Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಪಹಲ್ಗಾಮ್ ನಲ್ಲಿ ಉಗ್ರರು ದಾಳಿ ಮಾಡಿದ ವಿಚಾರವಾಗಿ ಬಿಜೆಪಿಯವರು ಜವಾಹರಲಾಲ್ ನೆಹರೂ ಮಾಡಿದ ತಪ್ಪಿನಿಂದಾಗಿ ಇಂದು ದೇಶ ಕಷ್ಟ ಅನುಭವಿಸುತ್ತಿದೆ ಎಂದು ಹೇಳಿದ್ದಾರೆ. ಈ ವಿಚಾರವಾಗಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ನಾಯಕರು ತಿರುಗೇಟು ಮಾಡಿದ್ದು ನೆಹರು ಅವರ ಹೆಸರಿನಲ್ಲಿ ಈಗ ಟೀಕೆ ಮಾಡುವವರು ಅಂದು ಹುಟ್ಟಿರಲಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾನು ಅಭಿವೃದ್ಧಿ ಕಾರ್ಯಗಳ ಮೇಲೆ ನಂಬಿಕೆ ಇಟ್ಟವನು. ಸುಳಿವು ನೀಡದೆ 371 ಜೆ ವಿಶೇಷ ಸ್ಥಾನಮಾನ ಜಾರಿ ಮಾಡಿದ್ದೇನೆ. ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಿಗೆ 371 ಜೆ ವಿಶೇಷ ಸ್ಥಾನಮಾನ ಜಾರಿ ಮಾಡಿದ್ದೇನೆ.ನೆಹರು ಹೆಸರಿನಲ್ಲಿ ಈಗ ಟೀಕೆ ಮಾಡುವವರು ಅಂದು ಹುಟ್ಟಿರಲಿಲ್ಲ. ಅಂದು ದೇಶ ಯಾವ ಸ್ಥಿತಿಯಲ್ಲಿತ್ತು ಅಂತ ಅವರಿಗೆ ಗೊತ್ತಿಲ್ಲ. ಆರ್ ಎಸ್ ಎಸ್ ಮತ್ತು ಬಿಜೆಪಿ ಮೀಸಲಾತಿಗೆ ವಿರೋಧಿಯಾಗಿತ್ತು. ಇನ್ನು ಪಹಲ್ಗಾಮ್ ದಾಳಿಯ ವಿಚಾರವಾಗಿ ಮಾತನಾಡಿದ ಅವರು, ದಾಳಿ ಕುರಿತಂತೆ ವಿಶೇಷ ಅಧಿವೇಶನಕ್ಕೆ ಒತ್ತಾಯಿಸಿದ್ದೆ. ಕೇಳೋದು…
ಬೆಂಗಳೂರು : ಮನೆಯಲ್ಲಿ ಅಡುಗೆ ಅನೀಲ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದ್ದು, ಈ ವೇಳೆ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸಾವನ್ನಪ್ಪಿದ್ದರೆ, ಮೂವರಿಗೆ ಗಂಭೀರವಾದ ಗಾಯಗಳಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿದೆ. ನೆಲಮಂಗಲ ಬಳಿಯ ಅಡಕಮಾರನಹಳ್ಳಿ ಓವರ್ ಟ್ಯಾಂಕ್ ಬಳಿ ಈ ಘಟನೆ ಸಂಭವಿಸಿದೆ. ನಾಗರಾಜ್ (50), ಶ್ರೀನಿವಾಸ್ (50) ಮೃತ ದುರ್ದೈವಿಗಳಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಂಗಯ್ಯ ಎಂಬವರಿಗೆ ಸೇರಿದ ಎರಡು ಬಾಡಿಗೆ ಮನೆಗಳಲ್ಲಿ ನಾಗರಾಜ್ ಅವರು ಒಂದು ಮನೆಯನ್ನ ನಾಗರಾಜ್ ಬಾಡಿಗೆಗೆ ಪಡೆದಿದ್ದರು. ಮೃತ ನಾಗರಾಜ್ ಪತ್ನಿ ಲಕ್ಷ್ಮೀದೇವಿ, ಮಕ್ಕಳಾದ ಬಸನಗೌಡ ಹಾಗು ಅಭಿಷೇಕ್ ಗೌಡ ಗಾಯಗೊಂಡಿದ್ದಾರೆ. ಬೆಳಗ್ಗೆ ಕೆಲಸಕ್ಕೆಂದು ತೆರಳುತ್ತಿದ್ದ ನಾಗರಾಜ್ ದೇವರಿಗೆ ದೀಪ ಹಚ್ಚಿದ್ದರು. ಖಾಲಿಯಾಗಿದ್ದ ಸಿಲಿಂಡರ್ ಬದಲಾಯಿಸಲು ಎರಡನೇ ಮಗ ಅಭಿಷೇಕ್ ಮುಂದಾಗಿದ್ದರು. ಈ ವೇಳೆ ಸಿಲಿಂಡರ್ನಿಂದ ಗ್ಯಾಸ್ ಲೀಕ್ ಆಗಿದ್ದು, ದೀಪದ ಬೆಂಕಿ ತಗುಲಿ ದುರಂತ ಸಂಭವಿಸಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಮಾಜಿ ಸಂಸದ ಡಿಕೆ ಸುರೇಶ್ ಅವರ ಪತ್ನಿ ಎಂದು ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಮ್ನಲ್ಲಿ ವಿಡಿಯೋ ಹರಿಬಿಟ್ಟ ಮಹಿಳೆಯ ವಿರುದ್ಧ ರಾಮನಗರ ಸೆನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಪವಿತ್ರ ಎಂಬ ಮಹಿಳೆಯ ವಿರುದ್ಧ ಡಿಕೆ ಸುರೇಶ್ ಅವರ ವಕೀಲ ಪ್ರದೀಪ್ ದೂರು ದಾಖಲಿಸಿದ್ದಾರೆ. ಏಪ್ರಿಲ್ 8, 2025 ರಂದು ಆರೋಪಿ ಮಹಿಳೆ, ಡಿಕೆ ಸುರೇಶ್ ಅವರ ಫೋಟೊದೊಂದಿಗೆ ತನ್ನ ಫೋಟೊವನ್ನು ಎಡಿಟ್ ಮಾಡಿ, ತಾನು ಅವರ ಪತ್ನಿ ಎಂದು ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಕೃತ್ಯವನ್ನು ದುರುದ್ದೇಶದಿಂದ ಮಾಡಿ, ಡಿಕೆ ಸುರೇಶ್ ವಿರುದ್ಧ ಅಪಪ್ರಚಾರ ಮಾಡಲಾಗಿದೆ ಎಂದು ವಕೀಲ ಪ್ರದೀಪ್ ದೂರಿನಲ್ಲಿ ತಿಳಿಸಿದ್ದಾರೆ.ಈ ಸಂಬಂಧ ರಾಮನಗರ ಸೆನ್ ಪೊಲೀಸರು ಎಫ್ಐಆರ್ ದಾಖಲಿಸಿ, ತನಿಖೆ ಆರಂಭಿಸಿದ್ದಾರೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಮಹಿಳೆಯ ಕೃತ್ಯವನ್ನು ಖಂಡಿಸಲಾಗಿದೆ. ವಿಡಿಯೋದಲ್ಲಿ ಏನಿದೆ? ನಾನು ಮೊದಲು ಡಿ.ಕೆ. ಸುರೇಶ್ ಅವರ ಹೆಂಡತಿಯಾಗಿ ಹೇಳಬೇಕೆಂದರೆ, ನಾನು ಫಸ್ಟ್ ಸುರೇಶ್…
ಶ್ರೀನಗರ : ಪಹಲ್ಗಾಮ್ ನಲ್ಲಿ ನಡೆದ ಉಗ್ರರ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಎನ್ಐಎ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದು ತನಿಖೆಯ ವೇಳೆ ಮತ್ತೊಂದು ಸ್ಫೋಟಕವಾದ ಮಾಹಿತಿ ಬಹಿರಂಗವಾಗಿದ್ದು, ಪಹಲ್ಗಾಮ್ ನಲ್ಲಿ ಉಗ್ರರು ದಾಳಿಗೂ ಮೊದಲೇ ಒಂದು ವಾರ ಮೊದಲೇ ಠಿಕಾಣಿ ಹೂಡಿದ್ದರು ಎನ್ನುವುದು ಬಹಿರಂಗವಾಗಿದೆ. ಹೌದು ದಾಳಿಗೂ ಒಂದು ವಾರ ಮೊದಲೇ ಉಗ್ರರು ಎಂಟ್ರಿ ಕೊಟ್ಟಿದ್ದಾರೆ. ಏಪ್ರಿಲ್ 15 ರಂದು ಜಮ್ಮು ಕಾಶ್ಮೀರದಲ್ಲಿ ಉಗ್ರರು ಠಿಕಾಣಿ ಹೂಡಿದ್ದಾರೆ. ಬೈಸರನ್ ವ್ಯಾಲಿ, ಅರುವ್ಯಾಲಿ, ಬೇತಾಬ್ ವ್ಯಾಲಿ ಹಾಗು ಲೋಕಲ್ ಅಮ್ಯೂಸ್ ಮೆಂಟ್ ಪಾರ್ಕ್ ಈ 4 ಸ್ಥಳಗಳನ್ನು ಉಗ್ರರು ಟಾರ್ಗೆಟ್ ಮಾಡಿದ್ದರು. 