Author: kannadanewsnow05

ಹಾಸನ : ಮೈಕ್ರೋ ಫೈನಾನ್ಸ್ ನಿಂದ ಕಳೆದ ಕೆಲವು ದಿನಗಳ ಹಿಂದೆ ರಾಜ್ಯದಲ್ಲಿ ಸರಣಿ ಆತ್ಮಹತ್ಯೆ ಪ್ರಕರಣಗಳು ನಡೆದಿದ್ದವು. ಬಳಿಕ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ಕಿರುಕುಳ ತಡೆಗೆ ಸುಗ್ರೀವಾಜ್ಞೆ ಕೂಡ ಜಾರಿ ಮಾಡಿದ್ದು, ಆದರೂ ಕೂಡ ಮೈಕ್ರೋಫೈನಾನ್ಸ್ ಸಿಬ್ಬಂದಿಗಳ ಕಿರುಕುಳ ತಪ್ಪಿಲ್ಲ. ಇದೀಗ ಹಾಸನ ತಾಲೂಕಿನಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಹೌದು ರೈತರೊಬ್ಬರು ಫೈನಾನ್ಸ್ ಕಿರುಕುಳ ಮತ್ತು ಸಾಲದ ಒತ್ತಡ ತಾಳಲಾರದೆ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ತಾಲ್ಲೂಕಿನ ಗೊರೂರು ಪೊಲೀಸ್ ಠಾಣೆ ವ್ಯಾಪ್ತಿಯ ಜೋಡಿಮಲ್ಲಪ್ಪನಳ್ಳಿ ಗ್ರಾಮದಲ್ಲಿ ನಡೆದಿದೆ.ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ವೆಂಕಟೇಶ್ (48) ಎಂದು ತಿಳಿದಬಂದಿದೆ. ವೆಂಕಟೇಶ್ ಫೈನಾನ್ಸ್‌ಗಳಿಂದ 3 ಲಕ್ಷ 70 ಸಾವಿರ, ಬ್ಯಾಂಕ್, ವ್ಯವಸಾಯ ಸಹಕಾರ ಸಂಘ, ಧರ್ಮಸ್ಥಳ ಸಂಘ ಮತ್ತು ಕೈಸಾಲ ಸೇರಿ 3 ಲಕ್ಷ 90 ಸಾವಿರ, ಒಟ್ಟು 7 ಲಕ್ಷ 60 ಸಾವಿರ ರೂ. ಸಾಲ ಮಾಡಿದ್ದರು ಎನ್ನಲಾಗಿದೆ. ಸಾಲದ ಹಣವನ್ನು…

Read More

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಬಳಿಯ ಬೈಸರನ್ ಕಣಿವೆಯಲ್ಲಿ ರಾಜಸ್ಥಾನದ ಪ್ರವಾಸಿಗರ ಗುಂಪಿನ ಮೇಲೆ ದಾಳಿ ನಡೆಸಲಾಯಿತು. ಕಣಿವೆಯ ಮೇಲ್ಭಾಗದಲ್ಲಿ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪ್ರವಾಸಿಗರು ಸಾವನ್ನಪ್ಪಿದ್ದರೇ, 12 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಇದೇ ಒಂದು ಗುಂಡಿನ ದಾಳಿಯಲ್ಲಿ ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಓರ್ವ ವ್ಯಕ್ತಿ ಬಲಿಯಾಗಿದ್ದಾರೆ. ಹೌದು ಇನ್ನು ಉಗ್ರರ ಗುಂಡಿನ ದಾಳಿಯಲ್ಲಿ ಕರ್ನಾಟಕದ ಶಿವಮೊಗ್ಗ ನಗರದ ನಿವಾಸಿ ಮಂಜುನಾಥ್ ಇದೀಗ ಸಾವನಪ್ಪಿದ್ದಾರೆ. ಇನ್ನೊರ್ವ ಕನ್ನಡಿಗ ಅಭಿಜ್ಞಾ ರಾವ್ ಗೆ ಗಂಭೀರವಾದ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಮಂಜುನಾಥ ಪತ್ನಿ ಪಲ್ಲವಿ ಮತ್ತು ಮಗ ಸುರಕ್ಷಿತವಾಗಿದ್ದಾರೆ. ಶಿವಮೊಗ್ಗದ ವಿಜಯನಗರ ನಿವಾಸಿ ಮೃತ ಮಂಜುನಾಥ್ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದರು ಎಂದು ತಿಳಿದುಬಂದಿದೆ. ಉಗ್ರರ ದಾಳಿಯ ಭಯಾನಕತೆಯನ್ನು ಮೃತ ಮಂಜುನಾಥ್ ಪತ್ನಿ ಪಲ್ಲವಿ ಮಾಧ್ಯಮಗಳೊಂದಿಗೆ ಹಂಚಿಕೊಂಡಿದ್ದು, ನನ್ನ ಕೆಣ್ಣೆದುರಿಗೆ ನನ್ನ ಪತಿ ಮೃತಪಟ್ಟಿದ್ದಾರೆ. ನನಗೊಂದು ಫ್ಲೈಟ್ ಅರೇಂಜ್ ಮಾಡಿ ಕೊಡಿ ಎಂದು ಮೃತ ಮಂಜುನಾಥ್ ಪತ್ನಿ ಪಲ್ಲವಿ…

