Subscribe to Updates
Get the latest creative news from FooBar about art, design and business.
Author: kannadanewsnow05
ತಮಿಳುನಾಡು : ದೇಶದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ತಮಿಳುನಾಡಿನಲ್ಲಿ ಪ್ರೌಢಶಾಲೆ ವಿದ್ಯಾರ್ಥಿನಿಯ ಮೇಲೆ ಮೂವರು ಶಿಕ್ಷಕರು ಸಾಮೂಹಿಕ ಅತ್ಯಾಚಾರ ನಟಿಸಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿಯಲ್ಲಿ ನಡೆದಿದೆ. ಹೌದು ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿನಿಯೊಬ್ಬ ಮೇಲೆ ಶಾಲೆಯ ಮೂವರು ಶಿಕ್ಷಕರು ಅತ್ಯಾಚಾರವೆಸಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಈ ಘಟನೆಯು ಪ್ರದೇಶದಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ಸಂಬಂಧಿಕರು ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಬಾಲಕಿಯ ತಾಯಿಯ ದೂರಿನ ಆಧಾರದ ಮೇಲೆ ಅವರ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆ ಬಾಲಕಿ ಒಂದು ತಿಂಗಳಿಗೂ ಹೆಚ್ಚು ಕಾಲ ಶಾಲೆಗೆ ಹೋಗಿರಲಿಲ್ಲ. ಶಾಲೆಯ ಮುಖ್ಯ ಶಿಕ್ಷಕರು ವಿಚಾರಿಸಿದಾಗ, ತಾಯಿ ಹಲ್ಲೆ ನಡೆಸಿರುವುದಾಗಿ ಬಹಿರಂಗಪಡಿಸಿದರು.
BREAKING : ಮೈಸೂರು ಮುಕ್ತ ವಿವಿಯಲ್ಲಿ ಕೋಟ್ಯಂತರ ಅಕ್ರಮ : ದಾಖಲೆ ಬಿಡುಗಡೆ ಮಾಡಿದ ಕಾನೂನು ವಿದ್ಯಾರ್ಥಿ ಪುಟ್ಟಸ್ವಾಮಿ
ಮೈಸೂರು : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಅಕ್ರಮ ಆರೋಪದ ಕುರಿತಂತೆ KSOU ಕುಲಪತಿ ಪ್ರೊ. ಶರಣಪ್ಪ ವಿ.ಹಲಸೇ ಮತ್ತು ಸಿಬ್ಬಂದಿ ವಿರುದ್ಧ ಗಂಭೀರವಾದ ಆರೋಪ ಕೇಳಿ ಬಂದಿದೆ. KSOU ನಲ್ಲಿ ನಡೆದಂತಹ ಕೋಟ್ಯಾಂತರ ರೂಪಾಯಿಗಳ ಅಕ್ರಮದ ದಾಖಲೆಗಳನ್ನು ಕಾನೂನು ವಿದ್ಯಾರ್ಥಿ ಪುಟ್ಟಸ್ವಾಮಿ ಬಿಡುಗಡೆ ಮಾಡಿದ್ದಾರೆ. ಕೆಎಸ್ಒಯು ಕಟ್ಟಡದ ವರ್ಚುಯಲ್ ಟೂರ್ಗೆ ಫೋಟೋಗ್ರಾಫಿಕ್ ಬಿಲ್ ಮಾಡಲು 96,91,812 ಬಿಲ್ ಮಾಡಿದ ಆರೋಪ ಕೇಳಿ ಬಂದಿದೆ.ಮೈಸೂರು ಕಟ್ಟಡ ಒಂದಕ್ಕೆ 26,15,000 ಮಾಡಿದ ಆರೋಪ ಕೇಳಿ ಬಂದಿದೆ.