Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ವಿದೇಶಾಂಗ ಸಚಿವ, ಎಸ್ ಎಂ ಕೃಷ್ಣ ಅವರು ತಡರಾತ್ರಿ ಹೃದಯಾಘಾತದಿಂದ ಸಾವನಪ್ಪಿದ್ದಾರೆ. ಅಗಲಿದ ನಾಯಕನಿಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಎಲ್ಲಾ ನಾಯಕರು, ಗಣ್ಯರು ಸಂತಾಪ ಸೂಚಿಸಿದ್ದಾರೆ. ಎಸ್ಎಮ್ ಕೃಷ್ಣ ಅವರ ಮನೆಯಲ್ಲಿಯೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ಹಲವು ಗಣ್ಯರು ರಾಜಕೀಯ ನಾಯಕರು ಅವರ ಅಂತಿಮ ದರ್ಶನ ಪಡೆದು ಸಂತಾಪಸೂಚಿಸಿದರು.ಇದೇ ವೇಳೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಅವರ ಕಾಲಿಗೆ ನಮಿಸಿ ಕಣ್ಣೀರು ಹಾಕಿ ಸಂತಾಪ ಸೂಚಿಸಿದರು. ಏಕೆಂದರೆ ಡಿ ಕೆ ಶಿವಕುಮಾರ್ ಅವರ ರಾಜಕೀಯ ಗುರು ಎಸ್ ಎಂ ಕೃಷ್ಣ ಅವರು ಆಗಿದ್ದರು. ಅವರ ಗರಡಿಯಲ್ಲಿ ಡಿಕೆ ಶಿವಕುಮಾರ್ ಅವರು ರಾಜಕೀಯವಾಗಿ ಬಹು ಎತ್ತರಕ್ಕೆ ಬೆಳೆದಿದ್ದಾರೆ. ಕಾಲಿಗೆ ನಮಸ್ಕರಿಸುವ ವೇಳೆ ಬಿಕ್ಕಿ ಬಿಕ್ಕಿ ಅತ್ತಿರುವ ದೃಶ್ಯ ಕಂಡು ಬಂದಿತು. ಇದೇ ಸಂದರ್ಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಚೆಲುವರಾಯಸ್ವಾಮಿ ಸೇರಿದಂತೆ ಹಲವು ಸಚಿವರು ಶಾಸಕರು ಭಾಗಿಯಾಗಿದ್ದರು. ಈಗಾಗಲೇ ಪ್ರಧಾನ ಮಂತ್ರಿ…
ಕಲಬುರ್ಗಿ : ಯಡ್ರಾಮಿಯಲ್ಲಿ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಶಿಕ್ಷಕನಿಂದಲೇ ಅತ್ಯಾಚಾರ ಪ್ರಕರಣ ಖಂಡಿಸಿ ಇಂದು ಕಲಬುರಗಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಆಂದೋಲಾ ಸಿದ್ದಲಿಂಗ ಸ್ವಾಮಿಜಿಯವರು, ಕಾಂಗ್ರೆಸ್ ಮುಖಂಡರೇ ಒಂದು ನೆನಪಿರಲಿ, ನಿಮ್ಮ ಮನೆಯ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಆದ್ರೂ ಕಾಂಗ್ರೆಸ್ ಪಕ್ಷ ನಿಮ್ಮ ನೆರವಿಗೆ ಬರಲ್ಲ ಎಂದು ಎಚ್ಚರಿಕೆ ನೀಡಿದರು. ಕಲಬುರ್ಗಿಯಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿ ನೇಹಾ ಹಿರೇಮಠ ಘಟನೆಯೇ ಇದಕ್ಕೆ ಜೀವಂತ ಸಾಕ್ಷಿ. ನೇಹಾ ಹಿರೇಮಠ ತಂದೆ ಕಾಂಗ್ರೆಸ್ನಲ್ಲಿದ್ದವರು ಎಂಬುದು ಗೊತ್ತೇ ಇದೆ. ನಾಳೆ ಆ ಪರಿಸ್ಥಿತಿ ನಿಮಗೂ ಬರಬಹುದು. ಕಾಂಗ್ರೆಸ್ ಮತ ಬ್ಯಾಂಕ್ ಗೆ ಆ ಸಮುದಾಯವನ್ನು ಏನು ಮಾಡಿದರೂ ಸಹಿಸಿಕೊಳ್ಳುತ್ತದೆ ಹೊರತು ನೀವು ನಂಬಿದ ಪಕ್ಷ ನಿಮ್ಮ ಸಹಾಯಕ್ಕೆ ಬರುವುದಿಲ್ಲ. ಕಾಂಗ್ರೆಸ್ ದಲಿತ ಪರ ಅಂತಾ ಮಾತುಮಾತಿಗೆ ಹೇಳ್ತಾರೆ. ನಿಜಕ್ಕೂ ಕಾಂಗ್ರೆಸ್ ದಲಿತ ಪರವಾಗಿ ಯಾವುದೇ ಕಾಳಜಿ ಇಲ್ಲ. ಭಾರತವೂ ಬಾಂಗ್ಲಾ, ಪಾಕಿಸ್ತಾನ ಆಗುತ್ತಿದೆ ಎಂದು ಕೆಲವು ಕಾಂಗ್ರೆಸ್ ಮುಖಂಡರು ಹೇಳುತ್ತಿದ್ದಾರೆ. ಭಾರತ ಬಾಂಗ್ಲಾ…
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಧ್ಯಂತರ ಜಾಮೀನು ಪಡೆದುಕೊಂಡು ನಟ ದರ್ಶನ್ ಬಿಡುಗಡೆಯಾಗಿದ್ದಾರೆ. ಆದರೆ 6 ವಾರ ಕಳೆದರೂ ಕೂಡ ಅವರು ಬೆನ್ನು ನೋವಿನ ಸಮಸ್ಯೆಗೆ ಸರ್ಜರಿ ಮಾಡಿಸಿಲ್ಲ. ಡಿಸೆಂಬರ್ 11ರಂದು ಅವರ ಮಧ್ಯಂತರ ಜಾಮೀನು ಅವಧಿ ಅಂತ್ಯವಾಗಲಿದೆ. ಹಾಗಾಗಿ ಇಂದು ಹೈಕೋರ್ಟ್ ನಲ್ಲಿ ನಟ ದರ್ಶನ್ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು. ಬಳಿಕ ನ್ಯಾಯಮೂರ್ತಿಗಳಾದ ಎಸ್ ವಿಶ್ವಜಿತ್ ಶೆಟ್ಟಿ ಅವರು ಜಾಮೀನು ಅರ್ಜಿಯ ಆದೇಶವನ್ನು ಕಾಯ್ದಿರಿಸಿ ಆದೇಶ ಹೊರಡಿಸಿದರು. ಈಗಾಗಲೆ ಬೆನ್ನು ನೋವಿನ ಸಮಸ್ಯೆ ತಿಳಿಸಿ ನಟ ದರ್ಶನ್ ಹೈಕೋರ್ಟ್ ನಿಂದ ಮಧ್ಯಂತರ ಜಾಮೀನು ಪಡೆದುಕೊಂಡು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಡಿಸೆಂಬರ್ 11ರಂದು