Author: kannadanewsnow05

ಹಾಸನ : ಕಳೆದ ಎರಡು ದಿನಗಳಿಂದ ವಿಧಾನಸಭೆಯಲ್ಲಿ ಹನಿಟ್ರ್ಯಾಪ್ ಕುರಿತು ಗಂಭೀರವಾಗಿ ಚರ್ಚೆ ನಡೆಯಿತು. ಈ ವೇಳೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಹಕಾರ ಸಚಿವ ಕೆಎನ್ ರಾಜಣ್ಣ ಮೇಲೆ ಹನಿ ಟ್ರ್ಯಾಪ್ ನಡೆದಿದೆ ಎಂದು ಸ್ಪೋಟಕ ಹೇಳಿಕೆ ನೀಡಿದರು. ಇದಕ್ಕೆ ಸ್ಪಷ್ಟನೆ ನೀಡಿದ ಸಹಕಾರ ಸಚಿವ ಕೆ.ಎನ್ ರಾಜಣ್ಣ ಅವರು ನನ್ನ ಮೇಲೆ ಹನಿಟ್ರ್ಯಾಪ್ ಪ್ರಯತ್ನ ನಡೆದಿತ್ತು ಆದರೆ ನಾನು ಹನಿಟ್ರ್ಯಾಪ್ ಗೆ ಬಿದ್ದಿಲ್ಲ ಈ ಕುರಿತು ಗೃಹ ಸಚಿವರಿಗೆ ದೂರು ನೀಡುತ್ತೇನೆ ಎಂದು ತಿಳಿಸಿದ್ದರು. ಇದೀಗ ಈ ಒಂದು ಹನಿಟ್ರ್ಯಾಪ್ ವಿಚಾರಕ್ಕೆ ಸಂಬಂಧಪಟ್ಟಂತೆ ಹಾಸನದ ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡ ರಾಜ್ಯದಲ್ಲಿ ಹನಿಟ್ರ್ಯಾಪ್ ಪಿತಾಮಹ ಡಿಕೆ ಶಿವಕುಮಾರ್ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ರಾಜಕಾರಣಿಗಳ ಹನಿಟ್ರ್ಯಾಪ್ ಬಗ್ಗೆ ವರ್ಷದ ಹಿಂದೆಯೇ ನಾನು ಹೇಳಿದ್ದೆ. ಡಿಸಿಎಂ ಡಿಕೆ ಶಿವಕುಮಾರ್ ರಾಜಕೀಯ ಲಾಭಕ್ಕಾಗಿ ಅಧಿಕಾರದ ದಾಹದಿಂದ ಏನೇನು ಮಾಡುತ್ತಾರೆ ಎಂದು ಎಳೆ ಎಳೆಯಾಗಿ ಹೇಳಿದ್ದೆ. ಅಂದು…

Read More

ಬೆಂಗಳೂರು: ವಿಧಾನಸಭೆಯಲ್ಲಿ ಬಿಜೆಪಿ ತೀವ್ರ ವಿರೋಧ, ಗದ್ದಲದ ನಡುವೆ ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲೀಮರಿಗೆ ಶೇ.4ರಷ್ಟು ಮೀಸಲಾತಿಯ ಮಸೂಧೆಯನ್ನು ಅಂಗೀಕಾರ ನೀಡಲಾಯಿತು. ಮುಸ್ಲಿಂ ಗುತ್ತಿಗೆದಾರರಿಗೆ ಟೆಂಡರ್ ಗಳಲ್ಲಿ ಶೇ 4ರಷ್ಟು ಮೀಸಲಾತಿ ನೀಡುವ ಉದ್ದೇಶದಿಂದ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ (ಕೆಟಿಪಿಪಿ) ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿತ್ತು. ಈ ಮಸೂದೆಯನ್ನು ಇಂದು ವಿಧಾನಸಭೆಯಲ್ಲಿ ರಾಜ್ಯ ಸರ್ಕಾರ ಮಂಡಿಸಿತ್ತು. ಈ ಮಸೂದೆಯಲ್ಲಿ ಒಂದು ಕೋಟಿಯವರೆಗಿನ ಕಾಮಗಾರಿಗಳಲ್ಲಿ ಮುಸ್ಲೀಮರಿಗೆ ಮೀಸಲಾತಿ, ಹಿಂದುಳಿದ, ಇತರೇ ಹಿಂದುಳಿದ ವರ್ಗಗಳಿಗೆ ಮಾತ್ರ ಇದ್ದ ಕಾಮಗಾರಿ ಮೀಸಲಾತಿ, ಮುಸ್ಲೀಂ ಸಮುದಾಯಕ್ಕೂ ಮೀಸಲಾತಿ ವಿಸ್ತರಿಸಿ ಗುತ್ತಿಗೆ ನೀಡಲು ಅವಕಾಶ ನೀಡಲಾಗಿತ್ತು. ಎಸ್.ಸಿ ಎಸ್.ಟಿ ಸಮುದಾಯಕ್ಕೆ ಈ ಹಿಂದೆ ಇದ್ದ 1 ಕೋಟಿಯವರೆಗಿನ ಮೊತ್ತ ವಿಸ್ತರಿಸಿ 2 ಕೋಟಿಯವರೆಗೆ ಮೀಸಲಾತಿ ಅವಕಾಶ ನೀಡಲಾಗಿದೆ. ವಿಧೇಯಕವನ್ನು ಇದೇ ಅಧಿವೇಶನದಲ್ಲಿ ಮಂಡಿಸಲು ಸಿಎಂ ಸಿದ್ಧರಾಮಯ್ಯ ಅವರ ನೇತೃತ್ವದ ರಾಜ್ಯ ಸಂಪುಟ ಅನುಮೋದನೆ ನೀಡಿತ್ತು. ಇಂದು ವಿಧಾನಸಭೆಯಲ್ಲಿ ಮಂಡಿಸಿ, ಸರ್ಕಾರಿ ಕಾಮಗಾರಿಗಳ…

Read More

ಹಾಸನ : ಕಳೆದ ಎರಡು ದಿನಗಳಿಂದ ವಿಧಾನಸಭೆಯಲ್ಲಿ ಹನಿಟ್ರ್ಯಾಪ್ ಕುರಿತು ಗಂಭೀರವಾಗಿ ಚರ್ಚೆ ನಡೆಯಿತು. ಈ ವೇಳೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಹಕಾರ ಸಚಿವ ಕೆಎನ್ ರಾಜಣ್ಣ ಮೇಲೆ ಹನಿ ಟ್ರ್ಯಾಪ್ ನಡೆದಿದೆ ಎಂದು ಸ್ಪೋಟಕ ಹೇಳಿಕೆ ನೀಡಿದರು. ಇದಕ್ಕೆ ಸ್ಪಷ್ಟನೆ ನೀಡಿದ ಸಹಕಾರ ಸಚಿವ ಕೆ.ಎನ್ ರಾಜಣ್ಣ ಅವರು ನನ್ನ ಮೇಲೆ ಹನಿಟ್ರ್ಯಾಪ್ ಪ್ರಯತ್ನ ನಡೆದಿತ್ತು ಆದರೆ ನಾನು ಹನಿಟ್ರ್ಯಾಪ್ ಗೆ ಬಿದ್ದಿಲ್ಲ ಈ ಕುರಿತು ಗೃಹ ಸಚಿವರಿಗೆ ದೂರು ನೀಡುತ್ತೇನೆ ಎಂದು ತಿಳಿಸಿದ್ದರು. ಇದೀಗ ಈ ಒಂದು ಹನಿಟ್ರ್ಯಾಪ್ ವಿಚಾರಕ್ಕೆ ಸಂಬಂಧಪಟ್ಟಂತೆ ಹಾಸನದ ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡ ರಾಜ್ಯದಲ್ಲಿ ಹನಿಟ್ರ್ಯಾಪ್ ಪಿತಾಮಹ ಡಿಕೆ ಶಿವಕುಮಾರ್ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ರಾಜಕಾರಣಿಗಳ ಹನಿಟ್ರ್ಯಾಪ್ ಬಗ್ಗೆ ವರ್ಷದ ಹಿಂದೆಯೇ ನಾನು ಹೇಳಿದ್ದೆ. ಡಿಸಿಎಂ ಡಿಕೆ ಶಿವಕುಮಾರ್ ರಾಜಕೀಯ ಲಾಭಕ್ಕಾಗಿ ಅಧಿಕಾರದ ದಾಹದಿಂದ ಏನೇನು ಮಾಡುತ್ತಾರೆ ಎಂದು ಎಳೆ ಎಳೆಯಾಗಿ ಹೇಳಿದ್ದೆ. ಅಂದು…

