Author: kannadanewsnow05

ಬೆಂಗಳೂರು : ಬೆಂಗಳೂರಿನಲ್ಲಿ ಓದುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿ ಇದೀಗ ನಿಫಾ ವೈರಸ್ ಗೆ ಬಲಿಗಾಗಿದ್ದಾನೆ ಎಂದು ತಿಳಿದುಬಂದಿದೆ. ಕೇರಳದ ಮಲಪುರಂ ಮೂಲದ 24 ವರ್ಷದ ವಿದ್ಯಾರ್ಥಿ ನಿಫಾ ವೈರಸ್ ಗೆ ಸಾವನ್ನಪ್ಪಿರುವ ಘಟನೆ ಇದೀಗ ವರದಿಯಾಗಿದೆ. ಕಾಲಿಗೆ ಗಾಯ ವಾಗಿದ್ದರಿಂದ ಆಗಸ್ಟ್ 25ರಂದು ಬೆಂಗಳೂರಿನಿಂದ ವಿದ್ಯಾರ್ಥಿ ಕೇರಳಕ್ಕೆ ತೆರಳಿದ್ದಾನೆ. ಸೆಪ್ಟೆಂಬರ್ 5 ರಂದು ಜ್ವರ ಬಂದಿದ್ದರಿಂದ ಕ್ಲಿನಿಕ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಸೆಪ್ಟೆಂಬರ್ 6ರಂದು ವಾಂತಿ, ಸೆಪ್ಟೆಂಬರ್ 7ರಂದು ಆತನ ಆರೋಗ್ಯ ಗಂಭೀರವಾಗಿದೆ. ತಕ್ಷಣ ಖಾಸಗಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಿ ವಿದ್ಯಾರ್ಥಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಐಸಿಯುನಲ್ಲಿ ವಿದ್ಯಾರ್ಥಿ ಚಿಕಿತ್ಸೆ ಪಡೆಯುತ್ತಿದ್ದವನು, ಇದೀಗ ನಿಫಾಗೆ ಬಲಿಯಾಗಿದ್ದಾನೆ. ಸೆಪ್ಟೆಂಬರ್ 8ರಂದು ನಿಫಾ ಸೊಂಕಿಗೆ ವಿದ್ಯಾರ್ಥಿ ಬಲಿಯಾಗಿದ್ದಾನೆ. ಮೃತ ವಿದ್ಯಾರ್ಥಿಯ ಬ್ಲಡ್ ಸ್ಯಾಂಪಲ್ ನಲ್ಲಿ ನೀಫಾ ಪಾಸಿಟಿವ್ ಎಂದು ದೃಢಪಟ್ಟಿದೆ.

