Author: kannadanewsnow05

ಬೆಂಗಳೂರು : ಯುವಕನೊಬ್ಬ ತಿಂಡಿ ಸೇವಿಸಲು ಕೆಫೆಗೆ ತೆರಳಿದ್ದಾ. ಈ ಬೆಳೆ ಇಡ್ಲಿ ಸಾಂಬಾರ್ ನಲ್ಲಿ ಜಿರಳೆ ಪತ್ತೆಯಾಗಿದ್ದು ಯುವಕ ಬಿಚ್ಚಿ ಬಿದ್ದಿದ್ದಾನೆ. ಈ ಕುರಿತು ಹೋಟೆಲ್ ಸಿಬ್ಬಂದಿಗಳಿಗೆ ಪ್ರಶ್ನಿಸಿದರೆ ಸಿಬ್ಬಂದಿಗಳು ಉಡಾಫೆ ಉತ್ತರ ನೀಡಿರುವ ಘಟನೆ ಬೆಂಗಳೂರು ಜಿಲ್ಲೆಯ ಆನೇಕಲ್ ತಾಲೂಕಿನ ಬೊಮ್ಮಸಂದ್ರದ ಬಳಿ ನಡೆದಿದೆ. ಹೌದು ಬೆಂಗಳೂರು ಜಿಲ್ಲೆಯ ಆನೇಕಲ್ ತಾಲೂಕಿನ ಬೊಮ್ಮಸಂದ್ರ ದಲ್ಲಿ ನಾರಾಯಣ ಹೃದಯಾಲಯದ ಆಸ್ಪತ್ರೆಯ ಬಳಿ ಕೆಫೆಯಲ್ಲಿ ಇಡ್ಲಿ ಸಾಂಬಾರ್ ಸೇವಿಸುವ ವೇಳೆ ಜಿರಳೆ ಪತ್ತೆಯಾಗಿದೆ. ಈ ಬಗ್ಗೆ ಪುರಸಭೆ ಅಧಿಕಾರಿಗಳಿಗೆ ಯುವಕ ದೂರು ನೀಡಿದ್ದಾನೆ. ಬೊಮ್ಮಸಂದ್ರ ಬಳಿ ಈ ಘಟನೆ ನಡೆದಿದ್ದು, ಪುರಸಭೆಯಿಂದ ಯಾವುದೇ ಅನುಮತಿ ಪಡೆಯದೆ ಮಾಲೀಕರು ಹೋಟೆಲ್ ನಡೆಸುತ್ತಿದ್ದಾರೆ ಎನ್ನುವ ಮಾಹಿತಿ ಬಂದಿದೆ. ಈ ವೇಳೆ ಪರಿಶೀಲನೆ ಬಳಿಕ ಪುರಸಭೆ ಅಧಿಕಾರಿಗಳಿಂದ ಸದ್ಯ ಹೋಟೆಲ್ಗೆ ಬೀಗ ಜಡಿಯಲಾಗಿದೆ. ಬ್ರಾಹ್ಮಿನ್ಸ್ ಕೆಫೆಯ ಮಾಲೀಕ ಗೋಪಾಲ್ ಈ ಹೋಟೆಲ್ ನಡೆಸುತ್ತಿದ್ದು, ಇಡ್ಲಿ ಸಾಂಬಾರ್ ಸೇವಿಸುವ ಜಿರಳೆ ಇರುವುದು ಪತ್ತೆಯಾಗಿದೆ. ಆದರೆ ಈ ಬಗ್ಗೆ…

