Author: kannadanewsnow05

ದಕ್ಷಿಣಕನ್ನಡ : ದಕ್ಷಿಣಕನ್ನಡದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಸರ್ಕಾರಿ ಬಸ್ ಹಾಗು ಲಾರಿ ಪರಸ್ಪರ ಡಿಕ್ಕಿಯಾಗಿ ಇಬ್ಬರು ಚಾಲಕರು ಸೇರಿದಂತೆ ನಾಲ್ವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಗುಂಡ್ಯದಲ್ಲಿ ನಡೆದಿದೆ. ಅಪಾಯಕಾರಿ ತಿರುವಿನಲ್ಲಿ ಎದುರುನಿಂದ ವೇಗವಾಗಿ ಲಾರಿ ಬರುತ್ತಿತ್ತು ಈ ವೇಳೆ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಬಸಕ್ಕೆ ಕೆಎಸ್ಆರ್ಟಿಸಿ ಬಸ್ ಹಾಗು ಲಾರಿಯ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ. ಲಾರಿ ಮತ್ತು ಬಸ್ ಚಾಲಕರ ಸ್ಥಿತಿ ಗಂಭೀರವಾಗಿದ್ದು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಅಪಘಾತದ ಕುರಿತಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read More

ನವದೆಹಲಿ : ಪಹಲ್ಗಾಮ್ ಉಗ್ರರ ದಾಳಿಯ ಪ್ರತಿಕಾರವಾಗಿ ಭಾರತ ಪಾಕಿಸ್ತಾನದಲ್ಲಿರುವ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದ್ದು ಅಲ್ಲದೆ ನೂರಕ್ಕೂ ಅಧಿಕ ಉಗ್ರರನ್ನು ಕೊಂದಿದೆ. ಇದೀಗ ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ನಡೆಸುತ್ತಿದ್ದ ಹರಿಯಾಣದ ಜ್ಯೋತಿ ಮಲ್ಹೋತ್ರಾಳನ್ನು ಅರೆಸ್ಟ್ ಮಾಡಿದ್ದು ವಿಚಾರಣೆ ವೇಳೆ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ. ಹೌದು ಭಾರತದ ಸೇನಾ ರಹಸ್ಯಗಳು, ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನಕ್ಕೆ ಹಂಚಿಕೆ ಮಾಡಿದ ಆರೋಪದಡಿ ಬಂಧಿತಳಾಗಿರುವ ಹರಿಯಾಣ ಮೂಲದ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾಳ ಮತ್ತಷ್ಟು ದೇಶದ್ರೋಹ ಕೃತ್ಯ ಬಯಲಾಗ್ತಿದೆ. ಇದರ ಮಧ್ಯ ಪುರಿ ಮೂಲದ ಯೂಟ್ಯೂಬರ್ ಪ್ರಿಯಾಂಕಾ ಜೊತೆಗೂ ಜ್ಯೋತಿ ನಂಟಿದೆ ಎನ್ನುವ ರಹಸ್ಯ ಈಗ ಬೆಳಕಿಗೆ ಬಂದಿದೆ. ಒಡಿಶಾದ ಪ್ರಿಯಾಂಕಾ ಸೇನಾಪತಿ ಜೊತೆ ಪುರಿ ದೇಗುಲದ ಸಮಗ್ರ ವಿಡಿಯೋ ಕೂಡ ಮಾಡಿದ್ದಾಳೆ. ಹೀಗಾಗಿ, ಗುಪ್ತ ಇಲಾಖೆ ಅಧಿಕಾರಿಗಳು ಪ್ರಿಯಾಂಕಾಳನ್ನೂ ವಿಚಾರಣೆ ನಡೆಸಿದ್ದಾರೆ ಅಂತ ತಿಳಿದು ಬಂದಿದೆ.ಮೂಲಗಳ ಪ್ರಕಾರ, ಜ್ಯೋತಿ ಮಲ್ಹೋತ್ರಾ 2024ರ ಸೆಪ್ಟೆಂಬರ್‌ನಲ್ಲಿ ಪುರಿಗೆ ಭೇಟಿ ನೀಡಿದ್ದಳು. ಈ ಸಮಯದಲ್ಲಿ ಜಗನ್ನಾಥ ದೇವಾಲಯ ಮತ್ತು ಅದರ ಸುತ್ತಲಿನ…

