Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಮೈಸೂರು : ರಾಜ್ಯದಲ್ಲಿ ಐದು ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮಿ ಯೋಜನೆ ಕೂಡ ಒಂದಾಗಿದ್ದು, ಈಗಾಗಲೇ ಹಲವು ಮಹಿಳೆಯರು ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಿಂದ ಸಾಮಾಜಿಕವಾಗಿ ಮಾದರಿಯಾಗಿದ್ದಾರೆ. ಆದರೆ ಇದೀಗ ಮೂರು ತಿಂಗಳಿಗೊಮ್ಮೆ ಗ್ರಹಲಕ್ಷ್ಮಿ ಹಣ ಹಾಕುತ್ತೇವೆ ಪ್ರತಿ ತಿಂಗಳು ಹಾಕೋಕೆ ಕೆಲವು ತೊಡಕುಗಳಿವೆ ಎಂದು ಗ್ಯಾರಂಟಿ ಸಮಿತಿ ಅಧ್ಯಕ್ಷ ಹೆಚ್ಎಂ ರೇವಣ್ಣ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೂರು ತಿಂಗಳಿಗೊಮ್ಮೆ ಗೃಹಲಕ್ಷ್ಮಿ ಹಣ ಕೊಡುತ್ತಿದ್ದೇವೆ. ಜಿಎಸ್ಟಿ ವಿಚಾರದಲ್ಲಿ 1 ಲಕ್ಷ 20 ಸಾವಿರ ಜನರಿಗೆ ಹಣ ಹೋಗಿರಲಿಲ್ಲ. ಅದರಲ್ಲಿ ಈಗ 58 ಸಾವಿರ ಜನರ ಸಮಸ್ಯೆಯನ್ನ ಬಗೆಹರಿಸಿದ್ದೇವೆ. ಉಳಿದ ಜನರ ಸಮಸ್ಯೆ ಬಗೆ ಹರಿಸುತ್ತೇವೆ.ನಾವು ಅಧಿಕಾರಕ್ಕೆ ಬಂದಾಗಿನಿಂದ ಗೃಹಲಕ್ಷ್ಮಿ ಹಣ ನಿಲ್ಲಿಸಿಲ್ಲ. ಪ್ರತಿ ತಿಂಗಳು ಹಣ ಕೊಡೋದಕ್ಕೆ ಕೆಲವು ತೊಡಕುಗಳಿವೆ ಎಂದರು. ಹೀಗಾಗಿ ಪ್ರತಿ ತಿಂಗಳು ಹಣ ಕೊಡಲು ಆಗುತ್ತಿಲ್ಲ ಎನ್ನುವ ಮೂಲಕ ಪ್ರತಿ ತಿಂಗಳ ಗೃಹಲಕ್ಷ್ಮಿ ಹಣ ಕೊಡಲು ಆಗಲ್ಲ ಎಂದು ಪರೋಕ್ಷವಾಗಿ ಸ್ಪಷ್ಟಪಡಿಸಿದ್ದಾರೆ. ಈಗಾಗಲೇ ರಾಜ್ಯದ…
BIG NEWS : ನಮಗೆ ಮನೆ ಹಕ್ಕು ಪತ್ರ ಬೇಡ ಸ್ವಾಮಿ, ಮೊದಲು ಗಾಂಜಾ ಮಾರಾಟ ನಿಲ್ಲಿಸಿ : ಮಂಡ್ಯ ಡಿಸಿಗೆ ಮಹಿಳೆಯರಿಂದ ಮನವಿ
ಮಂಡ್ಯ : ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಮನೆಗಳನ್ನು ನಿರ್ಮಿಸಲಾಗಿತ್ತು. ಈ ಹಿನ್ನೆಲೆ ನಿನ್ನೆ ಈ ಒಂದು ಪ್ರದೇಶಕ್ಕೆ ಜಿಲ್ಲಾಧಿಕಾರಿ ಡಾ. ಕುಮಾರ್ ಭೇಟಿ ನೀಡಿದ್ದರು. ಈ ವೇಳೆ ಅಲ್ಲಿಯ ಕೆಲವು ಮಹಿಳೆಯರು, ನಮಗೆ ಮನೆ ಹಕ್ಕು ಪತ್ರ ಬೇಡ ಮೊದಲು ಗಾಂಜಾ ಮಾರಾಟ ನಿಲ್ಲಿಸಿ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ್ ಗೆ ಮಹಿಳೆಯರು ಈ ರೀತಿ ಮನವಿ ಮಾಡಿಕೊಂಡಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲದ ಸುಭಾಷ್ ನಗರದ ಬಡಾವಣೆಯಲ್ಲಿ ಮಹಿಳೆಯರು ಜಿಲ್ಲಾಧಿಕಾರಿಗಳಿಗೆ ಗಾಂಜಾ ಮಾರಾಟ ನಿಲ್ಲಿಸುವಂತೆ ಮನವಿ ಮಾಡಿದ್ದಾರೆ. ನಿನ್ನೆ ಸುಭಾಷ್ ನಗರ ಬಡಾವಣೆಗೆ ಜಿಲ್ಲಾಧಿಕಾರಿ ಡಾ. ಕುಮಾರ್ ಭೇಟಿ ನೀಡಿದ್ದರು. ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಮನೆಗಳನ್ನು ನಿರ್ಮಾಣ ಮಾಡಲಾಗಿತ್ತು. ಮನೆಗಳ ಹಕ್ಕು ಪತ್ರ ವಿತರಣೆಯ ಸಭೆಯಲ್ಲಿ ಸ್ಥಳೀಯ ನಿವಾಸಿಗಳು ಜಿಲ್ಲಾಧಿಕಾರಿಗೆ ಗಾಂಜಾ ಮಾರಾಟ ಮಾರಾಟ ತಡೆಗೆ ಕಠಿಣ ಕ್ರಮ ಕೈಗೊಳ್ಳಿ ಎಂದು ಮನವಿ ಮಾಡಿದ್ದಾರೆ. ನಿತ್ಯ ಏರಿಯಾದಲ್ಲಿ ಗಾಂಜಾ, ಡ್ರಗ್ಸ್ ಮಾರಾಟ ಮಾಡಲಾಗುತ್ತಿದೆ. ದಿನಕ್ಕೆ…
ಬೆಂಗಳೂರು : ದಕ್ಷಿಣ ಭಾರತದ ಬಹುತೇಕ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಉಗ್ರ ನಾಸಿರ್ ಗೆ ನೆರವು ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಎಎಸ್ಐ ಚಾನ್ ಪಾಷಾ ವೈದ್ಯ ನಾಗರಾಜ್ ಹಾಗು ಜುನೈದ್ ತಾಯಿ ಫಾತಿಮಾ ಳನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ. ಈ ವೇಳೆ ಹಲವು ಮತ್ತಷ್ಟು ಸ್ಪೋಟಕ ಅಂಶಗಳು ಬಹಿರಂಗವಾಗಿವೆ. ಹೌದು ಉಗ್ರ ನಾಸಿರ್ ಗೆ ನೆರವು ನೀಡಿದ ಆರೋಪದಲ್ಲಿ ಎನ್ಐಎ ವಿಚಾರಣೆ ನಡೆಸುತ್ತಿದ್ದು, ಬಂಧಿತರ ಬ್ಯಾಂಕ್ ಅಕೌಂಟ್ ಗೆ ಲಕ್ಷ ಲಕ್ಷ ಹಣ ವರ್ಗಾವಣೆ ಆಗಿದೆ ಎನ್ನುವುದು ಬೆಳಕಿಗೆ ಬಂದಿದೆ. ಬೇರೆ ಬೇರೆ ಮೂಲಗಳಿಂದ ಹಂತ ಹಂತವಾಗಿ ಲಕ್ಷಾಂತರ ಹಣ ವರ್ಗಾವಣೆ ಆಗಿದ್ದು, ವೈದ್ಯ ನಾಗರಾಜ್ ಆಪ್ತ ಸಹಾಯಕಿಯ ಖಾತೆಯಲ್ಲಿ 70 ಲಕ್ಷ ಹಣ ಪತ್ತೆಯಾಗಿದೆ, ಡಾಕ್ಟರ್ ನಾಗರಾಜ್ ಚಾನ್ ಪಾಷಾ ಅಕೌಂಟಿಗೆ ಲಕ್ಷಾಂತರ ಹಣ ವರ್ಗಾವಣೆ ಆಗಿದೆ. ಹಾಗಾಗಿ ಆರೋಪಿಗಳ ಆಧಾರ್ ಕಾರ್ಡ ಮತ್ತು ಪ್ಯಾನ್ ಕಾರ್ಡ್ ಪರಿಶೀಲನೆ ಮಾಡಲಾಗಿದೆ. ಪ್ಯಾನ್…