ಅವರ ಮಧ್ಯಂತ ಜಾಮೀನು ಅವಧಿ ಮುಕ್ತಾಯವಾಗಲಿದೆ. ಹಾಗಾಗಿ ಕಳೆದ 5 ವಾರಗಳಿಂದ ಅವರು ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಯಾವುದೇ ಬೆನ್ನುನೋವಿನ ಶಸ್ತ್ರ ಚಿಕಿತ್ಸೆಗೂ ಕೂಡ ಅವರು ಒಳಗಾಗಿಲ್ಲ. ಹೀಗಾಗಿ ಇದೀಗ ಹೈಕೋರ್ಟ್ ನಲ್ಲಿ ಜಾಮೀನು ಅರ್ಜಿ…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆನ್ನು ನೋವಿನ ಕಾರಣ ತಿಳಿಸಿ ಬಳ್ಳಾರಿ ಜೈಲಿನಿಂದ ಮಧ್ಯಂತರ ಜಾಮೀನು ಪಡೆದುಕೊಂಡ ನಟ ದರ್ಶನವರು ಬೆಂಗಳೂರಿನ ಬಿ ಜಿ ಎಸ್ ಆಸ್ಪತ್ರೆಗೆ ಸರ್ಜರಿ ಮಾಡಿಸಿಕೊಳ್ಳಲು ದಾಖಲಾಗಿದ್ದರು. ಆದರೆ ಆರು ವಾರಗಳ ಕಳೆದರೂ ಕೂಡ ನಟ ದರ್ಶನ್ ಇದುವರೆಗೂ ಸರ್ಜರಿಗೆ ಒಳಗಾಗಿಲ್ಲ. ಇದೀಗ ನಟ ದರ್ಶನ್ ಪರ ವಕೀಲ ಸಿವಿ ನಾಗೇಶ್ ಅವರು ಡಿಸೆಂಬರ್ 11 ರಂದು ನಟ ದರ್ಶನ್ ಅವರಿಗೆ ಸರ್ಜರಿ ಮಾಡಿಸಲಾಗುತ್ತದೆ ಎಂದು ಮಾಹಿತಿ ನೀಡಿದರು. ಇಂದು ಹೈಕೋರ್ಟ್ ನಲ್ಲಿ ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಿತು.ಈ ವೇಳೆ ಸರ್ಕಾರದ ಪರ ಎಸ್ಪಿಪಿ ಪ್ರಸನ್ನ ಕುಮಾರ್ ಅವರ ಸುದೀರ್ಘವಾಗಿ ವಾದ ಮಂಡಿಸಿದರು. ಪ್ರಸನ್ನಕುಮಾರ್ ವಾದ ಅಂತ್ಯವಾದ ಬಳಿಕ ದರ್ಶನ್ ಪರ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದ್ದು, ದರ್ಶನ್ ನಡವಳಿಕೆ ಪರಿಗಣಿಸಬೇಕು ಎಂದು ಎಸ್ ಪಿ ಪಿ ವಾದಿಸಿದ್ದಾರೆ. ಸರ್ಜರಿಗಾಗಿ ಮಧ್ಯಂತರ ಜಾಮೀನು ಪಡೆದು ಮಾಡಿಸಿಲ್ಲವೆಂದು ವಾದಿಸಿದ್ದಾರೆ.…
