Author: kannadanewsnow05

ಬೆಂಗಳೂರು : ಇತ್ತೀಚಿಗೆ ಹೃದಯಘಾತ ಪ್ರಕರಣಗಳ ಸಂಖ್ಯೆ ಚಿಕ್ಕ ವಯಸ್ಸಿನವರಲ್ಲಿ ಹೆಚ್ಚಾಗಿ ಕಂಡುಬರುತ್ತಿದ್ದು, ನಿನ್ನೆ ತಾನೆ ತುಮಕೂರಿನಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹಾಗೂ ಕಲ್ಬುರ್ಗಿ ನಗರದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಇದೀಗ ಬೆಂಗಳೂರು ನಗರದ ಬ್ರೂಕ್ ಫೀಲ್ಡ್ ರಸ್ತೆಯಲ್ಲಿ ಪಾರ್ಕ್ ಮಾಡಿದ್ದ ಕಾರಿನಲ್ಲಿ ಹೃದಯಾಘಾತದಿಂದ ಯುವಕ ಸಾವನ್ನಪ್ಪಿರುವ ಘಟನೆ ಜರುಗಿದೆ. ಹೌದು ಫೆ.20ರಂದು ಈ ಅವಘಡ ಸಂಭವಿಸಿದ್ದು ತಡವಾಗಿ ಬೆಳಕಿಗೆ ಬಂದಿದೆ. ಯುವಕ ತನ್ನ ಗ್ರ‍್ಯಾಂಡ್ ಐಟೆನ್ ಕಾರಿನಲ್ಲಿ ಮೃತಪಟ್ಟಿದ್ದು, ಮೃತದೇಹ ನೋಡಿದ ಅಪರಿಚಿತ ವ್ಯಕ್ತಿ ಹಾಗೂ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಮೃತದೇಹವನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಘಟನೆಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Read More

ಹೈದ್ರಾಬಾದ್ : ಕಾಲಿವುಡ್ ಸ್ಟಾರ್ ಹೀರೋ ಅಜಿತ್ ಇತ್ತೀಚೆಗೆ ಕಾರು ರೇಸಿಂಗ್ ನಲ್ಲಿ ಭಾಗವಹಿಸುತ್ತಿದ್ದಾರೆ. ನಾಯಕನಾಗಿ ಚಿತ್ರಗಳಲ್ಲಿ ನಟಿಸುವುದರ ಜೊತೆಗೆ, ಬೈಕ್ ಮತ್ತು ಕಾರು ರೇಸಿಂಗ್‌ಗಳಲ್ಲಿ ಭಾಗವಹಿಸುವ ಮೂಲಕ ಅವರು ತಮ್ಮ ಕೌಶಲ್ಯವನ್ನು ಪ್ರದರ್ಶಿಸುತ್ತಿದ್ದಾರೆ. ಇದೀಗ ಸ್ಪೇನ್‌ನ ವೇಲೆನ್ಸಿಯಾದಲ್ಲಿ ನಡೆದ ರೇಸಿಂಗ್ ಸ್ಪರ್ಧೆಯಲ್ಲಿ ಅವರ ಕಾರು ಭೀಕರ ಅಪಘಾತಕ್ಕೀಡಾಗಿದೆ. ಕೇವಲ ಒಂದು ತಿಂಗಳಲ್ಲಿ ಇದು ಅವರ ಎರಡನೇ ಇಂತಹ ಅಪಘಾತವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಅಜಿತ್ ಕಾರು ಆಕ್ಸಿಡೆಂಟ್ ಆಗುವ ದೃಶ್ಯ ವೈರಲ್ ಆಗಿದ್ದು, ವೈರಲ್ ಆಗಿರುವ ಭಯಾನಕ ವೀಡಿಯೊದಲ್ಲಿ, ಅಜಿತ್ ಅವರ ಕಾರು ರೇಸಿಂಗ್ ಟ್ರ್ಯಾಕ್‌ ನಲ್ಲಿ ಕೆಟ್ಟದಾಗಿ ಕ್ರ್ಯಾಶ್ ಆಗುವುದನ್ನು ಕಾಣಬಹುದು. ವೇಲೆನ್ಸಿಯಾದಲ್ಲಿ ನಡೆದ ಪೋರ್ಷೆ ಸ್ಪ್ರಿಂಟ್ ಚಾಲೆಂಜ್ ರೇಸಿಂಗ್ ಈವೆಂಟ್‌ನಲ್ಲಿ ನಟ ಚಾಲಕರಾಗಿದ್ದರು. ವೀಡಿಯೊದಲ್ಲಿ, ಅಜಿತ್ ಕುಮಾರ್ ಅಪಘಾತದ ನಂತರ ತಮ್ಮ ಕಾರಿನಿಂದ ಹೊರಬರುತ್ತಿರುವುದು ಕಾಣಬಹುದು, ಯಾವುದೇ ಹಾನಿಯಾಗದಂತೆ ಕಾಣುತ್ತಾರೆ. ಇದರಿಂದ ಅಭಿಮಾನಿಗಳು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಪ್ರಸ್ತುತ, ಅಜಿತ್ ಅವರ ಕಾರು ಅಪಘಾತಕ್ಕೆ ಸಂಬಂಧಿಸಿದ ವೀಡಿಯೊ ಸಾಮಾಜಿಕ…