Read More

ತುಮಕೂರು : ತುಮಕೂರಿಗೆ ಶೀಘ್ರ ಮೆಟ್ರೋ ಯೋಜನೆ ಬರುತ್ತದೆ.ಅದು ಇಡೀ ತುಮಕೂರಿನ ಚಿತ್ರಣವನ್ನೇ ಬದಲಾವಣೆ ಮಾಡುತ್ತದೆ. ಇನ್ನು ಕೆಲವೇ ದಿನಗಳಲ್ಲಿ ತುಮಕೂರು ಬೆಂಗಳೂರಿನ ಎರಡನೇ ನಗರವಾಗಿ ಬೆಳೆಯುವುದು ಗ್ಯಾರಂಟಿ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದರು. ಇಂದು ಜಿಲ್ಲೆಯಲ್ಲಿ ರೇಲ್ವೆ ಕಾಮಗಾರಿ ಪರಿಶೀಲನೆ ನಡೆಸಡಿಯಾ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಬಿಎಂಆರ್ಸಿಎಲ್ ವರದಿ ಕೊಟ್ಟಿದ್ದು, ನಮ್ಮ ಕಾಲದಲ್ಲೇ ಕಾರ್ಯರೂಪಕ್ಕೆ ತರುವ ಕೆಲಸ ಆಗುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರದಿಂದ ಬರುವ ಎಲ್ಲಾ ಸವಲತ್ತುಗಳು ತುಮಕೂರಿನ ಜನತೆಗೆ ಸಿಗಬೇಕು ಎಂದರು. ಇನ್ನೊಂದು ತಿಂಗಳಿನಲ್ಲಿ ತುಮಕೂರಿನ ಜನತೆಗೆ ಒಂದು ದೊಡ್ಡ ಸುದ್ದಿ ಕೊಡುತ್ತೇನೆ. ಬೆಂಗಳೂರು ಟು ಚೆನ್ನೈ ಕಾರಿಡಾರ್ ಯೋಜನೆ ನಿರ್ಮಾಣ ಮಾಡಲಾಗುತ್ತಿದೆ. ಸುಮಾರು 8484 ಎಕರೆ ಪ್ರದೇಶದಲ್ಲಿ ಪಿಎಂ ಗತಿಶಕ್ತಿ ಯೋಜನೆ ಅಡಿಯಲ್ಲಿ ಇದು ನಿರ್ಮಾಣವಾಗುತ್ತಿದೆ. ಒಟ್ಟು ಮೂರು ಹಂತದಲ್ಲಿ ಅಭಿವೃದ್ಧಿಗೆ ಪ್ರಧಾನಿ ಮೋದಿಯವರಿಂದ ಚಾಲನೆ ಕೊಡಲಾಗಿದೆ. ಈಗ ಮೊದಲನೇಯ ಹಂತದ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು.

Read More

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಇನ್ನೂ ಕೆಲವು ದಿನಗಳ ಕಾಲ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ ನಿನ್ನೆ ಸುರಿದ ಭಾರಿ ಮಳೆಗೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಬೇಕಿದ್ದ ಆರ್ಸಿಬಿ ಮತ್ತು ಕೆಕೆಆರ್ ಪಂದ್ಯ ಕೂಡ ರದ್ದಾಗಿದೆ. ಇದೀಗ ಬೆಂಗಳೂರಲ್ಲಿ ಮುಂದಿನ 12 ಗಂಟೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೌದು ಬೆಂಗಳೂರು ನಗರ ಜಿಲ್ಲೆಯ ಎಂಟು ವಲಯದಲ್ಲೂ ಮುಂದಿನ 12 ಗಂಟೆಗಳ ಕಾಲ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಇಂದು ಸಹ ಬೆಂಗಳೂರಿನ ಶಾಂತಿನಗರ, ರಿಚ್ಮಂಡ್ ಸರ್ಕಲ್, ಕಾರ್ಪೊರೇಷನ್ ವೃತ್ತ, ಕೆಆರ್ ಮಾರ್ಕೆಟ್, ಮೆಜೆಸ್ಟಿಕ್, ಜಯನಗರ, ಚಾಮರಾಜಪೇಟೆ, ವಿಜಯನಗರ, ಚಂದ್ರಾಲೇಔಟ್ ರಾಜಾಜಿನಗರ, ಕಾಮಾಕ್ಷಿಪಾಳ್ಯ, ಸುಂಕದಕಟ್ಟೆ, ನಾಗರಬಾವಿ, ಆರ್ ಆರ್ ನಗರ, ನಾಯಂಡಹಳ್ಳಿ, ಬಿಟಿಎಂ ಲೇಔಟ್, ಯಶವಂತಪುರ, ಪೀಣ್ಯ, ಮೈಕೋಲೇಔಟ್ ಹಾಗು ಬೊಮ್ಮನಹಳ್ಳಿ…