4 ಸ್ಥಳಗಳಲ್ಲಿ ಉಗ್ರರು ಖತರ್ನಾಕ್ ಸಂಚು ಇದೀಗ ಬಯಲಾಗಿದೆ. ದಾಳಿಗೆ ನಾಲ್ಕು ಸ್ಥಳಗಳನ್ನು ಉಗ್ರರು ಟಾರ್ಗೆಟ್ ಮಾಡಿದ್ದರು ಎನ್ನಲಾಗಿದ್ದು, ಇದೀಗ NIA ತನಿಖೆಯಲ್ಲಿ ಮಾಹಿತಿ ಬಹುರಂಗವಾಗಿದೆ. ನಾಲ್ಕು ಪ್ರವಾಸಿ ತಾಣಗಳ ಫೋಟೋ ಸಹ ಕ್ಲಿಕ್ಕಿಸಿಕೊಂಡಿದ್ದಾರೆ. ಭದ್ರತೆ ಕಡಿಮೆ ಇದಿದ್ದರಿಂದ ಉಗ್ರರು ದಾಳಿ ಮಾಡಲು ಸ್ಕೆಚ್ ಹಾಕಿದ್ದಾರೆ. ಈ ವೇಳೆ…
ಚಿತ್ರದುರ್ಗ : ಚಾಲಕನ ನಿಯಂತ್ರಣ ತಪ್ಪಿ ವೇಗವಾಗಿ ಚಲಿಸುತ್ತಿದ್ದ ಕಾರು ಒಂದು ಪಲ್ಟಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿ ಸಾವನ್ನಪ್ಪಿದ್ದು, 6 ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಮೃತರನ್ನು ಅರ್ಜುನ, ಶ್ರೀಧರ್ ಮತ್ತು ಶರವಣ ಎಂದು ಗುರುತಿಸಿದೆ. ಚಿತ್ರದುರ್ಗ ಜಿಲ್ಲೆಯ ಸೀಬಾರದ ಬಳಿ ಚಾಲಕನ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಪಲ್ಟಿಯಾಗಿದ್ದು, ಮೂವರು ಸಾವನಪ್ಪಿದ್ದಾರೆ. ಇನ್ನು ಅಪಘಾತದಲ್ಲಿ 6 ಜನರಿಗೆ ಗಂಭೀರವಾದ ಗಾಯಗಳಾಗಿವೆ. ಸಲ್ಮಾನ್, ನವೀನ್, ಗೋಕುಲ್ ಸೆಂಥಿಲ್ ಕುಮಾರ್, ರಮೇಶ್ ಮತ್ತು ಗೌತಮ್ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಕುರಿತಂತೆ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅರ್ಜುನ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನುಳಿದ ಇಬ್ಬರು ಜಿಲ್ಲಾಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ದಾಖಳಿಸಿದ್ದಾಗ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮೃತ ಮೂವರು ತಮಿಳುನಾಡು ಮೂಲದವರು ಎಂದು ಹೇಳಲಾಗುತ್ತಿದ್ದು, ಮೃತ ಅರ್ಜುನ್ ತಮಿಳುನಾಡು ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಎನ್ನಲಾಗಿದೆ.
