Subscribe to Updates
Get the latest creative news from FooBar about art, design and business.
Author: kannadanewsnow05
ವಿಜಯಪುರ : ವಿಡಿಯೋ ಕಾಲ್ ಮೂಲಕ ಆನ್ಲೈನಲ್ಲಿ ಹಣಕ್ಕೆ ಬೇಡಿಕೆ ಇಟ್ಟಿದ್ದು ಅಲ್ಲದೆ, ಬೆದರಿಕೆ ಹಾಕಿ ವಂಚನೆಗೆ ಯತ್ನಿಸಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ವಿಜಯಪುರದ ಸಂತೋಷಗೆ ಚೌಧರಿಗೆ ಮುಂಬೈನ ಕ್ರೈಂ ಬ್ರಾಂಚ್ ನ ನಕಲಿ ಪೊಲೀಸ್ ವಿರುದ್ಧ ಇದೀಗ ದೂರು ದಾಖಲಾಗಿದೆ. ವಿಜಯಪುರ ನಗರದ ಸಂತೋಷ್ ಚೌಧರಿಗೆ ವಿಡಿಯೋ ಕಾಲ್ ಮಾಡಿ ಆನ್ ಲೈನ್ ವಂಚನೆಗೆ ಯತ್ನ ನಡೆಸಿರುವ ಆರೋಪ ಕೇಳಿಬಂದಿದ್ದು, ಸಂತೋಷ್ಗೆ ವಿಡಿಯೋ ಕಾಲ್ ಮಾಡಿದ್ದ ನಕಲಿ ಪೊಲೀಸ್ ಅಧಿಕಾರಿ ಹಣಕ್ಕೇ ಬೇಡಿಕೆ ಇಟ್ಟಿದ್ದಾನೆ ಎಂದು ಸಂತೋಷ್ ಆರೋಪಿಸಿದ್ದಾರೆ. ಅಲ್ಲದೆ ವಿಡಿಯೋ ಕರೆ ಸ್ಕ್ರೀನ್ ರೆಕಾರ್ಡ್ ಮಾಡಿದ್ದಾನೆ. ನಿಮ್ಮ ಮೊಬೈಲ್ ನಂಬರ್ ವಿರುದ್ಧ 17 ಕೇಸ್ ದಾಖಲಾಗಿವೆ. ವಿಚಾರಣೆಗೆ ಹಾಜರಾಗಲು ಮುಂಬೈಗೆ ಬನ್ನಿ ಎಂದು ವಂಚಕ ಸಂತೋಷ್ ಚೌದರಿಗೆ ಹೇಳಿದ್ದಾನೆ.ಅಶ್ಲೀಲವಾಗಿ ನಿಂದಿಸಿ ನಕಲಿ ಪೊಲೀಸ್ ಅಧಿಕಾರಿ ಸಂತೋಷ್ಗೆ ಬೆದರಿಕೆ ಹಾಕಿದ್ದಾನೆ. ಆಧಾರ್ ನಂಬರ್ ಕೆಲ ಓಟಿಪಿ ಪಡೆಯಲು ವಂಚಕ ಯತ್ನಿಸಿದ್ದಾನೆ. ಕ್ರೈಂ ಬ್ಯಾಂಚ್ ಪೊಲೀಸರ ಯೂನಿಫಾರ್ಮ್ ನಲ್ಲಿ ಕಾಲ್ ಮಾಡಿದ್ದ…
ಹುಬ್ಬಳ್ಳಿ : ಒಂದು ಕಡೆ ರಾಜ್ಯದಲ್ಲಿ ನಾಗಮಂಗಲ ಗಲಭೆ ಭಾರಿ ಸದ್ದು ಮಾಡುತ್ತಿದ್ದು, ಇನ್ನೊಂದೆಡೆ ಹುಬ್ಬಳ್ಳಿಯಲ್ಲಿ ಹಿಂದೂ ಸ್ಮಶಾನದ ಕಂಪೌಂಡ್ ಒಡೆದು ಹಾಕಿ ಇಂದಿರಾ ಕ್ಯಾಂಟೀನ್ ನಿರ್ಮಾಣ ಮಾಡಿದ್ದಾರೆ ಎಂದು ಶ್ರೀ ರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಆಕ್ರೋಶ ಹೊರಹಕಿದ್ದಾರೆ. ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದೂ ಸ್ಮಶಾನ ಕಾಂಪೌಂಡ್ ಒಡೆದು ಇಂದಿರಾ ಕ್ಯಾಂಟೀನ್ ನಿರ್ಮಾಣ ಮಾಡಲಾಗಿದೆ. ಹುಬ್ಬಳ್ಳಿಯ ಮಂಟೂರು ರಸ್ತೆಯಲ್ಲಿರುವ ಹಿಂದೂ ಸ್ಮಶಾನದ ಕಾಂಪೌಂಡ್ ಒಡೆದು ಇಂದಿರಾ ಕ್ಯಾಂಟೀನ್ ನಿರ್ಮಾಣ ಮಾಡಲಾಗಿದೆ ಎಂದು ಶಾಸಕ ಪ್ರಸಾದ್ ಅಭಯ ವಿರುದ್ಧ ಇಂದಿರಾ ಕ್ಯಾಂಟೀನ್ ನಿರ್ಮಾಣದ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರ ಇದೆ ಎಂದು ಶಾಸಕ ಅಬ್ಬಯ್ಯ ದರ್ಪ ತೋರಿದ್ದಾರೆ. ಎರಡೇ ದಿನದಲ್ಲಿ ರಾತ್ರೋರಾತ್ರಿ ಇಂದಿರಾ ಕ್ಯಾಂಟೀನ್ ಕಟ್ಟಿದ್ದಾರೆ.ಕೂಡಲೇ ಕ್ಯಾಂಟೀನ್ ಕಟ್ಟಡ ಸ್ಥಳಾಂತರ ಮಾಡುವಂತೆ ಆಗ್ರಹಿಸುತ್ತಿದ್ದು, ಇಲ್ಲದಿದ್ದರೆ ನಾವೇ ಇಂದಿರಾ ಕ್ಯಾಂಟೀನ್ ತೆರವು ಮಾಡುತ್ತೇವೆ ಎಂದು ಹುಬ್ಬಳ್ಳಿಯಲ್ಲಿ ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಆಗ್ರಹ ಮಾಡಿದರು.
ಬೆಂಗಳೂರು : ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹೈಕೋರ್ಟ್ ಮತ್ತೆ ನಾಲ್ವರು ಆರೋಪಿಗಳಿಗೆ ಷರತ್ತು ಬದ್ಧ ಜಾಮೀನು ನೀಡಿದೆ. ಆ ಮೂಲಕ 18 ಆರೋಪಿಗಳ ಪೈಕಿ ಒಟ್ಟು 8 ಆರೋಪಿಗಳಿಗೆ ಜಾಮೀನು ನೀಡಿದಂತಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇದೇ ಆರೋಪದ ಮೇಲೆ ಇತ್ತೀಚಿಗೆ ಅಮಿತ್ ದಿಗ್ವೇಕರ್, ಹೆಚ್ ಎಲ್ ಸುರೇಶ್, ಎನ್ ಮೋಹನ್ ನಾಯಕ್ ಮತ್ತು ಕೆ ಟಿ ನವೀನ್ ಕುಮಾರ್ ಜಾಮೀನು ಪಡೆದಿದ್ದರು. ಇವರ ವಿರುದ್ಧ ಗೌರಿ ಲಂಕೇಶ್ ಕೊಲೆಗೆ ವಾಹನ, ಶಸ್ತ್ರಾಸ್ತ್ರ ಪೂರೈಕೆ ಇತ್ಯಾದಿ ಮೂಲಕ ಪಿತೂರಿ ನಡೆಸಿರುವ ಆರೋಪವಿತ್ತು. ಇದೀಗ ಪ್ರಕರಣದಲ್ಲಿ 6ನೇ ಆರೋಪಿಯಾಗಿರುವ ಬೆಳಗಾವಿಯ ಭರತ್ ಜಯವಂತ್ ಕುರಾನೆ, 9ನೇ ಆರೋಪಿ ಮಹಾರಾಷ್ಟ್ರದ ಸತಾರದ ಸುಧನ್ವ ಗೊಂಧಾಲೇಕರ್, 13ನೇ ಆರೋಪಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಸುಜಿತ್ ಕುಮಾರ್, 16ನೇ ಆರೋಪಿ ಮಹಾರಾಷ್ಟ್ರದ ಔರಂಗಾಬಾದ್ನ ಶ್ರೀಕಾಂತ್ ಪಂಗಾರ್ಕರ್ ಸಲ್ಲಿಸಿದ್ದ ಜಾಮೀನು ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕ…
