Subscribe to Updates
Get the latest creative news from FooBar about art, design and business.
Author: kannadanewsnow05
ತುಮಕೂರು : ಇಂದು ತುಮಕೂರಿನಲ್ಲಿ ಎರಡು ಪ್ರತ್ಯೇಕ ಅಪಘಾತವಾಗಿದ್ದು, 7 ವರ್ಷದ ಬಾಲಕಿ ಸೇರಿದಂತೆ ಇಬ್ಬರು ಬೈಕ್ ಸವಾರರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೌದು ತುಮಕೂರು ಜಿಲ್ಲೆಯ ಮಧುಗಿರಿ ಹೊರವಲಯದ ಜಡೆಗೊಂಡನಹಳ್ಳಿಯಲ್ಲಿ ಎರಡು ಬೈಕ್ ಗಳ ಮಧ್ಯ ಮುಖಮುಖಿ ಡಿಕ್ಕಿ ಹೊಡೆದ ಪರಿಣಾಮ ಅಪಘಾತದಲ್ಲಿ ತೆರೆಯೂರಿನ ಗೌತಮ್ (26) ಬಂದರೆಯ ಅನಿಲ್ (26) ಸಾವನಪ್ಪಿದ್ದಾರೆ. ಅಪಘಾತದ ಕುರಿತು ತುಮಕೂರು ಜಿಲ್ಲೆಯ ಮಧುಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ಡಿವೈಡರ್ ಗೆ ಹುಂಡೈ ಕಾರು ಡಿಕ್ಕಿ ಹೊಡೆದು ಶಾಲಿನಿ (7) ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ತಾಲೂಕಿನಲ್ಲಿ ಈ ಒಂದು ಅಪಘಾತ ನಡೆದಿದೆ. ಬಸವೇಶ್ (16) ಗೆ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನಲ್ಲಿ ನಡೆದಂತಹ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ, ತೆಲುಗು ನಟಿ ಹೇಮಾ ಅವರನ್ನು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. ಆದರೆ ಇದೀಗ ಪ್ರಕರಣಕ್ಕೆ ಸ್ಪೋಟಕ ತಿರುವು ಸಿಕ್ಕಿದ್ದು, ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿರುವ ಚಾರ್ಜ ಶೀಟ್ ನಲ್ಲಿ ಹೇಮಾ ಮಾದಕ ದ್ರವ್ಯ ಸೇವಿಸಿದ್ದನ್ನು ಉಲ್ಲೇಖಿಸಿದ್ದಾರೆ. ಹೌದು ಬೆಂಗಳೂರು ರೇವ್ ಪಾರ್ಟಿ ಪ್ರಕರಣದ ಬಗ್ಗೆ ಪೊಲೀಸರು ಇತ್ತೀಚೆಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಅದರಲ್ಲಿ ನಟಿ ಹೇಮಾ ಸೇರಿದಂತೆ ಒಟ್ಟು 88 ಮಂದಿಯನ್ನು ಆರೋಪಿಗಳೆಂದು ಹೆಸರಿಸಲಾಗಿದೆ. ಹೇಮಾ ಅವರಿಗೆ ಆಘಾತ ನೀಡುವಂತೆ ಅವರು ಮಾದಕ ವಸ್ತುಗಳನ್ನು ಸೇವಿಸಿದ್ದಾರೆ ಎಂದು ಪೊಲೀಸರು ಚಾರ್ಜ್ ಶೀಟ್ನಲ್ಲಿ ಉಲ್ಲೇಖಿಸಿದ್ದಾರೆ.ಒಟ್ಟು 1000 ಕ್ಕೂ ಹೆಚ್ಚು ಪುಟಗಳ ಚಾರ್ಜ್ ಶೀಟ್ ಅನ್ನು ಪೊಲೀಸರು ಸಲ್ಲಿಸಿದ್ದಾರೆ. ಹೇಮಾ ಬಳಸಿದ ಮಾದಕ ವಸ್ತುಗಳ ಬಗ್ಗೆಯೂ ಪೊಲೀಸರು ಚಾರ್ಜ್ ಶೀಟ್ನಲ್ಲಿ ಉಲ್ಲೇಖಿಸಿದ್ದಾರೆ. ಚಾರ್ಜ್ ಶೀಟ್ ಸಲ್ಲಿಕೆ ಬಗ್ಗೆ ಹೇಮಾ ಇತ್ತೀಚೆಗೆ ತನ್ನ ವಿವರಣೆ ನೀಡುತ್ತಾ ಒಂದು ವಿಡಿಯೋ ಬಿಡುಗಡೆ ಮಾಡಿದ್ದಾರೆ. ನನ್ನ…