ALERT : ‘ಚಿಟ್ ಫಂಡ್’ ನಲ್ಲಿ ಹಣ ಹೂಡಿಕೆ ಮಾಡೋಕು ಮುನ್ನ ಎಚ್ಚರ : 500ಕ್ಕೂ ಹೆಚ್ಚು ಜನರಿಗೆ 100 ಕೋಟಿಗೂ ಅಧಿಕ ವಂಚನೆ
ಬೆಂಗಳೂರು : ಚಿಟ್ ಫಂಡ್ ನಲ್ಲಿ ಹಣ ಹೂಡಿಕೆ ಮುನ್ನ ಆದಷ್ಟು ಎಚ್ಚರದಿಂದ ಇರಿ. ಏಕೆಂದರೆ ಬೆಂಗಳೂರಿನಲ್ಲಿ ಚಿಟ್ ಫಂಡ್ ಹೆಸರಿನಲ್ಲಿ ಮಹಾ ವಂಚನೆ ಎಸಗಲಾಗಿದೆ. ಒಬ್ಬೊಬ್ಬರಿಂದ ಎರಡು ಕೋಟಿ 50 ಲಕ್ಷ ಹಣ ಪಡೆದು ವಂಚನೆ ಎಸಗಲಾಗಿದ್ದು, ನೂರಾರು ಜನರಿಂದ ಕೋಟಿ ಕೋಟಿ ಹಣ ಪಡೆದು ಮೋಸ ಎಸಗಲಾಗಿದೆ. ಲಕ್ಷಾಂತರ ಸಂಗ್ರಹಿಸಿ ಕೋಟಿ ಕೋಟಿ ಹಣ ವಂಚಿಸಸಲಾಗಿದೆ.ಇದೀಗ ಹಣ ಕಳೆದುಕೊಂಡ ನೂರಾರು ಜನರು ಬೀದಿ ಪಾಲಾಗಿದ್ದಾರೆ. ಹೌದು ಬೆಂಗಳೂರಿನ ಸುಮಾರು 300ಕ್ಕೂ ಹೆಚ್ಚು ಜನರಿಗೆ ವಂಚನೆ ಸಿಕ್ಕಿದ್ದು ನವಶಕ್ತಿ ಚಿಟ್ ಫಂಡ್ ನಿಂದ 500 ಕ್ಕೂ ಹೆಚ್ಚು ಜನರಿಗೆ ಮೋಸ ಎಸಗಲಾಗಿದೆ. ಇದೀಗ ಮೋಸ ಹೋದವರು ಬೆಂಗಳೂರು ಕಮಿಷನರ್ ಗೆ ದೂರ ಸಲ್ಲಿಸಿದ್ದಾರೆ. ರಾಜಾಜಿನಗರ ಠಾಣೆಯಲ್ಲಿ ಕೇಸ್ ದಾಖಲಾದರೂ ಕೂಡ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಹೀಗಾಗಿ ನಮಗೆ ನ್ಯಾಯ ಸಿಗುತ್ತಿಲ್ಲ ಎಂದು ಗೃಹ ಸಚಿವರಿಗೂ ಕೂಡ ದೂರ ಸಲ್ಲಿಸಲಾಗಿದೆ. ಈ ಕುರಿತು ಸಿಐಡಿ ತನಿಖೆ ಮಾಡಿ ಹಣ ವಾಪಸ್…
ಬೆಂಗಳೂರು : ಭಯೋತ್ಪಾದಕ ಟಿ.ನಾಸಿರ್ ಗೆ ನೆರವು ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಲಾಖಾ ತನಿಖೆ ನಡೆಸಿ ವರದಿ ನೀಡಲು ಆದೇಶ ನೀಡಿದ್ದಾರೆ. CAR ಚಾನ್ ಪಾಷಾ ವಿರುದ್ಧ ತನಿಖೆ ನಡೆಸಿ ವರದಿ ನೀಡುವಂತೆ ಬೆಂಗಳೂರು ಕಮಿಷನರ್ ಸೀಮಂತ ಕುಮಾರ್ ಅದೇಶಿಸಿದ್ದಾರೆ. ಈ ಬಗ್ಗೆ ಕಮಿಷನರ್ ಸೀಮಂತ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ಪೊಲೀಸ್ ಇಲಾಖೆಯಲ್ಲಿ ಏನು ಕ್ರಮ ಇದೆ ಅದನ್ನೇ ಕೈಗೊಳ್ಳುತ್ತೇವೆ. ಸೂಕ್ತ ತನಿಖೆಯ ಬಳಿಕ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಉಗ್ರ ಟಿ ನಾಸಿರ್ ಜೈಲಿನಲ್ಲಿ ಇದ್ದುಕೊಂಡೇ ಬೆಂಗಳೂರಲ್ಲಿ ಬ್ಲಾಸ್ಟ್ ಮಾಡಲು ಪ್ಲಾನ್ ಮಾಡಿಕೊಂಡಿದ್ದ. ಇದಕ್ಕೆ ಎಎಸ್ಐ ಚಾನ್ ಪಾಷಾ ಮನೋವೈದ್ಯ ನಾಗರಾಜ್ ಹಾಗು ಫಾತಿಮಾ ಆತನಿಗೆ ಸಹಕಾರ ನೀಡಿದ್ದು, ಈ ಮೂವರನ್ನು ಇದೀಗ ಎನ್ಐಎ ಅರೆಸ್ಟ್ ಮಾಡಿದ್ದು, 6 ದಿನಗಳ ಕಾಲ ವಿಚಾರಣೆಗೆ ಎಂದು ಎನ್ ಐ ಎ ಮೂವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಂಗಳೂರು : ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ರಾಷ್ಟೀಯ ಸಂದರ್ಶನ ಒಂದರಲ್ಲಿ ಮಾತನಾಡಿ ನಾನೇ 5 ವರ್ಷಗಳ ಕಾಲ ಮುಖ್ಯಮಂತ್ರಿ ಆಗಿರುತ್ತೇನೆ. 2028ರಲ್ಲೂ ನನ್ನ ನೇತೃತ್ವದಲ್ಲಿ ಚುನಾವಣೆ ನಡೆಯಲಿದೆ ಎಂದು ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಕೂಡ ಕರ್ನಾಟಕದಲ್ಲಿ ಯಾವುದೇ ನಾಯಕತ್ವ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನವದೆಹಲಿಯಲ್ಲಿ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಸಿದ್ದರಾಮಯ್ಯ, ಅಧಿಕಾರ ಹಂಚಿಕೆ ಬಗ್ಗೆ ಸ್ಪಷ್ಟ ಮಾತುಗಳನ್ನು ಆಡಿದ್ದರು. ರಾಹುಲ್ ಗಾಂಧಿ ಕೂಡ ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಮಾಡುವ ಮನಸ್ಥಿತಿಯಲ್ಲಿ ಇಲ್ಲ ಎಂಬುದು ಮೂಲಗಳಿಂದ ತಿಳಿದು ಬಂದಿದೆ. ಈ ಸಂದೇಶ ಸಿಕ್ಕ ನಂತರವೇ ಸಿದ್ದರಾಮಯ್ಯ ಗಟ್ಟಿ ದನಿಯಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂಬ ಮಾತುಗಳನ್ನಾಡಿದ್ದಾರೆ. ಮತ್ತೊಂದೆಡೆ, ಕಾಂಗ್ರೆಸ್ ಹೈಕಮಾಂಡ್ ಸಚಿವರ ಕಾರ್ಯ ವೈಖರಿ ಪ್ರಗತಿಯ ಪರಿಶೀಲನೆಯಲ್ಲಿ ತೊಡಗಿಕೊಂಡಿದೆ. ಈಗಾಗಲೇ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀರ್ ಸುರ್ಜೇವಾಲ ಬೆಂಗಳೂರಿಗೆ ಎರಡು ಬಾರಿ ಆಗಮಿಸಿದ್ದು ಶಾಸಕರ ಜೊತೆ ಪ್ರತ್ಯೇಕ ಮಾತುಕತೆ ನಡೆಸಿದ್ದಾರೆ. ಮುಂದಿನ ದಿನಗಳಲ್ಲಿ ಸಚಿವರ ಜೊತೆಗೂ…
