Author: kannadanewsnow05

ದಾವಣಗೆರೆ : ಕಳೆದ ಕೆಲವು ದಿನಗಳ ಹಿಂದೆ ಶಿವಕುಮಾರಸ್ವಾಮಿ ಬಡಾವಣೆಯಲ್ಲಿರುವ ಶ್ರೀ ಮಂಜುನಾಥಸ್ವಾಮಿ ಪರಿಶಿಷ್ಠ ವರ್ಗಗಳ ವಸತಿಯುತ ಪ್ರಾಥಮಿಕ ಶಾಲೆಯ ಮೇಲ್ಭಾಗದಲ್ಲಿರುವ ಬಾಯ್ಲರ್ ಕುಸಿದು ಬಿದ್ದು ಬಾಲಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಮುಖ್ಯೋಪಾಧ್ಯಾಯ ಹಾಗೂ ವಾರ್ಡನ್ ನನ್ನು ಕೆಟಿಜೆ ನಗರ ಪೊಲೀಸರು ಬಂಧಿಸಿದ್ದಾರೆ. ಮಂಜುನಾಥಸ್ವಾಮಿ ಪರಿಶಿಷ್ಠ ವರ್ಗಗಳ ವಸತಿಯುತ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಮಂಜುನಾಥ ಸ್ವಾಮಿ, ವಾರ್ಡನ್ ಬಂಧಿಸಲಾಗಿದೆ.ಹರಿಹರ ತಾಲೂಕಿನ ಜಿಗಳಿ ಗ್ರಾಮದ ರಾಮಪ್ಪ ಅವರು ಕೆಟಿಜೆ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. 11 ವರ್ಷದ ಮಗನನ್ನು ದಾವಣಗೆರೆಯ ಶಿವಕುಮಾರಸ್ವಾಮಿ ಬಡಾವಣೆಯಲ್ಲಿರುವ ಶ್ರೀ ಮಂಜುನಾಥಸ್ವಾಮಿ ಪರಿಶಿಷ್ಠ ವರ್ಗಗಳ ವಸತಿಯುತ ಪ್ರಾಥಮಿಕ ಶಾಲೆಯಲ್ಲಿ 5ನೇ ತರಗತಿ ವಿಧ್ಯಾಭ್ಯಾಸ ಮಾಡುತ್ತಿದ್ದ. ವಸತಿ ನಿಲಯದಲ್ಲಿ ಬಾಲಕ ರಂಗನಾಥ್ ಮೇಲೆ ಬಾಯ್ಲರ್ ಬಿದ್ದು ಸಾವನ್ನಪ್ಪಿದ್ದ. ಬಾಯ್ಲರ್‌ಗೆ ವಾರ್ಡನ್ ಕಟ್ಟಿಗೆ ಹಾಕಿ ಬರಲು ಬಾಲಕನಿಗೆ ಹೇಳಿದ್ದರು. ಕಟ್ಟಿಗೆ ಹಾಕಲು ತೆರಳಿದ್ದಾಗ ಈ ಅವಘಡ ನಡೆದಿತ್ತು.ಅವಘಡ ನಡೆದಾಗ ಸರಿಯಾದ ಸಮಯಕ್ಕೆ ಚಿಕಿತ್ಸೆ ಕೊಡಿಸದೇ ಬಾಲಕ ಸಾವನ್ನಪ್ಪಿದ್ದಾನೆ ಎಂದು…

Read More

ದಾವಣಗೆರೆ : ನಾನು ಕಳೆದ ನಾಲ್ಕು ವರ್ಷದಿಂದ ನಾನು ಖಾಲಿ ಇದ್ದೇನೆ ಎಂದು ಮೂರು ಬಾರಿ ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್ ಪರೋಕ್ಷವಾಗಿ ಸರ್ಕಾರದ ವಿರುದ್ಧ ಬೇಸರ ಹೊರಹಾಕಿದರು. ಇಂದು ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ಗ್ರಾಮದಲ್ಲಿ ವಾಲ್ಮೀಕಿ ಜಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಾನು ಕಳೆದ ನಾಲ್ಕು ವರ್ಷಗಳಿಂದ ಖಾಲಿ ಇದ್ದೇನೆ ಎಂದು ಅಗ್ನಿಶಾಮಕ ದಳ ಹಾಗೂ ತುರ್ತು ಸೇವೆಗಳ ಡಿಐಜಿಪಿ ರವಿ ಡಿ.ನಾಲ್ಕು ವರ್ಷಗಳಿಂದ ನಾನು ಖಾಲಿ ಇದ್ದೇನೆ ಎಂದು ಬೇಸರ ಹೊರಹಾಕಿದ್ದಾರೆ ರಾಜನಹಳ್ಳಿ ವಾಲ್ಮೀಕಿ ಜಾತ್ರೆಯಲ್ಲಿ ರವಿ ಡಿ ಚನ್ನಣ್ಣನವರ್ ಭಾಷಣದಲ್ಲಿ ಈ ಮಾತು ಹೇಳಿದ್ದು ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಜಾತ್ರೆ ನಡೆಯುತ್ತಿದೆ ಪರೋಕ್ಷವಾಗಿ ಸರ್ಕಾರದ ವಿರುದ್ಧ ರವಿ ಡಿ ಚೆನ್ನಣ್ಣನವರ್ ಬೇಸರ ವ್ಯಕ್ತಪಡಿಸಿದ್ದಾರೆ. ಬಳಿಕ ಸಂಸದ ವಿ ಸೋಮಣ್ಣ ರವಿ ಡಿ ಚೆನ್ನಣ್ಣವರಿಗೆ ತಮ್ಮ ಭಾಷಣದಲ್ಲಿ ಸಮಾಧಾನ ಪಡಿಸಿದರು. ಬಿಜೆಪಿ ಸರ್ಕಾರದಲ್ಲಿ ರವಿ ಚನ್ನಣ್ಣನವರನ್ನು ಚೆನ್ನಾಗಿ ನಡೆಸಿಕೊಂಡಿದ್ದೇವೆ. ಬಿಜೆಪಿ ಅಧಿಕಾರದಲ್ಲಿದ್ದಾಗ…

