Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಗೌರಿಬಿದನೂರು : ಜೂ.11: ಕುಸುಮ್- ಸಿ ಯೋಜನೆಯಿಂದಾಗಿ ರೈತರ ಕೃಷಿ ಪಂಪ್ಸೆಟ್ಗಳಿಗೆ ಇನ್ನು ಮುಂದೆ ಹಗಲಿನ ವೇಳೆಯೇ 7 ಗಂಟೆಗಳ ಕಾಲ ಸಮರ್ಪಕ ವಿದ್ಯುತ್ ಪೂರೈಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂಧನ ಇಲಾಖೆ ಮತ್ತು ಬೆಸ್ಕಾಂ ವತಿಯಿಂದ ತೊಂಡೇಬಾವಿ ಹೋಬಳಿ ಹನುಮೇನಹಳ್ಳಿಯಲ್ಲಿ ಸ್ಥಾಪಿಸಿರುವ ಸೋಲಾರ್ ಘಟಕವನ್ನು ಬುಧವಾರ ಲೋಕಾರ್ಪಣೆಗೊಳಿಸಿದ ಬಳಿಕ ಪಟ್ಟಣದ ನೇತಾಜಿ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಮಾತನಾಡಿದ ಅವರು, “ರೈತರಿಗೆ ಹಗಲು ವೇಳೆ ಸಮರ್ಪಕ ವಿದ್ಯುತ್ ಪೂರೈಸುವುದೇ ಕುಸುಮ್- ಸಿ ಯೋಜನೆಯ ಉದ್ದೇಶವಾಗಿದೆ,” ಎಂದರು. “ಕುಸುಮ್- ಸಿ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿತ್ತು. 2021ರಲ್ಲಿ ರಾಜ್ಯದಲ್ಲೂ ಇದನ್ನು ಜಾರಿಗೊಳಿಸುವ ಸಂಬಂಧ ಆಗಿನ ಬಿಜೆಪಿ ಸರ್ಕಾರ ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಂಡಿತ್ತು. ಆದರೆ, ನಂತರ 2 ವರ್ಷ ಅಧಿಕಾರದಲ್ಲಿದ್ದರೂ ಯೋಜನೆ ಜಾರಿಗೊಳಿಸುವ ಪ್ರಯತ್ನ ಮಾಡಲಿಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಕೆ.ಜೆ.ಜಾರ್ಜ್ ಅವರು ಸಚಿವರಾದ ಮೇಲೆ ರಾಜ್ಯದಲ್ಲಿ ಕುಸುಮ್- ಸಿ ಯೋಜನೆ ಅನುಷ್ಠಾನ ಆರಂಭಿಸಲಾಯಿತು,” ಎಂದರು. “ಕುಸುಮ್-ಸಿ…
ಬೆಂಗಳೂರು : ಬೆಂಗಳೂರಿನಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಕೆಎಸ್ಆರ್ಟಿಸಿ ಬಸ್ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸಾವನಪ್ಪಿದ್ದಾರೆ. ರಾಜಕುಮಾರ್ ರಸ್ತೆಯ ಪಂಜಾಬ್ ನ್ಯಾಷನಲ್ ಬ್ಯಾಂಕ್ ಬಳಿ ನಿನ್ನೆ ಸಂಜೆ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಮೃತ ಬೈಕ್ ಸವಾರರನ್ನು ನಿವೃತ್ತ ಸಿ ಎ ಆರ್ ಸಿಬ್ಬಂದಿ ಹನುಮಂತರಾಯಪ್ಪ (71) ಎಂದು ತಿಳಿದುಬಂದಿದೆ. ಹನುಮಂತರಾಯಪ್ಪ ಬಾಗಲಕುಂಟೆಯಿಂದ ಕೆಲಸದ ನಿಮಿತ್ಯ ರಾಜಾಜಿನಗರಕ್ಕೆ ಬಂದಿದ್ದರು. ನಿನ್ನೆ ಸಂಜೆ 4:30ಗೆ ಹನುಮಂತರಾಯಪ್ಪ ಬೈಕ್ ನಲ್ಲಿ ಮನೆಗೆ ಹೋಗುತ್ತಿದ್ದರು. ಈ ವೇಳೆ ಪಕ್ಕದಲ್ಲಿ ಹೋಗುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಕೆಳಗೆ ಸಿಲುಕಿ ಬಿದ್ದಿದ್ದಾರೆ. ಗಾಯಗೊಂಡಿದ್ದ ಹನುಮಂತ ರಾಯಪ್ಪನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗಿದೆ ಹನುಮಂತ ರಾಯಪ್ಪ ಸಾವನ್ನಪ್ಪಿದ್ದಾರೆ. ರಾಜಾಜಿನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಬೆಂಗಳೂರು : 18 ವರ್ಷಗಳ ಬಳಿಕ ಚೊಚ್ಚಲ ಐಪಿಎಲ್ ಟ್ರೋಫಿ ಗೆದ್ದ ಆರ್ಸಿಬಿ ತಂಡದ ಆಟಗಾರರಿಗೆ ಬೆಂಗಳೂರಿನ ವಿಧಾನಸೌಧದ ಬಳಿ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಕಳೆದ ಜೂನ್ 4ರಂದು ಈ ಒಂದು ಸಮಾರಂಭ ವೇಳೆ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ್ದರು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಹೈ ಕೋರ್ಟ್ ಸ್ವಯಂ ಪ್ರೇರಿತವಾಗಿ ಪಿಐಎಲ್ ವಿಚಾರಣೆ ನಡೆಸಲಿದೆ. ಹೌದು ಕಾಲ್ತುಳಿತ ಪ್ರಕರಣದಲ್ಲಿ 11 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಹೈಕೋರ್ಟ್ ಸ್ವಯಂ ಪ್ರೇರಿತ ಪಿಐಎಲ್ ವಿಚಾರಣೆ ನಡೆಸಲಿದೆ ನ್ಯಾ.ವಿ ಕಾಮೇಶ್ವರರಾವ್ ಹಾಗು ನ್ಯಾ. ಸಿಎಂ ಜೋಶಿ ಅವರ ಪೀಠದಲ್ಲಿ ವಿಚಾರಣೆ ನಡೆಯಲಿದೆ. ಸರ್ಕಾರಕ್ಕೆ ಹೈಕೋರ್ಟ್ ಸಾಲು ಸಾಲು ಪ್ರಶ್ನೆ ಕೇಳಿತ್ತು. ಹಾಗಾಗಿ ಇಂದು ಮುಚ್ಚಿದ ಲಕೋಟೆಯಲ್ಲಿ ಸರ್ಕಾರ ಹೈಕೋರ್ಟಿಗೆ ಉತ್ತರ ನೀಡಲಿದೆ. ವಿಜಯೋತ್ಸವ ಆಚರಣೆಗೆ ನಿರ್ಧರಿಸಿದವರು ಯಾರು? ಪ್ರಕ್ರಿಯೆ ಹೇಗಿತ್ತು? ಟ್ರಾಫಿಕ್ ನಿಯಂತ್ರಿಸಲು ಅನುಸರಿಸಿದ ಕ್ರಮಗಳೇನು? ಜನರ ಗುಂಪನ್ನು ನಿಯಂತ್ರಿಸಲು ಕೈಗೊಂಡ ಕ್ರಮಗಳೇನು? ಸ್ಥಳದಲ್ಲಿ ಒದಗಿಸಿದ್ದ ವೈದ್ಯಕೀಯ ಮತ್ತು…