Read More

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಬಳಿಯ ಬೈಸರನ್ ಕಣಿವೆಯಲ್ಲಿ ರಾಜಸ್ಥಾನದ ಪ್ರವಾಸಿಗರ ಗುಂಪಿನ ಮೇಲೆ ದಾಳಿ ನಡೆಸಲಾಯಿತು. ಕಣಿವೆಯ ಮೇಲ್ಭಾಗದಲ್ಲಿ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪ್ರವಾಸಿಗರು ಸಾವನ್ನಪ್ಪಿದ್ದರೇ, 12 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಇದೇ ಒಂದು ಗುಂಡಿನ ದಾಳಿಯಲ್ಲಿ ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಓರ್ವ ವ್ಯಕ್ತಿ ಬಲಿಯಾಗಿದ್ದಾರೆ. ಹೌದು ಇನ್ನು ಉಗ್ರರ ಗುಂಡಿನ ದಾಳಿಯಲ್ಲಿ ಕರ್ನಾಟಕದ ಶಿವಮೊಗ್ಗ ನಗರದ ನಿವಾಸಿ ಮಂಜುನಾಥ್ ಇದೀಗ ಸಾವನಪ್ಪಿದ್ದಾರೆ. ಇನ್ನೊರ್ವ ಕನ್ನಡಿಗ ಅಭಿಜ್ಞಾ ರಾವ್ ಗೆ ಗಂಭೀರವಾದ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಮಂಜುನಾಥ ಪತ್ನಿ ಪಲ್ಲವಿ ಮತ್ತು ಮಗ ಸುರಕ್ಷಿತವಾಗಿದ್ದಾರೆ. ಶಿವಮೊಗ್ಗದ ವಿಜಯನಗರ ನಿವಾಸಿ ಮೃತ ಮಂಜುನಾಥ್ ಎಂದು ತಿಳಿದುಬಂದಿದೆ. ಕೆಲವು ಸ್ಥಳೀಯ ನಿವಾಸಿಗಳು ಸೇರಿದಂತೆ ನಾಲ್ಕು ಜನರು ಗಾಯಗೊಂಡಿದ್ದಾರೆ ಎಂದು ಇಲ್ಲಿಯವರೆಗೆ ದೃಢಪಡಿಸಲಾಗಿದೆ. ಘಟನೆಯ ಬಗ್ಗೆ ಅಧಿಕಾರಿಗಳಿಗೆ ತಿಳಿಸಲು ಮಹಿಳೆಯೊಬ್ಬರು ಪೊಲೀಸ್ ನಿಯಂತ್ರಣ ಕೊಠಡಿ (PCR) ಗೆ ಕರೆ ಮಾಡಿದ್ದಾರೆ ಎಂದು ವರದಿಯಾಗಿದೆ. ದಾಳಿಯ ನಂತರ, ಭಾಗಿಯಾಗಿರುವ…

