Subscribe to Updates
Get the latest creative news from FooBar about art, design and business.
Author: kannadanewsnow05
ನವದೆಹಲಿ : ಇಂಡಿಗೋ ವಿಮಾನದಲ್ಲಿ ಗಗನಸಖಿಗೆ ಕುಡಿದ ಮತ್ತಿನಲ್ಲಿದ್ದ ಪ್ರಯಾಣಿಕನೊಬ್ಬ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ದೆಹಲಿ ಮತ್ತು ಶಿರಡಿ ವಿಮಾನದಲ್ಲಿ ಗಗನಸಖಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದ್ದು, ವಿಮಾನ ಲ್ಯಾಂಡ್ ಆದ ತಕ್ಷಣ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೌದು ಇಂಡಿಗೋ ವಿಮಾನದಲ್ಲಿ ಗಗನಸಖಿಗೆ ಕುಡಿದ ಮತ್ತಿನಲ್ಲಿದ್ದ ಪ್ರಯಾಣಿಕನೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ. ಅನುಚಿತವಾಗಿ ವರ್ತಿಸಿದ್ದು ಅಲ್ಲದೇ ಅಸಭ್ಯವಾಗಿ ಗಗನಸಖಿಯನ್ನು ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಫ್ಲೈಟ್ ಲ್ಯಾಂಡ್ ಆಗುತ್ತಿದ್ದಂತೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಂಗಳೂರು : ಬೆಂಗಳೂರಿನ ಮಾರತ್ತಹಳ್ಳಿಯಲ್ಲಿ ಯುವತಿ ಜೊತೆ ಅಸಭ್ಯವಾಗಿ ವರ್ತಿಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮಾರತ್ತಹಳ್ಳಿ ಠಾಣೆ ಪೋಲಿಸರು ಆರೋಪಿ ಶ್ರೀಕಾಂತ್ ಎನ್ನುವವನನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತ ಶ್ರೀಕಾಂತ್ (32) ಎಂಬಿಎ ಪದವೀಧರನಾಗಿದ್ದು ದೇವರಬೀಸನಹಳ್ಳಿ ನಿವಾಸಿ ಎಂದು ತಿಳಿದುಬಂದಿದೆ. ಏಪ್ರಿಲ್ 30ರಂದು ರಾತ್ರಿ 11:30ರ ಸುಮಾರಿಗೆ ಇಕೋ ವರ್ಲ್ಡ್ ಮೇನ್ ಗೇಟ್ ಬಳಿ ಯುವತಿಯನ್ನು ಆರೋಪಿ ಹಿಂದಿನಿಂದ ಸ್ಪರ್ಶಿಸಿದ್ದಾನೆ. ಈ ಕುರಿತು 23 ವರ್ಷದ ಯುವತಿ ನೀಡಿದ್ದ ದೂರಿನನ್ವಯ ಮಾರತ್ ಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಹಿನ್ನೆಲೆ? ಏಪ್ರಿಲ್ 30 ರಂದು ಇಕೋ ವರ್ಲ್ಡ್ ಮೇನ್ ಗೇಟ್ ಬಳಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ದ್ವಿಚಕ್ರ ವಾಹನದಲ್ಲಿ ಬಂದಿದ್ದ ಆರೋಪಿ ಹಿಂಭಾಗ ಸ್ಪರ್ಶಿಸಿ ಹೋಗಿದ್ದ. ಕೆಲವೇ ನಿಮಿಷಗಳಲ್ಲಿ ಪುನಃ ಹಿಂದಿನಿಂದ ಬಂದು ಮತ್ತದೇ ರೀತಿಯ ಅನುಚಿತ ವರ್ತನೆ ತೋರಿದ್ದಾನೆ. ಈ ಸಂದರ್ಭದಲ್ಲಿ ಸಮೀಪದಲ್ಲಿದ್ದ ಕೆಲವರ ಸಹಾಯ ಕೇಳಿದರೂ ಯಾರೂ ನೆರವಿಗೆ ಬರಲಿಲ್ಲ ಎಂದು ನೊಂದ ಯುವತಿ ದೂರಿನಲ್ಲಿ ಆರೋಪಿಸಿದ್ದರು.
