Subscribe to Updates
Get the latest creative news from FooBar about art, design and business.
Author: kannadanewsnow05
ಬೀದರ್ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಯುವಕನ ಪ್ರೀತಿಸಿದ್ದಕ್ಕೆ ಮಗಳನ್ನೇ ಹತ್ಯೆ ಮಾಡಿರುವ ಘಟನೆ ಬೀದರ್ ಜಿಲ್ಲೆಯ ನಡೆದಿದೆ. ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬರಗೇನ್ ತಾಂಡಾದಲ್ಲಿ ಯುವಕನನ್ನು ಪ್ರೀತಿ ಮಾಡಿದ್ದಕ್ಕೆ ರೊಚ್ಚಿಗೆದ್ದು ತಂದೆಯೇ ದೊಣ್ಣೆಯಿಂದ ಮಗಳನ್ನ ಹೊಡೆದು ಬರ್ಬರ ಹತ್ಯೆ ಮಾಡಿದ್ದಾನೆ. ಕೊಲೆಯಾದವರನ್ನು ಮೋನಿಕಾ ಮೋತಿರಾಮ ಜಾಧವ್ ಎಂದು ಗುರುತಿಸಲಾಗಿದೆ. ಮೋನಿಕಾ ಒಬ್ಬ ಹುಡುಗನನ್ನು ಪ್ರೀತಿ ಮಾಡುತ್ತಿದ್ದಳು. ಪ್ರೀತಿಯ ವಿಷಯವನ್ನು ತನ್ನ ತಂದೆಯ ಎದುರು ಪ್ರಸ್ತಾಪ ಮಾಡಿದ್ದಳು. ಆದರೆ ಮೋತಿರಾಮ ಪ್ರೀತಿ -ಪ್ರೇಮದಿಂದ ದೂರವಿರುವಂತೆ ಮಗಳಿಗೆ ಹೇಳಿ, ನಿನಗೆ ಒಳ್ಳೆಯ ಹುಡುಗನನ್ನು ನೋಡಿ ಮದುವೆ ಮಾಡುತ್ತೇನೆ ಎಂದು ತಿಳುವಳಿಕೆ ಹೇಳಿದ್ದನು. ಮೋತಿರಾಮ ಬುದ್ದಿಮಾತು ಹೇಳಿದ್ದರೂ, ಸಹ ಮೋನಿಕಾ ನಾನು ಅವನನ್ನೇ ಮದುವೆ ಆಗುತ್ತೇನೆ ಎಂದು ಹಠ ಮಾಡಿದ್ದಳಂತೆ. ತಂದೆ ಏನೆ ಬುದ್ದಿಮಾತು ಹೇಳಿದ್ರೂ ಕೇಳದ ಹಿನ್ನೆಲೆ ಕೋಪಗೊಂಡ ಮೋತಿರಾಮ, ಮನೆಯಲ್ಲಿ ಯಾರು ಇಲ್ಲದ ವೇಳೆ ಅಡುಗೆ ಮಾಡುತ್ತಿದ್ದ ಮಗಳ ಕುತ್ತಿಗೆಗೆ ಹಗ್ಗ ಬಿಗಿದು ಹತ್ಯೆಗೈದಿದ್ದಾನೆ. ತೀವ್ರ ರಕ್ತಸ್ರಾವದಿಂದ…
ಚಿತ್ರದುರ್ಗ : ಗಳಿಸಿರುವ ಹಣ, ಆಸ್ತಿಯನ್ನು ದುಂದು ವೆಚ್ಚ ಮಾಡಿ ಹಾಳು ಮಾಡಬೇಡ ಎಂದು ಪತ್ನಿ ಬುದ್ಧಿ ಹೇಳಿದಕ್ಕೆ ಕುಪಿತಗೊಂಡ ಪತಿರಾಯ ಒಬ್ಬ ಕತ್ತು ಹಿಸುಕಿ ಹತ್ಯೆಗೈದಿರುವ ಘಟನೆ ಚಿತ್ರದುರ್ಗ ತಾಲ್ಲೂಕಿನ ಮೆದೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಶ್ರೀದೇವಿ (48) ಎಂದು ತಿಳಿದುಬಂದಿದೆ. ಇನ್ನು ಹತ್ಯೆಗೈದ ಪತಿಯನ್ನು ಉಮಾಪತಿ ಎಂದು ತಿಳಿದುಬಂದಿದೆ. ಉಮಾಪತಿ ತನ್ನ ಜಮೀನು ಮಾರಾಟದಿಂದಾಗಿ ಬಂದ ಹಣವನ್ನೆಲ್ಲಾ ಮನಬಂದಂತೆ ಖರ್ಚು ಮಾಡುತ್ತಾನೆಂಬ ಹಿನ್ನೆಲೆ ಪತ್ನಿ ಶ್ರೀದೇವಿ ಆಗಾಗ್ಗೆ ಎಚ್ಚರಿಸುತಿದ್ದಳು. ಈ ವಿಚಾರಕ್ಕೆ ಇಬ್ಬರ ಮಧ್ಯೆ ಕಲಹ ಆಗಾಗ ನಡೆಯುತ್ತಿತ್ತು. ಇದರಿಂದ ಬೇಸತ್ತ ಪತ್ನಿ ಉಳಿದ ಜಮೀನು ಆದರೂ ನನ್ನ ಹಾಗೂ ಮಕ್ಕಳ ಹೆಸರಲ್ಲಿ ಮಾಡಿ ಎಂದು ಗಲಾಟೆ ಮಾಡುತ್ತಿದ್ದರು. ಇದರಿಂದಾಗಿ ಆಕ್ರೋಶಗೊಂಡ ಉಮಾಪತಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಸ್ಕೆಚ್ ಹಾಕಿ, ಫೆಬ್ರವರಿ 7 ರಂದು ಬೆಳಗ್ಗೆ ಶ್ರೀದೇವಿ ಮನೆಯಲ್ಲಿ ಪೂಜೆ ಮಾಡುತ್ತಿದ್ದಾಗ, ಆಕೆಯ ಸೀರೆಯಿಂದ ಕೊರಳಿಗೆ ಸುತ್ತಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಕೊಡಲೇ ಅಕ್ಕಪಕ್ಕದ ಮನೆಯವರನ್ನೆಲ್ಲಾ…
ತುಮಕೂರು : ರಾಜ್ಯದಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಬೈಕ್ ಗೆ ವೇಗವಾಗಿ ಬಂದಂತಹ ಕೆಎಸ್ಆರ್ಟಿಸಿ ಬಸ್ ಒಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸವಾರರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆ ಬಳಿ ಆಲ್ಬುರಿನಲ್ಲಿ ನಡೆದಿದೆ. ಮೃತರನ್ನು ಬಿದರೆಕೆರೆ ಗ್ರಾಮದ ಯೋಗೇಶ್(23), ದಯಾನಂದ್(25) ಎಂದು ತಿಳಿದುಬಂದಿದೆ.ನಿನ್ನೆ ರಾತ್ರಿ ಯೋಗೇಶ್ ಮತ್ತು ದಯಾನಂದ್ ಒಂದೇ ಬೈಕ್ನಲ್ಲಿ ಬಿದರೆಕೆರೆ ಕಡೆಯಿಂದ ತುರುವೇಕೆರೆ ಕಡೆಗೆ ತೆರಳುತ್ತಿದ್ದರು. ಈ ವೇಳೆ ತುರುವೇಕೆರೆ ಕಡೆಯಿಂದ ಬಂದ ಕೆಎಸ್ಆರ್ಟಿಸಿ ಬಸ್ ಬೈಕ್ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ಯೋಗೇಶ್ ಮತ್ತು ದಯಾನಂದ ಗ್ಯಾರೇಜ್ ಒಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ ಘಟನಾ ಸ್ಥಳಕ್ಕೆ ನೊಣವಿನಕೆರೆ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಅಪಘಾತದ ಕುರಿತು ನೊಣವಿನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾದಗಿರಿ : ಯಾದಗಿರಿಯಲ್ಲಿ ಭೀಕರವಾದಂತಹ ಅಪಘಾತ ಸಂಭವಿಸಿದ್ದು, ಬೈಕ್ ಸ್ಕಿಡ್ ಆಗಿ ಸವಾರ ರಸ್ತೆ ಮೇಲೆ ಬಿದ್ದಿದ್ದ. ಈ ವೇಳೆ ಬೈಕ್ ಸವಾರನನ್ನು ತಪ್ಪಿಸಲು ಬಸ್ ಚಾಲಕ ನಿಯಂತ್ರಣ ಕಳೆದುಕೊಂಡು ಬಸ್ ಪಲ್ಟಿ ಆಗಿ ಬಿದ್ದ ಪರಿಣಾಮ 15 ಜನರು ಗಾಯಗೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರಾ ಪಟ್ಟಣದಲ್ಲಿ ನಡೆದಿದೆ. ಹೌದು ಯಾದಗಿರಿ ಜಿಲ್ಲೆ ವಡಗೇರ ಪಟ್ಟಣದ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕೆಕೆಆರ್ಟಿಸಿ ಬಸ್ ಪಲ್ಟಿಯಾಗಿದೆ. 15ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ರಸ್ತೆ ಮಧ್ಯೆ ಸ್ಕೀಡ್ ಆಗಿ ಬೈಕ್ ಸವಾರ ಬಿದ್ದಿದ್ದನು. ಬಸ್ ಚಾಲಕ ಬೈಕ್ ಸವಾರರನ್ನು ತಪ್ಪಿಸಲು ಹೋಗಿದ್ದನು. ಈ ವೇಳೆ ಸಾರಿಗೆ ಬಸ್ ರಸ್ತೆ ಕೆಳಗೆ ಇಳಿದು ಪಲ್ಟಿಯಾಗಿದೆ. ವಡಗೇರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ತುಮಕೂರು : ಸಾಮಾನ್ಯವಾಗಿ ಈ ಡೆಂಘಿ ಕಾಯಿಲೆ ಮಳೆಗಾಲದಲ್ಲಿ ಕಂಡುಬರುತ್ತದೆ. ಆದರೆ ಈಗ ಬೇಸಿಗೆ ಕಾಲ ಸಮೀಪಸುತ್ತಿದ್ದೂ, ಈಗಲೂ ಡೆಂಘಿ ಜ್ವರದಿಂದ 7 ವರ್ಷದ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡದಲ್ಲಿ ನಡೆದಿದೆ. ಹೌದು ಪಾವಗಡ ಪಟ್ಟಣದ ಬಾಬೈಯನ ಗುಡಿ ಬೀದಿ ನಿವಾಸಿ ಕರುಣಾಕರ್ ಈಗ ಡೆಂಘಿಗೆ ಬಲಿಯಾಗಿದ್ದು, ಬಾಲಕನ ಸಾವು ಜನರಲ್ಲಿ ಭಯ ಮೂಡಿಸಿದೆ. ಹರೀಶ್ ಕುಮಾರ್ ಪುತ್ರ ಕರುಣಾಕರ್ ತೀವ್ರವಾಗಿ ಬಳಲಿ ಪಾವಗಡ ಖಾಸಗಿ ಕ್ಲಿನಿಕ್ ಒಂದರಲ್ಲಿ ಕಳೆದ 8 ದಿನದಿಂದ ಚಿಕಿತ್ಸೆ ಪಡೆಯುತಿದ್ದ. ಆದರೆ ಚಿಕಿತ್ಸೆ ಫಲಿಸದೆ ಬಾಲಕ ಮೃತಪಟ್ಟಿದ್ದಾನೆ. ಬಾಲಕನಿಗೆ ಡೆಂಘಿ ಜ್ವರ ಇರುವ ಕುರಿತು ಕೊನೇ ಕ್ಷಣದವರೆಗು ವೈದ್ಯರು ಪೋಷಕರಿಗೆ ತಿಳಿಸಿಲ್ಲ ಎನ್ನುವ ಆರೋಪ ಕೇಳಿಬಂದಿದೆ. ವೈದ್ಯರ ನಿರ್ಲಕ್ಷ್ಯಕ್ಕೆ ಮಗ ಸಾವನ್ನಪ್ಪಿದ್ದಾನೆ ಎಂದು ಮೃತ ಬಾಲಕನ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಕ್ಲಿನಿಕ್ ಎದುರು ಇದೀಗ ಪ್ರತಿಭಟನೆ ನಡೆಸಿ ಕ್ರಮಕ್ಕೆ ಅಗ್ರಹಿಸಿದ್ದಾರೆ.