Read More

ದಾವಣಗೆರೆ : ದಾವಣಗೆರೆಯಲ್ಲಿ ಭೀಖರವಾದ ಅಗ್ನಿ ದುರಂತ ಸಂಭವಿಸಿದ್ದು, ಜಗಳೂರು ತಾಲೂಕು ಕಛೇರಿಯ ರೆಕಾರ್ಡ್ ರೂಮ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸರ್ಕಾರಿ ಕಚೇರಿಗೆ ಬೆಂಕಿ ಬಿದ್ದು ದಾಖಲೆಗಳೆಲ್ಲ ಸುಟ್ಟು ಭಸ್ಮವಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕು ಕಚೇರಿಯಲ್ಲಿ ಈ ಒಂದು ಘಟನೆ ನಡೆದಿದೆ. ಹೌದು ಬೆಂಕಿ ಹೊತ್ತಿಕೊಂಡು ತಾಲೂಕು ಕಚೇರಿಯ ಎರಡು ರೂಮ್ಗಳಲ್ಲಿದ್ದ ದಾಖಲೆಗಳು ಸುಟ್ಟು ಭಸ್ಮವಾಗಿವೆ. ಕೂಡಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಬೆಂಕಿ ಬಿದ್ದ ಕಚೇರಿಯಲ್ಲಿ ದಾಖಲೆಗಳು ಇರಲಿಲ್ಲ. ರೂಮ್ನಲ್ಲಿ ಕೇವಲ ರದ್ಧಿ ಪೇಪರ್ ಗಳು ಮಾತ್ರ ಇದ್ದವು ಎಂದು ತಹಶೀಲ್ದಾರ್ ಹೇಳಿಕೆ ನೀಡಿದ್ದಾರೆ. ಘಟನೆ ಕುರಿತಂತೆ ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ರಾಮನಗರ : ಜಿಲ್ಲೆಯ ಕನಕಪುರ ತಾಲೂಕಿನ ಸಂಗಮ ಬಳಿ ಖಾಸಗಿ ಬಸ್ ಒಂದರ ಬ್ರೇಕ್ ಫೇಲ್ ಆಗಿ ರಸ್ತೆ ಪಕ್ಕದಲ್ಲಿರುವ ಹಳ್ಳಕ್ಕೆ ಬಿದ್ದಿದೆ. ಪರಿಣಾಮ ಬಸ್ ನಲ್ಲಿದ್ದ ಸುಮಾರು 25ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿರುವ ಘಟನೆ ನಡೆದಿದೆ.ಬೆಂಗಳೂರಿನಿಂದ ಸಂಗಮಕ್ಕೆ ತೆರಳುವಾಗ ಈ ಒಂದು ಅಪಘಾತ ಸಂಭವಿಸಿದೆ. ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸಂಗಮದ ಬಳಿ ಈ ಒಂದು ಘಟನೆ ನಡೆದಿದೆ. ಖಾಸಗಿ ಬಸ್ ಪಲ್ಟಿಯಾಗಿ 25ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ರಸ್ತೆ ತಿರುವಿನಲ್ಲಿ ಬ್ರೇಕ್ ಫೇಲ್ ಆಗಿ ಖಾಸಗಿ ಬಸ್ ಹಳ್ಳಕ್ಕೆ ಉರುಳಿದೆ. ಬ್ರೇಕ್ ಫೇಲ್ ಆಗಿ ರಸ್ತೆ ಪಕ್ಕದ ಹಳ್ಳಕ್ಕೆ ಬಿದ್ದಿದೆ. ಗಾಯಾಳುಗಳನ್ನು ತಕ್ಷಣ ಕನಕಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಕುರಿತಂತೆ ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬಾಗಲಕೋಟೆ : ಬಾಗಲಕೋಟೆಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ಒಂದು ಕಂದಕಕ್ಕೆ ಉರುಳಿ ಬಿದ್ದ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲ್ಲೂಕಿನ ಹಿಪ್ಪರಗಿ ಸೇತುವೆ ಬಳಿ ನಡೆದಿದೆ. ಅಥಣಿಯಿಂದ ಜಮಖಂಡಿಗೆ ಕೆಎಸ್‌ಆರ್‌ಟಿಸಿ ಬಸ್ ಬರುತ್ತಿತ್ತು. ಈ ವೇಳೆ ರಸ್ತೆಯ ಬ್ರೇಕರ್ ದಾಟಿಸುವ ವೇಳೆ ಬಸ್‌ನ ಪಾಟಾ ಮುರಿದಿದ್ದು ಈ ಅಪಘಾತಕ್ಕೆ ಕಾರಣವೆಂದು ತಿಳಿದುಬಂದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸದೇ ಭಾರೀ ಅನಾಹುತವೊಂದು ತಪ್ಪಿದೆ. ಬಸ್‌ನಲ್ಲಿ ಏಳೆಂಟು ಪ್ರಯಾಣಿಕರಿದ್ದು, ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನೆಯ ನಂತರ ಬಸ್‌ನ ಹಿಂಬದಿಯ ಗಾಜು ಒಡೆದು ಸ್ಥಳೀಯರು ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಗಾಯಗೊಂಡ ಪ್ರಯಾಣಿಕರನ್ನು ಜಮಖಂಡಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತು ಜಮಖಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಕೋಟ್ಯಂತರ ಪಡೆದು ಸಾಲ ಪಾವತಿಸದೇ ಸಹಕಾರಿ ಬ್ಯಾಂಕ್ ಗೆ ವಂಚನೆ ಎಸಗಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ರಮೇಶ ಜಾರಕಿಹೊಳಿ ಸೇರಿದಂತೆ ಮೂವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲಾಯಿತು. ಹೌದು ಸಿಐಡಿ ಪೋಲಿಸರಿಂದ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟಿಗೆ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲಾಯಿತು. ಸೌಭಾಗ್ಯಲಕ್ಷ್ಮಿ ಶುಗರ್ಸ ಲಿಮಿಟೆಡ್ ಕಂಪನಿಗೆ ಅಪೇಕ್ಸ್ ಬ್ಯಾಂಕ್ ಸಾಲ ನೀಡಿತ್ತು. 232 ಕೋಟಿ 88 ಲಕ್ಷ ರೂಪಾಯಿ ಸಾಲ ಪಡೆದು ಮರುಪಾವತಿಸದ ಹಿನ್ನೆಲೆಯಲ್ಲಿ ಅಪೇಕ್ಸ್ ಬ್ಯಾಂಕ್ ದೂರಿನ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಬ್ಯಾಂಕಿನ ಪರವಾಗಿ ಸಾಲಕ್ಕೆ ರಮೇಶ್ ಜಾರಕಿಹೊಳಿ ಗ್ಯಾರಂಟರ್ ಆಗಿದ್ದರು. ಪ್ರಕರಣದ ಹಿನ್ನೆಲೆ ಕರ್ನಾಟಕ ಸಹಕಾರ ಬ್ಯಾಂಕ್‌ನಿಂದ ಸೌಭಾಗ್ಯಲಕ್ಷ್ಮೀ ಶುಗರ್ಸ್‌ ಲಿಮಿಟೆಡ್‌ ಪರವಾಗಿ ರಮೇಶ್ ಜಾರಕಿಹೊಳಿ 439 ಕೋಟಿ ಸಾಲ ಪಡೆದಿದ್ದರು. ನಂತರ ಸಾಲ ಪಡೆದ ಸಂದರ್ಭದಲ್ಲಿ ಬ್ಯಾಂಕ್‌ ವಿಧಿಸಿದ್ದ ಷರತ್ತುಗಳನ್ನು ಉಲ್ಲಂಘಿಸಿ ಸೌಭಾಗ್ಯಲಕ್ಷ್ಮೀ ಶುಗರ್ಸ್‌ ಲಿಮಿಟೆಡ್​ನ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಸಂಬಂಧ ಅರ್ಜಿದಾರ ರಮೇಶ್‌ ಜಾರಕಿಹೊಳಿ, ವಸಂತ್‌…

