Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಮಾರ್ಚ್ 31ರಿಂದ ಅಂದರೆ ನಾಳೆಯಿಂದ ರಾಜ್ಯಾದ್ಯಂತ ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆಯು ಮಹತ್ವದ ಮುನ್ಸೂಚನೆ ನೀಡಿದೆ.ಏಪ್ರಿಲ್ 3ರಂದು ಕರಾವಳಿ ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆ ಸಾಧ್ಯತೆ ಎಂದು ತಿಳಿಸಿದ್ದು, ಏಪ್ರಿಲ್ 4 & 5ರಂದು ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವವಿದೆ ಎಂದು ತಿಳಿಸಿದೆ. ಏಪ್ರಿಲ್ 3ರಂದು ಕರಾವಳಿ ಹಾಗೂ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಅತಿ ವೇಗದ ಗಾಳಿಯೊಂದಿಗೆ ಆಲಿಕಲ್ಲು ಮಳೆಯಾಗಲಿದೆ.ಶನಿವಾರ ದಕ್ಷಿಣ ಒಳನಾಡು ಮತ್ತು ಕರಾವಳಿಯ ಕೆಲವೆಡೆ ಮಳೆಯಾಗಿದ್ದು, ಉತ್ತರ ಒಳನಾಡಿನಲ್ಲಿ ಮಾತ್ರ ಎಂದಿನಂತೆ ಒಣ ಹವೆ ಇತ್ತು. ಏಪ್ರಿಲ್ 4 ಮತ್ತು ಏಪ್ರಿಲ್ 5ರಂದು ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಹಾಗೂ ಉತ್ತರ ಒಳನಾಡಿನಲ್ಲಿ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಳ್ಳಾರಿ : ರೈತರಿಗೆ ಬಾಕಿ ಹಣ ಪಾವತಿಸದ ಹಿನ್ನೆಲೆಯಲ್ಲಿ ಇಂದು ಬಳ್ಳಾರಿಯಲ್ಲಿ ಕೆಎಂಎಫ್ ಅಧ್ಯಕ್ಷ ಭೀಮ ನಾಯ್ಕ್ ಗೆ ಮುತ್ತಿಗೆ ಹಾಕಿ ರೈತರು ಆಕ್ರೋಶ ಹೊರ ಹಾಕಿದ್ದಾರೆ. ಕೆಎಂಎಫ್ ಘಟಕದ ಮುಂದೆ ಮುತ್ತಿಗೆ ಹಾಕಿ ರೈತರು ಆಕ್ರೋಶ ಹೊರಹಾಕಿದ್ದಾರೆ. ಈ ಹಿಂದೆ ನಷ್ಟದ ಮಾಹಿತಿ ನೀಡಿ ಅಧಿಕಾರಿಗಳು ಹಣ ಕಡಿತ ಮಾಡಿದ್ದರು. ಪ್ರತಿ ಲೀಟರ್ಗೆ 1 ರೂಪಾಯಿ 50 ಪೈಸೆ ಕಡಿತ ಮಾಡಿದ್ದ ರಾಬಕೋವಿ ಒಕ್ಕೂಟ. ಹಾಗಾಗಿ ಇದೀಗ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಮುತ್ತಿಗೆ ಹಾಕಲಾಗಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಬಿಬಿಎಂಪಿ ಕಸದ ಲಾರಿಗೆ ಇದೀಗ ಮತ್ತೊಂದು ಜೀವ ಬಲಿಯಾಗಿದೆ. ಬಿಬಿಎಂಪಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ಚಲಿಸುತ್ತಿದ್ದ ಹತ್ತು ವರ್ಷದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಥಣಿಸಂದ್ರದ ಬಳಿ ಈ ಒಂದು ಘಟನೆ ನಡೆದಿದೆ. ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು ಬೈಕ್ ನಲ್ಲಿ ತೆರಳುತ್ತಿದ್ದ 10 ವರ್ಷದ ಐಮಾನ್ ಎಂಬ ಬಾಲಕ ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ. ರೊಚ್ಚಿಗೆದ್ದ ಸಾರ್ವಜನಿಕರು, ಕಸ ಎಲ್ಲರಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ. ಬಿಬಿಎಂಪಿ ಕಸದ ಲಾರಿಗೆ ಬೆಂಕಿ ಹಚ್ಚುತ್ತಿದ್ದಂತೆ ಚಾಲಕ ಕೆಳಗಿಳಿದಿದ್ದಾನೆ. ಘಟನಾ ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.ಹೆಣ್ಣೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತು ಪ್ರಕರಣ ದಾಖಲಾಗಿದೆ.
