Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಬೆಂಗಳೂರು : ಬೆಂಗಳೂರಲ್ಲಿ ಬೆಸ್ಕಾಂ ನಿರ್ಲಕ್ಷಕ್ಕೆ ಮತ್ತೊಂದು ಜೀವ ಬಲಿಯಾಗಿದೆ. ಕಳೆದ ಜೂನ್ 15 ರಂದು ಕೆಆರ್ ಪುರಂನ ಸ್ವಾತಂತ್ರ್ಯ ನಗರದಲ್ಲಿ ಆಟವಾಡುತ್ತಾ ಬಾಲಕನೊಬ್ಬ ಪೋರಕೆಯನ್ನು ಹೈಟೆನ್ಶನ್ ವಿದ್ಯುತ್ ಬಳಿ ಎಸೆದಾಗ ಈ ವೇಳೆ ವಿದ್ಯುತ್ ಶಾಕ್ ನಿಂದ ಬಾಲಕ ಗಂಭೀರವಾಗಿ ಗಾಯಗೊಳ್ಳುತ್ತಾನೆ. ನಂತರ ಆತನನ್ನು ಸ್ಥಳಿಯ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗುತ್ತದೆ ಆದರೆ ಇಂದು ಚಿಕಿತ್ಸೆ ಫಲಿಸದೆ ಬಾಲಕ ಸಾವನ್ನಪ್ಪಿದ್ದಾನೆ. ಹೌದು ಹೈಟೆನ್ಷನ್ ವಿದ್ಯುತ್ ತಗುಲಿ ಗಾಯಗೊಂಡಿದ್ದ ಬಾಲಕ ಇದೀಗ ಸಾವನಪ್ಪಿದ್ದಾನೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ 10 ವರ್ಷದ ಅನಂತ್ ಕೊನೆಯುಸಿರೆಳಿದಿದ್ದಾನೆ. ಬೆಂಗಳೂರಿನ ಕೆಆರ್ ಪುರಂ ನ ಸ್ವಾತಂತ್ರ್ಯ ನಗರದಲ್ಲಿ ಘಟನೆ ನಡೆದಿದ್ದು, ನೇಪಾಳದಿಂದ ಬಂದು ಅನಂತ್ ಕುಟುಂಬ ಬೆಂಗಳೂರಿನಲ್ಲಿ ನೆಲೆಸಿತ್ತು. ಜೂನ್ 15ರಂದು ಪೊರಕೆ ಎಸೆಯುವ ವೇಳೆ ವಿದ್ಯುತ್ ಶಾಕ್ ತಗುಲಿ ಅನಂತ್ ಗಾಯಗೊಳ್ಳುತ್ತಾನೆ. ವಿಕ್ಟೊರಿಯ ಆಸ್ಪತ್ರೆಯಲ್ಲಿ ಅನಂತನಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಮಧ್ಯಾಹ್ನ 12:30 ಸುಮಾರಿಗೆ ಸಾವನ್ನಪ್ಪಿದ್ದಾನೆ ಘಟನೆ ಸಂಭಂದ ಕೆಆರ್ ಪುರಂ ಠಾಣೆಯಲ್ಲಿ ಪ್ರಕರಣ…
ಕಲಬುರಗಿ : ಕಲಬುರ್ಗಿಯಲ್ಲಿ ಭೀಕರ ಕೊಲೆಯಾಗಿದ್ದು, ಅಕ್ರಮ ಸಂಬಂಧಕ್ಕೆ ಅಡ್ಡಿ ಎಂದು ಗಂಡನನ್ನೆ ಪತ್ನಿ ಹಾಗೂ ಆಕೆಯ ಪ್ರೀಯಕರ ಸೇರಿ ಕೊಲೆಗೈದಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಭಾಗೋಡಿ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ಹತ್ಯೆಯಾದ ವ್ಯಕ್ತಿಯನ್ನು ಕಬ್ಬಲಿಗ ಸಮಾಜದ ತಿಪ್ಪಣ್ಣ ಕುಪೇಂದ್ರ (30) ಎಂದು ತಿಳಿದುಬಂದಿದೆ. ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಬಾರದೆಂದು ಶಾಂತಮ್ಮ ಮತ್ತು ಆಕೆಯ ಪ್ರಿಯಕರ ಸೇರಿ ತಿಪ್ಪಣ್ಣ ಕುಪೇಂದ್ರ ಎನ್ನುವವರನ್ನು ತಲೆದಿಂಬ್ಬಿಂದ ಮುಖವನ್ನು ಮುಚ್ಚಿ ಉಸಿರು ಗಟ್ಟಿಸಿ ಕೊಲೆಗೈದಿದ್ದಾರೆ ಎಂದು ತಿಳಿದು ಬಂದಿದೆ. ತಲೆ ದಿಂಬಿನಿಂದ ಮುಖವನ್ನು ಮುಚ್ಚಿ ಉಸಿರು ಗಟ್ಟಿಸುತ್ತಿರುವಾಗ ತಿಪ್ಪಣ್ಣ ಜೋರಾಗಿ ಕಿರುಚಿದ್ದು ಅಕ್ಕ ಪಕ್ಕದವರು ಬಂದು ಮನೆಯ ಬಾಗಿಲು ಬಡಿದಾಗ ಯಾರೂ ಮನೆಯ ಬಾಗಿಲು ತೆರೆಯಲಿಲ್ಲ ಇದರಿಂದ ಅನುಮಾನಗೊಂಡು 112 ಗೆ ಕರೆ ಮಾಡಿ ಪೊಲೀಸರನ್ನು ಕರೆಸಿದಾಗ ಕೊಲೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ. ಇತ್ತ ಪೊಲೀಸರು ಬರುವ ವಿಚಾರ ಗೊತ್ತಾಗುತ್ತಿದ್ದಂತೆ ಪ್ರಿಯಕರ ಅಟ್ಟದ ಮೇಲೆ ಹೋಗಿ ಅಲ್ಲಿನ ಕಿಟಕಿಯಿಂದ ಜಿಗಿದು ಪರಾರಿಯಾಗಿದ್ದಾನೆ. ಶಾಂತಮ್ಮನನ್ನು…
ಬೆಂಗಳೂರು : ಸ್ಯಾಂಡಲ್ ವುಡ್ ಖ್ಯಾತ ನಿರ್ದೇಶಕ ನಂದ ಕಿಶೋರ್ ವಿರುದ್ಧ ಗಂಭೀರವಾದ ಆರೋಪ ಕೇಳಿಬಂದಿದೆ. ಯುವ ನಟ ಶಬರೀಶ್, ನಂದ ಕಿಶೋರ್ ಅವರು ತಮ್ಮಿಂದ 22 ಲಕ್ಷ ರೂಪಾಯಿ ಹಣ ಪಡೆದುಕೊಂಡಿದ್ದು, ಈಗ ಹಣ ಕೊಡದೆ ಸತಾಯಿಸುತ್ತಿದ್ದಾರೆ. ಅಲ್ಲದೆ ಸುದೀಪ್ ಅವರ ಹೆಸರು ಬಳಸಿ ನನಗೆ ಬೆದರಿಕೆ ಸಹ ಹಾಕಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಹೌದು ಸುದೀಪ್ ನಟನೆಯ ರನ್ನ, ವಿಕ್ಟರಿ, ಅಧ್ಯಕ್ಷ, ಪೊಗರು, ಸೇರಿದಂತೆ ಇನ್ನೂ ಕೆಲ ಸಿನಿಮಾಗಳನ್ನು ನಿರ್ದೇಶಿಸಿರುವ ನಿರ್ದೇಶಕ ನಂದ ಕಿಶೋರ್ ವಿರುದ್ಧ ಯುವ ನಟ ಶಬರಿಶ್ ಹಣಕಾಸು ವಂಚನೆ ಆರೋಪ ಮಾಡಿದ್ದಾರೆ. ನಿರ್ದೇಶಕ ನಂದ ಕಿಶೋರ್, ತಮ್ಮಿಂದ 22 ಲಕ್ಷ ರೂಪಾಯಿ ಹಣ ಪಡೆದು ವಂಚನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ನಟ ಶಬರಿಶ್ ನಿರ್ದೇಶಕ ನಂದ ಕಿಶೋರ್ ಸುಮಾರು ಒಂಬತ್ತು ವರ್ಷಗಳ ಹಿಂದೆ ಜಿಮ್ ಒಂದರಲ್ಲಿ ಪರಿಚಯವಾದರಂತೆ. ಪರಿಚಯ ಗೆಳೆತನವಾಗಿ, ನಂದ ಕಿಶೋರ್, ಶರಬೀಶ್ ಅವರನ್ನು ಸಿಸಿಎಲ್ನಲ್ಲಿ ಆಡಿಸುವುದಾಗಿ ಭರವಸೆ ನೀಡಿ, ಶಬರೀಶ್ ಅವರಿಂದ…
ಬೆಂಗಳೂರು : ಗಾಳಿ ಮಳೆಯಿಂದ ಬೆಂಗಳೂರಿನ ಬನಶಂಕರಿ 2ನೇ ಹಂತದ ಶ್ರೀನಿವಾಸ ನಗರದಲ್ಲಿ ಮರದ ಕೊಂಬೆ ಬೈಕ್ ಸವಾರನ ಮೇಲೆ ಮುರಿದು ಬಿದ್ದ ಪರಿಣಾಮ ಅಕ್ಷಯ್ ತಲೆಗೆ ಗಂಭೀರವಾದ ಗಾಯವಾಗಿದ್ದು, ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಆದರೆ ಇಂದು ಹೃದಯಸ್ಥಂಬನದಿಂದ ಅಕ್ಷಯ್ ಸಾವನಪ್ಪಿದ್ದಾನೆ. ಈ ಹಿನ್ನೆಲೆಯಲ್ಲಿ ಇದೀಗ ಬೆಂಗಳೂರಿನ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಅಕ್ಷಯ್ ಸಹೋದರ ಬೆನಕ ರಾಜ್ ದೂರು ಆಧರಿಸಿ ಎಫ್ಐಆರ್ ದಾಖಲಾಗಿದೆ. RFO, ACF, DFO ಮತ್ತು ಇತರರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬಿ ಏನ್ ಎಸ್ ಕಾಯಿದೆ 105ರ ಅಡಿ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಅಕ್ಷಯ್ ಸಾವಿನ ನಂತರ ಕುಟುಂಬಸ್ಥರು ಸಾರ್ಥಕ ಮೆರೆದಿದ್ದು, ಅಕ್ಷಯ್ ಕಣ್ಣುಗಳನ್ನು ದಾನ ಮಾಡುವ ಮೂಲಕ ಮಾದರಿಯಾಗಿದ್ದಾರೆ. ಘಟನೆ ಹಿನ್ನೆಲೆ ಸಾವು ಬದುಕಿನ ನಡುವೆ ಹೋರಾಡುತ್ತಿರುವ ಬೈಕ್ ಸವಾರ ಅಕ್ಷಯ್ ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ತಲೆಗೆ ಶಸ್ತ್ರ ಸಹ ಮಾಡಲಾಗಿತ್ತು. ಆದ್ರೆ, ಅಕ್ಷಯ್ ಬ್ರೈನ್ ಡೆಡ್ ಆಗಿದೆ…
ಉತ್ತರಕನ್ನಡ : ಉತ್ತರ ಕನ್ನಡದಲ್ಲಿ ಲಾರಿಯಿಂದ ಗ್ರಾನೈಟ್ ಇಳಿಸುವಾಗ ಕಾರ್ಮಿಕನನ್ನು ರಕ್ಷಿಸಲು ಹೋಗಿ ಮಾಲೀಕನ ತಲೆಯ ಮೇಲೆ ಗ್ರಾನೆಟ್ ಬಿದ್ದು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಹೊಸಾಳಿ ಕ್ರಾಸ್ ಸಮೀಪದ ಬಿಡ್ತುಲಬಾಗದಲ್ಲಿ ನಡೆದಿದೆ. ಗ್ರಾನೈಟ್ ತಲೆ ಮೇಲೆ ಬಿದ್ದು ಉದ್ಯಮಿ ಮುದ್ದಣ್ಣ ಹನಮಪ್ಪ ಹಾಲುಂಡಿ (53) ಮೃತಪಟ್ಟಿದ್ದಾರೆ.