Author: kannadanewsnow05

ಕಾಸರಗೋಡು : ಪೋಷಕರು ಎಷ್ಟೇ ಎಚ್ಚರವಹಿಸಿದರು ಮಕ್ಕಳು ಅರಿವಿಲ್ಲದೆ ತಮ್ಮ ಪ್ರಾಣಕ್ಕೆ ಕುತ್ತು ತಂದುಕೊಳ್ಳುತ್ತಾರೆ. ಇದೀಗ ಕಾಸರಗೋಡಿನಲ್ಲಿ ಕೂಡ ಅಂತಹದ್ದೆ ಘಟನೆ ನಡೆದಿದ್ದು, ಹಲಸಿನ ಹಣ್ಣು ಕತ್ತರಿಸುವಾಗ ಆಕಸ್ಮಿಕವಾಗಿ ಕತ್ತಿ ತಲೆಗೆ ಬಡಿದು 8 ವರ್ಷದ ಬಾಲಕ ಸಾವನ್ನಪ್ಪಿರುವ ಘೋರ ದುರಂತ ಸಂಭವಿಸಿದೆ. ಕಾಸರಗೋಡಿನ ವಿದ್ಯಾನಗರ ಠಾಣಾ ವ್ಯಾಪ್ತಿಯ ಪಾಡಿ ಬೆಳ್ಳೂರಡ್ಕ ಎಂಬಲ್ಲಿ ಈ ಘಟನೆ ನಡೆದಿದೆ.ಮೃತನನ್ನು ಹುಸೈನ್ ಶಹಬಾಸ್ (8) ಎಂದು ತಿಳಿದುಬಂದಿದೆ.ತಾಯಿ ಜೊತೆ ಆಲಂಪಾಡಿ ಬೆಳ್ಳೂರಡ್ಕದಲ್ಲಿರುವ ಅಜ್ಜಿ ಮನೆಗೆ ಹುಸೈನ್ ಬಂದಿದ್ದನು. ತಾಯಿ ಅಡುಗೆ ಕೋಣೆ ಹೊರಗಡೆ ಮುಟ್ಟು ಕತ್ತಿ ಯಲ್ಲಿ ಹಲಸಿನ ಹಣ್ಣು ತುಂಡರಿಸುತ್ತಿದ್ದರು. ಈ ವೇಳೆ ಹೊರಗಡೆಯಿಂದ ಆಟವಾಡುತ್ತಿದ್ದ ಹುಸೈನ್ ಓಡಿ ಕೊಂಡುಬಂದಾಗ ಆಕಸ್ಮಿಕವಾಗಿ ಕಾಲು ಜಾರಿ ಮುಟ್ಟು ಕತ್ತಿಯ ಮೇಲೆ ಬಿದ್ದಿದ್ದಾನೆ.ಗಂಭೀರ ಗಾಯಗೊಂಡ ಬಾಲಕನನ್ನು ಕಾಸರಗೋಡಿನ ಆಸ್ಪತ್ರೆಗೆ ಕೊಂಡೊಯ್ದರೂ ಸಹ ಬಾಲಕ ಉಳಿಯಲಿಲ್ಲ. ವಿದ್ಯಾನಗರ ಠಾಣಾ ಪೊಲೀಸರು ಅಸಹಜ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಬೆಂಗಳೂರು : ಕೇಂದ್ರ ಸರ್ಕಾರ ಜನಗಣತಿಯ ಜೊತೆಗೆ ಜಾತಿಗಣತಿ ನಡೆಸೋದಾಗಿ ಹೇಳಿದೆ. ಇದೆ ವಿಚಾರವಾಗಿ ಇಂದು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುದ್ದಿಗೋಷ್ಠಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶೇಕಡ 50ರಷ್ಟು ಮೀಸಲಾತಿ ಮಿತಿಯನ್ನು ತೆಗೆದು ಹಾಕಬೇಕು ಎಂದು ಆಗ್ರಹಿಸಿದ್ದಾರೆ . ಜನಗಣತಿ ಜೊತೆಗೆ ಜಾತಿಗಣತಿ ಕೂಡ ನಡೆಸುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ರಾಹುಲ್ ಗಾಂಧಿ ಹಾಗೂ ಕೇಂದ್ರ ಸರ್ಕಾರವನ್ನು ನಾನು ಅಭಿನಂದಿಸುವೆ. ಕೇಂದ್ರ ಸರ್ಕಾರದ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ. ಪ್ರಧಾನಿ ಮೋದಿ ಅವರಿಗಿಂತ ರಾಹುಲ್ ಗಾಂಧಿಯನ್ನು ನಾನು ಅಭಿನಂದಿಸುತ್ತೇನೆ. ಕಳೆದ ಎರಡುವರೆ ವರ್ಷಗಳಿಂದ ಜಾತಿ ಗಣತಿಗೆ ರಾಹುಲ್ ಗಾಂಧಿ ಒತ್ತಾಯಿಸಿದ್ದರು. ಹೀಗಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಅಭಿನಂದಿಸುವೆ. ರಾಹುಲ್ ಗಾಂಧಿ ಒತ್ತಡ ಹಾಕಿದ್ದರಿಂದ ಕೇಂದ್ರ ಸರ್ಕಾರ ಈ ತೀರ್ಮಾನ ತೆಗೆದುಕೊಂಡಿದೆ. ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ಆತುರವಾಗಿ ನಿರ್ಧಾರ ಕೈಗೊಂಡಿದೆ.ಕೇವಲ ಜನಗಣತಿಯ ಜೊತೆಗೆ ಜಾತಿಗಣತಿ ನಡೆಸಿದರೆ ಸಾಲದು. ಆರ್ಥಿಕ, ಸಾಮಾಜಿಕ ಹಾಗು ಶೈಕ್ಷಣಿಕ ಸಮೀಕ್ಷೆ ಕೂಡ ನಡೆಸಲಿ ಎಂದು…