Read More

ಹಾಸನ : ಆಕಸ್ಮಿಕ ಬೆಂಕಿ ತಗುಲಿ ಕೊಟ್ಟಿಗೆಯಲ್ಲಿದ್ದ 5 ಹಸುಗಳು ಹಾಗೂ 1 ಕರು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಹೆಂಜಗುಂಡನಹಳ್ಳಿ ಎಂಬ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.ಈ ಹಸುಗಳು ಹಾಗು ಕರು ರೈತ ಶಿವಣ್ಣ ಎಂಬುವವರಿಗೆ ಸೇರಿದ್ದವು ಎಂದು ತಿಳಿದುಬಂದಿದೆ. ತೋಟದ ಮನೆಗೆ ಬೆಂಕಿ ತಗುಲಿ 5 ಹಸುಗಳು 1 ಕರು ಸಾವನ್ನಪ್ಪಿದೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಹೆಂಜಗುಂಡನಹಳ್ಳಿ ಗ್ರಾಮದಲ್ಲಿ ತೋಟದ ಮನೆಯಲ್ಲಿ ಸಂಗ್ರಹಟ್ಟಿದ್ದ ತೆಂಗಿನಕಾಯಿಗಳು ಬೆಂಕಿಗೆ ಆಹುತಿ ಆಗಿವೆ.ರಾತ್ರಿ ಹಸುಗಳನ್ನು ರೈತ ಶಿವಣ್ಣ ಕೊಟ್ಟಿಗೆಯಲ್ಲಿ ಕಟ್ಟಿ ಮನೆಗೆ ಬಂದಿದ್ದ. ಆದರೆ ಬೆಳಿಗ್ಗೆ ಶಿವಣ್ಣ ಹಾಲು ಕರೆಯಲು ಹೋದಾಗ ಈ ಘಟನೆ ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಶಾಸಕ ಕೆಎಂ ಶಿವಲಿಂಗೇಗೌಡ ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಕುರಿತಂತೆ ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಳಗಾವಿ : ಕನ್ನಡ ಮಾತಾಡು ಎಂದಿದ್ದಕ್ಕೆ ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ ಪ್ರಕರಣ ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದ್ದು ನಿನ್ನೆ ಚಿತ್ರದುರ್ಗದಲ್ಲಿ ಮಹಾರಾಷ್ಟ್ರ ಬಸ್ ಚಾಲಕನಿಗೆ ಕನ್ನಡ ಪರ ಕಾರ್ಯಕರ್ತರು ಮಸಿ ಬಳಿದ ನೆಲೆಯಲ್ಲಿ ಕರ್ನಾಟಕಕ್ಕೆ ಮಹಾರಾಷ್ಟ್ರ ಸರ್ಕಾರ ಬಸ್ ಸೇವೆ ಸ್ಥಗಿತಗೊಳಿಸಿದೆ. ಇದರ ಬೆನ್ನಲ್ಲೇ ಕರ್ನಾಟಕ ಕೂಡ ಮಹಾರಾಷ್ಟ್ರಕ್ಕೆ ತೆರಳುವ ಕೆಎಸ್ಆರ್ಟಿಸಿ ಬಸ್ ಸಂಚಾರ ಸ್ಥಗಿತಗೊಳಿಸಿದೆ. ಹೌದು ಕೊಲ್ಲಾಪುರದಲ್ಲಿ ಶಿವಸೇನೆ ಪ್ರತಿಭಟನೆ ಹಿನ್ನೆಲೆಯಲ್ಲಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಕೊಲ್ಲಾಪುರಕ್ಕೆ ತೆರಳುವ ಎಲ್ಲಾ ಕೆಎಸ್ಆರ್ಟಿಸಿ ಬಸ್ಗಳ ಸಂಚಾರ ಇದೀಗ ಬಂದ್ ಮಾಡಲಾಗಿದೆ. ನಿಪ್ಪಾಣಿ, ಚಿಕ್ಕೋಡಿ ಹಾಗೂ ಬೆಳಗಾವಿ ಮಾರ್ಗವಾಗಿ ಮಹಾರಾಷ್ಟ್ರಕ್ಕೆ ತೆರಳುವ ಎಲ್ಲಾ KSRTC ಬಸ್ ಗಳನ್ನು ಬಂದ್ ಮಾಡಲಾಗಿದೆ. ಪ್ರತಿದಿನ 120 ಬಸ್ ಗಳ ಸಂಚಾರ ನಡೆಸುತ್ತಿದ್ದ ಸಾರಿಗೆ ಇಲಾಖೆ ಮಧ್ಯಾಹ್ನದ ಬಳಿಕ ಪರಿಸ್ಥಿತಿ ನೋಡಿಕೊಂಡು ಮುಂದಿನ ತೀರ್ಮಾನ ಕೈಗೊಳ್ಳಲಿದೆ. ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುತ್ತಿದ್ದ ಬಸ್ಗಳ ಸಂಚಾರ ಕೂಡ ಇದೀಗ ಸ್ಥಗಿತಗೊಂಡಿದೆ. ಎಲ್ಲಾ ಬಸ್ ಸಂಚಾರವನ್ನು ಸ್ಥಗಿತಗೊಳಿಸಿದ ಮಹಾರಾಷ್ಟ್ರ…

