Author: kannadanewsnow05

ಬೀದರ್ : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಜನರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಶೀಘ್ರ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಸುಗ್ರೀವಾಜ್ಞೆ ಜಾರಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ, ಇದರ ಮಧ್ಯ ಇದೀಗ ಬೀದರ್ ನಲ್ಲಿ ತಾಯಿ ಮಾಡಿ ಸಾಲಕ್ಕೆ ಹೆದರಿ ಮಗ ಆತ್ಮಹತ್ಯೆ ಶರಣಾಗಿರುವ ಘಟನೆ ವರದಿಯಾಗಿದೆ. ಹೌದು ಬೀದರ್ ಜಿಲ್ಲೆಯ ಚಿಟಗುಪ್ಪ ತಾಲೂಕಿನ ರಾಮಪುರದಲ್ಲಿ ಈ ಒಂದು ಘಟನೆ ನಡೆದಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಗಣೇಶ್ (25) ಎನ್ನುವ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ. ಚಿಟಗುಪ್ಪ SBI ಬ್ಯಾಂಕ್ ನಲ್ಲಿ 5 ಲಕ್ಷ ರೂಪಾಯಿ ಸಾಲ ಮಾಡಿದ್ದ ಗಣೇಶ್ ತಾಯಿ,  ಹೇಗೆ ತೀರಿಸುವುದು ಅಂತ ನಿತ್ಯವೂ ತಾಯಿ ಕೊರಗುತ್ತಿದ್ದರು. ತಾಯಿ ನೋವನ್ನು ನೋಡಲಾಗದೆ ಗಣೇಶ್ ಆತ್ಮಹತ್ಯೆಗೆ ಶರಣಾಗಿದ್ದಾನೆ.ಈ ಸಂಬಂಧ ಚಿಟ್ಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ತುಮಕೂರು : ತುಮಕೂರಲ್ಲಿ ಘೋರವಾದ ಘಟನೆ ನಡೆದಿದ್ದು, ರೈಲು ನಿಲ್ಲೋದಕ್ಕೂ ಮುನ್ನವೇ ಇಳಿಯಲು ಹೋಗಿ, ಹಳಿಗೆ ಕಾಲು ಸಿಲುಕಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ತುಮಕೂರು ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಹಳಿಗೆ ರೈಲು ಸಿಲುಕಿ ಸಾವನ್ನಪ್ಪಿದ ಯುವಕನನ್ನು ತುರುವೇಕೆರೆ ಅಮ್ಮಸಂದ್ರ ಮೂಲದ ಛಾಯಾಂಕ್ ಎಂದು ಗುರುತಿಸಲಾಗಿದೆ. ಸೋಮವಾರ ಬೆಳಗ್ಗೆ ಯುವಕ ಪುಷ್ಪುಲ್ ಟ್ರೈನ್‌ಗೆ ಬಂದಿದ್ದ. ಈ ವೇಳೆ ರೈಲು ನಿಲ್ಲುವ ಮೊದಲು ಇಳಿಯಲು ಹೋಗಿ ಬ್ಯಾಗ್ ರೈಲಿನ ಹ್ಯಾಂಡಲ್‌ಗೆ ಸಿಲುಕಿ ಈ ಅವಘಡ ಸಂಭವಿಸಿದೆ. ಘಟನೆ ವೇಳೆ ರೈಲ್ವೆ ನಿಯಮದ ಪ್ರಕಾರ ಯಾರು ಮುಟ್ಟುವಂತಿಲ್ಲ ಹಾಗಾಗಿ ಸಾರ್ವಜನಿಕರು ಸಹ ಯಾರು ಯುವಕನಿಗೆ ಸಹಾಯ ಮಾಡಲಿಲ್ಲ.ಈ ವೇಳೆ ಯುವಕ ತಮ್ಮವರಿಗೆ ಕರೆ ಮಾಡಲು ಫೋನ್ ಹುಡುಕಾಡುತ್ತಿದ್ದ. ಆದರೆ 25 ನಿಮಿಷ ಕಳೆದರೂ ಗಾಯಾಳುವನ್ನು ಆಸ್ಪತ್ರೆ ಸಾಗಿಸದೆ, ಪೊಲೀಸರು ವಿಳಾಸ ಪತ್ತೆ ಮಾಡಲು ಕಾಲಹರಣ ಮಾಡಿದ್ದಾರೆ.ಕೊನೆಗೆ ಪೊಲೀಸರು ಸ್ಥಳಕ್ಕೆ ಬಾರದೆ ಯುವಕ ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ.

