Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಂಗಳೂರು : ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪಿಎಸ್ಐ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಹೌದು ಬೆಂಗಳೂರಿನ ತಲಘಟ್ಟಪುರ ಪಿಎಸ್ಐ ಮೆಹಬೂಬ್ ಗುಡಳ್ಳಿ (40) ಇದೀಗ ಸಾವನ್ನಪ್ಪಿದ್ದಾರೆ. ಗಾಂಜಾ ಆರೋಪಿಗಳನ್ನು ಬಂಧಿಸಿ ಕರೆತರುವ ವೇಳೆ ಈ ಒಂದು ಘಟನೆ ನಡೆದಿತ್ತು. ರಾತ್ರಿಯ ವೇಳೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿ ಕರೆ ತರುವಾಗ ಅಪಘಾತ ಸಂಭವಿಸಿದೆ. ಜೂನ್ 24 ರಾತ್ರಿ ಅತ್ತಿಬೆಲೆಯಿಂದ ಪಿಎಸ್ಐ ಮಹಿಬೂಬ್ ಹೊರಟಿದ್ದಾರೆ ಅತಿ ಬೆಲೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದಾಗ ಕಾರಿನ ಬ್ರೇಕ್ ಡೌನ್ ಆಗುತ್ತದೆ. ಈ ವೇಳೆ ಕಾರು ಪರೀಕ್ಷೆ ಮಾಡುತ್ತಿದ್ದ ವೇಳೆ ಹಿಂದಿನಿಂದ ಬಂದಂತಹ ಲಾರಿ ಕಾರಿಗೆ ಗುದ್ದಿದ್ದರಿಂದ ಮೆಹಬೂಬ್ ಗಾಯಗೊಂಡಿದ್ದರು. ಇದೀಗ ಚಿಕಿತ್ಸೆ ಫಲಿಸದೇ ಮೆಹಬೂಬ್ ಸಾವನಪ್ಪಿದ್ದಾರೆ.

Read More

ಬೆಂಗಳೂರು : ದತ್ತಾತ್ರೇಯ ಹೊಸ ಬಾಳೆಯ ವಿರುದ್ಧ ಕಾಂಗ್ರೆಸ್ ನಾಯಕರು ವಾಗ್ದಾಳಿ ಮಾಡಿರುವ ವಿಚಾರವಾಗಿ ಬೆಂಗಳೂರಿನಲ್ಲಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ನಾಯಕರು ಆಕಾಶ ಉದುರಿ ಬಿದ್ದವರಂತೆ ವರ್ತಿಸುತ್ತಿದ್ದಾರೆ. ಮನಸ್ಮೃತಿ ಹೇರಲು ಸಿದ್ಧತೆಯೆಂದು ಸಿದ್ದರಾಮಯ್ಯನವರು ಹೇಳಿದ್ದಾರೆ. ಅವನ್ಯಾವನು ಮನು ನನಗೆ ಗೊತ್ತಿಲ್ಲ. ಆ ಮನಸ್ಮೃತಿಯನ್ನು ಓದಿಲ್ಲ ನನಗೆ RSS ಮಾತ್ರ ಗೊತ್ತು ಎಂದು ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ನವರು ಬೇಳೆ ಬೇಯಿಸಿಕೊಳ್ಳೋಕೆ ಮನು ಅಂತ ಹೇಳುತ್ತಿದ್ದಾರೆ. ಖಾಲಿ ಸಂವಿಧಾನ ಇಟ್ಟುಕೊಂಡಿದ್ದಾರಾ? ಅಥವಾ ಅದನ್ನು ಓದಿದ್ದಾರಾ? ಜಾತ್ಯತೀತ ಪದ ತೆಗೆಯಬೇಕು ಬೇಕು ಎಂದು ದತ್ತಾತ್ರೇಯ ಹೊಸಬಾಳೆ ಅವರು ಹೇಳಿದ್ದಾರೆ. ಅಂಬೇಡ್ಕರ್ ಬರೆದ ಪುಸ್ತಕದಲ್ಲಿ ಜಾತ್ಯಾತೀತ ಮತ್ತು ಸಮಾಜವಾದ ಎಲ್ಲಿದೆ? ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ ಖರ್ಗೆಯವರು ಮೂಲ ಸಂವಿಧಾನದಲ್ಲಿ ಜಾತ್ಯಾತೀತ ಮತ್ತು ಸಮಾಜವಾದ ಎಲ್ಲಿದೆ ಅಂತ ತೋರಿಸಲಿ ಎಂದು ಸವಾಲು ಹಾಕಿದರು. ಜಾತ್ಯತೀತ ಪದ ಸಂವಿಧಾನದ ಯಾವ ಪೇಜ್ ನಲ್ಲಿದೆ ಹುಡುಕಿ ಕೊಡಿ. ನಾನು ಒಬ್ಬ ಒಕ್ಕಲಿಗ…

