Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಮೈಸೂರು : ರಾಜ್ಯದಲ್ಲಿ ಒಂದಾದ ಮೇಲೊಂದು ಹೃದಯಘಾತ ಪ್ರಕರಣಗಳು ದಾಖಲಾಗುತ್ತಿವೆ. ಕಳೆದ ಒಂದುವರೆ ತಿಂಗಳಲ್ಲಿ ಹಾಸನ ಜಿಲ್ಲೆಯಲ್ಲಿ ಇದುವರೆಗೂ ಒಟ್ಟು ಹೃದಯಾಘಾತಕ್ಕೆ 31 ಜನರು ಬಲಿಯಾಗಿದ್ದಾರೆ.ಇಂದು ಬೆಳಿಗ್ಗೆ ತಾನೇ ಇಬ್ಬರೂ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದ್ದು ಇದೀಗ ಮೈಸೂರಿನಲ್ಲಿ ಹೃದಯಾಘಾತಕ್ಕೆ ಇಂಜಿನಿಯರ್ ಒಬ್ಬರು ಸಾವನಪ್ಪಿದ್ದಾರೆ. ಹೌದು ಜಿಮ್ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಹಾಸನ ಮೂಲದ ಇಂಜಿನಿಯರ್ ಒಬ್ಬರು ಸಾವನಪ್ಪಿದ್ದಾರೆ. ಹಾಸನದ ಇಂಜಿನಿಯರ್ ಶ್ರೀಧರ್ ಕೊನೆಯುಸುರಳಿದಿದ್ದಾರೆ ಶ್ರೀಧರ್ (51) ಎನ್ನುವವರು ಸಾವನಪ್ಪಿದ್ದಾರೆ. 10 ದಿನಗಳ ಹಿಂದೆ ವ್ಯಾಯಾಮ ಮಾಡುವಾಗ ಈ ಒಂದು ಘಟನೆ ನಡೆದಿದೆ. ವಿಜಯನಗರ ಬಡಾವಣೆಯ ಜಿಮ್ ನಲ್ಲಿ ವ್ಯಾಯಾಮ ಮಾಡುತ್ತಿರುವಾಗಲೇ ಶ್ರೀಧರ ಸಾವನಪ್ಪಿದ್ದಾರೆ.

Read More

ಕೋಲಾರ : ಕೋಲಾರದಲ್ಲಿ ಘೋರ ಘಟನೆ ನಡೆದಿದ್ದು, ಜಿಲ್ಲಾಸ್ಪತ್ರೆಯ ನೌಕರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ENT ವಿಭಾಗದ ಕೊಠಡಿಯಲ್ಲಿ ಹರೀಶ್ ಬಾಬು (33) ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಮೃತ ಹರೀಶ್ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ನಾಯಕರಹಳ್ಳಿ ನಿವಾಸಿ ಎಂದು ತಿಳಿದುಬಂದಿದೆ. ಡೇಟಾ ಎಂಟ್ರಿ ಆಪರೇಟರ್ ಆಗಿ ಹರೀಶ್ ಬಾಬು ಕೆಲಸ ನಿರ್ವಹಿಸುತ್ತಿದ್ದರು. ಆತ್ಮಹತ್ಯೆ ಕುರಿತು ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಬೆಂಗಳೂರಲ್ಲಿ ನಿನ್ನೆ ತಾನೇ ಮನೆಯ ಸದಸ್ಯರಿಗೆ ಮಾಹಿತಿ ನೀಡದೆ ಮನೆಯ ಬಾಗಿಲಿಗೆ ಜಾತಿಗಣತಿ ನಡೆಸದೆ ಕೇವಲ ಸ್ಟಿಕರ್ ಅಂಟಿಸಿ ತೆರಳುತ್ತಿದ್ದ ಬಿಬಿಎಂಪಿ ಸಿಬ್ಬಂದಿಯ ಕಳ್ಳಾಟ ಬಯಲಾಗಿತ್ತು. ಇದೀಗ ಒಳ ಮೀಸಲಾತಿ ಸರ್ವೆ ವೇಳೆ ಬಿಬಿಎಂಪಿ ಸಿಬ್ಬಂದಿ ಗೂಂಡಾಗಿರಿ ನಡೆಸಿದ್ದಾರೆ. ಸರ್ವೆ ಪ್ರಶ್ನಿಸಿದ್ದಕ್ಕೆ ಮನೆ ಮಾಲೀಕನಿಗೆ ಸಿಬ್ಬಂದಿಗಳು ಹಲ್ಲೆ ಮಾಡಲು ಯತ್ನಿಸಿದ್ದಾರೆ. ಹೌದು ಬೆಂಗಳೂರಿನ ಸಾರ್ವಭೌಮ ನಗರದಲ್ಲಿ ನಿನ್ನೆ ಬೆಳಿಗ್ಗೆ ಈ ಒಂದು ಘಟನೆ ನಡೆದಿದೆ. ನಂದೀಶ್ ಎಂಬಾತನ ಮೇಲೆ ಹಲ್ಲೆಗೆ ಪಾಲಿಕೆ ಸಿಬ್ಬಂದಿಗಳು ಯತ್ನಿಸಿದ್ದಾರೆ. ಬಿಬಿಎಂಪಿ ಸಿಬ್ಬಂದಿಯ ಗೂಂಡಾ ವರ್ತನೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮನೆ ಮಾಲೀಕರ ಮಾಹಿತಿ ಪಡೆಯದೆ ಸಿಬ್ಬಂದಿಗಳು ಸ್ಟಿಕರ್ ಆಂಟಿಸಿದ್ದಾರೆ. ಇದನ್ನು ಪ್ರಶ್ನಿಸಿದ್ದಕ್ಕೆ ಮನೆಯ ಮಾಲೀಕನ ಮೇಲೆ ಸಿಬ್ಬಂದಿಗಳು ಹಲ್ಲೆಗೆ ಯತ್ನಿಸಿದ್ದಾರೆ. ಸರಿಯಾಗಿ ಸರ್ವೆ ಮಾಡದೆ ಹಲ್ಲೆಗೆ ಮುಂದಾದ ಸಿಬ್ಬಂದಿ ನಡೆಗೆ ಜನರು ಆಕ್ರೋಶ ಹೊರಹಾಕಿದ್ದಾರೆ. ಇತ್ತ ದೂರು ದಾಖಲಿಸುವ ಬದಲು ಪೊಲೀಸರು ರಾಜಿಗೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

