Author: kannadanewsnow05

ಹುಬ್ಬಳ್ಳಿ : ವಿವಾಹಿತೆಯ ಜೊತೆ ಮಾತನಾಡಿದ್ದಕ್ಕೆ, ವಿವಾಹಿತೆಯ ಸಂಬಂಧಿಕರು ಯುವಕನನ್ನು ಅಪಹರಿಸಿ ಬೆತ್ತಲೆ ಗೊಳಿಸಿ ಬ್ಲೇಡ್ ನಿಂದ ಸಿಕ್ಕಸಿಕ್ಕ ಕಡೆ ಕುಯ್ದಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಇದೀಗ ಹುಬ್ಬಳ್ಳಿಯ ಕಸಬಾ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಹೌದು ಹಲ್ಲೆಗೆ ಒಳಗಾದ ಯುವಕ ಮುಜಾಫಿರ್ ನನ್ನು ನಿನ್ನೆ 10 ರಿಂದ 15 ಜನರ ಗುಂಪು ಹಲ್ಲೆ ಮಾಡಿದ್ದು ಬೆತ್ತಲೆ ಮಾಡಿ ಬ್ಲೇಡ್ ನಿಂದ ಆರೋಪಿಗಳು ಇರಿದಿದ್ದರು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಮೂವರನ್ನು ಅರೆಸ್ಟ್ ಮಾಡಿದ್ದಾರೆ.

Read More

ಮೈಸೂರು : ಮುಡಾ ಕಚೇರಿಗೆ ಸಂಬಂಧಪಟ್ಟಂತೆ ಇದೀಗ ಮೈಸೂರಲ್ಲಿರುವ ಮುಡಾ ಕಚೇರಿಯ ಮೇಲೆ ಇದೀಗ ಲೋಕಾಯುಕ್ತ ಅಧಿಕಾರಿಗಳು ಏಕಾಏಕಿ ದಾಳಿ ಮಾಡಿ ಹಲವು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ ಎಸ್ಪಿ ಟಿಜೆ ಉದೇಶ್ ನೇತೃತ್ವದಲ್ಲಿ ಈ ಒಂದು ದಾಳಿ ನಡೆದಿದೆ.ಈ ವೇಳೆ ಹಲವು ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಹೌದು ಮುಡಾ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ರೇಡ್ ಮಾಡಿದ್ದು, ಕುತೂಹಲಕ್ಕೆ ಕಾರಣವಾದ ಲೋಕಾಯುಕ್ತ ಎಸ್ಪಿ ನಡೆ. ಲೋಕಾಯುಕ್ತ ಎಸ್ಪಿ ಟಿಜೆ ಉದೇಶ ನೇತೃತ್ವದಲ್ಲಿ ಇದೀಗ ಮುಡಾ ಕಛೇರಿ ಮೇಲೆ ದಾಳಿ ನಡೆಸಿದೆ. ದಾಳಿಯ ವೇಳೆ ಮುಡಾ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ಅಲ್ಲಿಗೆ ಊಟ ತರಿಸಿಕೊಂಡಿದ್ದಾರೆ. ಇದೆ ವೇಳೆ ಮುಡಾ ಆಯುಕ್ತ ರಘುನಂದನ್ ರಜೆಯ ಮೇಲೆ ಇದ್ದಾರೆ. ಕಮಿಷನರ್ ರಘುನಂದನ್ ಅನುಪಸ್ಥಿತಿಯಲ್ಲಿ ಇದೀಗ ಲೋಕಾಯುಕ್ತ ಅಧಿಕಾರಿಗಳು ರೆಡ್ ಮಾಡಿದ್ದಾರೆ. ಕಳೆದ 2020 ನವೆಂಬರ್ 11 ರಂದು ಮುಡಾ ಸಭಾಂಗಣದಲ್ಲಿ ನಡೆದ ನಡಾವಳಿ ಸಭೆಯ ಕುರಿತು ಮಾಹಿತಿ ಪಡೆಯಲಿದ್ದು ನಡಾವಳಿಯ ಧ್ವನಿ ಸುರುಳಿಯನ್ನು ಅಧಿಕಾರಿಗಳು…