ನವದೆಹಲಿ : ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿಗೆ ಇಬ್ಬರು ಕನ್ನಡಿಗರು ಸೇರಿ 26 ಜನ ಬಲಿಯಾಗಿದ್ದಾರೆ. ಇದೀಗ ಉಗ್ರರು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮತ್ತೊಂದು ಸ್ಫೋಟಕವಾದ ಮಾಹಿತಿ ಹೊರಬಿದ್ದಿದ್ದು, ಪಹಲ್ಗಾಮ್ ದಾಳಿಗೂ ಮೊದಲೇ ಉಗ್ರರ ದಾಳಿ ಬಗ್ಗೆ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿತ್ತು ಎಂದು ತಿಳಿದುಬಂದಿದೆ. ಹೌದು ಈ ಕುರಿತಂತೆ ಅಧಿಕಾರಿಯೊಬ್ಬರು ಹೇಳಿಕೆ ನೀಡಿರುವುದನ್ನು ಮಾಧ್ಯಮವೊಂದು ಸುದ್ದಿ ಪ್ರಕಟಿಸಿದೆ. ಶ್ರೀನಗರ ಮತ್ತು ಸುತ್ತಮುತ್ತಲಿನ ಹೋಟೆಲ್ಗಳಲ್ಲಿ ತಂಗಿದ್ದ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಭದ್ರತಾ ಪಡೆ ಮತ್ತು ಸರ್ಕಾರಕ್ಕೆ ಗುಪ್ತಚರ ಮಾಹಿತಿ ನೀಡಲಾಗಿತ್ತು.ದಾಳಿಯ ಬೆದರಿಕೆಯನ್ನು ಪರಿಗಣಿಸಿ ಶ್ರೀನಗರದ ದಾಲ್ ಸರೋವರ ಮತ್ತು ಮೊಘಲ್ ಉದ್ಯಾನವನದ ಮೇಲಿರುವ ಜಬರ್ವಾನ್ ಶ್ರೇಣಿಯ ತಪ್ಪಲಿನಲ್ಲಿ ಹೆಚ್ಚಿನ ಭದ್ರತಾ ವ್ಯವಸ್ಥೆಯನ್ನು ಕೈಗೊಳ್ಳಲಾಗಿತ್ತು. ಕಾತ್ರಾದಿಂದ ಶ್ರೀನಗರವನ್ನು ಸಂಪರ್ಕಿಸುವ ಮೊದಲ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಏ.19 ರಂದು ಚಾಲನೆ ನೀಡಬೇಕಿತ್ತು. ಈ ದಿನವೇ ಉಗ್ರರು ಕೃತ್ಯ…
ಕಲಬುರ್ಗಿ : ಕಳೆದ ಏಪ್ರಿಲ್ 16 ರಂದು ರಾಜ್ಯದ ಬೀದರ್ ಶಿವಮೊಗ್ಗ ಹಾಗೂ ಧಾರವಾಡದಲ್ಲಿ ಸಿಇಟಿ ಪರೀಕ್ಷೆಯ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದ ಪ್ರಕರಣ ರಾಜ್ಯಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಇಂದು ಕಲಬುರ್ಗಿಯಲ್ಲಿ ಕೂಡ ನೀಟ್ ಪರಿಕ್ಷೆ ವೇಳೆ ಅಧಿಕಾರಿಗಳು ವಿದ್ಯಾರ್ಥಿಯೋರ್ವನ ಜನಿವಾರ ತೆಗೆಸಿದ ಪ್ರಕರಣ ನಡೆದಿದೆ. ಹೌದು ಇಂದು ಕಲ್ಬುರ್ಗಿಯ ಸೇಂಟ್ ಮೇರಿ ಶಾಲೆಯಲ್ಲಿ ನೀಟ್ ಪರೀಕ್ಷೆ ಇತ್ತು ಈ ವೇಳೆ ವಿದ್ಯಾರ್ಥಿ ಶ್ರೀಪಾದ್ ಪಾಟೀಲ್ ಗೆ ಅಧಿಕಾರಿಗಳು ಶನಿವಾರ ತೆಗೆದಿಟ್ಟು ಒಳಗಡೆ ಹೋಗು ಎಂದು ಸೂಚನೆ ನೀಡಿದ್ದಾರೆ ಈ ಹಿನ್ನೆಲೆ ಆದ ಜನಿವಾರ ತೆಗೆದು ತನ್ನ ತಂದೆಗೆ ಕೊಟ್ಟು ಪರೀಕ್ಷೆಗೆ ತೆರಳಿದ್ದಾನೆ ಈ ವಿಚಾರ ತಿಳಿದು, ಬ್ರಾಹ್ಮಣ ಸಮಾಜದವರು ಕಲ್ಬುರ್ಗಿಯ ಸೆಂಟ್ ಮೇರಿ ಶಾಲೆಯ ಎದುರುಗಡೆ ಪ್ರತಿಭಟನೆ ಮಾಡಿದರು. ಪರೀಕ್ಷೆಯ ಬಳಿಕ ಹೊರಬಂದ ಶ್ರೀಪಾದ್ ಪಾಟೀಲ್ ಗೆ ಶಾಸ್ತ್ರೋಕ್ತವಾಗಿ ಅಲ್ಲೇ ಜನಿವಾರ ಧಾರಣೆ ಮಾಡಲಾಯಿತು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ವಿದ್ಯಾರ್ಥಿ ಶ್ರೀಪಾದ್ ಪಾಟೀಲ್, ಅಧಿಕಾರಿಗಳ ಸೂಚನೆ ಹಿನ್ನೆಲೆ…
ಹುಬ್ಬಳ್ಳಿ : ಮಂಗಳೂರಿನಲ್ಲಿ ಸುಹಾಸ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಗೃಹ ಸಚಿವ ಪರಮೇಶ್ವರ ಅವರು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಕರಾವಳಿ ಕೋಮು ವಿರೋಧಿ ಕಾರ್ಯಪಡೆ ತೀರ್ಮಾನಿಸಲಾಗಿದ್ದು, ಸಮಯ ನೋಡಿಕೊಂಡು ಕೋಮು ವಿರೋಧಿ ಕಾರ್ಯಪಡೆ ರಚನೆ ಮಾಡಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಂಗಳೂರಲ್ಲಿ ಕೋಮು ಹತ್ತಿಕ್ಕಲು ಕ್ರಮ ಕೈಗೊಳ್ಳುತ್ತೇವೆ. ನಾನು ಯಾರ ಬಗ್ಗೆಯೂ ಆರೋಪ ಮಾಡುವುದಿಲ್ಲ. ಕಾನೂನು ಮೀರಿ ಕೆಲಸ ಮಾಡಿದರೆ ಕ್ರಮ ಕೈಗೊಳ್ಳುತ್ತೇವೆ. ಕೆಲವರಿಗೆ ಬೆದರಿಕೆ ವಿಚಾರದ ಬಗ್ಗೆ ಪರಿಶೀಲನೆ ಮಾಡುತ್ತೇವೆ. ವಿಶೇಷ ಪಡೆಯ ರಚನೆ ಕುರಿತು ಇನ್ನು ನಿರ್ಧಾರ ಮಾಡಿಲ್ಲ. ಟೈಮ್ ನೋಡಿಕೊಂಡು ಕೋಮು ವಿರೋಧಿ ಕಾರ್ಯಪಡೆ ರಚನೆ ಮಾಡುತ್ತೇವೆ ಎಂದು ಹುಬ್ಬಳ್ಳಿಯಲ್ಲಿ ಸಚಿವ ಜಿ.ಪರಮೇಶ್ವರ್ ತಿಳಿಸಿದರು. ಪೊಲೀಸರಿಗೆ ಫ್ರೀ ಹ್ಯಾಂಡ್ ನೀಡಬೇಕು ಎಂದು ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ ಅವರ ಹೇಳಿಕೆಗೆ ಗೃಹ ಸಚಿವ…
ಬೆಂಗಳೂರು : ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಿಂದ ಹಲವು ಅವಾಂತರ ಸೃಷ್ಟಿಯಾಗಿದ್ದು, ಗುಡುಗು ಸಿಡಿಲಿಗೆ ಕೆಲವರು ಬಲಿಯಾಗಿದ್ದಾರೆ. ಇದೀಗ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಮುಂದಿನ 1 ವಾರ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೇ 7ರಿಂದ 10 ರವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ವಿಜಯಪುರ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಹಾಸನ, ಬಳ್ಳಾರಿ, ಚಿತ್ರದುರ್ಗ, ಚಾಮರಾಜನಗರ, ಮೈಸೂರು, ಕೊಡಗು, ಮಂಡ್ಯ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಬೀದರ್, ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಇಂದು ಗುಡುಗು ಸಹಿತ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ. ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿಯೂ ಮಳೆಯಾಗಲಿದೆ…
