Author: kannadanewsnow05

ಬೆಳಗಾವಿ : ಬೆಳಗಾವಿಯಲ್ಲಿ ಜಾತ್ರೆಯಲ್ಲಿ ದೀಪ ಹಚ್ಚುವ ವಿಚಾರಕ್ಕೆ ಇಬ್ಬರು ಯುವಕರ ನಡುವೆ ಗಲಾಟೆ ನಡೆದಿದೆ ಈ ಗಲಾಟೆ ಬಳಿಕ ಕುಸ್ತಿ ಪೈಲ್ವಾನ್ ರೀಲ್ಸ್ ಮುಖಾಂತರ ಉರಿಸಿದ್ದಕ್ಕಾಗಿ ಕುಸ್ತಿ ಪೈಲ್ವಾನನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಈ ಸಂಬಂಧ ಇಬ್ಬರು ಬಾಲಾಪರಾಧಿಗಳು ಸೇರಿದಂತೆ ಪೊಲೀಸರು 8 ಜನ ಆರೋಪಿಗಳನ್ನ ಅರೆಸ್ಟ್ ಮಾಡಿದ್ದಾರೆ. ಹೌದು ಬೆಳಗಾವಿಯಲ್ಲಿ ರೀಲ್ಸ್ ಮಾಡಿ ಉರಿಸಿದ ಹಿನ್ನೆಲೆಯಲ್ಲಿ ಸಿನಿಮಾ ಶೈಲಿಯಲ್ಲಿ ಸ್ಕೆಚ್ ಹಾಕಿ ಕುಸ್ತಿ ಪೈಲ್ವಾನ್ ನನ್ನು ಮರ್ಡರ್ ಮಾಡಲಾಗಿದೆ. ಜನವರಿ 15ರಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕೊಳವಿ ಗ್ರಾಮದ ಹೊರವಲಯದಲ್ಲಿ ಈ ಒಂದು ಭೀಕರವಾದ ಕೊಲೆ ನಡೆದಿದೆ. ಕೊಳವಿ ಗ್ರಾಮದ ಪ್ರಕಾಶ್ ಹಿರಟ್ಟಿ ಕೊಲೆಯಾದ ಯುವಕ ಎಂದು ತಿಳಿದು ಬಂದಿದೆ. ಜಾತ್ರೆಯಲ್ಲಿ ದೀಪ ಹಚ್ಚುವ ವಿಚಾರಕ್ಕೆ ಪ್ರಕಾಶ್ ಹಾಗೂ ರವಿಚಂದ್ರ ಎನ್ನುವವರ ನಡುವೆ ಗಲಾಟೆ ಆಗಿದೆ. ಗಲಾಟೆಯ ಬಳಿಕ ಪ್ರಕಾಶ್ ಹಿರಟ್ಟಿ ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಹಾಕಿದ್ದ. ಬಳಿಕ ಪ್ರಕಾಶ್ ಹಿರಟ್ಟಿಯನ್ನು ಮಾರಕಸ್ತ್ರಗಳಿಂದ ಕೊಚ್ಚಿ…