Read More

ಕೊಪ್ಪಳ : ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿಯಲ್ಲಿರುವಂತಹ ಶ್ರೀ ಕೃಷ್ಣದೇವರಾಯ ಸಮಾಧಿಯ ಮೇಲೆ ಮಾಂಸ ಶುದ್ಧೀಕರಣ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಗಂಗಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹೌದು ಮಾಂಸ ಶುದ್ಧೀಕರಣ ಮಾಡಿದ ಮೂವರ ವಿರುದ್ಧ FIR ದಾಖಲಾಗಿದೆ. ಆನೆಗೊಂದಿ ಗ್ರಾಮದ ಹನುಮಂತ ಹಾಗು ಇನ್ನಿಬ್ಬರ ವಿರುದ್ಧ ಕೊಪ್ಪಳ ಜಿಲ್ಲೆಯ ಗಂಗಾವತಿ ಗ್ರಾಮಾಂತರ ಠಾಣೆಯಲ್ಲಿ ಮೂವರ ವಿರುದ್ಧ FIR ದಾಖಲಾಗಿದೆ. ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ತಕ್ಷಣವೇ ಸ್ಪಂದಿಸಿದ್ದು, ಸಂಬಂಧಿಸಿದ ಅಧಿಕಾರಿಗಳಿಗೆ ಪರಿಶೀಲನೆ ನಡೆಸಿ ಕೈಗೊಂಡ ಕ್ರಮಗಳ ಬಗ್ಗೆ ವರದಿ ನೀಡುವಂತೆ ಸೂಚಿಸಿದ್ದರು.ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ, ತಿಳಿವಳಿಕೆ ಇಲ್ಲದೆ ಕೆಲವು ಮಂದಿ ಈ ತಪ್ಪನ್ನು ಎಸಗಿರುವುದು ತಿಳಿದುಬಂದಿದೆ. ಐತಿಹಾಸಿಕ ತಾಣದ ಬಳಿ ಈ ರೀತಿ ಮಾಂಸ ಕಟ್‌ ಮಾಡುವುದು ಅಕ್ಷಮ್ಯ ಅಪರಾಧವಾಗಿದ್ದು, ಅಲ್ಲಿನ ಸ್ಥಳೀಯರಿಗೆ ತಿಳುವಳಿಕೆ ಹೇಳಿ ಎಚ್ಚರಿಕೆ ನೀಡಲಾಗಿದೆ. ಬಳಿಕ ಹಂಪಿ ಸ್ಮಾರಕಗಳ ಬಳಿಯಲ್ಲಿ…

Read More

ವಿಜಯಪುರ : ಕಾಂಗ್ರೆಸ್ ಸರ್ಕಾರಕ್ಕೆ ಹಿಂದೂಗಳ ರಕ್ಷಣೆ ಮಾಡಲು ಆಗುತ್ತಿಲ್ಲ. ಸಿಇಟಿ ಬರೆಯಲು ಬಂದಿದ್ದ ಅಭ್ಯರ್ಥಿಯ ಜನಿವಾರ ತೆಗೆಸಿದರು. ಇದು ಹಿಂದೂ ವಿರೋಧಿ ಸರಕಾರ. ಈ ಸರ್ಕಾರವನ್ನು ಎದುರಿಸುವ ಸಾಮರ್ಥ್ಯ ಬಿಜೆಪಿ ರಾಜ್ಯಾಧ್ಯಕ್ಷನಿಗೆ ಇಲ್ಲ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ವಿಫಲರಾಗಿದ್ದಾರೆ ಎಂದು ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿ ವೈ ವಿಜಯೇಂದ್ರ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದರು. ರಾಜ್ಯ ಬಿಜೆಪಿ ಅಧ್ಯಕ್ಷ ಬದಲಾವಣೆ ಕುರಿತಂತೆ ವಿಜಯಪುರ ನಗರ ಉಚ್ಚಾಟಿತ ಬಿಜೆಪಿ ಶಾಸಕ ಯತ್ನಾಳ್ ಮಾತನಾಡಿ, ಪಕ್ಷದಲ್ಲಿ ಏನು ನಡೆದಿದೆ ಎಂಬುದು ನನಗೆ ಗೊತ್ತಿಲ್ಲ. ನಾನು ಪಕ್ಷದಿಂದ ಉಚ್ಚಾಟನೆಯಾದ ಬಳಿಕ ಯಾರ ಸಂಪರ್ಕದಲ್ಲೂ ಇಲ್ಲ. ಹಳ್ಳಿ ಹಳ್ಳಿಗಳಲ್ಲೂ ನನಗೆ ಉತ್ತಮ ಬೆಂಬಲ ಸಿಗುತ್ತಿದೆ. ಹಿಂದುತ್ವ ಉಳಿಯಲು ನಿರ್ಣಯ ಮಾಡಬೇಕು ಎಂದು ಹೇಳುತ್ತಿದ್ದಾರೆ. ಮೂರು ರಾಜಕೀಯ ಪಕ್ಷಗಳ ಮೇಲೆ ಜನರು ವಿಶ್ವಾಸ ಕಳೆದುಕೊಂಡಿದ್ದಾರೆ. ವಿಜಯದಶಮಿ ವರೆಗೂ ನಾನು ರಾಜ್ಯ ಪ್ರವಾಸ ಮಾಡುತ್ತೇನೆ. ನಾಳೆ ಹಾವೇರಿಯಲ್ಲಿ ಕೆ ಎಸ್ ಈಶ್ವರಪ್ಪ ನಾನು…

