Subscribe to Updates
Get the latest creative news from FooBar about art, design and business.
Author: kannadanewsnow05
ನವದೆಹಲಿ : ಪಹಲ್ಗಾಮ್ ನಲ್ಲಿ ಭೀಕರವಾದ ಉಗ್ರರ ಗುಂಡಿನ ದಾಳಿಗೆ ಸಂಬಂಧಪಟ್ಟಂತೆ ಇದೀಗ ಕೇಂದ್ರ ಸಚಿವ ಅಮಿತ್ ಶಾ ಪಾಕಿಸ್ತಾನಕ್ಕೆ ಮತ್ತೊಂದು ಶಾಕ್ ನೀಡಿದ್ದಾರೆ. ಎಲ್ಲಾ ರಾಜ್ಯಗಳಲ್ಲಿ ಪಾಕಿಸ್ತಾನ ಪ್ರಜೆಗಳನ್ನು ಗುರುತಿಸಿ ವಾಪಾಸ್ ಕಳುಹಿಸಿ ಎಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚನೆ ನೀಡಿದ್ದಾರೆ. ಹೌದು ಕೇಂದ್ರ ಗೃಹ ಸಚಿವ ಅಮಿತ್ ಶಾ ಇದೀಗ ದೇಶದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಸೂಚನೆ ನೀಡಿದ್ದು, ನಿಮ್ಮ ರಾಜ್ಯಗಳಲ್ಲಿ ಯಾವ ಪಾಕಿಸ್ತಾನ ಪ್ರಜೆಗಳು ಇದ್ದಾರೋ ಅವರೆಲ್ಲ ಗುರುತಿಸಿ ಯಾರನ್ನು ಉಳಿಸಬಾರದು ಎಲ್ಲರನ್ನು ವಾಪಸ್ ಕಳುಹಿಸಿ ಎಂದು ಖಡಕ್ ಸೂಚನೆ ನೀಡಿದ್ದಾರೆ.
ಬೆಂಗಳೂರು : ಇಸ್ರೋದ ಮಾಜಿ ಅಧ್ಯಕ್ಷರಾಗಿದ್ದ ಕೆ.ಕಸ್ತೂರಿ ರಂಗನ್ ಅವರು ಇಂದು ಬೆಂಗಳೂರಿನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.ಬೆಂಗಳೂರಿನಲ್ಲಿ ನಿವಾಸದಲ್ಲಿ ಕೆ. ಕಸ್ತೂರಿ ರಂಗನ್ (84) ನಿಧನರಾಗಿದ್ದಾರೆ 1994 ರಿಂದ 2003 ರ ವರೆಗೆ ಇಸ್ರೋ ಅಧ್ಯಕ್ಷರಾಗಿದ್ದರು. ಭಾರತೀಯ ಬಾಹ್ಯಾಕಾಶ ವಿಜ್ಞಾನಿ ಕೃಷ್ಣಸ್ವಾಮಿ ಕಸ್ತೂರಿರಂಗನ್ ಇದೀಗ ನಿಧನರಾಗಿದ್ದಾರೆ. ಇಸ್ರೋ ಹೇಳಿಕೆಯ ಪ್ರಕಾರ, ಕಸ್ತೂರಿರಂಗನ್ ಅವರು ಬೆಳಿಗ್ಗೆ 10.43 ಕ್ಕೆ ನಿಧನರಾದರು. ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ ರಾಮನ್ ಸಂಶೋಧನಾ ಸಂಸ್ಥೆಯಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಇರಿಸಲಾಗುವುದು.ಡಾ. ಕೆ. ಕಸ್ತೂರಿರಂಗನ್ ಅವರು ಆಗಸ್ಟ್ 27, 2003 ರಂದು ತಮ್ಮ ಹುದ್ದೆಯನ್ನು ತ್ಯಜಿಸುವ ಮೊದಲು, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ, ಬಾಹ್ಯಾಕಾಶ ಆಯೋಗದ ಅಧ್ಯಕ್ಷರು ಮತ್ತು ಭಾರತ ಸರ್ಕಾರದ ಬಾಹ್ಯಾಕಾಶ ಇಲಾಖೆ ಕಾರ್ಯದರ್ಶಿಯಾಗಿ 9 ವರ್ಷಗಳಿಗೂ ಹೆಚ್ಚು ಕಾಲ ಭಾರತೀಯ ಬಾಹ್ಯಾಕಾಶ ಕಾರ್ಯಕ್ರಮವನ್ನು ಅದ್ಭುತವಾಗಿ ಮುನ್ನಡೆಸಿದ್ದರು.