Read More

ಶಿವಮೊಗ್ಗ : ವಿದ್ಯಾರ್ಥಿಗಳು ಗಳಿಸಿದ ಜ್ಞಾನವನ್ನು ತಮ್ಮ ವೈಯಕ್ತಿಕ ಬೆಳವಣಿಗೆಗೆ ಮಾತ್ರವಲ್ಲದೆ, ಸಮಾಜ, ದೇಶ ಮತ್ತು ಪರಿಸರದ ಒಳಿತಿಗಾಗಿ ಬಳಸಿಕೊಳ್ಳಬೇಕು ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಕರೆ ನೀಡಿದರು. ಇಂದು ಕುವೆಂಪು ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವದ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಘಟಿಕೋತ್ಸವ ಸಮಾರಂಭವು ವಿದ್ಯಾರ್ಥಿಗಳ ಜೀವನದ ಅತ್ಯಮೂಲ್ಯ ಕ್ಷಣಗಳಲ್ಲಿ ಒಂದಾಗಿದೆ. ಇದು ಕಠಿಣ ಪರಿಶ್ರಮ ಮತ್ತು ಸಮರ್ಪಣೆಯ ಆಚರಣೆ ಮಾತ್ರವಲ್ಲ, ಇದು ನಿಮ್ಮ ಕನಸುಗಳ ಹಾರಾಟದ ಆರಂಭವಾಗಿದೆ. ಈ ಘಟಿಕೋತ್ಸವವು ಶಿಕ್ಷಣದ ಹಾದಿಯಿಂದ ಅನುಭವ ಮತ್ತು ಕ್ರಿಯೆಯ ಹಾದಿಗೆ ಹೆಜ್ಜೆ ಹಾಕಲಿದ್ದೀರಿ ಎಂಬ ಸಂದೇಶವನ್ನು ನೀಡುತ್ತದೆ ಎಂದು ಹೇಳಿದರು. ಆತ್ಮೀಯ ವಿದ್ಯಾರ್ಥಿಗಳೇ, ಸವಾಲುಗಳಿಂದ ಕೂಡಿದ ಜಗತ್ತು ನಿಮ್ಮ ಮುಂದೆ ಇದೆ. ನೆನಪಿಡಿ, ಪ್ರತಿ ಸವಾಲು ಅವಕಾಶವನ್ನು ತರುತ್ತದೆ. ಶಿಕ್ಷಣವು ಕೇವಲ ವೃತ್ತಿಯನ್ನು ಮಾಡುವ ಸಾಧನವಲ್ಲ, ಆದರೆ ಮಾನವೀಯತೆಯ ಉನ್ನತಿಗೆ ನಿಮ್ಮ ಕೊಡುಗೆಯನ್ನು ಖಚಿತಪಡಿಸಿಕೊಳ್ಳಲು ಇದು ಒಂದು ಸಾಧನವಾಗಿದೆ ತಿಳಿಸಿದರು. ವಿದ್ಯಾರ್ಥಿಗಳೇ, ಮೊದಲನೇದಾಗಿ ಕನಸು ಮತ್ತು ಅವುಗಳನ್ನು…