Read More

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಿಯಮಿತ ಜಾಮೀನು ಪಡೆದಿರುವ ನಟ ದರ್ಶನ್, ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು ದರ್ಶನ್​ ಇಂದ 37 ಲಕ್ಷ ರೂಪಾಯಿ ಹಣ ವಶಕ್ಕೆ ಪಡೆದುಕೊಂಡಿದ್ದರು. ಇದೀಗ ಆ ಹಣವನ್ನು ಮರಳಿ ಕೊಡಿಸುವಂತೆ ದರ್ಶನ್ ಅರ್ಜಿ ಹಾಕಿದ್ದರು. ಅರ್ಜೆ ವಿಚಾರಣೆ ನಡೆಯಿಸಿದ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯ ಫೆಬ್ರವರಿ 1ಕ್ಕೆ ಅರ್ಜಿ ವಿಚಾರಣೆ ಮುಂದೂಡಿ ಆದೇಶ ಹೊರಡಿಸಿದೆ. ಹೌದು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನದ ಬಳಿಕ ಅವರಿಂದ ಬರೋಬ್ಬರಿ 37 ಲಕ್ಷ ರೂಪಾಯಿ ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಈ ಹಣವನ್ನು ರೇಣುಕಾ ಸ್ವಾಮಿ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಲು ಬಳಸಲಾಗಿತ್ತು ಎಂದು ಪೊಲೀಸರು ಆರೋಪ ಮಾಡಿದ್ದರು. ರೇಣುಕಾ ಸ್ವಾಮಿ ಕೊಲೆಯನ್ನು ತಾವು ಮಾಡಿದ್ದಾಗಿ ಒಪ್ಪಿಕೊಳ್ಳಲು ಹೊರಗಡೆಯಿಂದ ಕರೆಸಲಾಗಿದ್ದ ಮೂವರಿಗೆ ಅದಾಗಲೇ ಒಂದಿಷ್ಟು ಹಣವನ್ನು ಸಹ ನೀಡಲಾಗಿತ್ತು. ಹಣ ವಶಪಡಿಸಿಕೊಂಡಿದ್ದ ಪೊಲೀಸರು ಆದಾಯ ತೆರಿಗೆ ಇಲಾಖೆಗೆ ಈ ಬಗ್ಗೆ ಮಾಹಿತಿ ನೀಡಿದ್ದರು. ಆದರೆ ನ್ಯಾಯಾಲಯದಲ್ಲಿ…

Read More

ಹಾಸನ : ನಿಯಮ ಉಲ್ಲಂಘನೆ ಮಾಡಿ ಅರಣ್ಯ ಪ್ರದೇಶದಲ್ಲಿ ಕಾಂತಾರ-2 ಸಿನಿಮಾ ಚಿತ್ರೀಕರಣ ಮಾಡುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಇದೀಗ ಘಟನೆ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಗವಿಗುಡ್ಡದಲ್ಲಿ ನಿಯಮ ಉಲ್ಲಂಘಿಸಿ ಅರಣ್ಯ ಪ್ರದೇಶದಲ್ಲಿ ಕಾಂತಾರ-2 ಸಿನಿಮಾ ಚಿತ್ರೀಕರಣ ಮಾಡುತ್ತಿದ್ದು, ಸದ್ಯ ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಹೌದು ಕಾಂತಾರ-2 ಸಿನೆಮಾ ಚಿತ್ರೀಕರಣ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಇದೀಗ ಭೇಟಿ ನೀಡಿದ್ದಾರೆ. ACF ಮಧು ಹಾಗೂ RFO ಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ನಿಯಮ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ಭೇಟಿ ನೀಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಶೂಟಿಂಗ್ ಮಾಡಲು ಅನುಮತಿ ನೀಡಿದ ಸ್ಥಳವನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಈ ಒಂದು ಚಲನಚಿತ್ರದ ಚಿತ್ರೀಕರಣದಲ್ಲಿ 1000ಕ್ಕೂ ಅಧಿಕ ಜನರು ಭಾಗವಹಿಸುತ್ತಿದ್ದಾರೆ.ಕಳೆದ 10 ದಿನಗಳಿಂದ ಕಾಂತಾರ 2 ಶೂಟಿಂಗ್ ನಡೆಯುತ್ತಿದೆ. ಆದರೆ ಅಕ್ರಮವಾಗಿ ನಿಯಮ ಉಲ್ಲಂಘಿಸಿ ಅರಣ್ಯ ಪ್ರದೇಶದಲ್ಲಿ…