ಬೆಂಗಳೂರು : ಇತ್ತೀಚಿಗೆ ರೇಣುಕಾಸ್ವಾಮಿ ಕೊಲೆ ಆರೋಪಿಯಾಗಿರುವ ದರ್ಶನ್ ಗೆ ರಾಜಾತಿಥ್ಯ ನೀಡಿದಂತ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಇದೀಗ ಸಿಸಿಬಿ ಅಧಿಕಾರಿಗಳು ಮತ್ತೊಮ್ಮೆ ದಾಳಿ ಮಾಡಿದ್ದು, ದಾಳಿಯ ವೇಳೆ ಮೊಬೈಲ್, ಡ್ರಗ್ಸ್, ಸೇರಿದಂತೆ ಹಲವು ವಸ್ತುಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ದರ್ಶನ್ ಗೆ ರಾಜಾತಿಥ್ಯ ನೀಡಿದ ವಿಚಾರಕ್ಕೇ ಸಂಬಂಧಪಟ್ಟಂತೆ ccb ಅಧಿಕಾರಿಗಳು ಜೈಲಿನ ಮೇಲೆ ದಾಳಿ ಮಾಡಿದ್ದಾರೆ.ಇದೇ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದು, ಜೈಲಿನ ಮೇಲೆ ನಿನ್ನೆ ಮತ್ತೊಮ್ಮೆ ದಾಳಿ ನಡೆಸಿದ್ದಾರೆ. ಈ ದಾಳಿ ವೇಳೆ ವಿಲ್ಸನ್ ಗಾರ್ಡನ್ ನಾಗನ ಬಳಿ ಇದ್ದ ಮೊಬೈಲ್ ಸೇರಿದಂತೆ ಸುಮಾರು 18 ಮೊಬೈಲ್ ಸೀಜ್ ಆಗಿದೆ. ಇಷ್ಟಲ್ಲದೇ ಡ್ರಗ್ಸ್ ಮತ್ತು ಹಣ ಕೂಡ ಸಿಕ್ಕಿದೆ. ದಾಳಿ ವೇಳೆ 1.3 ಲಕ್ಷ ಮೌಲ್ಯದ ಸ್ಯಾಮ್ಸಂಗ್ ಫೋನ್ಗಳು, ಏಳು ಎಲೆಕ್ಟ್ರಿಕ್ ಸ್ಟವ್ಗಳು, ಐದು ಚಾಕುಗಳು, ಮೂರು ಮೊಬೈಲ್ ಫೋನ್ ಚಾರ್ಜರ್ಗಳು, ಎರಡು ಪೆನ್ ಡ್ರೈವ್ಗಳು, 36,000 ರೂಪಾಯಿ ನಗದು, ಸಿಗರೇಟ್, ಬೀಡಿ ಮತ್ತು ಬೆಂಕಿಕಡ್ಡಿ…
ಗದಗ : ಕಳೆದ ಕೆಲವು ದಿನಗಳ ಹಿಂದೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಾಟೆ ಪ್ರಕರಣ ಮಾಸುವ ಮುನ್ನವೇ, ಇದೀಗ ಗದಗದಲ್ಲಿ ಎರಡು ಗುಂಪುಗಳ ನಡುವೆ ಪಟಾಕಿ ಹಚ್ಚುವ ವಿಚಾರಕ್ಕೆ ಗಲಾಟೆ ನಡೆದಿದ್ದು, ಗಲಾಟೆ ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿರುವ ಘಟನೆ ನಡೆದಿದೆ. ಹೌದು ನಿನ್ನೆ ರಾತ್ರಿ ಗದಗ ನಗರದ ಟಾಂಗಾಕೂಟ್ ಸರ್ಕಲ್ನಲ್ಲಿ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ನಡೆದಿದೆ. ಗಲಾಟೆಯನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಪಟಾಕಿ ಹಚ್ಚುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ವಾಗ್ವಾದ ಆರಂಭವಾಗಿದೆ. ವಾಗ್ವಾದ ವಿಕೋಪಕ್ಕೆ ತಿರುಗಿ ಗುಂಪುಗಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ಪೊಲೀಸರು ಮಧ್ಯ ಪ್ರವೇಶಿಸಿ, ತಿಳಿಗೊಳಿಸಲು ಯತ್ನಿಸಿದರು. ಆದರೆ, ಪರಿಸ್ಥಿತಿ ಕೈ ಮೀರಿದಾಗ ಪೊಲೀಸರು ಲಾಠಿ ಚಾರ್ಜ್ ಮಾಡಿದರು. ಲಾಠಿ ಚಾರ್ಜ್ ಮಾಡುತ್ತಿದ್ದಂತೆ ಜನರು ದಿಕ್ಕಾಪಾಲಾಗಿ ಓಡಿದರು. ಗದಗ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಂಗಳೂರು : ರಾಜ್ಯದಲ್ಲಿ ಇದೀಗ ಆರ್.