Read More

ಹಾಸನ : ಹಾಸನದಲ್ಲಿ ಹೃದಯಾಘಾತದಿಂದ ಸಾವನಪುತ್ತಿರುವವರ ಸಂಖ್ಯೆ ಮುಂದುವರಿದಿದ್ದು ಇದೀಗ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ 72 ವರ್ಷದ ವೃದ್ದೆ ಒಬ್ಬರು ಹೃದಯಘಾತಕ್ಕೆ ಬಲಿಯಾಗಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಅರೆಕೆರೆ ಗ್ರಾಮದ ದೇವಮ್ಮ (72)+ಎನ್ನುವ ವೃದ್ದೆ ಸಾವನಪ್ಪಿದ್ದಾರೆ. ಎದೆನೋವು ಹಿನ್ನೆಲೆಯಲ್ಲಿ ಬೆಂಗಳೂರಿನ ಆಸ್ಪತ್ರೆಗೆ ಸಂಬಂಧಿಕರು ತಕ್ಷಣ ಕರೆದುಕೊಂಡು ಹೋಗಿದ್ದರು. ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ವಾಪಸ್ ಆಗುವ ವೇಳೆ ದೇವಮ್ಮ ಸಾವನ್ನಪ್ಪಿದ್ದಾರೆ. ಬೆಂಗಳೂರಿನಿಂದ ವಾಪಸ್ ಆಗುವಾಗ ಮಾರ್ಗ ಮಧ್ಯೆಯೇ ದೇವಮ್ಮಾ ಸಾವನಪ್ಪಿದ್ದಾರೆ. ಇದುವರೆಗೂ ಜಿಲ್ಲೆಯಲ್ಲಿ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ಗ್ರಾಪಂ ಸದಸ್ಯ ಬಲಿ! ಇನ್ನು ಹಾಸನದಲ್ಲಿ ಹೃದಯಾಘಾತದಿಂದ ಸಾವು ಪ್ರಕರಣ ಮುಂದುವರೆದಿದ್ದು, ಗ್ರಾಮ ಪಂಚಾಯಿತಿ ಸದಸ್ಯ ಸಂತೋಷ್ ಕಾರಗೋಡು (41) ಎನ್ನುವವರು ಸಾವನ್ನಪ್ಪಿದ್ದಾರೆ. ಆಲೂರು ತಾಲೂಕಿನ ಕಲ್ಲಾರಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ರಾತ್ರಿ ಮಲಗಿದ್ದಲ್ಲಿಯೇ ಸಂತೋಷಕ್ಕೆ ಹೃದಯಘಾತ ಸಂಭವಿಸಿದೆ. ಬೆಳಿಗ್ಗೆ ಸಂತೋಷ ನನ್ನ ಎಬ್ಬಿಸಲು ಹೋಗಿದ್ದಾಗ ಕುಟುಂಬಸ್ಥರಿಗೆ ಈ ಕುರಿತು ತಿಳಿದಿದೆ ಕೂಡಲೇ ಅವರು…

