Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಮಂಗಳೂರು : ಈ ಸಾವು ಅನ್ನೋದು ಯಾರಿಗೆ ಯಾವಾಗ ಯಾವ ರೂಪದಲ್ಲಿ ಬರುತ್ತದೆ ಅಂತ ಹೇಳಕ್ಕಾಗಲ್ಲ. ಇದೀಗ ಮಂಗಳೂರಲ್ಲಿ ಹೃದಯವಿದ್ರಾವಕ ಘಟನೆ ಒಂದು ನಡೆದಿದ್ದು, ತಮ್ಮನ ಅಂತ್ಯ ಸಂಸ್ಕಾರಕ್ಕೆ ಬಂದಿದ್ದ ಅಕ್ಕನು ಸಹ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೌದು ತಮ್ಮನ ಅಂತ್ಯ ಸಂಸ್ಕಾರಕ್ಕೆಂದು ಚೆನ್ನೈನಿಂದ ಬಂದಿದ್ದ ಅಕ್ಕ ನಗರದ ಹೊರವಲಯದ ಪಾವಂಜೆ ಬಳಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಫಲಿಸದೆ, ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ನಗರದ ಬಂಗ್ರಕೂಳೂರು ನಿವಾಸಿ ಶ್ರುತಿ (27) ಮೃತಪಟ್ಟವರು ಎಂದು ತಿಳಿದುಬಂದಿದೆ. ಕಂಪ್ಯೂಟರ್ ಇಂಜಿನಿಯರಿಂಗ್ ಮುಗಿಸಿರುವ ಶ್ರುತಿ ಚೆನ್ನೈನಲ್ಲಿ ಸಾಫ್ಟ್ವೇರ್ ಉದ್ಯೋಗಿಯಾಗಿದ್ದರು. ಮೆಕ್ಯಾನಿಕ್ ಆಗಿದ್ದ ತನ್ನ ಸಹೋದರ ಸುಜಿತ್ ಜೂನ್ 10ರಂದು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಅವರು ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಲು ಕೆಲಸಕ್ಕೆ ರಜೆ ಹಾಕಿ ಮನೆಗೆ ಬಂದಿದ್ದರು. ಈ ನಡುವೆ ಬ್ಯಾಂಕ್ ಕೆಲಸಕ್ಕೆಂದು ತಂದೆಯೊಂದಿಗೆ ಸ್ಕೂಟರ್ನಲ್ಲಿ ಕಿನ್ನಿಗೋಳಿ ಕಡೆಗೆ ಹೋಗಿ ಮತ್ತೆ ಮನೆಯತ್ತ ಹಿಂದೆ ಬರುತ್ತಿದ್ದರು. ಮಳೆ ಬಂದ ಹಿನ್ನೆಲೆಯಲ್ಲಿ ಪಾವಂಜೆ ಬಳಿ ಸ್ಕೂಟರ್ ನಿಲ್ಲಿಸಿ,…
ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡು ಪಕ್ಷಗಳಲ್ಲೂ ಬದಲಾವಣೆಯ ಗಾಳಿ ಬೀಸುತ್ತಿದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಸಚಿವ ಕೆ ಎನ್ ರಾಜಣ್ಣ ಸೆಪ್ಟೆಂಬರ್ ಬಳಿಕ ಬದಲಾವಣೆಯ ಗಾಳಿ ಬೀಸಲಿದೆ ಎಂದು ಹೇಳಿಕೆ ನೀಡಿದ್ದಾರೆ. ಆದರೆ ಯತೀಂದ್ರ ಸಿದ್ದರಾಮಯ್ಯ ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ ಎಂದು ಹೇಳಿಕೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿಗಳ ಬದಲಾವಣೆ ಇಲ್ಲ. ಸಿದ್ದರಾಮಯ್ಯನವರೇ ಮುಂದಿನ ಐದು ವರ್ಷಗಳ ಕಾಲ ಮುಖ್ಯಮಂತ್ರಿ ಆಗಿರುತ್ತಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಸದ್ಯಕ್ಕೆ ಇಲ್ಲ ಕಾಂಗ್ರೆಸ್ ಹೈಕಮಾಂಡ್ ನಾಯಕರು ಆ ರೀತಿ ಏನು ಹೇಳಿಕೆ ನೀಡಿಲ್ಲ ಎಂದು ಬೆಂಗಳೂರಲ್ಲಿ ಯತೀಂದ್ರ ಸಿದ್ದರಾಮಯ್ಯ ಅವರು ಸ್ಪೋಟಕವಾದ ಹೇಳಿಕೆಯನ್ನು ನೀಡಿದರು.