Read More

ಬೆಂಗಳೂರು : ಮಾಜಿ ಸಂಸದ ಡಿಕೆ ಸುರೇಶ್ ಅವರ ಹೆಸರಿನಲ್ಲಿ ಸುಳ್ಳು ಪ್ರಚಾರ ನಡೆಸಿದ ಪ್ರಕರಣದಲ್ಲಿ ರಾಜ್ಯದ ಸರ್ಕಾರಿ ಶಾಲೆಯ ಶಿಕ್ಷಕಿ ಪವಿತ್ರಾ ಎಂಬುವವರನ್ನು ರಾಮನಗರ ಸೆನ್ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಡಿಕೆ ಸುರೇಶ್ ಅವರ ಹೆಸರಿನಲ್ಲಿ ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋ ಹಾಕಿ ‘ನಾನು ಅವರ ಪತ್ನಿ’ ಎಂದು ಸುಳ್ಳು ವದಂತಿಯನ್ನೂ ಹರಡಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ಮಾಜಿ ಸಂಸದ ಡಿಕೆ ಸುರೇಶ್ ಅವರ ಪತ್ನಿ ಎಂದು ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋ ಹರಿಬಿಟ್ಟ ಮಹಿಳೆಯ ವಿರುದ್ಧ ರಾಮನಗರ ಸೆನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಪವಿತ್ರ ಎಂಬ ಮಹಿಳೆಯ ವಿರುದ್ಧ ಡಿಕೆ ಸುರೇಶ್ ಅವರ ವಕೀಲ ಪ್ರದೀಪ್ ದೂರು ದಾಖಲಿಸಿದ್ದರು. ಏಪ್ರಿಲ್ 8, 2025 ರಂದು ಆರೋಪಿ ಮಹಿಳೆ, ಡಿಕೆ ಸುರೇಶ್ ಅವರ ಫೋಟೊದೊಂದಿಗೆ ತನ್ನ ಫೋಟೊವನ್ನು ಎಡಿಟ್ ಮಾಡಿ, ತಾನು ಅವರ ಪತ್ನಿ ಎಂದು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಕೃತ್ಯವನ್ನು ದುರುದ್ದೇಶದಿಂದ…

