Author: kannadanewsnow05

ಕೊಲ್ಹಾಪುರ : ನಿನ್ನೆ ಮಹಾರಾಷ್ಟ್ರದ ವಿಧಾನಸಭೆಯ ಚುನಾವಣೆಯಲ್ಲಿ NDA ಭರ್ಜರಿ ಗೆಲುವು ದಾಖಲಿಸಿ, ಅತ್ಯಧಿಕ ಸ್ಥಾನಗಳನ್ನು ಪಡೆಯುವ ಮೂಲಕ ದಾಖಲೆ ಸೃಷ್ಟಿಸಿದೆ. ಇತ್ತ ಕೊಲ್ಹಾಪುರ ಜಿಲ್ಲೆಯಲ್ಲಿ ವಿಜಯೋತ್ಸವ ಆಚರಿಸುವ ವೇಳೆ ಅಗ್ನಿ ಅವಘಡ ಸಂಭವಿಸಿದ್ದು ನೂತನ ಶಾಸಕ ಸೇರಿದಂತೆ ಹಲವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ. ಹೌದು ಆರತಿ ಮಾಡುವ ವೇಳೆ ಬೆಂಕಿ ಹೊತ್ತಿಕೊಂಡು ಹಲವರಿಗೆ ಗಾಯವಾಗಿದೆ. ಕೊಲ್ಹಾಪುರ ಜಿಲ್ಲೆಯ ಚಂದಗಢ ಕ್ಷೇತ್ರದ ಮಹಾಗಾಂವದಲ್ಲಿ ಈ ಒಂದು ಘಟನೆ ನಡೆದಿದೆ. ನೂತನ ಶಾಸಕ ಶಿವಾಜಿ ಪಾಟೀಲ್ ವಿಜಯೋತ್ಸವದಲ್ಲಿ ಅಗ್ನಿ ದುರಂತ ಸಂಭವಿಸಿದೆ. ಚಂದಗಡ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಶಿವಾಜಿ ಪಾಟೀಲ್ ಗೆಲುವು ಸಾಧಿಸಿದ್ದರು. ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ವಿಜಯೋತ್ಸವ ಆಚರಣೆ ಮಾಡುತ್ತಿದ್ದರು.ಈ ಸಂದರ್ಭದಲ್ಲಿ ಆರತಿಯಿಂದ ಬೆಂಕಿ ಹೊತ್ತಿಕೊಂಡು ಭೀಕರವಾದ ಅಗ್ನಿ ದುರಂತ ಸಂಭವಿಸಿದೆ. ಘಟನೆಯಲ್ಲಿ ನಾಲ್ವರು ಮಹಿಳೆಯರಿಗೆ ಗಂಭೀರವಾದ ಗಾಯಗಳಾಗಿವೆ. ಅಲ್ಲದೇ ನೂತನ ಶಾಸಕ ಸೇರಿದಂತೆ ಹಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

