Subscribe to Updates
Get the latest creative news from FooBar about art, design and business.
Author: kannadanewsnow05
ಬೀದರ್ : ಸದ್ಯ ರಾಜ್ಯದಲ್ಲಿ ಮುಡಾ ಹಗರಣ ಭಾರಿ ಸಂಚಲನ ಸೃಷ್ಟಿಸಿದ್ದು ಸಿಎಂ ಸಿದ್ದರಾಮಯ್ಯ ಸೇರಿದಂತೆ ಪತ್ನಿ ಪಾರ್ವತಿ ಭಾಮೈದ ಮಲ್ಲಿಕಾರ್ಜುನ ಸ್ವಾಮಿ ಸೇರಿದಂತೆ ಹಲವರನ್ನು ಈಗಾಗಲೇ ಇಡಿ ಹಾಗೂ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಇದರ ಬೆನ್ನಲ್ಲೆ ಇದೀಗ ಬೀದರ್ ನಲ್ಲಿ ಬುಡಾದ ಕಮಿಷನರ್ ಶ್ರೀಕಾಂತ್ ಚಿಮಕೋಡೆ 10 ಲಕ್ಷ ರೂಪಾಯಿ ಲಂಚವನ್ನು ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್ ಹ್ಯಾಂಡ್ ಆಗಿ ಬಲೆಗೆ ಬಿದ್ದಿರುವ ಘಟನೆ ನಡೆದಿದೆ. ಹೌದು ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಕಮಿಷನರ್ ಆಗಿರುವ ಶ್ರೀಕಾಂತ್ ಚಿಮಾಕೋಡೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೇಔಟ್ ನಿರ್ಮಾಣಕ್ಕೆ ಅನುಮತಿ ನೀಡಲು ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ವೇಳೆ 40 ಲಕ್ಷ ಲಂಚ ನೀಡುವಂತೆ ಬುಡಾ ಕಮಿಷನರ್ ಶ್ರೀಕಾಂತ್ ಚಿಮಕೋಡೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಸಿದ್ದು ಹೂಗಾರ್ ಎನ್ನುವ ವ್ಯಕ್ತಿಯ ಬಳಿ 40 ಲಕ್ಷ ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು. ಇದೀಗ ಇಂದು 10 ಲಕ್ಷ ರೂಪಾಯಿ ಲಂಚ…
ದಾವಣಗೆರೆ : ವಾಜಪೇಯಿ, ಮೋದಿ ಪ್ರಧಾನಿ ಆಗದಿದ್ದರೆ ಭಾರತ ಪಾಕಿಸ್ತಾನ್ ಆಗ್ತಾ ಇತ್ತು. ಹಿಂದೂ ರಾಷ್ಟ್ರ ಉಳಿಸಲು ಶ್ರೀರಾಮ ಮಂದಿರ ನಿರ್ಮಾಣ ಮಾಡಲಾಗಿದೆ. ವಕ್ಫ್ ರದ್ದತಿಗೆ ಮೋದಿ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಅದಕ್ಕೆ ಹಿಂದೂಗಳು ಬೆಂಬಲ ಕೊಡಬೇಕು. ಎಲ್ಲ ಮಠಾಧೀಶರು ಹೋರಾಟಕ್ಕೆ ಇಳಿಯಬೇಕು ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ತಿಳಿಸಿದರು. ಇಂದು ದಾವಣಗೆರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಮುಕ್ತ ಮಾಡಲು ನಾವು ಹೋರಾಟ ಮಾಡಬೇಕು, ಹಿಂದೂಗಳು ಉಳಿಯಲು ಎಲ್ಲರೂ ಒಂದಾಗಬೇಕು. ಮೂರು ಚುನಾವಣೆ ಮೇಲೆ ದುಷ್ಪರಿಣಾಮ ತಪ್ಪಿಸಲು ನೋಟಿಸ್ ಹಿಂಪಡೆಯಲು ಸಿದ್ದರಾಮಯ್ಯ ಹೇಳಿದ್ದಾರೆ. ಕಾಲಂ ನಂಬರ್ 11 ತೆಗೆಯಲು ಹೇಳಿಲ್ಲ. ವಕ್ಫ್ ಹಠಾವೋ ಅಲ್ಲ, ಕಾಂಗ್ರೆಸ್ ಹಠಾವೋ ಎನ್ನಬೇಕಿದೆ ಎಂದರು. ಇನ್ನು ಜಮೀರ್ ಅಹ್ಮದ್ ವಿರುದ್ಧ ಕಿಡಿ ಕಾರಿದ ಅವರು, ಸಚಿವ ಜಮೀರ್ ಅಹಮ್ಮದ್ ಖಾನ್ ಹಿಂದೂಗಳ ಮಠದ ಆಸ್ತಿ, ರೈತರ ಆಸ್ತಿ ನುಂಗಲು ಮುಂದಾಗಿದ್ದಾನೆ. ವಕ್ಫ್ ವಿರುದ್ಧ ಒಂದು ಲಕ್ಷಕ್ಕೂ ಅಧಿಕ ಜನ ಸುವರ್ಣಸೌಧಕ್ಕೆ ಮುತ್ತಿಗೆ…
ಮಡಿಕೇರಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ, ಹಾಗೂ ಜನರಲ್ ತಿಮ್ಮಯ್ಯ ಅವರ ಕುರಿತು ಸಾಮಾಜಿಕ ಜಾಲತಾಣ ವಾಟ್ಸ್ ಅಪ್ ನಲ್ಲಿ ಅವಮಾನಕರವಾದಂತ ಪೋಸ್ಟ್ ಹಾಕಿದ್ದು, ಇದೀಗ ಕೊಡವ ಸಂಘಟನೆಗಳು ಪೊಲೀಸರಿಗೆ ದೂರು ನೀಡಿ, ಆರೋಪಿಯನ್ನು ಬಂಧಿಸುವಂತೆ ಒತ್ತಾಯಿಸಿವೆ. ಆರೋಪಿಯನ್ನು ಶ್ರಿವತ್ಸ ಭಟ್ ಎಂದು ತಿಳಿದುಬಂದಿದೆ. ಫೀಲ್ಡ್ ಮಾರ್ಷಲ್ ಕೆಎಂ ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತುಚ್ಛವಾಗಿ ಅಪಮಾನ ಮಾಡಿದ್ದರೆ.ಶ್ರಿವತ್ಸ ಭಟ್ರನ್ನು ಬಂಧನ ಹಾಗೂ ಕಾನೂನು ಕ್ರಮಕ್ಕೆ ಒತ್ತಾಯಿಸಿ ಜಿಲ್ಲೆಯ ವಿವಿಧ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಅಲ್ಲದೆ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೂ ಲಿಖಿತ ದೂರು ನೀಡಲಾಗಿದ್ದು, ಆರೋಪಿಯನ್ನ ತಕ್ಷಣ ಬಂಧಿಸುವಂತೆ ಆಗ್ರಹಿಸಿದ್ದಾರೆ. ಜಿಲ್ಲೆಯ ಸಪ್ತ ಸಾಗರ ಎಂಬ ವಾಟ್ಸ್ಆ್ಯಪ್ ಗ್ರೂಪ್ನಲ್ಲಿ ಶ್ರಿವತ್ಸ ಭಟ್ ಎಂಬುವವರು ಫೀಲ್ಡ್ ಮಾರ್ಷಲ್ ಕೆಎಂ ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಅವರ ಬಗ್ಗೆ ನಿಂದಿಸಿ ಪೋಸ್ಟ್ ಮಾಡಿದ್ದರು. ಬಳಿಕ ಇದರ ಸ್ಕ್ರೀನ್ ಶಾಟ್ ಎಲ್ಲಾ ಕಡೆ ವೈರಲ್ ಆಗಿದ್ದು, ಅವರ ವಿರುದ್ಧ…
ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಹೆತ್ತ ಮಕ್ಕಳನ್ನೇ ತಾಯಿ ಒಬ್ಬಳು ಭೀಕರವಾಗಿ ಕೊಲೆ ಮಾಡಿದ್ದು ಅಲ್ಲದೇ ತಾನು ಕೂಡ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಇದೀಗ ವರದಿಯಾಗಿದೆ. 7 ವರ್ಷದ ಹಾಗೂ 3 ವರ್ಷದ ಇಬ್ಬರು ಮಕ್ಕಳನ್ನು ತಾಯಿಯೇ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಸುಬ್ರಹ್ಮಣ್ಯ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಕೊಲೆಯಾದ ಮಕ್ಕಳನ್ನು ಹಗ್ಗದಿಂದ ಕುತ್ತಿಗೆಗೆ ಬಿಗಿದು ಶಂಭು (7) ಮತ್ತು ಶಿಯಾ (3) ಎನ್ನುವ ಮಕ್ಕಳನ್ನು ಮಮತಾ ಸಾಹು ಎನ್ನುವ ತಾಯಿ ಕೊಂದಿದ್ದಾಳೆ. ಬಳಿಕ ತಾನು ಕೂಡ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಬೆಂಗಳೂರಿನ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಭೀಕರವಾದಂತಹ ಕೊಲೆ ನಡೆದಿದ್ದು, ಕೊಲೆ ಕುರಿತಂತೆ ಮಕ್ಕಳ ತಂದೆ ಸುಬ್ರಮಣ್ಯಪುರ ಪೊಲೀಸ್ ಠಾಣೆಗೆ ಇದೀಗ ದೂರು ನೀಡಿದ್ದಾರೆ. ಸದ್ಯ ತಂದೆಯ ದೂರಿನ ಮೇರೆಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲೆ ಕುರಿತಂತೆ ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.
