Author: kannadanewsnow05

ಬೆಂಗಳೂರು : ಕರ್ನಾಟಕದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ ಮೇಲೆ 5 ಪ್ರಮುಖ ಗ್ಯಾರಂಟಿ ಯೋಜನೆ ಜಾರಿ ಮಾಡಿತ್ತು. ಇದರಿಂದ ಕೇಂದ್ರ ಸರ್ಕಾರ ನೀಡಬೇಕಾಗಿದ್ದ ಹೆಚ್ಚುವರಿ ಅಕ್ಕಿಯನ್ನು ಕೊಡುವುದನ್ನು ನಿಲ್ಲಿಸಿತ್ತು. ಆದರೆ ಇದೀಗ ರಾಜ್ಯಕ್ಕೆ ಅಕ್ಕಿ ನೀಡಲು ಕೇಂದ್ರ ಒಪ್ಪಿದೆ. ಇದಕ್ಕೆ ಕಾಂಗ್ರೆಸ್ ಟ್ವೀಟ್ ನಲ್ಲಿ ಇದು ಗ್ಯಾರಂಟಿ ಯೋಜನೆಗಳ ಯಶಸ್ಸಿನ ಪರಿಣಾಮ ಎಂದು ಕುಟುಕಿದೆ. ಹೌದು ಟ್ವೀಟ್ ನಲ್ಲಿ ಕೇಂದ್ರದ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ದಿನದಿಂದಲೂ ಕರ್ನಾಟಕದ ವಿಷಯದಲ್ಲಿ ನಿರಂತರ ಅನ್ಯಾಯ ಎಸಗುತ್ತಲೇ ಇದೆ. ರಾಜ್ಯ ಕಾಂಗ್ರೆಸ್ ಸರ್ಕಾರ ‘ಹಸಿವು ಮುಕ್ತ ಕರ್ನಾಟಕ’ ಗುರಿಯೊಂದಿಗೆ ಜಾರಿಗೆ ತಂದ ‘ಅನ್ನಭಾಗ್ಯ’ ಯೋಜನೆಗೆ ಅಕ್ಕಿಗಾಗಿ ಬೇಡಿಕೆ ಇಟ್ಟಾಗಲೂ, ಕೆ.ಜಿಗೆ ₹32 ಕೊಟ್ಟು ಖರೀದಿಸುದಾಗಿ ಹೇಳಿದರೂ ಅಕ್ಕಿ ದಾಸ್ತಾನಿಲ್ಲ ಎಂಬ ಕುಂಟು ನೆಪ ಹೇಳಿದ ಕೇಂದ್ರ ಸರ್ಕಾರ, 78,000 ಟನ್‌ ಅಕ್ಕಿಯನ್ನು ಎಥೆನಾಲ್‌ ಉತ್ಪಾದನೆಗಾಗಿ ಕೇವಲ ₹20ಕ್ಕೆ ಕೊಡಲು ನಿರ್ಧರಿಸಿತ್ತು‌! ರಾಜ್ಯ ಕಾಂಗ್ರೆಸ್ ಸರ್ಕಾರ ಅನಿವಾರ್ಯವಾಗಿ 5 ಕೆ.ಜಿ ಅಕ್ಕಿಯ ಬದಲಿಗೆ ಹಣ…

