Subscribe to Updates
Get the latest creative news from FooBar about art, design and business.
Author: kannadanewsnow05
ಹಾವೇರಿ : ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಎಂದು ಹೊರ ಬಿದ್ದಿದ್ದು ಈಗಾಗಲೇ ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಇ ತುಕಾರಾಂ ಗೆಲುವು ಸಾಧಿಸಿದ್ದಾರೆ. ಇದೀಗ ಹಾವೇರಿ ಜಿಲ್ಲೆಯ ಶಿಗ್ಗಾವಿಯ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಪಠಾಣ್ ಖಾನ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಇನ್ನೇನು ಚುನಾವಣಾ ಅಧಿಕಾರಿಗಳಿಂದ ಅಧಿಕೃತ ಘೋಷಣೆ ಒಂದೇ ಬಾಕಿ ಇದೆ. ಶಿಗ್ಗಾವಿ ಕ್ಷೇತ್ರದಲ್ಲಿ ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಿದ್ದು, ಮೊದಲು ಹಲವು ಸುತ್ತುಗಳಲ್ಲಿ ಭರತ್ ಬೊಮ್ಮಾಯಿ, ಯಾಸೀನ್ ಪಠಾಣ್ ಖಾನ್ ವಿರುದ್ಧ ಭರ್ಜರಿ ಮುನ್ನಡೆ ಸಾಧಿಸಿದ್ದರು. ಆದರೆ ಬರ ಬರುತ್ತ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್ ಖಾನ್ ಭರತ್ ಬೊಮ್ಮಾಯಿ ಅವರನ್ನು ಹಿಂದಿಕ್ಕಿ ಮುನ್ನಡೆ ಸಾಧಿಸಿದರು. ಇದೀಗ ಮತ ಕೇಂದ್ರ ಬಳಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ್ದಾರೆ. ಇದೀಗ ಬಲ್ಲ ಮೂಲಗಳ ಮಾಹಿತಿಯ ಪ್ರಕಾರ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಪಠಾಣ್ ಖಾನ್…
ಬಳ್ಳಾರಿ : ರಾಜ್ಯದ ಮೂರು ವಿಧಾನಸಭಾ ಉಪಚುನಾವಣೆ ಕ್ಷೇತ್ರಗಳ ಪೈಕಿ ಇದೀಗ ಬಳ್ಳಾರಿ ಜಿಲ್ಲೆಯ ಸಂಡೂರು ಕ್ಷೇತ್ರದ ಉಪಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅನ್ನಪೂರ್ಣ ತುಕಾರಾಂ ಗೆಲುವು ಸಾಧಿಸಿದ್ದು, ಚುನಾವಣಾ ಅಧಿಕಾರಿಗಳು ಇನ್ನಷ್ಟೇ ಗೆಲವು ಘೋಷಣೆ ಮಾಡಬೇಕಾಗಿದೆ. ಆದರೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬಂಗಾರು ಹನುಮಂತ ತೀವ್ರ ಮುಖಭಂಗ ಎದುರಿಸಿದ್ದು , ಅನ್ನಪೂರ್ಣ ತುಕಾರಾಮ ಅವರ ಗೆಲುವು ಖಚಿತವಾಗುತ್ತಿದ್ದಂತೆ ಮಾಧ್ಯಮಗಳೊಂದಿಗೆ ಮಾತನಾಡಿ, ಸಚಿವ ಶಿವರಾಜ್ ತಂಗಡಗಿ ಮತದಾರರಿಗೆ ಹಣ ಹಂಚಿದ್ದಾರೆ ಕಾಂಗ್ರೆಸ್ ಹಣ ಹಂಚಿರುವ ಪ್ರದೇಶದಲ್ಲಿ ನಮಗೆ ಹಿನ್ನಡೆಯಾಗಿದೆ ಎಂದು ಆರೋಪಿಸಿದರು. ಉಪಚುನಾವಣೆಯಲ್ಲಿ ಮತದಾನಕ್ಕೂ ಮುನ್ನ ಕಾಂಗ್ರೆಸ್ ಮತದಾರರಿಗೆ ಗ್ಯಾರಂಟಿಯ 2 ಸಾವಿರ ಹಣ ಹಾಕಿದೆ. ಸಚಿವ ಶಿವರಾಜ್ ತಂಗಡಗಿ ಮತದಾರರಿಗೆ ಹಣ ಹಂಚಿದ್ದಾರೆ. ಹಾಗಾಗಿ ಕಾಂಗ್ರೆಸ್ ಈ ಬಾರಿ ಗೆದ್ದಿದೆ. ಕಾಂಗ್ರೆಸ್ ಹಣ ಹಂಚಿದ ಪ್ರದೇಶದಲ್ಲಿ ನಮಗೆ ಹಿನ್ನಡೆ ಆಗಿದೆ ಎಂದು ಉಪರಾಜದ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ…
ಬಳ್ಳಾರಿ : ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶಕ್ಕೆ ಸಂಬಂಧಪಟ್ಟಂತೆ ಇದೀಗ ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರದ ಫಲಿತಾಂಶ ಹೋರ ಬಿದ್ದಿದ್ದು, ಸಂಸದ ಇತುಕಾರಾಂ ಅವರ ಪತ್ನಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿರುವಂತಹ ಅನ್ನಪೂರ್ಣ ಇ ತುಕಾರಾಮ್ ಅವರು ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ವಿರುದ್ಧ ಬಾರಿ ಗೆಲುವು ಸಾಧಿಸಿದ್ದಾರೆ. ಅಧಿಕೃತ ಘೋಷಣೆ ಒಂದೇ ಬಾಕಿ ಇದೆ. ಹೌದು ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಿದ್ದು ತೀವ್ರ ಒಂದು ಹಾವು ಏಣಿಯ ಆಟದಲ್ಲಿ ಕೊನೆಯದಾಗಿ ಅನ್ನಪೂರ್ಣ ತುಕಾರಾಂ ಅವರಿಗೆ ವಿಜಯಲಕ್ಷ್ಮಿ ಒಲಿದಿದ್ದಾಳೆ. ಬಿಜೆಪಿ ಅಭ್ಯರ್ಥಿ ಬಂಗಾರು ಹಣಮಂತ ವಿರುದ್ಧ ಅನ್ನಪೂರ್ಣ ಈ ತುಕಾರಾಂ ಅವರು 9000ಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಿದ್ದಾರೆ. ಮತ್ತೆ ಎಣಿಕೆಯ ಕೇಂದ್ರದ ಬಳಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ ನಡೆಯಿತು. ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅನ್ನಪೂರ್ಣ ತುಕಾರಾಂ ಅವರಿಗೆ 88727 ಮತಗಳನ್ನು ಪಡೆದುಕೊಂಡಿದ್ದರೆ, 79,622 ಮತಗಳನ್ನು ಬಂಗಾರು ಹನುಮಂತು ಪಡೆದುಕೊಂಡಿದ್ದಾರೆ. ಹಾಗಾಗಿ ಅನ್ನಪೂರ್ಣ ಅವರು 9105…
