Author: kannadanewsnow05

ಕಲಬುರ್ಗಿ : ಕಾರಿನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ ಸುಮಾರು 45.50 ಲಕ್ಷ ರೂ. ಮೌಲ್ಯದ 40 ಕೆಜಿ ಗಾಂಜಾವನ್ನು ಕಲಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಪೊಲೀಸರು ವಶಪಡಿಸಿಕೊಂಡಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಲಕ್ಷ್ಮಣ್ ನಾಯಕ ತಾಂಡ ನಿವಾಸಿ ಚಂದ್ರಕಾಂತ ಪಪ್ಪು ಹರಿಶ್ಚಂದ್ರ ಚವ್ಹಾಣ್ (40), ಕೊಡ್ಲಿ ಗ್ರಾಮದ ಮಲ್ಲಯ್ಯ ಮಹಾಬಲೇಶ್ವರ ಪ್ಯಾಟಿನಮನಿ ಎಂದು ತಿಳಿಬಂದಿದೆ.ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಬಳಿಕ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿಗಳು ತಾಲೂಕಿನ ಕೊಡ್ಲಿ ಗ್ರಾಮಕ್ಕೆ ಹೊಂದಿಕೊಂಡಿರುವ ಲಕ್ಷ್ಮಣ ನಾಯಕ ತಾಂಡದ ಹತ್ತಿರ ಕಾರಿನಲ್ಲಿ ಗಾಂಜಾ ಸಾಗಾಣಿಕೆ ಮಾಡುತ್ತಿದ್ದರ ಕುರಿತು ಖಚಿತ ಮಾಹಿತಿಯನ್ನು ಪಡೆದ ಪೊಲೀಸರು, ದಾಳಿ ಮಾಡಿದ್ದಾರೆ. ದಾಳಿಯ ವೇಳೆ 40 ಲಕ್ಷ ಮೌಲ್ಯದ ಗಾಂಜಾ, ಒಂದು ಕಾರು, ಬೈಕ್ ಜಪ್ತಿ ಮಾಡಿಕೊಂಡಿದ್ದಾರೆ.

Read More

ಮೈಸೂರು : ಮೈಸೂರಿನ ಉದಯನಗರ ಪೊಲೀಸ್ ಠಾಣೆಯ ಮೇಲೆ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಘಟನೆ ನಡೆದ ಮೂರು ದಿನಗಳ ನಂತರ ಇಂದು ಮೈಸೂರು ಜಿಲ್ಲೆಗೆ ಗ್ರಹ ಸಚಿವಾ ಜಿ ಪರಮೇಶ್ವರ್ ಭೇಟಿ ನೀಡಿದರು ಈ ವೇಳೆ ಘಟನೆ ಕುರಿತಂತೆ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಬಳಿಕ ಘಟನೆಯಲ್ಲಿ ಯಾರೇ ತಪ್ಪಿಸಸ್ಥರಿದ್ದರೂ ಪಕ್ಷ ಹಾಗೂ ಧರ್ಮಭೇದವಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು. ಮೈಸೂರಿನಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೊಲೀಸರನ್ನು ಕುಗ್ಗಿಸಲು ಯಾರಿಂದಲೂ ಸಾಧ್ಯವಿಲ್ಲ. ಪೊಲೀಸರು ಯಾರದೇ ಹೇಳಿಕೆಯಿಂದ ಕುಗ್ಗುವುದಿಲ್ಲ. ಅದಕ್ಕಾಗಿ ಪೊಲೀಸರು ತರಬೇತಿ ಪಡೆದಿರುತ್ತಾರೆ. ಏನೇನೋ ಮಾತನಾಡುವವರನ್ನು ತಡೆಯಲು ಆಗಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು. ಇನ್ನು ಠಾಣೆಯಲ್ಲಿ ಆರೋಪಿ ಇರಿಸಿದಕ್ಕೆ ರಾಜಣ್ಣ ಕಿಡಿ ಕಾರಿರುವ ವಿಚಾರವಾಗಿ ಪರಮೇಶ್ವರ ಪ್ರತಿಕ್ರಿಯೆ ನೀಡಿದ್ದು, ಪೊಲೀಸ್ ಇಲಾಖೆಗೆ ಕಾನೂನು ಅಷ್ಟೇ ಮುಖ್ಯವಾಗಿದೆ. ಶಾಂತಿ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ. ಪಕ್ಷ ವ್ಯಕ್ತಿ ಪೊಲೀಸರಿಗೆ ಮುಖ್ಯವಲ್ಲ…

