Author: kannadanewsnow05

ನವದೆಹಲಿ : ಮೆಸೇಜಿಂಗ್ ಪ್ಲಾಟ್ಫಾರ್ಮ್ ವಾಟ್ಸಾಪ್ ಶನಿವಾರ ಕೆಲವು ಬಳಕೆದಾರರಿಗೆ ಕಾರ್ಯನಿರ್ವಹಿಸುತ್ತಿಲ್ಲ. ಕೆಲವು ಬಳಕೆದಾರರು ಇಂದು ಸಂಜೆ ಮೆಟಾ-ಮಾಲೀಕತ್ವದ ಅಪ್ಲಿಕೇಶನ್ನಲ್ಲಿ ತಮ್ಮ ಸ್ಟೇಟಸ್ಗಳನ್ನು ಅಪ್ಲೋಡ್ ಮಾಡಲು ಅಥವಾ ಸಂದೇಶಗಳನ್ನು ಕಳುಹಿಸಲು ತೊಂದರೆಗಳನ್ನು ಕಳುಹಿಸಲಿ ಸಾಧ್ಯವಾಗುತ್ತಿಲ್ಲ ಎಂದು ವರದಿ ಮಾಡಿದ್ದಾರೆ.ಇದೀಗ ಮತ್ತೆ ಭಾರತ ಸೇರಿದಂತೆ ವಿಶ್ವದಾದ್ಯಂತ ಮತ್ತೆ ವಾಟ್ಸ್ ಆಪ್ ಸೇವೆ ಡೌನ್ ಆಗಿದೆ. ತನ್ನ ಪ್ಲಾಟ್ಫಾರ್ಮ್ನಲ್ಲಿ ಬಳಕೆದಾರರು ಸಲ್ಲಿಸಿದ ದೋಷಗಳು ಸೇರಿದಂತೆ ಹಲವಾರು ಮೂಲಗಳಿಂದ ಸ್ಟೇಟಸ್ ವರದಿಗಳನ್ನು ಒಟ್ಟುಗೂಡಿಸುವ ಮೂಲಕ ಸ್ಥಗಿತಗಳನ್ನು ಪತ್ತೆಹಚ್ಚುವ ಡೌನ್ಡೆಟೆಕ್ಟರ್ ಪ್ರಕಾರ, ಸಂಜೆ 5:13 ರವರೆಗೆ ವಾಟ್ಸಾಪ್ ವಿರುದ್ಧ ಕನಿಷ್ಠ 463 ದೂರುಗಳು ದಾಖಲಾಗಿವೆ ಎಂದಿದೆ.ಶೇ.80% ಕ್ಕೂ ಹೆಚ್ಚು ದೂರುಗಳು ಸಂದೇಶಗಳನ್ನು ಕಳುಹಿಸುವುದಕ್ಕೆ ಸಂಬಂಧಿಸಿವೆ. 15% ಜನರು ಅಪ್ಲಿಕೇಶನ್ನಲ್ಲಿ ತೊಂದರೆಗಳನ್ನು ಅನುಭವಿಸಿದ್ದಾರೆ ಮತ್ತು 4% ಲಾಗಿನ್ ಸಮಯದಲ್ಲಿ ಎಂಬುದಾಗಿ ತಿಳಿಸಿದೆ. “ಇದು ನಾನು ಮಾತ್ರವೇ ಅಥವಾ ನಿಮ್ಮ ವಾಟ್ಸಾಪ್ ಕೂಡ ಡೌನ್ ಆಗಿದೆಯೇ? ನಾನು ಸ್ಟೇಟಸ್ ಅಪ್ಲೋಡ್ ಮಾಡಲು ಪ್ರಯತ್ನಿಸುತ್ತಿದ್ದೇನೆ ಮತ್ತು ಹಾಗೆ ಮಾಡಲು ಶಾಶ್ವತವಾಗಿ ತೆಗೆದುಕೊಳ್ಳುತ್ತಿದೆ”…