Read More

ಕಲಬುರ್ಗಿ : ಕಲ್ಬುರ್ಗಿಯಲ್ಲಿ ಯುವಕನೊಬ್ಬ ಬ್ರಿಡ್ಜ್ ಮೇಲಿಂದ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲ್ಬುರ್ಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಕುರಿಕೋಟಾ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವಕನನ್ನು ಸಮೀರ್ (23) ಎಂದು ಗುರುತಿಸಲಾಗಿದೆ. ಕಲ್ಬುರ್ಗಿಯ ಮಿಲ್ಲತ್ ನಗರದ ನಿವಾಸಿಯಾಗಿರುವಂತ ಸಮೀರ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನಾ ಸ್ಥಳದಲ್ಲಿ ಸಮೀರ್ ಶವಕ್ಕಾಗಿ ಎಸ್ ಡಿ ಆರ್ ಎಫ್ ಮತ್ತು ಪೊಲೀಸರು ತೀವ್ರ ಹುಡುಕಾಟ ಮುಂದುವರಿಸಿದ್ದಾರೆ, ಮಹಾಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಮನೆಯ ಬಳಿ ವೆಹಿಕಲ್ ಪಾರ್ಕ್ ವಿಚಾರಕ್ಕೆ ಗಲಾಟೆ ನಡೆದಿದ್ದು, ಬೆಂಗಳೂರಿನ ಮೈಕೋ ಲೇಔಟ್ ನಲ್ಲಿ ಈ ಒಂದು ಗಲಾಟೆ ನಡೆದಿದೆ. ಅಕ್ಕ ಪಕ್ಕದ ಮನೆ ನಿವಾಸಿಗಳು ವೆಹಿಕಲ್ ಪಾರ್ಕಿಂಗ್ ವಿಚಾರಕ್ಕೆ ಗಲಾಟೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಗಲಾಟೆ ವೇಳೆ ಯುವತಿಯ ಮೇಲೆ ಯುವಕ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಈ ಹಿಂದೆಯೂ ಕೂಡ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಮಾಡಿಕೊಂಡಿದ್ದರು. ಹಲ್ಲೆಗೆ ಒಳಗಾದ ಯುವತಿಗೆ ಸದ್ಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದೂರು ದಾಖಲಿಸಿಕೊಳ್ಳಲು ಪೊಲೀಸರು ಹಿಂದೇಟು ಹಾಕಿದ್ದಾರೆ ಎನ್ನುವ ಆರೋಪ ಕೂಡ ಕೇಳಿ ಬಂದಿದೆ. ಬಿಟಿಎಂ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Read More

ಬೆಂಗಳೂರು : ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಹಲ್ಲೆಯನ್ನು ಖಂಡಿಸಿ ನಾಳೆ ಕನ್ನಡಪರ ಸಂಘಟನೆಗಳು ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳ ಬಂದ್ ಕುರಿತಂತೆ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ ನೀಡಿದ್ದು, ನಾಳೆ ಶಾಲಾ-ಕಾಲೇಜುಗಳು ಬಂದು ಕುರಿತಂತೆ ಇನ್ನೂ ತೀರ್ಮಾನಿಸಿಲ್ಲ ಎಂದು ತಿಳಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಶಿಕ್ಷಣ ಸಚಿವರು, ಶಾಲಾ-ಕಾಲೇಜು ರಜೆ ಬಗ್ಗೆ ಈವರೆಗೆ ಯಾವುದೇ ತೀರ್ಮಾನ ಮಾಡಿಲ್ಲ.ನಾಳೆ ಕರ್ನಾಟಕ ಬಂದ್ ಹಿನ್ನೆಲೆ ಶಾಲೆ ಬಂದ್ ಮಾಡುವ ನಿರ್ಧಾರ ಮಾಡಿಲ್ಲ.ಗೃಹ ಸಚಿವ ಹಾಗೂ ಸಾರಿಗೆ ಸಚಿವರ ಜೊತೆ ಈ ವಿಚಾರವಾಗಿ ಮಾತುಕತೆ ನಡೆಸುತ್ತೇನೆ. ಅವರು ಏನು ಹೇಳ್ತಾರೆ ಅದರ ಮೇಲೆ ನಿರ್ಧಾರ ಮಾಡಲಾಗುತ್ತದೆ. ಅಲ್ಲದೇ ಸಾರಿಗೆ ಹಾಗೂ ಸರಿಯಾದ ಭದ್ರತೆ ಇಲ್ಲದೆ ಶಾಲೆಗಳನ್ನು ತೆರೆಯುವುದು ಕಷ್ಟವಾಗುತ್ತದೆ. ನಾಳೆ ಮೌಲ್ಯಾಂಕನ ಪರೀಕ್ಷೆ ಇದೆ. ಆದರೆ ಗೃಹ ಇಲಾಖೆ ಹಾಗೂ ಸಾರಿಗೆ ಇಲಾಖೆಯ ನಿರ್ಧಾರ ನೋಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

Read More

ಬೆಂಗಳೂರು : ಸ್ಪೀಕರ್ ಪೀಠಕ್ಕೆ ಅಗೌರವ ತೋರಿದ ಹಿನ್ನೆಲೆಯಲ್ಲಿ ಇಂದು ಬಿಜೆಪಿ 18 ಶಾಸಕರನ್ನು ಆರು ತಿಂಗಳುಗಳ ಕಾಲ ವಿಧಾನಸಭೆಯಿಂದ ಅಮಾನತು ಮಾಡಿ ಸ್ಪೀಕರ್ ಯುಟಿ ಖಾದರ್ ಆದೇಶಿಸಿದರು.ಈ ಕುರಿತು ಅಮಾನತು ಶಾಸಕ ಅಶ್ವಥ್ ನಾರಾಯಣ್ ಕಾನೂನನ್ನು ನಾವು ಕೈಗೆ ತೆಗೆದುಕೊಂಡಿಲ್ಲ ಹೊಡೆದಾಟ ಮಾಡಿಲ್ಲ ಕೂಡಲೇ ಅಮಾನತು ಆದೇಶ ಹಿಂಪಡೆಯಬೇಕು ಎಂದು ಬೆಂಗಳೂರಿನಲ್ಲಿ ಶಾಸಕ ಅಶ್ವತ್ ನಾರಾಯಣ್ ಆಗ್ರಹಿಸಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹನಿಟ್ರ್ಯಾಪ್ ಬಗ್ಗೆ ದಲಿತ ಸಚಿವರು ಅಳಲು ತೋಡಿಕೊಂಡಿದ್ದಾರೆ. ಈ ಬಗ್ಗೆ ಕೂಡಲೇ ಸಿಟ್ಟಿಂಗ್ ಜಡ್ಜ್ ಮೂಲಕವೇ ತನಿಖೆ ಮಾಡಿಸಬೇಕು. ಕಾಂಗ್ರೆಸ್ ಸರ್ಕಾರದಲ್ಲಿ ಮನಬಂದಂತೆ ಆಡಳಿತ ನಡೆಸುತ್ತಿದ್ದಾರೆ. ಸೆಕ್ಸ್ ಸ್ಕ್ಯಾಂಡಲ್ ನಲ್ಲಿ ಸರ್ಕಾರ ತೊಡಗಿದೆ ಅಲ್ಲದೆ ಸಂವಿಧಾನದ ವಿರುದ್ಧವಾಗಿ ಮೀಸಲಾತಿ ನೀಡಲಾಗಿದೆ ಎಂದು ಕಿಡಿ ಕಾರಿದರು. ಅಧಿಕಾರ ದುರುಪಯೋಗ ಮಾಡಿಕೊಳ್ಳಲಾಗಿದೆ. ಕಾನೂನು ಬದ್ಧವಾಗಿ ನಾವು ಸದನದಲ್ಲಿ ಪ್ರತಿಭಟನೆ ಮಾಡಿದ್ದೇವೆ. ಆದರೆ ನಮ್ಮನ್ನು 6 ತಿಂಗಳ ಕಾಲ ಅಮಾನತು ಮಾಡಿದ್ದಾರೆ. ನಾವೇನು ಯಾರನ್ನು ತಳ್ಳಿಲ್ಲ, ಪೇಪರ್ ಎರಚಿಲ್ಲ. ಪ್ರತಿಭಟನೆ…