Read More

ಯಾದಗಿರಿ : ಕಳೆದ ಎರಡು ದಿನಗಳ ಹಿಂದೆ ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಮಾಚನೂರು ಎಂಬಲ್ಲಿ ಕುರಿ ಮೇಯಿಸಲು ತೆರಳಿದ ವೇಳೆ ಇಬ್ಬರು ಯುವಕರು ಭೀಮಾ ನದಿಯಲ್ಲಿ ನೀರು ಪಾಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ 52 ಗಂಟೆಗಳ ನಿರಂತರ ಕಾರ್ಯಾಚರಣೆ ಬಳಿಕ ಓರ್ವ ಯುವಕನ ಶವ ಪತ್ತೆಯಾಗಿದೆ. ನಾಪತ್ತೆಯಾಗಿದ್ದ ಎರಡು ದಿನಗಳ ಬಳಿಕ ಯುವಕನ ಶವ ಪತ್ತೆಯಾಗಿದೆ. ಯುವಕ ನೀರು ಪಾಲಾಗಿರುವ ಸ್ಥಳದಿಂದ 200 ಮೀಟರ್ ದೂರದಲ್ಲಿ ರಾಮುವಿನ ಮೃತ ದೇಹ ಪತ್ತೆಯಾಗಿದೆ. ಯಾದಗಿರಿ ಜಿಲ್ಲೆಯ ತಾಲೂಕಿನ ಮಾಚನೂರಲ್ಲಿ ಈ ಒಂದು ಘಟನೆ ನಡೆದಿತ್ತು. ಇನ್ನು ಮತ್ತೊಬ್ಬನ ಯುವಕನ ಶವಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ.ಸ್ಥಳಕ್ಕೆ SDRF ಮತ್ತು ಅಗ್ನಿಶಾಮಕ ದಳ ಹಾಗೂ ನುರಿತ ಮೀನುಗಾರರಿಂದ ಶೋಧ ಕಾರ್ಯ ನಡೆಯುತ್ತಿದೆ.