ಇನ್ನುಳಿದ 11 ಕಟ್ಟಡಗಳ ಫೋಟೋಗ್ರಾಫಿ ಗೆ ತಲಾ 4 ಲಕ್ಷ ಮತ್ತು 5 ಲಕ್ಷ ಬಿಲ್ ಆಗಿದೆ 20 ರಿಂದ 30 ಸಾವಿರದ ಕೆಲಸಕ್ಕೆ 96 ಲಕ್ಷ ಬಿಲ್ ಮಾಡಿರುವ ಆರೋಪ ಕೇಳಿ ಬಂದಿದೆ. ಕೆಎಸ್ಒಯು ಕಟ್ಟಡಕ್ಕೆ ಎಲ್ಇಡಿ ಬಲ್ಬ್ ಹಾಕಿಸಲು 2 ಕೋಟಿ ಬಿಲ್ ಮಾಡಿರುವ ಆರೋಪ ಕೇಳಿ ಬಂದಿದೆ. ಇನ್ನು ಕೆಎಸ್ಒಯು ವಸತಿಗೃಹದ ಹಾಸಿಗೆ ದಿಂಬಿಗೆ 15 ಲಕ್ಷ ರೂಪಾಯಿ, ಪುಸ್ತಕ ತುಂಬಿಕೊಂಡು…
ಬೆಂಗಳೂರು : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ಮಂಡ್ಯ ಜಿಲ್ಲೆಯ ಮಳವಳ್ಳಿ ಕ್ಷೇತ್ರದ ಶಾಸಕ ಪಿಎಂ ನರೇಂದ್ರ ಸ್ವಾಮಿಯವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪಿ.ಎಂ. ನರೇಂದ್ರ ಸ್ವಾಮಿ, ನಂ.305, ಪೂರಿಗಲಿ, ಮಳವಳ್ಳಿ ತಾಲ್ಲೂಕು, ಮಂಡ್ಯ ಜಿಲ್ಲೆ ಅವರನ್ನು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ. ನೀರು (ಮಾಲಿನ್ಯ ತಡೆಗಟ್ಟುವಿಕೆ ಮತ್ತು ನಿಯಂತ್ರಣ) ಕಾಯ್ದೆ, 1974 ರ ಸೆಕ್ಷನ್ 4 (2) ರ ಅಡಿಯಲ್ಲಿ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ನಾಮನಿರ್ದೇಶನ ವಿಧಾನ ಮತ್ತು ಅಧ್ಯಕ್ಷರು ಮತ್ತು ಸದಸ್ಯರ ಸೇವಾ ನಿಯಮಗಳು ಮತ್ತು ಷರತ್ತುಗಳು ಮತ್ತು ಸದಸ್ಯ ಕಾರ್ಯದರ್ಶಿಯ ನೇಮಕಾತಿ), ನಿಯಮಗಳು, 2024 ರ ಪ್ರಕಾರ, ದಿನಾಂಕ: 18.12.2024 ರ ಅಧಿಸೂಚನೆ ಸಂಖ್ಯೆ ಎಫ್ಇಇ 526 ಇಪಿಸಿ 2024 (ಭಾಗ-1) ರಲ್ಲಿ ಮೂರು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ.ಈ ನಾಮನಿರ್ದೇಶನಕ್ಕೆ ಸಂಬಂಧಿಸಿದ ನಿಯಮಗಳು…
ಬೆಂಗಳೂರು : ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024 ರಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಕುರಿತು ನಗರದಲ್ಲಿ 3 ದಿನಗಳ ಕಾಲ 5 ಕಡೆ ಎಲ್ಲಾ ಎಂಟು ವಲಯಗಳನ್ನು ಒಳಗೊಂಡಂತೆ ಸಾರ್ವಜನಿಕರು, ಸಂಘ ಸಂಸ್ಥೆಗಳಿಂದ ಸಲಹೆಗಳನ್ನು ಸ್ವೀಕರಿಸುವ ಸಭೆಗಳನ್ನು ಆಯೋಜನೆ ಮಾಡಲಾಗುತ್ತಿದೆ. ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024ರ ಪರಿಶೀಲನೆ ಮತ್ತು ವರದಿಗೆ ಸಂಬಂಧಿಸಿದಂತೆ ಕರ್ನಾಟಕ ವಿಧಾನ ಮಂಡಲ ಜಂಟಿ ಪರಿಶೀಲನಾ ಸಮಿತಿಯನ್ನು ರಚಿಸಲಾಗಿದ್ದು, ಆ ಸಮಿತಿಗೆ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ರಿಜ್ವಾನ್ ಅರ್ಷದ್ ರವರನ್ನು ಅಧ್ಯಕ್ಷರನ್ನಾಗಿ ನಿಯೋಜನೆ ಮಾಡಲಾಗಿದೆ. ಗ್ರೇಟರ್ ಬೆಂಗಳೂರು ಪ್ರದೇಶದ ಅಭಿವೃದ್ಧಿಯ ಯೋಜನೆ, ಸಮನ್ವಯ ಮತ್ತು ಮೇಲ್ವಿಚಾರಣೆಗಾಗಿ, ಪರಿಣಾಮಕಾರಿಯಾದ, ಸಹಭಾಗಿತ್ವದ ಮತ್ತು ಸ್ಪಂದನಶೀಲ ಆಡಳಿತಕ್ಕಾಗಿ, ನಗರಾಡಳಿತದ ಮೂಲಕ ಘಟಕಗಳನ್ನಾಗಿಸುವುದಕ್ಕೆ ಮತ್ತು ಸಮುದಾಯದ ಪಾಲ್ಗೊಳ್ಳುವಿಕೆಯನ್ನು ಸುಗಮಗೊಳಿಸುವುದಕ್ಕೆ ಹಾಗೂ ಸಹಭಾಗಿ, ದಕ್ಷ ಮತ್ತು ನ್ಯಾಯೋಚಿತ ಆಡಳಿತದ ಚೌಕಟ್ಟನ್ನು ಸ್ಥಾಪಿಸುವ ಸಲುವಾಗಿ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ-2024 ಜಾರಿಗೆ ತರಲಾಗುತ್ತಿದೆ. ಮುಂದುವರಿದು, ಮೇಲ್ಕಂಡ ವಿಷಯಗಳನ್ನು ಕೂಲಂಕುಷವಾಗಿ ಪರಿಶೀಲಿಸುವ ಸಲುವಾಗಿ…
ಕಲಬುರ್ಗಿ : ಕಳೆದ ಡಿಸೆಂಬರ್ 26 ರಂದು ಬೀದರ್ ನಲ್ಲಿ ರೈಲಿಗೆ ತಲೆ ಕೊಟ್ಟು ಯುವ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪ್ರಕರಣದ ಪ್ರಮುಖ ಆರೋಪಿ ಆಗಿರುವ ರಾಜು ಕಪ್ ನವರಿಗೆ ಕಲ್ಬುರ್ಗಿ ಜಿಲ್ಲಾ ಮತ್ತು ಸೇಷನ್ಸ್ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಹೌದು ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣದಲ್ಲಿ ಬಂಧಿತರಾದ ರಾಜು ಕಪನೂರ್ ಗೆ ತನ್ನ ಹುಟ್ಟು ಹಬ್ಬದ ದಿನದಂದೇ ಷರತ್ತು ಬದ್ಧ ಜಾಮೀನು ಸಿಕ್ಕಿದೆ. ಇಂದು ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಅರ್ಜಿದಾರರ ಹತ್ತಿರ ಶಸ್ತ್ರಾಸ್ತ್ರಗಳಿದ್ದಲ್ಲಿ ಕಲಬುರ್ಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಒಪ್ಪಿಸಬೇಕು. ಅವರು ಸಾಕ್ಷಿ ನಾಶಪಡಿಸಲು ಪ್ರಯತ್ನಿಸದೆ, ತನಿಖೆಗೆ ಸಹಕರಿಸಬೇಕು. ತನಿಖಾಧಿಕಾರಿಯು ಅವರಿಗೆ ನಿರ್ದಿಷ್ಟವಾಗಿ ಸಮನ್ಸ್ ನೀಡಿದಾಗ ತನಿಖಾ ಉದ್ದೇಶಕ್ಕಾಗಿ ಹೊರತುಪಡಿಸಿ ಯಾವುದೇ ಕಾರಣಕ್ಕೂ ಬೀದರ್ ಜಿಲ್ಲೆಗೆ ಪ್ರವೇಶ ಮಾಡಬಾರದು. ತನಿಖೆ ಪೂರ್ಣಗೊಂಡ ನಂತರ…
ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ ಕೂಡಲೇ ಪ್ರಮುಖ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ಅದರಲ್ಲಿ ಗೃಹಲಕ್ಷ್ಮಿ ಯೋಜನೆ ಪ್ರಮುಖವಾಗಿದ್ದು, ಮನೆಯ ಯಜಮಾನತಿಗೆ ತಿಂಗಳಿಗೆ ರೂ.2000 ಅವರ ಖಾತೆಗೆ ಜಮೆ ಆಗುತ್ತದೆ. ಇದೀಗ ಈ ಒಂದು ಮಾಸಿಕ ಹಣದಲ್ಲಿ ಹೆಚ್ಚಳ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಹೌದು ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಈಗಾಗಲೇ 2 ಸಾವಿರ ಹಣ ಮಹಿಳೆಯರ ಖಾತೆಗೆ ಹಾಕಲಾಗುತ್ತಿದ್ದೂ, ಅತೀ ಶೀಘ್ರದಲ್ಲಿ ಗೃಹಲಕ್ಷ್ಮಿಯರ ಮಾಸಿಕ ಹಣ ಹೆಚ್ಚಳ ಸಾಧ್ಯತೆ ಇದೆ ಎನ್ನಲಾಗಿದೆ.ಇದೀಗ 2000 ರೂ. ಮಾಸಿಕವಾಗಿ ನೀಡಲಾಗುತ್ತಿದೆ. ಅದನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಮಾರ್ಚ್ 7ರಂದು ರಾಜ್ಯ ಬಜೆಟ್ ಮಂಡನೆಯಾಗಲಿದೆ. ಈ ವೇಳೆ ಗೃಹಲಕ್ಷ್ಮಿಯರ ಮಾಸಿಕ ಹಣ 2000 ರೂ.ನಿಂದ 2300 ರೂ. ವರೆಗೆ ಹೆಚ್ಚಿಸುವ ಸಾಧ್ಯತೆ ಇದೆ. ರಾಜ್ಯದ ಒಟ್ಟು ಆರ್ಥಿಕ ಸ್ಥಿತಿ ಪರಿಗಣಿಸಿ ಸಿಎಂ ಸಿದ್ದರಾಮಯ್ಯ ಇದರ ಅಂತಿಮ ತೀರ್ಮಾನಕ್ಕೆ ಬರಲಿದ್ದಾರೆ. ಹಾಗಾಗಿ ಮಾರ್ಚ್ 7…
ಚಿತ್ರದುರ್ಗ : ಜಗತ್ತಿನಲ್ಲಿ ಇಂತಹ ತಾಯಂದಿರು ಇರುತ್ತಾರೆ ಎಂದು ತಿಳಿದು ದಿಗ್ಭ್ರಮೆಯಾಗುತ್ತದೆ. ಹೌದು ಚಿತ್ರದುರ್ಗ ಜಿಲ್ಲೆಯ ಕವಾಡಿಗರಹಟ್ಟಿಯ ಆಶ್ರಯ ಕಾಲೋನಿಯಲ್ಲಿ ಗಂಡನ ಮೇಲಿನ ಕೋಪಕ್ಕೆ ತನ್ನ ಮಗನಿಗೆ ತಾಯಿಯೊಬ್ಬಳು ಬರೆ ಎಳೆದು ಕ್ರೌರ್ಯ ಬರೆದಿರುವ ಘಟನೆ ಇದೀಗ ವರದಿಯಾಗಿದೆ. ಹೌದು ಗಂಡನ ಮೇಲಿನ ದ್ವೇಷವನ್ನು ಮಗುವಿನ ಮೇಲೆ ಚೆಲ್ಲಿದ ತಾಯಿಯ ಕ್ರೌರ್ಯಕ್ಕೆ 7 ವರ್ಷದ ಬಾಲಕ ನರಳುತ್ತಿದ್ದಾನೆ. ಕೈ-ಕಾಲುಗಳಿಗೆ ಬರೆ ಎಳೆದು ಕ್ರೌರ್ಯ ಮೆರೆದಿದ್ದಾಳೆ.