ನಗರದ ಬಾಂಡಿಶಿಟ್ಟಾದ ಮುದ್ದಣ್ಣ ಅವರು ಮೂರು ತಾಲ್ಲೂಕಿನ ಮೂರು ಕಡೆ ಟೈಲ್ಸ್ ಮತ್ತು ಸಿರಾಮಿಕ್ಸ್ ಮಳಿಗೆ ನಡೆಸುತ್ತಿದ್ದರು.ದುರ್ಘಟನೆ ನಡೆದ ಬಿಡ್ತುಲಭಾಗದಲ್ಲಿ ಈಚೆಗಷ್ಟೆ ಹೊಸ ಮಳಿಗೆ ತೆರೆದಿದ್ದರು. ಮಲ್ಲಿಕಾರ್ಜುನ ಟೈಲ್ಸ್ ಹಾಗೂ ಸೆರಾಮಿಕ್ ಮಾಲೀಕರಾಗಿದ್ದ ಮುದ್ದಣ್ಣ, ಮೂಲತಃ ಕೊಪ್ಪಳ ಜಿಲ್ಲೆಯವರಾಗಿದ್ದರು. ಕೆಲವು ವರ್ಷಗಳಿಂದ ಬಾಂಡಿಶೆಟ್ಟಾದಲ್ಲಿ ವಾಸ ಮಾಡುತ್ತಿದ್ದರು. ಗ್ರಾನೈಟ್ ಕಲ್ಲುಗಳನ್ನು ಆಟೋ ಗೆ ತುಂಬುತ್ತಿದ್ದ ವೇಳೆ ಈ ಒಂದು ದುರ್ಘಟನೆ ಸಂಭವಿಸಿದೆ. ಗ್ರಾನೈಟ್ ಕಲ್ಲಿಗೆ ಹಗ್ಗ ಬಿಗಿಯುವಾಗ ತಲೆಯ ಮೇಲೆ ಗ್ರಾನೈಟ್ ಬಿದ್ದು ಸಾವನ್ನಪ್ಪಿದ್ದಾರೆ. ಘಟನೆ ಕುರಿತಂತೆ ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ರಸ್ತೆ ಡಾಂಬರೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ಇದೇ ಜೂನ್ 20 ಮತ್ತು 21 ರಂದು ಏರ್ಪೋರ್ಟ್ ರಸ್ತೆಯಲ್ಲಿರುವ ಹೆಬ್ಬಾಳ ಫ್ಲೈಓವರ್ ಬಳಿ ಎರಡು ದಿನಗಳ ಕಾಲ ರಸ್ತೆ ಬಂದ್ ಮಾಡಲಾಗಿದೆ. ಹಾಗಾಗಿ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ ನೀಡಲಾಗಿದೆ. ಬೆಂಗಳೂರಿನ ಹೆಬ್ಬಾಳ ಫ್ಲೈ ಓವರ್ ರಸ್ತೆ ಡಾಂಬರೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ಏರ್ಪೋರ್ಟ್ ರಸ್ತೆ ಎರಡು ದಿನ ಬಂದ್ ಇರಲಿದೆ. ಜೂನ್ 20 ಮತ್ತು 21ರ ರಾತ್ರಿಯ ವೇಳೆ ಹೆಬ್ಬಾಳ ಬಂದ್ ಇರಲಿದೆ ರಾತ್ರಿ 11:30 ರಿಂದ ಮುಂಜಾನೆ 5 ಗಂಟೆಯ ವರೆಗೆ ಹೆಬ್ಬಾಳ್ ಫ್ಲೈ ಓವರ್ ಬಂದ್ ಇರಲಿದೆ. ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ ನೀಡಲಾಗಿದೆ.