Read More

ಬೆಳಗಾವಿ : ಏನು ಅರಿಯದ 4 ವರ್ಷದ ಕಂದಮ್ಮಳಿಗೆ ಮಲತಾಯಿ ಚಿತ್ರಹಿಂಸೆ ನೀಡಿ ಹತ್ಯೆಗೈದಿದ್ದು, ಬಳಿಕ ನನ್ನ ಮಗಳು ಫಿಟ್ಸ್ ಇಂದ ಸಾವನ್ನಪ್ಪಿದ್ದಾಳೆ ಎಂದು ಡ್ರಾಮಾ ಮಾಡಿದ್ದ ಮಲತಾಯಿಯನ್ನು ಇದೀಗ ಬೆಳಗಾವಿಯ APMC ಠಾಣೆ ಪೊಲೀಸರು 8 ತಿಂಗಳ ಬಳಿಕ ಬಂಧಿಸಿದ್ದಾರೆ. ಹೌದು ಕಳೆದ ವರ್ಷ ಮೇ ತಿಂಗಳಲ್ಲಿ ನಡೆದ ಮಗುವಿನ ಕೊಲೆ ಪ್ರಕರಣ ಸಂಬಂಧ ಇಂದು ಸಪ್ನಾ ನಾವಿ ಎಂಬ ಮಹಿಳೆಯನ್ನು ಬಂಧಿಸಲಾಗಿದೆ.ಕಳೆದ 8 ತಿಂಗಳ ಹಿಂದೆ ಅಂದರೆ ಮೇ ತಿಂಗಳಲ್ಲಿ ಸಪ್ನಾ ತನ್ನ 4 ವರ್ಷದ ಮಗಳು ಸಮೃದ್ಧಿಯನ್ನು ಕೊಲೆ ಮಾಡಿ, ಫಿಟ್ಸ್ ನಿಂದ ಸಾವನ್ನಪ್ಪಿದ್ದಾಳೆ ಎಂದು ಹೇಳಿದ್ದಳು.ಆದರೆ ಬಾಲಕಿಯ ಮರಣ್ಣೋತ್ತರ ಪರೀಕ್ಷೆಯಲ್ಲಿ ಮಲತಾಯಿಯ ಘೋರ ಕೃತ್ಯ ಬಯಲಾಗಿದೆ. ಮರಣ್ಣೋತ್ತರ ವರದಿಯಲ್ಲಿ ಏನಿದೆ? ಪ್ರಾಥಮಿಕ ತನಿಖೆಯಲ್ಲಿ, ಮಗುವನ್ನು ಕೊಲ್ಲುವ ಉದ್ದೇಶದಿಂದ ಸಪ್ನಾ ನಿಯಮಿತವಾಗಿ ಕಿರುಕುಳ ನೀಡುತ್ತಿದ್ದಳು ಮತ್ತು ಹೊಡೆಯುತ್ತಿದ್ದಳು ಎಂದು ಬೆಳಕಿಗೆ ಬಂದಿದೆ.ಮಗುವಿನ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಮಗುವು ಆಕೆಯ ಮೇಲೆ ನಡೆದ ಹಲ್ಲೆಯ ಗಾಯಗಳಿಂದ ಸಾವನ್ನಪ್ಪಿದೆ ಎಂದು…

Read More

ಮಂಗಳೂರು : ಪಾರ್ಲರ್ ನಲ್ಲಿ ಅನೈತಿಕ ಚಟುವಟಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಇಂದು ಮಂಗಳೂರಿನ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಇರುವ ಕಲರ್ಸ್ ಪಾರ್ಲರ್ ಮೇಲೆ ರಾಮಸೇನೆ ಕಾರ್ಯಕರ್ತರು ದಾಳಿ ಮಾಡಿ ಪಾರ್ಲರ್ ನಲ್ಲಿದ್ದ ಪೀಠೋಪಕರಣಗಳ ಎಲ್ಲವನ್ನು ದ್ವಂಸಗೊಳಿಸಿದ್ದರು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರಿನ ಬರ್ಕೆ ಠಾಣೆ ಪೋಲೀಸರು 14 ರಾಮಸೇನೆ ಕಾರ್ಯಕರ್ತರನ್ನು ಅರೆಸ್ಟ್ ಮಾಡಿದ್ದು, FIR ಕೂಡ ದಾಖಲಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ರಾಮಸೇನೆ ಮುಖ್ಯ ಪ್ರಸಾದ್ ಅತ್ತಾವರ್, ಕಾರ್ಯಕರ್ತರಾದಂತಹ ಸಚಿನ್, ಹರ್ಷರಾಜ್, ಮೋಹನ್ ದಾಸ್, ಪುರಂದರ, ರವೀಶ್, ಸುಕೇಶ, ಅಂಕಿತ್, ಕಾಳಿಮುತ್ತು, ಅಭಿಲಾಶ್, ದೀಪಕ್, ವಿಜ್ಞೇಶ್, ಶರಣ್ ರಾಜ್ ಹಾಗೂ ಪ್ರದೀಪ್ ಪೂಜಾರಿ ಎಂದು ತಿಳಿದುಬಂದಿದೆ. BNS ಕಾಯ್ದೆ 329(2), 324(5), 74, 351(3), 115 (2) 109, 352, 190ರ ಅಡಿ ಪ್ರಕರಣ ದಾಖಲಾಗಿದೆ. ಮಂಗಳೂರಿನ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದ ಬಿಜೈ ಬಳಿ ಕಲರ್ಸ್ ಪಾರ್ಲರ್ ಮೇಲೆ ರಾಮಸೇನೆ ಕಾರ್ಯಕರ್ತರು ಏಕಾಏಕಿ ದಾಳಿ ಮಾಡಿದರು ಈ ವೇಳೆ…