Read More

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಭೀಕರವಾದಂತಹ ಅಪಘಾತ ಸಂಭವಿಸಿದ್ದು, ಕಾರ್ಪೊರೇಷನ್ ಕಸದ ಟ್ರಾಕ್ಟರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಕೋಚಿಂಗ್ ಕ್ಲಾಸ್ ಗೆ ತೆರಳುತ್ತಿದ್ದ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಹಿಮ್ಸ್ ಆಸ್ಪತ್ರೆಯ ಹಿಂಭಾಗ ಈ ಒಂದು ಅಪಘಾತ ಸಂಭವಿಸಿದೆ. ಯುವಕ ಅಧ್ವೈತ್​ ಮತ್ತು ಆತನ ಸ್ನೇಹಿತ ಇಬ್ಬರು ಬೈಕ್​ನಲ್ಲಿ ಕೋಚಿಂಗ್​ ಕ್ಲಾಸ್​ಗೆ ತೆರಳುತ್ತಿದ್ದರು. ಈ ವೇಳೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಸದ ಗಾಡಿಗೆ ಬೈಕ್​ ಡಿಕ್ಕಿಯಾಗಿ ಅಧ್ವೈತ್​ (18) ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ. ಹಿಂಬದಿ ಸವಾರ ವಿವೇಕ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಗಾಯಗೊಂಡಂತಹ ವಿವೇಕ್ ಎನ್ನುವ ಯುವಕನಿಗೆ ಸದ್ಯ ಹುಬ್ಬಳ್ಳಿಯ ಹಿಮ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅಪಘಾತದ ಕುರಿತು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

Read More

ವಿಜಯಪುರ : ವಿಜಯಪುರ ಸಿಂದಗಿ ರಸ್ತೆಯಲ್ಲಿರುವ ಇಟ್ಟಂಗಿ ಭಟ್ಟಿಯಲ್ಲಿ ಇಂದು ಮಾಲೀಕನೊಬ್ಬ ಅಡ್ವಾನ್ಸ್ ಹಣ ಪಡೆದು ಕೆಲಸಕ್ಕೆ ತಡವಾಗಿ ಬಂದಿದ್ದಕ್ಕೆ ಕೋಪಗೊಂಡು ಇಬ್ಬರು ಕಾರ್ಮಿಕರ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಹೌದು ವಿಜಯಪುರ ಸಿಂದಗಿ ರಸ್ತೆಯಲ್ಲಿರುವಂತಹ ಇಟ್ಟಂಗಿ ಭಟ್ಟಿಯ ಮಾಲೀಕ ಖೇಮು ರಾಠೋಡ್ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಚಿಕ್ಕಲಕಿ ಗ್ರಾಮದ ನಿವಾಸಿಗಳಾದಂತಹ ಸದಾಶಿವ ಹಾಗೂ ಉಮೇಶ್ ಮಾದರ್ ಎನ್ನುವ ಕಾರ್ಮಿಕರಿಗೆ ಅಲ್ಲೇ ಇದ್ದಂತಹ ಪ್ಲಾಸ್ಟಿಕ್ ಪೈಪ್ ಗಳಿಂದ ಅಂಗಾಲಿಗೆ ಭೀಕರವಾಗಿ ಹಲ್ಲೆ ನಡೆಸಿದ್ದ. ಸದಾಶಿವ ಹಾಗೂ ಉಮೇಶ್ ನಮ್ಮನ್ನು ಬಿಟ್ಟು ಬಿಡಿ ಎಂದು ಎಷ್ಟೇ ಗೊಗರೆದರೂ ಕೂಡ ಕನಿಕರವಿಲ್ಲದೆ ಖೇಮು ರಾಠೋಡ್ ಹಲ್ಲೆ ನಡೆಸಿದ್ದ. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಜಯಪುರ ಗ್ರಾಮೀಣ ಠಾಣೆಯ ಪೊಲೀಸರು ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.ಘಟನೆಯ ಕುರಿತು ಮಾಹಿತಿ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಈ ಒಂದು ಘಟನೆಯಲ್ಲಿ…