Read More

ಬೆಂಗಳೂರು : ಇಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಅವರನ್ನು ಭೇಟಿಯಾಗಿ ರಾಜ್ಯದಲ್ಲಿ ಪಕ್ಷದ ಬೆಳವಣಿಗೆ ಕುರಿತು ಚರ್ಚಿಸಿದರು. ಇದೆ ವೇಳೆ ಎಐಸಿಸಿ ನಾಯಕರು ಒಪ್ಪಿದರೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನಿಭಾಯಿಸುತ್ತೇನೆ ಎಂದು ತಿಳಿಸಿದ್ದರು. ಇದೀಗ ಸಚಿವ ಸತೀಶ್ ಜಾರಕಿಹೊಳಿ ಅವರು ಕೂಡ 3 ವರ್ಷ ಮಂತ್ರಿ ಸ್ಥಾನದ ಜೊತೆಗೆ ಕೆಪಿಸಿಸಿ ಅಧ್ಯಕ್ಷ ನಿಭಾಯಿಸುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ. ಹೌದು ಕೆಪಿಸಿಸಿ ಅಧ್ಯಕ್ಷ ಪಟ್ಟದ ಮೇಲೆ ಸತೀಶ್ ಜಾರಕಿಹೊಳಿ ಇದೀಗ ಕಣ್ಣು ಇಟ್ಟಿದ್ದಾರೆ. ಹೈಕಮಾಂಡ್ ಮುಂದೆ ಸಚಿವ ಸತೀಶ್ ಜಾರಕಿಹೊಳಿ ಈ ಕುರಿತು ಪ್ರಸ್ತಾಪ ಮಾಡಿದ್ದು, ಸಚಿವ ಸ್ಥಾನದ ಜೊತೆಗೆ ಅಧ್ಯಕ್ಷ ಸ್ಥಾನ ನೀಡಿದರೆ ನಿಭಾಯಿಸುತ್ತೇನೆ ಎಂದು ತಿಳಿಸಿದ್ದಾರೆ. ಡಿಕೆ ಶಿವಕುಮಾರ್ ರೀತಿ ನನಗೂ ಕೂಡ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿ. ಮೂರು ವರ್ಷ ಮಂತ್ರಿ ಸ್ಥಾನದ ಜೊತೆಗೆ ಅಧ್ಯಕ್ಷ ಗಾದಿಯನ್ನು ಸಹ ನಿಭಾಯಿಸುತ್ತೇನೆ ಪಕ್ಷದ ಸಾರಥ್ಯಕ್ಕೆ ನಾನು ರೆಡಿ ಅಂತ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಈ…

Read More

ಮೈಸೂರು : ಮೈಸೂರಿನಲ್ಲಿ ಅವಹೇಳನಕಾರಿ ಪೋಸ್ಟ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮೈಸೂರಿನ ಉದಯನಗರ ಪೊಲೀಸ್ ಠಾಣೆಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ದೂರು ದಾಖಲಾಗಿದೆ. ಯುವ ಕಾಂಗ್ರೆಸ್ ನಿಂದ ಉದಯಗಿರಿ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಕೆಯಾಗಿದೆ ಎಂದು ತಿಳಿದು ಬಂದಿದೆ. ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ದೂರು ದಾಖಲಾಗಿದೆ. ಯುವ ಕಾಂಗ್ರೆಸ್ ನಿಂದ ಉದಯಗಿರಿ ಠಾಣೆಗೆ ಇದೀಗ ದೂರು ಸಲ್ಲಿಸಲಾಗಿದೆ. ಪ್ರಕರಣದ ಪ್ರಮುಖ ರೂವಾರಿಯೇ ಪ್ರತಾಪ್ ಸಿಂಹ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಪ್ರತಾಪ್ ಸಿಂಹ ಅವರನ್ನು ತನಿಖೆ ಮಾಡುವಂತೆ ದೂರಿನಲ್ಲಿ ಆಗ್ರಹಿಸಲಾಗಿದೆ. ಆರೋಪಿ ಸುರೇಶ್ ಪ್ರತಾಪ್ ಸಿಂಹನ ಬಂಟನಾಗಿದ್ದಾನೆ. ಮೈಸೂರಿನ ಶಾಂತಿ ಕೆಡಿಸುವುದರಲ್ಲಿ ಪ್ರತಾಪಸಿಂಹನ ಕೈವಾಡವಿದೆ. ಇಬ್ಬರನ್ನು ತನಿಖೆಗೆ ಒಳಪಡಿಸಿದರೆ ಸತ್ಯಾಂಶ ಹೊರಬರುತ್ತದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Read More

