Author: kannadanewsnow05

ಬೆಂಗಳೂರು : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ 2500 ನಿರ್ವಾಹಕ ಹುದ್ದೆಯ ನೇಮಕಾತಿ ಸಂಬಂಧ 371-ಜೆ (ಕಲ್ಯಾಣ ಕರ್ನಾಟಕ) ಮೀಸಲಾತಿಯಡಿ 212 ಅಭ್ಯರ್ಥಿಗಳನ್ನು ಆಯ್ಕೆಗೊಳಿಸಿದ್ದು, ಇಂದು ಸದರಿ ಅಭ್ಯರ್ಥಿಗಳಿಗೆ ಸಾರಿಗೆ ಮತ್ತು ಮುಜರಾಯಿ ಸಚಿವರು ನೇಮಕಾತಿ ಆದೇಶ ಪತ್ರಗಳನ್ನು ವಿತರಿಸುವ ಮೂಲಕ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿದರು. ಜಾಹೀರಾತುಪಡಿಸಿದ ಹುದ್ದೆಗಳ ಸಂಖ್ಯೆ 214 ಅದಕ್ಕೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಸಂಖ್ಯೆ 5410, ಶೇ. 30 ಹಾಗೂ ಅದಕ್ಕಿಂತ ಹೆಚ್ಚಿನ ಅಂಕ ಗಳಿಸಿದ ಅಭ್ಯರ್ಥಿಗಳ ಸಂಖ್ಯೆ 1334 ಅದರಲ್ಲಿ ಮೂಲ ದಾಖಲೆ/ದೇಹದಾರ್ಢ್ಯತೆ ಪರಿಶೀಲನೆ ನಡೆಸಿ, ಅಂತಿಮವಾಗಿ 212 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಸರ್ಕಾರವು 9000 ಹೊಸ ಹುದ್ದೆಗಳ ನೇಮಕಾತಿಗೆ ಅನುಮತಿ ನೀಡಿದ್ದು, ಅದರಂತೆ ಈಗಾಗಲೇ 2500 ನಿರ್ವಾಹಕ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಬಿಎಂಟಿಸಿ ಯಲ್ಲಿ ಕೊನೆಗೊಂಡಿದ್ದು, ನೇಮಕಾತಿ ಆದೇಶ ನೀಡುವುದು ಬಾಕಿಯಿದೆ. 2000 ಚಾಲಕ-ಕಂ- ನಿರ್ವಾಹಕ ಹುದ್ದೆಗಳ ನೇಮಕಾತಿ ಕೆ‌ಎಸ್ ಆರ್ ಟಿ ಸಿ ಯಲ್ಲಿ, 1000 ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ನಡೆಯುತ್ತಿದೆ.…

Read More

ಬೆಂಗಳೂರು : ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣಿಕರ ಓಡಾಟದಲ್ಲಿ ದಾಖಲೆ ನಿರ್ಮಿಸಿದ್ದು, ಒಂದೇ ದಿನ ಮೆಟ್ರೋದಲ್ಲಿ ಸಂಚರಿಸುವವರ ಸಂಖ್ಯೆ ಭಾರೀ ಏರಿಕೆ ಕಂಡಿದ್ದು, ಗರಿಷ್ಠ ಪ್ರಮಾಣ ತಲುಪಿದೆ. ಈ ವಿಷಯದ ಕುರಿತಾಗಿ ಬಿಎಂಆರ್‌ಸಿಎಲ್ ಮಾಹಿತಿಯನ್ನು ಹಂಚಿಕೊಂಡಿದ್ದು, ನಮ್ಮ ಮೆಟ್ರೋ’ ಪ್ರಯಾಣಿಕರ ಸಂಚಾರದಲ್ಲಿ ಹೊಸ ದಾಖಲೆ ನಿರ್ಮಾಣವಾಗಿದ್ದು, ಡಿ. 6 ರಂದು ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ 9.20 ಲಕ್ಷ ಕ್ಕೂ ಅಧಿಕ ಪ್ರಯಾಣಿಕರು ಸಂಚಾರ ಮಾಡುವ ಮೂಲಕ ಹೊಸ ದಾಖಲೆ ನಿರ್ಮಾಣವಾಗಿದೆ ಎಂದು ಬಿಎಂಆರ್‌ಸಿಎಲ್ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ನೀಡಿದೆ. ನೇರಳೆ ಮಾರ್ಗದಲ್ಲಿ 4,39,616 ಜನ ಪ್ರಯಾಣಿಸಿದ್ದು, ಹಸಿರು ಮಾರ್ಗದಲ್ಲಿ 3,12,248 ಜನ ಪ್ರಯಾಣಿಸಿದ್ದಾರೆ. ಕೆಂಪೇಗೌಡ ನಿಲ್ದಾಣದಿಂದ ಮಾರ್ಗ ಬದಲಿಸುವ ಮೂಲಕ 1,67,617 ಜನ ಪ್ರಯಾಣಿಸಿದ್ದಾರೆ.ಕಳೆದ ಆಗಸ್ಟ್ 14ರಂದು ನಮ್ಮ ಮೆಟ್ರೋದಲ್ಲಿ ಒಂದೇ ದಿನ ಬರೋಬ್ಬರಿ 9.17 ಲಕ್ಷ ಮಂದಿ ಸಂಚರಿಸುವ ಮೂಲಕ ದಾಖಲೆ ಸೃಷ್ಟಿಸಿತ್ತು. ಇದೀಗ ನಮ್ಮ ಮೆಟ್ರೋದಲ್ಲಿ 9.20 ಲಕ್ಷಕ್ಕೂ ಅಧಿಕ ಜನ ಪ್ರಯಾಣಿಸುವ ದಾಖಲೆಯನ್ನು ಮುರಿದಿದೆ.…