ಮಂಡ್ಯ : ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ವೇಳೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಈದ್ ಮಿಲಾದ್ ಮೆರವಣಿಗೆ ತಡೆಯಲು ಶರಣ್ ಪಂಪ್ವೆಲ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು.ಅದಕ್ಕೆ ಮುಸ್ಲಿಂ ಮುಖಂಡರು ಕೂಡ ತಾಕತ್ತಿದ್ದರೆ ಮೆರವಣಿಗೆ ತಡೆಯಿರಿ ಎಂದು ಸವಾಲು ಹಾಕಿದ್ದರು. ಇದೀಗ ಬಜರಂಗದಳದ ವಿಭಾಗದ ಸಂಯೋಜಕ ಪುನೀತ್ ಅತ್ತಾವರ್, ಜಿಹಾದಿಗಳೇ ನಾವು ಬರುತ್ತಿದ್ದೇವೆ, ತಾಕತ್ತಿದ್ದರೆ ನಮ್ಮನ್ನು ತಡೆಯಿರಿ ಎಂದು ಪ್ರತಿ ಸವಾಲು ಹಾಕಿದ್ದಾರೆ. ಹೌದು ಶರಣ್ ಪಂಪ್ ವೆಲ್ ಗೆ ಮುಸ್ಲಿಂ ಮುಖಂಡರ ಸವಾಲು ಹಾಕಿದ ಹಿನ್ನೆಲೆಯಲ್ಲಿ ನಾಳೆ ಬಜರಂಗದಳ ಬಿಸಿ ರೋಡ್ ಚಲೋಗೆ ಕರೆ ನೀಡಿದೆ. ನಾಳೆ ಈದ್ ಮಿಲಾದ್ ಹಿನ್ನೆಲೆಯಲ್ಲಿ ಬಿಸಿ ರೋಡ್ ಚಲೋಗೆ ಬಜರಂಗದಳ ಇದೀಗ ಕರೆ ನೀಡಿದೆ. ಈ ಕುರಿತು ಪುನೀತ್ ಫೇಸ್ಬುಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಬಜರಂಗದಳ ವಿಭಾಗ ಸಂಯೋಜಕ ಪುನೀತ್ ಅತ್ತಾವರ ಈ ಕುರಿತು ಪೋಸ್ಟ್ ಮಾಡಿದ್ದು ನಾಳೆ ಬೆಳಿಗ್ಗೆ ಬಿಸಿ ರೋಡಿಗೆ ಬರೋದಾಗಿ ಪುನೀತ್ ಪ್ರತಿ ಸವಾಲು ಹಾಕಿದ್ದಾರೆ.…
ಬೆಳಗಾವಿ : ಸರಣಿ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು ಆರು ಜನರಿಗೆ ಗಂಭೀರವಾದಂತಹ ಗಾಯಗಳಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಸ್ಥವನಿಧಿ ಘಾಟ್ ನಲ್ಲಿ ಈ ಒಂದು ಭೀಕರ ಸರಣಿ ಅಪಘಾತ ನಡೆದಿದೆ. ಹೌದು ಸ್ಥವನಿಧಿ ಘಾಟ್ ನಲ್ಲಿ ಸರಣಿ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಘಾಟ್ ಬಳಿ 8 ವಾಹನಗಳ ನಡುವೆ ಸರಣಿ ಅಪಘಾತವಾಗಿದೆ. ಅಪಘಾತದಲ್ಲಿ ಇಬ್ಬರು ದುರ್ಮರಣ ಹೊಂದಿದ್ದು ಆರು ಜನರಿಗೆ ಗಾಯಗಳಾಗಿವೆ. ಗಾಯಗೊಂಡಿರುವ 6 ಜನರಿಗೆ ನಿಪ್ಪಾಣಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಂಟೇನರ್ ಚಾಲಕನ ನಿರ್ಲಕ್ಷ್ಯದಿಂದ ಈ ಒಂದು ಅಪಘಾತ ಸಂಭವಿಸಿದೆ. 