Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಉದ್ಯೋಗ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಇದೀಗ ಸಿಹಿ ಸುದ್ದಿ ಒಂದನ್ನು ನೀಡಿದ್ದು, ಪರಿಶಿಷ್ಟ ಜಾತಿ (ಎಸ್ಸಿ) ಒಳಮೀಸಲಾತಿ ಹಂಚಿಕೆಯಾಗದೆಯೇ ನೇಮಕಾತಿ ಪ್ರಕ್ರಿಯೆಗಳು ಮುಂದುವರಿಯಲಿದೆ ಎಂದು ಕಾನೂನು ಸಚಿವ ಎಚ್ ಕೆ ಪಾಟೀಲ್ ತಿಳಿಸಿದರು. ನಿನ್ನೆ ನಡೆದ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿದ್ದು, ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆ ಆಗಿರುವುದರಿಂದ ನೀತಿ ಸಂಹಿತೆ ಜಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಒಳಮೀಸಲಾತಿ ಕುರಿತಂತೆ ಯಾವುದೇ ನಿರ್ಣಯ ತೆಗೆದುಕೊಳ್ಳಲು ಸಾಧ್ಯವಿಲ್ಲ. ಹೀಗಾಗಿ ಈ ನಿರ್ಣಯಕ್ಕೆ ಬರಲಾಗಿದೆ. ಆದರೆ, ಈಗಾಗಲೇ ದಲಿತ ಸಂಘಟನೆಗಳು ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಸಾಕಷ್ಟು ಪ್ರತಿಭಟನೆಗಳು ನಡೆಸಿದ್ದು, ಮೂರ್ನಾಲ್ಕು ದಶಕಗಳಿಂದ ನಡೆಸುತ್ತಿರುವ ಹೋರಾಟಕ್ಕೆ ನ್ಯಾಯ ಸಿಗದಿರುವ ಬಗ್ಗೆ ಅಸಮಾಧಾನ ಹೊರಹಾಕಿವೆ. ಈ ಹಂತದಲ್ಲಿ ವಿಶೇಷ ಸಂಪುಟ ಸಭೆ ಮುಂದೂಡಿಕೆಯಾಗಿದ್ದು, ಉಪಚುನಾವಣೆ ಮುಗಿಯುವವರೆಗೆ ಸಮಾಧಾನದಿಂದ ಇರುವುದು ಅನಿವಾರ್ಯವಾಗಿದೆ.
ವಿಜಯಪುರ : ವಿಜಯಪುರದಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದ್ದು, ಪುಟ್ಟ ಪುಟ್ಟ ಮೂವರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಮಿರಗಿ ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ. ರಾಜಶ್ರೀ ಶಂಕ್ರಪ್ಪ ಹಳ್ಳೂರ (28) ಮತ್ತು ಅವರ ಆರು, ಮೂರು ಹೆಣ್ಣುಮಕ್ಕಳು ಮತ್ತು ವರ್ಷದ ಗಂಡು ಮಗುವಿನೊಂದಿಗೆ ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ಈ ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ರಾಜಶ್ರೀ ಅವರ ಪತಿ ಶಂಕ್ರಪ್ಪ ಖಾಸಗಿ ಬಸ್ ಚಾಲಕನಾಗಿದ್ದು, ಪತಿ ಊರಲ್ಲಿ ಇಲ್ಲದ ವೇಳೆ ಘಟನೆ ನಡೆದಿದೆ. ವಿಷಯ ತಿಳಿದು ಸ್ಥಳಕ್ಕೆ ಇಂಡಿ ಗ್ರಾಮೀಣ ಪೊಲೀಸರ ಭೇಟಿ ನೀಡಿ, ಪರಿಶೀಲಿಸಿದರು. ಪತಿ ಹಾಗೂ ರಾಜಶ್ರೀ ತವರು ಮನೆಯವರು ಬಂದ ಬಳಿಕ ಮುಂದಿನ ಪ್ರಕ್ರಿಯೆ ನಡೆಸುವುದಾಗಿ ಪೊಲೀಸರು