Read More

ಬೀದರ್ : ಬೀದರ್ನಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಬಾವಿಗೆ ಗೂಡ್ಸ್ ವಾಹನ ಬಿದ್ದು ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಬೀದರ್ ತಾಲೂಕಿನ ಘೋಡಂಪಳ್ಳಿ ಬಳಿ ನಿನ್ನೆ ರಾತ್ರಿ ಈ ಒಂದು ಭೀಕರ ಬಗಾದ ಸಂಭವಿಸಿದೆ ಘೋಡಂಪಳ್ಳಿಯ ಚಾಲಕ ಲಕ್ಷ್ಮಿಕಾಂತ್ ಮತ್ತು ರವಿ ಮೃತ ದುರ್ದೇವಿಗಳು ಎಂದು ತಿಳಿದುಬಂದಿದೆ. ಘೋಡಂಪಳ್ಳಿಯ ಅರ್ಜುನ್, ಪ್ರಜ್ವಲ್, ಪವನ್ ಮತ್ತು ಸಂಗಮೇಶ್ ಗೆ ಗಂಭೀರವಾದ ಗಾಯಗಳಾಗಿವೆ. ಗಾಯಾಳುಗಳಿಗೆ ಬೀದರ್ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅತಿ ವೇಗದ ಚಾಲನೆ ಅಪಘಾತಕ್ಕೆ ಕಾರಣ ಎನ್ನಲಾಗಿದೆ ಘಟನೆ ಕುರಿತಂತೆ ಗಾಂಧೀ ಗಂಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಬೆಂಗಳೂರಲ್ಲಿ ನಿವೃತ್ತ ಡಿಜಿ ಐಜಿಪಿ ಓಂ ಪ್ರಕಾಶ್ ಪುತ್ರಿ ಗಲಾಟೆ ಮಾಡಿದ್ದಾರೆ. ಓಂ ಪ್ರಕಾಶ್ ಪತ್ರಿ ಕೃತಿ ಗಲಾಟೆ ಮಾಡಿದ್ದಾರೆ. ನಂದಿನಿ ಬೂತ್ ಬಳಿ, ಗಲಾಟೆ ಮಾಡಿ ರಂಪಾಟ ಮಾಡಿದ್ದಾರೆ. ಬೂತ್ ನಲ್ಲಿರುವ ಎಲ್ಲಾ ಬಾಟಲ್ ಗಳನ್ನು ಹೊಡೆದು ಹಾಕಿದ್ದಾರೆ. ಎಚ್ಎಸ್ಆರ್ ಲೇಔಟ್ ಠಾಣಾ ವ್ಯಾಪ್ತಿಯಲ್ಲಿರುವ ಮನೆ ಸಮೀಪದ ನಂದಿನಿ ಬೂತ್ ಬಳಿ ಕೃತಿ ಗಲಾಟೆ ಮಾಡಿದ್ದಾರೆ. ಜೂನ್ 30ಕ್ಕೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಕೃತಿ ವರ್ತನೆಗೆ ಬೇಸತ್ತು ಕೂಡಲೇ ಮಾಲೀಕ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಕೃತಿಯನ್ನು ಕರೆದೊಯ್ದಿದ್ದಾರೆ. ಗುರು ನೀಡಿದರು ಕೂಡ ಪೊಲೀಸರು ಯಾವುದೇ ದೂರು ಸ್ವೀಕರಿಸಿಲ್ಲ ಎಂದು ನಂದಿನಿ ಬೂತ್ ಅಂಗಡಿ ಮಾಲೀಕ ತಿಳಿಸಿದ್ದಾರೆ. ಮನೆಯಲ್ಲಿನ ಕೆಲ ಪರಿಸ್ಥಿತಿಗೆ ಕೃತಿ ಈ ರೀತಿ ಮಾಡುತ್ತಿದ್ದಾಳೆ. ಕೃತಿ ವರ್ತನೆಗೆ ಬೇಸತ್ತು ಅಂಗಡಿ ಮಾಲೀಕ ರೋಸಿ ಹೋಗಿದ್ದಾನೆ. ಕೊಲೆ ಕೇಸ್ನಲ್ಲಿ ಓಂ ಪ್ರಕಾಶ್ ಪತ್ನಿ ಜೈಲು ಪಾಲಾಗಿದ್ದಾರೆ. ಓಂ ಪ್ರಕಾಶ್ ಕೊಲೆಯ ಬಳಿಕ…

Read More

ಕಲಬುರ್ಗಿ : ಕಳೆದ ಒಂದುವರೆ ತಿಂಗಳಿನಿಂದ ಹಾಸನ ಜಿಲ್ಲೆ ಒಂದರಲ್ಲಿ ಹೃದಯಘಾತಕ್ಕೆ 27 ಜನರು ಸಾವನ್ನಪ್ಪಿದ್ದಾರೆ ಕ್ರಮೇಣ ರಾಜ್ಯದಲ್ಲಿ ಹೃದಯಾಘಾತದಿಂದ ಸಾವನಪುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು ಇದೀಗ ಹಾಸನ ಜಿಲ್ಲೆ ಅಷ್ಟೇ ಅಲ್ಲದೆ ಕಲ್ಬುರ್ಗಿ ಮತ್ತು ಯಾದಗಿರಿಯಲ್ಲೂ ಇಬ್ಬರು ಹೃದಯಘಾತಕ್ಕೆ ಬಲಿಯಾಗಿದ್ದಾರೆ. ಹೌದು ಕಲ್ಬುರ್ಗಿ ಜಿಲ್ಲೆಯಲ್ಲಿ ಹೃದಯಘಾತಕ್ಕೆ ರೈತರೊಬ್ಬರು ಬಲಿಯಾಗಿದ್ದಾರೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಹೃದಯಾಘಾತದಿಂದ ರೈತ ಸಾವನಪ್ಪಿದ್ದಾರೆ. ಆಳಂದ್ ತಾಲೂಕಿನ ಲಿಂಗನವಾಡಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಸಂತೋಷ್ ಇಂಡಿ (35) ಸಾವನ್ನಪ್ಪಿದ್ದಾರೆ. ಜಮೀನಿನಲ್ಲಿ ಕೆಲಸ ಮಾಡುವಾಗ ಸಂತೋಷ್ ಕುಸಿದು ಬಿದ್ದಿದ್ದಾರೆ. ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆ ಸಂತೋಷ ಸಾವನ್ನಪ್ಪಿದ್ದಾರೆ. ಆಸ್ಪತ್ರೆಗೆ ಹೋದಾಗ ವೈದ್ಯರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ. ಇನ್ನು ಯಾದಗಿರಿ ಜಿಲ್ಲೆಯಲ್ಲಿ ಹೃದಯಘಾತಕ್ಕೆ ಮತ್ತೋರ್ವ ವ್ಯಕ್ತಿ ಬಲಿಯಾಗಿದ್ದಾನೆ. ಕೆಂಭಾವಿ ನಿವಾಸಿ ತಮ್ಮಣ್ಣ (50) ಇಂದು ಹೃದಯಘಾತದಿಂದ ಸಾವನ್ನಪ್ಪಿದ್ದಾರೆ.