Read More

ಬೆಂಗಳೂರು : ಐಎಎಸ್ ಅಧಿಕಾರಿಗಳು ಸೇರಿದಂತೆ ದೊಡ್ಡ ದೊಡ್ಡ ಅಧಿಕಾರಿಗಳು ತಮ್ಮ ರಿಕ್ರಿಯೇಶನ್ ಗಾಗಿ ಕ್ಲಬ್ ಗಳನ್ನು ಮಾಡಿಕೊಂಡಿದ್ದಾರೆ ಹಾಗಾಗಿ ಶಾಸಕರಿಗೂ ಕೂಡ ಯಾಕೆ ಒಂದು ರೀಕ್ರೇಶನ್ ಗಾಗಿ, ಟೀ ಕಾಫಿ ವ್ಯವಸ್ಥೆ ಜೊತೆ ಕ್ಲಬ್ ವ್ಯವಸ್ಥೆ ಮಾಡಲಾಗುತ್ತದೆ ಎಂದು ಸ್ಪೀಕರ್ ಯುಟಿ ಖಾದರ್ ತಿಳಿಸಿದರು. ಇಂದು ಅಧಿವೇಶನಕ್ಕೂ ತೆರಳುವ ಮುನ್ನ ಶಾಸಕರ ಕ್ಲಬ್ ಒಂದನ್ನು ಸ್ಥಾಪಿಸುವ ಅವಶ್ಯಕತೆಯ ಬಗ್ಗೆ ವಿವರಣೆ ನೀಡಿದರು. ಐಎಎಸ್ ಅಧಿಕಾರಿಗಳು ತಮ್ಮ ರಿಕ್ರಿಯೇಶನ್​ಗಾಗಿ ಕ್ಲಬ್ ಮಾಡಿಕೊಂಡಿದ್ದಾರೆ, ಸರ್ಕಾರಿ ನೌಕರರು ಸಹ ತಾವು ಕೂತು ಹರಟೆ ಹೊಡೆಯಲು ಜಾಗ ಮಾಡಿಕೊಂಡಿದ್ದಾರೆ, ಹಾಗೆಯೇ ಶಾಸಕರಿಗೂ ಒಂದು ಕ್ಲಬ್ ನ ಅವಶ್ಯಕತೆಯಿದೆ, ಅದಷ್ಟು ಬೇಗ ಅದು ಅಸ್ತಿತ್ವಕ್ಕೆ ಬರಲಿದೆ ಎಂದು ಇದೆ ವೇಳೆ ತಿಳಿಸದರು.

Read More

ಬೆಂಗಳೂರು : ದುಬೈನಿಂದ ಕೆ ಜಿ ಕಟ್ಟಲೆ ಅಕ್ರಮ ಚಿನ್ನ ಸಾಗಾಣಿ ಪ್ರಕರಣದಲ್ಲಿ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ನಟಿ ರನ್ಯ ರಾವ್ ಅವರು ಇದೀಗ ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯಕ್ಕೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ದುಬೈ ನಿಂದ ಅಕ್ರಮವಾಗಿ 14 ಕೆಜಿ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡಿದ ಪ್ರಕರಣದಲ್ಲಿ ನಟಿ ರನ್ಯಾರಾವ್ ಅವರನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿ ವಿಚಾರಣೆಗೆ ಒಳಪಡಿಸಿದ್ದಾರೆ. ಆದರೆ ಈ ಒಂದು ಪ್ರಕರಣದ ತನಿಖೆಯ ವೇಳೆ ಸ್ಪೋಟಕ ಟ್ವಿಸ್ಟ್ ಸಿಕ್ಕಿದ್ದು, ನಟಿ ರನ್ಯಾ ರಾವ್ ಅವರನ್ನು ತಮ್ಮ ಕೆಲಸಕ್ಕೆ ಬಳಸಿಕೊಂಡ ಮತ್ತೊಂದು ಟೀಂ ಇದರ ಹಿಂದೆ ಇದೆ ಎಂದು ತಿಳಿದುಬಂದಿದೆ. ಹೌದು ಚಿನ್ನ ಕಳ್ಳಸಾಗಣೆಯಲ್ಲಿ ನಟಿ ರನ್ಯಾ ರಾವ್ ಬಂಧನ ಪ್ರಕರಣಕ್ಕೆ ಮತ್ತೊಂದು ಸ್ಫೋಟಕ ತಿರುವು ಸಿಕ್ಕಿದೆ.ನಟಿ ರನ್ಯಾರನ್ನು ಬಂಧಿಸಿರುವ ಡಿಆರ್‌ಐ ಅಧಿಕಾರಿಗಳ ತನಿಖೆಯಲ್ಲಿ ಮತ್ತಷ್ಟು ಸ್ಫೋಟಕ ವಿಚಾರಗಳು ಬಯಲಾಗಿವೆ. ರನ್ಯಾ ಕೇವಲ ಪಾತ್ರಧಾರಿ, ಅಸಲಿ ಕಿಂಗ್ ಬೇರೆಯೇ ಇದ್ದಾರೆ ಎನ್ನಲಾಗಿದೆ.…