Read More

ಮುಂಬೈ : ಕಳೆದ ನವೆಂಬರ್ 27 ರಂದು ಪ್ರಧಾನಿ ಮೋದಿ ಅವರಿಗೆ ಬೆದರಿಕೆ ಸಂದೇಶ ಬಂದಿತ್ತು, ಇದರ ಬೆನ್ನಲ್ಲೇ ಇದೀಗ ಮೋದಿ ಅವರ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂದು ಮತ್ತೊಂದು ಸಂದೇಶ ಬಂದಿದೆ. ಬಾಂಬ್ ಸ್ಫೋಟದ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹತ್ಯೆ ನಡೆಸಬಹುದು ಎಂದು ಮುಂಬೈ ಟ್ರಾಫಿಕ್ ಪೊಲೀಸರಿಗೆ ಪಾಕಿಸ್ತಾನದ ಪ್ರಧಾನ ಸಂಸ್ಥೆಯಾದ ಐಎಸ್‌ಐ ಮಾಹಿತಿ ನೀಡಿದ್ದಾರೆ. ಹೌದು ಈ ಸಂದೇಶದಲ್ಲಿ ಇಬ್ಬರು ವ್ಯಕ್ತಿಗಳನ್ನು ಹೆಸರಿಸಲಾಗಿದ್ದು, ಅವರು ಪಾಕಿಸ್ತಾನದ ಐಎಸ್‌ಐ ಏಜೆಂಟ್‌ಗಳಾಗಿದ್ದಾರೆ ಎಂದು ಆರೋಪಿಸಲಾಗಿದೆ.ಪ್ರಧಾನಿ ಮೋದಿಗೆ ಜೀವ ಬೆದರಿಕೆ ಇದೆ ಎಂಬ ಮೆಸೇಜ್ ಮುಂಬೈ ಪೊಲೀಸರಿಗೆ ಈ ಮೊದಲು ಕೂಡ ಬಂದಿತ್ತು. ನವೆಂಬರ್ 27ರಂದು ಪೊಲೀಸರಿಗೆ ಅನಾಮಧೇಯ ಕರೆ ಬಂದಿದ್ದು, ಪ್ರಧಾನಿಯನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಲಾಗಿತ್ತು. ಕರೆ ಮಾಡಿದ್ದಾರೆ ಎನ್ನಲಾದ 34 ವರ್ಷದ ಮಹಿಳೆಯನ್ನು ವಶಕ್ಕೆ ಪಡೆಯಲಾಗಿದ್ದು, ಆಕೆಯ ಹಿನ್ನೆಲೆಯನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