Read More

ಭಗವಾನ್‌ ವಿಷ್ಣುವಿನ ಈ 10 ಮಂತ್ರಗಳನ್ನು ಯಾರು ನಿಯಮಿತವಾಗಿ ಪಠಿಸುತ್ತಾರೋ ಅವರು ತೊಂದರೆಗಳಿಂದ ಮುಕ್ತಿ ಹೊಂದಿ, ಸಂಪತ್ತು ಮತ್ತು ಅದೃಷ್ಟವನ್ನು ಪಡೆದುಕೊಳ್ಳುತ್ತಾರೆ. ಶ್ರೀಹರಿಯ ಆ 10 ಶಕ್ತಿಶಾಲಿ ಮಂತ್ರಗಳಾವುವು ಗೊತ್ತೇ..? ಗುರು ಮತ್ತು ಗುರುವಾರದ ಅಧಿಪತಿಯನ್ನು ಭಗವಾನ್ ಮಹಾವಿಷ್ಣು ಎಂದು ಹೇಳಲಾಗುತ್ತದೆ. ಗುರುವಾರ ಭಗವಾನ್ ವಿಷ್ಣುವಿಗೆ ಸಮರ್ಪಿತವಾಗಿದೆ. ವ್ಯಕ್ತಿಯ ಜಾತಕದಲ್ಲಿ ಗುರುದೋಷವಿದ್ದರೆ ಗುರುವಾರದಂದು ಶ್ರೀ ಹರಿ ನಾರಾಯಣ ಮತ್ತು ಬೃಹಸ್ಪತಿ ದೇವರನ್ನು ಪೂಜಿಸುವ ಸಂಪ್ರದಾಯ ಮತ್ತು ಪದ್ಧತಿಯಿದೆ. ಈ ದಿನ ಉಪವಾಸ ವ್ರತವನ್ನು ಮಾಡುವುದರಿಂದ ವ್ಯಕ್ತಿಯ ಜೀವನದ ಎಲ್ಲಾ ಸಮಸ್ಯೆಗಳು ದೂರವಾಗುತ್ತವೆ. ಅಲ್ಲದೇ, ಮನೆಯಲ್ಲಿ ಹಣದ ಕೊರತೆ ಕೂಡ ಇರುವುದಿಲ್ಲ. ಈ ದಿನ ಭಗವಾನ್ ವಿಷ್ಣುವಿನ ಪೂಜೆಯ ಜೊತೆಗೆ ಲಕ್ಷ್ಮೀ ದೇವಿಯನ್ನು ಪೂಜಿಸುವುದು ಕೂಡ ಶ್ರೇಯಸ್ಕರವಾಗಿರುತ್ತದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ಸಿಂಗದೂರು ಚೌಡಮ್ಮನವರ ಉಪಾಸಕರು ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ…