ಬೆಂಗಳೂರು : ಪಹಲ್ಗಾಮ್ನಲ್ಲಿ ಉಗ್ರರು ನಡೆಸಿದ ಭೀಕರ ದಾಳಿಯಲ್ಲಿ ಇಬ್ಬರು ಕನ್ನಡಿಗರು ಸೇರಿ 30ಕ್ಕೂ ಅಧಿಕ ಪ್ರವಾಸಿಗರು ಬಲಿಯಾಗಿದ್ದಾರೆ. ಇದರ ಬೆನ್ನಲ್ಲೆ ಕರ್ನಾಟಕದಲ್ಲಿ ರಾಜ್ಯದಾದ್ಯಂತ ಸರ್ಕಾರ ಹೈ ಅಲರ್ಟ್ ಘೋಷಿಸಿದೆ. ಈ ಕುರಿತು ಗೃಹ ಸಚಿವ ಜಿ.ಪರಮೇಶ್ವರ್ ಮಾತನಾಡಿ, ಕಾಶ್ಮೀರದಲ್ಲಿ ಸಂಭವಿಸಿದ ದಾಳಿಯಲ್ಲಿ ಬೃಹತ್ ಗುಪ್ತಚರ ವೈಫಲ್ಯ ನಡೆದಿರುವುದು ಸ್ಪಷ್ಟವಾಗಿದೆ. ಉಗ್ರರು ಭಾರೀ ಶಸ್ತ್ರಾಸ್ತ್ರಗಳೊಂದಿಗೆ ಮುನ್ನಡೆದು ಬಂದಿರುವುದು ಈ ವೈಫಲ್ಯವನ್ನು ತೋರುತ್ತದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಜಾಗೃತತೆಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದರು. ಪ್ರಮುಖ ವಿಮಾನ ನಿಲ್ದಾಣಗಳು, ರೈಲು ನಿಲ್ದಾಣಗಳು, ದೇವಸ್ಥಾನಗಳು, ಮಾರುಕಟ್ಟೆಗಳು ಮತ್ತು ಜನಸಂದಣಿಯಿರುವ ಸ್ಥಳಗಳಲ್ಲಿ ಭದ್ರತೆ ಕಠಿಣಗೊಳಿಸಲಾಗಿದೆ. ರಾಜ್ಯದಲ್ಲಿ ಎಚ್ಚರಿಕೆಯ ವಾತಾವರಣ ನಿರ್ಮಾಣವಾಗಿದೆ. ಯಾವುದೇ ತುರ್ತು ಪರಿಸ್ಥಿತಿಗೆ ತಯಾರಾಗಿರಬೇಕು ಎಂದು ಡಿಜಿಪಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.
ರಾಯಚೂರು : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ಗರ್ಭಿಣಿ ಮಹಿಳೆಯನ್ನು ಬರ್ಬರವಾಗಿ ಕೊಂದು ಬಳಿಕ ನೇಣು ಹಾಕಲಾಗಿ ಎಂದು ಶಂಕಿಸಲಾಗಿದ್ದು, ಗಂಡ ಸೇರಿ ಅವರ ಮನೆಯ 6 ಜನರ ವಿರುದ್ಧ FIR ದಾಖಲಾಗಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಅನುಪಮ (20) ಎಂದು ಗುರುತಿಸಲಾಗಿದ್ದು, ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಚೆಂಗಡಿ ಗ್ರಾಮದ ಬಸವರಾಜ ಒಕ್ಕಲಿಗ ಅವರ ಪುತ್ರಿ ಅನುಪಮಾ ಮತ್ತು ಸಿಂಧನೂರು ತಾಲ್ಲೂಕಿನ ಬೂದಿಹಾಳ ಗ್ರಾಮದ ನಾಗರಾಜ ಚನ್ನಬಸಪ್ಪ ಛಲವಾದಿ ಅವರು ಇನ್ಸ್ಟಾಗ್ರಾಮ್ನಲ್ಲಿ ಪರಿಚಯರಾಗಿ ಪರಸ್ಪರ ಪ್ರೀತಿಸುತ್ತಿದ್ದರು. ನಂತರ ನಾಗರಾಜ್ ಹಾಗು ಅನುಪಮಾ ಓಡಿ ಹೋಗಿ ಮದುವೆಯಾಗಿ ಗಂಡನ ಸ್ವಗ್ರಾಮ ಬೂದಿಹಾಳದಲ್ಲಿಯೇ ಅನ್ಯೊನ್ಯವಾಗಿದ್ದರು. ನಂತರ ಹುಡುಗಿಯ ಜಾತಿ ಬೇರೆಯಾಗಿದ್ದರಿಂದ ಹುಡುಗನ ಕುಟುಂಬಸ್ಥರು ಕಿರುಕುಳ ನೀಡಿದ್ದಾರೆ. ಇದರಿಂದ ಮನನೊಂದು ಬುಧವಾರ ರಾತ್ರಿ ಅನುಪಮಾ ಗಂಡನ ಮನೆಯಲ್ಲಿಯೇ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಕಂಡು ಬಂದಿದ್ದಾಳೆ. ತಕ್ಷಣವೇ ಸಾರ್ವಜನಿಕ ಆಸ್ಪತ್ರೆಗೆ ಕರೆ ತಂದಾಗ ಮೃತಪಟ್ಟಿರುವದನ್ನು ವೈದ್ಯರು ಖಚಿತ…
ಬೆಂಗಳೂರು : ಡಿಕೆ ಸಹೋದರಿ ಎಂದು ಹೇಳಿ ವಂಚನೆ ಎಸಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಐಶ್ವರ್ಯ ಗೌಡಳನ್ನು 14 ದಿನ ಜಾರಿ ನಿರ್ದೇಶನಾಲಯ (ED) ಕಸ್ಟಡಿಗೆ ನೀಡಿ ಇದೀಗ ಕೋರ್ಟ್ ಆದೇಶ ಹೊರಡಿಸಿದೆ. ಹೌದು 9.82 ಕೋಟಿ ಚಿನ್ನಾಭರಣ ವಂಚನೆ ಪ್ರಕರಣದಲ್ಲಿ ಇ.ಡಿ ಅಧಿಕಾರಿಗಳು ನಿನ್ನೆ ಬೆಳಗ್ಗೆಯಿಂದ ಸಂಜೆವರೆಗೂ ತಪಾಸಣೆ ನಡೆಸಿದರು. ನಡೆಸಿದರು. ಸಿಸಿಟಿವಿ ಕ್ಯಾಮರಾ ದೃಶ್ಯಾವಳಿ, ಫೋನ್ ಕರೆ ವಿವರಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಪ್ರಕರಣದ ಪ್ರಮುಖ ಆರೋಪಿ ಐಶ್ವರ್ಯ ಗೌಡ ಅವರ ಆರ್.ಎಂ.ಸಿ. ಯಾರ್ಡ್ನಲ್ಲಿರುವ ನಿವಾಸದ ಮೇಲೆಯೂ ದಾಳಿ ನಡೆಸಿ, ನಿನ್ನೆ ಸಂಜೆವರೆಗೂ ಪರಿಶೀಲಿಸಿದರು. ಬಳಿಕ ಐಶ್ವರ್ಯಳನ್ನು ವಶಕ್ಕೆ ಪಡೆದು ಶಾಂತಿನಗರ ಇ.ಡಿ. ಕಚೇರಿಗೆ ಅಧಿಕಾರಿಗಳು ಕರೆತಂದು ಜಡ್ಜ್ ಮುಂದೆ ಹಾಜರುಪಡಿಸಿದ್ದರು ಇದೀಗ ವಿಚಾರಣೆ ನಡೆಸಿದ ನ್ಯಾಯಾಧೀಶರು ಐಶ್ವರ್ಯ ಗೌಡಳನ್ನು 14 ದಿನ ಇಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.