Read More

ಬೆಂಗಳೂರು : ನಿನ್ನೆಯಿಂದ ವಿಧಾನಸಭೆಯಲ್ಲಿ ಸದ್ಯಕ್ಕೆ ಹನಿಟ್ರ್ಯಾಪ್ ವಿಚಾರ ಭಾರಿ ಚರ್ಚೆ ಆಗುತ್ತಿದ್ದು, ನಿನ್ನೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಸಹಕಾರ ಸಚಿವ ಕೆ.ಎನ್ ರಾಜಣ್ಣ ಮೇಲೆ ಹನಿಟ್ರ್ಯಾಪ್ ಮಾಡಲಾಗಿದೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದರು. ಬಳಿಕ ಕೆ.ಎನ್ ರಾಜಣ್ಣ ನನ್ನ ಮೇಲೆ ಹನಿಟ್ರ್ಯಾಪ್ ಮಾಡಿದ್ದು ನಿಜ. ಆದರೆ ನಾನು ಅದಕ್ಕೆ ಬಿದ್ದಿಲ್ಲ. ಈ ಕುರಿತು ಗೃಹ ಸಚಿವರಿಗೆ ದೂರು ನೀಡುತ್ತೇನೆ ಎಂದು ಹೇಳಿಕೆ ನೀಡಿದ್ದರು. ಈ ಒಂದು ಚರ್ಚೆಯ ವೇಳೆ ಶಾಸಕ ಮುನಿರತ್ನ ರೋಷಾವೇಶದಲ್ಲಿ ದೇವರ ಫೋಟೋ ತೋರಿಸಿ ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಭಾವುಕರಾಗಿದ್ದರು. ಆದರೆ ಇದೀಗ ಈ ಹಿಂದೆ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರದ ಆರೋಪ ಮಾಡಿದ್ದ ಮಹಿಳೆ ಮುನಿರತ್ನ ವಿರುದ್ಧ ಮತ್ತೊಂದು ಗಂಭೀರ ಆರೋಪ ಮಾಡಿದ್ದು, ಹೆತ್ತ ಮಗಳ ವಿರುದ್ಧವೇ ಮುನಿರತ್ನ ಹನಿಟ್ರ್ಯಾಪ್ ಮಾಡಿಸಿದ್ದ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುನಿರತ್ನ ಮಗಳಿಗೆ ಮದುವೆಯಾದ ನಂತರವೂ ರಂಜಿತ್…