Read More

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಇನ್ನೂ ಕೆಲವು ದಿನಗಳ ಕಾಲ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ ನಿನ್ನೆ ಸುರಿದ ಭಾರಿ ಮಳೆಗೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಬೇಕಿದ್ದ ಆರ್ಸಿಬಿ ಮತ್ತು ಕೆಕೆಆರ್ ಪಂದ್ಯ ಕೂಡ ರದ್ದಾಗಿದೆ. ಇದೀಗ ಇಂದು ಮತ್ತೆ ಬೆಂಗಳೂರು ನಗರದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಹೌದು ಇಂದು ಸಹ ಬೆಂಗಳೂರು ನಗರದ ಹಲವಡೆ ಧಾರಾಕಾರ ಮಳೆ ಶುರುವಾಗಿದೆ. ಬೆಂಗಳೂರಿನ ಶಾಂತಿನಗರ, ರಿಚ್ಮಂಡ್ ಸರ್ಕಲ್, ಕಾರ್ಪೊರೇಷನ್ ವೃತ್ತ, ಕೆಆರ್ ಮಾರ್ಕೆಟ್, ಮೆಜೆಸ್ಟಿಕ್, ಜಯನಗರ, ಚಾಮರಾಜಪೇಟೆ, ವಿಜಯನಗರ, ಚಂದ್ರಾಲೇಔಟ್ ರಾಜಾಜಿನಗರ, ಕಾಮಾಕ್ಷಿಪಾಳ್ಯ, ಸುಂಕದಕಟ್ಟೆ, ನಾಗರಬಾವಿ, ಆರ್ ಆರ್ ನಗರ, ನಾಯಂಡಹಳ್ಳಿ, ಬಿಟಿಎಂ ಲೇಔಟ್, ಯಶವಂತಪುರ, ಪೀಣ್ಯ, ಮೈಕೋಲೇಔಟ್ ಹಾಗು ಬೊಮ್ಮನಹಳ್ಳಿ ಸೇರಿದಂತೆ ಹಲವಡೆ ಭಾರಿ ಮಳೆ ಆಗುತ್ತಿದೆ. ಇನ್ನು ಭಾರಿ ಮಳೆಯಿಂದಾಗಿ ಕೆಲವು ಪ್ರದೇಶಗಳಲ್ಲಿ ರಸ್ತೆಯಲ್ಲಿ ನೀರು ನಿಂತಿದ್ದು, ವಾಹನ ಸವಾರರು ಪರದಾಟ ನಡೆಸಿದ್ದಾರೆ.