ಮ್ಯಾನ್ಮಾರ್ : ನಿನ್ನೆ ಮ್ಯಾನ್ಮಾರ್ ಮತ್ತು ಬ್ಯಾಂಕ್ ಆಫ್ ನಲ್ಲಿ ಸಂಭವಿಸಿದ ಪ್ರಬಲ ಭೂಕಂಪದ ಪರಿಣಾಮದಿಂದ ಅಲ್ಲಿನ ಜನರು ತತ್ತರಿಸಿ ಹೋಗಿದ್ದು, ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇದೀಗ ಭೂಕಂಪದಿಂದ 1002ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 2,376 ಜನರಿಗೆ ಗಾಯಗಳಾಗಿವೆ. ಇನ್ನು 70ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ. ಮ್ಯಾನ್ಮಾರ್ ಮತ್ತು ಬ್ಯಾಂಕ್ ಆಫ್ ನಲ್ಲಿ ರಕ್ಷಣಾ ಕಾರ್ಯ ಮುಂದುವರೆದಿದೆ. ಸ್ಥಳೀಯ ಕಾಲಮಾನ ಮಧ್ಯಾಹ್ನ 1:20 ಕ್ಕೆ ಸಂಭವಿಸಿದ ಭೂಕಂಪದ ಕೇಂದ್ರಬಿಂದು ಮ್ಯಾನ್ಮಾರ್ನ ಎರಡನೇ ಅತಿದೊಡ್ಡ ನಗರವಾದ ಮಾಂಡಲೆಯಿಂದ ಕೇವಲ 17.2 ಕಿ.ಮೀ ದೂರದಲ್ಲಿದೆ. ಹೆಚ್ಚು ಹಾನಿಗೊಳಗಾದ ಪ್ರದೇಶಗಳಲ್ಲಿ, ಮಾಂಡಲೆ, ಟೌಂಗೂ ಮತ್ತು ಆಂಗ್ಬಾನ್ ಅನೇಕ ಸಾವುನೋವುಗಳನ್ನು ವರದಿ ಮಾಡಿವೆ. ಗಾಯಗೊಂಡ ನೂರಾರು ಜನರನ್ನು ನೈಪಿಡಾವ್ ನ ಮುಖ್ಯ ಆಸ್ಪತ್ರೆಗೆ ಸಾಗಿಸಲಾಯಿತು, ರಚನಾತ್ಮಕ ಹಾನಿಯಿಂದಾಗಿ ರೋಗಿಗಳಿಗೆ ಹೊರಗೆ ಚಿಕಿತ್ಸೆ ನೀಡಲಾಗುತ್ತಿದೆ. ಮಧ್ಯ ಮ್ಯಾನ್ಮಾರ್ ನಾದ್ಯಂತ ಕುಸಿದ ಮತ್ತು ಹಾನಿಗೊಳಗಾದ ಕಟ್ಟಡಗಳನ್ನು ಸಾಮಾಜಿಕ ಮಾಧ್ಯಮ ತುಣುಕುಗಳು ತೋರಿಸುತ್ತವೆ. ಮ್ಯಾನ್ಮಾರ್ನ ಭೂಪ್ರದೇಶದ ಕೆಲವು ಭಾಗಗಳು ಈಗಾಗಲೇ…
ದಾವಣಗೆರೆ : ಟಿಸಿ ದುರಸ್ತಿ ಮಾಡಲು ರೈತನಿಂದ 10 ಸಾವಿರ ಲಂಚ ಪಡೆಯುವ ವೇಳೆ ಬೆಸ್ಕಾಂ AE ಅಧಿಕಾರಿಯೊಬ್ಬ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ದಾವಣಗೆರೆ ಜಿಲ್ಲೆಯ ಚೆನ್ನಗಿರಿ ತಾಲೂಕಿನ ಸಂತೆಬೆನ್ನೂರಲ್ಲಿ ನಡೆದಿದೆ. ಹೌದು ಲಂಚ ಪಡೆಯುವವಾಗಲೆ ಬೆಸ್ಕಾಂ ಸಹಾಯಕ ಇಂಜಿನಿಯರ್ ಮೋಹನ್ ಕುಮಾರ್ ಇದೀಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ದಾವಣಗೆರೆ ಜಿಲ್ಲೆಯ ಚೆನ್ನಗಿರಿ ತಾಲೂಕಿನ ಸಂತೆಬೆನ್ನೂರು ವಿಭಾಗದ ಬೆಸ್ಕಾಂ ಎ.