Read More

ಬೆಂಗಳೂರು : ಇತ್ತೀಚಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡನೆ ಆಯಿತು. ಅಲ್ಲದೇ ರಾಜ್ಯದಲ್ಲಿ ಜಾತಿ ಗಣತಿ ವರದಿ ಜಾರಿಗೆ ಮಾಡಲು ರಾಜ್ಯ ಸರ್ಕಾರ ಏಪ್ರಿಲ್ 17 ರಂದು ವಿಶೇಷ ಸಂಪುಟ ಸಭೆ ಕರೆದಿದೆ. ಈಗಾಗಲೇ ಜಾತಿ ಗಣತಿ ವರದಿ ಜಾರಿ ಕುರಿತು ಪರ ವಿರೋಧ ಚರ್ಚೆಗಳು ಆರಂಭವಾಗಿದ್ದು ಇದರ ಬೆನ್ನಲ್ಲೇ ರಾಜ್ಯದಲ್ಲಿ ಜಾತಿವಾರು ಜನಸಂಖ್ಯೆ ಪ್ರಮಾಣದ ಮಾಹಿತಿ ಬಹಿರಂಗವಾಗಿದೆ. ಹೌದು ರಾಜ್ಯದಲ್ಲಿ ಜಾತಿವಾರು ಜನಸಂಖ್ಯೆ ಪ್ರಮಾಣದ ಬಗ್ಗೆ ಇದೀಗ ಮಾಹಿತಿ ಬಹಿರಂಗವಾಗಿದೆ. ರಾಜ್ಯದಲ್ಲಿ ಜಾತಿ ಸಮೀಕ್ಷೆಗೆ ಒಳಪಟ್ಟ ಜನಸಂಖ್ಯೆ 5,98,14,942 ಎಂದು ತಿಳಿದುಬಂದಿದೆ. ರಾಜ್ಯದಲ್ಲಿ ಎಸ್​ಸಿ ಜನಸಂಖ್ಯೆ 1,09,29,347, ಎಸ್​ಟಿ ಜನಸಂಖ್ಯೆ 42,81,289, ಪ್ರವರ್ಗ 1ಎ ಜನಸಂಖ್ಯೆ 34,96,638, ಪ್ರವರ್ಗ 1ಬಿ ಜನಸಂಖ್ಯೆ 73,92,313, ಪ್ರವರ್ಗ 2ಎ ಜನಸಂಖ್ಯೆ 77,78,209 ಇದ್ದು ಪ್ರವರ್ಗ 2B ಜನಸಂಖ್ಯೆ 75,25,880 ಇದೆ. ಪ್ರವರ್ಗ 3A ಜನ ಸಂಖ್ಯೆ 72,99,577 ಇದ್ದು, 3B ಜನಸಂಖ್ಯೆ 81,37,536 ಇದೆ ಎಂದು…

Read More

ಬೆಳಗಾವಿ : ಬಿಜೆಪಿ ಅವಧಿಯಲ್ಲಿ ಕರ್ನಾಟಕ ಆರ್ಥಿಕ ಸ್ಥಿತಿ ಹಾಳಾಗಿದ್ದು, ಬಿಎಸ್ ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಬಸವರಾಜ್ ಬೊಮ್ಮಾಯಿ ಇದ್ದಾಗಲೇ ಎಲ್ಲಾ ಹಾಳಾಗಿದ್ದು, ರಾಜ್ಯದಲ್ಲಿ 4.9 ಲಕ್ಷ ಕೋಟಿ ಬಜೆಟ್ ಮಂಡಿಸಿದ್ದೇವೆ. ಈ ವರ್ಷ 38 ಸಾವಿರ ಕೋಟಿ ರೂಪಾಯಿ ಬಜೆಟ್ ಹೆಚ್ಚಳ ಮಾಡಿದ್ದೇವೆ ಎಂದುಬೆಳಗಾವಿ ಏರ್ಪೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದರು. ರಾಜ್ಯ ದಿವಾಳಿ ಆಗುತ್ತೆ ಎಂದು ಹೇಳಿದ್ದರು. ಆರ್ಥಿಕವಾಗಿ ದಿವಾಳಿ ಆಗಿದ್ದರೆ ಇದು ಸಾಧ್ಯ ಆಗುತ್ತಿತ್ತ,? ಮೋದಿ ಅಧಿಕಾರಕ್ಕೆ ಬಂದಾಗ 53.11 ಲಕ್ಷ ಕೋಟಿ ಸಾಲ ಇತ್ತು. 10 ವರ್ಷದಲ್ಲಿ ದೇಶದಲ್ಲಿ 200 ಲಕ್ಷ ಕೋಟಿ ಸಾಲ ಆಗಿದೆ. ದೇಶದ ಮೇಲೆ ಸಾಲ ಜಾಸ್ತಿ ಆಗಲು ಕಾರಣ ನರೇಂದ್ರ ಮೋದಿ ಎಂದು ಬೆಳಗಾವಿ ಏರ್ಪೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಆರೋಪಿಸಿದರು. CM ಕುರ್ಚಿ ಉಳಿಸಿಕೊಳ್ಳಲು ಜಾತಿಗಣತಿ ಮುನ್ನೆಲೆಗೆ ಬಂದಿದೆ ಎಂದು ಬಿಜೆಪಿ ನಾಯಕರು ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದು, ಜಾತಿ ಗಣತಿ ಆಗಬೇಕು ಅಂತ ನಮ್ಮ ಪ್ರಣಾಳಿಕೆಯಲ್ಲಿ…

Read More

ಬೆಳಗಾವಿ : ಬೆಳಗಾವಿಯಲ್ಲಿ ಎಂಇಎಸ್ ಭವನ ನಿರ್ಮಿಸುತ್ತಿರುವ ವಿಚಾರವಾಗಿ ಇಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿ, ನಾವು ದೆಹಲಿಗೆ ಹೋಗಿ ಭವನ ಕಟ್ಟಿದ್ದೇವೆ. ಆಸ್ತಿ ಸಂಪಾದನೆ,ತಿರುಗಾಡಲು ಒಕ್ಕೂಟ ವ್ಯವಸ್ಥೆಯಲ್ಲಿ ಅವಕಾಶ ಇದೆ. ಹಾಗಂತ ನಮ್ಮ ಜಾಗವನ್ನು ಆಕ್ರಮಿಸಲು ಬರುವುದಿಲ್ಲ. ನಾವು ಬೆಳಗಾವಿಯನ್ನು ಯಾವ ಕಾರಣಕ್ಕೂ ಬಿಟ್ಟುಕೊಡಲ್ಲ ಎಂದು ಬೆಳಗಾವಿ ಏರ್ಪೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದರು. ಬಿಜೆಪಿ ಅವಧಿಯಲ್ಲಿ ಕರ್ನಾಟಕ ಆರ್ಥಿಕ ಸ್ಥಿತಿ ಹಾಳಾಗಿದ್ದು, ಬಿಎಸ್ ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಬಸವರಾಜ್ ಬೊಮ್ಮಾಯಿ ಇದ್ದಾಗಲೇ ಎಲ್ಲಾ ಹಾಳಾಗಿದ್ದು, ರಾಜ್ಯದಲ್ಲಿ 4.9 ಲಕ್ಷ ಕೋಟಿ ಬಜೆಟ್ ಮಂಡಿಸಿದ್ದೇವೆ. ಈ ವರ್ಷ 38 ಸಾವಿರ ಕೋಟಿ ರೂಪಾಯಿ ಬಜೆಟ್ ಹೆಚ್ಚಳ ಮಾಡಿದ್ದೇವೆ ಎಂದು ತಿಳಿಸಿದರು. ರಾಜ್ಯ ದಿವಾಳಿ ಆಗುತ್ತೆ ಎಂದು ಹೇಳಿದ್ದರು. ಆರ್ಥಿಕವಾಗಿ ದಿವಾಳಿ ಆಗಿದ್ದರೆ ಇದು ಸಾಧ್ಯ ಆಗುತ್ತಿತ್ತ,? ಮೋದಿ ಅಧಿಕಾರಕ್ಕೆ ಬಂದಾಗ 53.11 ಲಕ್ಷ ಕೋಟಿ ಸಾಲ ಇತ್ತು. 10 ವರ್ಷದಲ್ಲಿ ದೇಶದಲ್ಲಿ 200 ಲಕ್ಷ ಕೋಟಿ ಸಾಲ ಆಗಿದೆ. ದೇಶದ…