Read More

ಚಾಮರಾಜನಗರ : ಅರಣ್ಯವನ್ನು ರಕ್ಷಣೆ ಮಾಡಬೇಕಿದ್ದ ಅರಣ್ಯ ರಕ್ಷಕನಿಂದಲೇ ಇದೀಗ ಘೋರ ಕೃತ್ಯನಡೆದಿದ್ದು, ಚಾಮರಾಜನಗರ ಜಿಲ್ಲೆಯಲ್ಲಿ ಕೊಳ್ಳೇಗಾಲ ತಾಲೂಕಿನಲ್ಲಿ ಅರಣ್ಯ ರಕ್ಷಕನು ಸಂಬಂಧಿಯ ಜೊತೆಗೆ ಸೇರಿ ಆನೆ ದಂತಗಳನ್ನು ಮಾರಾಟ ಮಾಡುತ್ತಿದ್ದ. ಈ ವೇಳೆ ಅರಣ್ಯ ಅಧಿಕಾರಿಗಳು ಕ್ಷೀಪ್ರ ಕಾರ್ಯಾಚರಣೆ ನಡೆಸಿ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ಹೌದು ಆನೆ ದಂತ ಸಾಗಿಸುತ್ತಿದ್ದ ಫಾರೆಸ್ಟ್ ವಾಚರ್ ಮತ್ತು ಆತನ ಸಂಬಂಧಿಯನ್ನು ಅರೆಸ್ಟ್ ಮಾಡಲಾಗಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಮೊಳೆ ರಸ್ತೆಯಲ್ಲಿ ಈ ಒಂದು ಘಟನೆ ನಡೆದಿದೆ. ಬೈಕ್ ನಲ್ಲಿ ಆನೆದಂತ ಸಾಧಿಸುತ್ತಿದ್ದಾಗ ಇಬ್ಬರು ಖದೀಮರು ಸಿಕ್ಕಿ ಬಿದ್ದಿದ್ದಾರೆ. ವಾಚರ್ ಚಂದ್ರಶೇಖರ್ (27) ಹಾಗೂ ಬಸವರಾಜ್ ನನ್ನು ಅರಣ್ಯ ಅಧಿಕಾರಿಗಳು ಇದೀಗ ಅರೆಸ್ಟ್ ಮಾಡಿದ್ದಾರೆ. ಆನೆ ದಂತವನ್ನು ಚಾಪೆಯಲ್ಲಿ ಸುತ್ತಿಕೊಂಡು ಬೈಕ್​ನಲ್ಲಿ ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ಕೊಳ್ಳೇಗಾಲ ಅರಣ್ಯ ಸಂಚಾರಿ ದಳದ ಪೊಲೀಸರು ಕಾರ್ಯಾಚರಣೆ ನಡೆಸಿ, ಆನೆ ದಂತ ಸಮೇತ ಇಬ್ಬರನ್ನು ಬಂಧಿಸಿದ್ದು, ಪರಾರಿಯಾಗಿರುವ ಮತ್ತೊಬ್ಬ ಆರೋಪಿಗಾಗಿ ಶೋಧ…

Read More

ಹಾವೇರಿ : ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳಿಂದ ಇತ್ತೀಚಿಗೆ ಹಲವು ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ ಇದೀಗ ಹಾವೇರಿಯಲ್ಲಿ ಮಹಿಳೆಯರು ವಿನೂತನ ಪ್ರತಿಭಟನೆ ಮಾಡಿದ್ದು ಪೋಸ್ಟ್ ಬಾಕ್ಸ್ ನಲ್ಲಿ ಮಂಗಳಸರವನ್ನು ಪ್ಯಾಕ್ ಮಾಡಿ ಸಿಎಂ ಸಿದ್ದರಾಮಯ್ಯ ಅವರಿಗೆ ಕಳುಹಿಸಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳು ಎಂದು ಮನವಿ ಮಾಡಿ ವಿನೂತನ ಪ್ರತಿಭಟನೆ ನಡೆಸಿದ್ದಾರೆ. ಹೌದು ಹಾವೇರಿಯಲ್ಲಿ ನೂರಾರು ಮಹಿಳೆಯರಿಂದ ವಿನೂತನ ಪ್ರತಿಭಟನೆ ನಡೆಸುತ್ತಿದ್ದು, ಮಾಂಗಲ್ಯ ಸರವನ್ನು ಉಳಿಸಿ ಎಂದು ಮಹಿಳೆಯರಿಂದ ವಿನೂತನ ಅಭಿಯಾನ ಆರಂಭವಾಗಿದೆ. ಹಾವೇರಿಯ ಅಂಚೆ ಕಚೇರಿಯ ಮುಂದೆ ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಮಾಂಗಲ್ಯ ಸರವನ್ನು ಪ್ಯಾಕ್ ಮಾಡಿ ಪೋಸ್ಟ್ ಡಬ್ಬಿಗೆ ಹಾಕಿ ಸಿಎಂ ಸಿದ್ದರಾಮಯ್ಯ ಅವರಿಗೆ ಮಾಂಗಲ್ಯ ಸರವನ್ನು ಪ್ಯಾಕ್ ಮಾಡಿ ಮಹಿಳೆಯರು ಇದೀಗ ಕಳುಹಿಸಿದ್ದಾರೆ.ಮೈಕ್ರೋ ಫೈನಾನ್ಸ್ ಸಿಬ್ಬಂದಿ ದಿನನಿತ್ಯ ಬಂದು ಕಿರುಕುಳ ನೀಡುತ್ತಿದ್ದಾರೆ. ಮೈಕ್ರೋ ಫೈನಾನ್ಸ್ ಸಿಬ್ಬಂದಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಹಿಳೆಯರು ಮನವಿ ಮಾಡಿದ್ದಾರೆ. ಅಲ್ಲದೆ ಜಿಲ್ಲಾಡಳಿತ ಮತ್ತು ಎಸ್ಪಿ ಕಚೇರಿಗೂ…