Read More

ಬೆಂಗಳೂರು : ಜನವರಿ 24 ರಂದು ರಾಜ್ಯದಲ್ಲಿ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆಯನ್ನ ವಿಶಿಷ್ಟವಾಗಿ ಆಚರಿಸಲು ಆರೋಗ್ಯ ಇಲಾಖೆ ಮುಂದಾಗಿದೆ. ಹೆಣ್ಣುಮಕ್ಕಳ ಲಿಂಗಾನುಪಾತವನ್ನ ಹೆಚ್ವಿಸುವುದರ ಜೊತೆಗೆ ಹೆಣ್ಣುಭ್ರೂಣ ಹತ್ಯೆಯನ್ನ ಹೋಗಲಾಡಿಸಲು ಆರೋಗ್ಯ ಇಲಾಖೆ ಹಲವು ಕಾರ್ಯಕ್ರಮಗಳನ್ನ ಹಾಕಿಕೊಂಡಿದೆ. ಇದೇ ಸಂದರ್ಭದಲ್ಲಿ ರಾಜ್ಯದ ಆಸ್ಪತ್ರೆಗಳಲ್ಲಿ ಜನಿಸುವ ಎಲ್ಲ ಹೆಣ್ಣು ಮಕ್ಕಳಿಗೆ ವಿಶೇಷ ಉಡುಗೊರೆ ನೀಡುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಘೋಷಿಸಿದ್ದಾರೆ. ಈ ಬಾರಿಯ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆಯನ್ನ ರಾಜ್ಯದಾದ್ಯಂತ ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಸಂಭ್ರಮದಿಂದ ಆಚರಿಸಲು ಆರೋಗ್ಯ ಇಲಾಖೆ ಮುಂದಾಗಿದ್ದು, ಆಸ್ಪತ್ರೆಗಳಲ್ಲಿ ಪಿಂಕ್ ಲೈಟಿಂಗ್ ಮಾಡಲು ನಿರ್ಧರಿಸಲಾಗಿದೆ. ಅಲ್ಲದೇ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಜನಿಸುವ ಹೆಣ್ಣುಮಕ್ಕಳಿಗೆ ಸ್ಪೆಷಲ್ ಗಿಫ್ಟ್ ನೀಡುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ. 1000 ರೂ ಬೆಲೆಯ ಮಕ್ಕಳ ಕಿಟ್ಸ್ ಗಳನ್ನ ಜನಿಸಿದ ಹೆಣ್ಣುಮಗುವಿಗೆ ಉಡುಗೊರೆಯಾಗಿ ನೀಡಲು ಆರೋಗ್ಯ ಇಲಾಖೆ ಎಲ್ಲ ಜಿಲ್ಲೆಯ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದೆ.‌ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆಗೆ ಶುಭಕೋರಿರುವ ಆರೋಗ್ಯ ಸಚಿವ ದಿನೇಶ್…

