Subscribe to Updates
Get the latest creative news from FooBar about art, design and business.
Author: kannadanewsnow05
ಚಿತ್ರದುರ್ಗ : ಚಾಲಕನ ನಿಯಂತ್ರಣ ತಪ್ಪಿ ವೇಗವಾಗಿ ಚಲಿಸುತ್ತಿದ್ದ ಕಾರು ಒಂದು ಪಲ್ಟಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿ ಸಾವನ್ನಪ್ಪಿದ್ದು, 6 ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಮೃತರನ್ನು ಅರ್ಜುನ, ಶ್ರೀಧರ್ ಮತ್ತು ಶರವಣ ಎಂದು ಗುರುತಿಸಿದೆ. ಚಿತ್ರದುರ್ಗ ಜಿಲ್ಲೆಯ ಸೀಬಾರದ ಬಳಿ ಚಾಲಕನ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಪಲ್ಟಿಯಾಗಿದ್ದು, ಮೂವರು ಸಾವನಪ್ಪಿದ್ದಾರೆ. ಇನ್ನು ಅಪಘಾತದಲ್ಲಿ 6 ಜನರಿಗೆ ಗಂಭೀರವಾದ ಗಾಯಗಳಾಗಿವೆ. ಸಲ್ಮಾನ್, ನವೀನ್, ಗೋಕುಲ್ ಸೆಂಥಿಲ್ ಕುಮಾರ್, ರಮೇಶ್ ಮತ್ತು ಗೌತಮ್ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಕುರಿತಂತೆ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅರ್ಜುನ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನುಳಿದ ಇಬ್ಬರು ಜಿಲ್ಲಾಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ದಾಖಳಿಸಿದ್ದಾಗ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮೃತ ಮೂವರು ತಮಿಳುನಾಡು ಮೂಲದವರು ಎಂದು ಹೇಳಲಾಗುತ್ತಿದ್ದು, ಮೃತ ಅರ್ಜುನ್ ತಮಿಳುನಾಡು ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಎನ್ನಲಾಗಿದೆ.
ಬೆಂಗಳೂರು : ಬಿಗ್ ಬಾಸ್ ಮಾಜಿ ಸ್ಪರ್ಧಿ, ವಕೀಲ ಜಗದೀಶ್ ಬರೋಬ್ಬರಿ 93 ದಿನಗಳ ಜೈಲುವಾಸದ ಬಳಿಕ ಜಾಮೀನಿನ ಮೇಲೆ ಬಿಡುಗಡೆ ಆಗಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಜಗದೀಶ್, ತಮ್ಮ ಬಂಧನಕ್ಕೆ ಸರ್ಕಾರ ಹಾಗೂ ಪೊಲೀಸ್ ವ್ಯವಸ್ಥೆಯನ್ನು ನೇರ ಹೊಣೆ ಮಾಡಿದ್ದಾರೆ. ಕೊಡಿಗೆಹಳ್ಳಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾಯರ್ ಜಗದೀಶ್ ಹಾಗೂ ಗನ್ ಮ್ಯಾನ್ನನ್ನು ಜನವರಿ 25ರಂದು ಪೊಲೀಸರು ಬಂಧಿಸಿದ್ದರು.