Read More

ಹಾಸನ : ಹಾಸನದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಇದೀಗ ಹಾಸನ ಜಿಲ್ಲೆಯಲ್ಲಿ ಗ್ರಾಮ ಪಂಚಾಯತಿ ಸದಸ್ಯರು ಒಬ್ಬರಿಗೆ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೌದು ಹಾಸನದಲ್ಲಿ ಹೃದಯಾಘಾತದಿಂದ ಸಾವು ಪ್ರಕರಣ ಮುಂದುವರೆದಿದ್ದು, ಗ್ರಾಮ ಪಂಚಾಯಿತಿ ಸದಸ್ಯ ಸಂತೋಷ್ ಕಾರಗೋಡು (41) ಎನ್ನುವವರು ಸಾವನ್ನಪ್ಪಿದ್ದಾರೆ. ಆಲೂರು ತಾಲೂಕಿನ ಕಲ್ಲಾರಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ರಾತ್ರಿ ಮಲಗಿದ್ದಲ್ಲಿಯೇ ಸಂತೋಷಕ್ಕೆ ಹೃದಯಘಾತ ಸಂಭವಿಸಿದೆ. ಬೆಳಿಗ್ಗೆ ಸಂತೋಷ ನಾನು ಎಬ್ಬಿಸಲು ಹೋಗಿದ್ದಾಗ ಕುಟುಂಬಸ್ಥರಿಗೆ ಈ ಕುರಿತು ತಿಳಿದಿದೆ ಕೂಡಲೇ ಅವರು ಹಾಸನದ ಖಾಸಗಿ ಆಸ್ಪತ್ರೆಗೆ ಕರೆತಂದಿದ್ದಾರೆ ಅಷ್ಟರಲ್ಲೇ ಸಂತೋಷ ಸಾವನಪ್ಪಿದ್ದಾರೆ ಹಿಂದೆ ಹೃದಯಘಾತ ಉಂಟಾಗಿ ಸಂತೋಷ ಚಿಕಿತ್ಸೆ ಪಡೆದಿದ್ದರು ಎಂದು ತಿಳಿದುಬಂದಿದೆ.