ಬೆಂಗಳೂರು : ರಾಜ್ಯದ ಮೂರು ವಿಧಾನಸಭಾ ಉಪಚುನಾವಣೆಯ ಫಲಿತಾಂಶ ಇನ್ನೇನು ಕೆಲವೇ ಕ್ಷಣಗಳಲ್ಲಿ ಹೊರಬೀಳಲಿದ್ದು, ಈಗಾಗಲೇ ಸಂಡೂರಿನಲ್ಲಿ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಇ ತುಕಾರಾಮ ಅವರು ಭಾರಿ ಮುನ್ನಡೆ ಸಾಧಿಸಿದ್ದಾರೆ. 8,881 ಮತಗಳ ಅಂತರದಿಂದ ಅನ್ನಪೂರ್ಣ ಅವರು ಮುನ್ನಡೆ ಸಾಧಿಸಿದ್ದಾರೆ. ಆದರೆ ಇನ್ನು ಉಳಿದ ಎರಡು ಕ್ಷೇತ್ರಗಳಲ್ಲಿ ಮಾಜಿ ಮುಖ್ಯಮಂತ್ರಿಗಳ ಪುತ್ರರು ಸ್ಪರ್ಧೆ ಮಾಡಿದ್ದರು. ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಅವರು ಸ್ಪರ್ಧೆ ಮಾಡಿದ್ದರೆ. ಹಾವೇರಿ ಜಿಲ್ಲೆಯ ಶಿಗ್ಗಾವಿ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಸ್ಪರ್ಧೆ ಮಾಡಿದ್ದರು. ಇದೀಗ ಈ ಎರಡು ಕ್ಷೇತ್ರಗಳಲ್ಲಿ ನಿಖಿಲ್ ಕುಮಾರಸ್ವಾಮಿ ಹಾಗೂ ಭರತ್ ಬೊಮ್ಮಾಯಿಗೆ ಭಾರಿ ಹಿನ್ನಡೆಯಾಗಿದೆ. ಹೌದು ಶಿಗ್ಗಾವಿ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಪಠಣ್ ಅವರಿಗೆ 70,306 ಮತಗಳಿಂದ ಮುನ್ನಡೆ ಸಾಧಿಸಿದ್ದರೆ, ಇನ್ನು ಬಿಜೆಪಿಯ ಭರತ್ ಬೊಮ್ಮಾಯಿ…
ಬೆಂಗಳೂರು : ಇಷ್ಟು ದಿನ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಜನರು ನಗದು ಹಣ ನೀಡಿ ಟಿಕೆಟ್ ಪಡೆಯುತ್ತಿದ್ದರು. ಈ ವೇಳೆ ಕಂಡಕ್ಟರ್ ಮತ್ತು ಪ್ರಯಾಣಿಕರ ನಡುವೆ ಚಿಲ್ಲರೆ ವಿಷಯವಾಗಿ ಗಲಾಟೆ ನಡೆಯುತ್ತಿತ್ತು. ಆದರೆ ಇದೀಗ ಪ್ರಯಾಣಿಕರ ಬೇಡಿಕೆಯಂತೆ ಕೆಎಸ್ಆರ್ಟಿಸಿಯು ಇನ್ನು ಮುಂದೆ ಬಸ್ಗಳಲ್ಲಿ ಯುಪಿಐ ಮೂಲಕ ಹಣ ಪೇ ಮಾಡಿ ಟಿಕೆಟ್ ಪಡೆದುಕೊಳ್ಳುವ ಅವಕಾಶವನ್ನು ಕಲ್ಪಿಸಿದೆ. ಹೌದು ಪ್ರಯಾಣಿಕರ ಬಹುದಿನಗಳ ಬೇಡಿಕೆಯಂತೆ ಇದೀಗ KSRTC ಸಂಸ್ಥೆಯು ಒಂದು ಹೆಜ್ಜೆ ಮುಂದೆ ಹೋಗಿ, ದುಡ್ಡು ಕೊಟ್ಟು ಚಿಲ್ಲರೆ ವಿಚಾರವಾಗಿ ಕಂಡಕ್ಟರ್ ಜೊತೆಗೆ ಸಣ್ಣಪುಟ್ಟ ಕಿರಿಕ್ ಆಗುತ್ತಿದ್ದವು. ಆದರೆ ಇದೀಗ ಆ ಚಿಂತೆ ಬಿಟ್ಟುಬಿಡಿ. ಡೈನಮಿಕ್ ಕ್ಯೂಆರ್ ಕೋಡ್ ಮೂಲಕ ಹಣ ಪಾವತಿ ಮಾಡಬಹುದಾಗಿದೆ. ರಾಜ್ಯದ 8800 ಬಸ್ಗಳಲ್ಲಿ ಯುಪಿಐ ಮೂಲಕ ಹಣ ಪಾವತಿಸಬಹುದಾಗಿದೆ ಆನ್ಲೈನ್ ಹಣ ಸಂದಾಯ ಮಾಡುವ ಆಪ್ ಗಳಾದ ಗೂಗಲ್ ಪೇ, ಫೋನ್ ಪೇ, ಪೇಟಿಎಂ ಹಾಗೂ ಭೀಮ್ ಆಪ್ ಮೂಲಕ ಹಣ ಪಾವತಿಸಬಹುದಾಗಿದೆ. ಮುಂದಿನ ದಿನಗಳಲ್ಲಿ ಎಟಿಎಂ…