Read More

ಬೆಳಗಾವಿ : ರಜೆಗೆ ಎಂದು ಊರಿಗೆ ಆಗಮಿಸಿದ್ದ ಯೋಧನೊಬ್ಬ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ದೇವಗಾಂವ ಎಂಬ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ದೇವಗಾಂವ ಗ್ರಾಮದಲ್ಲಿ ಕೆರೆಗೆ ಹಾರಿ ಯೋಧ ನರೇಶ್ ಅಗಸರ (28) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ 4 ವರ್ಷಗಳಿಂದ ಭಾರೀತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. 20 ದಿನಗಳ ಹಿಂದೆ ನರೇಶ್ ರಜೆಯ ಮೇಲೆ ಊರಿಗೆ ಬಂದಿದ್ದರು. ಇಂದು ಮತ್ತೆ ಕರ್ತವ್ಯಕ್ಕೆ ಯೋಧ ನರೇಶ್ ತರಳಬೇಕಾಗಿತ್ತು. ಆದರೆ ಕರ್ತವ್ಯಕ್ಕೆ ತರಳದೆ ಕೆರೆಯಲ್ಲಿ ಹರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಘಟನಾ ಸ್ಥಳದಲ್ಲಿ ಅಗ್ನಿಶಾಮಕ ಸಿಬ್ಬಂದಿಯಿಂದ ಇದೀಗ ಯೋಧ ನರೇಶ್ ಮೃತದೇಹಕ್ಕಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಆತ್ಮಹತ್ಯೆ ಕುರಿತು ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ನಿನ್ನೆ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ದಾಖಲಿಸಿದ್ದು ಬಿಜೆಪಿ ಸೋಲು ಅನುಭವಿಸಿದೆ. ಈ ಒಂದು ಸೋಲಿನ ವಿಚಾರವಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಜಿ ಸಿಎಂ ಪಿಎಸ್ ಯಡಿಯೂರಪ್ಪ ಹಾಗೂ ಬಿ ವೈ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದೀಗ ಯತ್ನಾಳ್ ವಿರುದ್ಧ ಕಿಡಿ ಕಾರಿದ ಬಿವೈ ವಿಜಯೇಂದ್ರ  ಹಗುರವಾಗಿ ಮಾತನಾಡಿದರೆ ಸಹಿಸುವ ಪ್ರಶ್ನೆ ಇಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಬಿವೈ ವಿಜಯೇಂದ್ರ ಅವರು ಈ ಒಂದು ಸೋಲಿನ ಹೊಣೆಯನ್ನು, ಜವಾಬ್ದಾರಿಯನ್ನು ರಾಜ್ಯದ ಅಧ್ಯಕ್ಷನಾಗಿ ಸೋಲಿನ ಜವಾಬ್ದಾರಿ ನಾನು ಹೊರುತ್ತೇನೆ. ಮುಂದಿನ ದಿನಗಳಲ್ಲಿ ನಮ್ಮ ತಪ್ಪನ್ನ ಸರಿಪಡಿಸುತ್ತೇನೆ. ಆದರೆ ಯಾರು ನಮ್ಮ ವಿರುದ್ಧ ಈ ರೀತಿ ಹಗುರವಾಗಿ ಮಾತನಾಡುತ್ತಾರೆ.ಈ ರೀತಿ ಮಾತನಾಡಿದರೆ ಸಹಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದರು. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಬ್ಬರು ಕೇಂದ್ರದ ಸಚಿವರಾಗಿ ಕೆಲಸ ಮಾಡಿರುವಂತಹವರು. ಇನ್ಮೇಲೆ ಹಗುರವಾಗಿ ಮಾತನಾಡುವುದನ್ನು ಬಿಟ್ಟು, ಮುಂದೆ ಪಕ್ಷದಲ್ಲಿ ಮಾಡಬೇಕಾದಂತಹ…