ಬೆಳಗಾವಿ : ಈಗಾಗಲೇ ಸರ್ಕಾರವು ಬಿಪಿಎಲ್ ಕಾರ್ಡ್ ಪರಿಷ್ಕರಣೆಗೆ ಮುಂದಾಗಿ, ಅನರ್ಹ ಫಲಾನುಭವಿಗಳ ಕಾರ್ಡ್ಗಳನ್ನು ಬಿಪಿಎಲ್ ಇಂದ ಎಪಿಎಲ್ ಗೆ ಬದಲಾಯಿಸಿವೆ. ಇದರ ಬೆನ್ನಲ್ಲೇ ನಕಲಿ ಕಾರ್ಮಿಕರ ಕಾರ್ಡ್ ಗಳನ್ನು ಕೂಡ ರದ್ದು ಮಾಡಲಾಗುತ್ತದೆ. ನಕಲಿ ಕಾರ್ಡ್ ಹೊಂದಿದವರನ್ನು ಗುರುತಿಸಿ ಅವರ ಕಾರ್ಡುಗಳನ್ನು ರದ್ದು ಮಾಡಲಾಗುತ್ತದೆ ಎಂದು ಸಚಿವ ಸಂತೋಷ್ ಲಾಡ್ ತಿಳಿಸಿದರು. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಇಲಾಖೆಯ ಪ್ರತಿನಿಧಿಗಳು ನಮ್ಮ ಇಲಾಖೆಯಿಂದ ಲಾಭ ಪಡೆದ ಫಲಾನುಭವಿಗಳನ್ನು ಭೇಟಿಯಾಗಿ ಮಾಹಿತಿ ಕಲೆ ಹಾಕಲಿದ್ದಾರೆ. ಜೊತೆಗೆ, ನಕಲಿ ಕಾರ್ಮಿಕ ಕಾರ್ಡ್ಗಳನ್ನು ಪತ್ತೆ ಹಚ್ಚಿ ಅವುಗಳನ್ನು ರದ್ದು ಮಾಡುತ್ತೇವೆ. ನಾಲ್ಕೈದು ತಿಂಗಳಲ್ಲಿ ಶೇ.70 ರಿಂದ 80ರಷ್ಟು ನಕಲಿ ಕಟ್ಟಡ ಕಾರ್ಮಿಕ ಕಾರ್ಡ್ಗಳನ್ನು ರದ್ದು ಮಾಡುತ್ತೇವೆ ಎಂದರು. ಕಾರ್ಮಿಕ ಇಲಾಖೆಯಿಂದ ಅಂಬೇಡ್ಕರ್ ಸೇವಾ ಕೇಂದ್ರ ಎಂಬ ನೂತನ ಕಾರ್ಯಕ್ರಮಕ್ಕೆ ಜನವರಿ ಅಥವಾ ಫೆಬ್ರವರಿಯಲ್ಲಿ ಚಾಲನೆ ಸಿಗಲಿದೆ. ಈಗಾಗಲೇ 58 ಲಕ್ಷ ಇದ್ದ ಕಟ್ಟಡ ಕಾರ್ಮಿಕ ಕಾರ್ಡ್ಗಳನ್ನು 38 ಲಕ್ಷಕ್ಕೆ ತಂದಿದ್ದೇವೆ. ಹಾಗಾಗಿ ಶೀಘ್ರದಲ್ಲಿ ನಮ್ಮ ಇಲಾಖೆಯ…
ಹುಬ್ಬಳ್ಳಿ : ಬಳ್ಳಾರಿಯ ಆಸ್ಪತ್ರೆಯಲ್ಲಿ ಕಳೆದ ಒಂದು ತಿಂಗಳಲ್ಲಿ ಆರು ಜನ ಬಾಣಂತಿಯರು ಸಾವನ್ನಪ್ಪಿದ್ದರು. ಈ ಒಂದು ಪ್ರಕರಣ ಇನ್ನೂ ತನಿಖೆಯ ಹಂತದಲ್ಲಿದೆ. ಅಲ್ಲದೆ ಇತ್ತೀಚಿಗೆ ಬೆಳಗಾವಿಯಲ್ಲಿ ಕಳೆದ ಆರು ತಿಂಗಳಲ್ಲಿ 29 ಬಾಣಂತಿಯರು ಹಾಗೂ 322 ಶಿಶುಗಳು ಮೃತಪಟ್ಟಿರುವ ಸಂಗತಿ ಬಯಲಾಗಿತ್ತು. ಇದೀಗ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಕೂಡ ಬಾಣಂತಿಯರ ಹಾಗೂ ಶಿಶುಗಳ ಸಾವಾಗಿರುವುದು ಬೆಳಕಿಗೆ ಬಂದಿದೆ. ಹೌದು ಈ ಕುರಿತಂತೆ ಕಿಮ್ಸ್ ಆಸ್ಪತ್ರೆಯ ನಿರ್ದೇಶಕ ಡಾ.ಎಸ್.ಎಫ್.