Read More

ಬೆಂಗಳೂರು: ಬೆಂಬಲ ಬೆಲೆ ತೊಗರಿ ಖರೀದಿ ಅವಧಿಯನ್ನು ವಿಸ್ತರಣೆ ಮಾಡಲಾಗಿದ್ದು, ಮೇ ತಿಂಗಳ ಅಂತ್ಯದವರೆಗೆ ಖರೀದಿ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ಖರೀದಿ ಅವಧಿ ಇಂದಿಗೆ ಅಂತ್ಯವಾಗಲಿದ್ದು, ನಿಗದಿತ ಖರೀದಿ ಪ್ರಮಾಣ ಇನ್ನೂ ಆಗದ ಕಾರಣ ಖರೀದಿ ಅವಧಿ ವಿಸ್ತರಣೆ ಮಾಡಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದ್ದು, ಒಂದು ತಿಂಗಳು ವಿಸ್ತರಣೆ ಮಾಡಲಾಗಿದೆ. ಕೇಂದ್ರ ಸರ್ಕಾರ ಪ್ರತಿ ಟನ್​ಗೆ 7,550 ರೂ. ನಿಗದಿಪಡಿಸಿದ್ದು, ಈ ಬೆಲೆ ಕಡಿಮೆಯಾಗಿದೆ. ಹೆಚ್ಚಳ ಮಾಡಬೇಕು ಎಂದು ರೈತರು ಬೇಡಿಕೆ ಇಟ್ಟಿದ್ದರು. ರೈತರ ಬೇಡಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದು ಪ್ರೋತ್ಸಾಹ ಧನ ಘೋಷಣೆ ಮಾಡಲು ಮನವಿ ಮಾಡಿದಾಗ ಬೇಡಿಕೆಗೆ ಸ್ಪಂದಿಸಿ ಪ್ರತಿ ಕ್ವಿಂಟಾಲ್‌ಗೆ ರೂ. 450 ಪ್ರೋತ್ಸಾಹ ಧನ ಘೋಷಣೆ ಮಾಡಿದೆ. ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆಯಲ್ಲಿ 3.06 ಲಕ್ಷ ಮೆಟ್ರಿಕ್​​​​ ಟನ್​​​ ತೊಗರಿ ಖರೀದಿಗೆ ಅನುಮತಿ ನೀಡಿದ್ದು, ಇದುವರೆಗೆ ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ 1.83…

Read More

ರಾಯಚೂರು : ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಇಂದು ಮಂತ್ರಾಲಯಕ್ಕೆ ಭೇಟಿ ನೀಡಿದ್ದಾರೆ.ಬಿ. ವೈ. ರಾಘವೇಂದ್ರ ಪುತ್ರನ ವಿವಾಹ ಹಿನ್ನೆಲೆ ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿ ಮಠಕ್ಕೆ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ತಮ್ಮ ಕುಟುಂಬಸ್ಥರೊಂದಿಗೆ ಭೇಟಿ ನೀಡಿದರು. ರಾಯರ ಭಕ್ತರಾಗಿರುವ ಬಿ. ಎಸ್. ಯಡಿಯೂರಪ್ಪ ಹಾಗೂ ಪುತ್ರ ಸಂಸದ ಬಿ. ವೈ. ರಾಘವೇಂದ್ರ ದಂಪತಿ ಹಾಗೂ ಕುಟುಂಬಸ್ಥರು ಮಠಕ್ಕೆ ಭೇಟಿ ನೀಡಿದ್ದರು. ಶ್ರೀಮಠಕ್ಕೆ ಆಗಮಿಸುತ್ತಿದ್ದಂತೆ ಮಠದ ಶಿಷ್ಠಾಚಾರದಂತೆ ಬಿ.ಎಸ್. ಯಡಿಯೂರಪ್ಪನವರನ್ನು ಬರ ಮಾಡಿಕೊಂಡರು. ಆರಂಭದಲ್ಲಿ ಗ್ರಾಮದ ಆದಿ ದೇವಿ‌ ಶ್ರೀಮಾಂಚಲಮ್ಮ ದೇವಿ‌ ದರ್ಶನ ಪಡೆದುಕೊಂಡರು. ಬಳಿಕ ಶ್ರೀರಾಘವೇಂದ್ರ ಸ್ವಾಮಿಗಳ ಮೂಲ ಬೃಂದಾವನ ದರ್ಶನ ಪಡೆದುಕೊಂಡು ವಿಶೇಷ ಪೂಜೆ ನೆರವೇರಿಸಿದರು. ಬಳಿಕ ಮಠದ ಪೀಠಾಧಿಪತಿ ಶ್ರೀಸುಭುದೇಂದ್ರ ತೀರ್ಥರನ್ನು ಭೇಟಿಯಾಗಿ ಉಭಯ ಕುಶಲೋಪರಿ ವಿಚಾರಿಸಿದರು. ಬಳಿಕ ಶ್ರೀಗಳು ಸನ್ಮಾನಿಸಿದರು. ನಂತರ ಶ್ರೀಮಠದ ಬಿ.ಎಸ್. ಯಡಿಯೂರಪ್ಪನವರಿಗೆ ಸನ್ಮಾನಿಸಿ ಗೌರವಿಸಿ, ಮಂತ್ರಾಕ್ಷತೆಯನ್ನು ನೀಡಿ, ಆಶೀರ್ವದಿಸಿದರು. ಈ ವೇಳೆ ಮಗ ಬಿ. ವೈ. ರಾಘವೇಂದ್ರ…