ಶೃಂಗೇರಿ : ಹಿರಿಯ ರಾಜಕಾರಣಿ ಮತ್ತು ಮಾಜಿ ಸಚಿವ ಬೇಗಾನೆ ರಾಮಯ್ಯನವರು ನಿಧನರಾದ ವಿಷಯ ತಿಳಿದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದರು.ಇಂದು ಅವರು ಬೇಗಾನೆ ರಾಮಯ್ಯನವರ ಹೊಸಹಳ್ಳಿಯ ಸೀತಾ ಫಾರಂಗೆ ಭೇಟಿ ನೀಡಿ ಪಾರ್ಥಿವ ಶರೀರದ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿ, ಅವರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, “ಬೇಗಾನೆ ರಾಮಯ್ಯನವರ ನಿಧನವು ಮಲೆನಾಡಿನ ರಾಜಕೀಯ ರಂಗಕ್ಕೆ ತುಂಬಲಾರದ ನಷ್ಟ. ಅವರ ಸರಳತೆ, ಪ್ರಾಮಾಣಿಕತೆ ಮತ್ತು ಜನಪರ ಕಾಳಜಿ ಸದಾ ಸ್ಮರಣೀಯ. ‘ಬೋರ್ವೆಲ್ ರಾಮಯ್ಯ’ ಎಂದೇ ಖ್ಯಾತಿ ಪಡೆದಿದ್ದ ಅವರು ಮಲೆನಾಡಿನ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಶ್ರಮಿಸಿದವರು. ಅವರ ಸೇವೆ ಸದಾ ಸ್ಮರಣೀಯ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಅವರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಹೇಳಿದರು. ಬೇಗಾನೆ ರಾಮಯ್ಯನವರು 90…
ವಿಜಯನಗರ : ರಾಜ್ಯದಲ್ಲಿ ಕಳೆದ ಕೆಲವು ತಿಂಗಳ ಹಿಂದೆ ಬಳ್ಳಾರಿ ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸರಣಿ ಬಾಣಂತಿಯರ ಸಾವು ಪ್ರಕರಣಗಳು ನಡೆದಿತ್ತು ಇದೀಗ ವಿಜಯನಗರ ಜಿಲ್ಲೆಯಲ್ಲಿ ಕೂಡ ಹೆಣ್ಣು ಮಗುವಿಗೆ ಜನ್ಮ ನೀಡಿದ ಬಾಣಂತಿಯೋರ್ವರು ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಸಿಸೆರಿಯನ್ ಮೂಲಕ ಹೆಣ್ಣು ಶಿಶುಗೆ ಜನ್ಮ ನೀಡಿದ ಬಾಣಂತಿ ಸಾವನ್ನಪ್ಪಿದ್ದು, ವಿಜಯನಗರ ಜಿಲ್ಲೆಯ ಹೊಸಪೇಟೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಈ ಒಂದು ಘಟನೆ ನಡೆದಿದೆ.ಆಸ್ಪತ್ರೆಗೆ ದಾಖಲಾಗಿದ್ದ ಬಾಣಂತಿ ಶಾಂತ (26) ಸಾವನ್ನಪ್ಪಿದ್ದಾರೆ. ಹಗರಿಬೊಮ್ಮನಹಳ್ಳಿ ತಾಲೂಕಿನ ದಶಮಾಪುರ ಗ್ರಾಮದ ನಿವಾಸಿ ಎನ್ನಲಾಗಿದ್ದು, ವೈದ್ಯರ ನಿರ್ಲಕ್ಷದಿಂದ ಬಾಣಂತಿ ಸಾವಾಗಿದೆ ಎಂದು ಇದೀಗ ಪೋಷಕರು ಆರೋಪಿಸುತ್ತಿದ್ದಾರೆ.