ಕಮ್ಮಾರ್ ಮಾಧ್ಯಮಗಳ ಜೊತೆ ಮಾತನಾಡಿ, ಜನವರಿಯಿಂದ ಈವರೆಗೆ 33 ಗರ್ಭಿಣಿಯರು, 148 ಶಿಶುಗಳ ಸಾವಾಗಿದೆ. ಬೇರೆ ಬೇರೆ ಕಾರಣಗಳಿಂದ ಗರ್ಭಿಣಿಯರು, ನವಜಾತ ಶಿಶುಗಳ ಸಾವಾಗಿದೆ, ಆದರೆ ಡ್ರಗ್ ಡಿಯಾಕ್ಟ್ನಿಂದ ಯಾರೂ ಮೃತಪಟ್ಟಿಲ್ಲ. ನ್ಯಾಷನಲ್ ಲೇವಲ್ ಡೆತ್ ರೇಟ್ ಹೇಗಿದೆ, ಹಾಗೆ ಹುಬ್ಬಳ್ಳಿ ಕಿಮ್ಸ್ನಲ್ಲಿ ಡೆತ್ ರೇಟ್ ಶೇಕಡ 3 ರಿಂದ 4 ರಷ್ಟಿದೆ ಎಂದು ಸ್ಪಷ್ಟನೆ ನೀಡಿದ್ದಾರೆ. ಕಿಮ್ಸ್ನಲ್ಲಿ ಡ್ರಗ್ ರಿಯಾಕ್ಟ್ನಿಂದ ಮೃತಪಟ್ಟಿರುವ ವರದಿಯಾಗಿಲ್ಲ, ಆದರೂ ಮುಂಜಾಗ್ರತಾ ಕ್ರಮವಾಗಿ ಸಮಿತಿ ರಚನೆ ಮಾಡಿದ್ದೇವೆ.…
ಬೆಳಗಾವಿ : ಜಮೀನು ವಿವಾದಕ್ಕೆ ಸಂಬಂಧಪಟ್ಟಂತೆ ಎರಡು ಕುಟುಂಬಗಳ ನಡುವೆ ಮಾರಕಾಸ್ತ್ರಗಳಿಂದ ಹೊಡೆದಾಟ ನಡೆದಿದ್ದು, ಘಟನೆಯಲ್ಲಿ ಐವರಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಖನದಾಳ ಎಂಬ ಗ್ರಾಮದಲ್ಲಿ ನಡೆದಿದೆ. ಎರಡು ಕುಟುಂಬಗಳ ನಡುವೆ ಜಮೀನು ವಿವಾದಕ್ಕೆ ಸಂಬಂಧಪಟ್ಟಂತೆ ಗಲಾಟೆ ನಡೆಯಿತು. ಈ ವೇಳೆ ಎರಡು ಕುಟುಂಬದ ಸದಸ್ಯರು ಮಾರಕಸ್ತ್ರಗಳಿಂದ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಈ ಒಂದು ಘಟನೆಯಲ್ಲಿ ಎರಡು ಕುಟುಂಬಗಳ ಸದಸ್ಯರ ಪೈಕಿ ಒಟ್ಟು 5 ಜನರು ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಅವರನ್ನು ಮುಗಳಖೋಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಳುಗಳನ್ನ ರಂಗಪ್ಪ ನಾಯಿಕ, ಪ್ರಹ್ಲಾದ್ ನಾಯಿಕ, ಲಕ್ಷ್ಮೀ ಬಾಯಿ ನಾಯಿಕ, ಗುರುಸಿದ್ದಪ್ಪ ನಾಯಿಕ, ಸುಪ್ರೀತ ನಾಯಿಕ ಗಾಯಗೊಂಡ ಗಾಯಾಳುಗಳು.ತಕ್ಷಣ ಎಲ್ಲರನ್ನು ಮುಗಳಖೋಡ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಗಾಯಾಳುಗಳನ್ನು ಚಿಕಿತ್ಸೆ ಕೊಡಿಸಲಾಗಿದೆ. ಗೋಪಾಲ ನಾಯಿಕ, ಸುರೇಶ ನಾಯಿಕ ಎಂಬವರು ಹಲ್ಲೆ ನಡೆಸಿರುವ ಆರೋಪಗಳು ಕೇಳಿ ಬಂದಿವೆ.