ಬೆಂಗಳೂರು : ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಉಚಿತ ನೀಟ್ ಕೋಚಿಂಗ್ ತರಬೇತಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ಧ ವಿದ್ಯಾರ್ಥಿಯೊಬ್ಬ ನೇರವಾಗಿ ವಿದ್ಯಾಮಂತ್ರಿಗಳಿಗೆ ಕನ್ನಡ ಭಾಷೆ ಮಾತನಾಡಲು ಬರಲ್ಲ ಎಂದು ಹೇಳಿದ್ದು ಸಾಕಷ್ಟು ಸುದ್ದಿಯಾಗಿತ್ತು. ನೀಟ್ ಕೋಚಿಂಗ್ ತರಬೇತಿ ಉದ್ಘಾಟನೆ ನಂತರ ಆನ್ಲೈನ್ ಸಂವಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಅಭಿಪ್ರಾಯ ಹಂಚಿಕೊಳ್ಳುವ ವೇಳೆ ವಿದ್ಯಾರ್ಥಿಯೋರ್ವ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ವಿದ್ಯಾಮಂತ್ರಿಗಳಿಗೆ ಕನ್ನಡ ಸರಿಯಾಗಿ ಬರಲ್ಲ ಎಂದು ಹೇಳಿದನು. ಇದನ್ನು ಕೇಳಿಸಿಕೊಂಡ ಸಚಿವ ಮಧು ಬಂಗಾರಪ್ಪ ಗರಂ ಆಗಿ, ಯಾರೋ ಅದು ಹಾಗೆ ಹೇಳಿದ್ದು, ಈ ವಿಷಯಾನ ಗಂಭೀರವಾಗಿ ತಗೊಳ್ಬೇಕು, ಯಾರು ಅಂತ ಫೈಂಡ್ ಔಟ್ ಮಾಡಿ ಕ್ರಮ ತಗೊಳ್ಳಿ ಎಂದು ಪಕ್ಕದಲ್ಲಿ ಕುಳಿತಿದ್ದ ಅಧಿಕಾರಿಗಳಿಗೆ ಹೇಳಿದರು. ಈ ಕುರಿತಾಗಿ ಸ್ಪಷ್ಟನೆ ನೀಡಿದ ಅವರು, ನಾನು ವಿದ್ಯಾರ್ಥಿ ಮೇಲೆ ಕ್ರಮದ ಬಗ್ಗೆ ಎಲ್ಲೂ ಮಾತನಾಡಿಲ್ಲ. ಮಕ್ಕಳ ಮೇಲೆ ಪ್ರಾಂಶುಪಾಲರಿಗೆ ಹತೋಟಿ ಇರಬೇಕು. ಅದಕ್ಕೆ ಪ್ರಾಂಶುಪಾಲರಿಗೆ…
ಬೆಂಗಳೂರು : ಇನ್ನೇನು ಕೆಲವೇ ದಿನಗಳಲ್ಲಿ ಹೊಸ ವರ್ಷಾಚರಣೆ ಆಗಮಿಸಲಿದ್ದು, ಬೆಂಗಳೂರು ನಗರಕ್ಕೆ ಗಾಂಜಾ ಘಾಟು ಬಡಿದಿದೆ. ಈ ಸಂಬಂಧ ಖಚಿತ ಮಾಹಿತಿಯ ಮೇರೆಗೆ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಇಬ್ಬರು ವಿದೇಶಿ ಡ್ರಗ್ ಪೆಡ್ಲರ್ ಗಳನ್ನು ಇದೀಗ ಸೋಲದೇವನಹಳ್ಳಿಯ ಬಳಿ ಖಚಿತ ಮಾಹಿತಿಯ ಮೇರೆಗೆ ಸಿಸಿಬಿ ಪೊಲೀಸರು ದಾಳಿ ಮಾಡಿ ನೈಜೆರಿಯ ಮೂಲದ ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ. ಹೌದು ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಮತ್ತೊಂದು ಕಾರ್ಯಾಚರಣೆ ನಡೆಸಿದ್ದು, ಇಬ್ಬರು ವಿದೇಶಿ ಡ್ರಗ್ ಪೆಡ್ಲರ್ಗಳ ಬಂಧನವಾಗಿದ್ದು, ಬಂಧಿತರ ಬಳಿ ಇದ್ದ 3 ಕೋಟಿ ಮೌಲ್ಯದ ಸಿಂಥೆಟಿಕ್ ಡ್ರಗ್ಸ್ ಜಪ್ತಿ ಮಾಡಿಕೊಳ್ಳಲಾಗಿದೆ. ಸೋಲದೇವನಹಳ್ಳಿ ಬಳಿ ಆರೋಪಿಗಳು ಡ್ರಗ್ ಸಂಗ್ರಹಿಸಿದ್ದರು. ಬಂಧಿತರಿಂದ ಒಂದು ಕೆಜಿ 520g ಎಂಡಿಎಂಎ ಕ್ರಿಸ್ಟಲ್ 202 ಗ್ರಾಂ ಕೊಕೆನ್ ಗ್ರಾಂ ಎಂಡಿಎಂಎ ಎಕ್ಸಟ್ಸಿ ಜಪ್ತಿ ಮಾಡಿಕೊಳ್ಳಲಾಗಿದೆ. ಬೆಂಗಳೂರಿನಲ್ಲಿ ನ್ಯೂ ಇಯರ್ ಗೆ ಡ್ರಗ್ಸ್ ಮಾಡಲು ಸಜ್ಜಾಗಿದ್ದರು ಎನ್ನಲಾಗಿದೆ. ಮುಂಬೈನಿಂದ ಬೆಂಗಳೂರಿಗೆ ಡ್ರಗ್ಸ್ ಪೂರೈಸುತ್ತಿದ್ದರು ಎಂದು ತಿಳಿದುಬಂದಿದೆ. ವೈದ್ಯಕೀಯ…
ಬೆಂಗಳೂರು : ಬೆಂಗಳೂರಿನಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಡ್ರಗ್ಸ್ ಮಾರಾಟ ಮಾಡಲು ಸಂಚು ರೂಪಿಸಿದ್ದ, ಇಬ್ಬರು ದಂಪತಿಗಳು ಸೇರಿದಂತೆ ಒಟ್ಟು ಮೂವರನ್ನು ಬೆಂಗಳೂರಿನ ಗೋವಿಂದಪುರ ಠಾಣೆಯ ಪೊಲೀಸರು ಇದೀಗ ಅರೆಸ್ಟ್ ಮಾಡಿದ್ದಾರೆ. ಬಂಧಿತರಿಂದ 3.25 ಕೋಟಿ ಮೌಲ್ಯದ 318 ಕೆಜಿ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಗೋವಿಂದಪುರ ಠಾಣೆಯ ಪೊಲೀಸರಿಂದ ಮೂವರು ಆರೋಪಿಗಳ ಜಮೀರ್ ಮತ್ತು ರೇಷ್ಮಾ ದಂಪತಿ ಹಾಗೂ ಕೇರಳ ಮೂಲದ ಇನ್ನೊಬ ಆರೋಪಿ ಸೇರಿ ಮೂವರ ಬಂಧನವಾಗಿದೆ. ನ್ಯೂ ಇಯರ್ ಗೆ ಬೆಂಗಳೂರು ಮತ್ತು ಕೇರಳದಲ್ಲಿ ಡ್ರಗ್ಸ್ ಮಾರಾಟ ಮಾಡಲು ಸಂಚು ರೂಪಿಸಿದ್ದರು. ಕಾರಿನಲ್ಲಿ ಗಾಂಜಾ ಸಾಗಿಸುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ್ದಾರೆ. ಎಚ್ ಬಿ ಆರ್ ಲೇಔಟ್ ಬಳಿ ಕಾರಿನ ಮೇಲೆ ಗೋವಿಂದಪುರ ಪೊಲೀಸರು ದಾಳಿ ಮಾಡಿದ್ದಾರೆ. ಈ ವೇಳೆ ಕಾರಿನಲ್ಲಿದ್ದ ಸುಮಾರು 3.25 ಕೋಟಿ ರೂಪಾಯಿ ಮೌಲ್ಯದ 318 ಕೆಜಿ ಗಾಂಜಾ ಪತ್ತೆಯಾಗಿದೆ. ಒಡಿಶಾದಿಂದ ಬೆಂಗಳೂರಿಗೆ 3 ಆರೋಪಿಗಳು…