Read More

ಮಂಡ್ಯ : ಈಗಾಗಲೇ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಗಣಪತಿ ವಿಸರ್ಜನೆ ವೇಳೆ ನಡೆದ ಗಲಭೆ ರಾಜ್ಯಾದ್ಯಂತ ಸುದ್ದಿಯಾಗುತ್ತಿರುವ ಬೆನ್ನಲ್ಲೇ, ಇದೀಗ ಪೊಲೀಸ್ ಅಧಿಕಾರಿಯ ನವವಿವಾಹಿತ ಮಗಳು ಡೆತ್ ನೋಟ್ ಬರೆದಿಟ್ಟು, ಮೊಬೈಲ್ ಫೋನ್, ಮಾಂಗಲ್ಯ ಸರವನ್ನು ಬಿಚ್ಚಿಟ್ಟು ಮನೆಯಿಂದ ನಾಪತ್ತೆಯಾಗಿರುವ ಘಟನೆ ನಡೆದಿದೆ. ಹೌದು ಜಿಲ್ಲೆಯ ಶಂಕರ ನಗರದಮಹಿಳಾ ಠಾಣೆ ಸಹಾಯಕ ಸಬ್ ಇನ್ಸ್‌ಪೆಕ್ಟರ್ (ASI) ಮಗಳು ಡೆತ್‌ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದಾಳೆ. ನಾಪತ್ತೆ ಆಗಿರುವ ಗೃಹಿಣಿಯನ್ನು ಅನುಷಾ (24) ಎಂದು ಹೇಳಲಾಗಿದೆ. ಇವರನ್ನು ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಬೆಂಗಳೂರಿನ ಬಿದರಹಳ್ಳಿ ನಿವಾಸ್ ದಿನೇಶ್ ಕುಮಾರ್ ಜೊತೆ ವಿವಾಹ ಮಾಡಿಕೊಡಲಾಗಿತ್ತು. ಆದರೆ ಗಂಡನ ಮನೆಯವರು ಅನುಷಾಗೆ ಕಿರುಕುಳ ನೀಡುತ್ತಿದ್ದರು. ಪತಿಯ ಕಿರುಕುಳಕ್ಕೆ ಬೇಸತ್ತ ಅನುಷಾ, ಗಂಡ ದಿನೇಶ್, ನಾದಿನಿ ರಂಜಿನಿ, ಭಾವ ರಾಜೇಶ್ ಹಾಗೂ ಅತ್ತೆ ಕಾಂತಮ್ಮ ನನ್ನ ಸಾವಿಗೆ ಕಾರಣರೆಂದು ಡೆತ್‌ನೋಟ್ ಬೆದಿಟ್ಟಿದ್ದಾರೆ. ಇನ್ನು ಡೆತ್‌ ನೋಟ್ ಪಕ್ಕದಲ್ಲಿ ತಾನು ಬಳಸುತ್ತಿದ್ದ ಮೊಬೈಲ್ ಹಾಗೂ ಗಂಡ ಕಟ್ಟಿದ್ದ ತಾಳಿಯನ್ನು…

Read More

ಮಂಡ್ಯ : ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮೂಲದ ಇಬ್ಬರನ್ನು ಬಂಧಿಸಲಾಗಿದೆ ಎಂದು ಸಚಿವ ಚೆಲುವರಾಯ ಸ್ವಾಮಿ ಸ್ಪಷ್ಟನೆ ನೀಡಿದರು. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಗಮಂಗಲ ಗಲಭೆಯಲ್ಲಿ ಸಂಬಂಧ ಅಲ್ಲೇ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಕೇರಳ ಮೂಲದವರನ್ನು ಘಟನೆಯಲ್ಲಿ ಭಾಗಿಯಾಗಿದ್ದಾರೆ ಎಂದು ಬಂಧಿಸಲಾಗಿದೆ. ಹಾಗಂತ ಕೇರಳದವರು ಗಲಭೆಗೆ ಬಂದು ಹೋಗಿದ್ದಾರೆ ಎಂದಲ್ಲ. ಗಲಭೆ ಸಂಬಂಧ ಸಂಪೂರ್ಣವಾಗಿ ವರದಿ ತರಿಸಿಕೊಳ್ಳೋಣ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು. ಗಣೇಶಮೂರ್ತಿ ನಿಮಜ್ಜನ ಮೆರವಣಿಗೆ ಎರಡು ಕೋಮುಗಳ ನಡುವೆ ಘರ್ಷಣೆ ಆಗಲಿಕ್ಕೆ ಅವಕಾಶವಾಗಿದೆ. ನಾಳೆ ಕೂಡ ಮುಸ್ಲಿಂ ಹಬ್ಬ ಈದ್​ ಮಿಲಾದ್​ ಇದೆ. ಅಂಗಡಿಗಳಿಗೆ ಬೆಂಕಿ ಹಾಕಿದ್ದು ಮತ್ತು ಕಲ್ಲು ತೂರಲು ಮೊದಲು ಪ್ರಾರಂಭ ಮಾಡಿದ್ದು ಯಾರು ಎಂಬ ಮಾಹಿತಿ ಬೇಕಾಗುತ್ತದೆ. ಒಟ್ಟಾರೆ ಎರಡೂ ಕೋಮಿನವರು ಒಟ್ಟಾಗಿ ಎಲ್ಲಾ ಹಬ್ಬಗಳನ್ನು ಮಾಡಬೇಕೆಂಬ ತೀರ್ಮಾನವನ್ನು ಸಭೆಯಲ್ಲಿ ತೆಗೆದುಕೊಂಡಿದ್ದೇವೆ ಎಂದು ತಿಳಿಸಿದರು.