Read More

ರಾಯಚೂರು : ಇಂದು ಬೆಳ್ಳಂಬೆಳಗ್ಗೆ ರಾಯಚೂರಿನಲ್ಲಿ ಭೀಕರವಾದ ಕೊಲೆ ನಡೆದಿತ್ತು. ಇದೀಗ ಯುವಕನ ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದರ್ ಬಜಾರ್ ಠಾಣೆ ಪೋಲಿಸರು ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಕರೀಂ, ಇಬ್ರಾಹಿಂ ಹಾಗೂ ಇಲಿಯಾಸ್ ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ. ಬಂಧಿತ ಪ್ರಮುಖ ಆರೋಪಿ ಕರೀಂ ಮಾಜಿ ಕೌನ್ಸಿಲರ್ ಒಬ್ಬರ ಸಂಬಂಧಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಇಂದು ಬೆಳಿಗ್ಗೆ ಇಡ್ಲಿ ತಿನ್ನುವಾಗ ಚಾಕುವಿನಿಂದ ಇರಿದು ಸಾದಿಕ್ ನನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ. ನನಗೆ ಮರ್ಯಾದೆ ಕೊಡಬೇಕು. ಏರಿಯಾದಲ್ಲಿ ನಾನೇ ದೊಡ್ಡವನು. ನನಗೆ ಇಡ್ಲಿ ತಿನ್ನಿಸು ಅಂತ ಸಾದಿಕ್ ಗೆ ಕರೀಂ ಅವಾಜ್ ಹಾಕಿದ್ದಾನೆ. ಈ ವೇಳೆ ಸಾದೀಕ್ ಇದನ್ನು ವಿರೋಧಿಸಿದ್ದಕ್ಕೆ ಕರೀಂ ಮತ್ತು ಆತನ ಸಹಚರರು ಸಾಧಿಕ್ ನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಆದರೆ ಗಾಂಜಾ ಮಾರಾಟ ಬೇಡ ಎಂದಿದ್ದಕ್ಕೆ ಕೊಲೆ ಮಾಡಲಾಗಿದೆ ಎಂದು ಸಾದೀಕ್ ತಂದೆ ಮಾಡಿದ್ದಾರೆ. ಈ ವಿಚಾರವಾಗಿ ಈ ಬಗ್ಗೆಯೂ ತನಿಖೆ ನಡೆಸುತ್ತೇವೆ ಎಂದು ರಾಯಚೂರಿನ…

Read More

ನವದೆಹಲಿ : ಪಹಲ್ಗಾಮ್ ದಾಳಿಯ ಪ್ರತಿಕಾರವಾಗಿ ಈಗಾಗಲೇ ಭಾರತ ಆಪರೇಷನ್ ಸಿಂಧೂರ್ ಮೂಲಕ ಪಾಕಿಸ್ತಾನದಲ್ಲಿರುವ ಉಗ್ರರ ನೆಲೆಗಳನ್ನು ದ್ವಂಸಗೊಳಿಸಿ 100ಕ್ಕೂ ಅಧಿಕ ಉಗ್ರರನ್ನು ಕೊಂದು ಸೇಡು ತೀರಿಸಿಕೊಂಡಿದೆ. ಆದರೆ ಈ ಒಂದು ಪಹಲ್ಗಾಮ್ ದಾಳಿಗೂ ಹಾಗೂ ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದಲ್ಲಿ ಬಂಧನವಾಗಿರುವ ಹರಿಯಾಣದ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾಗು, ನಂಟು ಇದೆ ಎನ್ನುವುದು ಬಹಿರಂಗವಾಗಿದೆ. ಹೌದು ಪಾಕಿಸ್ತಾನ ಪರ ಬೇಹುಗಾರಿಕೆ ನಡೆಸಿದ ಆರೋಪದಲ್ಲಿ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾರನ್ನು ಬಂಧಿಸಲಾಗಿದ್ದು, ತನಿಖೆಯ ವೇಳೆ ಹಲ್ವು ಸ್ಫೋಟಕ ಮಾಹಿತಿಗಳು ಬಯಲಾಗಿವೆ. ಜ್ಯೋತಿ ಮಲ್ಹೋತ್ರಾ ಪಾಕಿಸ್ತಾನದಲ್ಲಿ ಹೈ ಪ್ರೊಫೈಲ್ ಪಾರ್ಟಿಗಳಿಗೆ ಹಾಜರಾಗುತ್ತಿದ್ದಳು. ಗುಪ್ತಚರ ಸಂಸ್ಥೆಗಳಲ್ಲದೇ ಇತರ ಹಿರಿಯ ಅಧಿಕಾರಿಗಳನ್ನು ಭೇಟಿಯಾಗುತ್ತಿದ್ದಳು ಎಂದು ತಿಳಿದುಬಂದಿದೆ. ಅಲ್ಲದೇ ಜ್ಯೋತಿ ಪಾಕಿಸ್ತಾನ ರಾಯಭಾರ ಕಚೇರಿ ಅಧಿಕಾರಿ ಡ್ಯಾನಿಶ್ ಮತ್ತು ಪಾಕಿಸ್ತಾನಿ ಗುಪ್ತಚರ ಅಧಿಕಾರಿಗಳ ಜೊತೆ ಅಕೆ ನಿಕಟ ಸಂಪರ್ಕ ಹೊಂದಿದ್ದು, ಇದೇ ಕಾರಣಕ್ಕೆ ಆಕೆಗೆ ವಿಐಪಿ ಸುಲಭ್ಯ ದೊರೆಯುತ್ತಿತ್ತು.ಜ್ಯೋತಿ ಮಲ್ಹೋತ್ರಾ ಜನವರಿ 2025ರಲ್ಲಿ ಜಮ್ಮು-ಕಾಶ್ಮೀರದ ಪಹಲ್ಗಾಮ್ ಗೂ ಭೇಟಿ…