Read More

ಬೆಂಗಳೂರು : ನಾಳೆ 16ನೇ ಬಾರಿ ದಾಖಲೆ ಬಜೆಟ್ ಅನ್ನು ಸಿಎಂ ಸಿದ್ದರಾಮಯ್ಯ ಮಂಡಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಬೆಳಿಗ್ಗೆ 9 ಗಂಟೆಗೆ ವಿಧಾನಸೌಧದಲ್ಲಿ ವಿಶೇಷ ಸಂಪುಟ ಸಭೆಯಲ್ಲಿ ನಿಗದಿ ಮಾಡಿದ್ದೂ, ಸಂಪುಟ ಸಭೆಯಲ್ಲಿ ಬಜೆಟ್ ಮಂಡನೆ ಅನುಮೋದನೆ ಪಡಿಸಲಿದ್ದಾರೆ. ಸಿದ್ಧರಾಮಯ್ಯ ನಾಳೆ ಬೆಳಗ್ಗೆ 10:15ಕ್ಕೆ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಮಂಡಿ ನೋವಿನ ಮಧ್ಯೆಯೂ ಕೂಡ ಸಿಎಂ ಸಿದ್ದರಾಮಯ್ಯ ಬಜೆಟ್ಟಿಗೆ ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಾರಿಯ ಬಜೆಟ್ ಮಾತ್ರ 4 ಲಕ್ಷ ಕೋಟಿ ಇರೋದು ಸಾಧ್ಯತೆ ಇದೆ ಎನ್ನಲಾಗಿದೆ. ಹಾಗಾಗಿ ರಾಜ್ಯದ ಜನರು ವಿಶೇಷ ಅನುದಾನದ ನಿರೀಕ್ಷೆಯಲ್ಲಿ ಇದ್ದಾರೆ. ಗ್ಯಾರಂಟಿಗೆ ಹಣಕಾಸು ಪರಿಸ್ಥಿತಿ ಸರಿದೂಗಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಇನ್ನು ಪಂಚ ಗ್ಯಾರಂಟಿಗಳ ಯೋಜನೆಯಿಂದಾಗುವ 52 ಸಾವಿರ ಕೋಟಿ ರು. ಹೊರೆ ಯನ್ನು ಅಷ್ಟು ಸುಲಭವಾಗಿ ಕಡಿಮೆ ಮಾಡಲಾಗದು ಎನ್ನುವುದನ್ನು ಮನಗಂಡಿರುವ ಸಿದ್ದರಾಮಯ್ಯ ಅವರು, ಏಕಾಏಕಿ ಕಡಿವಾಣ ಹಾಕದೆ, ಇದಕ್ಕಾಗಿ ಇತರ ಮೂಲಗಳಿಂದ ಆದಾಯ ಕ್ರೋಢೀಕರಿಸುವ ಯೋಚನೆಯಲ್ಲಿದ್ದಾರೆ…