ಬೆಂಗಳೂರು : ಸೆಪ್ಟೆಂಬರ್ 22ರಂದು ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾಗೆ ಚಾಮುಂಡಿ ಬೆಟ್ಟದಲ್ಲಿ ಚಾಲನೆ ನೀಡಲಾಗುತ್ತದೆ ಎಂದು ಬೆಂಗಳೂರಿನ ವಿಧಾನಸೌಧದಲ್ಲಿ ದಸರಾ ಪೂರ್ವಭಾವಿ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಪೂರ್ವಭಾವಿ ಸಭೆಯ ಬಳಿಕ ಮಾತನಾಡಿದ ಅವರು, ಸೆಪ್ಟೆಂಬರ್ 22ರಂದು ಬೆಳಿಗ್ಗೆ 10:10ಕ್ಕೆ ಮೈಸೂರು ದಸರಾ ಉದ್ಘಾಟನೆ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2ರ ವರೆಗೆ ಮೈಸೂರು ಉತ್ಸವ ನಡೆಯಲಿದೆ. ಅಕ್ಟೋಬರ್ 2ರಂದು ದಸರಾ ಜಂಬೂ ಸವಾರಿ ನಡೆಯಲಿದೆ ಸಂಜೆ 4:42 ರಿಂದ 5:06 ನಡುವೆ ಜಂಬೂ ಸವಾರಿಗೆ ಪುಷ್ಪಾರ್ಚನೆ ಸಲ್ಲಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಈ ಬಾರಿ 9 ದಿನದ ಬದಲು 11 ದಿನ ದಸರಾ ಆಚರಣೆಗೆ ನಿರ್ಧರಿಸಿದ್ದೇವೆ. ಅಧಿಕ ಪಂಚಮಿ ಬಂದಿರುವುದರಿಂದ 11 ದಿನಗಳ ಕಾಲ ದಸರಾ ಹಬ್ಬ ಆಚರಣೆ ಮಾಡಲಾಗುತ್ತಿದೆ. ಈ ಹಿಂದೆಯೂ 8 ಬಾರಿ 11 ದಿನ ದಸರಾ ನಡೆದಿದೆ. ರಾಜ್ಯದಲ್ಲಿ ಉತ್ತಮ ಮಳೆಯಿಂದ ರೈತರು ಸಂತಸದಿಂದ ಇದ್ದಾರೆ. ಹಾಗಾಗಿ ವಿಗ್ರಂಬಣೆಯಿಂದ ಮೈಸೂರು…
ಬೆಂಗಳೂರು : ಈ ಬಾರಿ ದಸರಾ ಹಬ್ಬವನ್ನು 11 ದಿನಗಳ ಕಾಲ ಆಚರಿಸಲು ನಿರ್ಧರಿಸಲಾಗಿದೆ ಎಂದು ದಸರಾ ಪೂರ್ವಭಾವಿ ಸಭೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಬೆಂಗಳೂರಿನ ವಿಧಾನಸೌಧದಲ್ಲಿ ದಸರಾ ಪೂರ್ವಭಾವಿ ಸಭೆಯ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. 9 ದಿನದ ಬದಲು 11 ದಿನ ದಸರಾ ಆಚರಣೆಗೆ ನಿರ್ಧರಿಸಿದ್ದೇವೆ.ಅಧಿಕ ಪಂಚಮಿ ಬಂದಿರುವುದರಿಂದ 11 ದಿನಗಳ ಕಾಲ ದಸರಾ ಹಬ್ಬ ಆಚರಣೆ ಮಾಡಲಾಗುತ್ತಿದೆ. ಈ ಹಿಂದೆಯೂ 8 ಬಾರಿ 11 ದಿನ ದಸರಾ ನಡೆದಿದೆ. ರಾಜ್ಯದಲ್ಲಿ ಉತ್ತಮ ಮಳೆಯಿಂದ ರೈತರು ಸಂತಸದಿಂದ ಇದ್ದಾರೆ. ಹಾಗಾಗಿ ವಿಗ್ರಂಬಣೆಯಿಂದ ಮೈಸೂರು ದಸರಾ ಹಬ್ಬ ಆಚರಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ದಸರಾ ವೀಕ್ಷಣೆಗೆ 10 ಲಕ್ಷಕ್ಕೂ ಹೆಚ್ಚು ಜನರು ಬರುವ ನಿರೀಕ್ಷೆ ಇದೆ. ಹಾಗಾಗಿ ನೂಕು ನುಗ್ಗುಲು ಆಗದಂತೆ ನೋಡಿಕೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ಜನಸ್ನೇಹಿಗಳಾಗಿ ಪೊಲೀಸರು ವರ್ಜಿಸಬೇಕು ಎಂದು ಈಗಾಗಲೇ ಸೂಚನೆ ನೀಡಿದ್ದೇನೆ. ವಸ್ತು ಪ್ರದರ್ಶನದ ಮಳಿಗೆ ಆರಂಭದ ದಿನವೇ ತುಂಬಬೇಕು.…
ತುಮಕೂರು : ಮುಂಬರುವ ಆಗಸ್ಟ್ ಸೆಪ್ಟೆಂಬರ್ ನಲ್ಲಿ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆ ಆಗಲಿದೆ ಎಂದು ಸಹಕಾರ ಸಚಿವ ಕೆಏನ್ ರಾಜಣ್ಣ ಹೇಳಿಕೆ ನೀಡಿದರು. ಅದರ ಬೆನ್ನಲ್ಲೇ ಇದೀಗ ಪಿಡಬ್ಲ್ಯೂಡಿ ಸಚಿವರಾದಂತಹ ಸತೀಶ್ ಜಾರಕಿಹೊಳಿ ಅವರು ಕೆಪಿಸಿಸಿ ಅಧ್ಯಕ್ಷರಾಗಬಹುದು ಎಂದು ಸ್ಪೋಟಕವಾದ ಹೇಳಿಕೆ ನೀಡಿದರು. ಮಾಧ್ಯಮಗಳೊಂದಿಗೆ ಸಚಿವ ಕೆ ಎನ್ ರಾಜಣ್ಣ ಮಾತನಾಡಿ, ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಆಗಬಹುದು. ಕೆಪಿಸಿಸಿ ಅಧ್ಯಕ್ಷರ ಸ್ಥಾನ ಬದಲಾವಣೆ ಆಗುತ್ತದೆ ಬದಲಾವಣೆ ಯಾವಾಗ ಅಂತ ಹೈಕಮಾಂಡ್ ನಿರ್ಧರಿಸುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಕೆ.ಎನ್ ರಾಜಣ್ಣ ಸ್ಫೋಟಕವಾದ ಹೇಳಿಕೆ ನೀಡಿದ್ದಾರೆ. ಇನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ ಎನ್ನುವ ವಿಚಾರವಾಗಿ, ಡಿಕೆ ಶಿವಕುಮಾರ್ ಸಿಎಂ ಆದರು ಆಗಲಿ ಪಿಎಂ ಆದರು ಆಗಲಿ. ಡಿಕೆ ಶಿವಕುಮಾರ್ ಸಿಎಂ ಆಗೋದು ಹೈಕಮಾಂಡ್ ಅವರಿಗೆ ಬಿಟ್ಟ ವಿಚಾರ. ಯಾರಿಗೆ ಯಾವ ಸ್ಥಾನ ಕೊಡುತ್ತಾರೋ ಎಲ್ಲವೂ ಕೂಡ ಹೈಕಮಾಂಡ್ ಅವರ ನಿರ್ಧಾರಕ್ಕೆ ಬಿಟ್ಟಿದ್ದು ಎಂದು ಕೆ.ಎನ್ ರಾಜಣ್ಣ…
ಮೈಸೂರು : ಸದ್ಯ ರಾಜ್ಯ ರಾಜಕಾರಣದಲ್ಲಿ ಒಂದು ಕಡೆ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗುತ್ತದೆ ಸೆಪ್ಟೆಂಬರ್ ನಲ್ಲಿ ಬದಲಾವಣೆ ಗಾಳಿ ಬೀಸಲಿದೆ ಎಂದು ಕಾಂಗ್ರೆಸ್ ನಾಯಕರೇ ಹೇಳಿಕೆ ನೀಡುತ್ತಿದ್ದು, ಮತ್ತೊಂದು ಕಡೆ ರಾಜ್ಯ ಬಿಜೆಪಿಯಲ್ಲು ಸಹ ರಾಜ್ಯಾಧ್ಯಕ್ಷರ ಬದಲಾವಣೆ ಆಗಲಿದೆ ಎಂಬ ಕೂಗು ಕೇಳಿ ಬರುತ್ತಿದೆ ಇದರ ಮಧ್ಯ ಆರ್ ಅಶೋಕ ಈ ಬಾರಿ ದಸರಾ ಹಬ್ಬಕ್ಕೆ ಹೊಸ ಸಿಎಂ ಚಾಲನೆ ನೀಡಲಿದ್ದಾರೆ ಎಂದು ಸ್ಪೋಟಕ ಭವಿಷ್ಯ ನುಡಿದರು. ಹೌದು ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್ ಅಶೋಕ್ ಸದ್ಯದಲ್ಲೇ ಸಿಎಂ ಬದಲಾವಣೆ ಆಗುತ್ತದೆ ಈ ಬಾರಿ ಸಿದ್ದರಾಮಯ್ಯ ಮೈಸೂರು ದಸರಾ ಮಾಡುವುದಿಲ್ಲ ಈ ಬಾರಿ ಹೊಸ ಸಿಎಂ ದಸರಾ ಮಾಡುತ್ತಾರೆ ಎಂದು ಆರ್ ಅಶೋಕ್ ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಸಿಎಂ ಬದಲಾವಣೆ ಆಗುತ್ತೆ ಎಂದು ಈಗಾಗಲೇ ಹೇಳಿದ್ದೇನೆ.ಈಗಾಗಲೇ ಮುಖ್ಯಮಂತ್ರಿ ಕುರ್ಚಿಗೆ ಕಚ್ಚಾಟ ನಡೆಯುತ್ತಿದೆ. ಇದು ಕೇವಲ ಟ್ರೈಲರ್ ಅಷ್ಟೇ ಮುಂದೆ ಪಿಕ್ಚರ್ ಬರುತ್ತದೆ.ಅವರ ಸಚಿವರೆ ಮಹಾ…
ತುಮಕೂರು : ತುಮಕೂರು ಜಿಲ್ಲೆಯ ಮಧುಗಿರಿಯನ್ನು ಜಿಲ್ಲೆಯಾಗಿ ಘೋಷಣೆ ಮಾಡುತ್ತೇವೆ. ನನ್ನ ಅವಧಿಯಲ್ಲಿ ಮಧುಗಿರಿಯನ್ನು ಜಿಲ್ಲೆಯಾಗಿ ಘೋಷಣೆ ಮಾಡುತ್ತೇನೆ ಎಂದು ತುಮಕೂರಿನಲ್ಲಿ ಇಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ಹೇಳಿಕೆ ನೀಡಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತುಮಕೂರು ಜಿಲ್ಲೆಯನ್ನು ಮೂರು ಜಿಲ್ಲೆಯಾಗಿ ಮಾಡಬಹುದು. ಹೇಗೆ ಧಾರವಾಡವನ್ನು ಮೂರು ಜಿಲ್ಲೆಯಾಗಿ ಮಾಡಲಾಗಿದೆಯೋ, ಅದೇ ರೀತಿ ತುಮಕೂರು ಜಿಲ್ಲೆಯನ್ನು ಮೂರು ಜಿಲ್ಲೆಯಾಗಿ ಮಾಡಬಹುದು. ತುಮಕೂರು ಮಧುಗಿರಿ ಹಾಗೂ ತಿಪಟೂರನ್ನು ಜಿಲ್ಲೆಯಾಗಿ ಮಾಡಬಹುದು ಎಂದು ಕೆ.ಎನ್ ರಾಜಣ್ಣ ಹೇಳಿಕೆ ನೀಡಿದರು. ಸಿಎಂ ಬದಲಾವಣೆ ಬಗ್ಗೆ ಕಾಲವೇ ನಿರ್ಣಯ ಮಾಡಲಿದೆ. ನನ್ನ ಪ್ರಕಾರ ಕಾಂಗ್ರೆಸ್ ನಲ್ಲಿ ಮೂರು ಪವರ್ ಸೆಂಟರ್ ಇದೆ. ನಾನು ಯಾವತ್ತೂ ಸಿಎಂ ಸಿದ್ದರಾಮಯ್ಯ ಜೊತೆಗೆ ಇರುತ್ತೇನೆ. ಇಂದು ನಾಳೆ ಮುಂದೆಯೂ ನಾನು ಸಿಎಂ ಸಿದ್ದರಾಮಯ್ಯ ಪರವಾಗಿ ಇರುತ್ತೇನೆ. ಸುರ್ಜೆವಾಲಾ ಬಂದರೆ ನನಗೆ ಯಾಕೆ ತಾಕಿತ್ತು ಮಾಡುತ್ತಾರೆ? ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ಪ್ರಶ್ನಿಸಿದರು.