Read More

ಬೆಳಗಾವಿ : ತನ್ನ ಸ್ನೇಹಿತರ ಜೊತೆಗೆ ಈಜುಲು ತೆರಳಿದ್ದ ಬಾಲಕನೊಬ್ಬ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ‌ವಾಘ್ವಾಡೆ ಗ್ರಾಮದಲ್ಲಿ ನಡೆದಿದೆ.ಮೃತ ಬಾಲಕನನ್ನು ಗಣೇಶ್ ಸುತಾರ್ (15) ಎಂದು ತಿಳಿದುಬಂದಿದೆ. ಮೃತ ಗಣೇಶ್ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ. ಸ್ನೇಹಿತರ ಜೊತೆಗೆ ಈಜಲು ಕೆರೆಗೆ ಹೋಗಿದ್ದಾಗ ಈ ಅವಘಡ ಸಂಭವಿಸಿದೆ.ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಗಣೇಶನ ಮೃತದೇಹ ಹೊರತೆಗೆಯುತ್ತಿದ್ದಂತೆ ಮೃತ ಬಾಲಕನ‌ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಮತ್ತೊಂದು ಘನ ಘೋರವಾದಂತಹ ಘಟನೆ ನಡೆದಿದ್ದು, ವಿವಾಹಿತ ಮಹಿಳೆಯ ಜೊತೆ ಮೊಬೈಲ್ ನಲ್ಲಿ ಮಾತನಾಡಿದ್ದಾನೆ ಎಂದು ಆರೋಪಿಸಿ ಮಹಿಳೆಯ ಸಂಬಂಧಿಕರು ಯುವಕನೋರ್ವನನ್ನು ಕಿಡ್ನ್ಯಾಪ್ ಮಾಡಿ ಸಿಕ್ಕ ಸಿಕ್ಕಲ್ಲಿ ಬ್ಲೇಡ್ ಹಾಕಿ ಕೊಯ್ದು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಹುಬ್ಬಳ್ಳಿಯ ಟಿಪ್ಪು ನಗರದಲ್ಲಿ ನಡೆದಿದೆ. ಹೌದು ಮೆಹಿಳೆಯ ಜೊತೆ ಮಾತನಾಡಿದ್ದಕ್ಕೆ ಬೆತ್ತಲೆ ಗೊಳಿಸಿ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ. ಹುಬ್ಬಳ್ಳಿಯ ಟಿಪ್ಪು ನಗರದಲ್ಲಿ ಈ ಒಂದು ಘನ ಘೋರ ಘಟನೆ ನಡೆದಿದೆ. ಪೊಲೀಸ್ ಠಾಣೆಯ ಕೂಗಳತೆಯಲ್ಲಿ ಈ ಒಂದು ಘಟನೆ ನಡೆದಿದೆ. ಹಲ್ಲೆಗೆ ಒಳಗಾದ ಯುವಕನನ್ನು ಮುಜಾಫಿರ್ ಎಂದು ತಿಳಿದುಬಂದಿದೆ. ಮಹಿಳೆಯ ಸಂಬಂಧಿಕರು ಮುಜಾಫಿರ್ನನ್ನು ಬೆತ್ತಲೆ ಮಾಡಿ ಹಲ್ಲೆ ಮಾಡಿದ್ದಾರೆ. ನಿನ್ನೆ ಮಹಿಳೆಯ ಜೊತೆ ಮುಜಾಫಿರ್ ಫೋನಿನಲ್ಲಿ ಮಾತನಾಡುತ್ತಿದ್ದ ಎಂದು ಹೇಳಲಾಗುತ್ತಿದೆ. ಈ ವಿಷಯ ತಿಳಿದು ಮುಜಾಫಿರ್ನನ್ನು ಅಪಹರಿಸಿ ಹಲ್ಲೆ ಮಾಡಿದ್ದಾರೆ. ಮಹಿಳೆಯ ಸಮಾಬಂಧಿಕರು ಮುಜಾಫಿರ್ ನನ್ನು ಅಪಹರಿಸಿ ಸಿಕ್ಕಸಿಕ್ಕಲ್ಲಿ ಬ್ಲೇಡ್ ಹಾಕಿದ್ದಾರೆ. ಹಲ್ಲೆಯ ಬಳಿಕ ಆತನನ್ನು ಮನೆಯ…