ಬೆಂಗಳೂರು : ರಾಜಾಜೀನಗರ ಬೈಕ್ ಶೋ ರೂಮ್ ನಲ್ಲಿ ಆಕಸ್ಮಿಕ ಬೆಂಕಿ ದುರಂತದಲ್ಲಿ ಮೃತಪಟ್ಟ ಪ್ರಿಯಾ ಅವರ ಮನೆಗೆ ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವಾನ ಹೇಳಿದರು. ಪ್ರಿಯಾ ಅವರ ಕುಟುಂಬ ವರ್ಗ ಗಾಂಧಿನಗರದ ಓಕಳಿಪುರಂ ನಲ್ಲಿ ನೆಲೆಸಿದ್ದು, ಸಚಿವರ ಭೇಟಿ ವೇಳೆ, ಶೋ ರೂಮ್ ಮಾಲೀಕರ ವಿರುದ್ಧ ಕುಟುಂಬ ವರ್ಗದವರು ಅಸಮಾಧಾನ ವ್ಯಕ್ತಪಡಿಸಿದರು. ಶೋ ರೂಮ್ ಮಾಲೀಕರು ಯಾರು ಕೂ ಇಲ್ಲಿಯ ವರೆಗೆ ಏನು ಎಂದು ಕೇಳಲು ಬಂದಿಲ್ಲ. ಶಾಸಕರಾಗಿ ನೀವೇ ನಮಗೆ ನ್ಯಾಯ ಒದಗಿಸಬೇಕು ಎಂದು ಪ್ರಿಯಾ ಅವರ ತಂದೆ ಸಚಿವದಿನೇಶ್ ಗುಂಡೂರಾವ್ ಅವರ ಬಳಿ ಮನವಿ ಮಾಡಿದರು. ಯುವತಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ ಸಚಿವ ದಿನೇಶ್ ಗುಂಡೂರಾವ್, ಪರಿಹಾರ ದೊರಕಿಸಿಕೊಡುವ ನಿಟ್ಟಿನಲ್ಲಿ ಶೋ ರೂಮ್ ಮಾಲೀಕರನ್ನ ಕರೆದು ಚರ್ಚಿಸುವುದಾಗಿ ಪ್ರಿಯಾ ಅವರ ತಂದೆ ತಾಯಿ ಅವರಿಗೆ ಭರವಸೆ ನೀಡಿದರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಚಿವ ದಿನೇಶ್ ಗುಂಡೂರಾವ್, ಪ್ರಿಯಾ…
ಬೆಂಗಳೂರು : ವಕ್ಫ್ ವಿಚಾರವಾಗಿ ಇಂದು ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ಬಿಜೆಪಿಯ ಪರಿಷತ್ ಸದಸ್ಯ ಸಿಟಿ ರವಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, 1500 ವರ್ಷಗಳ ಹಿಂದೆ ಯಾವ ಅಲ್ಲಾನು ಇರಲಿಲ್ಲ ಯಾವ ಮುಲ್ಲಾನು ಇರಲಿಲ್ಲ. ಸಿಎಂ ಸಿದ್ದರಾಮಯ್ಯ ಅವರು ಸಚಿವ ಜಮೀರ್ ಅಹ್ಮದ್ನನ್ನು ನಂಬಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಅವಕಾಶಕೊಟ್ಟ ಜನರನ್ನೇ ಸುಡಲು ಕಾಂಗ್ರೆಸ್ ಪಕ್ಷ ಹೊರಟಿದೆ ಎಂದು ಬಿಜೆಪಿ ಪ್ರತಿಭಟನೆಯಲ್ಲಿ ಪರಿಷತ್ ಸದಸ್ಯ ಸಿಟಿ ರವಿ ವಾಗ್ದಾಳಿ ನಡೆಸಿದರು. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ಗೆ ಅಧಿಕಾರ ನೀಡಿದ್ದು ಬಸ್ಮಾಸುರನಿಗೆ ಅವಕಾಶ ಕೊಟ್ಟಂತಾಗಿದೆ. ಭಸ್ಮಾಸುರನ ಪಾತ್ರವನ್ನು ಕಾಂಗ್ರೆಸ್ ನಿರ್ವಹಿಸುತ್ತಿದೆ. ಬಕಾಸುರನ ಪಾತ್ರವನ್ನು ನಿರ್ವಹಿಸುತ್ತಿದೆ ಎಂದು ಕಿಡಿ ಕಾರಿದರು. 1500 ವರ್ಷಗಳ ಹಿಂದೆ ಯಾವ ಅಲ್ಲಾನು ಇರಲಿಲ್ಲ. ಮುಲ್ಲಾನು ಇರಲಿಲ್ಲ. ವಿಧಾನಸೌಧನು ನಮ್ಮದು ಅಂತಾರೆ ಅಂದರೆ ಈ ಸೊಕ್ಕು ಎಲ್ಲಿಂದ ಬಂತು? ಕಾಂಗ್ರೆಸ್…
ಮೈಸೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಅವರು ಬೆನ್ನು ನೋವಿನ ಸಮಸ್ಯೆ ಹಿನ್ನೆಲೆ ಹೈಕೋರ್ಟ್ ನಿಂದ ಮಧ್ಯಂತರ ಜಾಮೀನು ಪಡೆದುಕೊಂಡು ಬೆಂಗಳೂರಿನ ಕೆಂಗೇರಿ ಬಳಿಯ ಬಿಜಿಎಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಈ ಕುರಿತಾಗಿ ಗೃಹ ಸಚಿವ ಜಿ ಪರಮೇಶ್ವರ್ ಅವರು ಶಸ್ತ್ರಚಿಕಿತ್ಸೆ ಬಳಿಕ ನಟ ದರ್ಶನ್ ಅವರು ಮತ್ತೆ ಜೈಲಿಗೆ ಹೋಗಬೇಕು ಎಂದು ತಿಳಿಸಿದರು. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ದರ್ಶನ್ ಆಸ್ಪತ್ರೆಯಲ್ಲಿ ಟ್ರೀಟ್ಮೆಂಟ್ ಪಡೆಯುತ್ತಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಮುಂದುವರೆದು ಬೇಲ್ ಕೇಳಬಹುದು. ಹಾಗಾಗಿ ಅವರಿಗೆ ಬೇಲ್ ಕೊಡಬಾರದು ಅಂತ ಸುಪ್ರೀಂಕೋರ್ಟ್ ಗೆ ಅರ್ಜಿ ಹಾಕುತ್ತೇವೆ. ಕೊಲೆ ಪ್ರಕರಣ ಕುರಿತು ಮತ್ತಷ್ಟು ತನಿಖೆ ನಡೆಯುತ್ತಿದೆ. ತನಿಖೆ ಪೂರ್ಣ ಬಳಿಕ ಸಂಪೂರ್ಣ ಸಲ್ಲಿಕೆ ಮಾಡುತ್ತೇವೆ ಎಂದು ತಿಳಿಸಿದರು. ಚಿಕಿತ್ಸೆಯ ಬಳಿಕ ದರ್ಶನ ವಾಪಸ್ ಜೈಲಿಗೆ ಹೋಗಬೇಕು. ದರ್ಶನ್ ಗೆ ಶಸ್ತ್ರಚಿಕಿತ್ಸೆ ದಿನಾಂಕ ನಿಗದಿ ಮಾಡಿಲ್ಲ. ಆಪರೇಷನ್ ಗಳ ಬಗ್ಗೆ ದರ್ಶನ್ ರಕ್ತದೊತ್ತಡ ಕಾರಣವಾಗಿದೆ. ಚಿಕಿತ್ಸೆಗೆ ದರ್ಶನ್ ಸಿದ್ಧರಿದ್ದಾರೆ…














