Author: kannadanewsnow05

ಬೆಂಗಳೂರು : ಈಗಾಗಲೆ ಕಾವೇರಿ ನೀರಿನ ದರ ಹಾಗೂ ಮೆಟ್ರೋ ದರ ಏರಿಕೆ ಮಾಡಿ ಸರ್ಕಾರ ಬೆಂಗಳೂರಿನ ಜನತೆಗೆ ಶಾಕ್ ನೀಡಿದ್ದು, ಇದೀಗ ಬೆಂಗಳೂರು ಜನತೆಗೆ ಮತ್ತೊಂದು ದರ ಏರಿಕೆಯ ಬಿಸಿ ತಟ್ಟಲಿದೆ. ಆಟೋ ಪ್ರಯಾಣದ ದರ ಹೆಚ್ಚಳಕ್ಕೆ ಇದೀಗ ಜಿಲ್ಲಾಡಳಿತ ಗ್ರೀನ್ ಸಿಗ್ನಲ್ ಕೊಟ್ಟಿದ್ದು, ಬೆಂಗಳೂರಿನ ಜನತೆಗೆ ಗಾಯದ ಮೇಲೆ ಬರೆ ಎಳೆದಂತೆ ಆಗಿದೆ. ಹೌದು ಆಟೋ ದರ ಏರಿಕೆ ಮಾಡಲು ಜಿಲ್ಲಾಡಳಿತ ಗ್ರೀನ್ ಸಿಗ್ನಲ್ ಕೊಟ್ಟಿದ್ದು, ಇನ್ನು ಅಧಿಕೃತ ಆದೇಶ ಹೊರ ಬೀಳುವುದು ಮಾತ್ರ ಬಾಕಿ ಇದೆ. ಮೇ 13 ರಂದು ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.ಈಗಾಗಲೇ ಅನೇಕ ಅಗತ್ಯ ವಸ್ತುಗಳ ದರ ಏರಿಕೆ ಆಗಿದೆ. ಹೀಗಾಗಿ ಆಟೋ ಮೀಟರ್ ದರ ಏರಿಕೆ ಮಾಡಲು ಜಿಲ್ಲಾಧಿಕಾರಿ ಕೂಡಲೇ ಗ್ರೀನ್ ಸಿಗ್ನಲ್ ನೀಡಬೇಕು ಎಂದು ಆಟೋ ಚಾಲಕರು ಆಗ್ರಹಿಸಿದ್ದಾರೆ. ಆಟೋ ಮೀಟರ್ ದರ ಏರಿಕೆ ಮಾಡುವಂತೆ ಕಳೆದ ಮೂರು ವರ್ಷಗಳಿಂದ ಆಟೋ ಚಾಲಕ ಹಾಗೂ ಮಾಲೀಕರ ಸಂಘಟನೆಗಳು…