ಇ ಮೋಹನ್ ಕುಮಾರ್, ಕೆಟ್ಟು ಹೋದ ಟಿಸಿಯನ್ನು ದುರಸ್ತಿ ಮಾಡಿಕೊಡಲು ಮೋಹನ್ ಕುಮಾರ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮಲ್ಲಾಪುರ ರೈತ ಬಿ ಎಂ ಮಂಜುನಾಥ ಎಂಬುವವರಿಂದ ಬೆಸ್ಕಾಂ ಕಚೇರಿಯಲ್ಲಿ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 10 ಸಾವಿರ ಲಂಚ ಸ್ವೀಕರಿಸುವಾಗ ಮೋಹನ್ ಕುಮಾರ್ ನನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಮೈಸೂರು : ಯುಗಾದಿ ಹಬ್ಬದಂದೆ ಘೋರವಾದ ದುರಂತ ಒಂದು ಸಂಭವಿಸಿದ್ದು ಕೆರೆಯಲ್ಲಿ ಹಸುಗಳನ್ನು ತೊಳೆಯಲು ಹೋದ ಮೂವರು ನೀರು ಪಾಲಾಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕಾಮಳ್ಳಿಯಲ್ಲಿ ಘಟನೆ ಸಂಭವಿಸಿದೆ ಮುದ್ದೇಗೌಡ (48) ಬಸವಗೌಡ (45) ಮತ್ತು ವಿನೋದ್ (17) ಮೃತರು ಎಂದು ತಿಳಿದುಬಂದಿದೆ. ಹಬ್ಬ ಹಿನ್ನೆಲೆಯಲ್ಲಿ ಹಸುಗಳನ್ನು ತೊಳೆಯಲು ವಿನೋದ್ ಎನ್ನುವವರು ಕೆರೆಗೆ ಹೋಗಿದ್ದರು. ಈ ವೇಳೆ ಹಸು ವಿನೋದ್ನನ್ನು ಕೆರೆಯ ಮಧ್ಯದಲ್ಲಿ ಎಳೆದೊಯ್ದಿದೆ. ಇದನ್ನು ನೋಡಿದ ಮುದ್ದೇಗೌಡ ಮತ್ತು ಬಸವೇಗೌಡ ತಕ್ಷಣ ವಿನೋದ ರಕ್ಷಣೆಗೆ ಕೆರೆಗೆ ಇಳಿದಿದ್ದಾರೆ. ಈಜು ಬಾರದೆ ನೀರಿನಲ್ಲಿ ಮುಳುಗಿ ಮೂವರು ದುರಂತವಾಗಿ ಸಾವನಪ್ಪಿದ್ದಾರೆ. ಘಟನೆ ಕುರಿತಂತೆ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಮಾವಾಸ್ಯೆಯಂದು ಮಾಡಬೇಕಾದ ಬಿಳಿ (ಕೂಷ್ಮಾಂಡ) ಕುಂಬಳಕಾಯಿ ಪರಿಹಾರ ಇಂದು, ೨೯-೦೩-೨೦೨೫, ಬಹಳ ಶಕ್ತಿಶಾಲಿ ಅಮಾವಾಸ್ಯೆ. ಈ ಅಮಾವಾಸ್ಯೆಯ ದಿನ ಶನಿವಾರ ಬಂದಿದೆ, ಅಷ್ಟೇ ಅಲ್ಲ, ಈ ದಿನದಂದು ಉತ್ತರಾಧಿ ನಕ್ಷತ್ರವೂ ಇದೆ, ಮತ್ತು ಈ ಉತ್ತರಾಧಿ ನಕ್ಷತ್ರವು ಶನಿಯ ನಕ್ಷತ್ರಗಳಲ್ಲಿ ಒಂದಾಗಿದೆ. ಅಷ್ಟೇ ಅಲ್ಲ, ಈ ಅಮಾವಾಸ್ಯೆಯಂದು ಸೂರ್ಯಗ್ರಹಣವೂ ಸಂಭವಿಸಲಿದೆ. ಶನಿಯ ಸಂಚಾರವೂ ಶೀಘ್ರದಲ್ಲೇ ನಡೆಯಲಿದೆ. ಈ ದಿನದಂದು ನಾವು ಮಾಡಬಹುದಾದ ಪರಿಹಾರವು ಹಲವು ವರ್ಷಗಳ ಸಮಸ್ಯೆಗಳನ್ನು ಪರಿಹರಿಸುತ್ತದೆ. ಅಮಾವಾಸ್ಯೆ ಪರಿಹಾರ ಇಂದು ಸೂರ್ಯೋದಯಕ್ಕೆ ಮುಂಚೆ ಎದ್ದು ಸ್ನಾನ ಮಾಡಬೇಕು. ಬೆಚ್ಚಗಿನ ನೀರಿಗೆ ಒಂದು ಹಿಡಿ ಕಲ್ಲುಪ್ಪು ಮತ್ತು ಒಂದು ಚಿಟಿಕೆ ವಿಭೂತಿ ಸೇರಿಸಿ ಮತ್ತು ಕುಲ ದೇವತೆಯ ಹೆಸರನ್ನು ಜಪಿಸಿ ಸ್ನಾನ ಮಾಡಿ. ನಿಮಗೆ ಪೋಷಕರು ಇಲ್ಲದಿದ್ದರೆ, ತಿಡಿ ತರ್ಪಣಂನ ಎಲ್ಲಾ ಆಚರಣೆಗಳನ್ನು ಸರಿಯಾಗಿ ಮಾಡಿ. ಅಮವಾಸ್ಯೆಯ ಪೂಜೆಯನ್ನು ತಪ್ಪಿಸಿಕೊಳ್ಳಬಾರದು. ಇದು ಮೊದಲನೆಯದು. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ…
ಬೆಂಗಳೂರು : ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿರುವ ರಾಜಕಾರಣಿಗಳ ಹನಿಟ್ರ್ಯಾಪ್ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಇತ್ತೀಚಿಗೆ ರಾಜ್ಯ ಸರ್ಕಾರ ಅಧಿಕೃತವಾಗಿ ಈ ಒಂದು ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ಆದೇಶಿಸಿತ್ತು. ಇನ್ನು ಇದೇ ವಿಚಾರವಾಗಿ ಗೃಹ ಸಚಿವ ಜಿ ಪರಮೇಶ್ವರ್ ಅವರು, ತನಿಖೆ ಮಾಡುವ ಸಂದರ್ಭದಲ್ಲಿ ಏನು ಹೇಳಕ್ಕಾಗಲ್ಲ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅದರ ಬಗ್ಗೆ ಇಲಾಖೆಯವರೇ ತನಿಖೆ ಮಾಡುತ್ತಾರೆ. ಡಿಜಿ ಕಳುಹಿಸಿದ ಮೇಲೆ ಡಿಪಾರ್ಟ್ಮೆಂಟ್ ಆದೇಶ ಮಾಡುತ್ತದೆ ಅದಕ್ಕೆ ಸರ್ಕಾರದ ಆದೇಶ ಬರಲ್ಲ.ಸಿಐಡಿ ಅವರು ತನಿಖೆ ಮಾಡುತ್ತಾರೆ. ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ದಾಖಲೆ ಸಿಕ್ಕಿರುವ ಮಾಹಿತಿ ಇಲ್ಲ. ತನಿಖೆ ಮಾಡುತ್ತಿದ್ದಾರೆ. ತನಿಖೆ ಮಾಡುವಾಗ ಏನು ಹೇಳಲು ಆಗಲ್ಲ. ತನಿಖೆ ಪೂರ್ಣ ಆದ್ಮೇಲೆ ಎಲ್ಲವನ್ನು ವಿವರವಾಗಿ ಹೇಳುತ್ತಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು. ಸಂಪುಟ ಪುನಾರಚನೆ ಸಂಬಂಧ ಸಿಎಂ ಸಿದ್ದರಾಮಯ್ಯ ದೆಹಲಿಗೆ ಹೋಗುವ ವಿಚಾರವಾಗಿ ನನಗೆ ಇದರ ಬಗ್ಗೆ ಗೊತ್ತಿಲ್ಲ ನಾನು ಎಲ್ಲಿಯೂ ಹೋಗುವುದಿಲ್ಲ.…