Read More

ಬೆಂಗಳೂರು : ಬಿಗ್ ಬಾಸ್ ಖ್ಯಾತಿಯ ಲಾಯರ್ ಜಗದೀಶ್ ಅವರ ಮೇಲಿನ ಹಲ್ಲೆ ವಿಡಿಯೋ ವೈರಲ್‌ ಆಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಬಹಳ ಚರ್ಚೆಗೆ ಗ್ರಾಸವಾಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ನಾಲ್ಕೈದು ಜನ ಲಾಯರ್ ಜಗದೀಶ್ ಅವರೊಂದಿಗೆ ವಾಗ್ವಾದ ನಡೆಸುತ್ತಿರುವ ದೃಶ್ಯವಿದೆ. ಅಲ್ಲದೇ ಈ ವೇಳೆ ವ್ಯಕ್ತಿಯೊಬ್ಬರು ಜಗದೀಶ್ ಮೇಲೆ ಎರಡು ಏಟು ಹಾಕಿದ್ದಾರೆ. ಹೌದು ಲಾಯರ್ ಜಗದೀಶ್ ಮೇಲೆ ನಾಲ್ಕೈದು ಯುವಕರು ಒಮ್ಮೆಲೇ ಮುಗಿಬಿದ್ದು ಶರ್ಟ್ ಹೇಳಿದು ಎಳೆದಾಡಿ ಹಲ್ಲೆ ನಡೆಸಿರುವ ವಿಡಿಯೋ ಇದೀಗ ವೈರಲ್ ಆಗುತ್ತಿದೆ.ಇತ್ತೀಚೆಗೆ ನಟ ದರ್ಶನ್ ಹಾಗೂ ಅವರ ಅಭಿಮಾನಿಗಳ ವಿರುದ್ಧ ಲಾಯರ್ ಜಗದೀಶ್ ಮಾತನಾಡುತ್ತಿದ್ದರು. ಹಾಗಾಗಿ ದರ್ಶನ್ ಅಭಿಮಾನಿಗಳೇ ಹಲ್ಲೆ ನಡೆಸಿದ್ದಾರೆ ಎಂದು ಕೆಲವರು ಹೇಳುತ್ತಿದ್ದಾರೆ. ಅದೇ ರೀತಿ ವೀಡಿಯೋ ವೈರಲ್ ಆಗುತ್ತಿದೆ. ಸ್ಪಷ್ಟನೆ ನೀಡಿದ ಲಾಯರ್! ಘಟನೆ ಕುರಿತು ಸ್ಪಷ್ಟನೆ ನೀಡಿದ ಜಗದೀಶ್ ಅವರು, ನಮ್ಮ ಕಾಂಪ್ಲೆಕ್ಸ್ ಮುಂದೆ ರಸ್ತೆ ಬ್ಲ್ಯಾಕ್ ಮಾಡಿಕೊಂಡು ಅಣ್ಣಮ್ಮ ದೇವಿ ಕೂರಿಸಿದ್ದಾರೆ. ಅದರ ಬಗ್ಗೆ ಪ್ರಶ್ನಿಸಿದ್ದಕ್ಕೆ 40 ಜನ…

Read More

ಆಂಧ್ರಪ್ರದೇಶ : ಇತ್ತೀಚಿಗೆ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಮಾನಸಿಕವಾಗಿ ಮತ್ತು ಇನ್ನೊಂದು ಮತ್ತೊಂದಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇದೀಗ ಆಂಧ್ರಪ್ರದೇಶದಲ್ಲಿ ಬೆಚ್ಚಿ ಬೆಳಿಸುವಂತಹ ಘಟನೆ ನಡೆದಿದ್ದು ತರಗತಿಯಿಂದ ಹೊರಗಡೆ ಬಂದ ಏಕಾಏಕಿ ವಿದ್ಯಾರ್ಥಿ ಒಬ್ಬ ಕಾಲೇಜಿನ ಮೂರನೇ ಮಾಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಒಂದು ಘಟನೆ ಆಂಧ್ರಪ್ರದೇಶದ ಅಮರಾವತಿ ಜಿಲ್ಲೆಯಲ್ಲಿ ನಡೆದಿದ್ದು, ನಾರಾಯಣ ಕಾಲೇಜಿನಲ್ಲಿ ಪ್ರಥಮ ವರ್ಷ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಯು ಬೆಳಗ್ಗೆ 10 ಗಂಟೆಯ ಸುಮಾರಿಗೆ ತರಗತಿಯ ಮಧ್ಯದಲ್ಲಿ ಏಕಾಏಕಿ ಹೊರಗಡೆ ಬಂದಿದ್ದಾನೆ. ಈ ವೇಳೆ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿದ್ಯಾರ್ಥಿ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗುವ ದೃಶ್ಯದಲ್ಲಿ 1ನೇ ವಿಡಿಯೋದಲ್ಲಿ ವಿದ್ಯಾರ್ಥಿ ತರಗತಿಯಲ್ಲಿ ಶಿಕ್ಷಕರೊಬ್ಬರು ಪಾಠ ಮಾಡುತ್ತಿರುವಾಗಲೇ ಏಕಾಏಕಿ ಹೊರಗಡೆ ಬಂದಿದ್ದಾನೆ. ಬಳಿಕ ಎರಡನೇ ವಿಡಿಯೋದಲ್ಲಿ ಮೂರನೇ ಮಹಡಿಯ ಚಿಕ್ಕದಾದ ಕಾಂಪೌಂಡ್ ಮೇಲೆ ನಿಂತು ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ವಿದ್ಯಾರ್ಥಿ ಜಿಗಿಯುತ್ತಿದ್ದಂತೆ…