ಬೆಳಗಾವಿ : ಇಂದಿನಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಅಧಿವೇಶನ ಆರಂಭವಾಗಿದ್ದು, ವಕ್ಫ್ ವಿಚಾರವನ್ನು ಮುಂದಿಟ್ಟುಕೊಂಡು ವಿಪಕ್ಷಗಳು ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಗಿಬಿದ್ದಿವೆ ಈ ಬೆಳೆ ಸದನದಲ್ಲಿ ಇದೇ ವಿಚಾರ ಇಟ್ಕೊಂಡು ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿಸದರು. ಈ ವೇಳೆ ಸ್ಪೀಕರ್ ಯುಟಿ ಖಾದರ್ ಅವರು ಸದನವನ್ನು ಮಧ್ಯಾಹ್ನ 2:30ಕ್ಕೆ ಮುಂದೂಡಿದರು. ವಕ್ಫ್ ವಿಚಾರದ ಬಗ್ಗೆ ಬಿಜೆಪಿ ಸದಸ್ಯರು ಚರ್ಚೆಗೆ ಆಗ್ರಹಿಸಿದ್ದಾರೆ. ಈ ವೇಳೆ ಆಡಳಿತ ಪಕ್ಷ ಮತ್ತು ವಿಪಕ್ಷ ಸದಸ್ಯರ ನಡುವೆ ವಾಗ್ವಾದ ನಡೆಯಿತು. ಈ ವೇಳೆ ಸ್ಪೀಕರ್ ಯುಟಿ ಖಾದರ್ ವಿಧಾನಸಭೆಯ ಕಲಾಪ ಮುಂದೂಡಿದರು. ವಕ್ಫ್ ವಿಚಾರದ ಬಗ್ಗೆ ಚರ್ಚೆಗೆ ಅವಕಾಶ ಕೊಡುವಂತೆ ಬಿಜೆಪಿ ಗದ್ದಲ ನಡೆಸಿತು. ಗದ್ದಲದ ನಡುವೆ ಸ್ಪೀಕರ್ ಯುಟಿ ಖಾದರ್ ಮಾತು ಮುಂದುವರಿಸಿದರು. ಅನುಭವ ಮಂಟಪ ತೈಲ ಚಿತ್ರ ಅನಾವರಣದ ಬಗ್ಗೆ ಸ್ಪೀಕರ್ ಮಾತನಾಡಿದರು. ಬಳಿಕ ನಾಳಿನ ಪಂಚಮಸಾಲಿ ಹೋರಾಟಕ್ಕೆ ನಿರ್ಬಂಧ ವಿರೋಧಿಸಿ ಬಿಜೆಪಿ ಪ್ರತಿಭಟನೆ ನಡೆಸಿತು. ವಿಧಾನದ ಬಾವಿಗೆ ಇಳಿದು ಬಿಜೆಪಿ ಪಂಚಮಸಾಲಿ ಸಮುದಾಯದ ಶಾಸಕರು…
ರಾಯಚೂರು : ರಾಯಚೂರಿನಲ್ಲಿ ಇಂದು ಘೋರ ದುರಂತ ಒಂದು ಸಂಭವಿಸಿದ್ದು, ಬಟ್ಟೆ ತೊಳೆಯಲು ಎಂದು ತಾಯಿ ಮತ್ತು ಮಗ ಇಬ್ಬರು ಕೆರೆಗೆ ಹೋಗಿದ್ದಾರೆ.