Subscribe to Updates
Get the latest creative news from FooBar about art, design and business.
Author: kannadanewsnow05
ಬೊಮ್ಮನಹಳ್ಳಿ : ಬೊಮ್ಮನಹಳ್ಳಿ ವಲಯದಲ್ಲಿ ಹಗಲು-ರಾತ್ರಿ ಕಾರ್ಯನಿರ್ವಹಿಸಿ ರಸ್ತೆ ಗುಂಡಿಗಳನ್ನು ಮುಚ್ಚುಲಾಗುತ್ತಿದೆ ಹಾಗೂ ಇನ್ನುಳಿದ ರಸ್ತೆ ಗುಂಡಿಗಳನ್ನು ಹಗಲು ರಾತ್ರಿ ಕೆಲಸ ನಿರ್ವಹಿಸಿ ಮುಚ್ಚಲಾಗುವುದೆಂದು ವಲಯ ಆಯುಕ್ತರಾದ ರಮ್ಯಾ, ತಿಳಿಸಿದರು. ಉಪ ಮುಖ್ಯಮಂತ್ರಿಗಳ ಆದೇಶ ಹಾಗೂ ಮುಖ್ಯ ಆಯುಕ್ತರ ನಿರ್ದೇಶನದಂತೆ ನಗರದ ಬೊಮ್ಮನಹಳ್ಳಿ ವಲಯ ವ್ಯಾಪ್ತಿಯಲ್ಲಿ ಜೆಪಿ ನಗರದ ನಂದಿನಿ ಹೋಟೆಲ್ ಬಳಿ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯವನ್ನು ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು. ರಸ್ತೆ ಗುಂಡಿಗಳನ್ನು ಮುಚ್ಚಲು ಎಲ್ಲಾ ರೀತಿಯ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಈಗಾಗಲೇ ಸಾಕಷ್ಟು ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ. ಮಳೆ ಬಾರದಿರುವ ಹಿನ್ನೆಲೆ ನಿರಂತರವಾಗಿ ರಸ್ತೆ ಗುಂಡಿಗಳನ್ನು ಮುಚ್ಚಲು ಸಾಧ್ಯವಾಗಿದೆ ಎಂದು ಹೇಳಿದರು. ಸಂಚಾರದಟ್ಟಣೆ ಹೆಚ್ಚಿರುವ ರಸ್ತೆಗಳಲ್ಲಿ ಆದ್ಯತೆ ಮೇರೆಗೆ ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ. ಇದೀಗ ವಾರ್ಡ್ ರಸ್ತೆಗಳಲ್ಲಿ ಎಲ್ಲೆಲ್ಲಿ ರಸ್ತೆ ಗುಂಡಿಗಳಿವೆ ಅವುಗಳನ್ನು ಕೂಡಲೆ ಮುಚ್ಚಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಪಾಲಿಕೆ ವ್ಯಾಪ್ತಿಯಲ್ಲಿ ನಿರಂತರವಾಗಿ ರಸ್ತೆ ಗುಂಡಿಗಳನ್ನು ಮುಚ್ಚುತ್ತಿರುವುದರಿಂದ ಸಾರ್ವಜನಿಕರಿಂದ ಹೆಚ್ಚು ಸಕ್ರಿಯವಾಗಿ ರಸ್ತೆ…
ಚಿಕ್ಕಬಳ್ಳಾಪುರ : ಪತ್ನಿ ಕಪ್ಪಗಿದ್ದಾಳೆ ಎಂದು ನಿಂದಿಸಿದ್ದು ಅಲ್ಲದೆ, ತವರು ಮನೆಯಿಂದ ವರದಕ್ಷಿಣೆ ತೆಗೆದುಕೊಂಡು ಬಾ ಎಂದು ಮಾನಸಿಕ ಮತ್ತು ದೈಹಿಕವಾಗಿ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ಮನನೊಂದ ಪತ್ನಿ ನೇಣಿಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರದ ಗಾಂಧಿನಗರದಲ್ಲಿ ನಡೆದಿದೆ. ಬಿಂದುಶ್ರೀ (22) ಆತ್ಮಹತ್ಯೆ ಮಾಡಿಕೊಂಡವರು. ಗಾಂಧಿನಗರದ ನಿವಾಸಿ ಟೈಲರ್ ವೃತ್ತಿಯ ಕೆ.ಬಿ.ದೇವರಾಜು ಅವರಿಗೆ ಬಿಂದುಶ್ರೀ ಏಕೈಕ ಪುತ್ರಿ. ಇವರನ್ನು ಆವಲಹಳ್ಳಿ ಸಮೀಪದ ಹಿರಂಡಹಳ್ಳಿ ಗ್ರಾಮದ ಮುನಿರಾಜು ಎಂಬವರ ಮಗ ಎಚ್.ಎಂ.ರಾಘವೇಂದ್ರ ಅವರಿಗೆ ಕೊಟ್ಟು 2024ರ ಫೆಬ್ರವರಿ 21ರಂದು ಕೈವಾರದಲ್ಲಿ ಮದುವೆ ಮಾಡಲಾಗಿತ್ತು. ಇದೀಗ ಬಿಂದುಶ್ರೀ ಪತಿ ರಾಘವೇಂದ್ರ, ಮಾವ ಎನ್ ಮುನಿರಾಜು, ಅತ್ತೆ ಲತಾ ಹಾಗೂ ನರಸಿಂಹಯ್ಯ ವಿರುದ್ಧ ಇದೀಗ ಪ್ರಕರಣ ದಾಖಲಾಗಿದೆ. ಬಿಂದುಶ್ರೀಯನ್ನು ಅವಮಾನಿಸಿ ವರದಕ್ಷಿಣೆ ಕಿರುಕುಳ ನೀಡಿದ್ದಾರೆ. 20 ಲಕ್ಷರೂಪಾಯಿ ಕೊಡುವಂತೆ ಕಿರುಕುಳ ನೀಡಿದ್ದಾರೆ.ಕಿರುಕುಳ ತಾಳದೆ ಬಿಂದುಶ್ರೀ ತವರು ಮನೆಗೆ ಬಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆರು ತಿಂಗಳ ಹಿಂದೆ ರಾಘವೇಂದ್ರ ಜೊತೆಗೆ ಬಿಂದುಶ್ರೀ ಮದುವೆಯಾಗಿತ್ತು. ಮಗಳ ಸಾವಿನ ಸುದ್ದಿ ಕೇಳಿ…
BREAKING : ಮುನಿರತ್ನ ಕುರಿತು ನಾಳೆ ಇನ್ನೂ 2 ಆಡಿಯೋ ರಿಲೀಸ್ ಮಾಡುತ್ತೇನೆ : ಗುತ್ತಿಗೆದಾರ ಚಲುವರಾಜು ಸ್ಫೋಟಕ ಹೇಳಿಕೆ
ಬೆಂಗಳೂರು : ಜೀವ ಬೆದರಿಕೆ ಹಾಗೂ ಅವಾಚ್ಯ ಶಬ್ದಗಳಿಂದ ಜಾತಿ ನಿಂದನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ರಾಜ ರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಬಂಧನದ ವಿಚಾರವಾಗಿ ಇದೀಗ ಗುತ್ತಿಗೆದಾರ ಚಲುವರಾಜು ಮತ್ತೊಂದು ಹೊಸ ಬಾಂಬ್ ಸಿಡಿಸಿದ್ದು, ನಾಳೆ ಇನ್ನೂ ಎರಡು ಆಡಿಯೋ ರಿಲೀಸ್ ಮಾಡುತ್ತೇನೆ ಎಂದು ಸ್ಫೋಟಕ ಹೇಳಿಕೆ ನೀಡಿದರು. ಹೌದು ಬೆಂಗಳೂರಿನಲ್ಲಿ ಇಂದು ಮಾತನಾಡಿದ ಚಲುವರಾಜು, ಮುನಿರತ್ನ ಅವರ ಕುರಿತು ಇನ್ನು ಎರಡು ಆಡಿಯೋ ಇವೆ. ನಾಳೆ ಎರಡು ಆಡಿಯೋಗಳನ್ನು ರಿಲೀಸ್ ಮಾಡುತ್ತೇನೆ ಹನುಮಂತರಾಯಪ್ಪ ಜೊತೆ ಮಾತನಾಡಿದ ಆಡಿಯೋ ಹಾಗೂ 30% ಕಮಿಷನ್ ವಿಚಾರದ ಆಡಿಯೋ ಬಿಡುಗಡೆ ಮಾಡುತ್ತೇನೆ ನಾಳೆ ಎರಡು ಆಡಿಯೋಗಳನ್ನು ರಿಲಿಸ್ ಮಾಡುತ್ತೇನೆ ಎಂದು ಚೆಲುವರಾಜು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಈಗಾಗಲೇ ಮುನಿರತ್ನರನ್ನು ಗುತ್ತಿಗೆದಾರ ಚೆಲುವರಾಜನಿಗೆ ಜೀವ ಬೆದರಿಕೆ ಹಾಗೂ ಅವಾಚ್ಯ ಶಬ್ದಗಳಿಂದ ಜಾತಿ ನಿಂದನೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ. ಇದರ ಬೆನ್ನಲ್ಲೆ ಗುತ್ತಿಗೆದಾರ ಚೆಲುವರಾಜು ಮತ್ತೆರಡು ಹೊಸ ಆಡಿಯೋಗಳನ್ನು ಬಿಡುಗಡೆ ಮಾಡುತ್ತೇನೆ…
ವಿಜಯಪುರ : ಭಾರತೀಯರು ಎನ್ನುವುದು ನಮ್ಮೆಲ್ಲರ ಮೂಲ ಹಾಗಾಗಿ ನಾವೆಲ್ಲ ಒಂದೇ ಮರದ ಟೊಂಗೆಗಳು ಇದ್ದ ಹಾಗೆ ಎಂದು ವಿಜಯಪುರದಲ್ಲಿ ವ್ರತ್ತಮಠದ ಮುರುಘೇಂದ್ರ ಸ್ವಾಮೀಜಿಗಳು ತಿಳಿಸಿದರು. ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾಣೆಹಳ್ಳಿ ಶ್ರೀಗಳ ಹೇಳಿಕೆಗೆ ಯತ್ನಾಳ ವಿರೋಧಿಸಿರುವ ವಿಚಾರವಾಗಿ ಎಲ್ಲರೂ ಒಂದೇ. ದೇಶವನ್ನು ಬೇರ್ಪಡಿಸುವ ಕೆಲಸ ಆಗಬಾರದು ಅಬ್ದುಲ್ ಕಲಾಂ ದೇಶದ ರಾಷ್ಟ್ರಪತಿ ಆಗಿದ್ದರು. ಈಗ ದ್ರೌಪದಿ ಮುರ್ಮು ಅವರು ದೇಶದ ರಾಷ್ಟ್ರಪತಿ ಆಗಿದ್ದಾರೆ. ರಾಜ್ಯದಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿದ್ದಾರೆ ಜಾತಿ ಆಧಾರದಲ್ಲಿ ಯಾಕೆ ಅಳೆಯಬೇಕು? ಎಂದು ಯತ್ನಾಳ್ ಗೆ ತಿರುಗೇಟು ನೀಡಿದರು. ಮಾನವೀಯತೆ ಮನುಷ್ಯತ್ವವನ್ನು ಮುಂದುವರಿಸಿಕೊಂಡು ಹೋಗಬೇಕು ಭಾರತೀಯರಾಗಿ ಮಾನವೀಯತೆಯನ್ನು ಮೆರೆಯಬೇಕು. ಎಲ್ಲರ ರಕ್ತ ಒಂದೇ ಹೀಗಾಗಿ ಅದನ್ನು ಬೇರ್ಪಡಿಸುವ ಕೆಲಸ ಮಾಡುವುದು ಬೇಡ. ಕಂದಕ ಸೃಷ್ಟಿ ಮಾಡುವ ಬದಲು ಕೂಡಿಸುವ ಕೆಲಸ ಮಾಡಬೇಕು. ಬಸನಗೌಡ ಯತ್ನಾಳ್ ನಮ್ಮವರೇ ನಮ್ಮ ನಾಯಕರೇ. ಮುಸ್ಲಿಂ ಮೌಲ್ವಿಗಳು ಕೂಡ ನಮ್ಮ ಮಠಗಳಿಗೆ ಬರುತ್ತಾರೆ. ರಾಜಕಾರಣಿಗಳು ಎಲ್ಲೆಡೆ ಹೋಗುತ್ತಾರೆ. ಭಾರತೀಯರು ಅನ್ನೋದು ನಮ್ಮ…