ತಿಳಿಸಿದರು. ಪೊಲೀಸರ ತನಿಖೆ ಬಳಿಕ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬರಲಿದೆ. ಇಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಬೆಂಗಳೂರು : ಬೆಂಗಳೂರಲ್ಲಿ ಇಂದು ಡಬಲ್ ಮರ್ಡರ್ ನಡೆದಿದ್ದು, ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ ತಮ್ಮನನ್ನ ಅಪ್ರಾಪ್ತ ಬಾಲಕನೊಬ್ಬ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ವಿನ್ಯಾದ ಎಚ್ಎಂಟಿ ಲೇಔಟ್ ನಲ್ಲಿ ಈ ಒಂದು ಕೊಲೆ ನಡೆದಿದೆ. ಚಾಕುವಿನಿಂದ ಇರಿದು ಯಮುನಾ (36) ಮತ್ತು ಆಕೆಯ ತಮ್ಮ ಸುದೀಪ್ (34) ಎನ್ನುವವರನ್ನ ಕೊಲೆ ಮಾಡಲಾಗಿದೆ. 16 ವರ್ಷದ ಅಪ್ರಾಪ್ತ ಬಾಲಕನಿಂದ ಈ ಒಂದು ಕೃತ್ಯ ನಡೆದಿದೆ. ಆರೋಪಿ ತಾಯಿ ಛಾಯಾ ಹಾಗೂ ಯಮುನಾ ಗಂಡನಿಗೆ ಅಕ್ರಮ ಸಂಬಂಧವಿತ್ತು . ಮನೆಗೆ ಬಂದು ಛಾಯಾ ಜೊತೆಗೆ ಅಕ್ಕ ಯಮುನಾ ತಮ್ಮ ಸುದೀಪ್ ಜಗಳ ಆಡುತ್ತಿದ್ದರು. ಈ ವೇಳೆ ಚಾಕುವಿನಿಂದ ಇರಿದು ಛಾಯಾ ಪುತ್ರ ಇಬ್ಬರನ್ನು ಕೊಲೆ ಮಾಡಿದ್ದಾನೆ. ಘಟನಾ ಸ್ಥಳಕ್ಕೆ ಡಿಸಿಪಿ ನಾಗೇಶ್ ಪಿಣ್ಯ ಪೊಲೀಸರು ಭೇಟಿ ನೀಡಿ ನಡೆಸುತ್ತಿದ್ದಾರೆ. ಇತ್ತ ಮಾವ ಹಾಗು ತಾಯಿಯ ಕೊಲೆ ಸುದ್ದಿ ಕೇಳಿ ಪುತ್ರಿ ಆಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ . ಹೌದು ಯಮುನಾ…
ದಾವಣಗೆರೆ : ದಾವಣಗೆರೆಯಲ್ಲಿ ಕಾಂಗ್ರೆಸ್ ಗೆ ಇದೀಗ ಬಿಗ್ ಶಾಕ್ ಎದುರಾಗಿದೆ.ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಸಾದೀಕ್ ಪೈಲ್ವಾನ್ ಮನವೊಲಿಕೆಗೆ ಬಗ್ಗದೆ ನಾಮಪತ್ರ ವಾಪಸ್ ಪಡೆಯದ ಸಾಧಿಕ್, ನಾನು ಹಿಂದೆ ಸರಿದರೆ ಸಮಾಜ ಹಿಂದೆ ಸರಿದಂತೆ ಹೇಳಿಕೆ ನೀಡಿದ್ದಾರೆ. ನಾನು ಸ್ಪರ್ಧೆ ಮಾಡೇ ಮಾಡುತ್ತೇನೆ. ಚುನಾವಣೆ ಯಲ್ಲಿ ನಾನು ಯಾವುದೇ ಕಾರಣಕ್ಕೂ ಹಿಂದೆ ಸರಿಯಲ್ಲ ನಾನು ಹಿಂದೆ ಸರಿದರೆ ಸಮಾಜ ಹಿಂದೆ ಸರಿದಂತೆ. ನಾನು ಸೋತರೆ ಸಮಾಜ ಸೋತಂತೆ ಸಮಾಜ ಸೋತ್ರೆ ನಾನು ಸೋತಂತೆ ಯಾವ ಕಾರಣಕ್ಕೂ ನಾನು ಚುನಾವಣೆಯಿಂದ ಹಿಂದೆ ಸರಿಯಲ್ಲ. ಅಖಾಡದಲ್ಲಿ ಇರುತ್ತೇನೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ಮಾಡುತ್ತೇನೆ ನನಗೆ ಜನ ಆಶ್ವಾಸನೆ ಕೊಟ್ಟಿದ್ದಾರೆ ಆ ನಿಟ್ಟಿನಲ್ಲಿ ನಾನು ಜನಗಳ ಸೇವೆ ಮಾಡಲು ಸಿದ್ಧನಿದ್ದೇನೆ ಎಂದು ತಿಳಿಸಿದರು.
