Author: kannadanewsnow05

ಬೆಳಗಾವಿ : ಹಿಂದೂ ಬೆಳಗಾವಿಯ ಸಿಪಿಯೇಟ್ ಮೈದಾನದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಭರತ್ ಸಮಾವೇಶ ಹಮ್ಮಿಕೊಂಡಿದ್ದು ಈ ಒಂದು ಸಮಾವೇಶದಲ್ಲಿ ಬಿಜೆಪಿಯಿಂದ ದೊಡ್ಡ ಹೈಡ್ರಾಮವೇ ನಡೆಯಿತು. ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಭಾಷಣದ ವೇಳೆ ಬಿಜೆಪಿ ಮಹಿಳಾ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದರು. ತಕ್ಷಣ ಪೊಲೀಸರು ಮಹಿಳಾ ಕಾರ್ಯಕರ್ತೆಯರನ್ನು ವಶಕ್ಕೆ ಪಡೆದುಕೊಂಡರು. ಹೌದು ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಕೇಂದ್ರ ಸರ್ಕಾರದ ವಿರುದ್ಧದ ಕಾಂಗ್ರೆಸ್ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಷಣದ ವೇಳೆ ಹೈಡ್ರಾಮಾ ನಡೆಯಿತು. ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಕಪ್ಪು ಬಾವುಟ ಪ್ರದರ್ಶಿಸಿ ಸಮಾವೇಶಕ್ಕೆ ಕೆಲ ಕಾಲ ಅಡ್ಡಿಪಡಿಸಿದ ಘಟನೆ ನಡೆದಿದೆ. ಸಿಎಂ ಸಿದ್ದರಾಮಯ್ಯ ಭಾಷಣ ಆರಂಭಿಸುತ್ತಿದ್ದಂತೆಯೇ ಸಮಾವೇಶದಲ್ಲಿ ನೆರೆದಿದ್ದ ಜನರ ಹಿಂದೆ ಕಾಂಗ್ರೆಸ್ ಕಾರ್ಯಕರ್ತರಂತೆ ಕುಳಿತಿದ್ದ ಬಿಜೆಪಿ ಮಹಿಳಾ ಕಾರ್ಯಕರ್ತರು ಕಪ್ಪುಪಟ್ಟಿ ಪ್ರದರ್ಶಿಸಿ, ರಾಜ್ಯ ಸರ್ಕಾರದ ವಿರುದ್ಧ ದಿಕ್ಕಾರ ಕೂಗಲಾರಂಭಿಸಿದ್ದಾರೆ. ಏಕಾಏಕಿ ವೇದಿಕೆಯತ್ತ ಮುನ್ನುಗ್ಗಲು ಯತ್ನಿಸಿದ್ದಾರೆ.ತಕ್ಷಣ ಸಿಎಂ ಸಿದ್ದರಾಮಯ್ಯ ಅವರು ಭಾಷಣ ನಿಲ್ಲಿಸಿ ಇಲ್ಲಿಯ ಎಸ್ಪಿ ಯಾರು ಎಂದು…

Read More

ಬೆಳಗಾವಿ : ಇನ್ನೊಂದು ವಾರದಲ್ಲಿ ಗೃಹಲಕ್ಷ್ಮಿ ಹಣವನ್ನು ರಾಜ್ಯದ ಯಜಮಾನೀಯರ ಖಾತೆಗೆ ಹಾಕಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಸಚಿವೆ, ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದರು. ಇಂದು ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಇನ್ನೊಂದು ವಾರದಲ್ಲಿ ರಾಜ್ಯದ ಗೃಹಲಕ್ಷ್ಮಿ ಫಲಾನುಭವಿಗಳ ಖಾತೆಗೆ ಹಣ ಜಮೆ ಆಗುತ್ತದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಅವರು ಭರವಸೆ ಕೊಟ್ಟಿದ್ದಾರೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದರು.