Read More

ಬೆಂಗಳೂರು : ಸಾಮಾನ್ಯವಾಗಿ ಬೈಕ್ ಅಥವಾ ಕಾರು ಯಾವುದೇ ಇರಲಿ ನಂಬರ್ ಪ್ಲೇಟ್ ಮೇಲೆ ನಂಬರ್ ಇರುವುದನ್ನು ನೋಡಿದ್ದೇವೆ. ಅಲ್ಲದೆ ನಂಬರ್ ಜೊತೆ ಕೆಲವು ಅಡಿ ಬರಹಗಳನ್ನು ಸಹ ಕಾಣುತ್ತೆವೆ. ಕೇಂದ್ರ ಮೋಟಾರ್ ವಾಹನ ನಿಯಮದ ಪ್ರಕಾರ ವಾಹನದ ಹಿಂದೆ ಮತ್ತು ಮುಂದೆ ನಂಬರ್ ಪ್ಲೇಟ್ ಮೇಲೆ ನಂಬರ್ ಕಡ್ಡಾಯ.ಆದರೆ ಬೆಂಗಳೂರಿನಲ್ಲಿ ಕಾರು ಒಂದು ನಂಬರ್ ಪ್ಲೇಟ್ ಮೇಲೆ ನಂಬರ್ ಬದಲಾಗಿ ಮಾಫಿಯಾ ಎಂದು ಸ್ಟಿಕರ್ ಅಳವಡಿಸಿ ಓಡಾಡುತ್ತಿರುವ ಫೋಟೋ ಇದೀಗ ವೈರಲ್ ಆಗಿದೆ. ಹೌದು ಕಾರಿನ ನಂಬರ್ ಪ್ಲೇಟ್ ನಲ್ಲಿ ಮಾಫಿಯಾ ಪ್ರತ್ಯಕ್ಷವಾಗಿದೆ. ಬೆಂಗಳೂರಿನಲ್ಲಿ ಓಡಾಡುತ್ತಿದೆ ಮಾಫಿಯಾ ಎಂದು ಬರೆದ ಕಾರು. ನಂಬರ್ ಪ್ಲೇಟ್ ನಲ್ಲಿ ಮಾಫಿಯಾ ಎಂದು ಬರೆಸಿ ಉದ್ಧಟತನ ಮೆರೆಯಲಾಗಿದೆ. ಕಾರಿನ ನಂಬರ್ ಪ್ಲೇಟ್ ಮೇಲೆ ನಂಬರ್ ಬದಲಿಗೆ ಮಾಫಿಯಾ ಎಂಬ ಬರಹ ಬರೆಯಲಾಗಿದೆ.ಮಾಫಿಯಾ ಎಂದು ಬರೆದು ಏರ್ಪೋರ್ಟರ್ ರಸ್ತೆಯಲ್ಲಿ ಕಾರು ಸಂಚರಿಸಿದೆ. ಸಾರ್ವಜನಿಕರೊಬ್ಬರು ಈ ಒಂದು ಫೋಟೋವನ್ನು ತೆಗೆದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ.

Read More