Read More

ಮೈಸೂರು : ಪತಿ ಬೇರೆ ಮಹಿಳೆಯೊಂದಿಗೆ ಸಲುಗೆಯಿಂದ ಇದ್ದಿದ್ದನ್ನು ನೋಡಿ ಪತ್ನಿ ಇದಕ್ಕೆ ವಿರೋಧಿಸಿದ್ದಾಳೆ. ಇದೇ ವಿಚಾರಕ್ಕೆ ಆಗಾಗ ಪತಿ-ಪತ್ನಿ ಮಧ್ಯ ಗಲಾಟೆ ನಡೆಯುತ್ತಿತ್ತು. ಆದರೆ ಇಂದು ಗಲಾಟೆ ವಿಕೋಪಕ್ಕೆ ತಿರುಗಿ, ಪತಿ ಪತ್ನಿಯನ್ನು ಮಚ್ಚಿನಿಂದ ಭೀಕರವಾಗಿ ಕೊಲೆ ಮಾಡಿ, ಠಾಣೆಗೆ ಬಂದು ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಬೆಂಕಿಪುರ ಗ್ರಾಮದಲ್ಲಿ ನಡೆದಿದೆ. ಹೌದು ಮಚ್ಚಿನಿಂದ ಕೊಚ್ಚಿ ಪತ್ನಿಯನ್ನು ಕೊಲೆಗೈದು ಪೊಲೀಸರಿಗೆ ಶರಣಾಗಿರುವ ಘಟನೆ ಬೆಂಕಿಪುರದಲ್ಲಿ ನಡೆದಿದೆ. ಪತ್ನಿ ರೋಜಾ (37) ಹತ್ಯೆಗೈದ ಪತಿ ಸ್ವಾಮಿನಾಯ್ಕ್. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಬೆಂಕಿಪುರ ಗ್ರಾಮದಲ್ಲಿ ಈ ಒಂದು ಕೊಲೆ ನಡೆದಿದೆ ಮತ್ತೊಬ್ಬ ಮಹಿಳೆಯ ಜೊತೆ ಸ್ವಾಮಿ ನಾಯ್ಕ್ ಸಲುಗೆಯಿಂದ ಇದ್ದ. ಇದೇ ವಿಚಾರಕ್ಕೆ ದಂಪತಿಯ ನಡುವೆ ಆಗಾಗ ಜಗಳವಾಗುತ್ತಿತ್ತು. ಇಂದು ಮಧ್ಯಾಹ್ನ ಮಚ್ಚಿನಿಂದ ಕೊಚ್ಚಿ ಪತ್ನಿ ರೋಜಾಳನ್ನು ಸ್ವಾಮೀ ನಾಯಕ್ ಕೊಲೆ ಬಳಿಕ, ಬಿಳಿಕೆರೆ ಠಾಣೆಗೆ ಬಂದು ಶರಣಾಗಿದ್ದಾನೆ. ಈ ಬಗ್ಗೆ ಬಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ತುಮಕೂರು : ಗಣೇಶ ಹಬ್ಬದ ಸಂದರ್ಭದಲ್ಲಿ ಗಣೇಶ ಮೂರ್ತಿಯ ವಿಸರ್ಜನೆ ವೇಳೆ ಎಷ್ಟೇ ಎಚ್ಚರಿಕೆಯಿಂದ ಇದ್ದರೂ ಕೂಡ ದುರಂತಗಳು ಸಂಭವಿಸುತ್ತವೆ. ಇದೀಗ ಇಂತಹದ್ದೇ ಘಟನೆ ತುಮಕೂರಿನಲ್ಲಿ ನಡೆದಿದ್ದು, ಗಣೇಶ ಮೂರ್ತಿ ವಿಸರ್ಜನೆಯ ವೇಳೆ ತಂದೆ ಮಗ ಸೇರಿದಂತೆ ಒಟ್ಟು ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೌದು ಗಣೇಶ ವಿಸರ್ಜನೆ ವೇಳೆ ತಂದೆ ಮಗ ಸೇರಿ ಮೂವರ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾರಸಂದ್ರ ಸಮೀಪದ ರಂಗನ ಹಟ್ಟಿ ಕೆರೆಯಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ತಂದೆ ರೇವಣ್ಣ (46) ಪುತ್ರ ಶರತ್ (26) ಹಾಗೂ ದಯಾನಂದ ಮೃತ ದುರ್ದೈವಿಗಳು ಎಂದು ತಿಳಿದುಬಂದಿದ್ದು, ಸದ್ಯ ಶವಗಳಿಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳದಲ್ಲಿ ಬೀಡು ಬಿಟ್ಟಿದ್ದು, ಶೋಧ ಕಾರ್ಯ ಮುಂದುವರಿದಿದೆ. ಸ್ಥಳಕ್ಕೆ ದಂಡಿನಯಿವರ ಠಾಣೆಯ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