ಚಾಮರಾಜನಗರ : ಅಕ್ರಮವಾಗಿ ತಮಿಳುನಾಡಿಗೆ ಪಡಿತರ ಅಕ್ಕಿ ಸಾಗಾಟ ಹಿನ್ನೆಲೆಯಲ್ಲಿ ಒಂದು ಲೋಡ್ ಪಡಿತರ ಅಕ್ಕಿಯನ್ನು ಪೊಲೀಸರು ಇದೀಗ ವಶಕ್ಕೆ ಪಡೆದುಕೊಂಡಿದ್ದಾರೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪೊಲೀಸ್ ಠಾಣೆಯ ಮುಂದೆ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಪೊಲೀಸರು ಹಾಗು ಆಹಾರ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ ನಡೆಸಿದ್ದು ಶಿಗ್ಗಾವಿಯಿಂದ ತಮಿಳುನಾಡಿಗೆ ಲಾರಿ ತೆರಳುತ್ತಿತ್ತು. ಲಾರಿಯಲ್ಲಿ ಸಾಗಿಸುತ್ತಿದ್ದ 500 ಚೀಲ ಪಡಿತರ ಅಕ್ಕಿಯನ್ನು ಹಾಗೂ ಡ್ರೈವರ್ ನನ್ನು ಪೊಲೀಸರು ಇದೀಗ ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಂಗಳೂರು : ರೌಡಿಶೀಟರ್ ಹಾಗೂ ಸುಹಾಸ ಶೆಟ್ಟಿ ಹತ್ಯೆಯ ಬಳಿಕ ದಕ್ಷಿಣ ಕನ್ನಡ ಜಿಲ್ಲೆಗೆ ಗೃಹ ಸಚಿವ ಜಿ ಪರಮೇಶ್ವರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಆದರೆ ಸಭೆಯ ನಂತರ ಜಿ ಪರಮೇಶ್ವರ್ ಅವರು ಸುಹಾಸ್ ಶೆಟ್ಟಿ ಮನೆಗೆ ಭೇಟಿ ನೀಡಿರಲಿಲ್ಲ. ಈ ವಿಚಾರವಾಗಿ ಸ್ಪಷ್ಟನೆ ನೀಡಿದ ಅವರು ಹತ್ಯೆಯಾದ ಸುಹಾಸ್ ಶೆಟ್ಟಿ ಮೇಲೆ 5 ಕೇಸ್ಗಳಿವೆ, ಹಾಗಾಗಿ ಅವರ ಮನೆಗೆ ಭೇಟಿ ಕೊಟ್ಟಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಈ ವಿಚಾರವಾಗಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಜಿ. ಪರಮೇಶ್ವರ್, ಮಂಗಳೂರಿನ ಬಜಪೆ ಬಳಿ ಕೊಲೆಯಾದ ಸುಹಾಸ್ ಶೆಟ್ಟಿ ಮೇಲೆ ಐದು ಕೇಸ್ಗಳಿವೆ. ಹಾಗಾಗಿ ನಾವು ಯಾರೂ ಅವರ ಮನೆಗೆ ಭೇಟಿ ಕೊಟ್ಟಿಲ್ಲ.ಇದೊಂದು ಕೊಲೆ ಪ್ರಕರಣ ಆಗಿರುವುದರಿಂದ, ಸುಹಾಸ್ ಶೆಟ್ಟಿ ಮನೆಗೆ ನ್ಯಾಯ ಕೊಡಿಸುವ ಕೆಲಸ ಸರ್ಕಾರ ಮಾಡಲಿದೆ ಎಂದರು. ನಮ್ಮ ಪೊಲೀಸ್ ಇಲಾಖೆ ಸಮರ್ಥವಾಗಿ ಕೆಲಸ ಮಾಡ್ತಿದೆ.…
ಬೆಳಗಾವಿ : ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ರಜತ್ ಕಿಶನ್ ಹಾಗೂ ವಿನಯ್ ಗೌಡ ಇತ್ತೀಚಿಗೆ ಕೈಯಲ್ಲಿ ಲಾಂಗ್ ಹಿಡಿದು ಮಾಡಿದ ಪ್ರಕರಣ ನಡೆದಿತ್ತು. ಬಳಿಕ ಬೆಳಗಾವಿಯಲ್ಲಿ ಕೂಡ ಇಬ್ಬರು ಪುಂಡರು ಕೈಯಲ್ಲಿ ತಲ್ವಾರ್ ಹಿಡಿದು ರೀಲ್ಸ್ ಮಾಡಿದ್ದರು. ಇದೀಗ ಇಬ್ಬರು ಪುಂಡರನ್ನು ಯಮುಕನಮರಡಿ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಯಮಕನಮರಡಿ ಠಾಣೆ ಪೋಲಿಸರು ಇಬ್ಬರು ಕಿಡಿಗೇಡಿಗಳನ್ನು ಅರೆಸ್ಟ್ ಮಾಡಿದ್ದಾರೆ. ಈ ಇಬ್ಬರು ಕಿಡಿಗೇಡಿಗಳು ಕೈಯಲ್ಲಿ ತಲ್ವಾರ್ ಹಿಡಿದು ರೀಲ್ಸ್ ಮಾಡಿ ಪೋಸ್ಟ್ ಮಾಡಿದ್ದರು. ಬಳಿಕ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದರು. ಹಾಲಪ್ಪ ದ್ಯಾಮಪ್ಪ ಕಟಾವಳಿ (25) ನಾಗರಾಜ್ ದ್ಯಾಮಣ್ಣ (21) ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ. ಇಬ್ಬರನ್ನು ಬಂಧಿಸಿ ಪೊಲೀಸರು ತಹಶೀಲ್ದಾರ್ ಮುಂದೆ ಹಾಜರುಪಡಿಸಿದ್ದಾರೆ.
ಮಂಗಳೂರು : ಸುಹಾಸ್ ಶೆಟ್ಟಿ ಅತ್ತೆ ಬಳಿಕ ಇದೀಗ ಮಂಗಳೂರಿನ ಜನತೆ ಭಯದಲ್ಲಿ ಜೀವಿಸುತ್ತಿದ್ದು, ಸುಹಾಸ್ ಹತ್ಯೆಯ ಬಳಿಕ ಮಂಗಳೂರಿನಲ್ಲಿ ಪ್ರತಿಕಾರದ ಸಂದೇಶಗಳು ಇದೀಗ ಮುಂದುವರೆದಿದೆ. ಸುಹಾಸ್ ಶೆಟ್ಟಿಯನ್ನು ಕೊಂದವರು ಕೊಂದವರ ಮನೆಯವರು ಅಲ್ಲಿ ಯಾರು ಸಿಗುತ್ತಾರೋ ಅವರನ್ನು ಕೊಚ್ಚಿ ಕೊಲ್ಲುತ್ತೇವೆ ಎಂದು ಸೆಲ್ಫಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹರಿ ಬಿಡಲಾಗಿದೆ. ಧನುಷ್ ಎಂಬಾತ ಫೇಸ್ಬುಕ್ ಲೈವ್ ಬಂದು ಕೊಲೆ ಬೆದರಿಕೆ ಹಾಕಿದ್ದಾನೆ. ಜಾಸ್ತಿ ದಿನ ತೆಗೆದುಕೊಳ್ಳಲ್ಲ ತಕ್ಷಣವೇ ರಿವೇಂಜ್ ಅಂತ ತೆಗೆದುಕೊಳ್ಳುತ್ತೇವೆ. ಸುಹಾಸ್ ಶೆಟ್ಟಿ ಕೊಂದವರ ಮೇಲೆ ರಿವೆಂಜ್ ತೆಗೆದುಕೊಳ್ಳುತ್ತೇವೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತಣ್ಣೀರುಪಂಥ ನಿವಾಸಿ ಧನುಷ್ ಪಕ್ಕಳ ಕೊಲೆ ಬೆದರಿಕೆ ಹಾಕಿದ್ದು ಇದೀಗ ಆತನ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಧನುಷ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕೋಮು ದ್ವೇಷ ಹರಡಿ ಕಾನೂನು ಸುವ್ಯವಸ್ಥೆಗೆ ಯಾಕೆ ಆಗುವಂತಹ ಹಾಗೂ ಪ್ರಚೋದನಾತ್ಮಕ ವಿಡಿಯೋವನ್ನು ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ…