ಚಿಕ್ಕಮಗಳೂರು : ಮೂಡಿಗೆರೆಯಲ್ಲಿ ಫೆ.13 ರಂದು ಆತ್ಮಹತ್ಯೆಗೆ ಶರಣಾಗಿದ್ದ ಸರ್ವೇಯರ್ ಶಿವಕುಮಾರ್ ಸಾವಿನ ರಹಸ್ಯ ಹೊರಬಿದ್ದಿದೆ. ಕಚೇರಿಯಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಅವರು ಹನಿಟ್ರ್ಯಾಪ್‌ಗೆ ಒಳಗಾಗಿ ಆತ್ಮಹತ್ಯೆಗೆ ಶರಣಾದ್ರಾ ಎಂಬ ಶಂಕೆ ವ್ಯಕ್ತವಾಗುತ್ತಿದೆ. ಈ ಕುರಿತು ಡೆತ್ ನೋಟ್ ನಲ್ಲಿ ಹಲವು ವಿಷಯಗಳನ್ನು ಅವರು ಉಲ್ಲೇಖಿಸಿದ್ದಾರೆ.ಸರ್ವೆ ಅಧಿಕಾರಿ ಶಿವಕುಮಾರ್ ಅವರು ಸಾವಿಗೂ ಮುನ್ನ ಬರೆದಿಟ್ಟಿದ್ದ ಡೆತ್ ನೋಟ್ ನಲ್ಲಿ ತನ್ನ ಸಾವಿಗೆ ಮೂವರು ಕಾರಣ ಎಂದು ಬರೆದಿಟ್ಟಿದ್ದಾರೆ. ಸರ್ವೆಗೆ ಹೋದಾಗ ಪರಿಚಯವಾಗಿದ್ದ ಮಹಿಳೆ ಜೊತೆ ಫೋನಿನಲ್ಲಿ ಆತ್ಮೀಯವಾಗಿ ಮಾತನಾಡಿದ್ದ ಶಿವಕುಮಾರ್ ಬಳಿ ಮಹಿಳೆ ಹಣಕ್ಕಾಗಿ ಪೀಡಿಸುತ್ತಿದ್ದಳು. ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ. ಈ ವಿಚಾರ ಎಫ್ಐಆರ್‌ನಲ್ಲಿ ಕೂಡ ಪ್ರಸ್ತಾಪವಾಗಿದೆ. ಆಕೆಗೆ ಶಿವಕುಮಾರ್ ಈಗಾಗಲೇ ಒಂದೂವರೆ ಲಕ್ಷ ರೂ. ಹಣ ನೀಡಿದ್ದರು. ಆಕೆ ಪದೇ ಪದೇ ಹಣ ಕೇಳಿದ್ದಕ್ಕೆ ಅವರು ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ. ಮೃತ ಶಿವಕುಮಾರ್‌ಗೆ ಪತ್ನಿ ಹಾಗೂ ಮಗಳಿದ್ದು, ಮಗಳ ಓದಿಗಾಗಿ ಪತ್ನಿ ಹಾಗೂ…