Read More

ಬೆಂಗಳೂರು : ಇತ್ತೀಚಿಗೆ ಈ ಹೃದಯಾಘಾತ ಅನ್ನುವುದು ಚಿಕ್ಕ ಮಕ್ಕಳಿಂದ ಹಿಡಿದು ವಯೋ ವೃದ್ಧರವರೆಗೂ ಸಾಮಾನ್ಯ ಕಾಯಿಲೆಯಂತೆ ಆಗಿಬಿಟ್ಟಿದೆ. ಅದರಲ್ಲೂ ಚಿಕ್ಕ ಮಕ್ಕಳಲ್ಲಿ ಈ ಹೃದಯ ಸಂಬಂಧಿ ಕಾಯಿಲೆಗೆ ಏನು ಕಾರಣ ಅನ್ನೋದು ತಜ್ಞರು ಇದೀಗ ಬಹಿರಂಗಪಡಿಸಿದ್ದಾರೆ. ಮನೆಯಲ್ಲಿ ಪಾಲಿಶ್ ಮಾಡುವ ಅಕ್ಕಿ ಸೇವನೆಯಿಂದ ಈ ಒಂದು ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚಾಗುತ್ತಿವೆ ಎಂದು ಅಘಾತಕಾರಿ ಅಂಶವನ್ನು ತಜ್ಞರು ಬಹಿರಂಗಪಡಿಸಿದ್ದಾರೆ. ಹೌದು ದಿನನಿತ್ಯದ ನಮ್ಮ ಆಹಾರ ಪದ್ಧತಿಯಲ್ಲಿ ಆರೋಗ್ಯ ಕುತ್ತು ತರುವ ಅನೇಕ ತಿನಿಸು,‌ ಪದಾರ್ಥಗಳನ್ನು ಸೇವನೆ ಮಾಡುತ್ತಿದ್ದೇವೆ. ಅದರಲ್ಲೂ ಅನ್ನ ಎಲ್ಲ ಮನೆಗಳಲ್ಲಿ ಸಾಮಾನ್ಯವಾಗಿ ದಿನನಿತ್ಯ ಸೇವಿಸುವ ಒಂದು ಆಹಾರವಾಗಿದೆ. ಬಿಳಿ ಅಕ್ಕಿಯಲ್ಲೇ ಬಗೆ ಬಗೆಯ ಅಡುಗೆ ಮಾಡಿ ಸೇವಿಸಲಾಗುತ್ತದೆ. ಈ ಬೆನ್ನಲ್ಲೇ ಇದೀಗ ಈ ಬಿಳಿ ಪಾಲಿಶ್ ಅಕ್ಕಿ ಸೇವಿಸುವವರು ಎಚ್ಚರದಿಂದ ಇರಬೇಕಾದ ಪರಿಸ್ಥಿತಿ ಬಂದಿದೆ. ಏಕೆಂದರೆ ಹೃದಯ ಸಂಬಂಧಿ ಕಾಯಿಲೆಗಳಿಗೆ ಇದೇ ಪಾಲಿಶ್ ಅಕ್ಕಿ ಕಾರಣ ಎಂದು ತಜ್ಞರು ತಿಳಿಸಿದ್ದಾರೆ. ಇತ್ತೀಚಿಗೆ ಪುಟ್ಟ ಮಕ್ಕಳಿಗೂ ಕೂಡ ಹೃದಯ…

Read More

ಮಡಿಕೇರಿ : ಮಡಿಕೇರಿಯಲ್ಲಿ ಅಡುಗೆ ಅನೀಲ ಸೋರಿಕೆಯಾಗಿ ಗ್ಯಾಸ್ ಗೆ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ಮನೆಯಲ್ಲಿದ್ದ ದಂಪತಿಗಳಿಗೆ ಗಂಭೀರವಾದ ಗಾಯಗಳಾಗಿದ್ದು, ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪರಾಗಿರುವ ಘಟನೆ ಮಡಿಕೇರಿಯ ಸುಂಟಿಕೊಪ್ಪದಲ್ಲಿ ನಿನ್ನೆ ನಡೆದಿದೆ. ಸುಂಟಿಕೊಪ್ಪ 1ನೇ ವಿಭಾಗದ ನಿವಾಸಿಗಳಾದ ತಲೆ ಹೊರೆ ಕಾರ್ಮಿಕ ವಿಜಯ, ಅವರ ಪತ್ನಿ ಸಾವಿತ್ರಿ ಮನೆಯ ಅಡುಗೆ ಕೆಲಸ ನಿರ್ವಹಿಸುತ್ತಿದ್ದ‌ ವೇಳೆ ಅನಿಲ ಸೋರಿಕೆಯಾಗಿ ಏಕಾಏಕಿ ಸಿಲಿಂಡರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ನಂದಿಸಲು ಪ್ರಯತ್ನಿಸಿದ ವೇಳೆ ಈ ದಂಪತಿಗಳಿಗೆ ಗಾಯವಾಗಿದೆ. ಬೆಂಕಿ ಗಮನಿಸಿದ ಅಕ್ಕಪಕ್ಕದವರು ಸಿಲಿಂಡರ್ ಗಾಬರಿಯಿಂದ ಹೊರ ಹಾಕಿದ್ದಾರೆ. ಬಳಿಕ ದಂಪತಿಗಳನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