ಬೆಂಗಳೂರು : ಮಾಜಿ ಸಂಸದ ಡಿಕೆ ಸುರೇಶ್ ಸಹೋದರಿ ಎಂದು ಹೇಳಿ ಐಶ್ವರ್ಯಗೌಡ ವಂಚನೆ ಎಸಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ನಿವಾಸದ ಮೇಲೆ ದಾಳಿ ಮಾಡಿದ್ದರು. ಇದೀಗ ಈ ಒಂದು ದಾಳಿಯ ಕುರಿತು ವಿನಯ್ ಕುಲಕರ್ಣಿ ಪ್ರತಿಕ್ರಿಯೆ ನೀಡಿದ್ದು, ED ದಾಳಿಯಿಂದ ನನಗೆ ಕಿರುಕುಳ ನೀಡಲಾಗುತ್ತಿದೆ. ಕಿರುಕುಳಕ್ಕೂ ಒಂದು ಮಿತಿ ಇರುತ್ತೆ, ನನಗೆ ತುಂಬಾ ನೋವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಮನೆಯಲ್ಲಿ ವಿಡಿಯೋ ಅಧಿಕಾರಿಗಳು ನಿನ್ನೆಯಿಂದ ಶೋಧ ನಡೆಸಿದ್ದರು. ಇಂದು ಪರಿಶೀಲನೆ ಅಂತ್ಯಗೊಳಿಸಿ ತೆರಳಿದರು.ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ವಿನಯ್ ಕುಲಕರ್ಣಿ ನನ್ನ ಮನೆಯ ಮೇಲೆ ಇಡಿ ಅಧಿಕಾರಿಗಳ ದಾಳಿ ರಾಜಕೀಯ ಪ್ರೇರಿತವಾಗಿದೆ. ವಿಡಿಯೋ ಅಧಿಕಾರಿಗಳು ಕೇಳಿದ ಎಲ್ಲಾ ಪ್ರಶ್ನೆಗಳಿಗೆ ನಾನು ಉತ್ತರ ನೀಡಿದ್ದೇನೆ ಎಂದು ತಿಳಿಸಿದರು. ಮನೆಯಲ್ಲಿ ದಾಖಲೆ ಪರಿಶೀಲನೆ ವೇಳೆ ಇಡೀ ಅಧಿಕಾರಿಗಳಿಗೆ ಏನು ಸಿಕ್ಕಿಲ್ಲ ಹೈಕೋರ್ಟ್ ನಲ್ಲಿ ನಾನು ಸಾಕ್ಷಿದಾರನಾಗಿದ್ದೇನೆ. ಕೆಲವು ಪ್ರಕರಣಗಳಿಗೆ…
ಶ್ರೀನಗರ : ಜಮ್ಮು ಕಾಶ್ಮೀರದಲ್ಲಿ ನಡೆದಂತಹ ಉಗ್ರರ ದಾಳಿಯಿಂದ ಓದಕ್ಕೂ ಹೆಚ್ಚು ಅಮಾಯಕರು ಬಲಿಯಾಗಿದ್ದಾರೆ ಘಟನೆ ಖಂಡಿಸಿ ಈಗಾಗಲೇ ಭಾರತ ಸರ್ಕಾರ ಪಾಕಿಸ್ತಾನದ ಹಲವು ಕಠಿಣ ಕ್ರಮ ಕೈಗೊಂಡಿದ್ದು ಇದೀಗ ಮತ್ತೊಂದು ಬೆಚ್ಚಿ ಬೆಳಿಸುವ ಸುದ್ದಿ ಬಹಿರಂಗವಾಗಿದೆ ಹೌದು ಜಮ್ಮು ಕಾಶ್ಮೀರದಲ್ಲಿ 120 ಭಯೋತ್ಪಾದಕರು ಆಕ್ಟಿವ್ ಆಗಿದ್ದಾರೆ ಎಂದು ತಿಳಿದು ಬಂದಿದೆ. ಹೌದು ಜಮ್ಮು ಕಾಶ್ಮೀರದಲ್ಲಿ ಒಟ್ಟು 120 ಭಯೋತ್ಪಾದಕರಿದ್ದಾರೆ. ಕಾಶ್ಮೀರದಲ್ಲಿ 75 ಭಯೋತ್ಪಾದಕರು ಆಕ್ಟಿವ್ ಆಗಿದ್ದಾರೆ ಎನ್ನಲಾಗಿದ್ದು, ಇನ್ನೂ 50 ಜನ ಉಗ್ರರು ಜಮ್ಮುವಿನಲ್ಲಿ ಆಕ್ಟಿವ್ ಆಗಿದ್ದಾರೆ. 