ಮಡಿಕೇರಿ : ಮಡಿಕೇರಿಯಲ್ಲಿ ಹೃದಯವಿದ್ರಾವಕ ಘಟನೆ ಒಂದು ನಡೆದಿದ್ದು, ಶವ ಸಾಗಾಟಕ್ಕೂ ಜನರು ಪರದಾಟ ನಡೆಸುತ್ತಿದ್ದಾರೆ. ಸರಿಯಾದ ರಸ್ತೆ ಇಲ್ಲದೆ ಶವ ಸಾಗಾಟಕ್ಕೆ ಜನ ಪರದಾಟ ನಡೆಸಿದ್ದು, ಜಡಿ ಮಳೆಯಲ್ಲಿ ಜನರು ಶವ ಹೊತ್ತು ಸಾಗಿಸಿದ್ದ ಘಟನೆ ನಡೆದಿದೆ. ಮಡಿಕೇರಿ ನಗರದ ಕನ್ನಂಡ ಬಾಣೆ ಎಂಬಲ್ಲಿ ಈ ಒಂದು ಘಟನೆ ನಡೆದಿದೆ. ಮಡಿಕೇರಿಯಲ್ಲಿ ಶವ ಸಾಗಟಕ್ಕೂ ಜನ ಪರದಾಟ ನಡೆಸುತ್ತಿದ್ದಾರೆ. ಸರಿಯಾದ ರಸ್ತೆ ಇಲ್ಲದೆ ಶವ ಸಾಗಾಟಕ್ಕೆ ಜನರು ಪರದಾಟ ನಡೆಸುತ್ತಿದ್ದು, ಜನರು ಶವ ಹೊತ್ತು ಸಾಗಿಸಿದ ಘಟನೆ ನಡೆದಿದೆ. ಮಡಿಕೇರಿ ನಗರದ ಕನ್ನಡ ಬಾಣೆಯಲ್ಲಿ ಈ ಒಂದು ಘಟನೆ ನಡೆದಿದೆ. ಕನ್ನಂಡ ಬಾಣೆ ನಿವಾಸಿಗಳಿಗೆ ನರಕದ ಬದುಕು ಎದುರಾಗಿದ್ದು, ಗರ್ಭಿಣಿಯರನ್ನು ಕೂಡ ಕುರ್ಚಿಯಲ್ಲಿ ಕೂರಿಸಿ ಸಾಗಾಟ ನಡೆಸಲಾಗಿದೆ. ಕನ್ನಂಡ ಬಾಣೆಗೆ ರಸ್ತೆ ನಿರ್ಮಿಸಲು ಅರಣ್ಯ ಇಲಾಖೆ ಅಡ್ಡಿಪಡಿಸಲಾಗಿದ್ದು, ಬಡಾವಣೆಯ ಅಂಚಿನಲ್ಲಿ ಮೀಸಲು ಅರಣ್ಯ ಪ್ರದೇಶ ಇದೆ ಹಾಗಾಗಿ ಅರಣ್ಯ ಬದಿಯಲ್ಲಿ ರಚನೆ ನಿರ್ಮಿಸಿದಂತೆ ಇಲಾಖೆ ಅಡ್ಡಿಪಡಿಸುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ದಾವಣಗೆರೆ : ದಾವಣಗೆರೆಯಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ತುಂಗಭದ್ರಾ ನದಿಗೆ ಅಡ್ಡಲಾಗಿ ನಿರ್ಮಿಸಿದ ರೈಲ್ವೇ ಸೇತುವೆ ಬಳಿ ತಾಯಿ ಮಗಳು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ಬಳಿ ಇರುವ ತುಂಗಭದ್ರಾ ನದಿ ಸೇತುವೆ ಬಳಿ ಈ ಒಂದು ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ತಾಯಿ ಮಗಳನ್ನ ಗಂಗನರಸಿ ಗ್ರಾಮದ ಸುವರ್ಣಮ್ಮ (65) ಮತ್ತು ಗೌರಮ್ಮ (45) ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಸದ್ಯ ಘಟನಾ ಸ್ಥಳಕ್ಕೆ ದಾವಣಗೆರೆ ಜಿಲ್ಲಾ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸರಣಿ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ತನಿಖಾ ತಂಡದಿಂದ ವರದಿ ಸ್ವೀಕರಿಸಿದರು. ಹೃದಯಘಾತದಿಂದ ಸರಣಿ ಸಾವಿನ ಬಗ್ಗೆ ತನಿಖಾ ವರದಿ ಸಲ್ಲಿಕೆಯಾಗಿದೆ. ಮೇ ಮತ್ತು ಜೂನ್ ತಿಂಗಳಲ್ಲಿ ಮೃತಪಟ್ಟ ನಾಲ್ವರು ಕಾರ್ಡಿಯಾಕ್ ಅರೆಸ್ಟ್ ನಿಂದ ಮೃತಪಟ್ಟಿಲ್ಲವೆಂಬುದು ದೃಢವಾಗಿದೆ ಎಂದರು. ಹೃದಯಾಘಾತಕ್ಕೂ ಕೋವಿಡ್ ಸಂಬಂಧ ಇಲ್ಲವೆಂದು ಹೇಳಲಾಗಿದೆ. ಮಾಹಿತಿಯ ಆಧಾರದ ಮೇಲೆ ಮಕ್ಕಳಿಗೆ ಸ್ಕ್ರೀನಿಂಗ್ ಶುರು ಮಾಡಲಿದ್ದೇವೆ. ಸಮುದಾಯ ಆರೋಗ್ಯ ಕೇಂದ್ರದಲ್ಲಿ ಇಸಿಜಿ ಅಳವಡಿಸಲು ತಜ್ಞರು ಸಲಹೆ ನೀಡಿದ್ದಾರೆ. ಹೃದಯ ಜ್ಯೋತಿ ಯೋಜನೆ ವಿಸ್ತರಣೆ ಮಾಡಬೇಕೆಂಬ ಆಲೋಚನೆ ಇದೆ. ಸಿಪಿಆರ್ ತರಬೇತಿ ನೀಡುವಂತೆ ಹೃದ್ರೋಗ ತಜ್ಞರು ಸಲಹೆ ನೀಡಿದ್ದಾರೆ. ಆಟೋ ಕ್ಯಾಬ್ ಚಾಲಕರಿಗೆ ಪ್ರತ್ಯೇಕ ಹೃದಯ ತಪಾಸಣೆಗೆ ಸಲಹೆ ನೀಡಿದ್ದಾರೆ. ಸ್ಕ್ರೀನಿಂಗ್ ಮಾಡಿಸಲು ಚಾಲಕರ ಸಂಘದ ಜೊತೆಗೆ ಮಾತುಕತೆ ಮಾಡುತ್ತೇವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್…
ಬೆಂಗಳೂರು : ಬೆಂಗಳೂರಲ್ಲಿ ರಾಜಕಾಲುವೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು, ಬೆಂಗಳೂರಿನ ಆರ್ ವಿ ಕಾಲೇಜು ಹಿಂಭಾಗ ರಾಜಕಾಲುವೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಕಳೆದ ಮೂರು ದಿನಗಳ ಹಿಂದೆ 35 ವರ್ಷದ ವ್ಯಕ್ತಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಕೊಳೆತ ಶವ ಕಂಡು ತಕ್ಷಣ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಕೆಂಗೇರಿ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತಪಟ್ಟ ವ್ಯಕ್ತಿಯ ಎದೆಯ ಮೇಲೆ ಜಯ ಎಂದು ಹಚ್ಚೆ ಹಾಕಿಸಿಕೊಂಡಿರುವುದು ಪತ್ತೆಯಾಗಿದೆ. ಸದ್ಯ ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಮೃತ ದೇಹವನ್ನು ಸ್ಥಳಾಂತರಿಸಿದ್ದಾರೆ. ರಾಜರಾಜೇಶ್ವರಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಶವ ಶಿಫ್ಟ್ ಆಗಿದ್ದು ಪೊಲೀಸರು ಅನುಮಾನಾಸ್ಪದ ಸಾವು ಎಂದು ಕೇಸ್ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.