ಮೈಸೂರು : ಮುಡಾ ಕೇಸಲ್ಲಿ ಇಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, CBI ತನಿಖೆಗೆ ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೆ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆ ವಿಚಾರವಾಗಿ ಮುಡಾ ಕೇಸ್ ತನಿಖಾ ವರದಿ ಸಲ್ಲಿಸಲು ಲೋಕಾಯುಕ್ತ ಸಿದ್ಧತೆ ಮಾಡಿಕೊಂಡಿದೆ. ಹೌದು ಎರಡು ಮೂರು ದಿನಗಳಲ್ಲಿ ಮೈಸೂರಿನ ಲೋಕಾಯುಕ್ತ ಪೊಲೀಸರಿಂದ ವರದಿ ಸಲ್ಲಿಕೆ ಆಗಲಿದೆ. ಅಂತಿಮ ವರದಿ ಸಲ್ಲಿಸಲಿರುವ ಮೈಸೂರು ಲೋಕಾಯುಕ್ತ ಎಸ್ ಪಿ ಟಿ.ಉದೇಶ ಪರಿಶೀಲನೆ ಮಾಡಿದ ಬಳಿಕ ಲೋಕಾಯುಕ್ತ ಐಜಿಪಿಗೆ ವರದಿ ಸಲ್ಲಿಸಲಾಗುತ್ತದೆ. ಐಜಿಪಿ ಡಾ.ಎ.ಸುಬ್ರಮಣ್ಯೇಶ್ವರ ರಾವ್ ಗೆ ಲೋಕಾಯುಕ್ತ ಎಸ್ ಪಿ ವರದಿ ಸಲ್ಲಿಸಲಿದ್ದಾರೆ. ಬಳಿಕ ಲೋಕಾಯುಕ್ತ ಎಡಿಜಿಪಿಗೆ ವರದಿಯನ್ನು ಐಜಿಪಿ ಡಾ.ಎ.ಸುಬ್ರಮಣ್ಯೇಶ್ವರ ರಾವ್ ಅವರು ಸಲ್ಲಿಸಲಿದ್ದಾರೆ. ಅಂತಿಮ ವರದಿ ಸಿದ್ದಪಡಿಸಿದ ಬಳಿಕ ಕಾನೂನು ತಜ್ಞರಿಂದ ಸಲಹೆ ಪಡೆಯಲಿದ್ದಾರೆ. ನಂತರ ಕಾನೂನು ತಜ್ಞರ ಅಭಿಪ್ರಾಯದ ಬಳಿಕ ಕೋರ್ಟಿಗೆ ವರದಿ ಸಲ್ಲಿಕೆ ಮಾಡಲಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.
ಗುಜರಾತ್ : ದೇಶದಲ್ಲಿ ನಿರಂತರವಾಗಿ ಅತ್ಯಾಚಾರ ಲೈಂಗಿಕ ದೌರ್ಜನ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇವೆ. ಇದೀಗ ನಾಗರೀಕ ಸಮಾಜ ತಲೆ ತಗ್ಗಿಸುವ ಮತ್ತೊಂದು ಹೀನ ಕೃತ್ಯ ನಡೆದಿದ್ದು, ಗುಜರಾತ್ನ ಅಹ್ಮದಾಬಾದ್ ನಲ್ಲಿ 14 ವರ್ಷದ ಮಗಳ ಮೇಲೆ ಪಾಪಿ ತಂದೆಯೊಬ್ಬ ನಿರಂತರವಾಗಿ ಅತ್ಯಾಚಾರ ಎಸೆಗಿದ್ದು, ಮಗಳನ್ನೇ ಗರ್ಭವತಿ ಮಾಡಿರುವ ಬೆಚ್ಚಿ ಬೀಳಿಸುವ ಘಟನೆ ವರದಿಯಾಗಿದೆ. ಹೌದು ಗುಜರಾತ್ನ ಅಹಮದಾಬಾದ್ನಲ್ಲಿ 14 ವರ್ಷದ ಮಗಳ ಮೇಲೆ ತಂದೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ, ಆಕೆ ಫೆಬ್ರವರಿ 5 ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಆಕೆ ವೈದ್ಯರ ಬಳಿ ಘಟನೆಯನ್ನು ಹೇಳಿಕೊಂಡಿದ್ದು, ದಿನಗೂಲಿ ಕಾರ್ಮಿಕನಾಗಿರುವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪದೇ ಪದೇ ತನ್ನ ಮಗಳ ಮೇಲೆ ಕೀಚಕ ತಂದೆ ಅತ್ಯಾಚಾರ ಎಸಗಿದ್ದ ಪರಿಣಾಮ, ಬಾಲಕಿ ಹೊಟ್ಟೆನೋವಿನಿಂದ ಬಳಲುತ್ತಿದ್ದಾಗ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಯಿತು. ಅಂತಿಮವಾಗಿ ಹೆಣ್ಣುಮಗುವಿಗೆ ಜನ್ಮ ನೀಡಿದ್ದಾಳೆ.ಆರು ಮಕ್ಕಳನ್ನು ಹೊಂದಿರುವ ಆರೋಪಿಯು ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದು, ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಸದ್ಯ ಪೊಲೀಸರು…
ರಾಮನಗರ : ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ದೂರುದಾರ ಸ್ನೇಹಮಯಿ ಕೃಷ್ಣ ಅರ್ಜಿ ಸಲ್ಲಿಸಿದರು. ಇದೀಗ ಒಂದು ಅರ್ಜಿಗೆ ಸಂಬಂಧಪಟ್ಟಂತೆ ಹೈಕೋರ್ಟ್ ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ. ಈ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಮುಡಾ ಪ್ರಕರಣವನ್ನು ಸಿಬಿಐಗೆ ಯಾಕೆ ಕೊಡುತ್ತಾರೆ ಎಂದು ಪ್ರಶ್ನಿಸಿದ್ದಾರೆ. ರಾಮನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣವನ್ನು ಯಾಕೆ CBI ಗೆ ಕೊಡುತ್ತಾರೆ? ಈಗಾಗಲೇ ಪ್ರಕರಣವನ್ನ ಎರಡು ಏಜೆನ್ಸಿ ತನಿಖೆ ಮಾಡುತ್ತಿವೆ.ಒಂದು ಲೋಕಾಯುಕ್ತ ಎರಡನೆಯದು ಇಡಿ ಸಂಸ್ಥೆ ತನಿಖೆ ಮಾಡುತ್ತೀಟವೆ. ಹೀಗಿರುವಾಗ ಮೂರನೇ ಏಜೆನ್ಸಿಗೆ ಪ್ರಕರಣವನ್ನು ಯಾಕೆ ಕೊಡುತ್ತಾರೆ? ಈಗಾಗಲೇ ನಾನು ಹೊಡೆದಾಡುತ್ತಿದ್ದೇನೆ ನನ್ನ ಮೇಲೆ ಹಾಕಿರುವ ಕೇಸ್ ಸರಿ ಇಲ್ಲ ಎಂದು ತಿಳಿಸಿದರು.