Read More

ಕಲಬುರ್ಗಿ : ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿ ನಷ್ಟ ಅನುಭವಿಸಿದ ಕಾಲೇಜು ಉಪನ್ಯಾಸಕನೊಬ್ಬ ಲಾಡ್ಜ್‌ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಶೋಕ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಉಪನ್ಯಾಸಕನನ್ನು ಚಿಂಚೋಳಿ ತಾಲೂಕಿನ ಲಿಂಗದಳ್ಳಿ ಗ್ರಾಮ ನಿವಾಸಿ ವೀರಶೆಟ್ಟಿ (43) ಎಂದು ತಿಳಿದುಬಂದಿದೆ. ಮೃತ ವೀರಶೆಟ್ಟಿ ಬೀದರ್ ಜಿಲ್ಲೆಯ ಬಸವಕಲ್ಯಾಣದ ತಾಲೂಕಿನಲ್ಲಿ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಷೇರು ಮಾರುಕಟ್ಟೆಯಲ್ಲಿ ಹಣಹೂಡಿಕೆ ಮಾಡಿ ನಷ್ಟ ಅನುಭವಿಸಿರುವುದಾಗಿ ಡೆತ್ ನೋಟ್‌ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸ್ ಮೂಲಗಳ ತಿಳಿಸಿವೆ.ಈ ಕುರಿತು ಅಶೋಕ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಶಿವಮೊಗ್ಗ : ಫೆಬ್ರವರಿ 08 : ಕರ್ನಾಟಕ ವಾರ್ತೆ ; ತರಬೇತಿ ನೀಡುವ ವೇಳೆ ತಮ್ಮದೇ ಪ್ಯಾರಾಚೂಟ್ ಸರಿಯಾದ ಸಮಯಕ್ಕೆ ತೆರೆದುಕೊಳ್ಳದ ಪರಿಣಾಮ ಜಿಲ್ಲೆಯ ಹೊಸನಗರ ಮೂಲದ ಮಂಜುನಾಥ್(36) ಭಾರತೀಯ ವಾಯುಸೇವೆಯ ತರಬೇತುದಾರ ನೆಲೆಕ್ಕೆ ಅಪ್ಪಳಿಸಿ ಸ್ಥಳದಲ್ಲೆ ಸಾವಿಗೀಡಾಗಿರುವ ದಾರುಣ ಘಟನೆ ಉತ್ತರ ಪ್ರದೇಶದ ಆಗ್ರ ವಾಯುಸೇನ ಪಿಟಿಎಸ್ ತರಬೇತಿ ಕೇಂದ್ರದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ. ಮೃತರು ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಜೇನಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಂಕೂರು ಸಮೀಪದ ಗೋರನಗದ್ದೆ ವಾಸಿ ಜಿ.ಎಸ್ ಮಂಜುನಾಥ್ (36) ಬಿನ್ ಜಿ.ಎಂ. ಸುರೇಶ್ ಎಂದು ತಿಳಿದುಬಂದಿದೆ.ಮೃತರು, 2023ರಲ್ಲಿ ಭಾರತೀಯ ವಾಯುಸೇನೆಗೆ ಜ್ಯೂನಿಯರ್ ವಾರೆಂಟ್ ಅಧಿಕಾರಿಯಾಗಿ ಸೇವೆಗೆ ಸೇರ್ಪಡೆಗೊಂಡಿದ್ದು, ನಂತರ, ಜಮ್ಮು-ಕಾಶ್ಮೀರ್, ಅಸ್ಸಾಂ, ಗಾಜೀಯಬಾದ್, ದೆಹಲಿಯಲ್ಲಿ ಸೇವೆ ಸಲ್ಲಿಸಿದ ಬಳಿಕ ಕಳೆದ ಒಂದುವರೆ ತಿಂಗಳಿನಿಂದ ಉತ್ತರ ಪ್ರದೇಶದ ಆಗ್ರದ ಭಾರತೀಯ ವಾಯುಸೇನೆಯ ಪ್ಯಾರ ಜೆಂಪ್ ಜ್ಯೂನಿಯರ್ ವಾರೆಂಟ್ ಅಧಿಕಾರಿಯಾಗಿ ಕರ್ತವ್ಯ ನಿರತರಾಗಿದ್ದರು. ಮೂಲತಃ ಕೃಷಿ ಕುಟುಂಬಕ್ಕೆ ಸೇರಿದ ಮಂಜುನಾಥ್ ಇವರು 2019ರಲ್ಲಿ ಅಸ್ಸಾಂ…