Read More

ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು, ಸ್ನೇಹಿತರಿಬ್ಬರು ಬೈಕ್‌ನಲ್ಲಿ ಹೋಗುತ್ತಿದ್ದಾಗ ಹಿಂಬದಿಯಿಂದ ಹಾಲಿನ ಟ್ಯಾಂಕರ್‌ ವಾಹನ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಕುಳಿತಿದ್ದ SSLC ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಸದಾಶಿವನಗರ ಸಂಚಾರಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಶ್ರೀರಾಂಪುರದ ನಿವಾಸಿ ಹರ್ಷ(17) ಎಂದು ತಿಳಿದುಬಂದಿದೆ.ಸ್ನೇಹಿತ ಸಚಿನ್‌ ಬೈಕ್‌ನಲ್ಲಿ ಹರ್ಷ ಹಿಂಬದಿ ಕುಳಿತುಕೊಂಡು ನ್ಯೂಬಿಇಎಲ್‌ ರಸ್ತೆಗೆ ಇಂದು ಬೆಳಗ್ಗೆ 6.30 ರ ಸುಮಾರಿನಲ್ಲಿ ಹೊಗುತ್ತಿದ್ದಾಗ ಸದಾಶಿವನಗರದ ಸಮೀಪ ಅಂಡರ್‌ ಪಾಸ್‌‍ ಬಳಿ ಹಿಂದಿನಿಂದ ವೇಗವಾಗಿ ಬಂದ ಹಾಲಿನ ಟ್ಯಾಂಕರ್‌ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇಬ್ಬರು ಸವಾರರು ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ತಕ್ಷಣ ಅವರಿಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗಮಧ್ಯೆ ಹರ್ಷ ಮೃತಪಟ್ಟಿದ್ದಾನೆ.ಎಂಎಸ್‌‍ ರಾಮಯ್ಯ ಆಸ್ಪತ್ರೆಗೆ ಹರ್ಷನ ಮೃತದೇಹ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಸದಾಶಿವನಗರ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಶ್ರೀನಗರ : ಪಹಲ್ಗಾಮ್ ನಲ್ಲಿ ಉಗ್ರರ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಯೋತ್ಪಾದಕರಿಗೆ ನೆರವು ನೀಡಿದ್ದ ಸುಮಾರು 80 ಜನರನ್ನು ಇದೀಗ NIA ಅರೆಸ್ಟ್ ಮಾಡಿದೆ. ಅಜ್ಞಾತ ಸ್ಥಳದಲ್ಲಿ 80 ಜನರ ನಿರಂತರ ವಿಚಾರಣೆ ನಡೆಯುತ್ತಿದ್ದು, 80 ಓವರ್ ಗ್ರೌಂಡ್ ವರ್ಕರ್ಸ್ (OGW) ಅನ್ನು ಇದೀಗ NIA ಬಂಧಿಸಿದೆ. ಇದುವರೆಗೂ NIA 2500ಕ್ಕೂ ಹೆಚ್ಚು ಶಂಕಿತರನ್ನು ವಶಕ್ಕೆ ಪಡೆದುಕೊಂಡಿದ್ದು, 186 ಶಂಕಿತರನ್ನು ಇಟ್ಟುಕೊಂಡಿದ್ದು, ಉಳಿದವರನ್ನು NIA ಬಿಟ್ಟುಕಳುಹಿಸಿದೆ ತಿಳಿದು ಬಂದಿದೆ. ಇನ್ನು ಬೈಯರನ್ ವಾಲಿಗೆ ಇದೀಗ NIA ಡಿಜಿ ಸದಾನಂದ ಅವರು ಭೇಟಿ ನೀಡಿದ್ದು, ಘಟನೆ ಕುರಿತು ಸ್ಥಳೀಯರಿಂದ ಮಾಹಿತಿ ಪಡೆಯುತ್ತಿದ್ದಾರೆ. ಉಗರು ದಾಳಿ ನಡೆಸಿದ ಜಾಗದಲ್ಲೂ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Read More