Read More

ಮೈಸೂರು : ವಿಪಕ್ಷ ನಾಯಕ ಆರ್ ಅಶೋಕ್ ಈ ಬಾರಿ ಹೊಸ ಮುಖ್ಯಮಂತ್ರಿ ದಸರಾ ಉದ್ಘಾಟಿಸಲಿದ್ದಾರೆ ಎಂದು ಹೇಳಿಕೆ ನೀಡಿರುವ ಕುರಿತು ಸಮಾಜ ಕಲ್ಯಾಣ ಇಲಾಖೆಯ ಸಚಿವ ಹೆಚ್ ಸಿ ಮಹದೇವಪ್ಪ ಆರ್ ಅಶೋಕ್ ಹೇಳಿಕೆಗೆ ತಿರುಗೇಟು ನೀಡಿದ್ದು, ಆರ್ ಅಶೋಕ್ ಕಾಂಗ್ರೆಸ್ ಹೈಕಮಾಂಡ್ ಅಲ್ಲ. 5 ವರ್ಷವೂ ಸರ್ಕಾರ ಸ್ಥಿರವಾಗಿರುತ್ತೆ ಸಿದ್ದರಾಮಯ್ಯರೆ ‘CM’ ಆಗಿರ್ತಾರೆ ಎಂದು ತಿಳಿಸಿದರು. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾವ ಅರ್ಥದಲ್ಲಿ ಮೂರು ತಿಂಗಳಲ್ಲಿ ರಾಜಣ್ಣ ಅವರು ಕ್ರಾಂತಿಯಾಗುತ್ತದೆ ಅಂದಿದ್ದಾರೋ ಗೊತ್ತಿಲ್ಲ ಆ ಕುರಿತು ಅವರನ್ನೇ ಕೇಳಿ. ಕೆಲವು ಶಾಸಕರು ಅನುಕೂಲಕ್ಕೆ ತಕ್ಕಂತೆ ಹೇಳಿಕೆ ನೀಡಿರಬಹುದು ರಾಜಕೀಯವಾಗಿ ಯಾವಾಗಲೂ ಕ್ರಾಂತಿಗಳು ನಡೆಯುತ್ತಿರುತ್ತವೆ, ಸಂಕ್ರಾಂತಿಯನ್ನು ಜೋರಾಗಿ ಮಾಡೋಣ ಬಿಡಿ ಎಂದು ತಿಳಿಸಿದರು. ಈ ಬಾರಿ ಸಿಎಂ ಆಗಿ ಸಿದ್ದರಾಮಯ್ಯ ದಸರಾ ಮಾಡುವುದಿಲ್ಲ ಎಂದು ಆರ್ ಅಶೋಕ್ ಹೇಳಿಕೆಗೆ ಮಹದೇವಪ್ಪ ತಿರುಗೇಟು ನೀಡಿದ್ದು ಆರ್ ಅಶೋಕ್ ಕಾಂಗ್ರೆಸ್ ಹೈಕಮಾಂಡ್ ಅಲ್ಲ ಅಶೋಕ ಕೇವಲ ವಿರೋಧ ಪಕ್ಷದ ನಾಯಕ ಅಷ್ಟೇ…

Read More

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಕರ್ತವ್ಯದಲ್ಲಿ ಇದ್ದಂತಹ ಫಾರೆಸ್ಟ್ ಗಾರ್ಡ್ ನಾಪತ್ತೆಯಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ನಾಲ್ಕು ದಿನಗಳಿಂದ ಫಾರೆಸ್ಟ್ ಗಾರ್ಡ್ ಶರತ್ (33) ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ನೀಲಗಿರಿ ಪ್ಲಾಂಟೇಶನ್ ಬಳಿ ಶರತ್ ಬಟ್ಟೆ ಹಾಗೂ ಬೈಕ್ ಪತ್ತೆಯಾಗಿದೆ. ನೀಲಗಿರಿ ಪ್ಲಾಂಟೇಶನ್ ನಿಂದ ಶರತ್ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ನಾಲ್ಕು ತಿಂಗಳ ಹಿಂದೆ ಅಷ್ಟೇ ಕಡೂರು ಅರಣ್ಯ ವಿಭಾಗಕ್ಕೆ ಶರತ್ ವರ್ಗಾವಣೆಯಾಗಿದ್ದ ಹಲವು ಅನುಮಾನಕ್ಕೆ ಇದೀಗ ಫಾರೆಸ್ಟ್ ಗಾರ್ಡ್ ನಾಪತ್ತೆ ಪ್ರಕರಣ ಕಾರಣವಾಗಿದೆ. ಈ ಕುರಿತು ಸಖರಾಯ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಶಿವಮೊಗ್ಗ : ಇತ್ತೀಚಿಗೆ ರಾಜ್ಯದಲ್ಲಿ ಹಸುವಿನ ಕತ್ತು ಕೊಯ್ದು ಪಾಪಿಗಳು ವಿಕೃತಿ ಮರದಿದ್ದರೂ ಅಲ್ಲದೆ ಕಳೆದ ಎರಡು ದಿನಗಳ ಹಿಂದೆ ಅಷ್ಟೇ ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದಿರುವ ಘಟನೆ ನಡೆದಿತ್ತು ಇದೀಗ ಶಿವಮೊಗ್ಗದಲ್ಲಿ ಮತ್ತೊಂದು ಘಟನೆ ನಡೆದಿದ್ದು, ತನ್ನ ಪಾಡಿಗೆ ತಾನು ಮೆಯುತ್ತಿದ್ದ ಗೋ ಮಾತೆಯ ಕೆಚ್ಚಲು ಕೊಯ್ದು ಪಾಪಿಗಳು ವಿಕೃತಿ ಮೆರೆದಿದ್ದಾರೆ. ಹೌದು ಹಸುವಿನ ಕೆಚ್ಚಲು ಕೊಯ್ದು ಪಾಪಿಗಳು ಕ್ರೌರ್ಯ ಮೆರೆದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ವಿಜಾಪುರದಲ್ಲಿ ಒಂದು ರಾಕ್ಷಸಿಯ ಕೃತ್ಯ ನಡೆದಿದೆ. ರಾಕ್ಷಸರು ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದಿದ್ದಾರೆ. ಹಸು ಮೇಯ್ಯುತ್ತಿದ್ದಾಗ ಕೃತ್ಯ ನಡೆದಿದೆ. ವಿಜಯಕುಮಾರ್ ಗೆ ಸೇರಿದ ಹಸು ರಕ್ತಸ್ರಾವದಿಂದ ತೀವ್ರ ನರಳಾಟ ನಡೆಸುತ್ತಿದೆ. ರಕ್ತಸ್ರಾವದಿಂದ ನರಳುತ್ತಿದ್ದ ಹಸುವಿಗೆ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