Read More

ಬೆಂಗಳೂರು : ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕಿಂಗ್ ನ್ಯೂಸ್ ಸಿಕ್ಕಿದೆ. ಬೆಂಗಳೂರು ಮೆಟ್ರೊ ದರ 46% ವರೆಗೂ ಏರಿಕೆಯಾಗಲಿದ್ದು, ಭಾನುವಾರದಿಂದಲೇ ಅಧಿಕೃತವಾಗಿ ಜಾರಿಯಾಗುವ ಸಾಧ್ಯತೆಯಿದೆ. ಹೌದು ಈಗಾಗಲೇ ಬಸ್ ಟಿಕೆಟ್ ದರ ಏರಿಕೆ ಮಾಡಿರುವ ಸರ್ಕಾರ ಇದೀಗ ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಬಿಗ್ ಶಾಕ್ ನೀಡಿದೆ. ನಾಳೆಯಿಂದಲೇ ಟಿಕೆಟ್ ದರ ಏರಿಕೆ ಮಾಡಿ ಬಿಎಂಆರ್‌ಸಿಎಲ್ ಅಧಿಕೃತ ಆದೇಶ ಹೊರಡಿಸಿದೆ. ಗರಿಷ್ಠ 90 ರೂ., ಕನಿಷ್ಠ 10 ರೂ. ಏರಿಕೆಯಾಗಲಿದೆಂದು ಮೆಟ್ರೋ ಹಿರಿಯ ಅಧಿಕಾರಿಗಳಿಂದ ಇದೀಗ ಮಾಹಿತಿ ತಿಳಿದು ಬಂದಿದೆ ನಾಳೆ ಬೆಳಿಗ್ಗೆ 7:00ಯಿಂದಲೇ ಪರಿಷ್ಕೃತ ಜಾರಿಯಾಗುವ ಸಾಧ್ಯತೆ ಇದೆ. ಕಳೆದ 8 ವರ್ಷದಿಂದ ಮೆಟ್ರೋ ಪ್ರಯಾಣ ದರ ಏರಿಕೆ ಆಗಿರಲಿಲ್ಲ. ಮೆಟ್ರೋ ಪ್ರಯಾಣ ದರ ಪರಿಷ್ಕರಣೆ ಸಂಬಂಧ ರಚಿಸಿದ್ದ ಸಮಿತಿ ಸಿಂಗಾಪುರ, ಹಾಂಕಾಂಗ್, ದೆಹಲಿಗೆ ತೆರಳಿ ಅಲ್ಲಿನ ಮೆಟ್ರೋ ದರ ಪರಿಷ್ಕರಣೆ ಕ್ರಮ, ದರ ಹೆಚ್ಚಳವನ್ನು ಅಧ್ಯಯನ ಮಾಡಿ ದರ ಪರಿಷ್ಕರಣೆ ವರದಿ ಸಿದ್ಧಪಡಿಸಿದೆ. 0.2 ಕಿಲೋಮೀಟರ್ ಪ್ರಯಾಣಕ್ಕೆ 10…

Read More

ಧಾರವಾಡ : ಧಾರವಾಡದಲ್ಲಿ ಹಾಡಹಗಲೇ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ಮನೆಗೆ ನುಗ್ಗಿದ ಖದೀಮರು ವೃದ್ದೆಗೆ ಥಳಿಸಿ ಚಿನ್ನಾಭರಣ, ನಗದು ಹಣ ಕದ್ದು ಪರಾರಿಯಾಗಿರುವ ಘಟನೆ ಮಾಳಮಡ್ಡಿ ಬಡಾವಣೆಯ ಕಬ್ಬೂರ ರಸ್ತೆಯಲ್ಲಿ ಒಂದು ಘಟನೆ ನಡೆದಿದೆ. ಮನೆಯಲ್ಲಿದ್ದ ವೃದ್ದೆ ವಿನೋದಿನಿಗೆ ಥಳಿಸಿ ಪರಾರಿಯಾಗಿದ್ದಾರೆ. ಮಾಂಗಲ್ಯ ಸರ, 25,000 ನಗದು ದೋಚಿದ ಕಳ್ಳರು ಮನೆಯ ಸಿಸಿ ಕ್ಯಾಮೆರಾ, ಡಿವಿಆರ್ ಸಹ ದೋಚಿಕೊಂಡು ಪರಾರಿಯಾಗಿದ್ದಾರೆ. ಹಲ್ಲೆಗೆ ಒಳಗಾದ ವೃದ್ದೆ ವಿನೋದಿನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಡಿಸಿಪಿ ಮಹಾಲಿಂಗ ನಂದಗಾವಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.ಧಾರವಾಡ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ರಾಯಚೂರು : ರಾಯಚೂರು ಜಿಲ್ಲೆಯ ಲಿಂಗಸೂಗೂರಿನಲ್ಲಿ ಎರಡು ಬೈಕುಗಳ ನಡುವೆ ಬೀಕರ ಅಪಘಾತ ಸಂಭವಿಸಿದ್ದು, ಗಂಭೀರವಾಗಿ ಗಾಯಗೊಂಡು ಒದ್ದಾಡುತ್ತಿದ್ದರು. ಆದರೆ ಅಂಬುಲೆನ್ಸ್ ಸಿಬ್ಬಂದಿ ಬರದ ಹಿನ್ನೆಲೆಯಲ್ಲಿ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸುಗೂರಿನ ಬೈಪಾಸ್ ರಸ್ತೆಯಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಈ ವೇಳೆ ಗಂಭೀರವಾಗಿ ಗಾಯಕೊಂಡು ಇಬ್ಬರು ಬೈಕ್ ಸವಾರರು ರಸ್ತೆಯಲ್ಲಿ ನರಳಾಡಿದ್ದಾರೆ. ಈ ವೇಳೆ ಘಟನೆ ನಡೆದ ಒಂದುವರೆ ಗಂಟೆ ಬಳಿಕ ಆಂಬುಲೆನ್ಸ್ ಸ್ಥಳಕ್ಕೆ ಬಂದಿದೆ ಸದ್ಯ ಇಬ್ಬರು ಗಾಯಗಳು ಲಿಂಗಸುಗೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಲಿಂಗಸುಗೂರು ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ

Read More

ಬೆಳಗಾವಿ : ತನ್ನ ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗುತ್ತಾನೆ ಎಂದು ಪ್ರಿಯಕರನ ಜೊತೆ ಸೇರಿ ಪತಿಯನ್ನು ಕಲ್ಲಿನಿಂದ ಜಜ್ಜಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬಾವನಸವದತ್ತಿ ಎಂಬ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಬಸ್ತವಾಡ ಗ್ರಾಮದ ನಿವಾಸಿ ಮಹೇಂದ್ರ ಓಲೆಕಾರ್ (45) ಕೊಲೆಯಾದ ವ್ಯಕ್ತಿ ಎಂದು ತಿಳಿದು ಬಂದಿದೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಬಾವನಸೌದತ್ತಿಯಲ್ಲಿ ಈ ಒಂದು ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಪತ್ನಿ ಸಿದ್ದವ್ವ ಮತ್ತು ಗಣಪತಿ ಕಾಂಬಳೆಯನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಜನವರಿ 5ರಂದು ಸೌಗಂಧದೇವಿ ದರ್ಶನಕ್ಕೆ ಪತ್ನಿ ಪತಿಯನ್ನು ಕರೆದುಕೊಂಡು ಹೋಗಿದ್ದಾಳೆ.ಈ ವೇಳೆ ಕೃಷ್ಣಾ ನದಿ ದಂಡೆಯ ಮೇಲೆ ಸ್ನಾನ ಮಾಡುವಾಗ ಪತಿಯನ್ನು ಹತ್ಯೆಗಯ್ಯಲಾಗಿದೆ. ಕಲ್ಲಿನಿಂದ ಜಜ್ಜಿ ಪತ್ನಿ ಸಿದ್ದವ್ವ ಹಾಗೂ ಗಣಪತಿಯಿಂದ ಕೊಲೆ ಮಾಡಲಾಗಿದೆ. ಬಳಿಕ ಶವವನ್ನು ಕೃಷ್ಣಾ ನದಿಗೆ ಎಸೆದು ಆರೋಪಿಗಳು ಪರಾರಿಯಾಗಿದ್ದರು. ಬಳಿಕ ಕೊಲೆ ಕೇಸ್ ದಾಖಲಿಸಿದ್ದ ರಾಯಭಾಗ ಪೊಲೀಸರು ತನಿಖೆ ಬೆಳೆ ಹೆಂಡತಿ…