Read More

ಬೆಂಗಳೂರು : ಬೆಂಗಳೂರಿನ ಮಾಪನ ಸೌಧ ಮೇಲೆ ಇಂದು ದಿಢೀರ್ ಆಗಿ ಲೋಕಾಯುಕ್ತ ದಾಳಿ ಮಾಡಿದೆ. ಲಂಚಕ್ಕೆ ಬೇಡಿಕೆ ಹಾಗೂ ಫೈಲ್ ಪೆಂಡಿಂಗ್ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ನ್ಯಾ.ಬಿಎಸ್ ಪಾಟೀಲ್, ಉಪಲೋಕಾಯುಕ್ತ ನ್ಯಾ.ಬಿ ವೀರಪ್ಪ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಉಪ ಲೋಕಾಯುಕ್ತ ಫಾಣಿಂದ್ರ ಸಹ ದಾಳಿಯಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿದುಬಂದಿದೆ. ದಾಳಿಯ ವೇಳೆ 6 ಎಸ್ ಪಿ ಸೇರಿದಂತೆ 30ಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಳಿ ನಡೆಸಲಾಗಿದೆ. ಮುಂದಿನ 10 ದಿನಕ್ಕೂ ಹಾಜರಾತಿ ಸಹಿ ಮಾಡಿದ ಮಾಹಿತಿ ಬಂದ ಹಿನ್ನೆಲೆಯಲ್ಲಿ ಮಾಪನಸೌಧದ ರೆಜಿಸ್ಟರ್ ಬುಕ್ ಇಟ್ಕೊಂಡು ತರಾಟೆ ತೆಗೆದುಕೊಂಡಿದ್ದಾರೆ. ಈ ವೇಳೆ ನ್ಯಾ. ವೀರಪ್ಪ ಸಿಬ್ಬಂದಿಗಳ ಫೋನ್ ಪೇ ಚೆಕ್ ಮಾಡಿದ್ದಾರೆ. ಮೊಬೈಲ್ ನಲ್ಲಿ ಹಣ ವರ್ಗಾವಣೆ ಮಾಡಿಕೊಂಡ ಮಾಹಿತಿ ಇದೀಗ ತಿಳಿದು ಬಂದಿದೆ. ಹೀಗಾಗಿ ಅಧಿಕಾರಿಗಳ ಫೋನ್ ಪೇ ಗಳನ್ನು ಕೂಡ ಪರಿಶೀಲನೆ ನಡೆಸಲಾಗುತ್ತಿದೆ. 50 ಸಾವಿರದಿಂದ ರಿಂದ 1 ಲಕ್ಷ ಹೇಗ್ರಿ ನಿಮ್ಮ ಅಕೌಂಟಿಗೆ ಬಂತು ಎಂದು…

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇತ್ತೀಚೆಗೆ ಇಡಿ ಅಧಿಕಾರಿಗಳು 30 ಕೋಟಿ ರೂಪಾಯಿಗಳನ್ನು ಜಪ್ತಿ ಮಾಡಿಕೊಂಡಿದ್ದು ಅಲ್ಲದೆ ಪ್ರಕಟಣೆಯಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವಾರು ಹೆಸರುಗಳನ್ನು ಉಲ್ಲೇಖಿಸಿತ್ತು ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ರಾಜಕೀಯ ದುರುದ್ದೇಶದಿಂದ ಇಡಿ ಇಂದ ಪ್ರಕಟಣೆ ರಿಲೀಸ್ ಮಾಡಿಸಿದೆ ಎಂದು ಗಂಭೀರವಾದ ಆರೋಪ ಮಾಡಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣದ ತನಿಖೆಯ ಬಗ್ಗೆ ಇಡಿ ಮಾಧ್ಯಮ ಪ್ರಕಟಣೆ ವಿಚಾರವಾಗಿ ಇಡಿ ಅಧಿಕಾರಿಗಳ ಮಾಧ್ಯಮ ಪ್ರಕಟಣೆಗೂ ನನಗೂ ಯಾವುದೇ ಸಂಬಂಧವಿಲ್ಲ. ರಾಜಕೀಯ ಉದ್ದೇಶಪೂರ್ವಕವಾಗಿ ತನಿಖೆ ಮಾಡುತ್ತಿದ್ದಾರೆ 50:50 ಅನುಪಾತ ಸೈಟ್ಗಳನ್ನು ಮುಟ್ಟುಗಳು ಹಾಕಿದ್ದೇವೆ ಅಂತಾರೆ ಆದರೆ ಅದಕ್ಕೂ ನನಗೂ ಸಂಬಂಧ ಇಲ್ಲ ಬಿಜೆಪಿ ಇಡೀಯಿಂದ ಮಾಧ್ಯಮ ಪ್ರಕಟಣೆ ರಿಲೀಸ್ ಮಾಡಿಸಿದೆ ರಾಜಕೀಯ ಪ್ರೇರಿತ ಮಾಧ್ಯಮ ಪ್ರಕಟಣೆ ಇದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಇನ್ನು ರಾಜ್ಯದ ಹಲವು ಕಡೆಗಳಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಜನರು ಊರು ಬಿಡುತ್ತಿರುವ ವಿಚಾರಕ್ಕೆ…