ಗದಗ : ಹೊಸಮನೆ ಕಟ್ಟಲು ಆದಂಪತಿಗಳು ಫೈನಾನ್ಸ್ ಸಂಸ್ಥೆಯಲ್ಲಿ ಮೂರು ಲಕ್ಷ ಸಾಲ ಪಡೆದಿದ್ದರು ಆದರೆ ಸಿಬ್ಬಂದಿಗಳ ಕಿರುಕುಳ ತಾಳದೆ ಇದೀಗ ಹೊಸ ಮನೆ ಬಿಟ್ಟು ಸ್ಲಂನಲ್ಲಿ ವಾಸಿಸುತ್ತಿದ್ದು, ಸತ್ತರೆ ಸಾಲ ಮನ್ನಾ ಆಗುತ್ತದೆ ಎಂದು ಸಿಬ್ಬಂದಿಗಳು ಹೇಳಿದಾಗ ಈ ವೇಳೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಗದಗದಲ್ಲಿ ನಡೆದಿದೆ. ಹೌದು ಮನೆ ಕಟ್ಟಲು ದಂಪತಿ 3 ಲಕ್ಷ ಸಾಲ ಪಡೆದಿದ್ದು, ಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ಕಣ್ಣೀರು ಹಾಕುತ್ತಿದ್ದಾರೆ. ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ಇದೀಗ ದಂಪತಿಗಳು ಊರೇ ತೊರೆದಿದ್ದಾರೆ. ಗದಗ ಜಿಲ್ಲೆಯಲ್ಲಿ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ ಮುಂದುವರೆದಿದೆ. ಮನೆ ಕಟ್ಟೋದಕ್ಕೆ ಕುಟುಂಬ 3 ಲಕ್ಷ ಸಾಲ ಪಡೆದುಕೊಂಡಿತ್ತು. ಮೂರು ಲಕ್ಷ ಸಾಲಕ್ಕೆ ರೂ.30,000 ವಿಮೆ ಹಣ ಕಡಿತವಾಗಿತ್ತು. 1.30 ಹಣವನ್ನು ದಂಪತಿಗಳು ಪಾವತಿಸಿದ್ದರು. ಇದರಲ್ಲಿ 90,000 ಬಡ್ಡಿ ಮತ್ತು 40,000 ಅಸಲು ಅಂತಿರುವ ಫೈನಾನ್ಸ್, ಸಾಲಕ್ಕೆ ಮನೆ ಅಡಮಾನ ಅಂತ ಮನೆಯ ಮೇಲೆ ಬರಹ ಬರೆದಿದ್ದಾರೆ.ಹಾಗಾಗಿ ಹೊಸ…
ಧಾರವಾಡ : ಮುಡಾ ಹಗರಣಕ್ಕೆ ಸಂಬಂಧಸಿದಂತೆ ಪ್ರಕರಣವನ್ನು CBI ತನಿಖೆಗೆ ವಹಿಸಬೇಕು ಎಂದು ಸ್ನೇಹಮಯಿ ಕೃಷ್ಣ ಅವರು ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ CBI ತನಿಖೆ ಅವಶ್ಯಕತೆ ಇಲ್ಲ ಎಂದು ಹೇಳಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ಇದೀಗ ವಜಾಗೊಳಿಸಿದೆ.ಹೈಕೋರ್ಟ್ ಈ ಆದೇಶದ ಕುರಿತು ಪ್ರತಿಕ್ರಿಯೆ ನೀಡಿದ ಸ್ನೇಹಮಯಿ ಕೃಷ್ಣ ಅವರು ಕೋರ್ಟ್ ನ ಆದೇಶದ ಪ್ರತಿ ಸಿಕ್ಕಿದ ಕೂಡಲೇ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುತ್ತೇನೆ ಎಂದು ತಿಳಿಸಿದರು. ಹೌದು ಮುಡಾ ತನಿಖೆಯನ್ನು ಸಿಬಿಐಗೆ ತನಿಖೆಗೆ ವಹಿಸಲು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಲೋಕಾಯುಕ್ತ ಸ್ವತಂತ್ರ ತನಿಖಾ ಸಂಸ್ಥೆ ಎಂದು ಹೈಕೋರ್ಟ್ ಆದೇಶ ನೀಡಿದೆ. ಈ ಕುರಿತಾಗಿ ಮಾಧ್ಯಮಗಳಿಗೆ ಸ್ನೇಹಮಯಿ ಕೃಷ್ಣ ಪ್ರತಿಕ್ರಿಯೆ ನೀಡಿದ್ದು, ಲೋಕಾಯುಕ್ತ ತನಿಖೆಯ ಬಗ್ಗೆ ನಮಗೆ ನಂಬಿಕೆ ಇಲ್ಲ. ಹೈ ಕೋರ್ಟ್ ಆದೇಶದ ಪ್ರತಿ ಸಿಕ್ಕಕೊಡಲೇ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸುತ್ತೇನೆ ಎಂದು ಅವರು ತಿಳಿಸಿದರು. ಇಂದಿನ ವಿಚಾರಣೆ ವೇಳೆ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ…