Read More

ಗದಗ : ತನ್ನನ್ನು ಲವ್​ ಮಾಡು, ಮದುವೆಯಾಗು ಅಂತಾ 47ರ ವರ್ಷ 19 ವಯಸ್ಸಿನ ಯುವತಿಯನ್ನು ಪೀಡಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಮನನೊಂದ ಯುವತಿಯು ಫಿನಾಯಿಲ್ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ವೀರಾಪೂರ ತಾಂಡಾದಲ್ಲಿ ನಡೆದಿದೆ. ತಾಂಡಾದ ನಿವಾಸಿ ಕಿರಣ್​ ಎನ್ನುವವನು ನೀಡಿದ ಕಿರುಕುಳಕ್ಕೆ ಯುವತಿಯ ವಂದನಾ ಎಂಬುವವರು ಫಿನಾಯಿಲ್​ ಕುಡಿದು ಸಾವನಪ್ಪಿದ್ದಾರೆ.19 ವರ್ಷದ ವಂದನಾಗೆ 47 ವರ್ಷದ ಕಿರಣ ಎಂಬಾತ ಮದುವೆಯಾಗುವಂತೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ನಿತ್ಯ ಫೋನ್‌ ಮಾಡಿ ಮದುವೆಯಾಗುವಂತೆ ಪೀಡಿಸುತ್ತಿದ್ದ, ಮದುವೆ ಆಗದೆ ಹೋದ್ರೆ ಫೋಟೋಸ್ ಗಳನ್ನು ಎಡಿಟ್ ಮಾಡಿ ಸೊಸಿಯಲ್ ಮೇಡಿಗೆ ಹಾಕುತ್ತೇನೆ ಹೆದರಿಸಿದ್ದಾನೆ ಎನ್ನಲಾಗುತ್ತಿದೆ. ಇದರಿಂದ ಬೇಸತ್ತ ವಂದನಾ ಹಾಸ್ಟೆಲ್ ನಲ್ಲಿ ಪಿನಾಯಿಲ್ ಸೇವಿಸಿದ್ದಳು. ಆಕೆಯನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ.ನಮ್ಮ‌ ಕುಟುಂಬಕ್ಕೆ ಹಿರಿಯ ಮಗಳು ವಂದಾನ. ಗಂಡ ಇಲ್ಲವಾದರೂ ಸಹ ಕಷ್ಟಪಟ್ಟು ಮೂವರು ಮಕ್ಕಳನ್ನು ಚನ್ನಾಗಿ ಬೆಳೆಸಿದ್ದೆ. ಮೂವರ ಪೈಕಿ ಕಿರಿಯ ಮಗಳು…

Read More

ಮೈಸೂರು : ಮಕ್ಕಳನ್ನು ಸಾಕುವುದಕ್ಕೆ ಕಷ್ಟ ಆಗುತ್ತಿದೆ ಎಂದು ತಂದೆ ತಾಯಿ ಎರಡು ವರ್ಷದ ಹೆತ್ತ ಕಂದಮ್ಮನನ್ನೇ ಮಾರಾಟ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನಲ್ಲಿ ನಡೆದಿದೆ. ಹೌದು ನಂಜನಗೂಡು ಪಟ್ಟಣದ ನೀಲಕಂಠೇಶ್ವರ ನಗರದಲ್ಲಿ ತಂದೆ ತಾಯಿಗಳಿಬ್ಬರು ಎರಡು ವರ್ಷದ ತಮ್ಮ ಹೆಣ್ಣು ಮಗುವನ್ನು 14 ಸಾವಿರಕ್ಕೆ ಮಾರಾಟ ಮಾಡಿದ್ದಾರೆ.ನಂಜನಗೂಡು ಪಟ್ಟಣದ ದಂಪತಿ ತಮ್ಮ ಮೂರು ಮಕ್ಕಳಲ್ಲಿ ಎರಡು ವರ್ಷದ ಹೆಣ್ಣು ಮಗುವನ್ನು ಮಧ್ಯವರ್ತಿ ಸಹಾಯದಿಂದ ಚಾಮರಾಜನಗರ ಜಿಲ್ಲೆಯ ಗ್ರಾಮವೊಂದಕ್ಕೆ ಮಾರ್ಚ್‌ 13 ರಂದು 14 ಸಾವಿರ ರೂಪಾಯಿಗೆ ಮಾರಾಟ ಮಾಡಿದ್ದರು. ಈ ಬಗ್ಗೆ ಮಾಹಿತಿ ಪಡೆದ ಸ್ಥಳೀಯ ಅಂಗನವಾಡಿ ಶಿಕ್ಷಕಿ, ಮಗು ಮಾರಾಟದ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಈ ವಿಚಾರ ತಿಳಿದ ಮಹಿಳಾ ಮತ್ತು ಮಕ್ಕಳಾ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ತಕ್ಷಣ ಮಗುವನ್ನು ರಕ್ಷಿಸಿ ನಂಜನಗೂಡು ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ತಂದೆ – ತಾಯಿ, ಹಾಗೂ ಮಗುವನ್ನು ಮಾರಾಟ ಮಾಡಿಸಿದ…

Read More