ಆರ್ ನಗರ ಶಾಸಕ ಮುನಿರತ್ನ ಬಂಧನದ ವಿಚಾರ ಭಾರಿ ಸದ್ದು ಮಾಡುತ್ತಿದ್ದು, ಗುತ್ತಿಗೆದಾರನಿಗೆ ಜಾತಿ ನಿಂದನೆ ಮತ್ತು ಜೀವ ಬೆದರಿಕೆ ಹಾಕಿದ ಕೇಸ್ನಲ್ಲಿ ಶಾಸಕ ಮುನಿರತ್ನ ಬಂಧನವಾಗಿದೆ. ಇದರ ಬೆನ್ನಲ್ಲೆ ಇದೀಗ ಮತ್ತೊಂದು ಆಡಿಯೋ ವೈರಲ್ ಆಗಿದೆ ಎಂದು ತಿಳಿದುಬಂದಿದೆ. ಹೌದು ಗುತ್ತಿಗೆದಾರನ ಜೊತೆ ಮಾತನಾಡಿದ್ದಾರೆ ಎನ್ನಲಾದ ಶಾಸಕ ಮುನಿರತ್ನ ಆಡಿಯೋ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಗುತ್ತಿಗೆದಾರನ ದೂರು ಆಧರಿಸಿ, ನಿನ್ನೆ ಸಂಜೆಯೇ ಮುನಿರತ್ನರನ್ನ ಪೊಲೀಸರು ಬಂಧಿಸಿದ್ದರು. ಸದ್ಯ ಇದೆಲ್ಲದರ ಮಧ್ಯೆ ಮತ್ತೊಂದು ಆಡಿಯೋ ವೈರಲ್ ಆಗಿದೆ.ಆದರೆ ವೈರಲ್ ಆಗಿರುವ ಆಡಿಯೋ ಬಗ್ಗೆ ಯಾವುದೇ ಸ್ಪಷ್ಟನೆ ಇಲ್ಲ. ರಾಜರಾಜೇಶ್ವರಿನಗರ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ತಂದೆ ಹನುಮಂತರಾಯಪ್ಪ, ಚಲುವರಾಜು ಮತ್ತು ಸ್ನೇಹಿತನದ್ದು ಎನ್ನಲಾದ ಆಡಿಯೋ ಇದೀಗ ವೈರಲ್ ಆಗಿದೆ.ಈಗಾಗಲೇ ಆಡಿಯೋವನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ. ಆಡಿಯೋದಲ್ಲಿ ಚಲುವರಾಜು ಮತ್ತು ಸ್ನೇಹಿತ ಸಹ ಮಾತಾಡಿರುವುದು ಇದೆ. ಸದ್ಯ ವೈರಲ್ ಆಗಿರುವ ಆಡಿಯೋ ಬಗ್ಗೆ…
ತುಮಕೂರು : ಇಂದು ತುಮಕೂರಿನಲ್ಲಿ ಎರಡು ಪ್ರತ್ಯೇಕ ಅಪಘಾತವಾಗಿದ್ದು, 7 ವರ್ಷದ ಬಾಲಕಿ ಸೇರಿದಂತೆ ಇಬ್ಬರು ಬೈಕ್ ಸವಾರರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೌದು ತುಮಕೂರು ಜಿಲ್ಲೆಯ ಮಧುಗಿರಿ ಹೊರವಲಯದ ಜಡೆಗೊಂಡನಹಳ್ಳಿಯಲ್ಲಿ ಎರಡು ಬೈಕ್ ಗಳ ಮಧ್ಯ ಮುಖಮುಖಿ ಡಿಕ್ಕಿ ಹೊಡೆದ ಪರಿಣಾಮ ಅಪಘಾತದಲ್ಲಿ ತೆರೆಯೂರಿನ ಗೌತಮ್ (26) ಬಂದರೆಯ ಅನಿಲ್ (26) ಸಾವನಪ್ಪಿದ್ದಾರೆ. ಅಪಘಾತದ ಕುರಿತು