Read More

ಬೆಂಗಳೂರು : ಕರ್ನಾಟಕಕ್ಕೆ ಏನು ಕೊಡುಗೆ ಕೊಟ್ಟಿದ್ದಾರೆ ಎಂಬುದನ್ನು ಹೇಳಲಿ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಪ್ರಶ್ನಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿರ್ಮಲಾ‌ ಸೀತಾರಾಮನ್ ಅವರು ದೇಶದ ಹಣಕಾಸು ಸಚಿವರು. ಅವರ ಬಗ್ಗೆ ನಮಗೆಲ್ಲ ಗೌರವ ಇರಬೇಕು. ಕರ್ನಾಟಕದಿಂದ ರಾಜ್ಯಸಭಾ ಸದಸ್ಯರಾಗಿ ಹೋಗಿ ಕರ್ನಾಟಕದ ಹಿತವನ್ನು ಕಾಪಾಡುವುದಕ್ಕೆ ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಈ ಬಾರಿಯಷ್ಟೇ ಅಲ್ಲ. ಕಳೆದ ಬಾರಿಯು ಸಹ ನಮ್ಮ ರಾಜ್ಯಕ್ಕೆ ಏನು ಕೊಡುಗೆ ಕೊಟ್ಟಿದ್ದಾರೆ. ಸಚಿವೆ ನಿರ್ಮಲಾ‌ ಸೀತಾರಾಮನ್ ಅವರು ರಾಜ್ಯಕ್ಕೆ ಕೊಡುಗೆ ಕೊಟ್ಟಿದ್ದಾರೆ ಎಂದು ಹೇಳಿಕೊಳ್ಳುವಂತಹ ಒಂದೇಒಂದು ಯೋಜನೆಯನ್ನು ನೀಡಿಲ್ಲ. ಆ ರೀತಿ ಕೆಲಸ‌ ಮಾಡಿದ್ದರೆ ನಾನು ಸಹ ಅವರನ್ನು ಅಭಿನಂದಿಸುತ್ತೇನೆ ಎಂದರು. ಸುಮ್ಮನೆ ಕರ್ನಾಟಕದಲ್ಲಿ ಹೀಗಿದೆ, ಹಾಗೀದೆ ಅಂದರೆ ಒಪ್ಪುವುದಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ 5000 ಕೋಟಿ ರೂ. ಕೊಡುತ್ತೇವೆ. ರಾಷ್ಟ್ರೀಯ ಯೋಜನೆ ಎಂದು ಘೋಷಿಸುವುದಾಗಿ ಬಜೆಟ್‌ನಲ್ಲಿ ಓದಿ, ಅನುದಾನ ನೀಡದಿರುವುದಕ್ಕೆ ಏನು ಉತ್ತರ ಕೊಡುತ್ತಾರೆ ಎಂದು ಪ್ರಶ್ನಿಸಿದರು.ನಾವು ರಾಜ್ಯದ ಬಡ ಜನರ ಹಿತದೃಷ್ಟಿಯಿಂದ…

Read More

ಬೆಂಗಳೂರು : ನೇಣು ಬಿಗಿದುಕೊಂಡು ದ್ವಿತೀಯ ವರ್ಷದ ಸ್ನಾತಕೋತರ ಪದವಿ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ವಿಶ್ವ ವಿದ್ಯಾಲಯದಲ್ಲಿ ನಡೆದಿದೆ.ಮೃತ ವಿದ್ಯಾರ್ಥಿನಿಯನ್ನು ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನ ಹೆಬ್ಲಗುಪ್ಪೆ ಗ್ರಾಮದ ನಿವಾಸಿ ಎಂದು ತಿಳಿದಿದೆ. ಹೌದು ಇಂದು ಬೆಳಿಗ್ಗೆ 10 ಗಂಟೆ ಸುಮಾರಿಗೆ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದಾಳೆ. ದ್ವಿತೀಯ ವರ್ಷದ ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿ ಪಾವನ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇಂದು ಬೆಳಿಗ್ಗೆ 10:30 ಸುಮಾರಿಗೆ ಹೆಬ್ಲಗುಪ್ಪೆಯ ಪಾವನ ಎಂಬ ಯುವತಿ ನೇಣಿಗೆ ಶರಣಾದ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ. ಘಟನೆ ಕುರಿತಂತೆ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Read More

