Author: kannadanewsnow05

ಬೆಂಗಳೂರು : ಯಶವಂತಪುರದ ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್ ಹಾಗೂ ಯಲ್ಲಾಪುರದ ಶಾಸಕ ಶಿವರಾಂ ಹೆಬ್ಬಾರ್ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿದೆ. ಈ ವಿಚಾರವಾಗಿ ಉಚ್ಚಾಟನೆ ಯಾಕೆ ಮಾಡಿದ್ದೀರಿ ಅಂತಾನೂ ಕೇಳೋದಿಲ್ಲ. ನಾನು ಈಗ ಫ್ರೀ ಬರ್ಡ್ ಆಗಿದ್ದೀನಿ. ಇನ್ನು ಫ್ರೀ ಬರ್ಡ್ ಆಗಿ ಓಡಾಡುತ್ತೇನೆ. ಕಾಂಗ್ರೆಸ್ ಇಲ್ಲ, ಬಿಜೆಪಿ ಇಲ್ಲ ಆರಾಮಾಗಿ ಇದ್ದೇವೆ. ಮುಂದಿನ ನಡೆ ಬಗ್ಗೆ ಈಗ ಯೋಚನೆ ಮಾಡಿಲ್ಲ ಎಂದರು. ಈ ವಿಚಾರವಾಗಿ ಬೆಂಗಳೂರಲ್ಲಿ ಮಾತನಾಡಿದ ಶಾಸಕ ಎಸ್.ಟಿ ಸೋಮಶೇಖರ್, ಬಿಜೆಪಿಯಲ್ಲಿ ರೇಪ್ ಮಾಡಿದವರನ್ನು ಉಚ್ಚಾಟನೆ ಮಾಡುವುದಿಲ್ಲ. ನಮ್ಮಂತವರನ್ನು ಉಚ್ಚಾಟನೆ ಮಾಡ್ತಾರೆ. ಉಚ್ಚಾಟನೆಯನ್ನು ನಿರೀಕ್ಷಿಸಿದ್ದೆವು ಒಳ್ಳೆಯದಾಯ್ತು.ಉಚ್ಚಾಟನೆ ಯಾಕೆ ಮಾಡಿದ್ದೀರಿ ಅಂತಾನೂ ಕೇಳೋದಿಲ್ಲ. ನಾನು ಈಗ ಫ್ರೀ ಬರ್ಡ್ ಆಗಿದ್ದೀನಿ. ಇನ್ನು ಫ್ರೀ ಬರ್ಡ್ ಆಗಿ ಓಡಾಡುತ್ತೇನೆ. ಕಾಂಗ್ರೆಸ್ ಇಲ್ಲ, ಬಿಜೆಪಿ ಇಲ್ಲ ಆರಾಮಾಗಿ ಇದ್ದೇವೆ. ಮುಂದಿನ ನಡೆ ಬಗ್ಗೆ ಈಗ ಯೋಚನೆ ಮಾಡಿಲ್ಲ ಎಂದರು. 1% ಸಹ ಬೇಸರ, ಅಸಮಾಧಾನ ಇಲ್ಲ. ಉಚ್ಚಾಟನೆ ಮಾಡಿದ್ದು…