Read More

ಬೆಂಗಳೂರು : ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ ನಡೆಸುವ ಕೇಂದ್ರ ಸರ್ಕಾರದ ತೀರ್ಮಾನವನ್ನು ನಮ್ಮ ಸರ್ಕಾರ ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ. ಇದೇ ಸಂದರ್ಭದಲ್ಲಿ ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನೂ ನಡೆಸಬೇಕೆಂದು ಕೇಂದ್ರ ಸರ್ಕಾರವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಆಗ್ರಹಪಡಿಸಿದ್ದಾರೆ. ಈ ಕುರಿತಂತೆ ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಸಿಎಂ ಸಿದ್ದರಾಮಯ್ಯ, ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ ನಡೆಸುವ ಕೇಂದ್ರ ಬಿಜೆಪಿ ಸರ್ಕಾರದ ತೀರ್ಮಾನವನ್ನು ನಮ್ಮ ಸರ್ಕಾರ ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ. ಇದೇ ಸಂದರ್ಭದಲ್ಲಿ ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನೂ ನಡೆಸಬೇಕೆಂದು ನರೇಂದ್ರಮೋದಿ ಅವರ ಸರ್ಕಾರವನ್ನು ಆಗ್ರಹಪಡಿಸುತ್ತಿದ್ದೇನೆ. ಕರ್ನಾಟಕದಲ್ಲಿ ನಾವು ಕೇವಲ ಜಾತಿ ಗಣತಿ ನಡೆಸದೆ ಅದರ ಜೊತೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಯನ್ನು ನಡೆಸಿದ್ದೇವೆ. ಈ ದತ್ತಾಂಶಗಳ ಆಧಾರದಲ್ಲಿ ಈಗಿನ ಮೀಸಲಾತಿ ನೀತಿಯನ್ನು ಪರಿಷ್ಕರಿಸಿ ಅದರ ಮಿತಿಯನ್ನು ಹೆಚ್ಚಿಸುವ ಪ್ರಯತ್ನ ಕೂಡಾ ನಡೆದಿದೆ. ಜಾತಿ ಗಣತಿಯ ಜೊತೆಯಲ್ಲಿ ಈ…

Read More

ಹಾವೇರಿ : ಹಾವೇರಿಯಲ್ಲಿ ಚಲಿಸುತ್ತಿದ್ದ ಬಸ್ ಅನ್ನು ಸಡನ್ ಆಗಿ ಚಾಲಕ ನಿಲ್ಲಿಸಿ ಹಿಂದುಗಡೆ ಇರುವ ಸೀಟ್ ಗೆ ಬಂದು ನಮಾಜ್ ಮಾಡಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್-ಹಾವೇರಿ ಮಾರ್ಗದ ಮಧ್ಯದಲ್ಲಿ ನಡೆದಿದೆ. ಈ ಒಂದು ವಿಡಿಯೋವನ್ನು satish_kandagalpura ಎನ್ನುವವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬಸ್ ಚಾಲಕ ನಮಾಜ್ ಮಾಡುವ ದೃಶ್ಯವನ್ನು ಪ್ರಯಾಣಿಕರೊಬ್ಬರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು, ಭಾರೀ ವೈರಲ್ ಆಗುತ್ತಿದೆ.ಜೊತೆಗೆ, ಸರ್ಕಾರಿ ಕೆಲಸದ ಅವಧಿಯಲ್ಲಿ ಹತ್ತಾರು ಪ್ರಯಾಣಿಕರನ್ನು ಬಸ್‌ನಲ್ಲಿ ಕೂರಿಸಿ ನಮಾಜ್ ಮಾಡಿದ ಡ್ರೈವರ್‌ನ ನಡೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ಸಾರ್ವಜನಿಕರಿಗೆ ಸೇವೆ ನೀಡುವ ಸರ್ಕಾರಿ ಸಂಸ್ಥೆಯ ಬಸ್‌ನಲ್ಲಿ ಕರ್ತವ್ಯದ ವೇಳೆ ಈ ರೀತಿಯ ಧಾರ್ಮಿಕ ಚಟುವಟಿಕೆಯನ್ನು ಮಾಡುವುದು ಸರಿಯಾದ ಚಟುವಟಿಕೆ ಅಲ್ಲ ಎಂಬ ಅಭಿಪ್ರಾಯವನ್ನು ಹಲವರು ವ್ಯಕ್ತಪಡಿಸಿದ್ದಾರೆ. ಕೆಲವರು ಇದು ಸಾರ್ವಜನಿಕ ಸೇವೆಯ ದುರಪಯೋಗವೆಂದು ನಿಂದಿಸಿದ್ದಾರೆ. ಇದಲ್ಲದೆ, ಬಸ್ ಸಕಾಲದಲ್ಲಿ ತಲುಪದೇ ವಿಳಂಬವಾಗಿರುವ ಬಗ್ಗೆ ಸಹ ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಸ್‌ ನಲ್ಲಿ ಹಲವು…