Read More

ಉತ್ತರಕನ್ನಡ : SSLC ವಿದ್ಯಾರ್ಥಿನಿಯೋರ್ವಳು ಬಾಲಕಿಯರ ಬಾಲಮಂದಿರದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ. ಕಾರವಾರದ ಕೋಡಿಬಾಗದ ಬಳಿ ಇರುವ ಬಾಲಕಿಯರ ಬಾಲಮಂದಿರದಲ್ಲಿ ಶ್ವೇತಾ ಫಣೀಕರ (16) ಎನ್ನುವ SSLC ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.ಈಕೆಗೆ ಪಾಲಕರಿಲ್ಲದ ಕಾರಣದಿಂದ ಬಾಲಕಿಯರ ಬಾಲಮಂದಿರದಲ್ಲಿ ಆಸರೆ ಕಲ್ಪಿಸಲಾಗಿತ್ತು. ಈ ಹಿಂದೆ ನಡೆಸಲಾದ ಪೂರ್ವಸಿದ್ಧತೆ ಪರೀಕ್ಷೆಯಲ್ಲಿ ಗಣಿತ ವಿಷಯದಲ್ಲಿ ಅನುತ್ತೀರ್ಣಗೊಂಡಿದ್ದಳು. ಉಳಿದೆಲ್ಲ ವಿಷಯದ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ್ದಳು. ಪರೀಕ್ಷೆಯಲ್ಲಿ ಉತ್ತಮ ಅಂಕ ಸಾಧನೆ ಮಾಡುವ ಕುರಿತು ಆಕೆಗೆ ಸಲಹೆ ನೀಡಲಾಗಿತ್ತು. ಆಕೆಯೂ ಆತ್ಮವಿಶ್ವಾಸದಲ್ಲಿದ್ದಳು ಎಂದು ಪ್ರೌಢಶಾಲೆಯ ಶಿಕ್ಷಕರು ಮಾಹಿತಿ ನೀಡಿದ್ದಾರೆ. ಪೂರ್ವಸಿದ್ಧತೆ ಪರೀಕ್ಷೆ ನಡೆಯುತ್ತಿದ್ದು ಶಾಲೆಗೆ ಹೊರಡಲು ಸಿದ್ಧಗೊಳ್ಳುವುದಾಗಿ ಸಿಬ್ಬಂದಿಗೆ ತೆರಳಿದ ವಿದ್ಯಾರ್ಥಿನಿ ಕಟ್ಟಡ ಮೇಲಿನ ಮಹಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಬಾಲಮಂದಿರದ ಸಿಬ್ಬಂದಿ ತಿಳಿಸಿದ್ದಾರೆ. ಆದರೆ ಬಾಲಕಿಯ ಸಾವಿಗೆ ಕಾರಣ ಏನೆಂಬುದು ಇದುವರೆಗೂ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Read More

ಬೆಂಗಳೂರು : ದುಬೈ ನಿಂದ ಅಕ್ರಮವಾಗಿ 14 ಕೆಜಿ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡಿದ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಅವರನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿ ವಿಚಾರಣೆಗೆ ಒಳಪಡಿಸಿದ್ದಾರೆ. ಆದರೆ ಈ ಒಂದು ಪ್ರಕರಣದ ತನಿಖೆಯ ವೇಳೆ ಸ್ಪೋಟಕ ಟ್ವಿಸ್ಟ್ ಸಿಕ್ಕಿದ್ದು, ನಟಿ ರನ್ಯಾ ರಾವ್ ಅವರನ್ನು ತಮ್ಮ ಕೆಲಸಕ್ಕೆ ಬಳಸಿಕೊಂಡ ಮತ್ತೊಂದು ಟೀಂ ಇದರ ಹಿಂದೆ ಇದೆ ಎಂದು ತಿಳಿದುಬಂದಿದೆ. ಹೌದು ಚಿನ್ನ ಕಳ್ಳಸಾಗಣೆಯಲ್ಲಿ ನಟಿ ರನ್ಯಾ ರಾವ್ ಬಂಧನ ಪ್ರಕರಣಕ್ಕೆ ಮತ್ತೊಂದು ಸ್ಫೋಟಕ ತಿರುವು ಸಿಕ್ಕಿದೆ.ನಟಿ ರನ್ಯಾರನ್ನು ಬಂಧಿಸಿರುವ ಡಿಆರ್‌ಐ ಅಧಿಕಾರಿಗಳ ತನಿಖೆಯಲ್ಲಿ ಮತ್ತಷ್ಟು ಸ್ಫೋಟಕ ವಿಚಾರಗಳು ಬಯಲಾಗಿವೆ. ರನ್ಯಾ ಕೇವಲ ಪಾತ್ರಧಾರಿ, ಅಸಲಿ ಕಿಂಗ್ ಬೇರೆಯೇ ಇದ್ದಾರೆ ಎನ್ನಲಾಗಿದೆ. ಈ ಅಕ್ರಮ ಚಿನ್ನ ಸಾಗಾಟದಲ್ಲಿ ಏರ್ಪೋರ್ಟ್‌ನ ಕೆಲ ಅಧಿಕಾರಿಗಳು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ. ಚಿನ್ನ ಸಾಗಾಟದಲ್ಲಿ ನಟಿ ರನ್ಯಾಗೆ ಕೆಜಿಗೆ ನಾಲ್ಕರಿಂದ ಐದು ಲಕ್ಷ ಕಮಿಷನ್ ನೀಡುತ್ತಿದ್ದ ಬಗ್ಗೆ ಮಾಹಿತಿ…

Read More

ಬೆಂಗಳೂರು : ಮುಂದಿನ ತಿಂಗಳು ಏಪ್ರಿಲ್ 4 ರಿಂದ 14 ರವರೆಗೆ ಬೆಂಗಳೂರಿನಲ್ಲಿ ಇತಿಹಾಸ ಪ್ರಸಿದ್ಧ ಕರಗ ಮಹೋತ್ಸವ ಆಯೋಜನೆ ಮಾಡಲಾಗಿದ್ದು, ಅಲ್ಲಿಯವರೆಗೆ ಹಾಲಿ ಧರ್ಮರಾಯ ಸ್ವಾಮಿ ದೇವಸ್ಥಾನದ ನಿರ್ವಹಣಾ ಸಮಿತಿಯನ್ನು ಮುಂದುವರಿಯಲು ಹೈಕೋರ್ಟ್‌ ಅನುಮತಿ ನೀಡಿದೆ. ಹಾಲಿ ಸಮಿತಿಯನ್ನು ಮುಂದುವರಿಸುವಂತೆ ಕೋರಿ ಧರ್ಮರಾಯ ಸ್ವಾಮಿ ದೇವಸ್ಥಾನ ನಿರ್ವಹಣಾ ಸಮಿತಿಯ ಕೆ.ಸತೀಶ್‌ ಅರ್ಜಿ ಸಲ್ಲಿಸಿದ್ದರು.ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಹಾಲಿ ಸಮಿತಿಯ ಅವಧಿ ಮಾರ್ಚ್‌ 21ಕ್ಕೆ ಮುಗಿಯಲಿದೆ.‌ ಆದರೆ, ಕರಗ ಸಿದ್ಧತೆ ಮೂರು ತಿಂಗಳ ಹಿಂದೆಯೇ ಆರಂಭವಾಗಿದೆ. ಹೀಗಾಗಿ, ಕರಗ ಮಹೋತ್ಸವ ಮುಗಿಯುವವರೆಗೆ ಹಾಲಿ ಸಮಿತಿಯನ್ನೇ ಮುಂದುವರಿಸಬೇಕು ಎಂದು ಕೋರಿದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಹಾಲಿ ಸಮಿತಿಯು ಕರಗ ಮಹೋತ್ಸವ ಮುಗಿಯವವರೆಗೆ ಅಂದರೆ ಏಪ್ರಿಲ್ 15ರವರೆಗೆ ಅಸ್ತಿತ್ವದಲ್ಲಿರಲಿದೆ ಎಂದು ಆದೇಶಿಸಿ ವಿಚಾರಣೆಯನ್ನು ಏಪ್ರಿಲ್ 15ಕ್ಕೆ ಮುಂದೂಡಿತು.