Read More

ಬೆಳಗಾವಿ : ವರದಕ್ಷಿಣೆ ಕಿರುಕುಳ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳಿಗೆ ಆಶ್ರಯ ಹಾಗೂ ಆರ್ಥಿಕ ಸಹಾಯ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸಚಿವರಾದಂತಹ ವೀರಕುಮಾರ ಪಾಟೀಲ ಪುತ್ರ ಪ್ರೀತಮ್ ನನ್ನು ಪುಣೆ ಪೊಲೀಸರು ಅರೆಸ್ಟ್ ಮಾಡಲಾಗಿದೆ. ವೈಷ್ಣವಿ ಹಗವಣೆ ವರದಕ್ಷಿಣೆ ಕಿರುಕುಳ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳಾದ ವೈಷ್ಣವಿ ಮಾವ ರಾಜೇಂದ್ರ, ಮೈದುನ ಸುಶೀಲ್‌ಗೆ ಆಶ್ರಯ ಹಾಗೂ ಆರ್ಥಿಕ ಸಹಾಯ ಆರೋಪದಡಿ ಪ್ರೀತಮ್‌ನನ್ನು ಬಂಧಿಸಲಾಗಿದೆ.ಸಚಿವ ಸತೀಶ ಜಾರಕಿಹೊಳಿ ಆಪ್ತ ಹಾಗೂ ಮಾಜಿ ಸಚಿವ ವೀರಕುಮಾರ ಪಾಟೀಲ ಅವರ ಪುತ್ರ ಪ್ರೀತಮ್ ಬಂಧಿತ ಆರೋಪಿ ಎಂದು ತಿಳಿದುಬಂದಿದೆ.

Read More

ಬೆಂಗಳೂರು : ಮುಸ್ಲಿಂ ಸಮುದಾಯದ ಗುತ್ತಿಗೆದಾರರಿಗೆ ಸರ್ಕಾರಿ ಗುತ್ತಿಗೆಯಲ್ಲಿ ಶೇ 4ರಷ್ಟು ಮೀಸಲಾತಿ ಒದಗಿಸುವ ತಿದ್ದುಪಡಿ ಮಸೂದೆಯನ್ನು ಕರ್ನಾಟಕ ಸರ್ಕಾರವು ರಾಜ್ಯಪಾಲರಿಗೆ ಮರುಸಲ್ಲಿಸಿದೆ. ಮೊದಲ ಬಾರಿಗೆ ರಾಜ್ಯಪಾಲರು ಸ್ಪಷ್ಟೀಕರಣ ಕೋರಿ ಮಸೂದೆಯನ್ನು ಅನುಮೋದಿಸಿರಲಿಲ್ಲ. ಈಗ ಹೆಚ್ಚಿನ ಸ್ಪಷ್ಟನೆಗಳೊಂದಿಗೆ ಮಸೂದೆಯನ್ನು ಮತ್ತೆ ಸಲ್ಲಿಸಲಾಗಿದೆ. ಹೌದು ಮುಸ್ಲಿಂ ಸಮುದಾಯದ ಗುತ್ತಿಗೆದಾರರಿಗೆ ಸರ್ಕಾರಿ ಗುತ್ತಿಗೆ ಕಾಮಗಾರಿಯಲ್ಲಿ ಶೇ 4 ರಷ್ಟು ಮೀಸಲಾತಿ ನೀಡುವ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ತಿದ್ದುಪಡಿ ಮಸೂದೆಯನ್ನು ಅನುಮೋದಿಸುವಂತೆ ರಾಜ್ಯ ಸರ್ಕಾರ ಮತ್ತೆ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​ ಅವರಿಗೆ ಮಸೂದೆಯನ್ನು ಮರು ಸಲ್ಲಿಕೆ ಮಾಡಲಾಗಿದೆ. ಸಾರ್ವಜನಿಕ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ. 4ರಷ್ಟು ಮೀಸಲಾತಿ ನೀಡುವ ಉದ್ದೇಶವನ್ನು ಹೊಂದಿರುವ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ತಿದ್ದುಪಡಿ) ಮಸೂದೆಯನ್ನು ಮಾರ್ಚ್‌ನಲ್ಲಿ ನಡೆದ ಅಧಿವೇಶನದಲ್ಲಿ ಅಂಗೀಕರಿಸಲಾಗಿತ್ತು. ರಾಜ್ಯದ ವಿರೋಧ ಪಕ್ಷ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಈ ಮಸೂದೆಯನ್ನು “ಅಸಂವಿಧಾನಿಕ” ಎಂದು ಟೀಕಿಸಿದ್ದವು. ಅಲ್ಪಸಂಖ್ಯಾತರ ತುಷ್ಟೀಕರಣ ಮಾಡಲಾಗುತ್ತಿದೆ ಎಂದು ಬಿಜೆಪಿ ಆರೋಪಿಸಿತ್ತು. ಈ ಮಸೂದೆಯನ್ನು…