ಕಳೆದ 10 ವರ್ಷಗಳ ಹಿಂದೆ ಪ್ರೀತಿಯಿಂದ ಮದುವೆಯಾಗಿದ್ದ ಅನಿಲ್ ಮತ್ತು ನಗ್ಮಾ ದಂಪತಿ, 2 ವರ್ಷಗಳ ಹಿಂದೆ ಡೈವೋರ್ಸ್ ಪಡೆದು ಬೇರೆಯಾಗಿದ್ದರು. ನಂತರ ಇಬ್ಬರೂ ಬೇರೆ ಮದುವೆಯಾಗಿದ್ದಾರೆ. ಇದರ ನಡುವೆ, ಇಬ್ಬರಿಗೂ ಹುಟ್ಟಿದ 7 ವರ್ಷದ ಮಗುವಿನ ಕಾಳಜಿಯನ್ನು ಕುರಿತು ವಿವಾದ ಮೂಡಿತು. ತಾಯಿ ನಗ್ಮಾ ಮಗುವನ್ನು ತನ್ನ ಬಳಿ ಇರಿಸಿಕೊಂಡು, ಅವನ ತಂದೆ ಅನಿಲ್ ಮತ್ತು ಅಜ್ಜಿ ಶಮಶಾದ್ ರನ್ನು ಭೇಟಿಯಾಗದಂತೆ ನಿರ್ಬಂದಿಸಿದ್ದಳು .ಮನೆಯಲ್ಲಿ ಬಂಧನದಲ್ಲಿಡುವುದು, ಊಟ ಕೊಡದಿರುವುದು, ಕೈ-ಕಾಲುಗಳಿಗೆ ಬರೆ ಎಳೆದು ಹಿಂಸಿಸುವುದು ಸೇರಿದಂತೆ…
ಬೆಂಗಳೂರು : ಫೆಬ್ರವರಿ 10ರಿಂದ 14 ರವರೆಗೆ ಬೆಂಗಳೂರಿನಲ್ಲಿ ಏರ್ ಶೋ ಕಾರ್ಯಕ್ರಮ ಹಿನ್ನೆಲೆಯಲ್ಲಿ ನಗರದ ಹಲವಡೆ ವಾಹನ ಸಂಚಾರ ಬದಲಾವಣೆ ಮಾಡಲಾಗಿದೆ. ಫೆಬ್ರುವರಿ 10 ರಿಂದ ಬೆಳಿಗ್ಗೆ 5 ರಿಂದ ಫೆಬ್ರವರಿ 14ರ ರಾತ್ರಿ 10 ರವರೆಗೆ ಮಾರ್ಗ ಬದಲಾವಣೆ ಮಾಡಲಾಗಿದೆ. ಏರ್ಪೋರ್ಟ್ ರಸ್ತೆ ಸುತ್ತಮುತ್ತ ಹಲವು ರಸ್ತೆಗಳಲ್ಲಿ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ಈ ಕುರಿತು ಬೆಂಗಳೂರು ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ. ಬೆಂಗಳೂರು ನಗರದಲ್ಲಿರುವ ನಿಟ್ಟೆ ಮೀನಾಕ್ಷಿ ಕಾಲೇಜ್ ರಸ್ತೆ, ಹಾಗೂ ಬಾಗಲೂರು ಮುಖ್ಯರಸ್ತೆಯನ್ನು ಏಕಮುಖ ರಸ್ತೆಯಾಗಿ ಬದಲಾವಣೆ ಮಾಡಲಾಗಿದೆ. ಜಿಕೆವಿಕೆ ಕ್ಯಾಂಪಸ್ ನಲ್ಲಿ ಸಾರ್ವಜನಿಕರಿಗೆ ಉಚಿತ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಜಿಕೆವಿಕೆ ಪಾರ್ಕಿಂಗ್ ಸ್ಥಳದಿಂದ ಉಚಿತ ಬಿಎಂಟಿಸಿ ಎಸಿ ಬಸ್ ಕೂಡ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರು ಪೂರ್ವ ದಿಕ್ಕಿನಿಂದ ಬರುವ ವಾಹನ ಸವಾರರಿಗೆ ಮಾರ್ಗ ಬದಲಾವಣೆ ಮಾಹಿತಿ ನೀಡಿದ್ದು, ಕೆಆರ್ ಪುರ, ಬಾಗಲೂರು, ಹೆಣ್ಣೂರು ಕ್ರಾಸ್, ಕೊತ್ತನೂರು, ಕಣ್ಣೂರು, ಆರ್. ಪಾಳ್ಯ, ವಿದ್ಯಾನಗರ ಕ್ರಾಸ್, ಹುಣಸಮಾರನಹಳ್ಳಿ, ಗುಬ್ಬಿ…