ನವದೆಹಲಿ : ಹಾರ್ಮುಜ್ ಜಲಸಂಧಿಯನ್ನು ಮುಚ್ಚಲು ಕಾರಣರಾದ ಪ್ರಮುಖ ವ್ಯಕ್ತಿ ಹತ್ಯೆ ಮಾಡಲಾಗಿದೆ ಎಂದು ಇಸ್ರೇಲ್ ಮೂಲಗಳನ್ನು ಆಧಾರಿಸಿ ಟೈಮ್ಸ್ ಆಫ್ ಇಸ್ರೇಲ್ ವರದಿ ಮಾಡಿದೆ. ದಾಳಿಯ ಬಗ್ಗೆ ಇರಾನ್ ಅಥವಾ ಇಸ್ರೇಲಿ ಮಿಲಿಟರಿಯಿಂದ ಇನ್ನೂ ಯಾವುದೇ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ. ಹೌದು ಹಾರ್ಮುಜ್ ಜಲಸಂಧಿ ಬಳಿ ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನಿನ ನೌಕಾಪಡೆಯ ಮುಖ್ಯಸ್ಥ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ. ಈ ಪ್ರದೇಶದಲ್ಲಿ ಈಗಾಗಲೇ ಹೆಚ್ಚಿರುವ ಉದ್ವಿಗ್ನತೆ ಮತ್ತು ಮಿಲಿಟರಿ ಚಟುವಟಿಕೆಗಳು ನಿರಂತರವಾಗಿ ಹೆಚ್ಚುತ್ತಿರುವ ಸಮಯದಲ್ಲಿ ಈ ಘಟನೆ ಸಂಭವಿಸಿದೆ. ತಂಗ್ಸಿರಿ ಇರಾನ್ ನೌಕಾಪಡೆಯ ಪ್ರಮುಖ ಕಮಾಂಡರ್ ಆಗಿದ್ದರು ಮತ್ತು ಹಾರ್ಮುಜ್ನಂತಹ ಕಾರ್ಯತಂತ್ರದ ಪ್ರದೇಶದ ಭದ್ರತೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಹಾರ್ಮುಜ್ ಜಲಸಂಧಿ ಮುಚ್ಚಲು ಅವರೇ ಕಾರಣರಾಗಿದ್ದರು. ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಹಲವು ಮಂದಿ ನಾಯಕರು ಹತ್ಯೆಯಾಗಿದ್ದರೂ ಅಲಿರೆಜಾ ತಂಗ್ಸಿರಿ ಬದುಕಿಳಿದಿದ್ದರು. 2018 ರಿಂದ ನೌಕಾ ಕಮಾಂಡರ್ ಸ್ಥಾನದಲ್ಲಿದ್ದ ಇವರು ಹಾರ್ಮುಜ್ ಜಲಸಂಧಿಯನ್ನು ಮುಚ್ಚುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು.ಈ ಜಲಸಂಧಿಯಲ್ಲಿ ಸಾಮಾನ್ಯವಾಗಿ ಪ್ರತಿದಿನ…