Read More

ಬೆಂಗಳೂರು : ಕಾವೇರಿ ಆರತಿ ಕುರಿತಂತೆ ನಿನ್ನೆ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯಿತು. ಕೃಷ್ಣರಾಜ ಸಾಗರ(ಕೆಆರ್‌ಎಸ್) ಜಲಾಶಯದ ಬಳಿ ಉದ್ದೇಶಿತ ಕಾವೇರಿ ಆರತಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಶುಕ್ರವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಇದು ಸಂಭಾವ್ಯ ಪರಿಸರ ಮತ್ತು ಸುರಕ್ಷತಾ ಅಪಾಯಗಳ ಬಗ್ಗೆ ಎಚ್ಚರಿಕೆ ನೀಡಿದೆ. ಇದೆ ವಿಚಾರವಾಗಿ ಇಂದು ಬೆಂಗಳೂರಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿ, ಏನೇ ಇದ್ದರೂ ಕಾನೂನು ಪ್ರಕಾರ ಉತ್ತರ ನೀಡುತ್ತೇವೆ. ಪ್ರಾರ್ಥನೆ, ಪೂಜೆ ಮಾಡುವುದಕ್ಕೆ ಯಾರು ಅಡ್ಡಿ ಮಾಡುತ್ತಿಲ್ಲ. ಕೆಲವರಿಗೆ ಆತಂಕ ಇದೆ ಆರತಿ ವಿಚಾರಕ್ಕೆ ಯಾರು ಅನುಮತಿ ಕೇಳುತ್ತಿಲ್ಲ. ನಾವು ಪ್ರತಿದಿನ ಆರತಿ ಮಾಡುತ್ತಿದ್ದೇವೆ ಎಂದು ಉಪಮುಖ್ಯಮಂತ್ರಿಗೆ ಶಿವಕುಮಾರ್ ಹೇಳಿಕೆ ನೀಡಿದರು. ಇನ್ನು ಸಿಎಂ ಬದಲಾವಣೆ ಆಗುತ್ತದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ವಿಪಕ್ಷ ಆರ್ ಅಶೋಕ್ ಏನಾದರೂ ಜ್ಯೋತಿಷ್ಯ ಕಲಿತಿದ್ದಾರಾ? ನನಗೂ ಟೈಮ್ ಕೊಡಿಸಿ ನಾನು ಸಹ ಅವರನ್ನು…