ಹಾಸನ : ಈಜು ಬರುತ್ತಿದ್ದರು ಸಹ ಇಬ್ಬರು ಯುವಕರು ಕೆರೆಯಲ್ಲಿ ಈಜಲು ತೆರಳಿದ್ದಾಗ ನೀರಿನಿಂದ ಹೊರಬರಲಾಗದೆ ಒದ್ದಾಡಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಜಿನ್ನಾಪುರ ಗ್ರಾಮದಲ್ಲಿ ನಡೆದಿದೆ. ಮೃತ ಯುವಕರನ್ನು ಯಶ್ವಂತ್ ಸಿಂಗ್ ಆಲಿಯಾಸ್ ಗಣೇಶ್(29), ರೋಹಿತ್ (28) ಎಂದು ತಿಳಿಬಂದಿದೆ.ಮೊದಲು ಕೆರೆಗೆ ಇಳಿದ ರೋಹಿತ್ ಈಜುವ ವೇಳೆ ಕೆರೆಯ ಗಿಡಗಂಟಿಗಳ ನಡುವೆ ಸಿಲುಕಿದ್ದಾರೆ. ಮೇಲೆ‌ ಬರಲಾಗದೆ ಕಾಪಾಡಿ‌ ಕಾಪಾಡಿ‌ ಎಂದು ಕೂಗಾಡಿದ್ದಾರೆ. ತಕ್ಷಣ ಕೆರೆಗೆ ಜಿಗಿದ ಗಣೇಶ್ ಕೂಡ ಅಲ್ಲಿನ‌ ಕೆಸರು ಹಾಗೂ ಬಳ್ಳಿಗಳ ನಡುವೆ ಸಿಲುಕಿದ್ದಾರೆ. ಮೇಲೆ ಬರಲು ಏನೆಲ್ಲ ಪ್ರಯತ್ನ ಪಟ್ಟರೂ ಸಾದ್ಯವಾಗದೆ ಇಬ್ಬರು ಗೆಳೆಯರು ಒಟ್ಟಿಗೆ ಜಲ ಸಮಾಧಿಯಾಗಿದ್ದಾರೆ. ಸಂಜೆಯಾದರೂ ಮನೆಗೆ ಬಾರದಿದ್ದರಿಂದ ಮನೆಯವರು ಹುಡುಕುತ್ತಾ ಕೆರೆ ಬಳಿ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಸ್ಥಳೀಯರು ಸಮೀಪದ ಶ್ರವಣಬೆಳಗೊಳ‌ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರ ನೆರವಿನಿಂದ ಮೃತದೇಹ ಹೊರತೆಗೆದು ಮರಣೊತ್ತರ ಪರೀಕ್ಷೆ…

Read More

ಬೆಂಗಳೂರು : ಕಳೆದ ಬಾರಿ SSLC ಮೂರು ಬಾರಿ ಪರೀಕ್ಷೆ ನಡೆಸಿದ್ದರ ಕುರಿತು ಗೊಂದಲ ಮೂಡಿತ್ತು. ಹಾಗಾಗಿ ಈ ಬಾರಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯಾದಂತಹ ಗ್ರೇಟ್ ಮಾರ್ಕ್ಸ್ ಇರುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದರು. ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಅವರು, ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಈ ಬಾರಿ ಯಾವುದೇ ಗ್ರೇಸ್ ಮಾರ್ಕ್ಸ್ ಇರುವುದಿಲ್ಲ. ಈ ಬಾರಿ ಯಾವುದೇ ಗ್ರೇಸ್ ಮಾರ್ಕ್ಸ್ ಇಲ್ಲ. ಕಳೆದ ಬಾರಿ ಮೂರು ಪರೀಕ್ಷೆ ಬಗ್ಗೆ ಗೊಂದಲ ಮೂಡಿತ್ತು. ಆದರೆ ಈ ಬಾರಿ ಎಲ್ಲರಿಗೂ ಕ್ಲಿಯರ್ ಆಗಿದೆ. ಗ್ರೇಸ್ ಮಾರ್ಕ್ಸ್ ಕೊಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ ಆಗಿದ್ದರು. ಹಾಗಾಗಿ ಈ ಬಾರಿ ಯಾವುದೇ ರೀತಿಯಾದಂತಹ ಗ್ರೇಸ್ ಮಾರ್ಕ್ಸ್  ಇರುವುದಿಲ್ಲ ಎಂದು ತಿಳಿಸಿದರು.