Read More

ಆಂಧ್ರಪ್ರದೇಶ : ಆಂಧ್ರಪ್ರದೇಶದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಎರ್ಟಿಗಾ ಕಾರಿಗೆ ವೇಗವಾಗಿ ಬಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಒಂದು ಮಗು ಸೇರಿದಂತೆ ಇಬ್ಬರು ಪುರುಷರು ಹಾಗೂ ಮಹಿಳೆಯರು ಸೇರಿದಂತೆ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಾಣಿಪಾಕಂನಲ್ಲಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರೆಲ್ಲರೂ ಬೆಂಗಳೂರು ಮೂಲದವರು ಎಂದು ತಿಳಿದು ಬಂದಿದೆ. ತಿರುಪತಿಯಿಂದ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾಗ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಇನ್ನು ಹಲವರಿಗೆ ಗಾಯಗಳಾಗಿದ್ದು ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಘಟನೆ ಕುರಿತಂತೆ ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

Read More

ಬೆಂಗಳೂರು : ಪಹಲ್ಗಾಮ್ ನಲ್ಲಿ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ನಾನು ಶಾಂತಿಯನ್ನು ಬಯಸುತ್ತೇನೆ ಸದ್ಯದ ಪರಿಸ್ಥಿತಿಯಲ್ಲಿ ಯುದ್ಧದ ಅವಶ್ಯಕತೆ ಇಲ್ಲ ಎಂದು ಹೇಳಿಕೆ ನೀಡಿದ್ದರು. ಅದಾದ ಬಳಿಕ ನಾನು ಸದ್ಯದ ಪರಿಸ್ಥಿತಿಯಲ್ಲಿ ಯುದ್ಧದ ಅವಶ್ಯಕತೆ ಇಲ್ಲ ಅಂತ ಹೇಳಿದ್ದೇನೆ ಹೊರತು ಯುದ್ಧವೇ ಬೇಡ ಅಂತ ಹೇಳಿಲ್ಲ ಎಂದು ಸ್ಪಷ್ಟನೆ ನೀಡಿದರು. ಇದೀಗ ಭಾರತವನ್ನು ಕೆಣಕಿದರೆ ಅದು ಪಾಕಿಸ್ತಾನವೇ ಆಗಲಿ, ಯಾವುದೇ ದೇಶವಾಗಲಿ ಯುದ್ಧಕ್ಕೆ ಸದಾ ಸಿದ್ಧ ಎಂದು ತಿಳಿಸಿದ್ದರು. ಈ ಕುರಿತು ಸಾಮಾಜಿಕ ಜಾಲತಾಣ X ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಭಾರತವನ್ನು ಕೆಣಕಿದರೆ ಅದು ಪಾಕಿಸ್ತಾನವೇ ಆಗಲಿ, ಯಾವುದೇ ದೇಶವಾಗಲಿ ನಾವು ಸಹಿಸಲ್ಲ.‌ ಯಾವುದೇ ಹಂತದ ಯುದ್ಧಕ್ಕೆ ಭಾರತ ಸದಾ ಸಿದ್ಧ, ಸದಾ ಸನ್ನದ್ಧ ಆಗಿರುತ್ತದೆ. ಅನಿವಾರ್ಯತೆ ಆದಾಗ ಯುದ್ಧಕ್ಕೆ ಮುಂದಡಿ ಇಟ್ಟು ನಮ್ಮ ಸಾರ್ವಭೌಮತೆಯನ್ನು ಕಾಪಾಡಿಕೊಳ್ಳುವುದು ನಮಗೆ ಗೊತ್ತಿದೆ. ಇದನ್ನು ಭಾರತ ಪ್ರತೀ ಸಂದರ್ಭದಲ್ಲೂ ಸಾಬೀತು ಪಡಿಸಿದೆ. ಇತಿಹಾಸದುದ್ದಕ್ಕೂ ನಾವು ಈ ಎಚ್ಚರವನ್ನು ಮತ್ತು…