Read More

ವಿಜಯಪುರ : ವಿಜಯಪುರದಲ್ಲಿ ಅಡ್ವಾನ್ಸ್ ಹಣ ಪಡೆದು ಕೆಲಸಕ್ಕೆ ತಡವಾಗಿ ಬಂದಿದ್ದಕ್ಕೆ ಕಾರ್ಮಿಕರ ಮೇಲೆ ಇಟ್ಟಂಗಿಯ ಭಟ್ಟಿಯ ಮಾಲೀಕನೊಬ್ಬ ಮರಣಾಂತಿಕವಾಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಇದೊಂದು ಅಮಾನವೀಯ ಘಟನೆಯಾಗಿದ್ದು, ಈ ಒಂದು ಘಟನೆಯಲ್ಲಿ ತಪ್ಪಿತಸ್ಥ ವಿರುದ್ಧ ಕಠಿಣವಾದ ಕ್ರಮ ಕೈಗೊಳ್ಳಲಾಗುತ್ತದೆ. ಯಾವುದೇ ಕಾರಣಕ್ಕೂ ಹಲ್ಲೆ ಮಾಡಿದಂತಹ ವ್ಯಕ್ತಿಗಳನ್ನು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೆ ವೇಳೆ ತಿಳಿಸಿದರು. ಇನ್ನು ಇದೇ ವಿಚಾರವಾಗಿ ಬೆಂಗಳೂರಿನಲ್ಲಿ ಸಚಿವ ಎಂಬಿ ಪಾಟೀಲ್ ಅವರು ಪ್ರತಿಕ್ರಿಯೆ ನೀಡಿ, ಮೂವರು ಕಾರ್ಮಿಕರ ಮೇಲೆ ಹಲ್ಲೆ ನಡೆದಿದೆ. ಈ ಕುರಿತು ಎಸ್ಪಿ ಜೊತೆ ಮಾತಾಡಿ ಮಾಹಿತಿ ಪಡೆದಿದ್ದೇನೆ. ಘಟನೆಗೆ ಸಂಬಂಧಿಸಿದಂತೆ ಅಲ್ಲಿದ್ದವರೇ ಸಂಧಾನಕ್ಕೆ ಮುಂದಾಗಿದ್ದರು ಆದರೆ ಪೊಲೀಸರು ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಿದ್ದಾರೆ ಎಂದು ಸಚಿವ ಎಂ ಪಾಟೀಲ್ ತಿಳಿಸಿದರು.