Read More

ಗದಗ : ಗದಗದಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಟಿಪ್ಪರ್ ಹರಿದು 6 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ನಡೆದಿದೆ. ಗದಗ ತಾಲೂಕಿನ ಹರ್ತಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹರ್ತಿ ಗ್ರಾಮದ ಬಸ್ ನಿಲ್ದಾಣದ ಮುಂದೆ ಈ ದುರ್ಘಟನೆ ನಡೆದಿದ್ದು, ಮೃತ ಬಾಲಕನನ್ನು ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ಹಿಂಡಸಗೇರಿ ಗ್ರಾಮದ ಬಾಲಕ ಪ್ರೀತಂ ಹರಿಚನ ಅನ್ನೋ ಬಾಲಕ ಸಾವನ್ನಪ್ಪಿದ್ದಾನೆ.ಈತ ಗದಗ ಜಿಲ್ಲೆಯ ಯತ್ನಳ್ಳಿಗೆ ಆಗಮಿಸಿದ್ದ. ಈ ವೇಳೆ ಬಸ್ ನಿಲ್ದಾಣದ ಬಳಿ ವೇಗವಾಗಿ ಬಂದಿದ್ದ ಟಿಪ್ಪರ್ ಡಿಕ್ಕಿ ಹೊಡೆದು ಬಾಲಕ ಮೃತಪಟ್ಟಿದ್ದಾನೆ. ಹರ್ತಿ ಗ್ರಾಮಸ್ಥರು ಗದಗ- ಲಕ್ಷ್ಮೇಶ್ವರ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ಟೈರ್‌ಗೆ ಬೆಂಕಿ ಹಚ್ಚಿ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದು, RTO ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.ಘಟನೆ ಕುರಿರು ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಕ್ಯಾಸಿನೋದಲ್ಲಿ ಹೂಡಿಕೆ ಮಾಡಿಸಿ ಲಾಭದ ಆಸೆ ತೋರಿಸಿ ವಂಚನೆ ಎಸಗಿದ್ದು, ಬೆಂಗಳೂರಿನ ಉದ್ಯಮಿ ವಿವೇಕ್ ಹೆಗ್ಡೆಗೆ 25.5 ಕೋಟಿ ರೂಪಾಯಿ ವಂಚಿಸಲಾಗಿದೆ. ಸ್ಯಾಂಡಲ್ ವುಡ್ ಡ್ರಗ್ ಕೇಸ್ ಆರೋಪಿ ರಾಹುಲ್ ತೊನ್ಸೆಯಿಂದ ವಂಚನೆ ಎಸಗಿದ್ದು ಪ್ರಕರಣ ಕುರಿತು ಐವರ ವಿರುದ್ಧ FIR ದಾಖಲಾಗಿದೆ. ಹೌದು ಆರೋಪಿ ರಾಹುಲ್ ತೊನ್ಸೆ ಅಪ್ಪ ರಾಮಕೃಷ್ಣ ರಾವ್ ತಾಯಿ ರಾಜೇಶ್ವರಿ ಸೇರಿ ಐವರ ವಿರುದ್ಧ FIR ದಾಖಲಾಗಿದೆ. ಬೆಂಗಳೂರಿನ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. Lಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ತೊನ್ಸೆ ಅಪ್ಪ A1 ಆರೋಪಿ ರಾಮಕೃಷ್ಣ ರಾವ್ ನನ್ನು ಪೋಲೀಸರು ಅರೆಸ್ಟ್ ಮಾಡಿದ್ದಾರೆ. ಈ ಹಿಂದೆ ಇಂದಿರಾನಗರದಲ್ಲಿ ತೊನ್ಸೇ ವಿರುದ್ಧ ಸಂಜನಾ ದೂರು ನೀಡಿದ್ದರು. ಹೂಡಿಕೆ ನೆನಪದಲ್ಲಿ ವಂಚನೆ ಮಾಡಿದ್ದಾನೆ ಎಂದು ಸಂಜನಾ ದೂರು ನೀಡಿದ್ದರು. ಈಗ ವಿವೇಕ್ ಹೆಗಡೆ ಮತ್ತು ಅವರ ಸ್ನೇಹಿತರಿಗೆ 25.5 ಕೋಟಿ ವಂಚನೆ ಎಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.ಕ್ಯಾಸಿನೊದಲ್ಲಿ ಹೂಡಿಕೆ ಮಾಡುವುದಾಗಿ ನಂಬಿಸಿ ಕೋಟ್ಯಾಂತರ…

Read More