Read More

ಮೈಸೂರು : ಕೇವಲ ಒಂದು ವಾರದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದರೋಡೆ ಪ್ರಕರಣಗಳು ನಡೆದಿವೆ. ಇದೀಗ ಪೊಲೀಸರು ಈ ಒಂದು ದರೋಡೆಕೋರರ ಬೆನ್ನು ಹತ್ತಿದ್ದು, ಈಗಾಗಲೇ ಒಂದು ಪ್ರಕರಣದಲ್ಲಿ ಹಲವು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇದರ ಬೆನ್ನಲ್ಲೇ ಮೈಸೂರಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ವರದಿಯಾಗಿದ್ದು, ದನದ ಕೊಟ್ಟಿಗೆಯಲ್ಲಿ ಅಪ್ಪ ಮಗ ಸೇರಿ ಖೋಟಾ ನೋಟ್ ಪ್ರಿಂಟ್ ಮಾಡುತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಪೊಲೀಸರು ಇದೀಗ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ಹೌದು ಜಿಲ್ಲೆಯ ಮಾದಾಪುರ ಬಳಿ ದನದ ಕೊಟ್ಟಿಗೆಯಲ್ಲಿ ಖೋಟಾ ನೋಟು ಪ್ರಿಂಟ್‌ ಮಾಡುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಟಿ. ನರಸೀಪುರ ಪೊಲೀಸರು ದಾಳಿ ಮಾಡಿ ಕೃತ್ಯದಲ್ಲಿ ತೊಡಗಿದ್ದ ತಂದೆ ಮತ್ತು ಮಗನನ್ನು ಬಂಧಿಸಿರುವ ಘಟನೆ ಟಿ. ನರಸೀಪುರ ತಾಲ್ಲೂಕಿನ ಹಿರಿಯೂರು ಗ್ರಾಮದಲ್ಲಿ ನಡೆದಿದೆ. ಬಂಧಿತ ಅಪ್ಪ ಮಗನನ್ನು ಹಿರಿಯೂರು ಗ್ರಾಮದ ನಾಗೇಶ್ (25) ಹಾಗೂ ಶಿವಪ್ರಸಾದ್ (48) ಎಂದು ತಿಳಿದುಬಂದಿದೆ. ಈ ವೇಳೆ ಪೊಲೀಸರು ಕೋಟ ನೋಟ್…