Read More

ನವದೆಹಲಿ : ಸಾರ್ವಜನಿಕರ ತೀವ್ರ ವಿರೋಧದ ನಡುವೆ ಬಲ್ಡೋಟ ಉಕ್ಕು ಮತ್ತು ಕಬ್ಬಿಣ ಕಾರ್ಖಾನೆ ಸ್ಥಾಪನೆಗೆ ಕೇಂದ್ರ ಪರಿಸರ ಇಲಾಖೆ ಅನುಮತಿ ನೀಡಿದೆ. ರಾಜ್ಯ ಸರ್ಕಾರದ ಶಾಸಕರು ಹಾಗೂ ಸಚಿವರು ಸಹ ಬಲ್ಡೋಟ ಕಾರ್ಖಾನೆ ಸ್ಥಾಪನೆಗೆ ವಿರೋಧ ವ್ಯಕ್ತಪಡಿಸಿ ಹೋರಾಟ ನಡಸಿದ್ದರು.ಆದರೆ ಸದ್ಯ ಕೇಂದ್ರ ಪರಿಸರ ಇಲಾಖೆ ಅನುಮತಿ ಪತ್ರ ನೀಡಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಹೌದು ಬಲ್ಡೊಟಾ ಕಾರ್ಖಾನೆ ಸ್ಥಾಪನೆಗೆ ಕೇಂದ್ರ ಪರಿಸರ ಇಲಾಖೆ ಅನುಮತಿ ನೀಡಿದ್ದು, ಕೊಪ್ಪಳದಲ್ಲಿ ಸ್ಥಾಪನೆ ಆಗಲಿರುವ ಬಲ್ಡೊಟಾ ಸ್ಟೀಲ್ ಫ್ಯಾಕ್ಟರಿ. ಬಲ್ಡೊಟಾ ಕಾರ್ಖಾನೆಗೆ ಸ್ಥಳೀಯರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕಾರ್ಖಾನೆ ಸ್ಥಾಪನೆಯ ಕಾರ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.ಇದೀಗ ಬಲ್ಡೊಟಾ ಕಾರ್ಖಾನೆ ಸ್ಥಾಪನೆಗೆ ಕೇಂದ್ರ ಪರಿಸರ ಸಚಿವಾಲಯ ಗ್ರೀನ್ ಸಿಗ್ನಲ್ ನೀಡಿದೆ. ಭಾರತದ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ವಾರ್ಷಿಕವಾಗಿ 3.5 ಕೋಟಿ ಮೆಟ್ರಿಕ್ ಟನ್ ಉಕ್ಕು ಉತ್ಪಾದನೆಗೆ ಇದೀಗ ಅನುಮತಿ ನೀಡಿದೆ. ಪರಿಸರ ಇಲಾಖೆ ಅನುಮತಿ ಪಡೆಯುವಲ್ಲಿ ಬಲ್ಡೊಟಾ ಸಮೂಹ ಸಂಸ್ಥೆ ಇದೀಗ…