Read More

ಆಂಧ್ರಪ್ರದೇಶ : ಇಂದು ಫೆಬ್ರವರಿ 14 ಪ್ರೇಮಿಗಳ ದಿನಾಚರಣೆ ಹಿನ್ನೆಲೆಯಲ್ಲಿ ಜೋಡಿಹಕ್ಕಿಗಳು ಅತ್ಯಂತ ಸಂತಸದಿಂದ ಕಳೆಯುವ ಕ್ಷಣವಾಗಿದೆ. ಆದರೆ ಆಂಧ್ರಪ್ರದೇಶದಲ್ಲಿ ಘೋರವದ ದುರಂತ ನಡೆದಿದ್ದು, ಯುವತಿಗೆ ಬೇರೆಯವರೊಂದಿಗೆ ಮದುವೆ ಫಿಕ್ಸ್ ಆಗಿದ್ದಕ್ಕೆ ಮನನೊಂದ ಭಗ್ನ ಪ್ರೇಮಿಯೊಬ್ಬ ಯುವತಿಯ ಮುಖಕ್ಕೆ ಆಸಿಡ್ ಎರಚಿ ಚಾಕುವಿನಿಂದ ಇರಿದು ಭೀಕರವಾಗಿ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಹೌದು ಪ್ರೇಮಿಗಳ ದಿನವೇ ಯುವತಿಯ ಮೇಲೆ ಆಸಿಡ್ ದಾಳಿ ನಡೆದಿದೆ. ಆಂಧ್ರಪ್ರದೇಶದಲ್ಲಿ ಯುವತಿಯ ಮೇಲೆ ಆರೋಪಿ ಗಣೇಶ ಎನ್ನುವ ಯುವಕ ಆಸಿಡ್ ದಾಳಿ ಮಾಡಿದ್ದಾನೆ. ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯಲ್ಲಿ ಈ ಒಂದು ಘಟನೆ ನಡೆದಿದೆ. ಯುವತಿಗೆ ಬೇರೆ ವ್ಯಕ್ತಿಯೊಂದಿಗೆ ಮದುವೆ ಫಿಕ್ಸ್ ಆಗಿದ್ದಕ್ಕೆ ಮನನೊಂದ ಯುವಕ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಆರೋಪಿ ಗಣೇಶ್ ಹಾಗೂ ಯುವತಿ ಕಳೆದ ಕೆಲವು ವರ್ಷಗಳಿಂದ ಪ್ರೀತಿಸುತ್ತಿದ್ದರು ಆದರೆ ಇತ್ತೀಚಿಗೆ ಯುವತಿಗೆ ಬೆರೆಯವರೊಂದಿಗೆ ಮದುವೆ ಫಿಕ್ಸ್ ಆಗಿತ್ತು ಏಪ್ರಿಲ್ 29 ರಂದು ಯುವತಿ ಮದುವೆ ದಿನಾಂಕ ಫಿಕ್ಸ್ ಆಗಿತ್ತು ಆದರೆ ಆರೋಪಿ…

Read More

ಬೆಂಗಳೂರು : ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB) ಅಧ್ಯಕ್ಷರಾಗಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ ಎಂದು ಆಕ್ಷೇಪಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಇದೀಗ ಈ ಒಂದು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ರಾಜ್ಯ ಸರ್ಕಾರ ಹಾಗೂ ಪಿಎಂ ನರೇಂದ್ರಸ್ವಾಮಿ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿದೆ. ಶಾಶ್ವತ ನೀರಾವರಿ ಹೋರಾಟ ಸಮಿತಿಯ ಆರ್. ಆಂಜನೇಯರೆಡ್ಡಿ ಬುಧವಾರ ಈ ಕುರಿತು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದು, ಇಂದು ಹೈಕೋರ್ಟ್ ನಲ್ಲಿ ಅರ್ಜಿಯ ವಿಚಾರಣೆ ನಡೆಯಿತು. ವಿಚಾರಣೆಯ ಬಳಿಕ ರಾಜ್ಯ ಸರ್ಕಾರ ಮತ್ತು ಶಾಸಕ ನರೇಂದ್ರ ಸ್ವಾಮಿ ಸೇರಿ ಪ್ರತಿವಾದಿಗಳಿಗೆ ಹೈ ಕೋರ್ಟ್ ವಿಭಾಗೀಯ ಪೀಠದಿಂದ ನೋಟಿಸ್ ಜಾರಿ ಮಾಡಲಾಗಿದೆ. ಸುಪ್ರೀಂ ಕೋರ್ಟ್ ಮಾರ್ಗಸೂಚಿ ಉಲ್ಲಂಘಿಸಿ ನೇಮಕ ಮಾಡಲಾಗಿದೆ ಎಂದು ಅರ್ಜಿ ಸಲ್ಲಿಕೆಯಾಗಿತ್ತು. ಮಂಡಳಿ ಅಧ್ಯಕ್ಷರಾಗಿ ನರೇಂದ್ರಸ್ವಾಮಿ ನೇಮಕ ರದ್ದು ಪಡಿಸಲು ಅರ್ಜಿಯಲ್ಲಿ ಮನವಿ ಮಾಡಲಾಗಿದೆ ಮಾಲಿನ್ಯ ನಿಯಂತ್ರಣ ಮಂಡಳಿಗೆ ಪಿಎಂ ನರೇಂದ್ರಸ್ವಾಮಿ ಅವರನ್ನು ಅಧ್ಯಕ್ಷರನ್ನಾಗಿ ನೇಮಕ…