ಮುಂಬೈ : ಹಿಂದಿ ಬಿಗ್ ಬಾಸ್ 13 ರ ಮೂಲಕ ಹೆಸರುವಾಸಿಯಾಗಿದ್ದ ನಟಿ ಶೆಫಾಲಿ ಜರಿವಾಲಾ ಅವರು 42 ನೇ ವಯಸ್ಸಿನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವುದು ಇಡೀ ಬಣ್ಣದ ಲೋಕವನ್ನು ದಿಗ್ಭ್ರಮೆಗೊಳಿಸಿದೆ. ಇತ್ತೀಚಿನ ದಿನಗಳಲ್ಲಿ ಹಾರ್ಟ್ ಎಟ್ಯಾಕ್ ಎನ್ನುವುದು ಚಿಕ್ಕ ವಯಸ್ಸಿನವರನ್ನೇ ಬಲಿ ಪಡೆಯುತ್ತಿರುವುದು ಆಘಾತ ತರುತ್ತಿರುವ ನಡುವೆಯೇ, ಇದೀಗ ಇನ್ನೊಂದು ಅಚ್ಚರಿಯ ಸಂಗತಿಯೂ ಹೊರಬಂದಿದೆ. ಹೌದು ನಟಿ ಶೆಫಾಲಿ ಮೃತಪಟ್ಟಿದ್ದು ಹೃದಯಘಾತದಿಂದಾನ? ಎಂದು ತೀವ್ರ ಚರ್ಚೆಗೆ ಇದೀಗ ಹುಟ್ಟು ಹಾಕಿದೆ. ಶೆಫಾಲಿ ಜರಿವಾಲಾ ಸಾವಿಗೆ ನಿಖರವಾದ ಕಾರಣ ಇನ್ನು ತಿಳಿದು ಬಂದಿಲ್ಲ ಎಂದು ಸಾವಿನ ಬಗ್ಗೆ ಮುಂಬೈ ಪೊಲೀಸ್ರು ಶಾಕಿಂಗ್ ಮಾಹಿತಿ ನೀಡಿದ್ದಾರೆ. ಅಂಧೇರಿಯ ನಿವಾಸದಲ್ಲಿ ಶೆಫಾಲಿ ಅವರ ಪತ್ತೆಯಾಗಿದೆ ಮುಂಬೈ ಪೋಲಿಸರಿಗೆ ಈ ಬಗ್ಗೆ ಮಾಹಿತಿ ಲಭ್ಯವಾಗಿತ್ತು ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಪೊಲೀಸರಿಗೆ ಮಾಹಿತಿ ತಿಳಿದು ಬಂದಿದೆ. ಶೆಫಾಲಿ ಅವರ ಮೃತದೇಹವನ್ನು ಕೂಪರ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಹಾಗಾಗಿ ನಿಗೂಢ ಸಾವಿನ ತಣಿಕೆಗೆ…
ಚಾಮರಾಜನಗರ : ಮಲೆಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಹುಲಿಗಳನ್ನು ಕೊಂದಿದ್ದ ಇಬ್ಬರು ಹಂತಕರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇದರ ಬೆನ್ನಲ್ಲೆ ಇದೀಗ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಹೌದು ಮಾದ ಅಲಿಯಾಸ್ ಮಾದುರಾಜು ನಾಗರಾಜ್ ಹಾಗು ಇದೀಗ ಕೋನಪ್ಪ ಎಂಬ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ತನ್ನ ಹಸುವನ್ನ ಕೊಂದಿದ್ದಕ್ಕೆ ವಿಷ ಹಾಕಿರುವುದಾಗಿ ಮಾದ ತಪ್ಪೊಪ್ಪಿಗೆ ನೀಡಿದ್ದಾರೆ.