Read More

ಬೆಂಗಳೂರು : ರಾಜ್ಯದಲ್ಲಿ ಕೊರೊನ ರೂಪಾಂತರ ಹೊಸ ತಳಿ ವೈರಸ್ ಹರಡುತ್ತಿದ್ದು, ಇದೀಗ ಬೆಂಗಳೂರಿನಲ್ಲಿ ಸುಮಾರು 80ಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಈ ವಿಷಯದ ಕುರಿತು ಸಿಎಂ ಸಿದ್ದರಾಮಯ್ಯ ಕೊರೊನ ವೈರಸ್ ಬಗ್ಗೆ ಯಾವುದೇ ನಿರ್ಲಕ್ಷ ವಹಿಸಬೇಡಿ, ಅನಾರೋಗ್ಯ ಇರುವ ಮಕ್ಕಳನ್ನು ಶಾಲೆಗೆ ಕಳುಹಿಸಬೇಡಿ ಎಂದು ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ಕೊಟ್ಟಿದ್ದಾರೆ. ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಎಲ್ಲರೂ ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಹೇಳಿಲ್ಲ.ಕೆಮ್ಮು, ಶೀತ, ಇನ್ನಿತರ ಖಾಯಿಲೆಯಿಂದ ಬಳಲುತ್ತಿರುವವರು ಹಾಗೂ ಗರ್ಭಿಣಿಯರು ಮಾಸ್ಕ್ ಧರಿಸಿ ಎಂದು ಹೇಳಿದ್ದೇವೆ ಎಂದರು.

Read More

ಬೆಂಗಳೂರು : ಬೆಂಗಳೂರು ಮಹಾನಗರ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವರುಣ ಅಬ್ಬರಿಸುತ್ತಿದ್ದು, ಈಗಾಗಲೇ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ಗುಡ್ಡ ಕುಸಿತ ಹಾಗೂ ಭೂಕುಸಿತ ಘಟನೆಗಳು ನಡೆದಿದೆ.ಇಂದು ಬೆಂಗಳೂರಿನಲ್ಲಿ ಭಾರಿ ಮಳೆಯಿಂದಾಗಿ ಮರ ಬಿದ್ದು ಬೈಕ್ ಸವಾರನಿಗೆ ಗಂಭೀರವಾದ ಗಾಯಗಳಾಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಬಿಎಂಪಿ ಹಾಗು ಅರಣ್ಯ ಇಲಾಖೆಯ ಮೇಲೆ FIR ದಾಖಲಾಗಿದೆ. ಹೌದು ಬೆಂಗಳೂರಿನಲ್ಲಿ ಮರ ಬಿದ್ದು ಬೈಕ್ ಸವಾರನಿಗೆ ಗಂಭಿರವಾಗಿ ಗಾಯವಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬಿಬಿಎಂಪಿ ಹಾಗೂ ಅರಣ್ಯ ಇಲಾಖೆಯ ಮೇಲೆ ಇದೀಗ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಜಯನಗರ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿ ಹಾಗು ಅರಣ್ಯ ಇಲಾಖೆಯ ಮೇಲೆ FIR ದಾಖಲು ಮಾಡಲಾಗಿದೆ.