ನವದೆಹಲಿ : ಉತ್ತರ ದೆಹಲಿಯ ರೋಹಿಣಿ ಜಿಲ್ಲೆಯ ಪ್ರೇಮ್ ನಗರದಲ್ಲಿರುವ ಸೂರ್ಯ ಮಂದಿರದಲ್ಲಿ ಶನಿವಾರ ಬೆಳಿಗ್ಗೆ ಸಂಭವಿಸಿದ ಬೆಂಕಿ ಅವಘಡದಲ್ಲಿ 65 ವರ್ಷದ ಅರ್ಚಕರೊಬ್ಬರು ಸುಟ್ಟು ಕರಕಲಾದ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.ದೆಹಲಿಯ ರೋಹಿಣಿ ಪ್ರದೇಶದ ಸೂರ್ಯ ದೇವಾಲಯದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅರ್ಚಕರು ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಅಪಘಾತದಲ್ಲಿ ದೇವಸ್ಥಾನದ ಅರ್ಚಕ ಸುಟ್ಟು ಕರಕಲಾಗಿದ್ದಾರೆ. ಹೌದು ದೆಹಲಿಯ ರೋಹಿಣಿ ಪ್ರದೇಶದ ಸೂರ್ಯ ದೇವಾಲಯದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅರ್ಚಕರು ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಅಪಘಾತದಲ್ಲಿ ದೇವಸ್ಥಾನದ ಅರ್ಚಕ ಸುಟ್ಟು ಕರಕಲಾಗಿದ್ದಾರೆ. ಘಟನೆಯಲ್ಲಿ ಸಾವನ್ನಪ್ಪಿದ ಅರ್ಚಕರನ್ನು 65 ವರ್ಷದ ಪಂಡಿತ್ ಬನ್ವಾರಿ ಲಾಲ್ ಶರ್ಮಾ ಎಂದು ಗುರುತಿಸಲಾಗಿದೆ. ಶನಿವಾರ, ಪ್ರೇಮ್ ನಗರ ಪೊಲೀಸ್ ಠಾಣೆಗೆ ಸೂರ್ಯ ದೇವಾಲಯದಲ್ಲಿ ಬೆಂಕಿ ಕಾಣಿಸಿಕೊಂಡ ಬಗ್ಗೆ ಮಾಹಿತಿ ಸಿಕ್ಕಿತು. ಅಗ್ನಿಶಾಮಕ ದಳ ಮತ್ತು ಪೊಲೀಸ್ ತಂಡ ತಕ್ಷಣ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಿಸಿತು. ಆದರೆ, ಅರ್ಚಕ ಬನ್ವಾರಿ ಲಾಲ್ ಶರ್ಮಾ ಪ್ರಜ್ಞಾಹೀನ…