Read More

ಉತ್ತರಕನ್ನಡ : ಈ  ಹಿಂದೆ ನಿರ್ಮಾಪಕ ಉಮಾಪತಿ ಹಾಗೂ ನಟ ದರ್ಶನ್ ಒಟ್ಟಿಗೆ  ಹಲವು ಸಿನಿಮಾ ಮಾಡಿದ್ದರು. ಅದಾದ ಬಳಿಕ ಉಮಾಪತಿ ವಿರುದ್ಧ ದರ್ಶನ್ ವಂಚನೆ ಆರೋಪ ಮಾಡಿದ್ದರು. ಇದೀಗ ವಿಮಾಪಕ ಉಮಾಪತಿಯವರು ಪರೋಕ್ಷವಾಗಿ ನಟ ದರ್ಶನ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಜೈಲಿಗೆ ಹೋಗಿ ಬಂದವರಿಗೆಲ್ಲ ನಾನು ಹೆದರುವುದಿಲ್ಲ ಎಂದು ಟಾಂಗ್ ನೀಡಿದ್ದಾರೆ. ಇಂದು ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ಹಲಗಡಿಕೊಪ್ಪ ಗ್ರಾಮ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಈ ವೇಳೆ ಮಾತನಾಡಿದ ಉಮಾಪತಿ,ನನ್ನನ್ನು ಭಯಪಡಿಸುವ ಶಕ್ತಿ ಯಾರಿಗೂ ಇಲ್ಲ. ನಾನು ಸರಿಯಾದ ದಾರಿಯಲ್ಲಿ ಸಂಪಾದನೆ ಮಾಡಿದ್ದೇನೆ. ಸಾಯೋವರೆಗೂ ಇನ್ನೊಬ್ಬರಿಗೆ ಮಾದರಿಯಾಗಿ ಇರುತ್ತೇನೆ ಎಂದು ವಾಗ್ದಾಳಿ ನಡೆಸಿದ್ದಾರೆ. ಬದುಕಿನಲ್ಲಿ ಎರಡು ಮಾದರಿಯ ಜನ ಇರುತ್ತಾರೆ. ಇನ್ನೊಬ್ಬರಿಗೆ ಮಾದರಿಯಾಗಿ ಬದುಕೋದು ಒಂದು ವರ್ಗ, ಎಚ್ಚರಿಕೆ ಕೊಡುವ ಬದುಕುವ ಮತ್ತೊಂದು ವರ್ಗ ಇರುತ್ತದೆ. ಜೈಲಿಗೆ ಹೋಗಿ ಬಂದವರು ಇನ್ನೊಬ್ಬರಿಗೆ ಎಚ್ಚರಿಕೆ ಕೊಡುವವರು ಇನ್ನೊಬ್ಬರಿಗೆ ತೊಂದರೆ ಕೊಟ್ಟು ನಶಿಸಿ…

Read More

ಕಲಬುರ್ಗಿ : ಭಾರಿ ಮಳೆ ಹಾಗೂ ಗಾಳಿ ಬೀಸಿದ್ದರಿಂದ ಮನೆ ಮೇಲಿದ್ದ ಬಾಲಕಿ ಆಯತಪ್ಪಿ ಬಿದ್ದ ಪರಿಣಾಮ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಮುದಬಾಳ (ಕೆ) ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಪ್ರಿಯದರ್ಶಿನಿ ನಿಂಗಪ್ಪ ಹೊಸಮನಿ (11) ಎಂದು ತಿಳಿದುಬಂದಿದೆ.ಏಪ್ರಿಲ್‌ 8ರಂದು ಸಂಜೆ ಬಿರುಗಾಳಿ ಬೀಸಲು ಪ್ರಾರಂಭಿಸಿದಾಗ ಬಾಲಕಿ ಮನೆ‌ಯ ಮಾಳಿಗೆಯ ಮೇಲಿದ್ದ ಬಟ್ಟೆ ತೆಗೆಯಲು ಬಾಲಕಿ ಹೋಗಿದ್ದಾಳೆ. ಮಳೆ-ಗಾಳಿಯ ಆರ್ಭಟ ಹೆಚ್ಚಾಗಿ ನಿಯಂತ್ರಣ ತಪ್ಪಿ ಮನೆ‌ ಮೇಲಿಂದ ಕೆಳಗೆ ಬಿದ್ದಿದ್ದಾಳೆ. ತಕ್ಷಣ ಬಾಲಕಿಯನ್ನು ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಶುಕ್ರವಾರ ಬೆಳಿಗ್ಗೆ ಚಿಕಿತ್ಸೆಗೆ ಸ್ಪಂದಿಸದೇ ಬಾಲಕಿ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದ್ದು, ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಇತಿಹಾಸ ಪ್ರಸಿದ್ದ ಶ್ರೀ ಧರ್ಮರಾಯಸ್ವಾಮಿ ಬೆಂಗಳೂರು ಕರಗದ ಉತ್ಸವ ಇಂದು, ನಾಳೆ ನಡೆಯಲಿದೆ. ಕರಗದ ಉತ್ಸವಕ್ಕೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿರುವುದರಿಂದ ತಿಗಳರ ಪೇಟೆಯಲ್ಲಿರುವ ಧರ್ಮರಾಯಸ್ವಾಮಿ ದೇವಸ್ಠಾನದ ಸುತ್ತಮುತ್ತ ತಾತ್ಕಾಲಿಕವಾಗಿ ಸಂಚಾರ ನಿರ್ಬಂಧಿಸಲಾಗಿದೆ. ನಗರದ ಕೇಂದ್ರ ಭಾಗದಲ್ಲಿರುವ ತಿಗಳರಪೇಟೆಯಲ್ಲಿ ವಿಶ್ವವಿಖ್ಯಾತ ಬೆಂಗಳೂರು ಕರಗ ಶಕ್ತ್ಯೋತ್ಸವದ ಆಚರಣೆ ನಡೆಯುತ್ತಿದೆ. ಈ ಕಾರಣದಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಮಾರ್ಗ ಬದಲಾವಣೆ ಮಾಡಿದ್ದಾರೆ. ಬೆಂಗಳೂರು ಕರಗೋತ್ಸವ ಇರುವುದರಿಂದ ಎರಡು ದಿನಗಳ ಕಾಲ ಕೆಲವು ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಈ ಬಗ್ಗೆ ಟ್ರಾಫಿಕ್‌ ಪೊಲೀಸರು ಮಾಹಿತಿ ನೀಡಿದ್ದಾರೆ. ತಿಗಳರಪೇಟೆಯ ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ಕರಗದ ಆಚರಣೆಗಳು ನಡೆಯುವುದರಿಂದ ಏಪ್ರಿಲ್‌ 12ರ ರಾತ್ರಿ 10 ಗಂಟೆಯಿಂದ ಏಪ್ರಿಲ್‌ 13ರ ಸಂಜೆ 6 ಗಂಟೆಯವರೆಗೆ ಅವೆನ್ಯೂ ರಸ್ತೆ, ಕೆಆರ್‌ ಮಾರ್ಕೆಟ್‌ ರಸ್ತೆ, ಮಾರುಕಟ್ಟೆ ವೃತ್ತ, ಕಾಟನ್‌ಪೇಟ್‌, ಕೆ.ಜಿ.ರಸ್ತೆ, ಚಿಕ್ಕಪೇಟೆ ಸೇರಿದಂತೆ ಹಲವು ರಸ್ತೆಗಳಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ಇರುವುದಿಲ್ಲ ಎಂದು ಟ್ರಾಫಿಕ್‌ ಪೊಲೀಸರು…