Read More

ಮಂಗಳೂರು : ಇತ್ತೀಚಿಗೆ ಮಂಗಳೂರಿನಲ್ಲಿ ನಡುರಸ್ತೆಯಲ್ಲಿಯೇ ರೌಡಿಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿತ್ತು. ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ಕೊಲೆ ನಡೆಯುವ ಸ್ಥಳದಲ್ಲಿ ಬುರ್ಖಾಧಾರಿ ಮಹಿಳೆಯರು ಹಂತಕರಿಗೆ ಎಸ್ಕೇಪ್ ಆಗಲು ಸಹಾಯ ಮಾಡಿದ್ದಾರೆ ಅವರನ್ನು ಯಾಕೆ ಬಂಧಿಸಿಲ್ಲ ಎಂದು ಪ್ರಶ್ನಿಸಿದ್ದ ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ಹಾಗೂ ಮಾಜಿ ಕಾರ್ಪೊರೇಟರ್ ವಿರುದ್ಧ FIR ದಾಖಲಾಗಿದೆ. ಹೌದು ರೌಡಿ ಶೀಟರ್, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ವೇಳೆ ಘಟನಾ ಸ್ಥಳದಲ್ಲಿ ಕಾಣಿಸಿಕೊಂಡ ಬುರ್ಖಾಧಾರಿ ಮಹಿಳೆಯರ ಬಗ್ಗೆ ಭಾರೀ ಅನುಮಾನ ವ್ಯಕ್ತವಾಗಿತ್ತು. ಆ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್​ಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನಿಸಿದ್ದ ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ, ಮಾಜಿ ಕಾರ್ಪೊರೇಟರ್ ಶ್ವೇತಾ ಪೂಜಾರಿ ಮೇಲೆ ಎಫ್‌ಐಆರ್ ದಾಖಲಾಗಿದೆ. ಶ್ವೇತಾ ಪೂಜಾರಿ ಫೇಸ್‌ಬುಕ್ ಪೋಸ್ಟ್​ನಲ್ಲಿ ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ? ದಕ್ಷಿಣ ಕನ್ನಡ…