Read More

ಚಿತ್ರದುರ್ಗ : ಮಹಿಳೆ ಜೊತೆ ಅಕ್ರಮ ಸಂಬಂಧ ಬೆಳೆಸಿದ್ದ ಗ್ರಾಮ ಪಂಚಾಯಿತಿ ಸದಸ್ಯ ಇದೀಗ ಹನಿ ಟ್ರ್ಯಾಪ್‌ಗೆ ಒಳಗಾಗಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಹಿರೇಗುಂಟನೂರು ಗ್ರಾಮ ಪಂಚಾಯತಿ ಸದಸ್ಯ ಮಂಜುನಾಥ್ ಹನಿ ಟ್ರ್ಯಾಪ್‌ಗೆ ಒಳಗಾದ ವ್ಯಕ್ತಿ ಎಂದು ತಿಳಿದು ಬಂದಿದೆ. ಮಂಜುನಾಥ್ ಮಹಿಳೆಯೊಂದಿಗೆ ಕಳೆದ 9 ವರ್ಷಗಳಿಂದ ಸಂಬಂಧ ಹೊಂದಿದ್ದ ಈ ವೇಳೆ ಮಹಿಳೆ 35 ಲಕ್ಷ ಹಣ ಮಂಜುನಾಥ್ ನಿಂದ ಪೀಕಿದ್ದಾಳೆ.ಅಲ್ಲದೇ ಕಾಗದದಲ್ಲೂ ನಿನಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಬರೆಸಿಕೊಂಡಿದ್ದಾಳೆ. ಹಾಗಾಗಿ ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮಹಿಳೆ ಮೂರು ಮೊಬೈಲ್ ಫೋನ್ ಬಳಸುತ್ತಿದ್ದಳು. ಇದನ್ನು ಗಮನಿಸಿದ ಮಂಜುನಾಥ್, ಮಹಿಳೆಯ ಫೋನ್ ಪರಿಶೀಲಿಸಿದ್ದಾರೆ. ಆಗ ಕಾಂಟ್ಯಾಕ್ಟ್ ಲೀಸ್ಟ್‌ನಲ್ಲಿ ಹಲವು ಪುರುಷರ ನಂಬರ್ ಕಂಡು ಅನುಮಾನದಿಂದ ಪ್ರಶ್ನಿಸಿದ್ದಾರೆ. ಈ ವೇಳೆ ಮಂಜುನಾಥ್ ಈ ಹಿಂದೆ ನೀಡಿದ್ದ ಹಣವನ್ನು ವಾಪಾಸ್ ಕೇಳಿದ್ದಾರೆ. ಆಗ ಮಹಿಳೆ ವಿಡಿಯೋ ಮುಂದಿಟ್ಟು ಬೆದರಿಕೆ ಹಾಕಿದ್ದಾಳೆ. ಮರ್ಯಾದೆಗೆ ಅಂಜಿಕೊಂಡು ಮಂಜುನಾಥ್ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

Read More

ಮಂಡ್ಯ : ಮಂಡ್ಯದಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು ನಿಯಂತ್ರಣ ತಪ್ಪಿ ಕಾರು ಬಿಸಿ ನಾಲಿಗೆ ಬಿದ್ದ ಪರಿಣಾಮಕಾರಿನಲ್ಲಿದ್ದ ಓರ್ವ ವ್ಯಕ್ತಿ ಸಾವನಪ್ಪಿದ್ದು ಇನ್ನಿಬ್ಬರು ನೀರು ಪಾಲಾಗಿರುವ ಘಟನೆ ನಡೆದಿದೆ. ಮಂಡ್ಯ ತಾಲೂಕಿನ ತಿಬ್ಬನಹಳ್ಳಿ ವಿಸಿ ನಾಲಿಗೆ ಬಿದ್ದು ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಮಂಡ್ಯ ತಾಲೂಕಿನ ತಿಬ್ಬನಹಳ್ಳಿ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ. ಘಟನೆಯ ವೇಳೆ ಕಾರಿನಲ್ಲಿದ್ದ ಮತ್ತೊಬ್ಬನನ್ನು ರಕ್ಷಣೆ ಮಾಡಲಾಗಿದ್ದು ಇಬ್ಬರು ನೀರು ಪಾಲಾಗಿರುವ ಘಟನೆ ನಡೆದಿದ್ದು ಸದ್ಯ ಪೊಲೀಸರು ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ಶೋಧ ಕಾರ್ಯಾಚರಣೆ ಕಾರ್ಯಾಚರಣೆ ಮುಂದುವರೆಸಿದ್ದಾರೆ.ಪಾಂಡವಪುರದಿಂದ ಮಂಡ್ಯ ಕಡೆಗೆ ಬರುವ ವೇಳೆ ಈ ಒಂದು ಅವಘಡ ಸಂಭವಿಸಿದೆ. ಶಿವಳ್ಳಿ ಠಾಣೆ ಪೊಲೀಸರಿಂದ ಈ ಒಂದು ಕಾರ್ಯಚರಣೆ ಮುಂದುವರೆದಿದೆ.