Read More

ಬೆಂಗಳೂರು : ಬೆಂಗಳೂರಲ್ಲಿ ಇಂದು ಮತ್ತೊಂದು ಆತ್ಮಹತ್ಯೆ ಪ್ರಕರಣ ವರದಿಯಾಗಿದ್ದು, ಸೈಟ್ ವಿಚಾರದ ತನಿಖೆ ಹೆಸರಿನಲ್ಲಿ ಪೊಲೀಸ್ ಅಧಿಕಾರಿಯು ಕಿರುಕುಳ ನೀಡುತ್ತಿದ್ದರು ಎಂದು ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಾಮಾಕ್ಷಿಪಾಳ್ಯದ ಶ್ರೀನಿವಾಸನಗರದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಮಹಾದೇವಯ್ಯ ಎಂದು ತಿಳಿದುಬಂದಿದೆ.ಸೈಟ್ ವಿಚಾರಕ್ಕೆ ಸಂಬಂಧಿಸಿದಂತೆ ನಕಲಿ ದಾಖಲೆ ಸೃಷ್ಟಿಸಿದ ಆರೋಪದಡಿ ಮಹದೇವಯ್ಯ ವಿರುದ್ಧ ಕಳೆದ ಫೆಬ್ರವರಿಯಲ್ಲಿ ರಾಜಗೋಪಾಲನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಶಿವಶಂಕರ್ ಎಂಬುವವರು ಮಹದೇವಯ್ಯ ವಿರುದ್ಧ ದೂರು ನೀಡಿದ್ದರು. ಪ್ರಕರಣ ಸಂಬಂಧ ಮಹದೇವಯ್ಯ ಜಾಮೀನು ಪಡೆದ ಬಳಿಕ ಪೊಲೀಸ್ ವಿಚಾರಣೆಗೆ ಹಾಜರಾಗಿದ್ದರು. ತನಿಖೆ ಹೆಸರಲ್ಲಿ 15 ದಿನಗಳಿಂದ ಠಾಣೆಗೆ ಕರೆಸಿ ಟಾರ್ಚರ್ ಮಾಡುತ್ತಿದ್ದರು. ವಿಚಾರಣೆ ವೇಳೆ ರಾಜಗೋಪಾಲನಗರ ಠಾಣೆ ಇನ್ಸ್‌ಪೆಕ್ಟರ್‌ ಕಿರುಕುಳ ನೀಡಿದ್ದರು. ಊರುಬಿಟ್ಟು ಹೋಗಿ, ಇಲ್ಲದಿದ್ದರೆ ಹೇಳಿದವರಿಗೆ ಸೈಟ್ ರಿಜಿಸ್ಟರ್ ಮಾಡಿ ಎಂದು ಬೆದರಿಕೆ ಹಾಕುತ್ತಿದ್ದರು ಎಂದು ಮಹದೇವಯ್ಯ ಪತ್ನಿ ಆರೋಪಿಸಿದ್ದಾರೆ.ಇದರಿಂದ ಬೇಸತ್ತು ಮಹಾದೇವಯ್ಯ ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ.

Read More

ದಕ್ಷಿಣಕನ್ನಡ : ಅಪ್ರಾಪ್ತ ವಯಸ್ಸಿನ ಮಗನೋರ್ವ ಸ್ಕೂಟರ್​ ಓಡಿಸಿ ತಂದೆಗೆ ಸಂಕಷ್ಟ ತಂದಿಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಬಾಲಕ ರಸ್ತೆ ನಿಯಮ ಉಲ್ಲಂಘಿಸಿದ್ದಕ್ಕೆ ನ್ಯಾಯಾಲಯ ಆತನ ತಂದೆಗೆ 26 ಸಾವಿರ ದಂಡ ವಿಧಿಸಿದೆ. ಎರಡು ದಿನಗಳ ಹಿಂದೆ ಬಂಟ್ವಾಳ ಸಂಚಾರ ಠಾಣಾ ಪೊಲೀಸರು ಎಸ್. ಐ. ಸುತೇಶ್ ನೇತೃತ್ವದಲ್ಲಿ ಅಲ್ಲಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ಸಂದರ್ಭ ಬಾಲಕನೋರ್ವ ಪರ್ಲಿಯಾ ಸಮೀಪ ಸ್ಕೂಟರ್ ಚಲಾಯಿಸಿಕೊಂಡು ಬರುತ್ತಿರುವುದು ಕಂಡುಬಂದಿದೆ. ಆಗ ಆತನನ್ನು ನಿಲ್ಲಿಸಿ ವಿಚಾರಿಸಿದಾಗ ಅಪ್ರಾಪ್ತ ವಯಸ್ಕನಾಗಿದ್ದು, ಲೈಸನ್ಸ್ ಇಲ್ಲದಿರುವುದು ಗೊತ್ತಾಗಿದೆ. ಲೈಸನ್ಸ್ ಹೊಂದಿರದ, ಅಪ್ರಾಪ್ತ ವಯಸ್ಸಿನ ಬಾಲಕನೋರ್ವ ಸ್ಕೂಟರ್ ಚಲಾಯಿಸಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಪರಿಣಾಮ, ಈ ಕುರಿತು ಪ್ರಕರಣ ದಾಖಲಾಗಿದ್ದು, ಬಳಿಕ ಬಾಲಕನ ತಂದೆ, ಸಮೀರ್ ಎಂಬವರಿಗೆ ಬಂಟ್ವಾಳ ಜೆಎಂಎಫ್ ಸಿ ಕೋರ್ಟಿನ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ನಿಯಮ ಉಲ್ಲಂಘಿಸಿದ್ದಕ್ಕಾಗಿ 26 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ.