Read More

ಕೊಲ್ಕತ್ತಾ : ಕೋಲ್ಕತ್ತಾದ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಫಾಲ್ಪಟ್ಟಿ ಮಚುವಾ ಬಳಿ ಇರುವ 6 ಅಂತಸ್ತಿನ ರಿತುರಾಜ್ ಹೋಟೆಲ್‌ನಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ 14 ಜನರು ಸಜೀವ ದಹನ ಹೊಂದಿದ್ದಾರೆ. ಈಗಾಗಲೇ ಅಗ್ನಿ ಶಾಮಕ ಸಿಬ್ಬಂದಿಗಳು ಆಗಮಿಸಿ 14 ಮೃತ ದೇಹಗಳನ್ನು ಹೊರಗರೇ ತೆಗೆದಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಹೋಟೆಲ್ ನಲ್ಲಿ ಹಲವರು ಉಸಿರುಗಟ್ಟುವಿಕೆಯಿಂದ ಸಾವನ್ನಪ್ಪಿದರೆ, ಬೆಂಕಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುವಾಗ ಕಟ್ಟಡದಿಂದ ಬಿದ್ದು ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ನಗರದ ಬುರ್ರಬಜಾರ್ ಪ್ರದೇಶದ ಮದನ್ಮೋಹನ್ ಬೀದಿಯಲ್ಲಿರುವ ಋತುರಾಜ್ ಹೋಟೆಲ್‌ನಲ್ಲಿ ಸಂಜೆ 7:30 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತು. ಹತ್ತು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ರವಾನಿಸಲಾಗಿದ್ದು, ಬುಧವಾರ ಬೆಳಗಿನ ಜಾವ 1 ಗಂಟೆ ಸುಮಾರಿಗೆ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು.

Read More

ಬೆಂಗಳೂರು : ಕಳೆದ ಏಪ್ರಿಲ್ 13 ರಂದು ಹುಬ್ಬಳ್ಳಿಯ ಅಶೋಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 5 ವರ್ಷದ ಬಾಲಕಿಯ ಮೇಲೆ ಬಿಹಾರ್ ಮೂಲದ ರಿತೇಶ್ ಎಂಬ ಆರೋಪಿ ಕಿಡ್ನ್ಯಾಪ್ ಮಾಡಿ ಅತ್ಯಾಚಾರಗೈದು ಕೊಲೆ ಮಾಡಿದ್ದ. ಬಳಿಕ ಆತನನ್ನು ಬಂಧಿಸಲು ಹೋದಾಗ ಆರೋಪಿ ರಿತೇಶ್ ಪೊಲೀಸರ ಎನ್ಕೌಂಟರ್ ಗೆ ಬಲಿಯಾಗಿದ್ದ. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು (NHRC) ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಕರ್ನಾಟಕ ರಾಜ್ಯ ಸರ್ಕಾರ ಹಾಗೂ ಪೊಲೀಸ್ ಮುಖ್ಯಸ್ಥರಿಗೆ ನೋಟಿಸ್ ನೀಡಿದ್ದು, ಸಂತ್ರಸ್ತೆಯ ಹಾಗೂ ಆರೋಪಿ ಆರೋಪಿಯ ಮರಣೋತ್ತರ ಪರೀಕ್ಷೆ ವರದಿ ಮ್ಯಾಜಿಸ್ಟ್ರಿರಿಯಲ್ ತನಿಖಾವರದಿ ಸೇರಿದಂತೆ ಒಟ್ಟಾರೆಯಾಗಿ ಎಲ್ಲಾ ವರದಿಯನ್ನು ನಾಲ್ಕು ವಾರದೊಳಗೆ ಸಲ್ಲಿಸಬೇಕು ಎಂದು ಸೂಚನೆ ನೀಡಿದೆ. ಕಳೆದ ಏಪ್ರಿಲ್ 13 ರಂದು 5 ವರ್ಷದ ಬಾಲಕಿಯನ್ನು ಬಿಹಾರ್ ಮೂಲದ ರಿತೇಶ್ ಎಂಬ ಆರೋಪಿ ಅಪಹರಣ ಮಾಡಿ ಬಳಿಕ ಅತ್ಯಾಚಾರ ಎಸಗಿದ್ದ.…