ತಿರುವನಂತಪುರಂ : ವಯನಾಡು ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಸದ್ಯಕ್ಕೆ ಬಂದಿರುವ ಮಾಹಿತಿ ಪ್ರಕಾರ 2,38,935 ಮತಗಳನ್ನು ಪಡೆದಿದ್ದು, 1 ಲಕ್ಷ 75 ಸಾವಿರಕ್ಕೂ ಅಧಿಕ ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಬಹುತೇಕ ಸಮೀಕ್ಷೆಗಳೆಲ್ಲ ಪ್ರಿಯಾಂಕಾ ಅವರ ಗೆಲುವಿನ ಭವಿಷ್ಯ ನುಡಿದಿದ್ದು, ಅದರಂತೆ ಅವರು ಆರಂಭಿಕ ಮುನ್ನಡೆ ಸಾಧಿಸಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನ ಭದ್ರಕೋಟೆ ಎನಿಸಿಕೊಂಡಿರುವ ಉತ್ತರ ಪ್ರದೇಶದ ರಾಯ್ ಬರೇಲಿ ಮತ್ತು ವಯನಾಡು ಎರಡೂ ಕಡೆ ರಾಹುಲ್ ಗಾಂಧಿ 3 ಲಕ್ಷಕ್ಕೂ ಅಧಿಕ ಮತಗಳಿಂದ ಜಯಭೇರಿ ಭಾರಿಸಿದ್ದರು. ಕೊನೆಗೆ ಅನಿವಾರ್ಯವಾಗಿ ವಯನಾಡು ಕ್ಷೇತ್ರಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಹೀಗಾಗಿ ಇಲ್ಲಿ ಉಪ ಚುನಾವಣೆ ಘೋಷಿಸಲಾಗಿತ್ತು. ನ. 13ರಂದು ಇಲ್ಲಿ ಮತದಾನ ನಡೆದಿತ್ತು. ಕಾಂಗ್ರೆಸ್ ಭದ್ರಕೋಟೆಯಾಗಿದ್ದರೂ ಇಲ್ಲಿ ಈ ಬಾರಿ ಜಿದ್ದಾಜಿದ್ದಿನ ಹೋರಾಟ ನಡೆದಿದೆ. ಸುಮಾರು 16 ಮಂದಿ ಕಣದಲ್ಲಿದ್ದು, ಈ ಪೈಕಿ ಕಾಂಗ್ರೆಸ್ ನೇತೃತ್ವದ ಯುಡಿಎಫ್, ಸಿಪಿಐ ನೇತೃತ್ವದ ಎಲ್ಡಿಎಫ್ ಮತ್ತು…
ಚನ್ನಪಟ್ಟಣ : ರಾಜ್ಯದಲ್ಲಿ ನವೆಂಬರ್ 13ರಂದು ನಡೆದ ಮೂರೂ ಕ್ಷೇತ್ರಗಳ ವಿಧಾನಸಭಾ ಉಪಚುನಾವಣೆಗೆ ಇಂದು ಫಲಿತಾಂಶ ಹೊರಬೀಳಲಿದ್ದು, ಇದೀಗ ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರಿನಲ್ಲಿ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು ಬಿಜೆಪಿ ಹಾಗೂ ಜೆಡಿಎಸ್ ಗೆ ಹಿನ್ನಡೆಯಾಗಿದೆ. ಹೌದು ರಾಜ್ಯದಲ್ಲಿ ನಡೆದ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬೇರೆ ಕ್ಷೇತ್ರಗಳಿಗಿಂತ ಹೆಚ್ಚು ಕುತೂಹಲ ಮೂಡಿಸಿರುವ ಚನ್ನಪಟ್ಟಣ ಕ್ಷೇತ್ರದಲ್ಲಿ ಇದೀಗ ಕಾಂಗ್ರೆಸ್ ಅಭ್ಯರ್ಥಿ ಸಿ ಪಿ ಯೋಗೇಶ್ವರ್ 15 ಸಾವಿರಕ್ಕೂ ಅಧಿಕ ಮತಗಳೊಂದಿಗೆ ಮುನ್ನಡೆ ಸಾಧಿಸಿದ್ದಾರೆ ಈ ನೆಲೆಯಲ್ಲಿ ಮತ ಕೇಂದ್ರದ ಬಳಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಆರಂಭಿಸಿದ್ದಾರೆ. ಸಿಪಿ ಯೋಗೇಶ್ವರ್ 15,000 ಮತಗಳ ಮುನ್ನಡೆ ಸಾಧಿಸಿದ್ದು, ಇನ್ನು ಸಂಡೂರಿನಲ್ಲಿ ಅನುಪೂರ್ಣ ತುಕಾರಾಮ ಅವರು ಕೇವಲ 108 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.