Read More

ಬೆಳಗಾವಿ : ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆ, ಮಹಿಳೆಯರ ಜೀವನಕ್ಕೆ ಆಧಾರ ಆಗಬೇಕು ಎಂಬುದೇ ನನ್ನ ಉದ್ದೇಶ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಇಂದು ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ ಗ್ರಾಮದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ವತಿಯಿಂದ ಶನಿವಾರ ನಡೆದ ಮಹಿಳಾ ವಿಚಾರ ಗೋಷ್ಠಿ ಹಾಗೂ ಸಾಮಾನ್ಯ ಸಹಾಯ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಗೃಹಲಕ್ಷ್ಮೀ ಯೋಜನೆಯಿಂದ ಬರುವ ಹಣವನ್ನು ಸೇರಿಸಿ ಸ್ವಯಂ ಉದ್ಯೋಗ ಶುರುಮಾಡಿ ಆರ್ಥಿಕವಾಗಿ ಸಬಲರಾಗಬೇಕು ಎಂಬುದೇ ನನ್ನ ಬಯಕೆ ಎಂದರು. ಜೀವನ ಅಭಿವೃದ್ಧಿ ಆಗಬೇಕು, ಮಕ್ಕಳಿಗೆ ಶಿಕ್ಷಣ ಸಿಗಬೇಕು, ಎಲ್ಲರಿಗೂ ಆರೋಗ್ಯ ಸಿಗಬೇಕು ಎಂಬುದೇ ಗೃಹಲಕ್ಷ್ಮೀ ಯೋಜನೆಯ ಮೂಲ ಉದ್ದೇಶ.ಮಹಿಳೆಯರು ತಮ್ಮ ಆರೋಗ್ಯವನ್ನು ಚೆನ್ನಾಗಿ ಇಟ್ಟುಕೊಳ್ಳಬೇಕು, ಆರ್ಥಿಕ ಸಬಲೀಕರಣದ ಜೊತೆಗೆ ಸಮಾಜದ ಸ್ವಾಸ್ಥ್ಯ ಕಾಪಾಡಬೇಕು, ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಳ್ಳಬೇಕು, ಆತ್ಮವಿಶ್ವಾಸ ವೃದ್ಧಿಸಿಕೊಳ್ಳಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕರೆ ನೀಡಿದರು. ಧರ್ಮಸ್ಥಳ ಅಭಿವೃದ್ಧಿ ಸಂಘದ ಜೊತೆಗೆ…

Read More

ಬೆಂಗಳೂರು : ರಾಜ್ಯ ಬಿಜೆಪಿಯಲ್ಲಿ ಯಾವುದೇ ಬಣ ರಾಜಕೀಯ ಇಲ್ಲ. ಅಲ್ಲದೆ ಬಿವೈ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಸದ್ಯಕ್ಕೆ ಬದಲಾವಣೆ ಮಾಡಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ತಿಳಿಸಿದರು. ಇಂದು ಬೆಂಗಳೂರಿನ ಮಲ್ಲೇಶ್ವರಂ ಬಳಿ ಇರುವ ಬಿಜೆಪಿ ಕಚೇರಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆಯಿತು. ಸಭೆ ಅಂತ್ಯವಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸದ್ಯ ವಿಜಯೇಂದ್ರ ಸರಿ ಅನಿಸಿದ್ದಾರೆ. ಹೀಗಾಗಿ ಅವರಿಗೆ ನಾಯಕತ್ವ ನೀಡಲಾಗಿದೆ. ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜೇಂದ್ರ ಬದಲಾವಣೆ ಇಲ್ಲ ಎಂದು ಸ್ಪಷ್ಟನೆ ನೀಡಿದರು. ನಾಯಕತ್ವ ಬದಲಾಯಿಸುವ ಅಧಿಕಾರ ಇಬ್ಬರಿಗೆ ಮಾತ್ರ ಇದೆ. ಪಕ್ಷದ ಕಾರ್ಯಕರ್ತರಿಗೆ ಹಾಗೂ ಇನ್ನೊಂದು ಹೈಕಮಾಂಡ್ ಅವರಿಗೆ ನೇಮಕ ಮಾಡೋದು. ಬದಲಾಯಿಸುವುದು ಇಬ್ಬರು ಮಾತ್ರ.ಯಾರೋ ಹೇಳಿದರು ಅಂತ ಪಕ್ಷದ ನಾಯಕತ್ವ ಬದಲಿಸಲ್ಲ. ಯಾವಾಗ ಸರಿ ಅನಿಸುತ್ತೋ ಅವಾಗ ನಿರ್ಧಾರ ಕೈಗೊಳ್ಳುತ್ತೇವೆ. ರಾಜ್ಯ ಬಿಜೆಪಿಯಲ್ಲಿ ಯಾವುದೇ ಬಣ ರಾಜಕೀಯ ಇಲ್ಲ.…

