Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಮೊಬೈಲ್ ಜಾಸ್ತಿ ಬಳಸಬೇಡ ಓದಿನ ಕಡೆ ಗಮನಕೊಡು ಎಂದಿದ್ದಕ್ಕೆ ನೊಂದ SSLC ವ್ಯಾಸಂಗ ಮಾಡುತ್ತಿದ್ದಂತ ವಿದ್ಯಾರ್ಥಿನಿಯೊಬ್ಬಳು ಅಪಾರ್ಮೆಟ್ ಮೇಲಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಕಾಡಗೋಡಿಯಲ್ಲಿ ನಡೆದಿದೆ. ಬೆಂಗಳೂರಿನ ಕಾಡಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯ ಅಸೆಟ್ಸ್ ಮಾರ್ಕ್ ಅಪಾರ್ಮೆಟ್ ನಲ್ಲಿ ನಿನ್ನೆ ಈ ಒಂದು ಘಟನೆ ನಡೆದಿತ್ತು. ಈ ಒಂದು ಅಪಾರ್ಟ್ಮೆಂಟ್ ನಲ್ಲಿ ಉತ್ತರ ಪ್ರದೇಶ ಮೂಲದ ಕುಟುಂಬವೊಂದು ವಾಸವಾಗಿತ್ತು. ಅವರ 15 ವರ್ಷದ ಬಾಲಕಿ ಅವಂತಿಕಾ ಎಸ್ ಎಸ್ ಎಲ್ ಸಿ ವ್ಯಾಸಂಗ ಮಾಡುತ್ತಿದ್ದಳು. ಅವಂತಿಕಾ ಹೆಚ್ಚು ಮೊಬೈಲ್ ಬಳಸುತ್ತಿದ್ದಳು, ಇದನ್ನು ಗಮನಿಸಿದ ತಾಯಿ ಜಾಸ್ತಿ ಮೊಬೈಲ್ ಬಳಸಬೇಡ ಓದಿನ ಕಡೆಗೆ ಗಮನ ಕೊಡು ಎಂದಿದ್ದರು ಅಷ್ಟೆ. ಅವಂತಿಕಾ ಅಪಾರ್ಮೆಂಟ್ ನ 20ನೇ ಮಹಡಿಯಿಂದ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ವಿಷಯ ತಿಳಿದು ಸ್ಥಳಕ್ಕೆ ಕಾಡುಗೋಡಿ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ ಕೇಸ್ ದಾಖಲಿಸಿಕೊಂಡಿದ್ದಾರೆ.
ನವದೆಹಲಿ : ಒಂದುವೇಳೆ ಸದ್ಯಕ್ಕೆ ಏನಾದರು ಲೋಕಸಭೆಗೆ ಚುನಾವಣೆ ನಡೆದರೆ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿ ಕೂಟ 343 ಸ್ಥಾನಗಳನ್ನು ಗೆಲ್ಲಲಿದೆ. ಹಾಗೂ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ 188 ಸ್ಥಾನ ಪಡೆಯಲಿದೆ ಎಂದು ಇಂಡಿಯಾ ಟುಡೇ-ಸಿ ವೋಟರ್ ನಡೆಸಿದ ಮೂಡ್ ಆಫ್ ದ ನೇಷನ್ ಸಮೀಕ್ಷೆ ಹೇಳಿದೆ. ಹೌದು 2024ರ ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟ 292 ಸ್ಥಾನ ಗೆದ್ದಿತ್ತು. ಆದರೆ ಅಸಕ್ತ ದಿನದಲ್ಲಿ ಲೋಕಸಭೆ ಚುನಾವಣೆ ಏನಾದರೂ ನಡೆಸಿದರೆ 343 ಸ್ಥಾನಗಳನ್ನು ಎಂಡಿಎ ಮೈತ್ರಿಕೂಟ ಗೆಲ್ಲಲಿದೆ ಅಲ್ಲದೆ ಕಾಂಗ್ರೆಸ್ 188 ಸ್ಥಾನಕ್ಕೆ ಕುಸಿಯಲಿದೆ ಎಂದುಇಂಡಿಯಾ ಟುಡೇ ಮೂಡ್ ಆಫ್ ದ ನೇಷನ್ ಸಮೀಕ್ಷೆ ತಿಳಿಸಿದೆ. ಈಗ ಚುನಾವಣೆ ನಡೆದರೆ ಭರ್ಜರಿ 343 ಸ್ಥಾನ ಗೆಲ್ಲಲಿದೆ. ಅಂದರೆ ಅದರ ಸ್ಥಾನಬಲ 51 ಸ್ಥಾನ ಹೆಚ್ಚಾಗಲಿದೆ. ಬಿಜೆಪಿ ಬಲ 240ರಿಂದ 281ಕ್ಕೆ ಏರಲಿದೆ. ಇನ್ನು ಲೋಕಸಭಾ ಚುನಾವಣೆಯಲ್ಲಿ 232 ಸ್ಥಾನ ಗೆದ್ದಿದ್ದ ಇಂಡಿಯಾ ಕೂಟದ ಬಲ 188ಕ್ಕೆ ಇಳಿಯಲಿದೆ. ಅದೇ ರಿತಿ…
ವಿಜಯಪುರ : ರಾಜ್ಯ ಬಿಜೆಪಿಯಲ್ಲಿ ಒಳಜಗಳ ಹಾಗೂ ಭಿನ್ನಾಭಿಪ್ರಾಯ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ಶಿಸ್ತು ಸಮಿತಿಯು ಶಾಸಕ ಯತ್ನಾಳ್ ಅವರಿಗೆ 72 ಗಂಟೆಗಳಲ್ಲಿ ಉತ್ತರಿಸುವಂತೆ ಶೋಕಾಸ್ ನೋಟಿಸ್ ನೀಡಿತ್ತು. ಈ ಒಂದು ನೋಟಿಸ್ ವಿಚಾರವಾಗಿ ಮಾತನಾಡಿದ ಅವರು, ಬಿಜೆಪಿ ವರಿಷ್ಠರು ನನಗೆ ಯಾವುದೇ ನೋಟಿಸ್ ನೀಡಿಲ್ಲ. ಒಂದು ವೇಳೆ ನೋಟಿಸ್ ಬಂದರೂ ನಾನು ಅದಕ್ಕೆ ಉತ್ತರ ನೀಡುವುದಿಲ್ಲ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದ ಅವರು, ಬಿಜೆಪಿಯ ಕೇಂದ್ರ ಶಿಸ್ತು ಸಮಿತಿಯಿಂದ ನೋಟಿಸ್ ಬಂದಿರುವ ಕುರಿತಾಗಿ ಬಿಜೆಪಿ ವರಿಷ್ಠರು ನನಗೆ ಯಾವುದೇ ನೋಟಿಸ್ ನೀಡಿಲ್ಲ. ಅಷ್ಟಕ್ಕೂ, ಇಂತಹ ನೂರಾರು ನೋಟಿಸ್ಗಳು ನನಗೆ ಬರುತ್ತವೆ. ಅವುಗಳಿಗೆಲ್ಲ ಉತ್ತರ ಕೊಡಲು ಆಗುವುದಿಲ್ಲ. ಇದಕ್ಕೆಲ್ಲ ಹೆದರುವ ಮಗ ನಾನಲ್ಲ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಬಹಿರಂಗವಾಗಿ ವಾಗ್ದಾಳಿ ನಡೆಸುತ್ತಿರುವ ಸಂಬಂಧ ಶಾಸಕ ಯತ್ನಾಳರಿಗೆ ಬಿಜೆಪಿ ಕೇಂದ್ರ ಶಿಸ್ತು…