Read More

ನವದೆಹಲಿ :ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ 2 ನೇ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ 8 ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ. ಕೇಂದ್ರ ಬಜೆಟ್ ನಲ್ಲಿ ತೆರಿಗೆದಾರರಿಗೆ ಭರ್ಜರಿ ಗಿಫ್ಟ್ ನೀಡಿದೆ. 12, ಲಕ್ಷದ ವರೆಗೆ ಆದಾಯ ತೆರಿಗೆ ಇಲ್ಲ. 12 ಲಕ್ಷದ ವರೆಗೆ ತೆರಿಗೆಯಲ್ಲಿ  ಕೇಂದ್ರ ಸರ್ಕಾರ ದೊಡ್ಡ ವಿನಾಯಿತಿ ನೀಡಿದೆ. ಬಜೆಟ್ ನಲ್ಲಿ ಮಧ್ಯಮ ವರ್ಗಕ್ಕೆ ಬಂಪರ್ ಗಿಫ್ಟ್ ನೀಡಿದೆ. ಆದಾಯ ತೆರಿಗೆದಾರರಿಗೆ ಬಜೆಟ್ ನಲ್ಲಿ ಬಂಪರ್ ಗಿಫ್ಟ್ ನೀಡಲಾಗಿದೆ. 12 ಲಕ್ಷದವರೆಗೂ ಯಾವುದೇ ತೆರಿಗೆ ಇಲ್ಲ. ನಿರ್ಮಲಾ ಸೀತಾರಾಮನ್ ಅವರು ಇಂದು ಬಜೆಟ್ ಭಾಷಣದಲ್ಲಿ, ಸಬ್ ಕಾ ಸಾತ್ ಸಬ್ ಕಾ ವಿಕಾಸ್, ಬಡವರು, ಯುವಜನತೆಗೆ, ರೈತರಿಗೆ ಬಜೆಟ್ ಮಂಡನೆ ಮಾಡಲಾಗುವುದು, 100 ಕಡಿಮೆ ಕಡಿಮೆ ಇಳುವರಿ ಇರುವ ಜಿಲ್ಲೆಗಳಿಗೆ ಹೊಸ ಯೋಜನೆ ಘೋಷಣೆ.ರಾಜ್ಯಗಳಿಗೆ 1.5 ಲಕ್ಷ ಕೋಟಿಯವರೆಗೆ ಬಡ್ಡಿ ರಹಿತ…

Read More

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ 2 ನೇ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ 8 ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ. ನಿರ್ಮಲಾ ಸೀತಾರಾಮನ್ ಅವರು ಇಂದು ಬಜೆಟ್ ಭಾಷಣದಲ್ಲಿ, ಸಬ್ ಕಾ ಸಾತ್ ಸಬ್ ಕಾ ವಿಕಾಸ್, ಬಡವರು, ಯುವಜನತೆಗೆ, ರೈತರಿಗೆ ಬಜೆಟ್ ಮಂಡನೆ ಮಾಡಲಾಗುವುದು, 100 ಕಡಿಮೆ ಕಡಿಮೆ ಇಳುವರಿ ಇರುವ ಜಿಲ್ಲೆಗಳಿಗೆ ಹೊಸ ಯೋಜನೆ ಘೋಷಣೆ.ರಾಜ್ಯಗಳಿಗೆ 1.5 ಲಕ್ಷ ಕೋಟಿಯವರೆಗೆ ಬಡ್ಡಿ ರಹಿತ ಸಾಲ ವಿಮಾ ಕ್ಷೇತ್ರದಲ್ಲಿ ನೂರರಷ್ಟು ವಿದೇಶಿ ಹೂಡಿಕೆಗೆ ಅವಕಾಶ ವಿದೇಶಿ ಹೂಡಿಕೆ ಶೇಕಡ 74 ರಿಂದ ಶೇಕಡ 100ಕ್ಕೆ ಹೆಚ್ಚಳ ಮಾಡಲಾಗಿದೆ. ಗ್ರಾಮೀಣ ಭಾಗದಲ್ಲಿ ರೈತರಿಗೆ ಆರ್ಥಿಕ ನೆರವು 6 ವರ್ಷ ಆತ್ಮ ನಿರ್ಭರತಾ ಪಲ್ಸಸ್ ಯೋಜನೆ ಜಾರಿಗೆ ತರಲಾಗುವುದು. ಬಿಹಾರದಲ್ಲಿ ಮಕಾನ ಬೋರ್ಡ್ ತರಲಿದ್ದೇವೆ. ಈ ಯೋಜನೆಯಿಂದ ರೈತರಿಗೆ ಅನುಕೂಲವಾಗಲಿದೆ. ಬಜೆಟ್ ಯುವಕರು, ಬಡ…

Read More