Read More

ಬೆಂಗಳೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ಬೇಸತ್ತು ಹಲವು ಜಿಲ್ಲೆಗಳಲ್ಲಿ ಜನರು ಊರನ್ನು ತೊರೆಯುತ್ತಿದ್ದಾರೆ. ಇನ್ನು ಕೆಲವು ಕಡೆಗಳಲ್ಲಿ ಆತ್ಮಹತ್ಯೆ ಕೂಡ ಮಾಡಿಕೊಳ್ಳುತ್ತಿದ್ದಾರೆ. ಇದೀಗ ಈ ಒಂದು ವಿಚಾರವಾಗಿ ಇದೇ ಜನವರಿ 25ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಹೌದು ಈಗಾಗಲೇ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳದಿಂದ ಬೇಸತ್ತು ಹಲವರು ಪ್ರಾಣ ಕಳೆದುಕೊಂಡಿದ್ದಾರೆ.ಅಲ್ಲದೆ ನಿನ್ನೆ ಹಾವೇರಿಯಲ್ಲಿ ಮಹಿಳೆಯರು ವಿನೂತನ ಪ್ರತಿಭಟನೆ ನಡೆಸಿ ಅಂಚೆ ಪೋಸ್ಟ್ ಮೂಲಕ ಮಾಂಗಲ್ಯ ಸರವನ್ನು ಪ್ಯಾಕ್ ಮಾಡಿ ಸಿಎಂ ಸಿದ್ದರಾಮಯ್ಯ ಅವರಿಗೆ ಕಳುಹಿಸಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳಿ ಎಂದು ವಿನೂತನ ಪ್ರತಿಭಟನೆ ಮಾಡಿದ್ದರು. ಇನ್ನು ಕೆಲವರು ಮೈಕ್ರೋ ಫೈನಾನ್ಸ್ ಸಿಬ್ಬಂದಿಗಾಳ ಕಿರುಕುಳ ತಾಳಲಾರದೆ ಸಾಕಷ್ಟು ಜನರು ಆಯಾ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಅಲ್ಲದೇ ಜನರು ಮನೆ, ಊರು ಬಿಟ್ಟು ಹೋಗುತ್ತಿದ್ದರೆ, ಮತ್ತೆ ಕೆಲವರು ಆತ್ಮಹತ್ಯೆ ಮಾಡಿದ್ದಾರೆ. ಸರಣಿ ಆತ್ಮಹತ್ಯೆ ಬಳಿಕ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ,…