Read More

ಮಂಡ್ಯ : ನಾಡಬಾಂಬ್ ಸ್ಫೋಟಗೊಂಡು ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಕಂಬದಹಳ್ಳಿಯ ಆಂಜನೇಯ ಬೆಟ್ಟದಲ್ಲಿ ಈ ಒಂದು ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕಂಬದಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಹರಿಯಂತ್ ಪಾಟೀಲ್ ಹಾಗೂ ಪಾರ್ಥ ಎಂದು ತಿಳಿದುಬಂದಿದೆ. ಜೈನಬಸದಿ ಶಾಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಓದುತ್ತಿದ್ದರು.ಬೆಟ್ಟದ ದೇವಸ್ಥಾನದಲ್ಲಿ ವಿದ್ಯಾರ್ಥಿಗಳು ಸ್ವಚ್ಛತಾ ಕಾರ್ಯಕ್ಕೆ ತೆರಳಿದ್ದಾರೆ. ಈ ವೇಳೆ ಕಸದ ರಾಶಿಗೆ ವಿದ್ಯಾರ್ಥಿಗಳು ಕೈ ಹಾಕುತ್ತಿದ್ದಂತೆ ನಾಡ ಬಾಂಬ್ ಸ್ಫೋಟಗೊಂಡಿದೆ. ಈ ಘಟನೆಯಲ್ಲಿ ಓರ್ವನ ಅಂಗೈ ಚಿತ್ರವಾಗಿದ್ದು ಮತ್ತೊಬ್ಬನ ಮುಖದ ಭಾಗಕ್ಕೆ ತೀವ್ರ ಗಾಯವಾಗಿದೆ. ಕಾಡು ಹಂದಿ ಬೇಟೆಗೆ ನಾಡ ಬಾಂಬ್ ಇಟ್ಟಿರುವ ಶಂಕೆ ಇದೀಗ ವ್ಯಕ್ತವಾಗಿದೆ.