ವಿಜಯಪುರ : ವಿಡಿಯೋ ಕಾಲ್ ಮೂಲಕ ಆನ್ಲೈನಲ್ಲಿ ಹಣಕ್ಕೆ ಬೇಡಿಕೆ ಇಟ್ಟಿದ್ದು ಅಲ್ಲದೆ, ಬೆದರಿಕೆ ಹಾಕಿ ವಂಚನೆಗೆ ಯತ್ನಿಸಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ವಿಜಯಪುರದ ಸಂತೋಷಗೆ ಚೌಧರಿಗೆ ಮುಂಬೈನ ಕ್ರೈಂ ಬ್ರಾಂಚ್ ನ ನಕಲಿ ಪೊಲೀಸ್ ವಿರುದ್ಧ ಇದೀಗ ದೂರು ದಾಖಲಾಗಿದೆ. ವಿಜಯಪುರ ನಗರದ ಸಂತೋಷ್ ಚೌಧರಿಗೆ ವಿಡಿಯೋ ಕಾಲ್ ಮಾಡಿ ಆನ್ ಲೈನ್ ವಂಚನೆಗೆ ಯತ್ನ ನಡೆಸಿರುವ ಆರೋಪ ಕೇಳಿಬಂದಿದ್ದು, ಸಂತೋಷ್ಗೆ ವಿಡಿಯೋ ಕಾಲ್ ಮಾಡಿದ್ದ ನಕಲಿ ಪೊಲೀಸ್ ಅಧಿಕಾರಿ ಹಣಕ್ಕೇ ಬೇಡಿಕೆ ಇಟ್ಟಿದ್ದಾನೆ ಎಂದು ಸಂತೋಷ್ ಆರೋಪಿಸಿದ್ದಾರೆ. ಅಲ್ಲದೆ ವಿಡಿಯೋ ಕರೆ ಸ್ಕ್ರೀನ್ ರೆಕಾರ್ಡ್ ಮಾಡಿದ್ದಾನೆ. ನಿಮ್ಮ ಮೊಬೈಲ್ ನಂಬರ್ ವಿರುದ್ಧ 17 ಕೇಸ್ ದಾಖಲಾಗಿವೆ. ವಿಚಾರಣೆಗೆ ಹಾಜರಾಗಲು ಮುಂಬೈಗೆ ಬನ್ನಿ ಎಂದು ವಂಚಕ ಸಂತೋಷ್ ಚೌದರಿಗೆ ಹೇಳಿದ್ದಾನೆ.ಅಶ್ಲೀಲವಾಗಿ ನಿಂದಿಸಿ ನಕಲಿ ಪೊಲೀಸ್ ಅಧಿಕಾರಿ ಸಂತೋಷ್ಗೆ ಬೆದರಿಕೆ ಹಾಕಿದ್ದಾನೆ. ಆಧಾರ್ ನಂಬರ್ ಕೆಲ ಓಟಿಪಿ ಪಡೆಯಲು ವಂಚಕ ಯತ್ನಿಸಿದ್ದಾನೆ. ಕ್ರೈಂ ಬ್ಯಾಂಚ್ ಪೊಲೀಸರ ಯೂನಿಫಾರ್ಮ್ ನಲ್ಲಿ ಕಾಲ್ ಮಾಡಿದ್ದ…
ಹುಬ್ಬಳ್ಳಿ : ಒಂದು ಕಡೆ ರಾಜ್ಯದಲ್ಲಿ ನಾಗಮಂಗಲ ಗಲಭೆ ಭಾರಿ ಸದ್ದು ಮಾಡುತ್ತಿದ್ದು, ಇನ್ನೊಂದೆಡೆ ಹುಬ್ಬಳ್ಳಿಯಲ್ಲಿ ಹಿಂದೂ ಸ್ಮಶಾನದ ಕಂಪೌಂಡ್ ಒಡೆದು ಹಾಕಿ ಇಂದಿರಾ ಕ್ಯಾಂಟೀನ್ ನಿರ್ಮಾಣ ಮಾಡಿದ್ದಾರೆ ಎಂದು ಶ್ರೀ ರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಆಕ್ರೋಶ ಹೊರಹಕಿದ್ದಾರೆ. ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದೂ ಸ್ಮಶಾನ ಕಾಂಪೌಂಡ್ ಒಡೆದು ಇಂದಿರಾ ಕ್ಯಾಂಟೀನ್ ನಿರ್ಮಾಣ ಮಾಡಲಾಗಿದೆ. ಹುಬ್ಬಳ್ಳಿಯ ಮಂಟೂರು ರಸ್ತೆಯಲ್ಲಿರುವ ಹಿಂದೂ ಸ್ಮಶಾನದ ಕಾಂಪೌಂಡ್ ಒಡೆದು ಇಂದಿರಾ ಕ್ಯಾಂಟೀನ್ ನಿರ್ಮಾಣ ಮಾಡಲಾಗಿದೆ ಎಂದು ಶಾಸಕ ಪ್ರಸಾದ್ ಅಭಯ ವಿರುದ್ಧ ಇಂದಿರಾ ಕ್ಯಾಂಟೀನ್ ನಿರ್ಮಾಣದ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರ ಇದೆ ಎಂದು ಶಾಸಕ ಅಬ್ಬಯ್ಯ ದರ್ಪ ತೋರಿದ್ದಾರೆ. ಎರಡೇ ದಿನದಲ್ಲಿ ರಾತ್ರೋರಾತ್ರಿ ಇಂದಿರಾ ಕ್ಯಾಂಟೀನ್ ಕಟ್ಟಿದ್ದಾರೆ.ಕೂಡಲೇ ಕ್ಯಾಂಟೀನ್ ಕಟ್ಟಡ ಸ್ಥಳಾಂತರ ಮಾಡುವಂತೆ ಆಗ್ರಹಿಸುತ್ತಿದ್ದು, ಇಲ್ಲದಿದ್ದರೆ ನಾವೇ ಇಂದಿರಾ ಕ್ಯಾಂಟೀನ್ ತೆರವು ಮಾಡುತ್ತೇವೆ ಎಂದು ಹುಬ್ಬಳ್ಳಿಯಲ್ಲಿ ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಆಗ್ರಹ ಮಾಡಿದರು.
ಬೆಂಗಳೂರು : ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹೈಕೋರ್ಟ್ ಮತ್ತೆ ನಾಲ್ವರು ಆರೋಪಿಗಳಿಗೆ ಷರತ್ತು ಬದ್ಧ ಜಾಮೀನು ನೀಡಿದೆ. ಆ ಮೂಲಕ 18 ಆರೋಪಿಗಳ ಪೈಕಿ ಒಟ್ಟು 8 ಆರೋಪಿಗಳಿಗೆ ಜಾಮೀನು ನೀಡಿದಂತಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇದೇ ಆರೋಪದ ಮೇಲೆ ಇತ್ತೀಚಿಗೆ ಅಮಿತ್ ದಿಗ್ವೇಕರ್, ಹೆಚ್ ಎಲ್ ಸುರೇಶ್, ಎನ್ ಮೋಹನ್ ನಾಯಕ್ ಮತ್ತು ಕೆ ಟಿ ನವೀನ್ ಕುಮಾರ್ ಜಾಮೀನು ಪಡೆದಿದ್ದರು. ಇವರ ವಿರುದ್ಧ ಗೌರಿ ಲಂಕೇಶ್ ಕೊಲೆಗೆ ವಾಹನ, ಶಸ್ತ್ರಾಸ್ತ್ರ ಪೂರೈಕೆ ಇತ್ಯಾದಿ ಮೂಲಕ ಪಿತೂರಿ ನಡೆಸಿರುವ ಆರೋಪವಿತ್ತು. ಇದೀಗ ಪ್ರಕರಣದಲ್ಲಿ 6ನೇ ಆರೋಪಿಯಾಗಿರುವ ಬೆಳಗಾವಿಯ ಭರತ್ ಜಯವಂತ್ ಕುರಾನೆ, 9ನೇ ಆರೋಪಿ ಮಹಾರಾಷ್ಟ್ರದ ಸತಾರದ ಸುಧನ್ವ ಗೊಂಧಾಲೇಕರ್, 13ನೇ ಆರೋಪಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಸುಜಿತ್ ಕುಮಾರ್, 16ನೇ ಆರೋಪಿ ಮಹಾರಾಷ್ಟ್ರದ ಔರಂಗಾಬಾದ್ನ ಶ್ರೀಕಾಂತ್ ಪಂಗಾರ್ಕರ್ ಸಲ್ಲಿಸಿದ್ದ ಜಾಮೀನು ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕ…