Read More

ಮಂಗಳೂರು : ಇತ್ತೀಚಿಗೆ ಮಂಗಳೂರಿನ ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಮಂಗಳೂರಿನ 4ನೇ JMFC ನ್ಯಾಯಾಲಯಕ್ಕೆ ಪೊಲೀಸರು ಬಂಧಿತ ಆರೋಪಿಗಳನ್ನು ಹಾಜರುಪಡಿಸಿದ್ದರು.ಇದೀಗ ವಿಚಾರಣೆಯ ಬಳಿಕ ನ್ಯಾಯಾಧೀಶರು ಆರೋಪಿಗಳನ್ನು 14 ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ. ಉಳ್ಳಾಲ ಪೊಲೀಸರಿಂದ ಆರೋಪಿಗಳಾದ ಮುರುಗನ್ ದೇವರ್ ಹಾಗೂ ರಾಜೇಂದ್ರನ್ ನನ್ನು ಸಿಸಿಬಿ ಪೊಲೀಸರ ತಂಡದೊಂದಿಗೆ ಜಿಲ್ಲಾ 4ನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ವೇಳೆ ವಿಚಾರಣೆ ನಡೆಸಿದ ನ್ಯಾಯಾಧೀಶರು ಇಬ್ಬರು ಆರೋಪಿಗಳನ್ನು 14 ದಿನ ಅಂದರೆ ಫೆಬ್ರವರಿ 3ನೇ ತಾರೀಖಿನವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದರು. ಪ್ರಕರಣ ಹಿನ್ನೆಲೆ? ಜ.17ರಂದು ಉಳ್ಳಾಲ ತಾ|ನ ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ಕೆ.ಸಿ.ರೋಡ್‌ ಶಾಖೆಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೊಲೀಸರು ಮೂವರು ಆರೋಪಿಗಳನ್ನು ತಮಿಳು ನಾಡಿನ ತಿರುನಲ್ವೇಲಿಯಲ್ಲಿ ಬಂಧಿಸಿದ್ದರು ಅಲ್ಲದೆ ಈ ಪ್ರಕರಣಕ್ಕೆ ಸಂಬಂಧಿಸಿ ಇನ್ನೂ ಹಲವರು ತಲೆಮರೆಸಿಕೊಂಡಿದ್ದು ಅವರ ಬಂಧನಕ್ಕೆ ಪೊಲೀಸರ ತಂಡ ಕಾರ್ಯಾಚರಣೆ ನಡೆಸುತ್ತಿದ್ದೆ.

Read More

ಮಂಗಳೂರು : ಮಸಾಜ್ ಪಾರ್ಲರ್ ನಲ್ಲಿ ಅನೈತಿಕ ಚಟುವಟಿಕೆ ನಡೆಸಿದ್ದಾರೆ ಎಂದು ಆರೋಪಿಸಿ ಇಂದು ಬೆಳಿಗ್ಗೆ ಮಂಗಳೂರಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಇರುವ ಬಿಜೈ ಬಳಿ ಇರುವ ಕಲರ್ಸ್ ಮಸಾಜ್ ಪಾರ್ಲರ್ ಮೇಲೆ ರಾಮಸೇನೆಯ ಕಾರ್ಯಕರ್ತರು ದಾಳಿ ನಡೆಸಿ ಪೀಠೋಪಕರಣಗಳು ಒಡೆದು ಹಾಕಿದ ಘಟನೆ ನಡೆದಿತ್ತು. ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ರಾಮ ಸೇನೆಯ 9 ಜನ ಕಾರ್ಯಕರ್ತರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೌದು ಮಸಾಜ್ ಪಾರ್ಲರ್ ಮೇಲೆ ರಾಮ ಸೇನೆ ಕಾರ್ಯಕರ್ತರು ದಾಳಿ ನಡೆಸಿ ಪರರ ನಲ್ಲಿದ್ದ ಗಾಜು ಪುಡಿ ಪುಡಿ ಮಾಡಿದ್ದರು. ಇದೀಗ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಮ ಸೇನೆಯ 9ಕ್ಕೂ ಹೆಚ್ಚು ಕಾರ್ಯಕರ್ತರು ಅರೆಸ್ಟ್ ಆಗಿದ್ದಾರೆ. ಪ್ರಸಾದ್ ಅತ್ತಾವರ್ ನೇತೃತ್ವದ ರಾಮ ಸೇನೆ ಸಂಘಟನೆಯ ಕಾರ್ಯಕರ್ತರನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ.ಇದು ಮೊದಲು ರಾಮಸೇನೆ ಸಂಸ್ಥಾಪಕ ಪ್ರಸಾದ ಅವಅತ್ತಾವರ್ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Read More