ನವದೆಹಲಿ: ಚುನಾವಣೆ ಗೆಲ್ಲಲು ರಾಜಕೀಯ ಪಕ್ಷಗಳು ಇತ್ತೀಚಿನ ದಿನಗಳಲ್ಲಿ ಪ್ರಮುಖ ಆಸ್ತವಾಗಿ ಬಳಕೆ ಮಾಡುತ್ತಿರುವ ಉಚಿತ ಕೊಡುಗೆಗಳ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ಇಂಥ ಯೋಜನೆಗಳಿಂದಾಗಿ ಜನರಿಗೆ ಕೆಲಸ ಮಾಡಲು ಮನಸ್ಸೇ ಇಲ್ಲದಂತಾ ಗಿದೆ ಎಂದು ಬೇಸರ ವ್ಯಕ್ತಪಡಿಸಿದೆ. ಹೌದು ಒಂದು ಕಡೆ ರಾಜ್ಯದಲ್ಲಿ ಜಾರಿಯಾಗಿರುವ ಪಂಚ ಗ್ಯಾರಂಟಿ ಯೋಜನೆಗಳಿಗೆ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಸದಸ್ಯ ಪ್ರಶಂಸೆ ಹಾಗೂ ಮೆಚ್ಚುಗೆ ವ್ಯಕ್ತಪಡಿಸಿದರೆ ಇನ್ನೊಂದು ಕಡೆ ಸುಪ್ರೀಂ ಕೋರ್ಟ್ ರಾಜಕೀಯ ಪಕ್ಷಗಳಿಗೆ ತರಾಟೆ ತೆಗೆದುಕೊಂಡಿದೆ. ಅಲ್ಲದೆ ಹೀಗೆ ಮಾಡುವುದರಿಂದ. ಜನರನ್ನು ಮುಖ್ಯ ವಾಹಿನಿಗೆ ತಂದು ರಾಷ್ಟ್ರಾಭಿವೃದ್ಧಿಗೆ ಕೊಡುಗೆ ನೀಡಲು ಸಶಕ್ತರಾಗಿಸುವ ಬದಲು, ಪರಾವಲಂಬಿಗಳನ್ನಾಗಿ ಮಾಡುತ್ತಿಲ್ಲವೇ? ಎಂದು ಸರ್ಕಾರಗಳನ್ನು ಖಾರವಾಗಿ ಪ್ರಶ್ನಿಸಿದೆ. ಸುಪ್ರೀಂ ಕೋರ್ಟ್ ಹೇಳಿದ್ದೇನು? “ದುರದೃಷ್ಟವಶಾತ್, ಈ ಉಚಿತಗಳಿಂದಾಗಿ … ಜನರು ಕೆಲಸ ಮಾಡಲು ಸಿದ್ಧರಿಲ್ಲ. ಅವರು ಉಚಿತ ಪಡಿತರವನ್ನು ಪಡೆಯುತ್ತಿದ್ದಾರೆ. ಅವರು ಯಾವುದೇ ಕೆಲಸ ಮಾಡದೆ ಹಣವನ್ನು ಪಡೆಯುತ್ತಿದ್ದಾರೆ” ಎಂದು ನ್ಯಾಯಮೂರ್ತಿ ಗವಾಯಿ ಹೇಳಿದರು.ಮನೆಯಿಲ್ಲದ ಜನರನ್ನು ಸಮಾಜದ ಮುಖ್ಯವಾಹಿನಿಗೆ ಸೇರಿಸಬೇಕು…
ಕೊಡಗು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಕಳೆದ ಹಲವು ದಿನಗಳಿಂದ ಸರಣಿ ಆತ್ಮಹತ್ಯೆ ಪ್ರಕರಣಗಳು ನಡೆದಿದ್ದವು. ಇದೀಗ ಕೊಡಗಿನಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ನೊಂದು ಮಹಿಳೆ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರಪೇಟೆಯ ಶನಿವಾರ ಸಂತೆಯಲ್ಲಿ ನಡೆದಿದೆ. ಹೌದು ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದ್ದು, ಹಸೀನಾ ಎನ್ನುವ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಡಗು ಜಿಲ್ಲೆಯ ಸೋಮವಾರಪೇಟೆಯ ಶನಿವಾರ ಸಂತೆ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಫೈನಾನ್ಸ್ ಸಂಸ್ಥೆಗಳ ಏಜೆನ್ಸಿಗಳ ವಿರುದ್ಧ ಕುಟುಂಬಸ್ಥರು ಕಿರುಕುಳದ ಕುರಿತು ಆರೋಪಿಸಿದ್ದಾರೆ. ಹಸೀನಾ ಕೆಲವು ಫೈನಾನ್ಸ್ ಸಂಸ್ಥೆಗಳಿಂದ ಸಾಲ ಪಡೆದಿದ್ದರು. ಸಾಲ ಮರುಪಾವತಿಸದಕ್ಕೆ ಹಸಿನಾಗಿ ಕರೆ ಮಾಡಿ ಸಿಬ್ಬಂದಿಗಳು ಬೆದರಿಕೆ ಹಾಕಿದ್ದರು ಎಂದು ಫೈನಾನ್ಸ್ ಏಜೆಂಟರ ವಿರುದ್ಧ ಕುಟುಂಬಸ್ಥರು ಆರೋಪಿಸುತ್ತಿದ್ದಾರೆ. ಘಟನೆ ಕುರಿತು ಶನಿವಾರ ಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದರ ಬೆನ್ನಲ್ಲೇ ಇಂದು ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಸುಗ್ರೀವಾಜ್ಞೆ ಜಾರಿ ಸಂಬಂಧ ರಾಜ್ಯಪಾಲರು ಸುಗ್ರೀವಾಜ್ಞೆ ಜಾರಿಗೆ…
ಬೆಂಗಳೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಕರಡು ಪ್ರತಿಯನ್ನು ಇತ್ತೀಚಿಗೆ ರಾಜ್ಯಪಾಲರಿಗೆ ಕಳುಹಿಸಿದ್ದು, ಇದೀಗ ರಾಜ್ಯಪಾಲ ಥಾವರ ಚಂದ್ ಗೆಹ್ಲೊಟ್ ಈ ಒಂದು ಸುಗ್ರೀವಾಜ್ಞೆ ಪ್ರತಿಗೆ ಅಂಕಿತ ಹಾಕುವ ಮೂಲಕ ಸುಗ್ರೀವಾಜ್ಞೆ ಜಾರಿಗೆ ಅನುಮೋದನೆ ನೀಡಿದ್ದಾರೆ. ಹೌದು ಹಲವು ಸಲಹೆಗಳನ್ನು ನೀಡಿ ರಾಜ್ಯಪಾಲರು ಸುಗ್ರೀವಾಜ್ಞೆಗೆ ಅನುಮೋದನೆ ನೀಡಿದ್ದಾರೆ. ಸುಗ್ರೀವಾಜ್ಞೆ ಜಾರಿಗೆ ಕುರಿತಂತೆ ಹಲವು ಸೂಚನೆಗಳನ್ನು ನೀಡಿರುವ ರಾಜ್ಯಪಾಲರು, ಈ ವಿಷಯದ ಕುರಿತು ಅಧಿವೇಶನದಲ್ಲಿ ಚರ್ಚಿಸುವಂತೆ ರಾಜ್ಯಪಾಲರು ಸೂಚಿಸಿದ್ದಾರೆ. ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಜಾರಿ ಆಗಿದ್ದು ಈ ಒಂದು ಸುಗ್ರೀವಾಜ್ಞೆಗೆ ರಾಜ್ಯಪಾಲರು ಇದೀಗ ಅಂಕಿತ ಹಾಕಿದ್ದಾರೆ. ಹಾಗಾಗಿ ಮೈಕ್ರೋ ಫೈನಾನ್ಸ್ ಮಾಲೀಕರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ.
ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಇಬ್ಬರು ವಾದ ಅಪಘಾತ ಸಂಭವಿಸಿದ್ದು ಕಾರು ಒಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಹೊತ್ತಿ ಉರಿದಿರುವ ಘಟನೆ ಬೆಂಗಳೂರಿನ ಕೆಂಗೇರಿ ಬಳಿ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಮೂವರು ಬಚಾವಾಗಿದ್ದಾರೆ. ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಕಾರೊಂದು ಹೊತ್ತಿ ಉರಿದಿರುವ ಘಟನೆ ಬೆಂಗಳೂರಿನ ಕೆಂಗೇರಿಯಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ಕೆಂಗೇರಿ ಪಂಚಮುಖಿ ಗಣಪತಿ ದೇವಸ್ಥಾನದ ಬಳಿ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿಗೆ ಬೆಂಕಿ ಹೊತ್ತಿಕೊಂಡು ಉರಿದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪರಾಗಿದ್ದು ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರ್ಗಿ : ಕಲ್ಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಪುರಸಭೆ ಚುನಾವಣೆ ಫಲಿತಾಂಶದ ವೇಳೆ ಬಿಜೆಪಿ ಹಾಗು ಜೆಡಿಎಸ್ ಭಾರಿ ಹೈಡ್ರಾಮಾ ನಡೆದಿದ್ದು, ಪುರಸಭೆ ಅಧ್ಯಕ್ಷ ಗಾದಿಗಾಗಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಪಕ್ಷಗಳ ನಡುವೆ ಬಡಿದಾಟ ನಡೆದಿದೆ. ಜೇವರ್ಗಿ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಹೊಡೆದಾಟ ನಡೆದಿದೆ.ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಆದರೆ ಈ ಒಂದು ಹೊಡೆದಾಟದ ನಡುವೆ ಜೆಡಿಎಸ್ ಪುರಸಭೆಯ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಹೌದು ಕಲ್ಬುರ್ಗಿ ಜಿಲ್ಲೆಯ ಜೇವರ್ಗಿ ಪುರಸಭೆ ಬಳಿ ಈ ಒಂದು ಘಟನೆ ನಡೆದಿದೆ. ಪೊಲೀಸರ ಎದುರೇ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಹೊಡೆದಾಡಿಕೊಂಡಿದ್ದಾರೆ. ಕೊನೆಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಜೆಡಿಎಸ್ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಜೇವರ್ಗಿ ಪುರಸಭೆ ಅಧ್ಯಕ್ಷರಾಗಿ ಗುರುಲಿಂಗಪ್ಪಗೌಡ ಮಾಲಿಪಾಟೀಲ್ ಹಾಗೂ ಉಪಾಧ್ಯಕ್ಷರಾಗಿ ಗಂಗೂಬಾಯ್ ಸತ್ಕಾರ್ ಆಯ್ಕೆಯಾಗಿದ್ದಾರೆ. ಬಿಜೆಪಿಯ ಕೆಲವು ಸದಸ್ಯರು ಜೆಡಿಎಸ್ ಗೆ ಬೆಂಬಲ ನೀಡಿದ್ದಾರೆ. ಬಿಜೆಪಿ 17 ಸದಸ್ಯರು ಜೆಡಿಎಸ್ ಮತ್ತು ಕಾಂಗ್ರೆಸ್ನ ತಲಾ ಮೂರು ಸದಸ್ಯರಿದ್ದಾರೆ. ಕೊನೆಗಳಿಗೆಯಲ್ಲಿ…