ಬೆಂಗಳೂರು : ಇತ್ತೀಚಿಗೆ ರೇಣುಕಾಸ್ವಾಮಿ ಕೊಲೆ ಆರೋಪಿಯಾಗಿರುವ ದರ್ಶನ್ ಗೆ ರಾಜಾತಿಥ್ಯ ನೀಡಿದಂತ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಇದೀಗ ಸಿಸಿಬಿ ಅಧಿಕಾರಿಗಳು ಮತ್ತೊಮ್ಮೆ ದಾಳಿ ಮಾಡಿದ್ದು, ದಾಳಿಯ ವೇಳೆ ಮೊಬೈಲ್, ಡ್ರಗ್ಸ್, ಸೇರಿದಂತೆ ಹಲವು ವಸ್ತುಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ದರ್ಶನ್ ಗೆ ರಾಜಾತಿಥ್ಯ ನೀಡಿದ ವಿಚಾರಕ್ಕೇ ಸಂಬಂಧಪಟ್ಟಂತೆ ccb ಅಧಿಕಾರಿಗಳು ಜೈಲಿನ ಮೇಲೆ ದಾಳಿ ಮಾಡಿದ್ದಾರೆ.ಇದೇ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದು, ಜೈಲಿನ ಮೇಲೆ ನಿನ್ನೆ ಮತ್ತೊಮ್ಮೆ ದಾಳಿ ನಡೆಸಿದ್ದಾರೆ. ಈ ದಾಳಿ ವೇಳೆ ವಿಲ್ಸನ್ ಗಾರ್ಡನ್ ನಾಗನ ಬಳಿ ಇದ್ದ ಮೊಬೈಲ್ ಸೇರಿದಂತೆ ಸುಮಾರು 18 ಮೊಬೈಲ್ ಸೀಜ್ ಆಗಿದೆ. ಇಷ್ಟಲ್ಲದೇ ಡ್ರಗ್ಸ್ ಮತ್ತು ಹಣ ಕೂಡ ಸಿಕ್ಕಿದೆ. ದಾಳಿ ವೇಳೆ 1.3 ಲಕ್ಷ ಮೌಲ್ಯದ ಸ್ಯಾಮ್ಸಂಗ್ ಫೋನ್ಗಳು, ಏಳು ಎಲೆಕ್ಟ್ರಿಕ್ ಸ್ಟವ್ಗಳು, ಐದು ಚಾಕುಗಳು, ಮೂರು ಮೊಬೈಲ್ ಫೋನ್ ಚಾರ್ಜರ್ಗಳು, ಎರಡು ಪೆನ್ ಡ್ರೈವ್ಗಳು, 36,000 ರೂಪಾಯಿ ನಗದು, ಸಿಗರೇಟ್, ಬೀಡಿ ಮತ್ತು ಬೆಂಕಿಕಡ್ಡಿ…
ಗದಗ : ಕಳೆದ ಕೆಲವು ದಿನಗಳ ಹಿಂದೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಾಟೆ ಪ್ರಕರಣ ಮಾಸುವ ಮುನ್ನವೇ, ಇದೀಗ ಗದಗದಲ್ಲಿ ಎರಡು ಗುಂಪುಗಳ ನಡುವೆ ಪಟಾಕಿ ಹಚ್ಚುವ ವಿಚಾರಕ್ಕೆ ಗಲಾಟೆ ನಡೆದಿದ್ದು, ಗಲಾಟೆ ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿರುವ ಘಟನೆ ನಡೆದಿದೆ. ಹೌದು ನಿನ್ನೆ ರಾತ್ರಿ ಗದಗ ನಗರದ ಟಾಂಗಾಕೂಟ್ ಸರ್ಕಲ್ನಲ್ಲಿ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ನಡೆದಿದೆ. ಗಲಾಟೆಯನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಪಟಾಕಿ ಹಚ್ಚುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ವಾಗ್ವಾದ ಆರಂಭವಾಗಿದೆ. ವಾಗ್ವಾದ ವಿಕೋಪಕ್ಕೆ ತಿರುಗಿ ಗುಂಪುಗಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ಪೊಲೀಸರು ಮಧ್ಯ ಪ್ರವೇಶಿಸಿ, ತಿಳಿಗೊಳಿಸಲು ಯತ್ನಿಸಿದರು. ಆದರೆ, ಪರಿಸ್ಥಿತಿ ಕೈ ಮೀರಿದಾಗ ಪೊಲೀಸರು ಲಾಠಿ ಚಾರ್ಜ್ ಮಾಡಿದರು. ಲಾಠಿ ಚಾರ್ಜ್ ಮಾಡುತ್ತಿದ್ದಂತೆ ಜನರು ದಿಕ್ಕಾಪಾಲಾಗಿ ಓಡಿದರು. ಗದಗ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಂಗಳೂರು : ರಾಜ್ಯದಲ್ಲಿ ಇದೀಗ ಆರ್.ಆರ್ ನಗರ ಶಾಸಕ ಮುನಿರತ್ನ ಬಂಧನದ ವಿಚಾರ ಭಾರಿ ಸದ್ದು ಮಾಡುತ್ತಿದ್ದು, ಗುತ್ತಿಗೆದಾರನಿಗೆ ಜಾತಿ ನಿಂದನೆ ಮತ್ತು ಜೀವ ಬೆದರಿಕೆ ಹಾಕಿದ ಕೇಸ್ನಲ್ಲಿ ಶಾಸಕ ಮುನಿರತ್ನ ಬಂಧನವಾಗಿದೆ. ಇದರ ಬೆನ್ನಲ್ಲೆ ಇದೀಗ ಮತ್ತೊಂದು ಆಡಿಯೋ ವೈರಲ್ ಆಗಿದೆ ಎಂದು ತಿಳಿದುಬಂದಿದೆ. ಹೌದು ಗುತ್ತಿಗೆದಾರನ ಜೊತೆ ಮಾತನಾಡಿದ್ದಾರೆ ಎನ್ನಲಾದ ಶಾಸಕ ಮುನಿರತ್ನ ಆಡಿಯೋ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಗುತ್ತಿಗೆದಾರನ ದೂರು ಆಧರಿಸಿ, ನಿನ್ನೆ ಸಂಜೆಯೇ ಮುನಿರತ್ನರನ್ನ ಪೊಲೀಸರು ಬಂಧಿಸಿದ್ದರು. ಸದ್ಯ ಇದೆಲ್ಲದರ ಮಧ್ಯೆ ಮತ್ತೊಂದು ಆಡಿಯೋ ವೈರಲ್ ಆಗಿದೆ.ಆದರೆ ವೈರಲ್ ಆಗಿರುವ ಆಡಿಯೋ ಬಗ್ಗೆ ಯಾವುದೇ ಸ್ಪಷ್ಟನೆ ಇಲ್ಲ. ರಾಜರಾಜೇಶ್ವರಿನಗರ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ತಂದೆ ಹನುಮಂತರಾಯಪ್ಪ, ಚಲುವರಾಜು ಮತ್ತು ಸ್ನೇಹಿತನದ್ದು ಎನ್ನಲಾದ ಆಡಿಯೋ ಇದೀಗ ವೈರಲ್ ಆಗಿದೆ.ಈಗಾಗಲೇ ಆಡಿಯೋವನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ. ಆಡಿಯೋದಲ್ಲಿ ಚಲುವರಾಜು ಮತ್ತು ಸ್ನೇಹಿತ ಸಹ ಮಾತಾಡಿರುವುದು ಇದೆ. ಸದ್ಯ ವೈರಲ್ ಆಗಿರುವ ಆಡಿಯೋ ಬಗ್ಗೆ…