ರಸ್ತೆಯಲ್ಲಿ ಅಣ್ಣಮ್ಮ ದೇವಿ ಕೂರಿಸಲು ವಿರೋಧಿಸಿದ್ದಕ್ಕೆ ಜಗದೀಶ್ ಮತ್ತು ಸ್ಥಳೀಯರ ನಡುವೆ ಜಗಳವಾಗಿತ್ತು. ಹೀಗಾಗಿ ಬಂಧನವಾಗಿದ್ದ ಲಾಯರ್ ಜಗದೀಶ್ ಇದೀಗ ಜೈಲಿನಿಂದ ರಿಲೀಸ್ ಆಗಿದ್ದಾರೆ. ರಿಲೀಸ್ ಬೆನ್ನಲ್ಲೆ ಲಾಯರ್ ಹೇಳಿದ್ದೇನು? ಈ ಬಗ್ಗೆ ಲಾಯರ್ ಜಗದೀಶ್ ಅವರು ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿ, ತಮಗೆ ಜಾಮೀನು ಸಿಕ್ಕಿರುವುದಾಗಿ ಹೇಳಿದ್ದಾರೆ. ನಾನು ಹಲವು ವರ್ಷಗಳಿಂದ ಭ್ರಷ್ಟಾಚಾರದ ವಿರುದ್ಧ ಧೀರ ಹೋರಾಟ ನಡೆಸುತ್ತಿರುವ ಹೋರಾಟಗಾರ ಎಂದಿರುವ ಜಗದೀಶ್, PSI ಹಗರಣವನ್ನು ಬಯಲು ಮಾಡಿದ್ದು, ADGP ಅಮೃತಪಾಲ್ ಅವರನ್ನು ಜೈಲಿಗೆ ಕಳಿಸಿದ್ದು ನಮ್ಮ…
ರಾಯಚೂರು : ರಾಯಚೂರಿನಲ್ಲಿ ಬೆಚ್ಚಿಬಿಳಿಸುವ ಘಟನೆ ಎಂದು ನಡೆದಿದ್ದು ದುಷ್ಕರ್ಮಿಗಳು ಯುವಕನ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಭೀಕರವಾಗಿ ಕೊಲೆಗೈದಿರುವ ಘಟನೆ ನಗರದ ರೈಲ್ವೆ ನಿಲ್ದಾಣದ ಹತ್ತಿರದ ಉದ್ಯಾನವನ ಬಳಿ ನಡೆದಿದೆ. ಕೊಲೆಯಾದ ಯುವಕನನ್ನು ಇಂದಿರಾನಗರದ ನಿವಾಸಿ ವೀರೇಶ್ (26) ಎಂದು ಗುರುತಿಸಲಾಗಿದೆ. ತಲೆಯ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಲಾಗಿದ್ದು, ಕೃತ್ಯದ ಬಳಿಕ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ವಿಷಯ ತಿಳಿದು ಪಶ್ಚಿಮ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಬೆಂಗಳೂರು : ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣ ಅಬ್ಬರಿಸುತ್ತಿದ್ದು, ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ಜನರಿಗೆ ವರುಣ ತಂಪೆರೆದಿದ್ದಾನೆ. ಇದೀಗ ಹವಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಇಂದಿನಿಂದ ಮೇ 4 ರವರೇಗೆ ರಾಜ್ಯದ ಎಲ್ಲಾ ಭಾಗಗಳಲ್ಲೂ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಎಲ್ಲಾ ಭಾಗದಲ್ಲೂ ಇಂದಿನಿಂದ ನಾಲ್ಕು ದಿನ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಈಗಾಗಲೇ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಇಂದಿನಿಂದ ಮೇ 4ರ ವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿತ್ರದುರ್ಗ, ಹಾಸನ, ಶಿವಮೊಗ್ಗ, ಮೈಸೂರು, ಮಂಡ್ಯ, ಚಿಕ್ಕಮಂಗಳೂರು, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ ಹಾಗು ಉತ್ತರ ಕನ್ನಡ ಜಿಲ್ಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಬೆಂಗಳೂರು : ಈಗಾಗಲೇ ಮಧ್ಯದ ಮೇಲಿನ ದರ ಎರಡು ಬಾರಿ ಏರಿಕೆ ಮಾಡಿರುವ ರಾಜ್ಯ ಸರ್ಕಾರ ಇದೀಗ ಮೂರನೇ ಬಾರಿಗೆ ಮಧ್ಯದರ ಏರಿಕೆ ಮಾಡಿದ್ದು ಮಧ್ಯಪ್ರಿಯರಿಗೆ ರಜೆ ಸರ್ಕಾರ ಮತ್ತೊಮ್ಮೆ ಶಾಕ್ ನೀಡಿದೆ.