Read More

ಕೋಲಾರ : ಹಣ ಮನುಷ್ಯನನ್ನು ಯಾವ ರೀತಿ ಬೇಕಾದರೂ ಆಟ ಆಡಿಸುತ್ತದೆ ಹಾಗೂ ಯಾವ ಮಟ್ಟಕ್ಕಾದರೂ ಇಳಿಸುತ್ತದೆ. ಇದೀಗ ಕೋಲಾರದಲ್ಲಿ ಕೂಡ ಅಂತಹ ಘಟನೆ ನಡೆದಿದ್ದು ಹಣದ ಆಸೆಗಾಗಿ ಯುವಕನೊಬ್ಬ ಬೆಟ್ಟಿಂಗ್ ಕಟ್ಟಿ, ನೀರು ಬೆರೆಸದೇ ಐದು ಬಾಟಲ್ ಪೂರ್ತಿಯಾಗಿ ಮದ್ಯ ಸೇವಿಸಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಹೌದು ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಪೂಜಾರಹಳ್ಳಿಯಲ್ಲಿ ಯುವಕ ಎಣ್ಣೆ ಪಾರ್ಟಿಯಲ್ಲಿ ಬಾಜಿ ಕಟ್ಟಿ 5 ಬಾಟಲಿ ಎಣ್ಣೆಯನ್ನು ನೀರು ಬೆರೆಸದೇ ಕುಡಿದಿದ್ದಾನೆ. ಆದರೆ, ದೇಹಕ್ಕೆ ಸೇರಿದ ಎಣ್ಣೆಯನ್ನು ಅರಗಿಸಿಕೊಳ್ಳಲಾಗದೇ ಜೀವ ಬಿಟ್ಟಿದ್ದಾನೆ. ಮೃತ ಯುವಕನನ್ನು ಕಾರ್ತಿಕ್ (21) ಎಂದು ತಿಳಿದುಬಂದಿದ್ದು, ಮದ್ಯ ಸೇವಿಸಿ ಸಾವನ್ನಪ್ಪಿದ್ದಾನೆ. ಕಾರ್ತೀಕ ಹಣದ ಆಸೆಗಾಗಿ ಬೆಟ್ಟಿಂಗ್ ಕಟ್ಟಿ ನೀರು ಬೆರಸದೆ ಮದ್ಯ ಸೇವನೆ ಮಾಡಿ ಪ್ರಾಣ ಕಳೆದುಕೊಂಡಿದ್ದಾನೆ. ಐದು ಬಾಟಲ್ ಮದ್ಯಕ್ಕೆ ಒಂದು ಹನಿ ನೀರನ್ನೂ ಬೆರೆಸದೇ ಕುಡಿಯುವುದಾಗಿ ಎದುರಾಳಿ ವ್ಯಕ್ತಿಯೊಂದಿಗೆ 10 ಸಾವಿರ ರೂ. ಹಣಕ್ಕೆ ಬಾಜಿ ಕಟ್ಟಿದ್ದಾನೆ. ಇದೇ ಗ್ರಾಮದ ವೆಂಕಟರಡ್ಡಿ, ಸುಬ್ರಮಣಿ ಮತ್ತು…

Read More

ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ಭೀಕರವಾದ ಗೋಣಿನ ದಾಳಿ ನಡೆಸಿ 26 ಜನರನ್ನು ಬಳಿ ಪಡೆದಿದ್ದಾರೆ ಈ ಒಂದು ಘಟನೆ ಖಂಡಿಸಿ ಭಾರತ ಪಾಕಿಸ್ತಾನದ ವಿರುದ್ಧ ಹಲವು ಕಠಿಣ ಕ್ರಮ ಕೈಗೊಂಡಿದ್ದು ಅಲ್ಲದೆ ಇತ್ತೀಚಿಗೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಮತ್ತು ಕುಪ್ವಾರಾ ಜಿಲ್ಲೆಗಳಲ್ಲಿ ಪಾಕಿಸ್ತಾನ ಪಡೆಗಳು ಅಪ್ರಚೋದಿತ ಗುಂಡಿನ ದಾಳಿ ನಡೆಸುವ ಮೂಲಕ ನಿಯಂತ್ರಣ ರೇಖೆ (ಎಲ್ಒಸಿ) ಉದ್ದಕ್ಕೂ ಕದನ ವಿರಾಮವನ್ನು ಉಲ್ಲಂಘಿಸಿವೆ. ಇದೀಗ ಸದ್ಯದ ಪರಿಸ್ಥಿತಿಯಲ್ಲಿ ಭಾರತದ ಜೊತೆ ಯುದ್ಧ ಬೇಡವೆಂದು ಪಾಕಿಸ್ತಾನದ ಸರ್ಕಾರಕ್ಕೆ ಮಾಜಿ ಪ್ರಧಾನಿ ನವಾಜ್ ಶರೀಫ್ ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಪಾಕಿಸ್ತಾನ ಪ್ರಧಾನಿ ನವಾಜ್ ಶರೀಫ್ ಈ ಕುರಿತು ಹಾಲಿ ಪ್ರಧಾನ ಮಂತ್ರಿ ಶಾಬಾದ್ ಶರೀಫ ಅವರಿಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ. ನವಾಜ್ ಶರೀಫ್ ಗೆ ಕರೆ ಮಾಡಿ ಸದ್ಯದ ಪರಿಸ್ಥಿತಿ ಬಗ್ಗೆ ಶಹಾಬಾಜ್ ಶರೀಫ್ ವಿವರಿಸಿದ್ದರು. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಭಾರತದ ಜೊತೆಗೆ ಯುದ್ಧ ಬೇಡವೆಂದು ನವಾಜ್ ಶರೀಫ್ ಶಹಬಾದ್…