Read More

ಬೆಂಗಳೂರು : ನಿನ್ನೆ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಹೊರಬಂದಿದ್ದು ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ ಈ ಒಂದು ಗೆಲುವಿನ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು ನನ್ನ ೪೦ ವರ್ಷದ ರಾಜಕೀಯದಲ್ಲಿ ಜನರು ಬಿಜೆಪಿಯ ಸುಳ್ಳಿನ ವೃದ್ಧ ಸತ್ಯವನ್ನು ಗೆಲ್ಲಿಸಿದ್ದಾರೆ ಎಂದು ತಿಳಿಸಿದರು. ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಉಪ ಚುನಾವಣೆ ಫಲಿತಾಂಶ ನನ್ನ ಪಾಲಿಗೆ ಮಹತ್ವದ್ದಾಗಿತ್ತು. ದ್ವೇಷ ಸಾಧನೆಗಾಗಿ ಸುಳ್ಳು ಪ್ರಕರಣ, ಅಪಪ್ರಚಾರದಿಂದ ನನ್ನ ಹಾಗೂ ನನ್ನ ಕುಟುಂಬವನ್ನು ಕಟ್ಟಿಹಾಕಲು ರಾಜಭವನದಿಂದ ಕೇಂದ್ರ ತನಿಖಾ ಸಂಸ್ಥೆಗಳವರೆಗೆ ಎಲ್ಲವನ್ನೂ ದುರ್ಬಳಕೆ ಮಾಡಿಕೊಂಡ ಬಿಜೆಪಿ, ಜೆಡಿಎಸ್‌ನವರಿಗೆ ಮತದಾರರು ಫಲಿತಾಂಶದ ಮೂಲಕ ತಕ್ಕ ಉತ್ತರ ನೀಡಿದ್ದಾರೆ ಎಂದರು. ನಾನು 2ನೇ ಬಾರಿಗೆ ಸಿಎಂ ಆದ ಬಳಿಕ ಬಿಜೆಪಿ, ಜೆಡಿಎಸ್‌ನವರು ನನ್ನ ಹಾಗೂ ನನ್ನ ಪತ್ನಿಯನ್ನು ಸುಳ್ಳುಗಳಿಂದ ಹಣಿಯಲು ಯತ್ನಿಸಿದರು.40 ವರ್ಷಗಳ ನನ್ನ ರಾಜಕೀಯ ಜೀವನ ನೋಡಿರುವ ಜನರು ಬಿಜೆಪಿಯ ಸುಳ್ಳುಗಳ ವಿರುದ್ಧ ಸತ್ಯವನ್ನು ಗೆಲ್ಲಿಸಿದ್ದಾರೆ.ಎಲ್ಲ ನ್ಯಾಯಾಲಯಗಳಿಗಿಂತ…

Read More

ಬೆಂಗಳೂರು : ನಿನ್ನ ನೋಡಬೇಕು ಬಾ ಅಂತ ಪ್ರಿಯತಮೆ ಒಬ್ಬಳು ತನ್ನ ಪ್ರಿಯತಮನನ್ನು ಕರೆಸಿಕೊಂಡು ತನ್ನ ಇತರೆ ಸ್ನೇಹಿತರೊಂದಿಗೆ ಆತನನ್ನು ಅಪಹರಿಸಿ, ಬೆದರಿಕೆ ಒಡ್ಡಿ ಆತನಿಂದ 5 ಲಕ್ಷ ರೂಪಾಯಿ ಹಣ ಸುಲಿಗೆ ಮಾಡಿದ್ದಾಳೆ. ಈ ಒಂದು ಘಟನೆ ಬೆಂಗಳೂರಿನ ಕೋರಮಂಗಲ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದು ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಒಟ್ಟು 7 ಜನರನ್ನು ಅರೆಸ್ಟ್ ಮಾಡಿದ್ದಾರೆ. ಹೌದು ಬೆಂಗಳೂರಿನ ಕೋರಮಂಗಲ ಪೊಲೀಸರಿಂದ ಖತರ್ನಾಕ್ ಗ್ಯಾಂಗ್​ ಬಂಧನವಾಗಿದೆ. ಆಂಧ್ರದ ನೆಲ್ಲೂರು ಮೂಲದ ಏಳು ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು. ಆಂಧ್ರದಲ್ಲಿ ಕಿಡ್ನಾಪ್ ಮಾಡಿ ಪಾವಗಡ ಹಾಗೂ ಬೆಂಗಳೂರಿಗೆ ಕರೆತಂದು ಹಲ್ಲೆ ಮಾಡಿ ಹಣ ಸುಲಿಗೆ ಮಾಡಿದ ಆರೋಪವನ್ನು ಇವರು ಎದುರಿಸುತ್ತಿದ್ದಾರೆ. ಪ್ರಿಯಕರನೊಂದಿಗೆ ಸೇರಿ ಮಾಜಿ ಪ್ರಿಯಕರನ ಟ್ರ್ಯಾಪ್ ಮಾಡಿ ಸುಲಿಗೆ ಮಾಡಿದ್ದಾಳೆ. ಘಟನೆ ಹಿನ್ನೆಲೆ? ಆಂಧ್ರಪ್ರದೇಶದ ನೆಲ್ಲೂರಿನಲ್ಲಿ ಶಿವ ಮತ್ತು ಮೋನಿಕಾ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಎಲ್ಲವೂ ಚೆನ್ನಾಗಿಯೇ ಇತ್ತು. ಹೀಗಿರುವಾಗ ಶಿವನಿಗೆ ಕರೆ ಮಾಡಿ ನನ್ನ ಸ್ನೇಹಿತರು ನಿನ್ನ…

Read More

ಬೆಂಗಳೂರು : ರಾಜ್ಯದ ಮೂರು ಕ್ಷೇತ್ರಗಳ ವಿಧಾನಸಭೆಯ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಬಿಜೆಪಿ, ಜೆಡಿಎಸ್ ತೀವ್ರ ಮುಖಭಂಗ ಎದುರಿಸಿದೆ. ಅದರಲ್ಲೂ ಚನ್ನಪಟ್ಟಣ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲಿನ ಕುರಿತಾಗಿ ವಿಪಕ್ಷ ನಾಯಕ ಆರ್ ಅಶೋಕ ಬಹುಶಹ ನಿಖಿಲ್ ಕುಮಾರಸ್ವಾಮಿ ಅವರಿಗೆ ಅದೃಷ್ಟವಿಲ್ಲ ಅನಿಸುತ್ತದೆ ಎಂದು ತಿಳಿಸಿದರು. ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜನರ ಈ ಒಂದು ತೀರ್ಪಿಗೆ ತಲೆಬಾಗುತ್ತೇವೆ. ಚುನಾವಣೆಯಲ್ಲಿ ಗೆಲ್ಲಲು ಕಾರಣವಿದ್ದಂತೆ ಸೋಲಿಗೂ ಕೂಡ ಕಾರಣವಿದೆ. ಕೊನೆಗಳಿಗೆಯಲ್ಲಿ NDA ಅಭ್ಯರ್ಥಿ ತೀರ್ಮಾನ ಮಾಡಿದ್ದೆವು. ಕುಮಾರಸ್ವಾಮಿ, ಬಸವರಾಜ್ ಬೊಮ್ಮಾಯಿ ಮಕ್ಕಳನ್ನು ನಿಲ್ಲಿಸಲ್ಲ ಅಂತ ಹೇಳಿದ್ದರು. ಅದು ಕೂಡ ಮೈನಸ್ ಪಾಯಿಂಟ್ ಆಯ್ತು. ನಿಖಿಲ್ ಕುಮಾರಸ್ವಾಮಿಗೆ ಅದೃಷ್ಟವಿಲ್ಲ ಅಂತ ಅನಿಸುತ್ತದೆ. ನಿಖಿಲ್ ಅರ್ಜುನನ ಪಾತ್ರ ಮಾಡುತ್ತಾರೆ ಅಂತ ಅಂದುಕೊಂಡಿದ್ದವು. ಆದರೆ ಮತ್ತೆ ಜನರು ನಿಖಿಲ್ ಕುಮಾರಸ್ವಾಮಿಗೆ ಅಭಿಮನ್ಯುವಿನ ಪಾತ್ರವನ್ನೇ ಕೊಟ್ಟಿದ್ದಾರೆ. ಎರಡು ಬಾರಿ ಸೋತು ಈ ಬಾರಿ ಗೆಲ್ಲುತ್ತಾರೆ ಅಂದುಕೊಂಡಿದ್ದೆವು. ಆದರೆ ನಿಖಿಲ್ ಕುಮಾರಸ್ವಾಮಿ ಮೂರನೇ…