Read More

ಮೈಸೂರು : ಜಮೀನು ಸರ್ವೆ ಮಾಡಲು ಎಂದು ತೆರಳಿದ ಇಲಾಖೆಯ ಇಬ್ಬರು ಸಿಬ್ಬಂದಿಗಳ ಮೇಲೆ ಹಲ್ಲೆ ನಡೆದಿರುವ ಘಟನೆ ವರದಿಯಾಗಿದೆ. ಬೆಟ್ಟದಬೀಡು ಗ್ರಾಮದಲ್ಲಿ ಇಲಾಖೆಯ ಇಬ್ಬರು ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಲಾಗಿದೆ. ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನ ಬೆಟ್ಟದ ಬಿಡು ಗ್ರಾಮದಲ್ಲಿ ಈ ಘಟನೆ ನಡೆದಿ. ಜಮೀನು ಸರ್ವೆಗೆ ಎಂದು ಸಿಬ್ಬಂದಿಗಳು ತೆರಳಿದ್ದರು. ಇಲಾಖೆ ಸಿಬ್ಬಂದಿಗಳಾದ ಮಂಜುನಾಥ ಹಾಗೂ ಇನ್ನೊರ್ವ ಸಿಬ್ಬಂದಿಯ ಮೇಲೆ ಗ್ರಾಮದ ಶಿವಣ್ಣೇಗೌಡ ಸ್ವಾಮಿಗೌಡ ಸಹೋದರ ವಿರುದ್ಧ ಇದೀಗ ಹಲ್ಲೆಯ ಆರೋಪ ಕೇಳಿ ಬಂದಿದೆ. ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಮೊಬೈಲ್ ಕಸಿದುಕೊಂಡು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಸರ್ವೇ ನಂಬರ್ 32ರ ಜಮೀನು ಸರ್ವೆ ನಡೆಸಿ ಜಾಗ ಗುರುತಿಸಲು ತೆರಳಿದ್ದಾಗ ಇಬ್ಬರು ಸಹೋದರರು ಹಲ್ಲೆ ಮಾಡಿದ್ದಾರೆ. ಇಬ್ಬರು ಸಿಬ್ಬಂದಿಗಳ ಮುಖ ಮತ್ತು ಎದೆಯ ಭಾಗಕ್ಕೆ ಗುದ್ದಿ ಹಲ್ಲೆ ನಡೆಸಿದ್ದಾರೆ. ಇಬ್ಬರಿಗೂ ಎಚ್ ಡಿ ಕೋಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತಂತೆ ಎಚ್ ಡಿ…

Read More

ಬೆಂಗಳೂರು : ರಾಜ್ಯದ ವಾಹನ ಮಾಲೀಕರಿಗೆ ರಾಜ್ಯ ಸರ್ಕಾರ ಇದೀಗ ಮತ್ತೊಂದು ಬಿಗ್ ಶಾಕ್ ನೀಡಿದೆ. ಟ್ಯಾಕ್ಸಿ ಲಘು ವಾಹನಗಳು ದುಬಾರಿ ಆಗಲಿವೆ 10 ಲಕ್ಷದೊಳಗಿನ ವಾಣಿಜ್ಯ ವಾಹನಗಳ ತೆರಿಗೆ ಹೆಚ್ಚಾಗಲಿದೆ. ಕರ್ನಾಟಕ ಮೋಟಾರ್ ವಾಹನಗಳ ವಿಧೇಯಕಕ್ಕೆ ರಾಜಪಾಲರು ಅಂಕಿತ ಹಾಕಿದ ಹಿನ್ನೆಲೆಯಲ್ಲಿ ಇದೀಗ ವಾಹನ ಮಾಲೀಕರಿಗೆ ತೆರಿಗೆ ಶಾಕ್ ನೀಡಲಾಗಿದೆ. ಹೌದು ನಾಳೆಯಿಂದ ವಾಹನಗಳ ಜೀವಿತಾವಧಿ ತೆರಿಗೆ ಏರಿಕೆ ಆಗಲಿದೆ. 10 ಲಕ್ಷದೊಳಗಿನ ಟ್ಯಾಕ್ಸಿ, ಲಘು ವಾಹನಗಳ ತೆರಿಗೆ ಏರಿಕೆಯಾಗಲಿದೆ. ವಾಹನಗಳ ಜೀವಿತಾವಧಿ ತೆರಿಗೆ ಶೇಕಡ 5ರಷ್ಟು ಏರಿಕೆಯಾಗಲಿದೆ. ವಾಣಿಜ್ಯ ಉದ್ದೇಶ ಬಳಕೆಯ ಎಲೆಕ್ಟ್ರಿಕ್ ವಾಹನಗಳ ತೆರಿಗೆಯು ಏರಿಕೆಯಾಗಲಿದೆ. 25 ಲಕ್ಷಕ್ಕೂ ಹೆಚ್ಚಿನ ವಾಣಿಜ್ಯ ಬಳಕೆ ಇವಿಗೆ ಶೇಕಡ 10 ರಷ್ಟು ತೆರಿಗೆ ಏರಿಕೆಯಾಗಿದೆ. ಇದುವರೆಗೂ 10 ಲಕ್ಷಕ್ಕಿಂತ ಕಡಿಮೆ ಮುಳ್ಳಿದ ವಾಹನಗಳಿಗೆ ತೆರಿಗೆ ಇರಲಿಲ್ಲ. ನಾಳೆಯಿಂದ ಈ ಎಲ್ಲ ವಾಹನಗಳ ಜೀವಿತಾವಧಿ ತೆರಿಗೆ ಏರಿಕೆ ಆಗಲಿದೆ.