Read More

ಬೆಂಗಳೂರು : ರಾಜ್ಯ ಬಿಜೆಪಿಯಲ್ಲಿ ಯಾವುದೇ ಬಣ ರಾಜಕೀಯ ಇಲ್ಲ. ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಗೆ ಶೋಕಾಸ್ ನೋಟಿಸ್ ನೀಡಲಾಗಿದೆ.ಆದರೆ ಶೋಕಾಸ್ ನೋಟಿಸ್ ಗೆ ಬಿಜೆಪಿ ಶಾಸಕ ಯತ್ನಾಳ್ ಉತ್ತರ ನೀಡಿಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ತಿಳಿಸಿದರು. ಇಂದು ಬೆಂಗಳೂರಿನ ಮಲ್ಲೇಶ್ವರಂ ಬಳಿ ಇರುವ ಬಿಜೆಪಿ ಕಚೇರಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆಯಿತು.ಸಭೆ ಅಂತ್ಯವಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿಯಲ್ಲಿ ಯಾವುದೇ ಬಣ ರಾಜಕೀಯ ಇಲ್ಲ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಆದರೆ ಶೋಕಾಸ್ ನೋಟಿಸ್ ಗೆ ಯತ್ನಾಳ್ ಇದುವರೆಗೂ ಉತ್ತರ ನೀಡಿಲ್ಲ ಎಂದು ತಿಳಿಸಿದರು. ಕಳೆದ ಹಲವು ದಿನಗಳಿಂದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಬೆಂಬಲಿಗರ ನಡುವೆ ಬಡ ಬಡಿದಾಟ ನಡೆದಿತ್ತು. ಈ ವಿಚಾರವಾಗಿ…

Read More

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಹಾಡು ಹಗಲೇ ಇಬ್ಬರು ಕತರ್ನಾಕ್ ಖದೀಮರು ಮಚ್ಚು ತೋರಿಸಿ ಯುವಕನನ್ನು ರಾಬರಿ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಕುಡುವತ್ತಿ-ಹುರಳಗುರ್ಕಿ ಬಳಿ ಈ ಒಂದು ಘಟನೆ ನಡೆದಿದೆ. ಯುವಕನ ರಾಬರಿ ಮಾಡುತ್ತಿರುವ ಘಟನೆಯನ್ನು ಸ್ಥಳಿಯರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಹೌದು ಹಾಡು ಹಗಲೇ ಮಚ್ಚು ತೋರಿಸಿ ಯುವಕನ ರಾಬರಿ ಮಾಡಿದ ಕಳ್ಳರು, ಮಚ್ಚು ತೋರಿಸಿ ರಾಬರಿ ಮಾಡಿದ ಕತರ್ನಾಕ್ ಕಳ್ಳರು. ಬೈಕ್ ನಲ್ಲಿ ಬಂದಂತಹ ಇಬ್ಬರು ದುಷ್ಕರ್ಮಿಗಳಿಂದ ಈ ಒಂದು ಕೃತ್ಯ ನಡೆದಿದೆ. ರಾಬ್ರಿ ಮಾಡುತ್ತಿರುವ ವಿಡಿಯೋ ಇವನು ಸ್ಥಳೀಯರು ಸೆರೆ ಹಿಡಿದಿದ್ದಾರೆ. ಈ ಇಬ್ಬರು ಕಳ್ಳರು ರಾಬರಿ ಮಾಡಿ ಮುದ್ದೇನಹಳ್ಳಿ ಆಸ್ಪತ್ರೆಯ ಬಳಿ ಬಂದಿದ್ದರು. ನಂದಿನಿ ಪಾರ್ಲರ್ ಟೀ ಕುಡಿಯಲು ಬೈಕ್ ನಿಲ್ಲಿಸಿದ್ದರು. ಈ ವೇಳೆ ಮೊಬೈಲ್ ನಲ್ಲಿ ವಿಡಿಯೋ ನೋಡಿದ ಸ್ಥಳೀಯರು ಇವರೇ ಆ ರಾಬರಿ ಮಾಡಿದ ಕಳ್ಳರು ಎಂದು ಅವರನ್ನು ಹಿಡಿಯಲು ಯತ್ನಿಸಿದಾಗ, ಅವರನ್ನು ಕೂಡ ಹೆದರಿಸಿ ಕಳ್ಳರು ಅಲ್ಲಿಂದ ಪರಾರಿಯಾಗಿದ್ದಾರೆ. ಘಟನೆಗೆ…