ತುಮಕೂರು ಜಿಲ್ಲೆಯ ಮಧುಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ಡಿವೈಡರ್ ಗೆ ಹುಂಡೈ ಕಾರು ಡಿಕ್ಕಿ ಹೊಡೆದು ಶಾಲಿನಿ (7) ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ತಾಲೂಕಿನಲ್ಲಿ ಈ ಒಂದು ಅಪಘಾತ ನಡೆದಿದೆ. ಬಸವೇಶ್ (16) ಗೆ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನಲ್ಲಿ ನಡೆದಂತಹ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ, ತೆಲುಗು ನಟಿ ಹೇಮಾ ಅವರನ್ನು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. ಆದರೆ ಇದೀಗ ಪ್ರಕರಣಕ್ಕೆ ಸ್ಪೋಟಕ ತಿರುವು ಸಿಕ್ಕಿದ್ದು, ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿರುವ ಚಾರ್ಜ ಶೀಟ್ ನಲ್ಲಿ ಹೇಮಾ ಮಾದಕ ದ್ರವ್ಯ ಸೇವಿಸಿದ್ದನ್ನು ಉಲ್ಲೇಖಿಸಿದ್ದಾರೆ. ಹೌದು ಬೆಂಗಳೂರು ರೇವ್ ಪಾರ್ಟಿ ಪ್ರಕರಣದ ಬಗ್ಗೆ ಪೊಲೀಸರು ಇತ್ತೀಚೆಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಅದರಲ್ಲಿ ನಟಿ ಹೇಮಾ ಸೇರಿದಂತೆ ಒಟ್ಟು 88 ಮಂದಿಯನ್ನು ಆರೋಪಿಗಳೆಂದು ಹೆಸರಿಸಲಾಗಿದೆ. ಹೇಮಾ ಅವರಿಗೆ ಆಘಾತ ನೀಡುವಂತೆ ಅವರು ಮಾದಕ ವಸ್ತುಗಳನ್ನು ಸೇವಿಸಿದ್ದಾರೆ ಎಂದು ಪೊಲೀಸರು ಚಾರ್ಜ್ ಶೀಟ್ನಲ್ಲಿ ಉಲ್ಲೇಖಿಸಿದ್ದಾರೆ.ಒಟ್ಟು 1000 ಕ್ಕೂ ಹೆಚ್ಚು ಪುಟಗಳ ಚಾರ್ಜ್ ಶೀಟ್ ಅನ್ನು ಪೊಲೀಸರು ಸಲ್ಲಿಸಿದ್ದಾರೆ. ಹೇಮಾ ಬಳಸಿದ ಮಾದಕ ವಸ್ತುಗಳ ಬಗ್ಗೆಯೂ ಪೊಲೀಸರು ಚಾರ್ಜ್ ಶೀಟ್ನಲ್ಲಿ ಉಲ್ಲೇಖಿಸಿದ್ದಾರೆ. ಚಾರ್ಜ್ ಶೀಟ್ ಸಲ್ಲಿಕೆ ಬಗ್ಗೆ ಹೇಮಾ ಇತ್ತೀಚೆಗೆ ತನ್ನ ವಿವರಣೆ ನೀಡುತ್ತಾ ಒಂದು ವಿಡಿಯೋ ಬಿಡುಗಡೆ ಮಾಡಿದ್ದಾರೆ. ನನ್ನ…
ಮಂಡ್ಯ : ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ವೇಳೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಈದ್ ಮಿಲಾದ್ ಮೆರವಣಿಗೆ ತಡೆಯಲು ಶರಣ್ ಪಂಪ್ವೆಲ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು.ಅದಕ್ಕೆ ಮುಸ್ಲಿಂ ಮುಖಂಡರು ಕೂಡ ತಾಕತ್ತಿದ್ದರೆ ಮೆರವಣಿಗೆ ತಡೆಯಿರಿ ಎಂದು ಸವಾಲು ಹಾಕಿದ್ದರು. ಇದೀಗ ಬಜರಂಗದಳದ ವಿಭಾಗದ ಸಂಯೋಜಕ ಪುನೀತ್ ಅತ್ತಾವರ್, ಜಿಹಾದಿಗಳೇ ನಾವು ಬರುತ್ತಿದ್ದೇವೆ, ತಾಕತ್ತಿದ್ದರೆ ನಮ್ಮನ್ನು ತಡೆಯಿರಿ ಎಂದು ಪ್ರತಿ ಸವಾಲು ಹಾಕಿದ್ದಾರೆ. ಹೌದು ಶರಣ್ ಪಂಪ್ ವೆಲ್ ಗೆ ಮುಸ್ಲಿಂ ಮುಖಂಡರ ಸವಾಲು ಹಾಕಿದ ಹಿನ್ನೆಲೆಯಲ್ಲಿ ನಾಳೆ ಬಜರಂಗದಳ ಬಿಸಿ ರೋಡ್ ಚಲೋಗೆ ಕರೆ ನೀಡಿದೆ. ನಾಳೆ ಈದ್ ಮಿಲಾದ್ ಹಿನ್ನೆಲೆಯಲ್ಲಿ ಬಿಸಿ ರೋಡ್ ಚಲೋಗೆ ಬಜರಂಗದಳ ಇದೀಗ ಕರೆ ನೀಡಿದೆ. ಈ ಕುರಿತು ಪುನೀತ್ ಫೇಸ್ಬುಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಬಜರಂಗದಳ ವಿಭಾಗ ಸಂಯೋಜಕ ಪುನೀತ್ ಅತ್ತಾವರ ಈ ಕುರಿತು ಪೋಸ್ಟ್ ಮಾಡಿದ್ದು ನಾಳೆ ಬೆಳಿಗ್ಗೆ ಬಿಸಿ ರೋಡಿಗೆ ಬರೋದಾಗಿ ಪುನೀತ್ ಪ್ರತಿ ಸವಾಲು ಹಾಕಿದ್ದಾರೆ.…
ಬೆಳಗಾವಿ : ಸರಣಿ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು ಆರು ಜನರಿಗೆ ಗಂಭೀರವಾದಂತಹ ಗಾಯಗಳಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಸ್ಥವನಿಧಿ ಘಾಟ್ ನಲ್ಲಿ ಈ ಒಂದು ಭೀಕರ ಸರಣಿ ಅಪಘಾತ ನಡೆದಿದೆ. ಹೌದು ಸ್ಥವನಿಧಿ ಘಾಟ್ ನಲ್ಲಿ ಸರಣಿ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಘಾಟ್ ಬಳಿ 8 ವಾಹನಗಳ ನಡುವೆ ಸರಣಿ ಅಪಘಾತವಾಗಿದೆ. ಅಪಘಾತದಲ್ಲಿ ಇಬ್ಬರು ದುರ್ಮರಣ ಹೊಂದಿದ್ದು ಆರು ಜನರಿಗೆ ಗಾಯಗಳಾಗಿವೆ. ಗಾಯಗೊಂಡಿರುವ 6 ಜನರಿಗೆ ನಿಪ್ಪಾಣಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಂಟೇನರ್ ಚಾಲಕನ ನಿರ್ಲಕ್ಷ್ಯದಿಂದ ಈ ಒಂದು ಅಪಘಾತ ಸಂಭವಿಸಿದೆ. 3 ಕಾರು, 2 ಲಾರಿ, 1 ಕಂಟೇನರ್ ಹಾಗೂ ಬೈಕ್ ಗೆ, ಕಂಟೇನರ್ ಡಿಕ್ಕಿ ಹೊಡೆದಿದೆ. ಓರ್ವ ಬೈಕ್ ಸವಾರ ಹಾಗೂ ಕಾರಿನಲ್ಲಿದ್ದ ಓರ್ವ ಪ್ರಯಾಣಿಕ ಈ ಅಪಘಾತದಲ್ಲಿ ಸಾವನ್ನಪ್ಪಿದ್ದು, ನಿಪ್ಪಾಣಿ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.