Read More

ಮಂಡ್ಯ : ಮಂಡ್ಯ ಜಿಲ್ಲೆ ನಾಗಮಂಗಲ ಪಟ್ಟಣದಲ್ಲಿ ಗಣೇಶ ವಿಸರ್ಜನೆ ವೇಳೆ ಕೋಮುಗಲಭೆ ನಡೆದಿತ್ತು. ಮುಸ್ಲಿಮರು ಮೆರವಣಿಗೆ ವೇಳೆ ಕಲ್ಲುತೂರಿದ್ದರು. ಅಲ್ಲದೇ, ಕೆಲ ಅಂಗಡಿಗಳಿಗೂ ಬೆಂಕಿ ಹಾಕಲಾಗಿತ್ತು. ಇದೀಗ ಈ ಒಂದು ಗಲಭೆಗೆ ಸ್ಪೋಟಕವಾದಂತಹ ಟ್ವಿಸ್ಟ್ ಸಿಕ್ಕಿದ್ದು ಗಳಭೆಗು ಮುನ್ನ ಕಿಡಿಗೇಡಿಗಳು ಸಿಸಿಟಿವಿ ಗಳನ್ನು ಒಡೆದು ಹಾಕುತ್ತಿರುವ ದೃಶ್ಯ ಸೆರೆಯಾಗಿದೆ. ಹೌದು ನಾಗಮಂಗಲದಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಸಿಸಿಟಿವಿಯಲ್ಲಿ ಬೆಚ್ಚಿ ಬೀಳಿಸುವಂತಹ ದೃಶ್ಯ ಸೆರೆಯಾಗಿದೆ. ಅಂಗಡಿಗಳಿಗೆ ಬೆಂಕಿ ಹಚ್ಚುವ ಮುನ್ನ ಸಿಸಿಟಿವಿಗಳನ್ನು ದ್ವಂಸ ಮಾಡಲಾಗಿದೆ. ಹಾರೆಯಿಂದ ಸಿಸಿಟಿವಿ ಒಡೆದು ಹಾಕಿದ್ದಾರೆ. ಬೆಂಕಿ ಹಚ್ಚುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಬಾರ್ದು ಎಂದು ಕಿಡಿಗೇಡಿಗಳು ಕಳ್ಳಾಟ ನಡೆಸಿದ್ದಾರೆ. ಕಟ್ಟಡದ ಪಕ್ಕವೇ ಓಡಿ ಹೋಗುತ್ತಿದ್ದ, ಯುವಕರ ಗುಂಪಿನಲ್ಲಿ ಅಂಗಡಿ ಮುಂಭಾಗ ಓಡಿ ಬಂದ ಗುಂಪಿನಲ್ಲಿ ಇಬ್ಬರು ಇದ್ದಿದ್ದು ಕಂಡು ಬಂದಿದ್ದು, ಹಾರೆ ತೆಗೆದುಕೊಂಡು ಸಿಸಿಟಿವಿ ಒಡೆದು ಹಾಕುತ್ತಿರು ಮತ್ತು ಕೃತ್ಯ ಎಸಗುವಾಗ ಮುಖಕ್ಕೆ ಮಸ್ಕ್ ಕಟ್ಟಿಕೊಂಡಿರುವ ದೃಶ್ಯ ಇದೀಗ ಸೆರೆಯಾಗಿದೆ. ಹಾಗಾಗಿ ಇದು ಗಲಭೆ ಫ್ರೀ ಪ್ಲಾನ್…