Read More

ಮಂಡ್ಯ : ಪಾಲಹಳ್ಳಿ ರೌಡಿಶೀಟರ್ ಸುಪ್ರೀತ್ ಅಲಿಯಾಸ್ ಸುಪ್ರೀ ಕೋಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕೊಲೆ ಆರೋಪಿ ಪ್ರಮೋದ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕೊಲೆ ಆರೋಪಿಯನ್ನು ಬಂಧಿಸುವ ವೇಳೆ ಪಿಸಿ ಶರತ್ ಮೇಲೆ ಆರೋಪಿ ಪ್ರಮೋದ್ ಹಲ್ಲೆಗೆ ಯತ್ನಿಸಿದ್ದಾನೆ. ಈ ವೇಳೆ ಆರೋಪಿ ಪ್ರಮೋದ್ ಕಾಲಿಗೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಕೆ ಆರ್ ಎಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಪುನೀತ್ ಫೈರಿಂಗ್ ಮಾಡಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕರಿಕಟ್ಟೆ ಬಳಿ ಈ ಒಂದು ಘಟನೆ ನಡೆದಿದೆ. ಸದ್ಯ ಶ್ರೀರಂಗಪಟ್ಟಣ ತಾಲೂಕು ಆಸ್ಪತ್ರೆಯಲ್ಲಿ ಪ್ರಮೋದ್ ಚಿಕಿತ್ಸೆ ಪಡೆಯುತ್ತಿದ್ದಾನೆ.

Read More

ಮೈಸೂರು : ಇತ್ತೀಚಿಗೆ ಮೈಸೂರಲ್ಲಿ ಹಾಡ ಹಗಲೇ ಕೇರಳದ ಉದ್ಯಮಿಯ ಹಣ ಹಾಗೂ ಆತನ ಕಾರನ್ನು ದರೋಡೆ ಮಾಡಿ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಕೇರಳದ ತ್ರಿಶೂರಿನ ರಜಿನ್ ಮತ್ತು ಪ್ರಮೋದ್ ಎಂದು ತಿಳಿದುಬಂದಿದೆ. ರಜಿನ್ ಮೂಲಕವೇ ದರೋಡೆಕೋರರು ವಾಹನ ಬಾಡಿಗೆ ಪಡೆದಿದ್ದರು. ರಜಿನನ್ನು ಸದ್ಯ ಮೈಸೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಇನ್ನೋರ್ವ ಆರೋಪಿ ಪ್ರಮೋದ್ ನನ್ನು ತ್ರಿಶೂರಿನಲ್ಲಿ ಕೇರಳ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಜಿನ್ ಮತ್ತು ಪ್ರಮೋದ್ ಇಬ್ಬರು ಸ್ನೇಹಿತರು ಎಂದು ತಿಳಿದುಬಂದಿದೆ. ರಜಿನ್ ವ್ಯಕ್ತಿ ಒಬ್ಬನನ್ನು ಪ್ರಮೋದ್ ಬಳಿಗೆ ಕರೆತಂದಿದ್ದ. ಪ್ರಮೋದ್ ಬಳಿ ವ್ಯಕ್ತಿಗೆ ಕಾರು ಬಾಡಿಗೆ ಕೊಡಿಸಿದ್ದ. ದರೋಡೆಕೋರರಿಗೆ ಕಾರು ಬಾಡಿಗೆ ಕೊಡಿಸಿದ ಬಗ್ಗೆ ಇದೀಗ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸುತ್ತಿದ್ದಾರೆ ಪ್ರಕರಣದ ಕುರಿತು ಮೈಸೂರು ಮತ್ತು ಕೇರಳ ಪೊಲೀಸ್ರು ಇನ್ನಷ್ಟು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಹೌದು ಕೇರಳದ ಉದ್ಯಮಿ ಅಶ್ರಫ್ ಅಹ್ಮದ್ ಹಾಗೂ…

Read More