Read More

ಮೈಸೂರು : ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ ಹಲವರ ಬಾಳಿಗೆ ಬೆಳಕಾಗಿದೆ. ಇದೀಗ ಮಹಿಳೆಯೊಬ್ಬರು ಗೃಹಲಕ್ಷ್ಮೀ ಯಿಂದ ತಮ್ಮ ಜೀವನ ಕಟ್ಟಿಕೊಟ್ಟ ಬಗ್ಗೆ ಹೇಳಿದ್ದು, ಗೃಹಲಕ್ಷ್ಮಿ ಯೋಜನೆ ಹಣದಿಂದ ಪೆಟ್ರೋಲ್ ಮತ್ತು ಇಸ್ಪೀಟ್ ಕಾರ್ಡ್ ಮಾರಾಟ ಮಾಡ್ತಿದ್ದಿನಿ ಎಂದು ಯೋಜನೆಯ ಫಲಾನುಭವಿ ಮಹಿಳೆಯೊಬ್ಬರು ಹೇಳಿದ್ದಾರೆ. ಈ ವೇಳೆ ಶಾಸಕ ದರ್ಶನ್ ಧ್ರುವನಾರಾಯಣ್ ಅರೆ ಕ್ಷಣ ಗಾಬರಿಯಾಗಿದ್ದಾರೆ. ಇಂದು ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ತಾಲ್ಲೂಕು ಸಮಿತಿ ಶಾಸಕ ದರ್ಶನ್ ಧ್ರುವನಾರಾಯಣ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಈ ವೇಳೆ ಗೃಹ ಲಕ್ಷ್ಮಿ ಯೋಜನೆಯ ಬಗ್ಗೆ ಇಂದಿರಾನಗರ ಗ್ರಾಮದ ಮಹಿಳೆ ಮಾತನಾಡಿದರು. ಗೃಹಲಕ್ಷ್ಮಿ ಹಣದಿಂದ ಪೆಟ್ಟಿ ಅಂಗಡಿ ಇಟ್ಟುಕೊಂಡು ಮನೆಯ ವ್ಯವಹಾರ ಮಾಡಿಕೊಂಡಿದ್ದೇನೆ. ಇದರಿಂದ ಬಂದ ಲಾಭದಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ಸಾಕಷ್ಟು ಸಹಾಯವಾಗಿದೆ. ಪೆಟ್ರೋಲ್ ಮತ್ತು ಇಸ್ಪೀಟ್ ಕಾರ್ಡ್ ಮಾರಾಟ ಮಾಡುತ್ತಿದ್ದೇನೆ ಎಂದ ಮಹಿಳೆ ಹೇಳಿದ್ದಾರೆ. ಈ ವೇಳೆ ಶಾಸಕ ದರ್ಶನ್ ಧ್ರುವನಾರಾಯಣ್ ಅರೆ ಕ್ಷಣ…

Read More

ವಿಜಯನಗರ : ಮದುವೆಯಾಗಲು ಯಾರೂ ಹೆಣ್ಣು ನೀಡುತ್ತಿಲ್ಲವೆಂದು ಮನನೊಂದ ಅಂಗವಿಕಲ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಮಾಡ್ಲಗೇರಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವಕನನ್ನು ಇಮಾಮ್ ಸಾಬ್ (35) ಎಂದು ತಿಳಿದುಬಂದಿದೆ.ಈತ ಪೋಲಿಯೋ ಪೀಡಿತನಾಗಿದ್ದು, ಎಡಗಾಲಿನ ವೈಕಲ್ಯ ಹೊಂದಿದ್ದ. ಪಾಲಕರು ಮದುವೆ ಮಾಡಿಸಲು ಪ್ರಯತ್ನ ನಡೆಸಿದರೂ ಹೆಣ್ಣು ನೀಡಲು ಯಾರೂ ಮುಂದೆ ಬಂದಿಲ್ಲ.ಇದರಿಂದ ಮನನೊಂದು ಕ್ರಿಮಿನಾಶಕ ಸೇವಿಸಿ ಮೃತಪಟ್ಟಿದ್ದಾನೆ.

Read More