120 ಜನರಲ್ಲಿ 110 ಜನರು ಪಾಕಿಸ್ತಾನ ಮೂಲದ ಉಗ್ರರು ಎಂದು ತಿಳಿದುಬಂದಿದೆ. ಈಗಾಗಲೇ ಕಾಶ್ಮೀರದಲ್ಲಿ ಭಾರತೀಯ ಸೇನೆ ಇಬ್ಬರು ಉಗ್ರರ ಮನೆಗಳನ್ನು ಧ್ವಂಸಗೊಳಿಸಿದ್ದು, ಅಲ್ಲದೆ ಕಾಶ್ಮೀರದ ಬಂಡಿಪೋರದಲ್ಲಿ ಎಲ್ಇಟಿ ಉಗ್ರ ಸಂಘಟನೆಯ ಕಮಾಂಡರ್ ನಲ್ಲಿಯನ್ನು ಭಾರತೀಯ ಸೈನಿಕರು ಹತ್ಯೆಗೈದಿದ್ದಾರೆ. ಒಂದು ಗುಂಡಿನ ಚಿಕ್ಕಮಕಿಯಲ್ಲಿ ಓರ್ವ ಯೋಧ ಹಾಗೂ ಇಬ್ಬರು ಪೊಲೀಸರಿಗೆ ಗಂಭೀರವಾದ ಗಾಯಗಳಾಗಿವೆ.
ಚಾಮರಾಜನಗರ : ನಿನ್ನೆ ನಡೆದ ಮಲೆಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ಸಭೆಯಲ್ಲಿ ಮಹದೇಶ್ವರ ಬೆಟ್ಟದಲ್ಲಿ ಶುಚಿತ್ವ, ಪಾನನಿಷೇಧ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೊಳಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಶ್ರೀ ಮಲೆ ಮಹದೇಶ್ವರ ಬೆಟ್ಟದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೌಢ್ಯಗಳು ಸಮಾಜದ ಪ್ರಗತಿಗೆ ಮಾರಕ ಮೈಸೂರು ವಿಭಾಗದ ಚಾಮರಾಜನಗರ ಜಿಲ್ಲೆ ಹಿಂದುಳಿದ ಜಿಲ್ಲೆಯಾಗಿದ್ದು, ಈ ಭಾಗಕ್ಕೆ ವಿಶೇಷ ಗಮನ ನೀಡುವ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗಿದೆ. ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎಂಬುದು ಸತ್ಯಕ್ಕೆ ದೂರವಾದ ಮಾತು. ಇಂತಹ ಮೌಢ್ಯಗಳೇ ಸಮಾಜದ ಪ್ರಗತಿಗೆ ಮಾರಕವಾಗಿದೆ. ನಾನು ಇದುವರೆಗೆ ಸುಮಾರು 20 ಬಾರಿ ಜಿಲ್ಲೆಗೆ ಬಂದಿದ್ದು, ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದೇನೆ ಎಂದರು. ಮಲೆಮಹದೇಶ್ವರ ಅಭಿವೃದ್ಧಿಗೆ ನಿರ್ಣಯ ಮಲೆಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ಸಭೆ ನಿನ್ನೆ ನಡೆಸಲಾಗಿದೆ. ಈ ಪ್ರದೇಶದಲ್ಲಿ ಶುಚಿತ್ವ ಕಾಯ್ದುಕೊಳ್ಳಬೇಕು, ಮದ್ಯನಿಷೇದವಾಗಬೇಕು, ದೇವಸ್ಥಾನದ ವಿತರಿಸಲಾಗುವ ಲಾಡು ಪ್ರಸಾದವನ್ನು ಗುಣಮಟ್ಟದಲ್ಲಿ ಹಾಗೂ ಕಡಿಮೆ ದರದಲ್ಲಿ ನೀಡುವ ಬಗ್ಗೆ ಕ್ರಮ ಕೈಗೊಳ್ಳಬೇಕು.…