ಅದೇ ರೀತಿಯಾಗಿ ಶಿಗ್ಗಾವಿಯಲ್ಲಿ ಯಾಸೀರ್ ಪಠಾಣ್ ಖಾನ್ ಅವರು ರತ್ನಮಾ ವಿರುದ್ಧ 1158 ದ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಆರಂಭಿಕ ಸತ್ತುಗಳ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿಗಳು…
ಮಹಾರಾಷ್ಟ್ರ : ಇಂದು ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬೀಳಲಿದ್ದು, ಈಗಾಗಲೇ ಮಹಾಯುತಿಯು 160 ಸ್ಥಾನಗಳ ಮುನ್ನಡೆ ಸಾಧಿಸುವುದರೊಂದಿಗೆ ಮ್ಯಾಜಿಕ್ ನಂಬರ್ ಅನ್ನು ದಾಟಿದೆ. ಇನ್ನು ಮಹಾವಿಕಾಸ್ ಅಘಾಡಿಯು 105 ಸ್ಥಾನದಲ್ಲಿ ಮುನ್ನಡೆ ಸಾಧಿಸಿದೆ. ಅಲ್ಲದೇ ಪಕ್ಷೇತರ ಅಭ್ಯರ್ಥಿಗಳು 10 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಹೀಗಾಗಿ ಮಹಾರಾಷ್ಟ್ರದಲ್ಲಿ ಬಹುತೇಕ ಬಿಜೆಪಿ ಸರ್ಕಾರ ರಚನೆ ಮಾಡಲಿದೆ ಎನ್ನಲಾಗಿದೆ. ಮ್ಯಾಜಿಕ್ ನಂಬರ್ ದಾಟಿದ ಮಹಾಯುತಿಯು ಸರ್ಕಾರ ರಚನೆ ಮಾಡುವುದಕ್ಕೆ ಸಿದ್ಧತೆ ಮಾಡಿಕೊಂಡಿದ್ದು ಈ ಹಿನ್ನೆಲೆಯಲ್ಲಿ 2022ರಲ್ಲಿ ಮಹಾರಾಷ್ಟ್ರದ ರಾಜಕೀಯದಲ್ಲಿ ಏಕನಾಥ್ ಶಿಂಧೆ ದೊಡ್ಡ ಬದಲಾವಣೆಯನ್ನು ತಂದವರು. ತಮ್ಮ ನಾಯಕರಾದ ಉದ್ಧವ್ ಠಾಕ್ರೆ ವಿರುದ್ಧವೇ ತಿರುಗಿಬಿದ್ದ ಶಿಂಧೆ ಶಕ್ತಿಶಾಲಿ ಬಣವನ್ನು ತಯಾರಿಸಿ ಶಿವಸೇನೆಗೆ ದೊಡ್ಡ ಅಘಾತವನ್ನು ಕೊಟ್ಟಿದ್ದರು. ಈ ಮೂಲಕ ಮಹಾರಾಷ್ಟ್ರದಲ್ಲಿ ರಾಜಕೀಯ ಸಮೀಕರಣಗಳನ್ನೇ ಬುಡಮೇಲು ಮಾಡಿ, ತಮ್ಮ ಪ್ರಭಾವವನ್ನು ಬೆಳೆಸಿಕೊಂಡಿದ್ದರು. ಹಾಗಾಗಿ ಬಿಜೆಪಿಯು ತನ್ನದೇ ಆದ ನಾಯಕನನ್ನು ಮುಖ್ಯಮಂತ್ರಿಯಾಗಿ ನೇಮಿಸುವ ಸಾಧ್ಯತೆಯಿದೆ. ಅಂದರೆ ಅವರು ಶಿಂಧೆ ಬಣವನ್ನು ಬಳಸಿಕೊಂಡು ಸ್ವತಂತ್ರವಾಗಿ ಸರ್ಕಾರ ಸ್ಥಾಪನೆಗೆ ಪ್ರಯತ್ನಿಸಬಹುದು.…
ಬೆಂಗಳೂರು : ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಗೆ ಮತ ಎಣಿಕೆ ಆರಂಭವಾಗಿದ್ದು, ಈಗಾಗಲೇ ಮಹಾಯುತಿಯು ಮ್ಯಾಜಿಕ್ ನಂಬರ್ ದಾಟಿದ್ದು ಇನ್ನು ಮಹಾವಿಕಾಸ್ ಅಘಾಡಿಯು 112 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ಸಿನ ಹೈಕಮಾಂಡ್ ರಾಜ್ಯ ಕಾಂಗ್ರೆಸ್ ನಾಯಕರಿಗೆ ಒಂದು ಟಾಸ್ಕ್ ನೀಡಿದ್ದು ಆಪರೇಷನ್ ತಡೆಯುವ ನಿಟ್ಟಿನಲ್ಲಿ ಮುಂಬೈಗೆ ತೆರಳಿ ಎಂದು ಸೂಚನೆ ನೀಡಿದೆ. ಎಂವಿಎ ಶಾಸಕರನ್ನು ರಾಜ್ಯಕ್ಕೆ ಕರೆ ತರುವ ಸಾಧ್ಯತೆ ಇದ್ದು, ಕರ್ನಾಟಕ ಹಾಗೂ ತೆಲಂಗಾಣದಲ್ಲಿ ಪ್ರತ್ಯೇಕವಾಗಿ ತಂಗಲು ವ್ಯವಸ್ಥೆ ಮಾಡಲಾಗಿದೆ. ಸಂಜೆ ನಾಲ್ಕು ಗಂಟೆಯೊಳಗೆ ಮುಂಬೈಯಲ್ಲಿ ಇರುವಂತೆ ಕಾಂಗ್ರೆಸ್ ಹೈಕಮಾಂಡ್ ರಾಜ್ಯ ಕಾಂಗ್ರೆಸ್ ನಾಯಕರಿಗೆ ಸೂಚನೆ ನೀಡಿದೆ. ಫಲಿತಾಂಶದ ಬಳಿಕ ಆಪರೇಷನ್ ತಡೆಯುವ ನಿಟ್ಟಿನಲ್ಲಿ ಕಾಂಗ್ರೆಸ್ ಎಚ್ಚರಿಕೆ ಹೆಜ್ಜೆ ಇಟ್ಟಿದೆ. ರಾಜ್ಯ ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಇದೊಂದು ಪ್ರಮುಖ ಟಾಸ್ಕ್ ನೀಡಿದೆ. ರಾಜ್ಯ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಗೆ ಕಾಂಗ್ರೆಸ್ ಹೈಕಮಾಂಡ್ ಈ ಒಂದು ಜವಾಬ್ದಾರಿ ವಹಿಸಿದ್ದು,…
ಬೆಂಗಳೂರು: ಲೋಕಸಭೆ ಚುನಾವಣೆ ವೇಳೆ ವಿದ್ಯಾರ್ಥಿಗಳಿಗೆ ಆಮಿಷವೊಡ್ಡುವ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧ ದಾಖಲಾಗಿದ್ದ ದೂರನ್ನು ಹೈಕೋರ್ಟ್ ರದ್ದುಪಡಿಸಿದೆ. ಹೌದು ಕಳೆದ ಲೋಕಸಭೆ ಚುನಾವಣೆ ವೇಳೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕಟಪಾಡಿ ಗ್ರಾಮದ ಖಾಸಗಿ ಕಾಲೇಜು ಆವರಣದಲ್ಲಿ ರಾಜಕೀಯ ಭಾಷಣ ಮಾಡಿ ವಿದ್ಯಾರ್ಥಿಗಳಿಗೆ ಆಮಿಷವೊಡ್ಡುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧ ದಾಖಲಾಗಿದ್ದ ದೂರನ್ನು ಹೈಕೋರ್ಟ್ ರದ್ದುಪಡಿಸಿದೆ. ತಮ್ಮ ವಿರುದ್ಧ ಚುನಾವಣಾ ಸಂಚಾರ ಜಾಗೃತ ದಳದ ಅಧಿಕಾರಿಯು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ದಾಖಲಿಸಿದ ದೂರನ್ನು ರದ್ದುಪಡಿಸುವಂತೆ ಕೋರಿ ಸಂಸದ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ದಾರರ ಪರ ಹಾಜರಾಗಿದ್ದ ಹಿರಿಯ ವಕೀಲ ಎಂ.ಅರುಣ್ ಶ್ಯಾಮ್, ಪ್ರಕರಣಕ್ಕೆ ಸಂಬಂಧಿಸಿದಂತೆ ಚುನಾವಣಾ ಸಂಚಾರ ಜಾಗೃತದಳದ ಅಧಿಕಾರಿಯು ಅರ್ಜಿ ದಾರರ ವಿರುದ್ಧ ಐಪಿಸಿ ಸೆಕ್ಷನ್ 188ರ ಅಡಿಯಲ್ಲಿ ದೂರು ದಾಖಲಿಸಿದ್ದಾರೆ. ಈ ಅಧಿಕಾರ…