Read More

ಬೆಂಗಳೂರು : ಜಾತಿ ಗಣತಿ ವರದಿಯಲ್ಲಿ ಮುಸ್ಲಿಮರ ಸಂಖ್ಯೆ ಹೆಚ್ಚಿದೆ ಎಂದು ಇತ್ತೀಚಿಗೆ ವರದಿ ಬಹಿರಂಗವಾಗಿತ್ತು. ಇನ್ನು ಈ ಒಂದು ವರದಿಯಲ್ಲಿ ಮುಸ್ಲಿಮರು ಹೆಚ್ಚಾಗಿದ್ದಾರೆ ಎಂದು ಲೇಖವಾಗಿದ್ದು ಹಾಗಾದರೆ ಮುಸ್ಲಿಮರು ರಾಜ್ಯದಲ್ಲಿ ಅಲ್ಪಸಂಖ್ಯಾತರು ಹೇಗೆ ಆಗುತ್ತಾರೆ ಎಂದು ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿಟಿ ರವಿ ಅವರು ಪ್ರಶ್ನಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜಾತಿ ಗಣತಿ ವರದಿ ಬಗ್ಗೆ ಸಂಪುಟದ ಸಚಿವರಿಗೆ ಸಮಾಧಾನ ಪಡಿಸಲು ಆಗಿಲ್ಲ. ಜಾತಿಗಣತಿ ವರದಿಯ ಬಗ್ಗೆ ನಿಮ್ಮ ಶಾಸಕರನ್ನು ಒಪ್ಪಿಸಲಾಗಿಲ್ಲ. ಇನ್ನು ರಾಜ್ಯದ ಜನರಿಗೆ ಹೇಗೆ ಒಪ್ಪಿಸುತ್ತೀರಿ? ಮೊದಲು ನಿಮ್ಮ ಸಚಿವರು ಹಾಗೂ ಶಾಸಕರನ್ನು ಜಾತಿಗಣತಿ ವರದಿ ಬಗ್ಗೆ ಸಮಾಧಾನಪಡಿಸಿ. ಸದಸ್ಯ ಕಾರ್ಯದರ್ಶಿಯೇ ಜಾತಿಗಣತಿ ಸಮೀಕ್ಷೆಗೆ ಸಹಿ ಹಾಕಿಲ್ಲ. ಇನ್ನು ಅದಕ್ಕೆ ಹೇಗೆ ಮಾನ್ಯತೆ ಸಿಗುತ್ತದೆ? ಎಂದು ಪ್ರಶ್ನಿಸಿದರು. ಕೆಲ ಸಮುದಾಯಗಳ ಸಂಖ್ಯೆ ಹೆಚ್ಚಾಗಿದೆ. ಇನ್ನು ಕೆಲವರದ್ದು ಕಡಿಮೆ ಆಗಿದೆ. ಇದನ್ನು ಹೇಗೆ ಸರಿಪಡಿಸುತ್ತೀರಿ? ಜಾತಿಗಣತಿ ಸಮೀಕ್ಷೆ ಸರಿಯಾಗಿ ಆಗಿಲ್ಲ. ರಾಜ್ಯದ ನಂಬರ್ ಒನ್ ಜನಸಂಖ್ಯೆ ಮುಸ್ಲಿಂ…

Read More