Read More

ಕೋಲಾರ : ಸದ್ಯ ರಾಜ್ಯ ರಾಜಕಾರಣದಲ್ಲಿ ಅದರಲ್ಲೂ ಕಾಂಗ್ರೆಸ್ ಪಾಳಯದಲ್ಲಿ ಸಿಎಂ ಬದ್ಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಚರ್ಚೆ ಜೋರಾಗಿ ನಡೆದಿದೆ ಇದರ ಮಧ್ಯ ನಗರ ಅಭಿವೃದ್ಧಿ ಸಚಿವ ಭಾರತಿ ಸುರೇಶ್ ಅವರು, ಸಿಎಂ ಹಾಗೂ ಕೆಪಿಸಿಸಿ ಎರಡು ಸ್ಥಾನಗಳು ಯಾವುದೇ ಕಾರಣಕ್ಕೂ ಬದಲಾಗಲ್ಲ ಎಂದು ತಿಳಿಸಿದರು. ಕೋಲಾರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ವಿಚಾರದಲ್ಲಿ ಯಾವ ಪವರ್ ಶೇರಿಂಗ್ ಇಲ್ಲ ಕೇರಿಂಗು ಇಲ್ಲ. ಸಿಎಂ ಸ್ಥಾನ ಕೆಪಿಸಿಸಿ ಅಧ್ಯಕ್ಷ ಸ್ಥಾನ ಎರಡೂ ಬದಲಾಗುವುದಿಲ್ಲ.ಈ ಎರಡು ಹುದ್ದೆಯ ಬದಲಾವಣೆಯಿಂದ ಹೈ ಕಮಾಂಡ್ ನಿಂದ ಮಾತ್ರ ಸಾಧ್ಯ. ಕೈಮೀರಿ ಅಭಿವೃದ್ಧಿ ಮಾಡಲು ನಾವೆಲ್ಲರೂ ಪ್ರಯತ್ನ ಮಾಡುತ್ತಿದ್ದೇವೆ. ಪ್ರತ್ಯೇಕ ಸಭೆ ಮಾಡದಂತೆ ಈಗಾಗಲೇ ನಮ್ಮ ಹೈಕಮಾಂಡ್ ಸೂಚನೆ ಕೊಟ್ಟಿದೆ. ಒಬ್ಬರಿಗೆ ಒಂದೇ ಹುದ್ದೆ ಎಂಬ ವಿಚಾರಕ್ಕೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಕೋಲಾರದಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಹೇಳಿಕೆ ನೀಡಿದರು. ಕೋಲಾರದಲ್ಲಿ ನಾಲ್ವರು ಸಚಿವ…

Read More

ಬೆಳಗಾವಿ : ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರನ್ನು ಬದಲಾಯಿಸಿ ಎಂದು ರಾಜ್ಯದ ಕೆಲ ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿ ಅವರಿಗೆ ದೂರು ನೀಡುವ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಇದೀಗ ಸ್ಪಷ್ಟನೆ ನೀಡಿದ್ದು, ಅದೆಲ್ಲಾ ಸುಳ್ಳು ಎಂದು ಬೆಳಗಾವಿಯಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಸ್ಪಷ್ಟನೆ ನೀಡಿದರು. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುರ್ಜೆವಾಲ ವಿರುದ್ಧ ಹಲವು ನಾಯಕರು ದೂರು ನೀಡಿರುವ ವಿಚಾರವಾಗಿ, ಅದೆಲ್ಲ ನಿಮಗೆ ಯಾರು ಹೇಳಿದ್ದು? ನಿಮಗೆ ಸುಳ್ಳು ಹೇಳಿ ನಿಮ್ಮ ಇಮೇಜ್ ಹಾಳು ಮಾಡುತ್ತಿದ್ದಾರೆ. ನಿನ್ನೆ ಫಿರೋಜ್ ಸೇಠ್ ಮನೆಗೆ ಹೋದರೆ ನೀವೆಲ್ಲ ನಿಮ್ಮದೇ ಸ್ಟೋರಿ ಬಿಲ್ಡ್ ಮಾಡಿದ್ದೀರಿ ಎಂದು ತಿಳಿಸಿದರು. ಫಿರೋಜ್ ಸೇಠ್ ನಮ್ಮ ಜೊತೆ ಎರಡು ಸಾರಿ ಎಂಎಲ್ಎ ಆಗಿ ಕೆಲಸ ಮಾಡಿದ್ದಾರೆ, ಒಳ್ಳೆ ಹಿರಿಯ ನಾಯಕರಾಗಿದ್ದಾರೆ. ಸಂಘಟನೆಯ ದೃಷ್ಟಿಯಿಂದ ನಾನು ಮತ್ತು ಜಿಲ್ಲಾಧ್ಯಕ್ಷರು ಹೋಗಿ ಭೇಟಿ ಮಾಡಿ ಚರ್ಚಿಸಿದ್ದೇವೆ. ಅದನ್ನೇ ನೀವು ಬೇರೆ ರೀತಿಯಲ್ಲಿ ಬಿಲ್ಡ್ ಮಾಡಿ ಸ್ಟೋರಿ…

Read More