Read More

ಬೆಂಗಳೂರು : ಬಿಜೆಪಿಯ ಬೆಂಗಳೂರಿನ ಯಶವಂತಪುರದ ಶಾಸಕ ಎಸ್‌ಟಿ ಸೋಮಶೇಖರ್‌ ಮತ್ತು ಯಲ್ಲಾಪುರದ ಶಾಸಕ ಶಿವರಾಂ ಹೆಬ್ಬಾರ್‌ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಈ ವಿಚಾರ ಕುರಿತಂತೆ ಅವರೇನು ವಿಧಾನಸೌಧದಲ್ಲಿ ಯಾರನ್ನು ರೇಪ್ ಮಾಡಿರಲಿಲ್ಲ ಅಲ್ವಾ? ಅವರು ಏನು ಯಾರಿಗೂ ಎಚ್ ಐ ವಿ ಇಂಜೆಕ್ಷನ್ ಚುಚ್ಚಿರಲಿಲ್ಲ ಅಲ್ವಾ? ಮುತ್ತು ರತ್ನಗಳನ್ನು ಪಕ್ಷದಲ್ಲಿ ಇಟ್ಟುಕೊಳ್ಳಿ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಈ ಅಂಶಗಳೇ ಉಚ್ಚಟನೆಗೆ ಕಾರಣ ಬಿಜೆಪಿಯ ಬೆಂಗಳೂರಿನ ಯಶವಂತಪುರದ ಶಾಸಕ ಎಸ್‌ಟಿ ಸೋಮಶೇಖರ್‌ ಮತ್ತು ಯಲ್ಲಾಪುರದ ಶಾಸಕ ಶಿವರಾಂ ಹೆಬ್ಬಾರ್‌ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಇಬ್ಬರು ಶಾಸಕರನ್ನು ಪಕ್ಷದಿಂದ ಉಚ್ಚಾಟನೆ ಮಾಡಲು ಹಲವು ಪ್ರಮುಖ ಅಂಶಗಳಿವೆ. ಪದೇ ಪದೇ ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಮಾರ್ಚ್‌ ಕೊನೆಯಲ್ಲಿ ಇಬ್ಬರಿಗೂ ಶೋಕಾಸ್‌ ನೋಟಿಸ್‌ ನೀಡಲಾಗಿತ್ತು. ಶೋಕಾಸ್‌ ನೋಟಿಸ್‌ಗೆ ಸರಿಯಾದ ಉತ್ತರ ನೀಡದ ಕಾರಣ ಇಬ್ಬರನ್ನೂ ಬಿಜೆಪಿ ಉಚ್ಚಾಟನೆ ಮಾಡಿದೆ.…

Read More

ಬೆಂಗಳೂರು : ಬೆಂಗಳೂರಿನ ಯಶವಂತಪುರದ ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್‌ ಮತ್ತು ಯಲ್ಲಾಪುರದ ಶಾಸಕ ಶಿವರಾಂ ಹೆಬ್ಬಾರ್‌ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಇಬ್ಬರು ಶಾಸಕರನ್ನು ಪಕ್ಷದಿಂದ ಉಚ್ಚಾಟನೆ ಮಾಡಲು ಹಲವು ಪ್ರಮುಖ ಅಂಶಗಳಿವೆ. ಪದೇ ಪದೇ ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಮಾರ್ಚ್‌ ಕೊನೆಯಲ್ಲಿ ಇಬ್ಬರಿಗೂ ಶೋಕಾಸ್‌ ನೋಟಿಸ್‌ ನೀಡಲಾಗಿತ್ತು. ಶೋಕಾಸ್‌ ನೋಟಿಸ್‌ಗೆ ಸರಿಯಾದ ಉತ್ತರ ನೀಡದ ಕಾರಣ ಇಬ್ಬರನ್ನೂ ಬಿಜೆಪಿ ಉಚ್ಚಾಟನೆ ಮಾಡಿದೆ. ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಬಿಜೆಪಿಯಿಂದ ಅಂತರ ಕಾಯ್ದುಕೊಂಡರು. ಕಳೆದ ವರ್ಷ ರಾಜ್ಯಸಭಾ ಚುನಾವಣೆಯ ವೇಳೆ ಕಾಂಗ್ರೆಸ್ ಜೊತೆಗೆ ಸಂಪರ್ಕ ಹೊಂದಿದ್ದರು. ಬಹಿರಂಗವಾಗಿಯೇ ಕಾಂಗ್ರೆಸ್ ಜೊತೆಗೆ ಇಬ್ಬರು ಹೊಂದಾಣಿಕೆ ಮಾಡಿಕೊಂಡಿದ್ದರು. ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿಯೇ ಮತ ಚಲಾಯಿಸಿದ್ದರು. ಅಲ್ಲದೆ ಪಕ್ಷದಿಂದ ಬಹುತೇಕ ದೂರ ಉಳಿದಿದ್ದರು. ಬಹಿರಂಗ ಸಭೆಯಲ್ಲಿ ಕಾಂಗ್ರೆಸ್ ಸರ್ಕಾರವನ್ನು ಶಿವರಾಮ ಹೆಬ್ಬಾರ್ ಹೊಗಳುತ್ತಿದ್ದರು. ಬಿಜೆಪಿ ನಾಯಕರ ವಿರುದ್ಧ ಬಹಿರಂಗ ಹೇಳಿಕೆ ನೀಡುತ್ತಿದ್ದರು. ಅಲ್ಲದೆ ಬಿಜೆಪಿ ಶಾಸಕಾಂಗ…

Read More

ಬೆಂಗಳೂರು : ಬಿಜೆಪಿಯ ಬೆಂಗಳೂರಿನ ಯಶವಂತಪುರದ ಶಾಸಕ ಎಸ್‌ಟಿ ಸೋಮಶೇಖರ್‌ ಮತ್ತು ಯಲ್ಲಾಪುರದ ಶಾಸಕ ಶಿವರಾಂ ಹೆಬ್ಬಾರ್‌ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಈ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಇಬ್ಬರನ್ನು ಉಚ್ಚಾಟನೆ ಮಾಡಲಾಗಿದೆ ಎಂದು ಹೇಳಿಕೆ ನೀಡಿದರು. ಬೆಂಗಳೂರಲ್ಲಿ ಮಾತನಾಡಿದ ಅವರು, ಪಕ್ಷ ವಿರೋಧಿ ಚಟುವಟಿಕೆ ಅಡಿ ಇಬ್ಬರನ್ನು ಉಚ್ಚಾಟನೆ ಮಾಡಲಾಗಿದೆ. ಬಿಜೆಪಿಯ ಕೇಂದ್ರೀಯ ಶಿಸ್ತು ಸಮಿತಿ ಈ ಒಂದು ನಿರ್ಧಾರ ಕೈಗೊಂಡಿದೆ. ಪಕ್ಷ ವಿರೋಧಿ ಚಟುವಟಿಕೆಯ ಬಗ್ಗೆ ಅವರಿಗೂ ಸಹ ಗೊತ್ತಿದೆ. 6 ವರ್ಷಗಳ ಕಾಲ ಇಬ್ಬರನ್ನು ಉಚ್ಚಾಟನೆ ಮಾಡಲಾಗಿದೆ. ಶಿಸ್ತುಕ್ರಮ ಆಗಬೇಕು ಅಂತ ನಮ್ಮ ಅಭಿಪ್ರಾಯ ತಿಳಿಸಿದ್ದೆವು ಹಾಗಾಗಿ ಇದೀಗ ಇಬ್ಬರನ್ನು ಕೇಂದ್ರೀಯ ಶಿಸ್ತು ಸಮಿತಿ ಉಚ್ಚಾಟನೆ ಮಾಡಿದೆ. ಶಿವರಾಂ ಹೆಬ್ಬಾರ್ ಹಾಗೂ ಎಸ್ ಟಿ ಸೋಮಶೇಖರ್ ಅವರ ಉಚ್ಚಾಟನೆ ಸ್ವಾಗತಿಸುತ್ತೇನೆ. ಬಿಜೆಪಿ ಅಧಿಕಾರಕ್ಕೆ ಬಂದಾಗ ಇಬ್ಬರಿಗೂ ಕೂಡ ಅವಕಾಶ ಸಿಕ್ಕಿತ್ತು. ಆದರೆ ವಿಪಕ್ಷದಲ್ಲಿ…