Read More

ಚಿಕ್ಕಮಗಳೂರು : ತನ್ನನ್ನು ಬಿಟ್ಟು ಮತ್ತೆ ಗಂಡನ ಜೊತೆ ಹೋಗಿದ್ದಕ್ಕೆ ಪ್ರಿಯಕರನೊಬ್ಬ, ಗೃಹಿಣಿಯೊಬ್ಬಳನ್ನು ಆಕೆಯ ಇಬ್ಬರು ಮಕ್ಕಳ ಮುಂದೆನೆ ಚಾಕುವಿನಿಂದ ಭೀಕರವಾಗಿ ಕೊಂದು, ಮನೆಯ ಹಿಂದೆ ಇರುವ ಕೃಷಿ ಹೊಂಡದಲ್ಲಿ ಮೃತ ದೇಹವನ್ನು ಎಸೆದು ಪರಾರಿಯಾಗಿರುವ ಘಟನೆ ಚಿಕ್ಕಮಂಗಳೂರು ಜಿಲ್ಲೆಯ ಎನ್. ಆರ್. ಪುರ ತಾಲೂಕಿನ ಕಿಚ್ಚೆಬ್ಬಿ ಗ್ರಾಮದಲ್ಲಿ ನಡೆದಿದೆ. ಹೌದು ಚಿಕ್ಕಮಂಗಳೂರಿನ ಕಿಚಬ್ಬಿಯಲ್ಲಿ ಗೃಹಿಣಿಯ ಬರ್ಬರ ಹತ್ಯೆಯಾಗಿದೆ. ಕೊಲೆಯಾದ ಗೃಹಿಣಿಯನ್ನು ತೃಪ್ತಿ ಎಂದು ತಿಳಿದುಬಂದಿದೆ. ಎನ್ ಆರ್ ಪುರ ತಾಲೂಕಿನ ಕಿಚ್ಚಬಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಫೇಸ್ಬುಕ್ ಪ್ರಿಯಕರ ಚಿರಂಜೀವಿ ಎಂಬಾತನಿಂದ ಈ ಒಂದು ಭೀಕರ ಕೊಲೆ ನಡೆದಿದೆ. ಮನೆ ಒಳಗೆ ಕೊಂದು ಕೃಷಿಹೊಂಡಕ್ಕೆ ಮೃತ ದೇಹವನ್ನು ಎಸೆದಿದ್ದಾನೆ. ತೃಪ್ತಿಗೆ ಫೇಸ್ಬುಕ್ ನಲ್ಲಿ ಚಿರಂಜೀವಿ ಪರಿಚಯವಾಗಿದ್ದ ಬಳಿಕ ಇಬ್ಬರ ನಡುವೆ ಪ್ರೀತಿ ಹುಟ್ಟಿ, ತಿಂಗಳ ಹಿಂದೆಯೇ ಚಿರಂಜೀವಿ ಜೊತೆಗೆ ತೃಪ್ತಿ ಪರಾರಿಯಾಗಿದ್ದಳು. ಗಂಡನ ಬಿಟ್ಟು ಪ್ರಿಯಕರನ ಜೊತೆ ತೃಪ್ತಿ ಓಡಿ ಹೋಗಿದ್ದಳು. ಈ ಬಗ್ಗೆ ಬಾಳೆಹೊನ್ನೂರು ಠಾಣೆಯಲ್ಲಿ…