Read More

ಬಾಂಗ್ಲಾದೇಶ : ಕಳೆದ 5 ತಿಂಗಳ ಹಿಂದೆ ಬಾಂಗ್ಲಾದೇಶದಲ್ಲಿ ಹಿಂದೂಗಳನ್ನು ಒಟ್ಟುಗೂಡಿಸಿ ಬೃಹತ್ ಪ್ರತಿಭಟನೆ ನಡೆಸಿದ್ದಕ್ಕೆ ಬಂಧಿಸಲಾಗಿದ್ದ ಇಸ್ಕಾನ್ ಸಂಸ್ಥೆಯ ಮಾಜಿ ಧಾರ್ಮಿಕ ನಾಯಕ ಚಿನ್ಮಯ್ ಕೃಷ್ಣ ದಾಸ್ ಅವರಿಗೆ ಬಾಂಗ್ಲಾದ ಚಿತ್ತಗಾಂಗ್ ಹೈಕೋರ್ಟ್ 5 ತಿಂಗಳ ಬಳಿಕ ಜಾಮೀನು ನೀಡಿದೆ. ಹೌದು ದೇಶದ್ರೋಹದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದ ಚಿನ್ಮಯ್ ಕೃಷ್ಣದಾಸ್‌ರನ್ನು ನವೆಂಬರ್ 25, 2024ರಂದು ಬಾಂಗ್ಲಾದೇಶದಲ್ಲಿ ಬಂಧಿಸಲಾಗಿತ್ತು.ಚಿನ್ಮಯ್ ಕೃಷ್ಣ ದಾಸ್ ಅವರಿಗೆ ಬಾಂಗ್ಲಾದ ಚಿತ್ತಗಾಂಗ್ ಹೈಕೋರ್ಟ್ 5 ತಿಂಗಳ ಬಳಿಕ ಜಾಮೀನು ನೀಡಿದೆ. ಪ್ರಕರಣ ಹಿನ್ನೆಲೆ? ಬಾಂಗ್ಲಾದೇಶದಲ್ಲಿ ಹಿಂದೂಗಳು ಸೇರಿದಂತೆ ಧಾರ್ಮಿಕ ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಬಗ್ಗೆ ಚಿನ್ಮಯ್ ಕೃಷ್ಣದಾಸ್ ಅವರು ಧ್ವನಿ ಎತ್ತಿದ್ದರು. ಮಾಜಿ ಪ್ರಧಾನಿ ಶೇಖ್ ಹಸೀನಾ ಅಧಿಕಾರದಿಂದ ಕೆಳಗಿಳಿದ ನಂತರ ದೇಶದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ನಡೆಯುತ್ತಿತ್ತು. ಮೊಹಮ್ಮದ್ ಯೂನಸ್ ಅವರ ಮಧ್ಯಂತರ ಸರ್ಕಾರವು ಅಲ್ಪಸಂಖ್ಯಾತರ ವಿರುದ್ಧದ ಹಿಂಸಾಚಾರವನ್ನು ತಡೆಯಲು ವಿಫಲವಾಗಿದೆ ಎಂದು ಟೀಕಿಸಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ನವೆಂಬರ್ 25, 2024ರಂದು ಬಾಂಗ್ಲಾದೇಶದಲ್ಲಿ…

Read More