Read More

ಬಳ್ಳಾರಿ : ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗುತ್ತಿರೋದು, ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಕೇಸ್. ಕನ್ನಡ ಯೂಟ್ಯೂಬ್ ಜಗತ್ತಿನಲ್ಲೊಂದು ಸಂಚಲನ ಸೃಷ್ಟಿಯಾಗಿದೆ. ಈವರೆಗೆ ಇಂಗ್ಲೀಷ್ , ಹಿಂದಿ ಯೂಟ್ಯೂಬ್ ಚಾನಲ್ ಗಳಲ್ಲಿ ಮಾತ್ರ ಕಾಣಲು ಸಿಗುತ್ತಿದ್ದ ಕೋಟಿಗಟ್ಟಲೆ ವೀಕ್ಷಣೆ, ಲಕ್ಷಗಟ್ಟಲೆ ಲೈಕ್ಸ್, ಸಾವಿರ ಸಾವಿರ ಕಮೆಂಟುಗಳು ಕನ್ನಡ ಯೂಟ್ಯೂಬ್ ಚಾನಲ್ ಒಂದರ ವಿಡಿಯೋಗೆ ಸಿಕ್ಕಿವೆ ಹೌದು ದಕ್ಷಿಣ ಕನ್ನಡ ಸೌಜನ್ಯ ಪ್ರಕರಣದ ಕುರಿತು ವಿಡಿಯೋ ಮಾಡಿದ್ದ ಸಮೀರ್ ಎಂಡಿ ಎಂಬವರಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಸಮೀರ್ ನನ್ನು ಬಂಧಿಸಲು ಪೊಲೀಸರು ಬಳ್ಳಾರಿಗೆ ತೆರಳಿದ್ದಾಗ ಈ ವೇಳೆ ಸಮೀರ್ ನಾನು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಹೇಳಿದ ಮೇಲೆ ಆತನಿಗೆ ನೋಟಿಸ್ ನೀಡಿ ಪೊಲೀಸರು ಹಿಂತಿರುಗಿದ್ದಾರೆ ಎಂದು ತಿಳಿದುಬಂದಿದೆ. ದಕ್ಷಿಣ ಕನ್ನಡ ಸೌಜನ್ಯ ಪ್ರಕರಣದ ಕುರಿತು ವಿಡಿಯೋ ಮಾಡಿದ್ದ ಸಮೀರ್ ಎಂಡಿ, ನನಗೆ ಜೀವ ಬೆದರಿಕೆ ಬರುತ್ತಿರುವ ಹಿನ್ನೆಲೆ ಸೌಜನ್ಯ ಪ್ರಕರಣದ ಮತ್ತೋರ್ವ ಹೋರಾಟಗಾರ ಗಿರಿಶ್ ಮಟ್ಟನವರ್ ಅವರನ್ನು ಮನೆಗೆ…

Read More