Read More

ಕೊಪ್ಪಳ : ಮನೆಯಲ್ಲಿ ಚಾಕು ಇರೋದು ಈರಳ್ಳಿ ಹೆಚ್ಚಲು ಮಾತ್ರ ಅಲ್ಲ ಅನ್ನೋ ಯತ್ನಾಳ್ ಹೇಳಿಕೆಗೆ ಸಚಿವ ಆರ್.ಬಿ ತಿಮ್ಮಾಪುರ ವಾಗ್ದಾಳಿ ನಡೆಸಿದ್ದು, ಬಿಜೆಪಿಯವರು ಕೆಲವರನ್ನು ನಾಯಿಗಳನ್ನು ಇಟ್ಟುಕೊಂಡಂತೆ ಒದರಲು ಇಟ್ಟುಕೊಂಡಿದ್ದಾರೆ ಎಂದು ನಾಲಿಗೆ ಹರಿಬಿಟ್ಟಿದ್ದಾರೆ. ಇಂದು ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮನೆಯಲ್ಲಿ ಚಾಕು ಇರೋದು ಈರಳ್ಳಿ ಹೆಚ್ಚಲು ಮಾತ್ರ ಅಲ್ಲ ಅನ್ನೋ ಯತ್ನಾಳ ಹೇಳಿಕೆ ವಿಚಾರವಾಗಿ, ಯತ್ನಾಳ್ ಮಾತಿಗೆ ಯಾರೂ ಬೆಲೆ ಕೊಡಲ್ಲ. ಬಿಜೆಪಿಯಲ್ಲಿ ಕೆಲವರನ್ನು ಒದರಲು ಇಟ್ಟುಕೊಂಡಿದ್ದಾರೆ.ಬಿಜೆಪಿಯವರು ಕೆಲವರನ್ನು ನಾಯಿಗಳನ್ನು ಇಟ್ಟುಕೊಂಡಂತೆ ಒದರಲು ಇಟ್ಟು ಕೊಂಡಿರುತ್ತಾರೆ. ಹೀಗಾಗಿ ದಿನವಿಡೀ ಒದರುತ್ತಿರುತ್ತಾರೆ ಅದಕ್ಕೆ ಏನೂ ಮಾಡೋಕಾಗಲ್ಲ ಎಂದರು.

Read More

ವಿಜಯಪುರ : ರಾಜರಾಜೇಶ್ವರಿನಗರ ಬಿಜೆಪಿ ಶಾಸಕ ಮುನಿರತ್ನ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಮಾತನಾಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಇವಾಗ ಸಿಎಂ ಸಿದ್ದರಾಮಯ್ಯ, HD ದೇವೇಗೌಡ, ಶಿವರಾಜ್ ಕುಮಾರ್ ಎಲ್ಲರ ಮಿಮಿಕ್ರಿ ಮಾಡುತ್ತಾರೆ ಮುನಿರತ್ನ ಧ್ವನಿ ಮಿಮಿಕ್ರಿ ಮಾಡೋದು ಎನ್ ದೊಡ್ಡ ಮಾತು ಎಂದು ಪರೋಕ್ಷವಾಗಿ ಮುನಿರತ್ನ ಪರ ಬ್ಯಾಟ್ ಬೀಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅದು ಏನಿದೆ ನನಗೆ ಗೊತ್ತಿಲ್ಲ, ನಕಲಿ ಆಡಿಯೋಗಳನ್ನ ಸೃಷ್ಟಿಸುತ್ತಾರೆ. ಹಾಸ್ಯ ಕಲಾವಿದ ಒಬ್ಬ ಇದ್ದಾನೆ, ಎಷ್ಟು ಚೆಂದ ಮಿಮಿಕ್ರಿ ಮಾಡುತ್ತಾರೆ. ಆ ಮೂಲಕ ಪರೋಕ್ಷವಾಗಿ ಮುನಿರತ್ನ ಆಡಿಯೋ ಡೂಪ್ಲಿಕೇಟ್ ಎಂದು ಹೇಳಿದ್ದು, ಆಡಿಯೋ ಕುರಿತು ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ. ಹೀಗಾಗಿ ಮುನಿರತ್ನ ಪರ ಯತ್ನಾಳ್ ಪರೋಕ್ಷವಾಗಿ ಬ್ಯಾಟಿಂಗ್ ಮಾಡಿದ್ದು, ವೈಸ್ ರೆಕಾರ್ಡ್ಗಳನ್ನು ಡೂಪ್ಲಿಕೇಟ್ ಮಾಡುತ್ತಾರೆ. ಆಡಿಯೋ ಕುರಿತು ತನಿಖೆ ಆಗಲೆಂದು ಒತ್ತಾಯಿಸುತ್ತೇನೆ. ಈಗೀಗ ಯಾರು ಬೇಕಾದರೂ ಮಿಮಿಕ್ರಿ ಮಾಡುತ್ತಾರೆ. ಶಿವರಾಜ್ ಕುಮಾರ್ ಸಿದ್ದರಾಮಯ್ಯ ದೇವೇಗೌಡ್ರು ಎಲ್ಲರದು ಮಂತ್ರಿ ಮಾಡುತ್ತಾರೆ. ಮುನಿರತ್ನ ಅವರ…