Read More

ಶ್ರೀನಗರ : ಪಹಲ್ಗಾಂನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ NIA ಅಧಿಕಾರಿಗಳಿಗೆ ದೊಡ್ಡ ಸುಳಿವು ಸಿಕ್ಕಿದ್ದು, ದಾಳಿಗೂ ಮುನ್ನವೇ ಉಗ್ರರು ಪಹಲ್ಗಾಮ್ ಗೆ ಬಂದು ಮಾರು ವೇಷದಲ್ಲಿ ಸ್ಥಳ ಪರಿಶೀಲನೆ ನಡೆಸಿದ್ದರು ಎಂದು ಎನ್ಐಎ ತನಿಖೆಯಲ್ಲಿ ಬಯಲಾಗಿದ್ದು,ಅಲ್ಲದೆ ಇನ್ನೂ ನಾಲ್ಕು ಅಂಶಗಳು NIA ತನಿಖೆಯಲ್ಲಿ ತಿಳಿದು ಬಂದಿದೆ. ಹೌದು ಉಗ್ರರು ಮಾರು ವೇಷದಲ್ಲಿ ಮೊದಲು ಕಾಶ್ಮೀರಕ್ಕೆ ಆಗಮಿಸಿ ಅಲ್ಲಿಂದ ಬಳಿಕ ಪಹಲ್ಗಾಮ್ ಗೆ ಎಂಟ್ರಿ ಕೊಟ್ಟಿದ್ದಾರೆ. ಅಲ್ಲದೇ ಚೀನಾ ನಿರ್ಮಿತ ಡ್ರೋನ್ ಗಳನ್ನು ಉಗ್ರರು ಬಳಸಿದ್ದಾರೆ ಎನ್ನಲಾಗಿದೆ. ದಾಳಿ ನಡೆಸಬೇಕಾದ ಸ್ಥಳ ಕೂಡ ಮುಂಚೇನೆ ಪರಿಶೀಲನೆ ಮಾಡಿದ್ದರು ಎನ್ನಲಾಗುತ್ತಿದೆ. ಚೀನಾ ಡೋಂಟ್ ಬಳಸಿಯೇ ಉಗ್ರರಿಗೆ ಶಸ್ತ್ರಾಸ್ತ್ರವನ್ನು ಪೂರೈಕೆ ಆಗಿದೆ ಎನ್ನಲಾಗುತ್ತಿದೆ ದಾಳಿ ಬಳಿಕ ಕಾಶ್ಮೀರದಲ್ಲಿ ಉಗ್ರರು ಅಡಗಿರುವ ಶಂಕೆ ವ್ಯಕ್ತವಾಗುತ್ತಿದೆ. ಅಲ್ಲದೇ ಅವರು ಪುಲ್ವಾಮಾ ಅಥವಾ ಅನಂತನಾಗಗೆ ಪಲಾಯನ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇದೀಗ ಉಗ್ರರ ಜಾಡು ಬೆನ್ನತ್ತಿರುವ ಸೇನೆಯ ಕಾರ್ಯಾಚರಣೆ ಮುಂದುವರಿದಿದೆ. ಪ್ರವಾಸಿಗರ ಸೋಗಿನಲ್ಲಿ…