Read More

ಬೆಳಗಾವಿ : ಬೈಕ್ ಗೆ ಹಿಂಬದಿಯಿಂದ ವೇಗವಾಗಿ ಬಂದಂತ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ತಂದೆ ಹಾಗೂ ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘೋರ ದುರಂತ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅನಂತಪುರ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಮೃತರನ್ನು ರಾಮು ಕರ್ಣಿ (49) ಹಾಗೂ ಮಗಳು ಜಾಹ್ನವಿ ಕರ್ಣಿ (11) ಎಂದು ತಿಳಿದುಬಂದಿದೆ. ಇನ್ನು ರಾಮು ಪತ್ನಿಗೆ ಗಂಭೀರವಾದ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರು ಮಹಾರಾಷ್ಟ್ರದ ಜತ್ತ ತಾಲೂಕಿನ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ. ಅನಂತಪುರ ಗ್ರಾಮದ ಸೋದರ ಸಂಬಂಧಿ ಮದುವೆಗೆ ಇವರು ಬಂದಿದ್ದರು. ಬೈಕಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಕಾರು ಚಾಲಕ ಸ್ಥಳದಿಂದ ಪರಾರಿ ಆಗಿದ್ದಾನೆ. ಅಪಘಾತದ ಕುರಿತಿ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಯುವತಿ ತನ್ನ ಪ್ರೀತಿ ನಿರಾಕರಿಸಿದ್ದಾಳೆ ಎಂದು ರುಚಿ ಗೆದ್ದ ಪಾಗಲ್ ಪ್ರೇಮಿ ಒಬ್ಬ ಯುವತಿಯ ತಂದೆಗೆ ಸೇರಿದ ಬೈಕ್ ಹಾಗೂ ಕಾರುಗಳಿಗೆ ಬೆಂಕಿ ಹಾಕಿರುವ ಘಟನೆ ಬೆಂಗಳೂರಿನ ಚೆನ್ನಮ್ಮನ ಅಚ್ಚುಕಟ್ಟು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸ್ನೇಹಿತರನ್ನು ಕರೆದುಕೊಂಡು ಬೈಕ್ ಹಾಗೂ ಕಾರುಗಳಿಗೆ ಬೆಂಕಿ ಹಚ್ಚಿರುವ ಪಾಗಲ್ ಪ್ರೇಮಿಯನ್ನು ರಾಹುಲ್ ಎಂದು ತಿಳಿದುಬಂದಿದೆ. ಯುವತಿಯೊಬ್ಬಳನ್ನು ಪಾಗಲ್ ಪ್ರೇಮಿ ರಾಹುಲ್ ಪ್ರೀತಿಸುತ್ತಿದ್ದ. ಪ್ರೀತಿ ನಿರಾಕರಿಸಿದಕ್ಕೆ ರೊಚ್ಚಿಗೆದ್ದು ಕಾರು ಮತ್ತು ಬೈಕುಗಳಿಗೆ ರಾಹುಲ್ ಬೆಂಕಿ ಹಾಕಿದ್ದಾನೆ. ಸ್ನೇಹಿತರನ್ನು ಕರೆದುಕೊಂಡು ಹೋಗಿ ರಾಹುಲ್ ಈ ಕೃತ್ಯ ಎಸಗಿದ್ದಾನೆ. ಈ ವೇಳೆ ತಡೆಯಲು ಬಂದ ಸೆಕ್ಯೂರಿಟಿ ಗಾರ್ಡ್ ಮೇಲು ಕೂಡ ಆರೋಪಿಗಳು ಹಲ್ಲೆ ಮಾಡಿದ್ದಾರೆ. ಘಟನೆ ಕುರಿತು ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು : ರಾಜ್ಯದಲ್ಲಿ ಇಂದು ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಮೂವರು ಪಾದಚಾರಿಗಳ ಮೇಲೆ ಕಾರು ಹರಿದು ಓರ್ವ ಸಾವನ್ನಪ್ಪಿರುವ ಘಟನೆ ಮಂಗಳೂರು ಹೊರವಲಯದ ಕೊಳಾಯಿ ಬಳಿ ಈ ಒಂದು ಭೀಕರವಾದಂತಹ ಅಪಘಾತ ಸಂಭವಿಸಿದೆ. ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ದೀಪುಗೌಡ (50) ಎಂದು ತಿಳಿದು ಬಂದಿದೆ. ಇನ್ನು ಅಪಘಾತದಲ್ಲಿ ಕೊಪ್ಪಳ ಜಿಲ್ಲೆಯ ಕಾರಟಗಿ ಮೂಲದ ಪ್ರದೀಪ್ ಕೊಲ್ಕರ್ ಹಾಗೂ ಮಂಗಳೂರಿನ ಕೋಡಿಕೆರೆ ನಿವಾಸಿ, ನಾಗರಾಜ್ ಗೆ ಗಂಭೀರವಾದ ಗಾಯಗಳಾಗಿವೆ. ಕುಳಾಯಿ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ರಸ್ತೆ ದಾಟುತ್ತಿದ್ದಾಗ KA 19 AA 0746 ಸಂಖ್ಯೆಯ ಕಾರು ಡಿಕ್ಕಿ ಹೊಡೆದಿದೆ. ಗಾಯಾಳುಗಳಿಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಭೀಕರ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಅಪಘಾತದ ಕುರಿತು ಪ್ರಕರಣ ದಾಖಲಾಗಿದೆ.

Read More