Read More

ಬೆಳಗಾವಿ : ಇತ್ತೀಚಿಗೆ ಕೋಲಾರದಲ್ಲಿ ಶಿಕ್ಷಕನೊಬ್ಬನ ಮೊಬೈಲ್ ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ ಇದ್ದ ಪ್ರಕರಣ ಬೆಳಕಿಗೆ ಬಂದಿತ್ತು. ಈಗ ಬೆಳಗಾವಿಯಲ್ಲಿ ಕಾಮುಕ ಶಿಕ್ಷಕನೊಬ್ಬ ವಿದ್ಯಾರ್ಥಿನಿಯರಿಗೆ ಶೌಚಾಲಯದ ಫೋಟೋ ತೆಗೆದುಕೊಂಡು ಬನ್ನಿ ಎಂದು ಹೇಳಿದ್ದಲ್ಲದೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಹಿನ್ನೆಲೆಯಲ್ಲಿ, ಆತನನ್ನು ಬಂಧಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ನಡೆದಿದೆ. ಹೌದು ವಿದ್ಯಾರ್ಥಿನಿಯರ ಖಾಸಗಿ ಅಂಗಾಂಗಗಳನ್ನು ಮುಟ್ಟಿ ದೌರ್ಜನ್ಯವೆಸಗಿದ್ದ ಚಿಕ್ಕೋಡಿಯ ಸರ್ಕಾರಿ ಶಾಲೆಯ ಶಿಕ್ಷಕನನ್ನ ಪೊಲೀಸರು ಬಂಧಿಸಿದ್ದಾರೆ. ಶಿಕ್ಷಕ ಮೊಹಮ್ಮದ್​ ಸಾದಿಕ್ ಮಿಯಾ ಬೇಗ್ ಬಂಧಿತ ಆರೋಪಿ ಎಂದು ತಿಳಿದುಬಂದಿದ್ದು,ಮೊಹಮ್ಮದ್​ ಸಾದಿಕ್ ವಿದ್ಯಾರ್ಥಿನಿಯರ ಖಾಸಗಿ ಅಂಗಾಂಗಗಳನ್ನು ಮುಟ್ಟಿ ವಿಕೃತಿ ಮೆರದಿದ್ದಾನೆ. ಅಲ್ಲದೇ, ಶೌಚಕ್ಕೆ ಹೋಗುತ್ತಿದ್ದಾಗ ಖಾಸಗಿ ಅಂಗಾಂಗದ ಫೋಟೋ ತೆಗೆದುಕೊಂಡು ಬರುವಂತೆ ವಿದ್ಯಾರ್ಥಿನಿಯರಿಗೆ ಶಿಕ್ಷಕ ಮೊಹಮ್ಮದ್​ ಸಾದಿಕ್ ಹೇಳುತ್ತಿದ್ದನು. ಈ ಫೋಟೋಗಳನ್ನು ತನ್ನ ಮೊಬೈಲ್​ನಲ್ಲಿ ಸೇವ್​​ ಮಾಡಿಕೊಂಡಿದ್ದನು. ಬಂಧಿತ ಶಿಕ್ಷಕ ಮೊಹಮ್ಮದ್​ ಸಾದಿಕ್ ಮೊಬೈಲ್​ನಲ್ಲಿ 300ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ. ಹಾಗೇ ವಿದ್ಯಾರ್ಥಿನಿಯರ ಖಾಸಗಿ ಅಂಗಾಂಗಳ ಫೋಟೋಗಳು…