ಬೆಂಗಳೂರು : 2025 ಹೊಸ ವರ್ಷ ಆರಂಭವಾದಾಗಿನಿಂದ ಸರ್ಕಾರ KSRTC ಪ್ರಯಾಣದ ದರ, ಮೆಟ್ರೋ ಟಿಕೆಟ್ ಪ್ರಯಾಣದ ದರ ಹಾಗು ಹಾಲಿನ ದರ ಏರಿಕೆ ಮಾಡಿತ್ತು. ಇದೀಗ ಬೆಂಗಳೂರು ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರದಲ್ಲೇ ಆಟೋ ಪ್ರಯಾಣದ ದರ 18 ರೂಪಾಯಿಗೆ ಏರಿಕೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಹೌದು ರಾಜ್ಯದ ಜನತೆ ಹಲವು ಬೆಲೆ ಏರಿಕೆಗಳಿಂದ ತತ್ತರಿಸಿರುವ ನಡುವೆಯೇ ಆಟೋ ಪ್ರಯಾಣ ದರ ಕೂಡ ಏರಿಕೆಯಾಗುವ ಸಾಧ್ಯತೆಯಿದೆ. ಆಟೋರಿಕ್ಷಾ ದರವು ಈಗಿರುವ 30 ರೂ.ಗಳಿಂದ 36 ರೂ.ಗಳಿಗೆ ಮತ್ತು ನಂತರದ ಪ್ರತಿ ಕಿಲೋಮೀಟರ್ ಶುಲ್ಕವು 15 ರೂ.ಗಳಿಂದ 18 ರೂ.ಗಳಿಗೆ ಏರಿಕೆಯಾಗುವ ನಿರೀಕ್ಷೆಯಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಬೆಂಗಳೂರು ನಗರ ಡಿಸಿ ಕಚೇರಿಯ ಮೂಲಗಳ ಪ್ರಕಾರ, ಪರಿಷ್ಕೃತ ದರಗಳು ರೂ 36 ಮತ್ತು ರೂ 18 ಆಗಿದ್ದು, ಬೆಂಗಳೂರು ನಗರ ಡಿಸಿ ಜಗದೀಶ ಜಿ ಅವರ ಅನುಮೋದನೆಗಾಗಿ ಕಾಯುತ್ತಿವೆ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತದ ತನಿಖೆಯ…
ಬೆಂಗಳೂರು : ಬಿಗ್ ಬಾಸ್ ಕನ್ನಡ ಸೀಸನ್ 11 ರಲ್ಲಿ ವೀಕ್ಷಕರು ಅಂದುಕೊಂಡತೇ ಹನುಮಂತ ಗೆದ್ದು ಬೀಗಿದ್ದಾನೆ. ತ್ರಿವಿಕ್ರಮ್ ರನ್ನರ್ ಅಪ್ ಆಗಿದ್ದಕ್ಕೆ ಖುಷಿಯಾಗಿದ್ದಾರೆ. ಎಲ್ಲ ಖುಷಿ ಖುಷಿಯಾಗಿರುವಾಗಲೇ ಕಿಚ್ಚ ಸುದೀಪ್ ಅಭಿಮಾನಿಗಳು ಮಾತ್ರ ಬೇಸರದಲ್ಲಿದ್ದಾರೆ. ಈ ಹಿಂದೆ ಕಿಚ್ಚ ಸುದೀಪ್ ಬಿಗ್ ಬಾಸ್ ನಿರೂಪಣೆ ಮಾಡುವುದು ಇದೇ ಕೊನೆ ಎಂದು ಈಗಾಗಲೇ ಹೇಳಿದ್ದಾರೆ. ಹೌದು ಬಿಗ್ ಬಾಸ್ 11 ಸೀಸನ್ ಬಳಿಕ ಕಿಚ್ಚ ಸುದೀಪ್ ಅವರು ವಿದಾಯ ಹೇಳಿದ್ದು, ಅಭಿಮಾನಿಗಳು ತೀವ್ರ ನೋವಿನಲ್ಲಿದ್ದಾರೆ. ಕಿಚ್ಚ ಸುದೀಪ್ ಅವರೇ ನಿರೂಪಣೆ ಮಾಡ್ಬೇಕು ಎಂದು ಅಭಿಮಾನಿಗಳು ಬಹಿರಂಗವಾಗಿ ಹೇಳಿಕೆ ನೀಡಿದ್ದು, ಇದೀಗ ಬಿಗ್ ಬಾಸ್ ಕನ್ನಡ 12 ಶೋ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ಆರಂಭವಾಗಿದೆ. ಕಲರ್ಸ್ ಕನ್ನಡ ಫಿನಾಲೆಯಲ್ಲಿದ್ದ ಮೊದಲ ಮೂವರು ಸ್ಪರ್ಧಿಗಳನ್ನು ಇಟ್ಟುಕೊಂಡು ಪತ್ರಿಕಾಗೋಷ್ಠಿಯನ್ನು ನಡೆಸಿತ್ತು. ಅದರಲ್ಲಿ ಮುಂದಿನ ಸೀಸನ್ಗೆ ಯಾರು ಹೋಸ್ಟ್ ಅನ್ನೋ ಚಿಕ್ಕದೊಂದು ಸುಳಿವನ್ನು ಬಿಟ್ಟುಕೊಟ್ಟಿದ್ದಾರೆ. ಮುಂದಿನ ಸೀಸನ್ ಬಗ್ಗೆ ಕಲರ್ಸ್ ಕನ್ನಡ ಕೊಟ್ಟ ಸುಳಿವು ನೀಡಿತ್ತು.…
ಚಿಕ್ಕಬಳ್ಳಾಪುರ : ಮೋದಿ ಆಡಳಿತದಲ್ಲಿ ದೇಶದಲ್ಲಿ ಬಡತನ ಕಡಿಮೆಯಾಗಿದೆ ಎಂಬ ವರದಿಯ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಬಡತನ ಅವರಿಂದ ಕಡಿಮೆಯಾಗಿಲ್ಲ. ಬಡತನ ಹೋಗಲಾಡಿಸಲು ಅವರೇನು ಮಾಡಿದ್ದಾರೆ? ಗರೀಬಿ ಹಟಾವೋ ಸೇರಿದಂತೆ ಹಲವಾರು ಕಾರ್ಯಕ್ರಮಗಳಿಂದ ಬಡತನ ಕಡಿಮೆಯಾಗಿದೆ ಎಂದು ತಿಳಿಸಿದರು. ಇಂದು ಗೌರಿಬಿದನೂರಿನ ಬೊಮ್ಮಸಂದ್ರ ಗ್ರಾಮ ಹೆಲಿಪ್ಯಾಡ್ ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ವತಿಯಿಂದ ಮುಖ್ಯಮಂತ್ರಿಗಳ ರಾಜೀನಾಮೆ ಒತ್ತಾಯಿಸಿ ಪ್ರತಿಭಟನೆ ಕೈಗೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಕುಂಭ ಮೇಳದಲ್ಲಿ 40-50 ಜನ ಕಾಲ್ತುಳಿತದಲ್ಲಿ ಸತ್ತರು. ಆಗ ಅಲ್ಲಿನ ಮುಖ್ಯಮಂತ್ರಿಗಳ ರಾಜೀನಾಮೆ ಕೇಳಿದರೇ? ಸೇತುವೆಯೊಂದು ಉದ್ಘಾಟನೆಯಾದ ದಿನವೇ ಬಿದ್ದು 140 ಜನ ಸತ್ತರು ಆಗ ಪ್ರಧಾನಿಗಳ ರಾಜಿನಾಮೆ ಕೇಳಿದರೇ? ಎಂದು ಪ್ರಶ್ನಿಸಿದರು. ಗೋಧ್ರಾ ಹತ್ಯಾಕಾಂಡದಲ್ಲಿ ಎಷ್ಟು ಜನ ಸತ್ತರು. ಆಗ ಗುಜರಾತ್ ಮುಖ್ಯಮಂತ್ರಿಗಳು ಯಾರಾಗಿದ್ದರು? ಅವರ ರಾಜಿನಾಮೆ ಕೇಳಿದರೇ? ಕೋವಿಡ್ ಸಂದರ್ಭದಲ್ಲಿ ಆಕ್ಸಿಜನ್ ಸರಬರಾಜು ಮಾಡದೇ 23 ಜನ ಸತ್ತಾಗ ಬಸವರಾಜ ಬೊಮ್ಮಾಯಿ ರಾಜಿನಾಮೆ ನೀಡಿದರೆ ಎಂದು ಮುಖ್ಯಮಂತ್ರಿಗಳು…
ಚಿಕ್ಕಬಳ್ಳಾಪುರ : ಜೂನ್ 11: ಬಿಜೆಪಿಯವರಿಗೆ ಸುಳ್ಳು ಹೇಳಿ ಜನರ ದಾರಿ ತಪ್ಪಿಸುವುದು ಮತ್ತು ರಾಜಕೀಯವಾಗಿ ರಾಜೀನಾಮೆ ಕೇಳುವುದು ಅಭ್ಯಾಸವಾಗಿದೆ. ಬಿಜೆಪಿ ಎಲ್ಲದರಲ್ಲೂ ರಾಜಕೀಯ ಮಾಡೇ ಮಾಡುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಗೌರಿಬಿದನೂರಿನ ಬೊಮ್ಮಸಂದ್ರ ಗ್ರಾಮ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿ ವತಿಯಿಂದ ಮುಖ್ಯಮಂತ್ರಿಗಳ ರಾಜೀನಾಮೆ ಒತ್ತಾಯಿಸಿ ಪ್ರತಿಭಟನೆ ಕೈಗೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಕುಂಭ ಮೇಳದಲ್ಲಿ 40-50 ಜನ ಕಾಲ್ತುಳಿತದಲ್ಲಿ ಸತ್ತರು. ಆಗ ಅಲ್ಲಿನ ಮುಖ್ಯಮಂತ್ರಿಗಳ ರಾಜೀನಾಮೆ ಕೇಳಿದರೇ? ಎಂದು ಪ್ರಶ್ನಿಸಿದರು. ಸೇತುವೆಯೊಂದು ಉದ್ಘಾಟನೆಯಾದ ದಿನವೇ ಬಿದ್ದು 140 ಜನ ಸತ್ತರು ಆಗ ಪ್ರಧಾನಿಗಳ ರಾಜಿನಾಮೆ ಕೇಳಿದರೇ ? ಗೋಧ್ರಾ ಹತ್ಯಾಕಾಂಡದಲ್ಲಿ ಎಷ್ಟು ಜನ ಸತ್ತರು. ಆಗ ಗುಜರಾತ್ ಮುಖ್ಯಮಂತ್ರಿಗಳು ಯಾರಾಗಿದ್ದರು? ಅವರ ರಾಜಿನಾಮೆ ಕೇಳಿದರೇ? ಕೋವಿಡ್ ಸಂದರ್ಭದಲ್ಲಿ ಆಕ್ಸಿಜನ್ ಸರಬರಾಜು ಮಾಡದೇ 23 ಜನ ಸತ್ತಾಗ ಬಸವರಾಜ ಬೊಮ್ಮಾಯಿ ರಾಜಿನಾಮೆ ನೀಡಿದರೆ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು. ಬಿಜೆಪಿಯವರು ರಾಜಕೀಯವಾಗಿ ರಾಜಿನಾಮೆ ಕೊಡಿ…
ಹೈದ್ರಾಬಾದ್ : ಖ್ಯಾತ ಗಾಯಕಿ ಮಂಗ್ಲಿ ಅವರ ಹುಟ್ಟು ಹಬ್ಬದ ಪಾರ್ಟಿ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಪಾರ್ಟಿಯಲ್ಲಿ ಮಾದಕ ದ್ರವ್ಯ ಸೇವನೆ ಹಾಗೂ ವಿದೇಶಿ ಮದ್ಯ, ಗಾಂಜಾ ಸೇವನೆ ಮಾಡುತ್ತಿರುವ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ಮಾಡಿದ್ದಾರೆ. ಹೌದು ಮಂಗ್ಲಿ ಹುಟ್ಟು ಹಬ್ಬದ ಪಾರ್ಟಿಯ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಹೈದರಾಬಾದ್ ನಲ್ಲಿ ದಾಳಿ ಮಾಡಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಮಂಗ್ಲಿ ಬರ್ತ್ಡೇ ಹಿನ್ನೆಲೆ ಹಲವರಿಗೆ ಮಾದಕ ದ್ರವ್ಯ ಪಾರ್ಟಿ ಆಯೋಜನೆ ಮಾಡಲಾಗಿದ್ದು, ಚೆವೆಲ್ಲ ತ್ರಿಪುರ ರೆಸಾರ್ಟ್ ನಲ್ಲಿ ಮಂಗ್ಲಿ ಬರ್ತಡೇ ಪಾರ್ಟಿ ನಡೆಯುತ್ತಿತ್ತು ಹಲವರು ಗಾಂಜಾ ಸೇವನೆ ಮಾಡಿರುವುದು ಬಯಲಾಗಿದೆ. ಅಲ್ಲದೇ ವಿದೇಶಿ ಮದ್ಯವನ್ನು ಪೊಲೀಸರು ವಶಕೆಕ್ ಪಡೆದುಕೊಂಡಿದ್ದಾರೆ.