ಬೆಂಗಳೂರು : ಪಹಲ್ಗಾಮ್ ನಲ್ಲಿ ಉಗ್ರರು ದಾಳಿ ಮಾಡಿದ ವಿಚಾರವಾಗಿ ಬಿಜೆಪಿಯವರು ಜವಾಹರಲಾಲ್ ನೆಹರೂ ಮಾಡಿದ ತಪ್ಪಿನಿಂದಾಗಿ ಇಂದು ದೇಶ ಕಷ್ಟ ಅನುಭವಿಸುತ್ತಿದೆ ಎಂದು ಹೇಳಿದ್ದಾರೆ. ಈ ವಿಚಾರವಾಗಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ನಾಯಕರು ತಿರುಗೇಟು ಮಾಡಿದ್ದು ನೆಹರು ಅವರ ಹೆಸರಿನಲ್ಲಿ ಈಗ ಟೀಕೆ ಮಾಡುವವರು ಅಂದು ಹುಟ್ಟಿರಲಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾನು ಅಭಿವೃದ್ಧಿ ಕಾರ್ಯಗಳ ಮೇಲೆ ನಂಬಿಕೆ ಇಟ್ಟವನು. ಸುಳಿವು ನೀಡದೆ 371 ಜೆ ವಿಶೇಷ ಸ್ಥಾನಮಾನ ಜಾರಿ ಮಾಡಿದ್ದೇನೆ. ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಿಗೆ 371 ಜೆ ವಿಶೇಷ ಸ್ಥಾನಮಾನ ಜಾರಿ ಮಾಡಿದ್ದೇನೆ.ನೆಹರು ಹೆಸರಿನಲ್ಲಿ ಈಗ ಟೀಕೆ ಮಾಡುವವರು ಅಂದು ಹುಟ್ಟಿರಲಿಲ್ಲ. ಅಂದು ದೇಶ ಯಾವ ಸ್ಥಿತಿಯಲ್ಲಿತ್ತು ಅಂತ ಅವರಿಗೆ ಗೊತ್ತಿಲ್ಲ. ಆರ್ ಎಸ್ ಎಸ್ ಮತ್ತು ಬಿಜೆಪಿ ಮೀಸಲಾತಿಗೆ ವಿರೋಧಿಯಾಗಿತ್ತು. ಇನ್ನು ಪಹಲ್ಗಾಮ್ ದಾಳಿಯ ವಿಚಾರವಾಗಿ ಮಾತನಾಡಿದ ಅವರು, ದಾಳಿ ಕುರಿತಂತೆ ವಿಶೇಷ ಅಧಿವೇಶನಕ್ಕೆ ಒತ್ತಾಯಿಸಿದ್ದೆ. ಕೇಳೋದು…