Read More

ಉತ್ತರಪ್ರದೇಶ : ಇತ್ತೀಚಿಗೆ ದೇಶದಲ್ಲಿ ಹೆಂಡತಿಯರು ಬೇರೆ ಪುರುಷನೊಂದಿಗೆ ಅಕ್ರಮ ಸಂಬಂಧ ಹೊಂದುವುದು ಅಷ್ಟೇ ಅಲ್ಲದೆ, ಕಟ್ಟಿಕೊಂಡ ಗಂಡನನ್ನೇ ಭೀಕರವಾಗಿ ಕೊಲೆ ಮಾಡುತ್ತಿರುವ ಪ್ರಕರಣಗಳು ಆತಂಕಕಾರಿ ಬೆಳವಣಿಗೆಗೆ ಕಾರಣವಾಗಿದೆ. ಕಳೆದ ಕೆಲವು ದಿನಗಳ ಹಿಂದೆ ಮೇಘಾಲಯದಲ್ಲಿ ರಾಜ ರಘುವಂಶಿ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೆಳಿಸಿತ್ತು. ಇದೀಗ ಇದೇ ಮಾದರಿಯಲ್ಲಿ ಉತ್ತರ ಪ್ರದೇಶದಲ್ಲಿ ಮತ್ತೊಂದು ಭೀಕರವಾದ ಕೊಲೆ ನಡೆದಿದೆ. ಹೌದು ಇಂದ್ರ ಕುಮಾರ್ ಎಂಬಾತನ ಆಸ್ತಿ ಮೇಲೆ ಕಣ್ಣಿಟ್ಟಿದ್ದ ಮಹಿಳೆ ಅವರನ್ನು ಹೇಗೋ ಬಲೆಗೆ ಬೀಳಿಸಿ ಮದುವೆಯಾಗಿ ಮರುಕ್ಷಣವೇ ಕೊಂದು ಚರಂಡಿಗೆ ಎಸೆದಿರುವ ಮಾಹಿತಿ ಲಭ್ಯವಾಗಿದೆ. ಈ ಘಟನೆ ಉತ್ತರ ಪ್ರದೇಶದ, ಖುಷಿನಗರದ ಹಟಾ ಪ್ರದೇಶದಲ್ಲಿ ನಡೆದಿದೆ. ಮಹಿಳೆಯೊಬ್ಬಳು 45 ವರ್ಷದ ವ್ಯಕ್ತಿಯನ್ನು ಆನ್​ಲೈನ್ ಮೂಲಕ ಪರಿಚಯ ಮಾಡಿಕೊಂಡು, ನಂತರ ಬಲೆಗೆ ಬೀಳಿಸಿ, ಮದುವೆಯ ಆಮಿಷವೊಡ್ಡಿ, ಮದುವೆಯಾಗಿ ಕೆಲವೇ ಗಂಟೆಗಳಲ್ಲಿ ಆತನನ್ನು ಕೊಂದು ಚರಂಡಿಗೆಸೆದಿದ್ದಾಳೆ. ಸಾಮಾಜಿಕ ಮಾಧ್ಯಮದ ಮೂಲಕ ತಿವಾರಿ ಅವರನ್ನು ಸಂಪರ್ಕಿಸಿ, ನಕಲಿ ಆಧಾರ್ ಕಾರ್ಡ್ ಬಳಸಿ ತನ್ನ ಗುರುತನ್ನು…

Read More

ದಾವಣಗೆರೆ : ಕಳೆದ ಕೆಲವು ದಿನಗಳ ಹಿಂದೆ ದಾವಣಗೆರೆಯಲ್ಲಿ ಒಂದು ಬೆಚ್ಚಿಬಿಳಿಸುವ ಘಟನೆ ನಡೆದಿತ್ತು . ಪತಿ ಮಹಾಶಯನೊಬ್ಬ ತನ್ನ ಪತ್ನಿಯನ್ನು ಬಿಟ್ಟು ಆಕೆಯ ಮಲತಾಯಿಯ ಜೊತೆಗೆ ಪರಾರಿಯಾಗಿದ್ದ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೆಳಿಸಿತ್ತು ಇದೀಗ ಈ ಒಂದು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಆರು ತಿಂಗಳು ಬಳಿಕ ಇದೀಗ ಅಳಿಯ ಜೊತೆಗೆ ಪರಾರಿಯಾಗಿದ್ದ ಅತ್ತೆ ಶಾಂತ ದಿಢೀರ್ ಎಂದು ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದಾಳೆ. ಹೌದು ಅಳಿಯನ ಜೊತೆಗೆ ಅತ್ತೆ ನಾಪತ್ತೆಯಾಗಿದ್ದ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಆರು ತಿಂಗಳ ಬಳಿಕ ಅತ್ತೆ ಶಾಂತ ಇದೀಗ ಮನೆಗೆ ಮರಳಿದ್ದಾರೆ. ಚೆನ್ನಗಿರಿ ತಾಲೂಕಿನ ಮುದ್ದೇನಹಳ್ಳಿ ಗ್ರಾಮಕ್ಕೆ ವಾಪಸ್ ಆಗಿದ್ದು ದಾವಣಗೆರೆ ಜಿಲ್ಲೆಯ ಚೆನ್ನಗಿರಿ ತಾಲೂಕಿನ ಮುದ್ದೇನಹಳ್ಳಿ ಗ್ರಾಮದಲ್ಲಿ ಮರಳಿ ಬಂದು ನಾನು ಎಲ್ಲೂ ಹೋಗಿಲ್ಲ ಊರಿನಲ್ಲಿಯೇ ಇದ್ದೇನೆ ಆದರೆ ಅಳಿಯ ಎಲ್ಲಿ ಹೋಗಿದ್ದಾನೋ ನನಗೆ ಗೊತ್ತಿಲ್ಲ ಎಂದು ತಿಳಿಸಿದ್ದಾರೆ. ಇದೇ ವೇಳೆ ಅವರು ಪತಿಯ ಮನೆಯವರ ವಿರುದ್ಧ ಗಂಭೀರವಾದ ಆರೋಪ ಮಾಡಿದ್ದು, ನನಗೂ…