ಬೆಂಗಳೂರು : ರಾಜ್ಯದಲ್ಲಿ ಈಗಾಗಲೇ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಆರಂಭವಾಗಿದ್ದು, ಇದೀಗ ಮಾ.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು ಪರೀಕ್ಷಾ ಬೋರ್ಡ್ ಮಾಹಿತಿ ನೀಡಿದೆ. ಈ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದ್ದು, ಮಹಾವೀರ ಜಯಂತಿ ರಜೆ ಹಿಂದೂಡಿಕೆ ಮಾಡಿದ ಹಿನ್ನೆಲೆ ಪರೀಕ್ಷೆಯನ್ನು ಒಂದು ದಿನ ಮುಂದೂಡಿಕೆ ಮಾಡಲಾಗಿದೆ. ಮಾ.30ಕ್ಕೆ ಮಹಾವೀರ ಜಯಂತಿ ರಜೆ ಹಾಗೂ ಮಾ.31ಕ್ಕೆ ಹಿಂದಿ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದೆ. ಮಹಾವೀರ ಜಯಂತಿ ರಜೆ ಹಿಂದೂಡಿಕೆ ಮಾಡಿದ ಹಿನ್ನೆಲೆ ಮಾ.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ತೃತೀಯ ಭಾಷೆ ಹಿಂದಿ ಪರೀಕ್ಷೆಯನ್ನು ಮಾ.31ಕ್ಕೆ ಮುಂದೂಡಿಕೆ ಮಾಡಿದೆ. ಈ ಮೊದಲು ಮಾ.31ಕ್ಕೆ ರಜೆಯಿದ್ದ ಹಿನ್ನೆಲೆ ಮಾ.30ಕ್ಕೆ ಹಿಂದಿ ಪರೀಕ್ಷೆ ನಿಗದಿಯಾಗಿತ್ತು. ಇದೀಗ ಸರ್ಕಾರ ಪರಿಷ್ಕರಣೆ ಮಾಡಿ, ಮಾ.31ರ ರಜೆಯನ್ನು ಮಾ.30ಕ್ಕೆ ಘೋಷಿಸಿದೆ. ಹೀಗಾಗಿ ಪರೀಕ್ಷಾ ದಿನಾಂಕವನ್ನು ಬದಲಿಸಿ, ಮಾ.31ಕ್ಕೆ ನಡೆಸಲು ತೀರ್ಮಾನಿಸಿದೆ.
ಬೆಂಗಳೂರು : ಕಳೆದ ವರ್ಷ ಜೂನ್ ನಲ್ಲಿ ಆರ್ಸಿಬಿ ವಿಜಯೋತ್ಸವದ ವೇಳೆ ಬೆಂಗಳೂರಿನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಜನರ ಸಾವಿನ ಹಿನ್ನೆಲೆಯಲ್ಲಿ ಬಿಸಿಸಿಐ ಈ ಬಾರಿ ಉದ್ಘಾಟನಾ ಸಮಾರಂಭ ರದ್ದುಗೊಳಿಸಿದೆ. ಮೃತರಿಗೆ ಗೌರವಾರ್ಥವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಐಪಿಎಲ್ 2026 ಮಾರ್ಚ್ 28 ರಂದು ಬೆಂಗಳೂರಿನಲ್ಲಿ ಆರ್ಸಿಬಿ ಮತ್ತು ಸನ್ರೈಸರ್ಸ್ ಹೈದರಾಬಾದ್ ನಡುವೆ ಆರಂಭವಾಗಲಿದೆ. ಹಾಲಿ ಚಾಂಪಿಯನ್ ಆರ್ಸಿಬಿ ಹಾಗೂ ಸನ್ರೈಸರ್ಸ್ ಹೈದರಾಬಾದ್ ನಡುವೆ ಸಂಜೆ 7:30 ರಿಂದ ಆರಂಭವಾಗಲಿದೆ. ಆದಾಗ್ಯೂ ಪ್ರತಿ ಆವೃತ್ತಿಯ ಮೊದಲ ಪಂದ್ಯ ನಡೆಯುವುದಕ್ಕೂ ಮುನ್ನ ಉದ್ಘಾಟನಾ ಸಮಾರಂಭ ನಡೆಯುವುದು ವಾಡಿಕೆ. ಆದರೆ ಈ ಆವೃತ್ತಿಯಲ್ಲಿ ಉದ್ಘಾಟನಾ ಸಮಾರಂಭವನ್ನು ನಡೆಸದಿರಲು ಬಿಸಿಸಿಐ ನಿರ್ಧರಿಸಿದೆ. ಕಳೆದ ಆವೃತ್ತಿಯಲ್ಲಿ ಆರ್ಸಿಬಿ ತನ್ನ ಮೊದಲ ಐಪಿಎಲ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಹೀಗಾಗಿ ಜೂನ್ 4, 2025 ರಂದು ನಡೆದಿದ್ದ ವಿಜಯೋತ್ಸವದ ಸಮಯದಲ್ಲಿ ಕಾಲ್ತುಳಿತ ಸಂಭವಿಸಿ11 ಜನರು ಸಾವನ್ನಪ್ಪಿದರು. ಈ ಕಾರಣದಿಂದಾಗಿ ಈ ಆವೃತ್ತಿಯ ಉದ್ಘಾಟನಾ ಸಮಾರಂಭವನ್ನು ನಡೆಸದಿರಲು ಬಿಸಿಸಿಐ ನಿರ್ಧರಿಸಿದೆ. ಆದಾಗ್ಯೂ,…
ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಭೀಕರ ಕೋಲಿ ನಡೆದಿದ್ದು, ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ ತಮ್ಮನನ್ನ ಅಪ್ರಾಪ್ತ ಬಾಲಕನೊಬ್ಬ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ವಿನ್ಯಾದ ಎಚ್ಎಂಟಿ ಲೇಔಟ್ ನಲ್ಲಿ ಈ ಒಂದು ಕೊಲೆ ನಡೆದಿದೆ. ಚಾಕುವಿನಿಂದ ಇರಿದು ಯಮುನಾ (36) ಮತ್ತು ಆಕೆಯ ತಮ್ಮ ಸುದೀಪ್ (34) ಎನ್ನುವವರನ್ನ ಕೊಲೆ ಮಾಡಲಾಗಿದೆ. 16 ವರ್ಷದ ಅಪ್ರಾಪ್ತ ಬಾಲಕನಿಂದ ಈ ಒಂದು ಕೃತ್ಯ ನಡೆದಿದೆ. ಆರೋಪಿ ತಾಯಿ ಛಾಯಾ ಹಾಗೂ ಯಮುನಾ ಗಂಡನಿಗೆ ಅಕ್ರಮ ಸಂಬಂಧವಿತ್ತು . ಮನೆಗೆ ಬಂದು ಛಾಯಾ ಜೊತೆಗೆ ಅಕ್ಕ ಯಮುನಾ ತಮ್ಮ ಸುದೀಪ್ ಜಗಳ ಆಡುತ್ತಿದ್ದರು. ಈ ವೇಳೆ ಚಾಕುವಿನಿಂದ ಇರಿದು ಛಾಯಾ ಪುತ್ರ ಇಬ್ಬರನ್ನು ಕೊಲೆ ಮಾಡಿದ್ದಾನೆ. ಘಟನಾ ಸ್ಥಳಕ್ಕೆ ಡಿಸಿಪಿ ನಾಗೇಶ್ ಪಿಣ್ಯ ಪೊಲೀಸರು ಭೇಟಿ ನೀಡಿ ನಡೆಸುತ್ತಿದ್ದಾರೆ