Read More

ಬೆಂಗಳೂರು : ಮನೆಯಲ್ಲಿ ಅಡುಗೆ ಅನೀಲ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದ್ದು, ಈ ವೇಳೆ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸಾವನ್ನಪ್ಪಿದ್ದರೆ, ಮೂವರಿಗೆ ಗಂಭೀರವಾದ ಗಾಯಗಳಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿದೆ. ನೆಲಮಂಗಲ ಬಳಿಯ ಅಡಕಮಾರನಹಳ್ಳಿ ಓವರ್ ಟ್ಯಾಂಕ್ ಬಳಿ ಈ ಘಟನೆ ಸಂಭವಿಸಿದೆ. ನಾಗರಾಜ್ (50), ಶ್ರೀನಿವಾಸ್ (50) ಮೃತ ದುರ್ದೈವಿಗಳಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಂಗಯ್ಯ ಎಂಬವರಿಗೆ ಸೇರಿದ ಎರಡು ಬಾಡಿಗೆ ಮನೆಗಳಲ್ಲಿ ನಾಗರಾಜ್‌ ಅವರು ಒಂದು ಮನೆಯನ್ನ ನಾಗರಾಜ್ ಬಾಡಿಗೆಗೆ ಪಡೆದಿದ್ದರು. ಮೃತ ನಾಗರಾಜ್ ಪತ್ನಿ ಲಕ್ಷ್ಮೀದೇವಿ, ಮಕ್ಕಳಾದ ಬಸನಗೌಡ ಹಾಗು ಅಭಿಷೇಕ್ ಗೌಡ ಗಾಯಗೊಂಡಿದ್ದಾರೆ. ಬೆಳಗ್ಗೆ ಕೆಲಸಕ್ಕೆಂದು ತೆರಳುತ್ತಿದ್ದ ನಾಗರಾಜ್ ದೇವರಿಗೆ ದೀಪ ಹಚ್ಚಿದ್ದರು. ಖಾಲಿಯಾಗಿದ್ದ ಸಿಲಿಂಡರ್ ಬದಲಾಯಿಸಲು ಎರಡನೇ ಮಗ ಅಭಿಷೇಕ್ ಮುಂದಾಗಿದ್ದರು. ಈ ವೇಳೆ ಸಿಲಿಂಡರ್‌ನಿಂದ ಗ್ಯಾಸ್ ಲೀಕ್ ಆಗಿದ್ದು, ದೀಪದ ಬೆಂಕಿ ತಗುಲಿ ದುರಂತ ಸಂಭವಿಸಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಮಾಜಿ ಸಂಸದ ಡಿಕೆ ಸುರೇಶ್ ಅವರ ಪತ್ನಿ ಎಂದು ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋ ಹರಿಬಿಟ್ಟ ಮಹಿಳೆಯ ವಿರುದ್ಧ ರಾಮನಗರ ಸೆನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪವಿತ್ರ ಎಂಬ ಮಹಿಳೆಯ ವಿರುದ್ಧ ಡಿಕೆ ಸುರೇಶ್ ಅವರ ವಕೀಲ ಪ್ರದೀಪ್ ದೂರು ದಾಖಲಿಸಿದ್ದಾರೆ. ಏಪ್ರಿಲ್ 8, 2025 ರಂದು ಆರೋಪಿ ಮಹಿಳೆ, ಡಿಕೆ ಸುರೇಶ್ ಅವರ ಫೋಟೊದೊಂದಿಗೆ ತನ್ನ ಫೋಟೊವನ್ನು ಎಡಿಟ್ ಮಾಡಿ, ತಾನು ಅವರ ಪತ್ನಿ ಎಂದು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಕೃತ್ಯವನ್ನು ದುರುದ್ದೇಶದಿಂದ ಮಾಡಿ, ಡಿಕೆ ಸುರೇಶ್ ವಿರುದ್ಧ ಅಪಪ್ರಚಾರ ಮಾಡಲಾಗಿದೆ ಎಂದು ವಕೀಲ ಪ್ರದೀಪ್ ದೂರಿನಲ್ಲಿ ತಿಳಿಸಿದ್ದಾರೆ.ಈ ಸಂಬಂಧ ರಾಮನಗರ ಸೆನ್ ಪೊಲೀಸರು ಎಫ್‌ಐಆರ್ ದಾಖಲಿಸಿ, ತನಿಖೆ ಆರಂಭಿಸಿದ್ದಾರೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಮಹಿಳೆಯ ಕೃತ್ಯವನ್ನು ಖಂಡಿಸಲಾಗಿದೆ. ವಿಡಿಯೋದಲ್ಲಿ ಏನಿದೆ? ನಾನು ಮೊದಲು ಡಿ.ಕೆ. ಸುರೇಶ್ ಅವರ ಹೆಂಡತಿಯಾಗಿ ಹೇಳಬೇಕೆಂದರೆ, ನಾನು ಫಸ್ಟ್ ಸುರೇಶ್…

Read More