ರಾಯಚೂರು : ರಾಜ್ಯದಲ್ಲಿ ಕಾಮಾಂಧರ ಅಟ್ಟಹಾಸ ಮಿತಿಮೀರುತ್ತಿದ್ದು, ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿವೆ.ಇದೀಗ ರಾಯಚೂರಲ್ಲಿ ಖಾಸಗಿ ಶಾಲೆಯಲ್ಲಿ 2ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಮೇಲೆ ಕಾಮುಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ವರದಿಯಾಗಿದೆ. ಹೌದು ಖಾಸಗಿ ಶಾಲೆಯ 2ನೇ ವಿದ್ಯಾರ್ಥಿನಿ ಮೇಲೆ ಕಾಮುಕನೋರ್ವ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಪೋತ್ನಾಳ ಗ್ರಾಮದಲ್ಲಿ ನಡೆದಿದೆ.ಪೋತ್ನಾಳ್ ಗ್ರಾಮದ ಖಾಸಗಿ ಶಾಲೆಯಲ್ಲಿ 2ನೇ ತರಗತಿಯಲ್ಲಿ ಓದುತ್ತಿರುವ 8 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಕಾಮುಕ ಶಿವನಗೌಡನನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪ್ರತಿದಿನ ಊರಿನಿಂದ ಶಾಲೆಗೆ ಸ್ಕೂಲ್ ಬಸ್ನಲ್ಲಿ ತೆರಳುತ್ತಿದ್ದ ಬಾಲಕಿ. ಬಂಧಿತ ಆರೋಪಿ ಶಿವನಗೌಡ ಎಂಬಾತ ಅದೇ ಊರಿನವನಾಗಿದ್ದು ಬಾಲಕಿಗೆ ಪರಿಚಿತನಾಗಿದ್ದಾನೆ. ಮಧ್ಯಾನ ಶಾಲೆಗೆ ಬರುತ್ತಿದ್ದ ಆರೋಪಿ ಊಟದ ಸಮಯಕ್ಕೆ ಬಾಲಕಿಯನ್ನ ಹೊರಗಡೆ ಕರೆದುಕೊಂಡು ಹೋಗಿದ್ದಾನೆ. ಹೊರಗಡೆ ಕರೆದೊಯ್ದ ವೇಳೆ ಆರೋಪಿ…
ಬಾಗಲಕೋಟೆ : ಬಾಗಲಕೋಟೆಯಲ್ಲಿ ಅಮಾನವೀಯ ಘಟನೆ ನಡೆದಿದ್ದು ಕ್ಷುಲ್ಲಕ ಕಾರಣಕ್ಕೆ ಬಾಲಕಿಯ ಕೆನ್ನೆಗೆ ಬಿಸಿ ಚಮಚದಿಂದ ಬರೆಯಿಟ್ಟು ಅಂಗನವಾಡಿ ಸಹಾಯಕಿ ಕ್ರೂರತ್ವ ಮೆರೆದಿದ್ದಾಳೆ. ಈ ಹಿನ್ನೆಲೆಯಲ್ಲಿ ಕೂಡಲೇ ಅಂಗನವಾಡಿ ಸಹಾಯಕಿಯನ್ನು ಅಮಾನತು ಮಾಡಲಾಗಿದೆ.ಈ ಒಂದು ಘಟನೆ ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಗುಲಗಾಲಜಂಬಗಿ ಗ್ರಾಮದ ಅಂಗನವಾಡಿಯಲ್ಲಿ ನಡೆದಿದೆ. ಬಾಲಕಿಯ ಕೆನ್ನೆಗೆ ಸಹಾಯಕಿ ಅನ್ನದ ಚಮಚದಿಂದಬರೆಹಾಕಿದ ಅಮಾನವೀಯ ಘಟನೆ ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಗುಲಗಾಲಜಂಬಗಿ ಗ್ರಾಮದ ಅಂಗನವಾಡಿಯಲ್ಲಿ ನಿನ್ನೆ ನಡೆದಿದೆ. ಬರೆಯಿಂದ ಪ್ರೀತಿ ಎಂಬ ಬಾಲಕಿಯ ಕೆನ್ನೆಗೆ ಗಾಯವಾಗಿದೆ. ಅಂಗನವಾಡಿ ಕಾರ್ಯಕರ್ತೆ ಶೋಭಾ, ಸಹಾಯಕಿ ಶಾರವ್ವಅವರನ್ನು ತಕ್ಷಣ ಅಮಾನತುಗೊಳಿಸಿ ಸಿಡಿಪಿಒ ಕಾಶಿಬಾಯಿ ಆದೇಶಿಸಿದ್ದಾರೆ. ಬರೆ ಹಾಕಿದ್ದಕ್ಕೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ.