Read More

ಮಂಗಳೂರು : ನೂರಾರು ವಿದ್ಯಾರ್ಥಿನಿಯರು ಹಾಗೂ ಯುವತಿಯರೊಂದಿಗೆ ಸರಸ ಸಲ್ಲಾಪದಲ್ಲಿ ತೊಡಗಿದ್ದ ವೀಡಿಯೋಗಳು ಪತ್ತೆಯಾದ ಹಿನ್ನೆಲೆಯಲ್ಲಿ ನೂರಾರು ವಿದ್ಯಾರ್ಥಿನಿಯರು ಹಾಗೂ ಯುವತಿಯರೊಂದಿಗೆ ಸರಸ ಸಲ್ಲಾಪದಲ್ಲಿ ತೊಡಗಿದ್ದ ವೀಡಿಯೋಗಳು ಪತ್ತೆಯಾಗಿವೆ. ಬಂಧಿತನನ್ನು ಕಾರ್ಕಳ ನಿವಾಸಿ ಸೈಯದ್ ಎಂದು ಗುರುತಿಸಲಾಗಿದೆ. ಆರೋಪಿ ವಿದ್ಯಾರ್ಥಿನಿಯೊಬ್ಬಳಿಗೆ ಅಶ್ಲೀಲ ಸಂದೇಶ ಕಳಿಸಿ ಕಿರುಕುಳ ಕೊಡುತ್ತಿದ್ದ. ಈ ವೇಳೆ ಹಿಂದೂ ಸಂಘಟನೆ ಕಾರ್ಯಕರ್ತರು ಥಳಿಸಿ, ಮೊಬೈಲ್ ಪರಿಶೀಲಿಸಿದ್ದಾರೆ. ಈ ವೇಳೆ ನೂರಾರು ವಿದ್ಯಾರ್ಥಿನಿಯರು ಹಾಗೂ ಯುವತಿಯರೊಂದಿಗೆ ಸರಸ ಸಲ್ಲಾಪದಲ್ಲಿ ತೊಡಗಿದ್ದ ವೀಡಿಯೋಗಳು ಪತ್ತೆಯಾಗಿವೆ.ಸದ್ಯ ಪೊಲೀಸರು ಪೋಕ್ಸೋ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Read More

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಇಂದು ಘೋರವಾದ ದುರಂತ ಸಂಭಾವಿಸಿದ್ದು, ಪಾಲಿಕೆಯ ತ್ಯಾಜ್ಯ ಸಂಗ್ರಹಿಸುವ ವಾಹನ ಹರಿದು 6 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಸೋನಿಯಾ ಗಾಂಧಿನಗರದಲ್ಲಿ ಇಂದು ನಡೆದಿದೆ. ವೇಗವಾಗಿ ಬಂದ ವಾಹನ ಹರಿದು ಹಮೀದಾ ಬಾನು ಕಬ್ಬಾಡೆ (6) ಎನ್ನುವ ಬಾಲಕಿ ಸ್ಥಳದಲ್ಲೇ ಸಾವನಪ್ಪಿದ್ದಾಳೆ ಎಂದು ತಿಳಿದುಬಂದಿದೆ. ವಾಹನದ ಚಾಲಕನ ನಿರ್ಲಕ್ಷದಿಂದಲೇ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಆರೋಪಿಸಲಾಗುತ್ತಿದ್ದು, ಹುಬ್ಬಳ್ಳಿ ಧಾರವಾಡ ಪಾಲಿಕೆ ಸಿಬ್ಬಂದಿ ವಿರುದ್ಧ ಪೋಷಕರು ಆಕ್ರೋಶ ಹೊರಹಾಕಿದ್ದಾರೆ. ಬಾಲಕಿ ಶವವನ್ನು ಪೊಲೀಸರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದು, ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಈಗಾಗಲೇ ಕಲ್ಬುರ್ಗಿ ಹಾಗೂ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಇತ್ತೀಚಿಗೆ ಸಂಪುಟ ಸಭೆ ನಡೆಸಿದ್ದೇವೆ. ಹಾಗಾಗಿ ಮುಂದಿನ ಸಂಪುಟ ಸಭೆಯನ್ನು ನಂದಿ ಬೆಟ್ಟ ಹಾಗೂ ವಿಜಯಪುರದಲ್ಲಿ ನಡೆಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೈರದೇನಹಳ್ಳಿ ಸರ್ಕಾರದ ಸಾಧನಾ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬೈರದೇನಹಳ್ಳಿ ಸರ್ಕಾರದ ಸಾಧನ ಸಮಾವೇಶದಲ್ಲಿ ಮಾತನಾಡಿದ ಅವರು, ಮುಂದಿನ ಸಂಪುಟ ಸಭೆಯನ್ನು ನಂದಿಬೆಟ್ಟ ಹಾಗು ವಿಜಯಪುರದಲ್ಲಿ ಬೆಳಗಾವಿ ವಿಭಾಗದ ಸಚಿವ ಸಂಪುಟ ಸಭೆ ಮಾಡುತ್ತೇವೆ. ಈಗಾಗಲೇ ಕಲಬುರ್ಗಿ ಹಾಗು ಮಲೆಮಾದೇಶ್ವರ ಬೆಟ್ಟದಲ್ಲಿ ಸಂಪುಟ ಸಭೆ ಮಾಡಿದ್ದೇವೆ ಎಂದು ರಾಜ್ಯ ಸರ್ಕಾರದ ಸಾಧನಾ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು.

Read More