ಮಂಡ್ಯ : ಮಂಡ್ಯದಲ್ಲಿ ‘KSRTC’ ಡಿಪೋಗೆ ಇಂಧನ ಪೂರೈಕೆಯಲ್ಲಿ ಸದ್ದಿಲ್ಲದೆ ಟ್ಯಾಂಕರ್ ಮೂಲಕ ಇಂಧನ ಕಳ್ಳತನ ನಡೆಸಲಾಗುತ್ತಿದೆ. ಈ ಕುರಿತು ಇಂಧನ ಕಳ್ಳತನದ ಜಾಲವನ್ನು ಪಾಂಡವಪುರದ KSRTC ಘಟಕದ ಮ್ಯಾಕಾನಿಕ್ ಬಯಲಿಗೆಳೆದಿದ್ದಾನೆ. ಹೌದು ಮಂಡ್ಯದಲ್ಲಿ ಈ ಒಂದು ಇಂಧನ ಕಳ್ಳತನದ ಬಗ್ಗೆ ಮೆಕ್ಯಾನಿಕ್ ವಿಡಿಯೋ ಮೂಲಕ ಬಯಲಿಗೆ ಎಳೆದಿದ್ದು, ಸೋಷಿಯಲ್ ಮೀಡಿಯಾದಲ್ಲಿ KSRTC ಘಟಕಕ್ಕೆ ಟ್ಯಾಂಕರ್ ನಿಂದ ಇಂಧನ ಕಳ್ಳತನ ಪತ್ತೆ ಹಚ್ತಿರೋ ವಿಡಿಯೋ ವೈರಲ್ ಆಗಿದೆ. ಈ ಘಟನೆ ಬಗ್ಗೆ ಮಾಹಿತಿ ನೀಡಲು KSRTC ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ. ಮಂಡ್ಯ ಜಿಲ್ಲೆಯ ಪಾಂಡವಪುರ KSRTC ಡಿಪೋದಲ್ಲಿ ಈ ಒಂದು ಘಟನೆ ನಡೆದಿದೆ. ಟ್ಯಾಂಕರ್ ಒಳಭಾಗದಿಂದ ನಿಂದ ಫ್ಲೆಕ್ಸಿಬಲ್ ಪೈಪ್ ಮೂಲಕ ಇಂಧನ ಕಳ್ಳತನ ಮಾಡ್ತಿದ್ದ ಬಗ್ಗೆ ಮೆಕ್ಯಾನಿಕ್ ವಿಡಿಯೋ ಮೂಲಕ ಕಳ್ಳತನ ಬಹಿರಂಗಗೊಳಿಸಿದ್ದಾನೆ. ಹಾಸನದ HPCL ಘಟಕದಿಂದ ಟ್ಯಾಂಕರ್ ಮೂಲಕ ಡಿಪೋಗಳಿಗೆ ಇಂಧನ ಸರಬರಾಜು ಮಾಡಲಾಗುತ್ತಿತ್ತು. TN-02 BH 3039 ಟ್ಯಾಂಕರ್ ನಲ್ಲಿ ಪ್ರತಿ ಬಾರಿ ಅನ್ಲೋಡ್ ನಲ್ಲಿ ವೇಳೆ…
ಬೆಂಗಳೂರು : ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಅನುಮಾನದ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ‘ಫಿಕ್ಸಿಸ್’ ಎನ್ನುವ ಸ್ಪಾ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ವೇಶ್ಯಾವಾಟಿಕೆ ನಡೆಸುತ್ತಿದ್ದ ಅನುಮಾನದ ಮೇಲೆ ಸಿಸಿಬಿ ಸ್ಪಾ ಮೇಲೆ ದಾಳಿ ಮಾಡಿದೆ. ಬೆಂಗಳೂರಿನ ರಿಚ್ಮಂಡ್ ಟೌನ್ ನಲ್ಲಿರುವ ಫಿಕ್ಸಿಸ್ ಸ್ಪಾ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಸಿಸಿಬಿ ದಾಳಿ ವೇಳೆ ಬಾಂಗ್ಲಾದೇಶದ ಅಜಯಶೂರ ಜಿಲ್ಲೆಯ ಕುಲ್ನ ಪ್ರದೇಶದ ಯುವತಿ ಪತ್ತೆಯಾಗಿದ್ದಾಳೆ. ಫಿಕ್ಸಿಸ್ ಸ್ಪಾನಲಿ ಸಿಸಿಬಿ ಅಧಿಕಾರಿಗಳು ಇದೀಗ ದಾಳಿ ಪರಿಶೀಲನೆ ನಡೆಸುತ್ತಿದ್ದಾರೆ. ಎಸಿಪಿ ಧರ್ಮೇಂದ್ರ ನೇತೃತ್ವದಲ್ಲಿ ಈ ಒಂದು ದಾಳಿ ನಡೆದಿದೆ.