Read More

ಮೈಸೂರು : ಮೈಸೂರು ಜಿಲ್ಲೆಯ ಪ್ರವಾಸಕ್ಕೆ ಎಂದು ತಮಿಳುನಾಡು ಮೂಲದ ಕಾಲೇಜು ವಿದ್ಯಾರ್ಥಿಗಳ ತಂಡ ಬಂದು ಆಗಮಿಸಿತ್ತು. ಈ ವೇಳೆ ವಿದ್ಯಾರ್ಥಿ ಒಬ್ಬ ಬಸ್ ಬಾಗಿಲ ಬಳಿ ನಿಂತಾಗ ಡೋರ್ ಲಾಕ್ ಮಾಡದೆ ಇದ್ದಿದ್ದರಿಂದ, ಆಯತಪ್ಪಿ ಕೆಳಗೆ ಬಿದ್ದು ಸಾವನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದೆ. ತಮಿಳುನಾಡು ಮೂಲದ ದೀನಾ ದಯಾಳ್ (21) ಎಂಬ ವಿದ್ಯಾರ್ಥಿ ಮೃತ ದುರ್ದೈವಿ ಎನ್ನಲಾಗಿದೆ. ಬೈಲುಕೊಪ್ಪೆ ಗೋಲ್ಡನ್ ಟೆಂಪಲ್ ವೀಕ್ಷಿಸಲು ಹೋಗುವಾಗ ಈ ಒಂದು ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೈಲುಕುಪ್ಪೆ ಗೋಲ್ಡನ್ ಟೆಂಪಲ್ ನೋಡಲು ತೆರಳುವ ವೇಳೆ ಈ ಘಟನೆ ನಡೆದಿದೆ. ಬಸ್ ಡೋರ್ ಲಾಕ್ ಆಗದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ. ಕೆಳಗೆ ಬಿದ್ದ ಪರಿಣಾಮ ಬಲವಾದ ಪೆಟ್ಟು ಬಿದ್ದು ದೀನಾ ದಯಾಳ್ ಸಾವನಪ್ಪಿದ್ದಾನೆ. ಘಟನೆ ಕುರಿತಂತೆ ಬೆಲುಕುಪ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಹೊಸ ವರ್ಷಾಚರಣೆ ಸಮೀಪಿಸುತ್ತಿದ್ದಂತೆ ಬೆಂಗಳೂರಿನಲ್ಲಿ ಪೊಲೀಸರು ಹಾಗೂ ಸಿಸಿಬಿ ಅಧಿಕಾರಿಗಳು ಫುಲ್ ಅಲರ್ಟ್ ಆಗಿದ್ದು, ಡ್ರಗ್ಸ್ ವಿರುದ್ಧ ಸಮರ ಸಾರಿದ್ದಾರೆ. ಹಾಗಾಗಿ ಇಂದು ಬೆಂಗಳೂರಿನ ಸಂಪಂಗಿರಾಮನಗರದಲ್ಲಿ ವಿವಿಧ ಕೊರಿಯರ್ ಏಜೆನ್ಸಿ ಹಾಗೂ ಅಂಚೆ ಕಚೇರಿಯ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದರು. ಇಂದು ಬೆಂಗಳೂರು ನಗರದ ವಿವಿಧೆಡೆ ವಿಶೇಷ ಕಾರ್ಯಾಚರಣೆ ನಡೆಸಿದರು. ಬೆಂಗಳೂರಿನ ಕೊರಿಯರ್​ ಏಜೆನ್ಸಿ ಮತ್ತು ಅಂಚೆ ಕಚೇರಿಗಳಲ್ಲಿ ಪರಿಶೀಲನೆ ನಡೆಸಿದ್ದಾರೆ. ಸಂಪಂಗಿ ರಾಮನಗರದ ಕೊರಿಯರ್​ ಏಜೆನ್ಸಿಯಲ್ಲಿ ಸಿಸಿಬಿ ಮತ್ತು ಶ್ವಾನದಳ ಪಾರ್ಸೆಲ್​ಗಳ ಪರಿಶೀಲನೆ ನಡೆಸಿತು. ಅಲ್ಲದೆ ಅಂಚೆ ಕಚೇರಿಗಳಲ್ಲೂ ಕೂಡ ಮಾದಕ ವಸ್ತುಗಳು ಪಾರ್ಸೆಲ್ ಬರುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಅಲ್ಲೂ ಕೂಡ ದಾಳಿ ಮಾಡಿ ಪರಿಶೀಲನೆ ನಡೆಸಿದರು. ಈ ವಿಚಾರವಾಗಿ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಚಂದ್ರಗುಪ್ತ ಮಾತನಾಡಿ, ವಿದೇಶದಿಂದ ಬರುತ್ತಿದ್ದ ಪಾರ್ಸಲ್‌ಗಳಲ್ಲಿ ಡ್ರಗ್ಸ್​ ಪತ್ತೆಯಾಗಿತ್ತು. ಹೀಗಾಗಿ, ಒಟ್ಟು ಏಳು ಕಡೆ ಪರಿಶೀಲನೆ ನಡೆಸಲಾಗಿದೆ. ಹೊಸ ವರ್ಷ ಹಿನ್ನೆಲೆ ಡ್ರಗ್ಸ್ ಹೆಚ್ಚಾಗಿ ಪೂರೈಸುತ್ತಿರುವ ಮಾಹಿತಿ ಇದೆ.…

Read More