Read More

ಬೆಂಗಳೂರು : ಇಂದು ಕಾಂಗ್ರೆಸ್ ಗೆ ಮಹತ್ವದ ದಿನವಾಗಿದ್ದು ರಾಜ್ಯದ ಮೂರು ಕ್ಷೇತ್ರಗಳ ವಿಧಾನಸಭೆಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ದಾಖಲಿಸಿದ್ದು, ಈ ಮೂಲಕ ಬಿಜೆಪಿ ಹಾಗೂ ಜೆಡಿಎಸ್ ಗೆ ಕೌಂಟರ್ ನೀಡಿದೆ. ಈ ಒಂದು ಗೆಲುವಿನ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಅವರು ಈ ಮೂರು ಕ್ಷೇತ್ರಗಳ ಗೆಲುವು 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಿದೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಮಾತನಾಡಿ, ಟೀಕೆ ಸಾಯುತ್ತದೆ ಕೆಲಸ ಉಳಿಯುತ್ತದೆ ಅಂತ ನಾನು ಈ ಮೊದಲೇ ಹೇಳಿದ್ದೆ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನ ಮನ್ನಣೆ ಕೊಟ್ಟಿದ್ದಾರೆ. ಜನರ ಭಾವನೆಯ ಮೇಲೆ ರಾಜಕಾರಣ ಮಾಡುವುದಿಲ್ಲ. ಬದುಕಿನ ಮೇಲೆ ರಾಜಕಾರಣ ಮಾಡಬೇಕು ಹಾಗಾಗಿ ಜನ ಆಶೀರ್ವದಿಸಿದ್ದಾರೆ.ಗ್ಯಾರಂಟಿ ಯೋಜನೆಗಳ ಕುರಿತಂತೆ ವಿಪಕ್ಷಗಳು ಅಪಪ್ರಚಾರ ಮಾಡಿದರು. ಗ್ಯಾರಂಟಿ ಯೋಜನೆ ಹಾಗೂ ಅಭಿವೃದ್ಧಿಗೆ ಹಣ ಇಲ್ಲ ಅಂತ ಆರೋಪಿಸಿದ್ದರು ಆದರೆ ಈಗ ಒಂದೇ ಕ್ಷೇತ್ರಕ್ಕೆ ಕೋಟಿ ಕೋಟಿ ಹಣ ಹೋಗುತ್ತಿದೆ ಎಂದರು. ಈ…

Read More

ಬೆಂಗಳೂರು : ಇಂದು ರಾಜ್ಯದ ಮೂರು ಕ್ಷೇತ್ರಗಳ ವಿಧಾನಸಭಾ ಉಪಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, ಮೂರು ಕ್ಷೇತ್ರಗಳಲ್ಲೂ ಕೂಡ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ಹಾಗಾಗಿ ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಮೂರು ಕ್ಷೇತ್ರಗಳ ಗೆಲುವಿಗೆ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳು ಹಾಗೂ ಸಿಎಂ ಸಿದ್ದರಾಮಯ್ಯ ಆಡಳಿತವೇ ಕಾರಣ ಎಂದು ತಿಳಿಸಿದರು. ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚನ್ನಪಟ್ಟಣ ಸಂಡೂರು ಹಾಗೂ ಶಿಗ್ಗಾವಿ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ ಈ ಒಂದು ಗೆಲುವಿಗೆ ಕಾಂಗ್ರೆಸ್ಸಿನ ಗ್ಯಾರಂಟಿ ಯೋಜನೆಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತ ಶಾಸಕರು ಹಾಗೂ ಮತದಾರರೇ ಪ್ರಮುಖ ಕಾರಣ ಎಂದು ಅವರು ಮತದಾರರಿಗೆ ಕೈ ಮುಗಿದರು. ಟೀಕೆ ಸಾಯುತ್ತದೆ ಕೆಲಸ ಉಳಿಯುತ್ತದೆ ಅಂತ ನಾನು ಈ ಮೊದಲೇ ಹೇಳಿದ್ದೆ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನ ಮನ್ನಣೆ ಕೊಟ್ಟಿದ್ದಾರೆ. ಜನರ ಭಾವನೆಯ ಮೇಲೆ ರಾಜಕಾರಣ ಮಾಡುವುದಿಲ್ಲ. ಬದುಕಿನ ಮೇಲೆ ರಾಜಕಾರಣ ಮಾಡಬೇಕು…