ಈ ವೇಳೆ ಕಾಲು ಜಾರಿ ಮಗ ಕೆರೆಗೆ ಬಿದ್ದಿದ್ದಾನೆ. ತಕ್ಷಣ ತಾಯಿ ಆತನ ರಕ್ಷಣೆಗೆ ತಾನು ಕೂಡ ಕೆರೆಗೆ ಜಿಗಿದಿದ್ದು ಇಬ್ಬರೂ ಕೂಡ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ರಾಯಚೂರು ತಾಲೂಕಿನ ಮಲಯಾಬಾದ್ ಗ್ರಾಮದಲ್ಲಿ ನಡೆದಿದೆ. ಹೌದು ರಾಯಚೂರು ತಾಲೂಕಿನ ಮಲಯಾಬಾದ್ ಗ್ರಾಮದಲ್ಲಿ ತಾಯಿ ರಾಧಮ್ಮ (32) ಹಾಗೂ ಮಗ ಕೆ ಸಂಜು (5) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ.ಬೆಳಿಗ್ಗೆ ಮಗನೊಂದಿಗೆ ರಾಧಮ್ಮ ಬಟ್ಟೆ ತೊಳೆಯಲು ಹೋಗಿದ್ದರು. ಇ ವೇಳೆ ಕಾಲು ಜಾರಿ ಕೆರೆಯಲ್ಲಿ ಮಗ ಸಂಜು ಬಿದ್ದಿದ್ದಾನೆ.ಮಗನನ್ನು ರಕ್ಷಿಸಲು ಹೋಗಿ ತಾಯಿ ರಾಧಮ್ಮ ಕೂಡ ಸಾವನ್ನಪ್ಪಿದ್ದಾರೆ ಯರಗೇರಾ ಪೊಲೀಸ್ ಠಾಣೆ ಎಲ್ಲಿ ಪ್ರಕರಣ ದಾಖಲಾಗಿದೆ.
ಮಂಡ್ಯ : ಇದೆ ಡಿಸೆಂಬರ್ 20 ರಿಂದ 22 ರವರೆಗೆ ಮಂಡ್ಯದಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ ಮಾಡಲಾಗಿದ್ದು, ಈ ಒಂದು ಸಮ್ಮೇಳನಕ್ಕೆ ಬರುವ ಎಲ್ಲಾ ಅತಿಥಿಗಳಿಗೆ ಬಾಡೂಟ ಇರಬೇಕು ಎಂದು ಅಗ್ರಹಿಸಿ ಮಂಡ್ಯದ ಜಿಲ್ಲಾಧಿಕಾರಿ ಕಚೇರಿಗಳ ಮುಂದೆ ಸಮಾನ ಮನಸ್ಕ ವೇದಿಕೆಯಿಂದ ಪ್ರತಿಭಟನೆ ನಡೆಸಲಾಯಿತು. ಮಂಡ್ಯದಲ್ಲಿ ಸಮಾನ ಮನಸ್ಕರ ವೇದಿಕೆಯಿಂದ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ಮಂಡ್ಯ ಜಿಲ್ಲಾಧಿಕಾರಿ ಕಚೇರಿಯ ಬಳಿ ಬೇಯಿಸಿದ ಮೊಟ್ಟೆ ತಿನ್ನುವ ಮೂಲಕ ಧರಣಿ ನಡೆಸಿದ್ದಾರೆ. ನಾಟಿ ಕೋಳಿ ಸಾರು, ಮಟನ್ ಕಬಾಬ್ ನೀಡಬೇಕೆಂದು ಅಗ್ರಹಿಸಿ ಧರಣಿ ನಡೆಸುತ್ತಿದ್ದಾರೆ. ಮಂಡ್ಯ ಅಂದರೆ ಬೆಳೆಯು ಇರಲಿ, ಮೂಳೆಯೂ ಇರಲಿ ನಾವು ಬಾಡೂಟ ನೀಡಿ ಅತಿಥಿ ಸತ್ಕಾರ ಮಾಡಬೇಕು. ಕೋಸಂಬರಿ ಜೊತೆಗೆ ಎಗ್ ಬುರ್ಜಿಯು ಇರಲಿ. ಹಪ್ಪಳ ಜೊತೆಗೆ ಕೊರಬಾಡು, ಕಬಾಬ್ ಇರಲಿ. ಮುದ್ದೆ ಜೊತೆಗೆ ಡ್ಯೂಟಿ ಗೊಜ್ಜು ಇರಲಿ ಎಂದು ಘೋಷಣೆ ಕೂಗಿ ಧರಣಿ ನಡೆಸಿದರು. ಬಾಡೂಟ ಕೊಡದಿದ್ದರೆ…