ಚಾಮರಾಜನಗರ : ಚಾಮರಾಜನಗರ ಜಿಲ್ಲೆಯಲ್ಲಿ ಹುಲಿ ದಾಳಿಗೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡಿಪುರ ಅರಣ್ಯ ಪ್ರದೇಶದ ಓಂಕಾರ ಅರಣ್ಯದಲ್ಲಿ ಈ ಒಂದು ಘಟನೆ ನಡೆದಿದೆ. ಹುಲಿ ದಾಳಿಗೆ ಪುಟ್ಟಮ (45) ಎನ್ನುವ ಮಹಿಳೆ ಬಲಿಯಾಗಿದ್ದಾರೆ. ಕುರಿ ಮೇಯಿಸಲು ತೆರಳಿದ ವೇಳೆ ದೇಶಿಪುರ ಕಾಲೋನಿಯ ಪುಟ್ಟಮ್ಮ ಬಲಿಯಾಗಿದ್ದಾರೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ದೇಶಿಪುರದ ಪುಟ್ಟಮ್ಮರನ್ನು ಹುಲಿ ಕೊಂದು ಸ್ವಲ್ಪದೂರು ಎಳೆದೊಯ್ದಿದೆ. ಘಟನಾ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಕೋಲಾರ : ಮಾವಿನ ಬಲೆ ತೀವ್ರವಾಗಿ ಕುಸಿತಗೊಂಡಿದ್ದರಿಂದ ವ್ಯಾಪಾರಿ ಒಬ್ಬರು ಹೃದಯಾಘಾತದಿಂದ ಸಾವನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಮಾವಿನ ತೋಟದಲ್ಲಿ ಕಟಾವು ಮಾಡುವ ವೇಳೆ ವ್ಯಾಪಾರಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕೋಲಾರ ತಾಲೂಕಿನ ತೊಟ್ಲಿ ಗ್ರಾಮದ ಮಾವಿನ ತೋಟದಲ್ಲಿ ಈ ಒಂದು ಘಟನೆ ನಡೆದಿದ್ದು, ಹೃದಯಘಾತದಿಂದ ಮೊಹಮ್ಮದ್ ಶಫಿವುಲ್ಲಾ ಅಲಿಯಾಸ್ ಅನ್ವರ್ (55) ಸಾವನ್ನಪ್ಪಿದ್ದಾರೆ. ಮೃತ ಅನ್ವರ್ ಕೋಲಾರ ಜಿಲ್ಲೆಯ ಶ್ರೀನಿವಾಸಪುರದ ನಿವಾಸಿ ಎನ್ನಲಾಗಿದ್ದು, ಸುಮಾರು 30 ಲಕ್ಷ ರೂಪಾಯಿ ಮಾವಿನ ವಹಿವಾಟು ಮಾಡಿದ್ದರು. ಇಂದು ಮಾವಿನ ಬೆಳೆ ಮತ್ತಷ್ಟು ಕುಸಿತ ಸುದ್ದಿ ತಿಳಿದು ತೀವ್ರ ಹೃದಯಘಾತವಾಗಿದೆ. ಬೆಲೆ ಕುಸಿತದಿಂದ ಬೆಳೆಗೆ ಔಷಧಿ ಸಿಂಪಡಿಸಿದ್ದರು. ಅದರ ದುಡ್ಡು ಸಹ ಬಾರದೇ ಸಂಕಷ್ಟ ಅನುಭವಿಸಿದ್ದರು. ಸಹ ದುಡ್ಡು ಬಾರದೇ ಸಂಕಷ್ಟ ಅನುಭವಿಸಿದ್ದರು. ಹಾಗಾಗಿ ಮಾವಿನ ತೋಟದಲ್ಲಿ ಅವರಿಗೆ ಹೃದಯಾಘಾತವಾಗಿದೆ. ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗಲೇ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾರೆ. ಮಾವಿನ ಬೆಳೆಗೆ ಬೆಂಬಲ ಬೆಲೆ 18 ದಿನಗಳಿಂದ ಹೋರಾಟ ನಡೆಸಲಾಗುತ್ತಿದೆ. ಸರ್ಕಾರದ ಹೋರಾಟಕ್ಕೆ ಸ್ಪಂದಿಸುತ್ತಿಲ್ಲ…