Read More

ಚಾಮರಾಜನಗರ : ಪ್ರೀತಿಸಿದ ಹುಡುಗಿ ಕೈ ಕೊಟ್ಟಿದ್ದರಿಂದ ಮನನೊಂದು ನನ್ನ ಸಾವಿಗೆ ಆಕೆಯೇ ಕಾರಣ ಎಂದು ಲೈವ್ ವಿಡಿಯೋ ಮಾಡಿ ಹರಿಬಿಟ್ಟು, ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬನ್ನಿತಾಳಪುರದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವಕನನ್ನು ಸಂತೋಷ್ (24) ಎಂದು ತಿಳಿದುಬಂದಿದೆ. ಸಂತೋಷ್ ಹಾಗೂ ಸಾಗಡೆ ಗ್ರಾಮದ ಯುವತಿಯು ಪರಸ್ಪರ ಪ್ರೀತಿಸುತ್ತಿದ್ದರು. ಆಕೆಯು ಬೇರೊಬ್ಬ ಯುವಕನಿಗೆ ಮೆಸೇಜ್ ಮಾಡಿದ್ದನ್ನು ಸಂತೋಷ್ ಪ್ರಶ್ನಿಸಿದ್ದ. ಈ ಕಾರಣಕ್ಕೆ ಯುವತಿಯು ಸಂತೋಷ್‌ನಿಂದ ಅಂತರ ಕಾಯ್ದುಕೊಂಡಿದ್ದಳು ಎನ್ನಲಾಗಿದೆ. ಇದರಿಂದ ಮನನೊಂದ ಸಂತೋಷ್, ನನ್ನ ಸಾವಿಗೆ ಆಕೆಯೇ ಕಾರಣ. ಅವಳನ್ನು ಬಿಟ್ಟು ಇನ್ಯಾರು ಕಾರಣರಲ್ಲ ಎಂದು ಆತ್ಮಹತ್ಯೆಗೂ ಮುನ್ನ ವೀಡಿಯೋ ಮಾಡಿ ವಾಟ್ಸಪ್ ಸ್ಟೇಟಸ್‌ಗೆ ತಮ್ಮಿಬ್ಬರ ಫೋಟೋ ಹಾಕಿದ್ದ. ಬಳಿಕ ಸಂತೋಷ್, ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಘಟನಾ ಸಂಬಂಧ ತೆರಕಣಾಂಬಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read More

ಹಾಸನ : ಹಾಸನದಲ್ಲಿ ಮದುವೆಯಾದ ಆರು ತಿಂಗಳಲ್ಲಿ ಗೃಹಿಣಿ ಒಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆಯ ಚೆನ್ನಗಿರಿ ತಾಲೂಕಿನ ಸೋಮಲಾಪುರ ಗ್ರಾಮದ ವಿದ್ಯಾ (24)ಇದೀಗ ಸಾವನ್ನಪ್ಪಿದ್ದಾರೆ. ದಾವಣಗೆರೆ ಜಿಲ್ಲೆಯಯವರಾದ ವಿದ್ಯಾ ಹಾಸನದ ಸೋಮಲಾಪುರದ ಶಿವು ಜೊತೆ ಮದುವೆಯಾಗಿದ್ದರು. ಬೆಂಗಳೂರಿನ ಶಂಕರಿಪುರಂನಲ್ಲಿ ಶಿವು ಪೊಲೀಸ್ ಆಗಿದ್ದರು. ಜೂನ್ 30ರಂದು ವಿದ್ಯಾ ಕಾಣೆಯಾಗಿದ್ದರು. ನಂತರ ಹಾಸನ ಜಿಲ್ಲೆಯ ಅರಸೀಕೆರೆ ರೈಲ್ವೆ ಹಳಿ ಸಮೀಪ ವಿದ್ಯಾ ಶವವಾಗಿ ಪತ್ತೆಯಾಗಿದ್ದಾರೆ. ಜೂನ್ 30 ರಂದು ಅರಸೀಕೆ ನಗರದ ರೈಲ್ವೆ ಟ್ರ್ಯಾಕ್ ಬಳಿ ವಿದ್ಯಾ ಮೃತದೇಹ ಪತ್ತೆಯಾಗಿದೆ. ಪತಿ ಕುಟುಂಬದವರಿಂದಲೇ ಮಗಳ ಕೊಲೆಯಾಗಿದೆ ಎಂದು ವಿದ್ಯಾ ಕುಟುಂಬಸ್ಥರು ಆರೋಪಿಸಿದ್ದಾರೆ. ಇದೀಗ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Read More