ಬಳ್ಳಾರಿ : ಬಳ್ಳಾರಿ ಚುನಾವಣೆ ಬರೋಬ್ಬರಿ 21 ಕೋಟಿ ರೂ. ಬಳಕೆ ಮಾಡಿದ ಆರೋಪದಲ್ಲಿ ಕಾಂಗ್ರೆಸ್ ಸಂಸದ ಇ ತುಕರಾಂ ಅವರನ್ನು ಇಡಿ ವಶಕ್ಕೆ ಪಡೆದುಕೊಂಡಿದೆ. ಇಂದು ಬೆಳಿಗ್ಗೆಯೇ ಇಡಿ ಅಧಿಕಾರಿಗಳು ಸಂಸದರ ಮನೆ ಮೇಲೆ ದಾಳಿ ನಡೆಸಿದ್ದಾರೆ. ಚುನಾವಣೆ ವೇಳೆ ಭಾರೀ ಹಣ ಖರ್ಚು ಮಾಡಿರುವ ಆರೋಪದ ಮೇಲೆ ಇ ತುಕರಾಂ ನಿವಾಸ, ಕಚೇರಿ ಮೇಲೆ ಇಡಿ ಅಧಿಕಾರಿಗಳು ಇಂದು ದಾಳಿ ನಡೆಸಿದ್ದರು. ಇನ್ನು ಕಾಂಗ್ರೆಸ್ ಶಾಸಕರಾದ ನಾರಾ ಭರತ್ ರೆಡ್ಡಿ, ಗಣೇಶ್ (ಕಂಪ್ಲಿ ಕ್ಷೇತ್ರ), ಶ್ರೀನಿವಾಸ್ ಅವರ ಮನೆ ಮೇಲೂ ಇ.ಡಿ ದಾಳಿ ಮಾಡಿದೆ. ಮಾಜಿ ಸಚಿವ ನಾಗೇಂದ್ರ ಅವರ ಪಿಎ ಗೋವರ್ಧನ್ ಮನೆ ಮೇಲೂ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದೆ. ಲೋಕಸಭಾ ಚುನಾವಣೆಗೆ ವಾಲ್ಮೀಕಿ ನಿಗಮದ ಹಣ ಬಳಕೆಯಾಗಿದೆ ಎಂಬ ಆರೋಪದ ಹಿನ್ನೆಲೆ ಶೋಧ ನಡೆದಿದೆ. ಅಧಿಕಾರಿಗಳು ದಾಖಲೆಗಳನ್ನ ಪರಿಶೀಲನೆ ಮಾಡುತ್ತಿದ್ದಾರೆ.
ವಿಜಯಪುರ : ವಿಜಯಪುರದಲ್ಲಿ ಇಂದು ಘೋರವಾದ ದುರಂತ ಒಂದು ಸಂಭವಿಸಿದ್ದು, ಸಮಾಜ ಕಲ್ಯಾಣ ಇಲಾಖೆಯ ಮಹಿಳಾ ಅಧಿಕಾರಿಕೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹತ್ಯೆಗೆ ಯತ್ನಿಸಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಟಿಪ್ಪು ಸುಲ್ತಾನ್ ವೃತ್ತದಲ್ಲಿ ನಡೆದಿದೆ.ಇದೀಗ ವಿಜಯಪುರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೇಣುಕಾ ಸಾವನ್ನಪ್ಪಿದ್ದಾರೆ. ಹೌದು ಚಾಕುವಿನಿಂದ ಇರಿದು ಮಹಿಳಾ ಅಧಿಕಾರಿ ಹತ್ಯೆಗೆ ಯತ್ನಿಸಲಾಗಿದ್ದು, ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಟಿಪ್ಪು ಸುಲ್ತಾನ ವೃತ್ತದಲ್ಲಿ ಈ ಒಂದು ಘಟನೆ ನಡೆದಿದೆ. ಚಾಕುವಿನಿಂದ ಇರಿದು ರೇಣುಕಾ ಸಾಯಬಣ್ಣ ಕನ್ನೊಳ್ಳಿ (30) ಎನ್ನುವ ಮಹಿಳಾ ಅಧಿಕಾರಿಯ ಹತ್ಯೆಗೆ ಯತ್ನಿಸಲಾಗಿದೆ. ರೇಣುಕಾ ಕನ್ನೊಳ್ಳಿ ಇಂಡಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಯಾಗಿದ್ದಾರೆ. ರೇಣುಕಾ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಆರೋಪಿ ಸಂಜು ಬನಸೋಡೆ ಎಂಬಾತ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದಾನೆ ಹಲ್ಲೆಗೆ ಒಳಗಾದಂತಹ ರೇಣುಕಾ ಇಂಡಿ ತಾಲೂಕಿನ ಕೋಟ್ನಾಳ ನಿವಾಸಿ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ರೇಣುಕಾ ಅವರನ್ನು ತಕ್ಷಣ ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.…