ತುಮಕೂರು : ಸಹಕಾರ ಸಚಿವ ಕೇಂದ್ರ ಅವರ ಪುತ್ರ ಹಾಗೂ ಕಾಂಗ್ರೆಸ್ ಎಂಎಲ್ಸಿ ಆಗಿರುವಂತಹ ರಾಜೇಂದ್ರ ರಾಜಣ್ಣ ಅವರ ಹತ್ಯೆಗೆ ಯತ್ನಿಸಲಾಗಿತ್ತು ಎಂದು ನಿನ್ನೆ ರಾಜೇಂದ್ರ ಅವರು ತುಮಕೂರಿನ ಎಸ್ಪಿ ಕಚರಿಗೆ ಭೇಟಿ ನೀಡಿ ದೂರು ನೀಡಿದ್ದರು. ಒಂದು ದೂರು ಹಿನ್ನೆಲೆಯಲ್ಲಿ ಇದೀಗ ಐವರು ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಾಗಿದ್ದು ಅಲ್ಲದೆ ಡಿವೈಎಸ್ಪಿ ನೇತೃತ್ವದಲ್ಲಿ ತನಿಖಾ ತಂಡ ರಚನೆ ಕೂಡ ಆಗಿದೆ. ಹೌದು ಎಂಎಲ್ಸಿ ರಾಜೇಂದ್ರ ಹತ್ಯೆಗೆ ಯತ್ನಿಸಿ ಸುಪಾರಿ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಧುಗಿರಿ ಡಿವೈಎಸ್ಪಿ ನೇತೃತ್ವದಲ್ಲಿ ತಂಡ ರಚನೆ ಮಾಡಲಾಗಿದೆ. ಪ್ರಕರಣದ ಸಂಪೂರ್ಣ ತನಿಖೆಯನ್ನು ಡಿವೈಎಸ್ಪಿ ತಂಡ ನಡೆಸಲಿದೆ. ತನಿಖಾ ತಂಡದಲ್ಲಿ ಶೀರಾ ಗ್ರಾಮಾಂತರ ಸಿಪಿಐ ರಾಘವೇಂದ್ರ, ಕ್ಯಾತ್ಸಂದ್ರ ಠಾಣೆ ಪಿಎಸ್ಐ ಚೇತನ್ ಕೂಡ ಇದ್ದಾರೆ. ಸದ್ಯ ರಾಜೇಂದ್ರ ದೂರಿನ ಮೇಲೆ ಐವರ ವಿರುದ್ಧ ಎಫ್ಐಆರ್ ದಾಖಲಾಗಿದೆ. A1 ಸೋಮ, A2 ಭರತ್, A3 ಅಮಿತ್ A4 ಗುಂಡಾ ಮತ್ತು A5 ಯತೀಶ್ ವಿರುದ್ಧ ಎಫ್ಐಆರ್ ದಾಖಲಾಗಿದೆ.…
ಚಿತ್ರದುರ್ಗ : ಇಂದು ಚಿತ್ರದುರ್ಗದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಟಿಟಿ ವಾಹನ ಒಂದು ನಿಯಂತ್ರಣ ಕಳೆದುಕೊಂಡು ಪಲ್ಟಿಯಾದ ಪರಿಣಾಮ ಸ್ಥಳದಲ್ಲಿ ಮೂವರು ಸಾವನ್ನಪ್ಪಿದ್ದು ಇವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದಲ್ಲಿ ನಡೆದಿದೆ. ಹೌದು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದಲ್ಲಿ ಟಿಟಿ ವಾಹನ ಪಲ್ಟಿಯಾಗಿ ಮೂವರು ಸಾವನಪ್ಪಿದ್ದಾರೆ. ಶಂಕರಿಬಾಯಿ (65) ಕುಮಾರ್ ನಾಯಕ್ (46) ಮತ್ತು ಶ್ವೇತ (38) ಸಾವನಪ್ಪಿದ್ದಾರೆ. ಇನ್ನು ಘಟನೆಯಲ್ಲಿ ಐವರಿಗೆ ಗಂಭೀರವಾದ ಗಾಯಗಳಾಗಿದ್ದು ಕೂಡಲೇ ಅವರನ್ನು ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತಂತೆ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.