ಬೆಂಗಳೂರು : ಬಿಗ್ ಬಾಸ್ ಮಾಜಿ ಸ್ಪರ್ಧಿ, ವಕೀಲ ಜಗದೀಶ್ ಬರೋಬ್ಬರಿ 93 ದಿನಗಳ ಜೈಲುವಾಸದ ಬಳಿಕ ಜಾಮೀನಿನ ಮೇಲೆ ಬಿಡುಗಡೆ ಆಗಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಜಗದೀಶ್, ತಮ್ಮ ಬಂಧನಕ್ಕೆ ಸರ್ಕಾರ ಹಾಗೂ ಪೊಲೀಸ್ ವ್ಯವಸ್ಥೆಯನ್ನು ನೇರ ಹೊಣೆ ಮಾಡಿದ್ದಾರೆ. ಕೊಡಿಗೆಹಳ್ಳಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾಯರ್ ಜಗದೀಶ್ ಹಾಗೂ ಗನ್ ಮ್ಯಾನ್ನನ್ನು ಜನವರಿ 25ರಂದು ಪೊಲೀಸರು ಬಂಧಿಸಿದ್ದರು.ರಸ್ತೆಯಲ್ಲಿ ಅಣ್ಣಮ್ಮ ದೇವಿ ಕೂರಿಸಲು ವಿರೋಧಿಸಿದ್ದಕ್ಕೆ ಜಗದೀಶ್ ಮತ್ತು ಸ್ಥಳೀಯರ ನಡುವೆ ಜಗಳವಾಗಿತ್ತು. ಹೀಗಾಗಿ ಬಂಧನವಾಗಿದ್ದ ಲಾಯರ್ ಜಗದೀಶ್ ಇದೀಗ ಜೈಲಿನಿಂದ ರಿಲೀಸ್ ಆಗಿದ್ದಾರೆ. ರಿಲೀಸ್ ಬೆನ್ನಲ್ಲೆ ಲಾಯರ್ ಹೇಳಿದ್ದೇನು? ಈ ಬಗ್ಗೆ ಲಾಯರ್ ಜಗದೀಶ್ ಅವರು ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿ, ತಮಗೆ ಜಾಮೀನು ಸಿಕ್ಕಿರುವುದಾಗಿ ಹೇಳಿದ್ದಾರೆ. ನಾನು ಹಲವು ವರ್ಷಗಳಿಂದ ಭ್ರಷ್ಟಾಚಾರದ ವಿರುದ್ಧ ಧೀರ ಹೋರಾಟ ನಡೆಸುತ್ತಿರುವ ಹೋರಾಟಗಾರ ಎಂದಿರುವ ಜಗದೀಶ್, PSI ಹಗರಣವನ್ನು ಬಯಲು ಮಾಡಿದ್ದು, ADGP ಅಮೃತಪಾಲ್ ಅವರನ್ನು ಜೈಲಿಗೆ ಕಳಿಸಿದ್ದು ನಮ್ಮ…
ರಾಯಚೂರು : ರಾಯಚೂರಿನಲ್ಲಿ ಬೆಚ್ಚಿಬಿಳಿಸುವ ಘಟನೆ ಎಂದು ನಡೆದಿದ್ದು ದುಷ್ಕರ್ಮಿಗಳು ಯುವಕನ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಭೀಕರವಾಗಿ ಕೊಲೆಗೈದಿರುವ ಘಟನೆ ನಗರದ ರೈಲ್ವೆ ನಿಲ್ದಾಣದ ಹತ್ತಿರದ ಉದ್ಯಾನವನ ಬಳಿ ನಡೆದಿದೆ. ಕೊಲೆಯಾದ ಯುವಕನನ್ನು ಇಂದಿರಾನಗರದ ನಿವಾಸಿ ವೀರೇಶ್ (26) ಎಂದು ಗುರುತಿಸಲಾಗಿದೆ. ತಲೆಯ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಲಾಗಿದ್ದು, ಕೃತ್ಯದ ಬಳಿಕ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ವಿಷಯ ತಿಳಿದು ಪಶ್ಚಿಮ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಬೆಂಗಳೂರು : ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣ ಅಬ್ಬರಿಸುತ್ತಿದ್ದು, ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ಜನರಿಗೆ ವರುಣ ತಂಪೆರೆದಿದ್ದಾನೆ. ಇದೀಗ ಹವಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಇಂದಿನಿಂದ ಮೇ 4 ರವರೇಗೆ ರಾಜ್ಯದ ಎಲ್ಲಾ ಭಾಗಗಳಲ್ಲೂ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಎಲ್ಲಾ ಭಾಗದಲ್ಲೂ ಇಂದಿನಿಂದ ನಾಲ್ಕು ದಿನ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಈಗಾಗಲೇ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಇಂದಿನಿಂದ ಮೇ 4ರ ವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿತ್ರದುರ್ಗ, ಹಾಸನ, ಶಿವಮೊಗ್ಗ, ಮೈಸೂರು, ಮಂಡ್ಯ, ಚಿಕ್ಕಮಂಗಳೂರು, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ ಹಾಗು ಉತ್ತರ ಕನ್ನಡ ಜಿಲ್ಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಬೆಂಗಳೂರು : ಈಗಾಗಲೇ ಮಧ್ಯದ ಮೇಲಿನ ದರ ಎರಡು ಬಾರಿ ಏರಿಕೆ ಮಾಡಿರುವ ರಾಜ್ಯ ಸರ್ಕಾರ ಇದೀಗ ಮೂರನೇ ಬಾರಿಗೆ ಮಧ್ಯದರ ಏರಿಕೆ ಮಾಡಿದ್ದು ಮಧ್ಯಪ್ರಿಯರಿಗೆ ರಜೆ ಸರ್ಕಾರ ಮತ್ತೊಮ್ಮೆ ಶಾಕ್ ನೀಡಿದೆ.