ಸದ್ಯ ಪೊಲೀಸರು ಮತ್ತು ಅರಣ್ಯ ಸಿಬ್ಬಂದಿಗಳಿಂದ ವಿಚಾರಣೆ ನಡೆದಿದೆ. ತನ್ನ ಹಸುವನ್ನು ಹುಲಿ ಕೊಂದಿದ್ದಕ್ಕೆ ತಾನೇ ವಿಷ ಹಾಕಿ ಹುಲಿಯನ್ನು ಕೊಂದಿರುವುದಾಗಿ ಮಾದನ ತಂದೆ ಶಿವಣ್ಣ ಹೇಳಿಕೆ ನೀಡಿದ್ದರು. ಪುತ್ರನನ್ನು ರಕ್ಷಿಸುವ ಸಲುವಾಗಿ ತಾನು ಹುಲಿ ಸಾಯಿಸಿದ್ದಾಗಿ ಹೇಳಿದ್ದರು. ಆದರೆ ಅನುಮಾನಗೊಂಡು ತೀವ್ರ ವಿಚಾರಣೆ ನಡೆಸಿದಾಗ ಶಿವಣ್ಣನ ಪುತ್ರ ಮಾದ ಅಲಿಯಾಸ್ ಮಾದುರಾಜು ಐದು ಹುಲಿಗಳ ಸಾವಿಗೆ ತಾನು ಕಾರಣ. ತಾನೇ ವಿಷಹಾಕಿ ಕೊಂದಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ ಎನ್ನಲಾಗಿದೆ.
ಬೆಂಗಳೂರು : ಸಂವಿಧಾನದ ವಿರುದ್ಧವಾಗಿ ಹೇಳಿಕೆ ನೀಡಿರುವ RSS ನ ದತ್ತಾತ್ರೇಯ ಹೊಸಬಾಳೆ ಅವರ ವಿರುದ್ಧ ಸಮಾಜ ಕಲ್ಯಾಣ ಇಲಾಖೆಯ ಸಚಿವ HC ಮಹದೇವಪ್ಪ ಕಿಡಿ ಕಾರಿದ್ದು RSS ತನ್ನ ದೇಶದ್ರೋಹಿ ನಡವಳಿಕೆಗೆ ಕಡಿವಾಣ ಹಾಕಲಿ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್ಸಿ ಮಹದೇವಪ್ಪ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಸಾಮಾಜಿಕ ಜಾಲತಾಣ X ನಲ್ಲಿ ಈ ಕುರಿತು ಹೇಳಿರುವ ಅವರು, ಜಾತಿ ಮತ್ತು ಧರ್ಮದ ಬೇಧ ನೋಡದೆ ಎಲ್ಲರನ್ನು ಸಮಾನರಾಗಿ ಕಾಣುವುದು. ಸಮಾಜವಾದ ಎಂದರೆ ಸಾಮಾಜಿಕ ಮತ್ತು ಆರ್ಥಿಕವಾಗಿ ಎಲ್ಲರಿಗೂ ನ್ಯಾಯವಾದಗಿಸುವುದು ಎಂದರ್ಥ. ನಮ್ಮ ಸಂವಿಧಾನದ ಮೂಲ ಆಶಯಗಳಲ್ಲಿ ಹೇಳಿದ ಸಮಾನತೆ ಮತ್ತು ನ್ಯಾಯಾಧ ಅಂಶವು ಅತ್ಯಂತ ಮಹತ್ವದವಾಗಿರುವಂತದ್ದು ಹಾಗೂ ಒಂದು ದೇಶದ ಉಳಿವಿಗೆ ಬೇಕಾಗಿರುವಂತಹ ಸಂಗತಿಗಳು. ಹೀಗಿರುವಾಗ ಇಂತಹ ಮಹತ್ವದ ಅಂಶಗಳನ್ನು ತೆಗೆದು ಹಾಕಬೇಕೆಂದು ಹೇಳುತ್ತಿರುವ ಆರ್ ಎಸ್ ಎಸ್ ದತ್ತಾತ್ರೇಯ ಹೊಸ ಬಾಳೆಯವರು ಜಾತ್ಯತೀತತೆ ಹಾಗೂ ಸಮಾಜವಾದದ ಎಂಬ ಪದವನ್ನು ಅರ್ಥ ಮಾಡಿಕೊಳ್ಳುವುದೇ ಸಂವಿಧಾನ ವಿರೋಧಿಯಾಗಿ ಮಾತನಾಡುತ್ತಿರುವುದು…