Read More

ಕೊಪ್ಪಳ : ಡಿಕೆ ಶಿವಕುಮಾರ್ ಸಿಎಂ ಆಗಲು ಸಿದ್ದರಾಮಯ್ಯ ಬಿಡಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿ ಮುಂದುವರಿಯಲು ಡಿಕೆ ಶಿವಕುಮಾರ್ ಬಿಡಲ್ಲ. ಗೃಹ ಸಚಿವ ಜಿ.ಪರಮೇಶ್ವರ್ ಅವರನ್ನು ಏಳುವುದಕ್ಕೂ ಬಿಡುತ್ತಿಲ್ಲ. ಕಾಂಗ್ರೆಸ್ ಅವರ ಆಂತರಿಕ ಕಚ್ಚಾಟದಿಂದಲೇ ಈ ಸರ್ಕಾರ ಬೀಳುತ್ತದೆ.ಮುಂದಿನ ಸಿಎಂ ಡಿಕೆ ಶಿವಕುಮಾರ್ ಅಲ್ಲ ಸರ್ಕಾರ ಬೀಳುತ್ತೆ ಎಂದು ಕೊಪ್ಪಳದಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾಜವಾದಿ ಅಲ್ಲ ಮಜಾವಾದಿ ಎಂದು ವಾಗ್ದಾಳಿ ನಡೆಸಿದರು.ಸಿಎಂ ಸಿದ್ದರಾಮಯ್ಯ ಅಧಿಕಾರಕ್ಕಾಗಿ ಬೇರೆ ಪಕ್ಷಕ್ಕೆ ಹೋಗುತ್ತಾರೆ. ಸಿದ್ದರಾಮಯ್ಯ ಮೂಲ ಕಾಂಗ್ರೆಸ್ಸಿಗ ಅಲ್ಲ ಅವರು ಇಂದಿಗೂ ಅತೃಪ್ತರು. ಸಿದ್ದರಾಮಯ್ಯ ಎಲ್ಲೆಲ್ಲಿ ಹೋಗಿದ್ದಾರೆ ಅಲ್ಲಿ ಮಜಾ ಉಡಾಯಿಸಿದ್ದಾರೆ.ವಸತಿ ಇಲಾಖೆಯಲ್ಲಿ ಹಗರಣ ನಡೆದಿದೆ ಆದರೂ ಸಿದ್ದರಾಮಯ್ಯನವರು ಜಮೀರ್ ಅಹ್ಮದ್ ರನ್ನು ಇಟ್ಟುಕೊಂಡಿದ್ದಾರೆ. ಸಿದ್ದರಾಮಯ್ಯಗೆ ನೈತಿಕತೆ ಇದ್ದರೆ ಕೊಡಲೇ ರಾಜೀನಾಮೆ ಕೊಡಬೇಕಿತ್ತು, ಭ್ರಷ್ಟಾಚಾರ ಹೆಚ್ಚಾಗಿದೆ ಅಂತ ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ ಎಂದು ಕಿಡಿ ಕಾರಿದರು.

Read More