Read More

ನವದೆಹಲಿ : ದಲಿತ ಸಮುದಾಯದ ಸಿಎಂ ಸ್ಥಾನ ಕೇಳಿದರೆ ತಪ್ಪೇನು? ದಲಿತ ಸಿಎಂ ಕೂಗಿದರೆ ಹೈಕಮಾಂಡ್ ತೀರ್ಮಾನ ಮಾಡೇ ಮಾಡುತ್ತದೆ. ಯಾವ ಸಮುದಾಯ ಬೇಕಾದರೂ ಸಿಎಂ ಸ್ಥಾನವನ್ನು ಕೇಳಬಹುದು. ‘ದಲಿತ ಸಮಾವೇಶ’ ಮಾಡಲು ಕೆಪಿಸಿಸಿ ಅಧ್ಯಕ್ಷರನ್ನು ಕೇಳಬೇಕಿಲ್ಲ ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ತಿಳಿಸಿದರು. ನವದೆಹಲಿಯಲ್ಲಿ ದಲಿತ ಸಚಿವರಿಂದ ಪ್ರತ್ಯೇಕ ಸಮಾವೇಶ ಮಾಡುವ ಕುರಿತಾಗಿ ಮಾತನಾಡಿದ ಅವರು, ಸಮಾವೇಶದ ಅಗತ್ಯವನ್ನು ನಾಯಕರ ಗಮನಕ್ಕೆ ತಂದಿದ್ದೇವೆ. ನಾನು ಎಸ್ ಟಿ ಸಮುದಾಯದ ಮತಗಳಿಂದ ಮಾತ್ರ ಗೆದ್ದಿಲ್ಲ. ಎಲ್ಲಾ ಸಮುದಾಯದ ಆಶೀರ್ವಾದ ಬೇಕು. ಕಾಂಗ್ರೆಸ್ಗೆ ಯಾವ ಸಮಾವೇಶ ಮಾಡಿದರೆ ಒಳ್ಳೆಯದೊ ಆ ಸಮಾವೇಶ ಮಾಡಬೇಕು ಎಂದು ತಿಳಿಸಿದರು. ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಜಾಗೃತಿ ಮೂಡಿಸಬೇಕಿದೆ. ಗ್ಯಾರೆಂಟಿ ಯೋಜನೆಗಳ ಬಗ್ಗೆ ಜನರಿಗೆ ಅರಿವು ಮೂಡಿಸಬೇಕಿದೆ. ಸಮಾವೇಶದ ಅಗತ್ಯವನ್ನು ಕೇಂದ್ರ ನಾಯಕರಿಗೆ ಗಮನಕ್ಕೆ ತಂದಿದ್ದೇವೆ. ಕೇಂದ್ರದ ನಾಯಕರನ್ನು ಸಮಾವೇಶಕ್ಕೆ ಕರಿಸುತ್ತೇವೆ. ಮುಂದಿನ ದಿನಗಳಲ್ಲಿ ಸಮಾವೇಶಕ್ಕೆ ಬರುತ್ತೇವೆ ಎಂದು ಹೇಳಿದ್ದಾರೆ. ಪಕ್ಷದ ವೇದಿಕೆಯಲ್ಲಿಯೇ ಸಮಾವೇಶ ಮಾಡುತ್ತೇವೆ.…