ಕಲಬುರ್ಗಿ : ಗ್ರಾಂ. ಪಂಚಾಯತಿ ಸದಸ್ಯನಿಂದಲೇ ಲಂಚಕ್ಕೆ ಕೈವೊಡ್ಡಿದ ಅಧ್ಯಕ್ಷನನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಬಲೆಗೆ ಬೀಳಿಸಿರುವ ಘಟನೆ ಕಲಬುರ್ಗಿ ಜಿಲ್ಲೆಯ ಕಾಳಗಿ ಎಂಬಲ್ಲಿ ನಡೆದಿದೆ. ಸದಸ್ಯನಿಂದಲೇ ಲಂಚ ಪಡೆಯುವಾಗ ಗ್ರಾಮ ಪಂಚಾಯತಿ ಅಧ್ಯಕ್ಷ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಕಾಳಗಿ ತಾಲೂಕಿನ ರಾಜಪುರ ಗ್ರಾಮ ಪಂಚಾಯತಿಯಲ್ಲಿ ನಡೆದಿದೆ. ಗ್ರಾ.ಪಂ.ಅಧ್ಯಕ್ಷ ಪ್ರಕಾಶ್ ರೆಡ್ಡಿ ಎಂದು ತಿಳಿದು ಬಂದಿದೆ. ಕಲ್ಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ರಾಜಪುರ ಎಂಬ ಗ್ರಾಮ ಪಂಚಾಯತಿಯಲ್ಲಿ ಪ್ರಕಾಶ್ ರೆಡ್ಡಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ ಸರ್ವೇ ನಂಬರ್ 4ರಲ್ಲಿ DCB ತೆರಿಗೆ ಹೆಸರು ನೋಂದಾಯಿಸಲು ಪ್ರಕಾಶ ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಸದಸ್ಯ ಚಂದ್ರಶೇಖರ್ ಕಡೆಯಿಂದ 5 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬೆಲೆಗೆ ಬಿದ್ದಿದ್ದಾನೆ ಲೋಕಾಯುಕ್ತ ಇನ್ಸ್ಪೆಕ್ಟರ್ ಅಕ್ಕಮಹಾದೇವಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಸದ್ಯ ಪ್ರಕಾಶನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಅಮಾನುಷವಾದ ಘಟನೆ ನಡೆದಿದ್ದು, ಪತ್ನಿಗೆ ಅನೈತಿಕ ಸಂಬಂಧವಿದೆ ಎಂದು ರಾಕ್ಷಸ ಪತಿಯೊಬ್ಬ ಆಕೆಯ ಬಾಯಿಗೆ ಫೆವಿಕ್ವೀಕ್ ಹಾಕಿ ಭೀಕರವಾಗಿ ಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಹಾರೋಕ್ಯಾತನಹಳ್ಳಿ ಎಂಬಲ್ಲಿ ನಡೆದಿದೆ. ಹೌದು ಅನೈತಿಕ ಸಂಬಂಧ ಶಂಕೆ ಪತ್ನಿಯ ಹತ್ಯೆಗೆ ಯತ್ನಿಸಲಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಹಾರೋಕ್ಯಾತನಹಳ್ಳಿ ಯಲ್ಲಿ ನಡೆದಿದೆ. ಸಿದ್ಧಾಂಲಿಂಗಯ್ಯ ಪತ್ನಿ ಮಂಜಳಳನ್ನು ಕೊಲೆಗೆ ಯತ್ನಿಸಿದ್ದಾನೆ. ಪತಿ ಹಿಮಾಲಯ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಪತ್ನಿ ಮಂಜುಳಾ ಗಾರ್ಮೆಂಟ್ ನಲ್ಲಿ ಕೆಲಸ ಮಾಡುತ್ತಿದ್ದಳು.ಪ್ರಕರಣ ಕುರಿತು ಮಾದನಾಯಕನಹಳ್ಳಿಯಲ್ಲಿ ಪ್ರಕರಣ ದಾಖಲಾಗಿದೆ. ಬಳಿಕ ಟವರ್ ಲೊಕೇಶನ್ ಆಧರಿಸಿ ಆರೋಪಿ ಪತಿ ಸಿದ್ದಲಿಂಗಯ್ಯನನ್ನು ಬಂಧಿಸಲಾಗಿದೆ. ಕಳೆದ 10 ವರ್ಷಗಳ ಹಿಂದೆ ಇಬ್ಬರು ಮದುವೆಯಾಗಿದ್ದು, ರಾಯಚೂರಲ್ಲಿ ಇಬ್ಬರು ಮಕ್ಕಳು ಇದ್ದಾರೆ ಎಂದು ತಿಳಿದುಬಂದಿದೆ.