Read More

ಮಂಡ್ಯ : ಗಣೇಶ ಮೂರ್ತಿ ಪ್ರತಿಷ್ಠಾಪಿಸಿ 5ನೇ ದಿನವಾದ ಇಂದು, ರಾಜ್ಯದ ಎಲ್ಲಾ ಕಡೆ ಅತ್ಯಂತ ವಿಜೃಂಭಣೆಯಿಂದ ಗಣೇಶನ ವಿಸರ್ಜನೆ ಮಾಡಲಾಗುತ್ತೆ. ಆದರೆ ಇದೀಗ ಮಂಡ್ಯ ಜಿಲ್ಲೆಯಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ಮೇಲೆ ಮುಸ್ಲಿಂರು ಕಲ್ಲು, ಚಪ್ಪಲಿ ಎಸೆದಿರುವ ಘಟನೆ ಜಿಲ್ಲೆಯ ನಾಗಮಂಗಲ ತಾಲೂಕಿನ ಬದರಿಕೊಪ್ಪಲದಲ್ಲಿ ನಡೆದಿದೆ. ಹೌದು ಗಣಪತಿ ವಿಸರ್ಜನೆ ವೇಳೆ ಹಿಂದೂ ಮುಸ್ಲಿಂ ಗಲಾಟೆ ನಡೆದಿದ್ದು,ಗಣಪತಿ ಮೇಲೆ ಮುಸ್ಲಿಂರು ಕಲ್ಲು , ಚಪ್ಪಲಿ ತೂರಿರುವ ಘಟನೆ ನಾಗಮಂಗಲ ಪಟ್ಟಣದ ಮಂಡ್ಯದ ರಸ್ತೆಯಲ್ಲಿ ನಡೆದಿದೆ. ಘಟನೆಯಿಂದ ಸ್ಥಳದಲ್ಲಿ ಉದ್ತಿಕ್ತ ವಾತಾವರಣ ನಿರ್ಮಾಣವಾಗಿದ್ದು, ಠಾಣೆ ಮುಂದೆ ಗಣಪತಿ ತಂದು ಹಿಂದೂ ಯುವಕರ ಪ್ರತಿಭಟನೆ ನಡೆಸುತ್ತಿದ್ದಾರೆ. ಕಲ್ಲು ಚಪ್ಪಲಿ ತೂರಾಟ ಪ್ರಕರಷದಿಂದ ಸ್ಥಳದಲ್ಲಿ ಉದ್ರಿಕ್ತ ವಾತಾವರಣ ನಿರ್ಮಾಣವಾಗಿದೆ.ಕೂಡಲೇ ಸ್ಥಳಕ್ಕೆ ಪೊಲೀಸ್ ಇಲಾಖೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಿದೆ. ನಾಗಮಂಗಲದ ಬದರಿಕೊಪ್ಪಲಿನಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಯನ್ನು ಇಂದು ಅದ್ದೂರಿಯಾಗಿ ವಿಸರ್ಜನೆ ಮಾಡಲಾಗುತ್ತಿತ್ತು. ಈ ವೇಳೆ ಮೈಸೂರು ರಸ್ತೆಯಲ್ಲಿರುವ ದರ್ಗಾ ಬಳಿ ಮೆರವಣಿಗೆ ಬಂದ ವೇಳೆ ಅನುಕೋಮಿನವರು…

Read More