ಹೌದು ಮದ್ಯ ಪ್ರಿಯರಿಗೆ ಮತ್ತೊಮ್ಮೆ ನೀಡಲು ಮುಂದಾದ ಸರ್ಕಾರ ಬಿಯರ್ ಮೇಲಿನ ಅಬಕಾರಿ ಸುಂಕ ಹೆಚ್ಚಿಸುವ ಬಗ್ಗೆ ಕರಡು ಅಧಿಸೂಚನೆ ಹೊರಡಿಸಲಾಗಿದ್ದು, 195% ನಿಂದ 205% ಗೆ ಸುಂಕ ಹೆಚ್ಚಿಸುವ ಬಗ್ಗೆ ಕರುಡು ಅಧಿಸೂಚನೆ ಪ್ರಕಟಿಸಲಾಗಿದೆ. ಇನ್ನು ಈ ಕುರಿತು ಒಂದು ವಾರದೊಳಗೆ ಆಕ್ಷೇಪಣೆ ಸಲ್ಲಿಸಲು ಸಾರ್ವಜನಿಕರಿಗೆ ಅವಕಾಶ ಕೂಡ ಕಲ್ಪಿಸಲಾಗಿದೆ. ವಿದ್ಯುತ್ ದರ ಏರಿಕೆ ಬೆನ್ನಲ್ಲೆ ಇದೀಗ ಮದ್ಯದ ದರ ಏರಿಕೆಗೆ ರಾಜ್ಯ ಸರ್ಕಾರ ಮುಂದಾಗಿದೆ.ಈಗಾಗಲೇ ಡೀಸೆಲ್ ಹಾಲು ಮತ್ತು ವಿದ್ಯುತ್ ದರವನ್ನು ಸರ್ಕಾರ ಹೆಚ್ಚಿಸಿದೆ. ಬ್ರಾಂಡಿ, ವಿಸ್ಕಿ, ರಂ ಜಿನ್ ಗಳ ದರವನ್ನು ಪ್ರತೀ ಕ್ವಾಟರ್ ಗೆ 10 ರೂ.ಇಂದ 15 ರೂಪಾಯಿ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ.ಬಿಯರ್ ದರ 10 ರೂ. ಇಂದ 20 ರೂ…
ಬೆಂಗಳೂರು : ಈಗಾಗಲೆ ಕಾವೇರಿ ನೀರಿನ ದರ ಹಾಗೂ ಮೆಟ್ರೋ ದರ ಏರಿಕೆ ಮಾಡಿ ಸರ್ಕಾರ ಬೆಂಗಳೂರಿನ ಜನತೆಗೆ ಶಾಕ್ ನೀಡಿದ್ದು, ಇದೀಗ ಬೆಂಗಳೂರು ಜನತೆಗೆ ಮತ್ತೊಂದು ದರ ಏರಿಕೆಯ ಬಿಸಿ ತಟ್ಟಲಿದೆ. ಆಟೋ ಪ್ರಯಾಣದ ದರ ಹೆಚ್ಚಳಕ್ಕೆ ಇದೀಗ ಜಿಲ್ಲಾಡಳಿತ ಗ್ರೀನ್ ಸಿಗ್ನಲ್ ಕೊಟ್ಟಿದ್ದು, ಬೆಂಗಳೂರಿನ ಜನತೆಗೆ ಗಾಯದ ಮೇಲೆ ಬರೆ ಎಳೆದಂತೆ ಆಗಿದೆ. ಹೌದು ಆಟೋ ದರ ಏರಿಕೆ ಮಾಡಲು ಜಿಲ್ಲಾಡಳಿತ ಗ್ರೀನ್ ಸಿಗ್ನಲ್ ಕೊಟ್ಟಿದ್ದು, ಇನ್ನು ಅಧಿಕೃತ ಆದೇಶ ಹೊರ ಬೀಳುವುದು ಮಾತ್ರ ಬಾಕಿ ಇದೆ. ಮೇ 13 ರಂದು ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.ಈಗಾಗಲೇ ಅನೇಕ ಅಗತ್ಯ ವಸ್ತುಗಳ ದರ ಏರಿಕೆ ಆಗಿದೆ. ಹೀಗಾಗಿ ಆಟೋ ಮೀಟರ್ ದರ ಏರಿಕೆ ಮಾಡಲು ಜಿಲ್ಲಾಧಿಕಾರಿ ಕೂಡಲೇ ಗ್ರೀನ್ ಸಿಗ್ನಲ್ ನೀಡಬೇಕು ಎಂದು ಆಟೋ ಚಾಲಕರು ಆಗ್ರಹಿಸಿದ್ದಾರೆ. ಆಟೋ ಮೀಟರ್ ದರ ಏರಿಕೆ ಮಾಡುವಂತೆ ಕಳೆದ ಮೂರು ವರ್ಷಗಳಿಂದ ಆಟೋ ಚಾಲಕ ಹಾಗೂ ಮಾಲೀಕರ ಸಂಘಟನೆಗಳು…