Read More

ನವದೆಹಲಿ : ಒಂದು ಕಡೆ ಸಿಎಂ ಸಿದ್ದರಾಮಯ್ಯನವರೇ ಮುಂದಿನ 10 ವರ್ಷಗಳ ಕಾಲ ಸಿಎಂ ಆಗಿರುತ್ತಾರೆ ಎಂದು ಕೆಲವು ಕಾಂಗ್ರೆಸ್ ನಾಯಕರು ಹೇಳುತ್ತಿದ್ದರೆ, ಇನ್ನೊಂದು ಕಡೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಲವು ರಾಜ್ಯಗಳ ಪಿಸಿಸಿ ಸ್ಥಾನ ಬದಲಾವಣೆ ಮಾಡಲಾಗುತ್ತದೆ ಎಂದು ಹೇಳಿಕೆ ನೀಡಿದ್ದಾರೆ. ಇದರ ಮಧ್ಯ ಸಹಕಾರ ಸಚಿವ ಕೆಎನ್ ರಾಜಣ್ಣ ಅವರು ಎಐಸಿಸಿ ಅಧ್ಯಕ್ಷರು ಹೇಳಿದರೆ ಕೆಪಿಸಿಸಿ ಅಧ್ಯಕ್ಷನಾಗುತ್ತೇನೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷರು ಹೇಳಿದರೆ ಕೆಪಿಸಿಸಿ ಅಧ್ಯಕ್ಷನಾಗುತ್ತೇನೆ. ಎಐಸಿಸಿ ಅಧ್ಯಕ್ಷರು ಹೇಳಿದರೆ ಮಂತ್ರಿ ಸ್ಥಾನ ಬಿಟ್ಟು ಕೆಪಿಸಿಸಿ ಅಧ್ಯಕ್ಷನಾಗುತ್ತೇನೆ. ಒನ್ ಮ್ಯಾನ್ ಒನ್ ಪೋಸ್ಟಿಗೆ ಬದ್ಧನಾಗಿರುತ್ತೇನೆ. ಸಿಎಂ ಘೋಷಣೆ ಮಾಡುವಾಗ ಪ್ರೆಸ್ ರಿಲೀಸ್ ಮಾಡಿದ್ದರು. ಎಂಪಿ ಚುನಾವಣೆಯ ವರೆಗೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಎಂದಿದ್ದರು. ಹೈಕಮಾಂಡ್ ಹೇಳಿದೆ ಅನ್ನೋ ಭಾವನೆ ಕಾರ್ಯಕರ್ತರಲ್ಲಿ ಇದೆ. ಅಧ್ಯಕ್ಷರ ಬದಲಾವಣೆ ಮಾಡಿ ಎಂದು ನಾನೇನು ಹೇಳುತ್ತಿಲ್ಲ. ಗೊಂದಲ ಬಗೆಹರಿಸಿ ಅನ್ನುವುದೇ ನಮ್ಮ ಬಯಕೆಯಾಗಿದೆ.…

Read More

ರಾಯಚೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ನಿರಂತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು ಇದೀಗ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಎಂಬಲ್ಲಿ ದಂಪತಿಗಳು ಸಾವನ್ನಪ್ಪಿದ್ದಾರೆ. ತಂದೆ ತಾಯಿ ಕಳೆದುಕೊಂಡ ಪುತ್ರ ರೂಲ್ಸ್ ಮಾಡಿ ನ್ಯಾಯಕ್ಕಾಗಿ ಆಳಲು ತೋಡಿಕೊಂಡಿರುವ ಘಟನೆ ವರದಿಯಾಗಿದೆ. ಹೌದು ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ತಂದೆ ತಾಯಿ ಬಲಿಯಾಗಿದ್ದು, ತಂದೆ ತಾಯಿಯನ್ನ ಕಳೆದುಕೊಂಡು ಯುವಕ ಬಸವರಾಜ್ ಸದ್ಯ ಅನಾಥನಾಗಿದ್ದಾನೆ. ರಾಯಚೂರಿನಲ್ಲಿ ನಡೆದ ಘಟನೆ ಈಗ ತಡವಾಗಿ ಬೆಳಕಿಗೆ ಬಂದಿದೆ. ರಾಯಚೂರು ಜಿಲ್ಲೆಯ ಲಿಂಗಸುಗೂರಿನ ಹಟ್ಟಿ ಪಟ್ಟಣದಲ್ಲಿ ಈ ಒಂದು ಘಟನೆ ನಡೆದಿದೆ. ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬಸವರಾಜ್ ತಾಯಿ ಈರಮ್ಮ ಆತ್ಮಹತ್ಯೆ ಮಾಡಿಕೊಂಡಿದ್ದು ಇನ್ನೂ ಅದೇ ನೋವಲ್ಲಿ ತಂದೆ ಪರಪ್ಪ ಕೂಡ ಸಾವನ್ನಪ್ಪಿದ್ದಾರೆ. ಈ ಕುರಿತು ಯುವಕ ಬಸವರಾಜ್ ರಿಲ್ಸ್ ಮಾಡಿ ವಿಡಿಯೋ ಬಿಡುಗಡೆ ಮಾಡಿದ್ದಾನೆ. ಬಸವರಾಜ ನಮ್ಮ ಮನೆ ಹರಾಜಿನಲ್ಲಿ ಇದೆ ನ್ಯಾಯ ಕೊಡಿಸಿ ಎಂದು ಅಳಲು ತೋಡಿಕೊಂಡಿದ್ದಾನೆ ವಿಡಿಯೋ ರೀಟ್ಸಪ್ ಮಾಡಿ ಯುವಕ ನ್ಯಾಯಕ್ಕಾಗಿ ಆಗ್ರಹಿಸಿದ್ದಾನೆ. ಮೃತ…

Read More