Read More

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬೆಂಗಳೂರು ಮಂಗಳೂರು ರಾಷ್ಟೀಯ ಹೆದ್ದಾರಿ ಬಳಿ ಬೆಳ್ಳಂಬೆಳಗ್ಗೆ ಭೀಕರವಾದಂತಹ ಸರಣಿ ಅಪಘಾತ ನಡೆದಿದ್ದು, ಈ ಒಂದು ಅಪಘಾತದಲ್ಲಿ 20ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಪುತ್ತೂರು ತಾಲೂಕಿನ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಬೆಳ್ಳಂಬೆಳಗ್ಗೆ ಖಾಸಗಿ ಬಸ್, ಕೆಎಸ್​ಆರ್​ಟಿಸಿ ಬಸ್‌ ಹಾಗೂ ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಪ್ಪತ್ತಕ್ಕೂ ಹೆಚ್ಚು ಮಂದಿಗೆ ಗಾಯವಾಗಿದೆ. ಬೆಂಗಳೂರು ಮೂಲದ ಕಾಲೇಜು ವಿದ್ಯಾರ್ಥಿಗಳು ಖಾಸಗಿ ಬಸ್​ನಲ್ಲಿ ಕುಂದಾಪುರಕ್ಕೆ ಪ್ರವಾಸಕ್ಕೆಂದು ತೆರಳಿ ಹಿಂತಿರುಗುತ್ತಿದ್ದರು. ಮರಳಿ ಬರುವಾಗ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್‌ ಪಲ್ಟಿಯಾಗಿ ಕೆಎಸ್​ಆರ್​ಟಿಸಿ ಬಸ್​ಗೆ ಡಿಕ್ಕಿ ಹೊಡೆದಿದೆ. ಹಿಂದಿನಿಂದ ಬರುತ್ತಿದ್ದ ಕಾರು ಕೆಎಸ್​ಆರ್​ಟಿಸಿ ಬಸ್​ಗೆ ಡಿಕ್ಕಿ ಹೊಡೆಯುವ ಮೂಲಕ ಸರಣಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಸುಮಾರು ಇಪ್ಪತ್ತಕ್ಕೂ ಹೆಚ್ಚು ಮಂದಿಗೆ ಗಾಯವಾಗಿದೆ. ಗಾಯಾಳುಗಳನ್ನು ನೆಲ್ಯಾಡಿ ಮತ್ತು ಕಡಬದ ಖಾಸಗಿ ಆಸ್ಪತ್ರೆಗಳಲ್ಲಿ ಪ್ರಾಥಮಿಕ ಚಿಕಿತ್ಸೆ‌ ನೀಡಲಾಗುತ್ತಿದೆ.…

Read More

ಬೆಂಗಳೂರು : ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಇದೀಗ ಅವರ ಬಿದ್ದಿದ್ದು ಈಗಾಗಲೇ ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಗಿರುವಂತಹ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ವಿರುದ್ಧ 9 ಸಾವಿರ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಇನ್ನು ರಾಮನಗರ ಜಿಲ್ಲೆಯ ಚನ್ನಪಟ್ಟಣ ಕ್ಷೇತ್ರದ ವಿಚಾರಕ್ಕೆ ಬರುವುದಾದರೆ ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಿಖಿಲ್ ಕುಮಾರಸ್ವಾಮಿ ಅವರು, 73417 ಮತಗಳನ್ನ ಪಡೆದುಕೊಂಡಿದ್ದು, ಇನ್ನು ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರು, 99,320 ಮತಗಳನ್ನ ಪಡೆದಿದ್ದಾರೆ. ಇಬ್ಬರ ಮಧ್ಯ ಒಟ್ಟು 25,193 ಸಿಪಿ ಯೋಗೇಶ್ವರ್ ಮತಗಳ ದಿಂದ ಮುನ್ನಡೆ ಸಾಧಿಸಿ ಗೆಲುವು ಸಾಧಿಸಿದ್ದಾರೆ. ಇನ್ನೂ ಶಿಗ್ಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಪಠಾನ್ ಖಾನ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಪಠಾಣ್ ಖಾನ್ ಅವರು 88,985 ಮತಗಳನ್ನು ಪಡೆದುಕೊಂಡಿದ್ದರೆ, ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಅವರು 74,860 ಮತಗಳನ್ನು ಪಡೆದುಕೊಂಡಿದ್ದಾರೆ.…

Read More