ಹೌದು ಮದ್ಯ ಪ್ರಿಯರಿಗೆ ಮತ್ತೊಮ್ಮೆ ನೀಡಲು ಮುಂದಾದ ಸರ್ಕಾರ ಬಿಯರ್ ಮೇಲಿನ ಅಬಕಾರಿ ಸುಂಕ ಹೆಚ್ಚಿಸುವ ಬಗ್ಗೆ ಕರಡು ಅಧಿಸೂಚನೆ ಹೊರಡಿಸಲಾಗಿದ್ದು, 195% ನಿಂದ 205% ಗೆ ಸುಂಕ ಹೆಚ್ಚಿಸುವ ಬಗ್ಗೆ ಕರುಡು ಅಧಿಸೂಚನೆ ಪ್ರಕಟಿಸಲಾಗಿದೆ. ಇನ್ನು ಈ ಕುರಿತು ಒಂದು ವಾರದೊಳಗೆ ಆಕ್ಷೇಪಣೆ ಸಲ್ಲಿಸಲು ಸಾರ್ವಜನಿಕರಿಗೆ ಅವಕಾಶ ಕೂಡ ಕಲ್ಪಿಸಲಾಗಿದೆ. ವಿದ್ಯುತ್ ದರ ಏರಿಕೆ ಬೆನ್ನಲ್ಲೆ ಇದೀಗ ಮದ್ಯದ ದರ ಏರಿಕೆಗೆ ರಾಜ್ಯ ಸರ್ಕಾರ ಮುಂದಾಗಿದೆ.ಈಗಾಗಲೇ ಡೀಸೆಲ್ ಹಾಲು ಮತ್ತು ವಿದ್ಯುತ್ ದರವನ್ನು ಸರ್ಕಾರ ಹೆಚ್ಚಿಸಿದೆ. ಬ್ರಾಂಡಿ, ವಿಸ್ಕಿ, ರಂ ಜಿನ್ ಗಳ ದರವನ್ನು ಪ್ರತೀ ಕ್ವಾಟರ್ ಗೆ 10 ರೂ.ಇಂದ 15 ರೂಪಾಯಿ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ.ಬಿಯರ್ ದರ 10 ರೂ. ಇಂದ 20 ರೂ…
ಬೆಂಗಳೂರು : ಈಗಾಗಲೆ ಕಾವೇರಿ ನೀರಿನ ದರ ಹಾಗೂ ಮೆಟ್ರೋ ದರ ಏರಿಕೆ ಮಾಡಿ ಸರ್ಕಾರ ಬೆಂಗಳೂರಿನ ಜನತೆಗೆ ಶಾಕ್ ನೀಡಿದ್ದು, ಇದೀಗ ಬೆಂಗಳೂರು ಜನತೆಗೆ ಮತ್ತೊಂದು ದರ ಏರಿಕೆಯ ಬಿಸಿ ತಟ್ಟಲಿದೆ. ಆಟೋ ಪ್ರಯಾಣದ ದರ ಹೆಚ್ಚಳಕ್ಕೆ ಇದೀಗ ಜಿಲ್ಲಾಡಳಿತ ಗ್ರೀನ್ ಸಿಗ್ನಲ್ ಕೊಟ್ಟಿದ್ದು, ಬೆಂಗಳೂರಿನ ಜನತೆಗೆ ಗಾಯದ ಮೇಲೆ ಬರೆ ಎಳೆದಂತೆ ಆಗಿದೆ. ಹೌದು ಆಟೋ ದರ ಏರಿಕೆ ಮಾಡಲು ಜಿಲ್ಲಾಡಳಿತ ಗ್ರೀನ್ ಸಿಗ್ನಲ್ ಕೊಟ್ಟಿದ್ದು, ಇನ್ನು ಅಧಿಕೃತ ಆದೇಶ ಹೊರ ಬೀಳುವುದು ಮಾತ್ರ ಬಾಕಿ ಇದೆ. ಮೇ 13 ರಂದು ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.ಈಗಾಗಲೇ ಅನೇಕ ಅಗತ್ಯ ವಸ್ತುಗಳ ದರ ಏರಿಕೆ ಆಗಿದೆ. ಹೀಗಾಗಿ ಆಟೋ ಮೀಟರ್ ದರ ಏರಿಕೆ ಮಾಡಲು ಜಿಲ್ಲಾಧಿಕಾರಿ ಕೂಡಲೇ ಗ್ರೀನ್ ಸಿಗ್ನಲ್ ನೀಡಬೇಕು ಎಂದು ಆಟೋ ಚಾಲಕರು ಆಗ್ರಹಿಸಿದ್ದಾರೆ. ಆಟೋ ಮೀಟರ್ ದರ ಏರಿಕೆ ಮಾಡುವಂತೆ ಕಳೆದ ಮೂರು ವರ್ಷಗಳಿಂದ ಆಟೋ ಚಾಲಕ ಹಾಗೂ ಮಾಲೀಕರ ಸಂಘಟನೆಗಳು…