Read More

ಬೆಂಗಳೂರು : ವಾಹನ ಟೋಯಿಂಗ್ ಸಾರ್ವಜನಿಕರಿಗೆ ಉಪಯೋಗ ಆದ್ರೆ ಜಾರಿಗೆ ತರುತ್ತೇವೆ. ಅದು ಸಾರ್ವಜನಿಕರಿಗೆ ತೊಂದರೆ ಆದರೆ ಜಾರಿಗೊಳಿಸಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ ತಿಳಿಸಿದರು. ಇಂದು ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಟೋಯಿಂಗ್ ಸಾರ್ವಜನಿಕರಿಗೆ ಉಪಯೋಗ ಆದ್ರೆ ಮಾತ್ರ ಜಾರಿಗೆ ತರುತ್ತೇವೆ. ಆದರೆ ವಾಹನಗಳ ಟೋಯಿಂಗ್​ನಿಂದ ಸಾರ್ವಜನಿಕರಿಗೆ ತೊಂದರೆಯಾದರೆ ಜಾರಿಗೊಳಿಸುವುದಿಲ್ಲ.ವಾಹನಗಳ ಟೋಯಿಂಗ್ ಬಗ್ಗೆಯೂ ಚರ್ಚೆ ಆಗಿದೆ. ಇದನ್ನು ಈ ಹಿಂದೆ ನನ್ನ ಗಮನಕ್ಕೆ ತರಲಾಗಿದೆ ಎಂದರು. ಟೋಯಿಂಗ್ ಸಾರ್ವಜನಿಕರಿಗೆ ಉಪಯೋಗ ಆದರೆ ಜಾರಿಗೆ ತರುತ್ತೇವೆ. ಅದು ಸಾರ್ವಜನಿಕರಿಗೆ ತೊಂದರೆ ಆದರೆ ಜಾರಿಗೊಳಿಸಲ್ಲ. ಏನೇ ನಿರ್ಧಾರ ಮಾಡಿದರೂ ಸಾರ್ವಜನಿಕರಿಗೆ ಉಪಯೋಗ ಆಗಬೇಕು. ಸಾಧಕ ಬಾಧಕ ಚರ್ಚೆ ಮಾಡಿ ತೀರ್ಮಾನ ತಗೋತೇವೆ. ಸಾರ್ವಜನಿಕರಿಗೆ ನಮ್ಮ ಕ್ರಮದಿಂದ ಒಳ್ಳೆಯದಾಗಬೇಕೇ ಹೊರತು ಕೆಟ್ಟದಾಗಬಾರದು ಎಂದರು.

Read More

ಚಿಕ್ಕಬಳ್ಳಾಪುರ : ಯುವಕ ಮತ್ತು ಯುವತಿಯರಿಬ್ಬರು ನೀರು ಕೇಳುವ ನೆಪದಲ್ಲಿ ಬಂದು ವೃದ್ಧೆಯ ಬಾಯಿಗೆ ಬಟ್ಟೆ ತುರುಕಿ ಹಲ್ಲೆ ಮಾಡಿ ಸರಗಳ್ಳತನ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಸುದ್ದಹಳ್ಳಿ ಗೇಟ್ ಬಳಿ ಈ ಒಂದು ಕೃತ್ಯ ನಡೆದಿದೆ. ನಿರ್ಮಾಣ ಹಂತದ ತೋಟದ ಮನೆಯಲ್ಲಿ ಇದ್ದಂತಹ ವೃದ್ಧೆಯ ಮೇಲೆ ಹಲ್ಲೆ ನಡೆಸಿದ್ದಾರೆ. ಕಳವಾರ ಗ್ರಾಮದ ಅಂಜಿನಮ್ಮ ಎಂಬ ವೃದ್ಧೆಯ ಮೇಲೆ ಹಲ್ಲೆ ನಡೆಸಿ, ಯುವಕ ಯುವತಿ ಸರಗಳ್ಳತನ ಮಾಡಿದ್ದಾರೆ. ವೃದ್ಧೆಯ ಬಳಿ ಇದ್ದಂತಹ 50 ಗ್ರಾಂ ತೂಕದ ಚಿನ್ನ ಸರವನ್ನು ಕದ್ದು ಇಬ್ಬರು ಪರಾರಿಯಾಗಿದ್ದಾರೆ.

Read More