ಬೆಂಗಳೂರು : 1ನೇ ತರಗತಿಗೆ ಆರು ವರ್ಷ ತುಂಬಿರಬೇಕು ಎಂಬ ನಿಯಮದ ವಿಚಾರವಾಗಿ ರಾಜ್ಯ ಸರ್ಕಾರ ಇದೀಗ ಪೋಷಕರಿಗೆ ಗುಡ್ ನ್ಯೂಸ್ ನೀಡಿದೆ. 6 ವರ್ಷ ತುಂಬಿರಲೇ ಬೇಕೆಂಬ ನಿಯಮದಲ್ಲಿ ಈ ವರ್ಷವೂ ರಾಜ್ಯ ಸರ್ಕಾರ ವಿನಾಯಿತಿ ನೀಡಿದೆ. ರಾಜ್ಯ ಸರ್ಕಾರ ಇದೀಗ 60 ದಿನಗಳ ಸಡಿಲಿಕೆ ನೀಡಿದೆ. ಈ ಕುರಿತು ವಿಧಾನಸಭೆಯಲ್ಲಿ ಸಚಿವ ಮಧುರ ಬಂಗಾರಪ್ಪ ಘೋಷಣೆ ಮಾಡಿದ್ದು ಕರ್ನಾಟಕ ಶಿಕ್ಷಣ ಕಾಯ್ದೆ 1993ರ ಅಧ್ಯಾಯ ಮೂರು ಸೆಕ್ಷನ್ 20ರ ಪ್ರಕಾರ ಮಕ್ಕಳನ್ನು ಒಂದನೇ ತರಗತಿಗೆ ದಾಖಲಾತಿ ಮಾಡುವ ಸಂಬಂಧ 60 ದಿನಗಳ ವಿನಾಯಿತಿಯನ್ನು ನೀಡಲಾಗಿರುತ್ತದೆ ಅದರಂತೆ 2026 27ನೇ ಸಾಲಿನಲ್ಲಿ ಒಂದನೇ ತರಗತಿಗೆ ದಾಖಲಾತಿ ನೀಡುವ ಸಂಬಂಧ ಅರವತ್ತು ದಿನಗಳ ಸಡಿಲಿಕೆಯನ್ನು ನೀಡಲಾಗುತ್ತದೆ ಹಾಗೂ ಈ ಸಂಬಂಧ ದಾಖಲಾತಿ ತಂತ್ರಾಂಶದಲ್ಲಿಯೂ ಕೂಡ ಸಹ ಬದಲಾವಣೆ ಮಾಡಲಾಗುವುದು ಎಂಬ ಮಾಹಿತಿಯನ್ನು ಸದನ ಗಮನಕ್ಕೆ ತರಲು ಬಯಸುತ್ತೇನೆ ಎಂದು ಮಧು ಬಂಗಾರಪ್ಪ ಘೋಷಣೆ ಮಾಡಿದರು.
ಬೆಳಗಾವಿ : ಬೆಳಗಾವಿಯಲ್ಲಿ ಘೋರ ಘಟನೆ ಒಂದು ನಡೆದಿದ್ದು ಬಸ್ ಹತ್ತುವ ವೇಳೆ ಮಗು ಒಂದು ಕೆಳಗೆ ಜಾರಿ ಬಿದ್ದಿದೆ.ಈ ವೇಳೆ ಮಗುವಿನ ಮೇಲೆ ಬಸ್ಸಿನ ಮುಂಬದಿ ಚಕ್ರ ಹರಿದು ಮಗುವಿನ ಕಾಲು ಕಟ್ ಆಗಿರುವ ಘಟನೆ ಬೆಳಗಾವಿಯ ಸೌದತ್ತಿ ಬಸ್ ನಿಲ್ದಾಣದಲ್ಲಿ ಈ ಒಂದು ಘಟನೆ ನಡೆದಿದೆ. ಸೀಟು ಹಿಡಿಯುವ ಭರದಲ್ಲಿ ಮಹಿಳೆ ಓಡೋಡಿ ಬಂದಿದ್ದಾಳೆ, ಬಸ್ ಹತ್ತುವಾಗ ಮಹಿಳೆಯ ಕೈಯಿಂದ ಮಗು ಜಾರಿ ಕೆಳಗೆ ಬಿದ್ದಿದೆ. ಬಸ್ಸಿನ ಮುಂದಿನ ಚಕ್ರದ ಅಡಿ ಮಗು ಸಿಲುಕಿದ್ದು, ಈ ವೇಳೆ ಮಗುವಿನ ಕಾಲಿನ ಮೇಲೆ ಬಸ್ ಹರಿದಿದೆ ತಕ್ಷಣ ಮಗುವನ್ನು ರಕ್ಷಿಸಿ ಸ್ಥಳೀಯರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಸೌದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














