಾಕ್ಷಿಯಾಗಿದ್ದ ಶಿವರಾಜ್ ಕುಮಾರ್ ಪಲಾಯನವಾದ ಮಾಡಿ ಬಿಟ್ಟರು. ಕಮಲ್ ಹಾಸನ್ ಅವ್ರ ಹೇಳಿಕೆಯನ್ನ ಖಂಡಿಸಬೇಕಿತ್ತು. ನಾನು, ನನ್ನ ಕುಟುಂಬ ನಿಮಗೆ ಧನ್ಯವಾದ ಹೇಳ್ತೀವಿ ಆದ್ರೆ ನಾಡು, ನುಡಿ ವಿಚಾರದಲ್ಲಿ ಹೋರಾಟದ ಪರವಾಗಿ ಇರ್ತೀನಿ ಅಂತ ಹೇಳಬೇಕಿತ್ತು. ಬೆಂಗಳೂರಿಗೆ ಬಂದಾಗ ಕೇಳಬಹುದಿತ್ತಲ್ಲ ಅಂತ ಹೇಳ್ತಾರೆ……
ಕೇರಳ : ಕೇರಳದಲ್ಲಿ ಘೋರವಾದ ದುರಂತ ಒಂದು ನಡೆದಿದ್ದು ಮಗಳ ಮದುವೆ ಒಂದು ದಿನ ಇರುವಾಗಲೇ, ಮಹಿಳೆಯೊಬ್ಬರಿಗೆ ಗಂಟಲಲ್ಲಿ ಕೇಕ್ ಸಿಲುಕಿ ಸಾವನ್ನಪ್ಪಿರುವ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯ ತನಲೂರುನಲ್ಲಿ ನಡೆದಿರುವುದು ವರದಿಯಾಗಿದೆ. ಹೌದು ಮಲಪ್ಪುರಂ ಜಿಲ್ಲೆಯ ತನಲೂರು ನಿವಾಸಿ ಜೈನಬಾ (44) ಗಂಟಲಲ್ಲಿ ಕೇಕ್ ಸಿಲುಕಿ ಸವನತ್ತಿದ್ದಾರೆ. ಜೈನಬಾ ಅವರ ಮನೆಯಲ್ಲಿ ಮಗಳ ಮದುವೆ ಸಂಭ್ರಮ ನಡೆಯುತ್ತಿತ್ತು. ಈ ವೇಳೆ ಸಂತಸದಿಂದ ಕೇಕ್ ಕಟ್ ಮಾಡಲಾಗಿದೆ. ರಾತ್ರಿ ಕೇಕ್ ತಿಂದು ಉಳಿದಿದ್ದ ಕಪ್ ಕೇಕ್ ಮನೆಯಲ್ಲಿ ಇಡಲಾಗಿತ್ತು. ಗುರುವಾರ (ಮೇ29) ಸಂಜೆ ಜೈನಬಾ ಅವರು ಚಹಾ ಕುಡಿಯುತ್ತಿದ್ದ ವೇಳೆ ಬಾಕಿ ಉಳಿದಿದ್ದ ಕಪ್ ಕೇಕ್ ಸೇವಿಸಿದ್ದಾರೆ. ಕಪ್ ಕೇಕ್ ತಿನ್ನುತ್ತಿದ್ದಂತೆ, ಅದು ಜೈನಬಾ ಅವರ ಗಂಟಲಲ್ಲಿ ಸಿಲುಕಿಕೊಂಡಿದ್ದ, ಇದರಿಂದ ಅವರಿಗೆ ಉಸಿರಾಟಕ್ಕೆ ತೊಂದರೆ ಉಂಟಾಗಿದೆ. ಕೂಡಲೇ ಅವರನ್ನು ಕೊಟ್ಟಕ್ಕಲ್ನಲ್ಲಿರುವ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಆ ಬಳಿಕ ಕೋಝಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವೈದ್ಯರು ಎಷ್ಟೇ ಪ್ರಯತ್ನ ಪಟ್ಟರು…
ಬೆಂಗಳೂರು : ದೂರದ ಒಡಿಶಾದಿಂದ ಬೆಂಗಳೂರಿಗೆ ಗಾಂಜಾ ತಂದು ಮಾರಾಟ ಮಾಡುತ್ತಿದ್ದ, ಪಶ್ಚಿಮ ಬಂಗಾಳದ ಓರ್ವ ಡ್ರಗ್ ಪೆಡ್ಲರ್ ನನ್ನು ಇದೀಗ ಬೆಂಗಳೂರಿನ ಜಿಗಣಿ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂದಿದ್ದರಿಂದ 20 ಲಕ್ಷ ಮೌಲ್ಯದ 14 ಕೆಜಿ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಪ್ರೇಮ್ ಶರ್ಪ (25) ಎಂದು ತಿಳಿದುಬಂದಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿ ಠಾಣೆ ಪೋಲೀಸರು 20 ಲಕ್ಷ ರೂಪಾಯಿ ಮೌಲ್ಯದ 14 ಕೆಜಿ ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿ ಪ್ರೇಮ್ ಒಡಿಶಾದಿಂದ ಬೆಂಗಳೂರಿಗೆ ಗಾಂಜಾ ತಂದು ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಖಚಿತ ಮಾಹಿತಿಯ ಮೇರೆಗೆ ಜೆನೆಟ್ ಜಿಗಣಿ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ. ಬಳಿಕ ಆರೋಪಿಯನ್ನು ಅರೆಸ್ಟ್ ಮಾಡಿದ್ದು ಈ ಕುರಿತು ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಕರ್ನಾಟಕದಲ್ಲಿ ಈಗಾಗಲೇ ಮುಂಗಾರು ಪೂರ್ವ ಮಳೆ ಸುರಿಯುತ್ತಿದ್ದು, ಬೆಂಗಳೂರು ಮಹಾನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವರುಣ ಅಬ್ಬರಿಸುತ್ತಿದ್ದಾನೆ. ಇದೀಗ ಮುಂದಿನ ಮೂರು ದಿನಗಳಲ್ಲಿ ಕರ್ನಾಟಕದಲ್ಲಿ ಭಾರಿ ಮಳೆ ಆಗಲಿದ್ದು ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೌದು ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣಕನ್ನಡಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ಕೊಡಗು, ಚಿಕ್ಕಮಗಳೂರು ಸೇರಿ 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಚಾರ್ಮಾಡಿ ಘಾಟ್ನಲ್ಲಿ ದಟ್ಟ ಮಂಜು ಕವಿದ ವಾತಾವರಣವಿದೆ. ಪಶ್ಚಿಮ ಘಟ್ಟದಲ್ಲಿ ಮಳೆ ಕೊಂಚ ಬಿಡುವು ನೀಡಿದ್ದು, ಪ್ರವಾಸಿಗರು ಜಲಪಾತಗಳ ಬಳಿ ಮೋಜು ಮಸ್ತಿ ಮಾಡುತ್ತಿದ್ದಾರೆ. ಇತರ ಜಿಲ್ಲೆಗಳಾದ ಬಾಗಲಕೋಟೆ, ಯಾದಗಿರಿ, ಹಾವೇರಿ, ಗದಗ, ಹಾಸನದಲ್ಲಿ ಯಲ್ಲೋ ಅಲರ್ಟ್, ಹಾಗೆಯೇ ಬೆಳಗಾವಿ, ಕಲಬುರಗಿ, ವಿಜಯಪುರ, ಬೀದರ್ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ : 15 ವರ್ಷದ ಬಾಲಕಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಿದ್ದು, ಕಾನೂನು ಸಂಘರ್ಷಕ್ಕೆ ಒಳಪಟ್ಟ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಪರಾರಿಯಾದ ಮತ್ತೊಬ್ಬ ಆರೋಪಿ ಬಂಧನಕ್ಕೆ ಜಾಲ ಬೀಸಿದ್ದೇವೆ ಎಂದು ನಗರ ಪೊಲೀಸ್ ಕಮಿಷನರ್ ಭೂಷಣ್ ಗುಲಾಬರಾವ್ ಬೊರಸೆ ಹೇಳಿದರು. ಕಳೆದ 2024 ಡಿಸೇಂಬರ್ ನಲ್ಲಿ ಬಾಲಕಿಯನ್ನು ಆಕೆಯ ಸ್ನೇಹಿತ ಪುಸಲಾಯಿಸಿ ಕರೆದು ಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾರೆ. ಅತ್ಯಾಚಾರದ ದೃಶ್ಯವನ್ನು ಆರೋಪಿಗಳು ವಿಡಿಯೊ ರೆಕಾರ್ಡ್ ಮಾಡಿದ್ದಾರೆ. ಅದನ್ನೇ ತೋರಿಸಿ ಬ್ಲ್ಯಾಕ್ಮೇಲ್ ಮಾಡಿ, 2025ರ ಜನವರಿಯಲ್ಲಿ ಮತ್ತೆ ಮೂವರು ಅತ್ಯಾಚಾರ ಮಾಡಿದ್ದಾರೆ. ಬೇರೆ ಬೇರೆ ಸ್ಥಳಗಳಲ್ಲಿ ಅತ್ಯಾಚಾರ ಮಾಡಿದ್ದಾರೆ. ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಎಪಿಎಂಸಿ ಠಾಣೆಯಲ್ಲಿ 6 ಮಂದಿ ವಿರುದ್ಧ ಶನಿವಾರ ಎಫ್ಐಆರ್ ದಾಖಲಾಗಿತ್ತು. ಅದಾದ 24 ತಾಸಿನೊಳಗೆ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಂತ್ರಸ್ತೆ ಮತ್ತು ಆರೋಪಿಗಳು ಬೆಳಗಾವಿ ಜಿಲ್ಲೆಯವರೇ ಆಗಿದ್ದಾರೆ ಎಂದು ನಗರ ಪೊಲೀಸ್ ಕಮಿಷನರ್ ಭೂಷಣ್ ಗುಲಾಬರಾವ್…