Read More

ಇಸ್ಲಾಮಾಬಾದ್ : ಪಾಕಿಸ್ತಾನದಲ್ಲಿ ಎಲ್.ಇ.ಟಿ ಕಮಾಂಡರ್ ಸೈಫುಲ್ಲಾ ಖಾಲಿದ್ ನನ್ನು ಹತ್ಯೆಗೈಯ್ಯಲಾಗಿದೆ. 2006ರ ಆರ್ಎಸ್ಎಸ್ ಕೇಂದ್ರ ಕಚೇರಿ ಮೇಲಿನ ದಾಳಿಯ ಸಂಚುಕೋರ ನೇಪಾಳ ಮತ್ತು ಭಾರತದ ಗಡಿಯ ಮೂಲಕ ಉಗ್ರರನ್ನು ಕಳುಹಿಸುತ್ತಿದ್ದ ಎಂದು ತಿಳಿದುಬಂದಿದೆ. ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಇದೀಗ ಸೈಫುಲ್ಲಾ ಖಾಲಿದ್ನನ್ನು ಅತ್ತೆಗಯ್ಯಲಾಗಿದೆ ಬೆಂಗಳೂರಿನ IISc ಹಾಗು CRPF ಕ್ಯಾಂಪ್ ಮೇಲಿನ ದಾಳಿಯ ರೂವಾರಿಯಾಗಿದ್ದ ಎನ್ನಲಾಗಿದೆ. ಇದೀಗ ಸೈಫುಲ್ಲಾ ಖಾಲಿದ್ ನನ್ನು ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಮನೆಯ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈಯಲಾಗಿದೆ ಎಂದು ಬಲ್ಲಮೂಲಗಳಿಂದ ತಿಳಿದು ಬಂದಿದೆ.

Read More

ಬೆಳಗಾವಿ : ಈಗಾಗಲೇ ಸಚಿವ ಸಂಪುಟ ವಿಸ್ತರಣೆಯಾದರೆ ಕಾಂಗ್ರೆಸ್ ಕೆಲವು ಆಕಾಂಕ್ಷಿಗಳು ನನಗೆ ಸಚಿವ ಸ್ಥಾನ ಸಿಗುತ್ತದೆ ನನಗೆ ಮಂತ್ರಿ ಸ್ಥಾನ ಸಿಗುತ್ತದೆ ಎಂದು ಬಹಿರಂಗವಾಗಿ ಹೇಳಿಕೆ ನೀಡುತ್ತಿದ್ದಾರೆ. ಈಗಾಗಲೇ ಶಾಸಕರಾದ ಕೆಎಮ್ ಶಿವಲಿಂಗೇಗೌಡ ಹಾಗೂ ಉಪ ಸಭಾಪತಿ ರುದ್ರಪ್ಪ ಲಮಾಣಿ ನಮಗೂ ಸಚಿವರಾಗುವ ಆಸೆ ಇದೆ ಎಂದು ಹೇಳಿಕೆ ನೀಡಿದ್ದಾರೆ. ಇದರ ಮಧ್ಯ ಸಚಿವ ಸತೀಶ್ ಜಾರಕಿಹೊಳಿ ಸಚಿವ ಸಂಪುಟ ವಿಸ್ತರಣೆ ಆದರೆ ಹೊಸ ಲೀಡರ್ ಶಿಪ್ ಬೆಳೆಯುತ್ತೆ ಎಂದು ತಿಳಿಸಿದರು. ಬೆಳಗಾವಿಯಲ್ಲಿ ಮಾತನಾಡಿದ ಅವರು, ಡಿಸೆಂಬರ್ ನಲ್ಲಿ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಡಿಸೆಂಬರ್ ಇನ್ನು ಬಹಳ ದೂರವಿದೆ ಸಚಿವ ಸಂಪುಟ ವಿಸ್ತರಣೆ ಆದಾಗ ನೋಡೋಣ. 30 ತಿಂಗಳ ಬಳಿಕ ಸಚಿವರಾಗಬೇಕು ಎಂದು ಬಹಳಷ್ಟು ಶಾಸಕರ ಒತ್ತಾಸೆ ಇದೆ. ಸಚಿವ ಸಂಪುಟ ವಿಸ್ತರಣೆ ಆದರೆ ಒಳ್ಳೆಯದು ಎಲ್ಲರಿಗೂ ಅವಕಾಶ ಸಿಗುತ್ತದೆ ಎಂದರು. ಈ ಬಗ್ಗೆ ನಿರ್ಧಾರ ಮಾಡಲು ಹೈಕಮಾಂಡ್ ಇದ್ದಾರೆ. ಸಂಪುಟ ವಿಸ್ತರಣೆ ಬಗ್ಗೆ ನಮ್ಮ ಮಟ್ಟದಲ್ಲಿ ಇಲ್ಲ.…

Read More