ಬೆಂಗಳೂರು : ಇತ್ತೀಚಿಗೆ ಈ ಹೃದಯಾಘಾತ ಅನ್ನುವುದು ಚಿಕ್ಕ ಮಕ್ಕಳಿಂದ ಹಿಡಿದು ವಯೋ ವೃದ್ಧರವರೆಗೂ ಸಾಮಾನ್ಯ ಕಾಯಿಲೆಯಂತೆ ಆಗಿಬಿಟ್ಟಿದೆ. ಅದರಲ್ಲೂ ಚಿಕ್ಕ ಮಕ್ಕಳಲ್ಲಿ ಈ ಹೃದಯ ಸಂಬಂಧಿ ಕಾಯಿಲೆಗೆ ಏನು ಕಾರಣ ಅನ್ನೋದು ತಜ್ಞರು ಇದೀಗ ಬಹಿರಂಗಪಡಿಸಿದ್ದಾರೆ. ಮನೆಯಲ್ಲಿ ಪಾಲಿಶ್ ಮಾಡುವ ಅಕ್ಕಿ ಸೇವನೆಯಿಂದ ಈ ಒಂದು ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚಾಗುತ್ತಿವೆ ಎಂದು ಅಘಾತಕಾರಿ ಅಂಶವನ್ನು ತಜ್ಞರು ಬಹಿರಂಗಪಡಿಸಿದ್ದಾರೆ. ಹೌದು ದಿನನಿತ್ಯದ ನಮ್ಮ ಆಹಾರ ಪದ್ಧತಿಯಲ್ಲಿ ಆರೋಗ್ಯ ಕುತ್ತು ತರುವ ಅನೇಕ ತಿನಿಸು, ಪದಾರ್ಥಗಳನ್ನು ಸೇವನೆ ಮಾಡುತ್ತಿದ್ದೇವೆ. ಅದರಲ್ಲೂ ಅನ್ನ ಎಲ್ಲ ಮನೆಗಳಲ್ಲಿ ಸಾಮಾನ್ಯವಾಗಿ ದಿನನಿತ್ಯ ಸೇವಿಸುವ ಒಂದು ಆಹಾರವಾಗಿದೆ. ಬಿಳಿ ಅಕ್ಕಿಯಲ್ಲೇ ಬಗೆ ಬಗೆಯ ಅಡುಗೆ ಮಾಡಿ ಸೇವಿಸಲಾಗುತ್ತದೆ. ಈ ಬೆನ್ನಲ್ಲೇ ಇದೀಗ ಈ ಬಿಳಿ ಪಾಲಿಶ್ ಅಕ್ಕಿ ಸೇವಿಸುವವರು ಎಚ್ಚರದಿಂದ ಇರಬೇಕಾದ ಪರಿಸ್ಥಿತಿ ಬಂದಿದೆ. ಏಕೆಂದರೆ ಹೃದಯ ಸಂಬಂಧಿ ಕಾಯಿಲೆಗಳಿಗೆ ಇದೇ ಪಾಲಿಶ್ ಅಕ್ಕಿ ಕಾರಣ ಎಂದು ತಜ್ಞರು ತಿಳಿಸಿದ್ದಾರೆ. ಇತ್ತೀಚಿಗೆ ಪುಟ್ಟ ಮಕ್ಕಳಿಗೂ ಕೂಡ ಹೃದಯ…
ಮಡಿಕೇರಿ : ಮಡಿಕೇರಿಯಲ್ಲಿ ಅಡುಗೆ ಅನೀಲ ಸೋರಿಕೆಯಾಗಿ ಗ್ಯಾಸ್ ಗೆ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ಮನೆಯಲ್ಲಿದ್ದ ದಂಪತಿಗಳಿಗೆ ಗಂಭೀರವಾದ ಗಾಯಗಳಾಗಿದ್ದು, ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪರಾಗಿರುವ ಘಟನೆ ಮಡಿಕೇರಿಯ ಸುಂಟಿಕೊಪ್ಪದಲ್ಲಿ ನಿನ್ನೆ ನಡೆದಿದೆ. ಸುಂಟಿಕೊಪ್ಪ 1ನೇ ವಿಭಾಗದ ನಿವಾಸಿಗಳಾದ ತಲೆ ಹೊರೆ ಕಾರ್ಮಿಕ ವಿಜಯ, ಅವರ ಪತ್ನಿ ಸಾವಿತ್ರಿ ಮನೆಯ ಅಡುಗೆ ಕೆಲಸ ನಿರ್ವಹಿಸುತ್ತಿದ್ದ ವೇಳೆ ಅನಿಲ ಸೋರಿಕೆಯಾಗಿ ಏಕಾಏಕಿ ಸಿಲಿಂಡರ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ನಂದಿಸಲು ಪ್ರಯತ್ನಿಸಿದ ವೇಳೆ ಈ ದಂಪತಿಗಳಿಗೆ ಗಾಯವಾಗಿದೆ. ಬೆಂಕಿ ಗಮನಿಸಿದ ಅಕ್ಕಪಕ್ಕದವರು ಸಿಲಿಂಡರ್ ಗಾಬರಿಯಿಂದ ಹೊರ ಹಾಕಿದ್ದಾರೆ. ಬಳಿಕ ದಂಪತಿಗಳನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರು : ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ ನಡೆಸುವ ಕೇಂದ್ರ ಸರ್ಕಾರದ ತೀರ್ಮಾನವನ್ನು ನಮ್ಮ ಸರ್ಕಾರ ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ. ಇದೇ ಸಂದರ್ಭದಲ್ಲಿ ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನೂ ನಡೆಸಬೇಕೆಂದು ಕೇಂದ್ರ ಸರ್ಕಾರವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಆಗ್ರಹಪಡಿಸಿದ್ದಾರೆ. ಈ ಕುರಿತಂತೆ ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಸಿಎಂ ಸಿದ್ದರಾಮಯ್ಯ, ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ ನಡೆಸುವ ಕೇಂದ್ರ ಬಿಜೆಪಿ ಸರ್ಕಾರದ ತೀರ್ಮಾನವನ್ನು ನಮ್ಮ ಸರ್ಕಾರ ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ. ಇದೇ ಸಂದರ್ಭದಲ್ಲಿ ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನೂ ನಡೆಸಬೇಕೆಂದು ನರೇಂದ್ರಮೋದಿ ಅವರ ಸರ್ಕಾರವನ್ನು ಆಗ್ರಹಪಡಿಸುತ್ತಿದ್ದೇನೆ. ಕರ್ನಾಟಕದಲ್ಲಿ ನಾವು ಕೇವಲ ಜಾತಿ ಗಣತಿ ನಡೆಸದೆ ಅದರ ಜೊತೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಯನ್ನು ನಡೆಸಿದ್ದೇವೆ. ಈ ದತ್ತಾಂಶಗಳ ಆಧಾರದಲ್ಲಿ ಈಗಿನ ಮೀಸಲಾತಿ ನೀತಿಯನ್ನು ಪರಿಷ್ಕರಿಸಿ ಅದರ ಮಿತಿಯನ್ನು ಹೆಚ್ಚಿಸುವ ಪ್ರಯತ್ನ ಕೂಡಾ ನಡೆದಿದೆ. ಜಾತಿ ಗಣತಿಯ ಜೊತೆಯಲ್ಲಿ ಈ…
ಹಾವೇರಿ : ಹಾವೇರಿಯಲ್ಲಿ ಚಲಿಸುತ್ತಿದ್ದ ಬಸ್ ಅನ್ನು ಸಡನ್ ಆಗಿ ಚಾಲಕ ನಿಲ್ಲಿಸಿ ಹಿಂದುಗಡೆ ಇರುವ ಸೀಟ್ ಗೆ ಬಂದು ನಮಾಜ್ ಮಾಡಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್-ಹಾವೇರಿ ಮಾರ್ಗದ ಮಧ್ಯದಲ್ಲಿ ನಡೆದಿದೆ. ಈ ಒಂದು ವಿಡಿಯೋವನ್ನು satish_kandagalpura ಎನ್ನುವವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬಸ್ ಚಾಲಕ ನಮಾಜ್ ಮಾಡುವ ದೃಶ್ಯವನ್ನು ಪ್ರಯಾಣಿಕರೊಬ್ಬರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು, ಭಾರೀ ವೈರಲ್ ಆಗುತ್ತಿದೆ.ಜೊತೆಗೆ, ಸರ್ಕಾರಿ ಕೆಲಸದ ಅವಧಿಯಲ್ಲಿ ಹತ್ತಾರು ಪ್ರಯಾಣಿಕರನ್ನು ಬಸ್ನಲ್ಲಿ ಕೂರಿಸಿ ನಮಾಜ್ ಮಾಡಿದ ಡ್ರೈವರ್ನ ನಡೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ಸಾರ್ವಜನಿಕರಿಗೆ ಸೇವೆ ನೀಡುವ ಸರ್ಕಾರಿ ಸಂಸ್ಥೆಯ ಬಸ್ನಲ್ಲಿ ಕರ್ತವ್ಯದ ವೇಳೆ ಈ ರೀತಿಯ ಧಾರ್ಮಿಕ ಚಟುವಟಿಕೆಯನ್ನು ಮಾಡುವುದು ಸರಿಯಾದ ಚಟುವಟಿಕೆ ಅಲ್ಲ ಎಂಬ ಅಭಿಪ್ರಾಯವನ್ನು ಹಲವರು ವ್ಯಕ್ತಪಡಿಸಿದ್ದಾರೆ. ಕೆಲವರು ಇದು ಸಾರ್ವಜನಿಕ ಸೇವೆಯ ದುರಪಯೋಗವೆಂದು ನಿಂದಿಸಿದ್ದಾರೆ. ಇದಲ್ಲದೆ, ಬಸ್ ಸಕಾಲದಲ್ಲಿ ತಲುಪದೇ ವಿಳಂಬವಾಗಿರುವ ಬಗ್ಗೆ ಸಹ ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಸ್ ನಲ್ಲಿ ಹಲವು…