3 ಕಾರು, 2 ಲಾರಿ, 1 ಕಂಟೇನರ್ ಹಾಗೂ ಬೈಕ್ ಗೆ, ಕಂಟೇನರ್ ಡಿಕ್ಕಿ ಹೊಡೆದಿದೆ. ಓರ್ವ ಬೈಕ್ ಸವಾರ ಹಾಗೂ ಕಾರಿನಲ್ಲಿದ್ದ ಓರ್ವ ಪ್ರಯಾಣಿಕ ಈ ಅಪಘಾತದಲ್ಲಿ ಸಾವನ್ನಪ್ಪಿದ್ದು, ನಿಪ್ಪಾಣಿ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಓದುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿ ಇದೀಗ ನಿಫಾ ವೈರಸ್ ಗೆ ಬಲಿಗಾಗಿದ್ದಾನೆ ಎಂದು ತಿಳಿದುಬಂದಿದೆ. ಕೇರಳದ ಮಲಪುರಂ ಮೂಲದ 24 ವರ್ಷದ ವಿದ್ಯಾರ್ಥಿ ನಿಫಾ ವೈರಸ್ ಗೆ ಸಾವನ್ನಪ್ಪಿರುವ ಘಟನೆ ಇದೀಗ ವರದಿಯಾಗಿದೆ. ಕಾಲಿಗೆ ಗಾಯ ವಾಗಿದ್ದರಿಂದ ಆಗಸ್ಟ್ 25ರಂದು ಬೆಂಗಳೂರಿನಿಂದ ವಿದ್ಯಾರ್ಥಿ ಕೇರಳಕ್ಕೆ ತೆರಳಿದ್ದಾನೆ. ಸೆಪ್ಟೆಂಬರ್ 5 ರಂದು ಜ್ವರ ಬಂದಿದ್ದರಿಂದ ಕ್ಲಿನಿಕ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಸೆಪ್ಟೆಂಬರ್ 6ರಂದು ವಾಂತಿ, ಸೆಪ್ಟೆಂಬರ್ 7ರಂದು ಆತನ ಆರೋಗ್ಯ ಗಂಭೀರವಾಗಿದೆ. ತಕ್ಷಣ ಖಾಸಗಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಿ ವಿದ್ಯಾರ್ಥಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಐಸಿಯುನಲ್ಲಿ ವಿದ್ಯಾರ್ಥಿ ಚಿಕಿತ್ಸೆ ಪಡೆಯುತ್ತಿದ್ದವನು, ಇದೀಗ ನಿಫಾಗೆ ಬಲಿಯಾಗಿದ್ದಾನೆ. ಸೆಪ್ಟೆಂಬರ್ 8ರಂದು ನಿಫಾ ಸೊಂಕಿಗೆ ವಿದ್ಯಾರ್ಥಿ ಬಲಿಯಾಗಿದ್ದಾನೆ. ಮೃತ ವಿದ್ಯಾರ್ಥಿಯ ಬ್ಲಡ್ ಸ್ಯಾಂಪಲ್ ನಲ್ಲಿ ನೀಫಾ ಪಾಸಿಟಿವ್ ಎಂದು ದೃಢಪಟ್ಟಿದೆ.
ಮಂಡ್ಯ : ಈಗಾಗಲೇ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಗಣಪತಿ ವಿಸರ್ಜನೆ ವೇಳೆ ನಡೆದ ಗಲಭೆ ರಾಜ್ಯಾದ್ಯಂತ ಸುದ್ದಿಯಾಗುತ್ತಿರುವ ಬೆನ್ನಲ್ಲೇ, ಇದೀಗ ಪೊಲೀಸ್ ಅಧಿಕಾರಿಯ ನವವಿವಾಹಿತ ಮಗಳು ಡೆತ್ ನೋಟ್ ಬರೆದಿಟ್ಟು, ಮೊಬೈಲ್ ಫೋನ್, ಮಾಂಗಲ್ಯ ಸರವನ್ನು ಬಿಚ್ಚಿಟ್ಟು ಮನೆಯಿಂದ ನಾಪತ್ತೆಯಾಗಿರುವ ಘಟನೆ ನಡೆದಿದೆ. ಹೌದು ಜಿಲ್ಲೆಯ ಶಂಕರ ನಗರದಮಹಿಳಾ ಠಾಣೆ ಸಹಾಯಕ ಸಬ್ ಇನ್ಸ್ಪೆಕ್ಟರ್ (ASI) ಮಗಳು ಡೆತ್ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದಾಳೆ. ನಾಪತ್ತೆ ಆಗಿರುವ ಗೃಹಿಣಿಯನ್ನು ಅನುಷಾ (24) ಎಂದು ಹೇಳಲಾಗಿದೆ. ಇವರನ್ನು ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಬೆಂಗಳೂರಿನ ಬಿದರಹಳ್ಳಿ ನಿವಾಸ್ ದಿನೇಶ್ ಕುಮಾರ್ ಜೊತೆ ವಿವಾಹ ಮಾಡಿಕೊಡಲಾಗಿತ್ತು. ಆದರೆ ಗಂಡನ ಮನೆಯವರು ಅನುಷಾಗೆ ಕಿರುಕುಳ ನೀಡುತ್ತಿದ್ದರು. ಪತಿಯ ಕಿರುಕುಳಕ್ಕೆ ಬೇಸತ್ತ ಅನುಷಾ, ಗಂಡ ದಿನೇಶ್, ನಾದಿನಿ ರಂಜಿನಿ, ಭಾವ ರಾಜೇಶ್ ಹಾಗೂ ಅತ್ತೆ ಕಾಂತಮ್ಮ ನನ್ನ ಸಾವಿಗೆ ಕಾರಣರೆಂದು ಡೆತ್ನೋಟ್ ಬೆದಿಟ್ಟಿದ್ದಾರೆ. ಇನ್ನು ಡೆತ್ ನೋಟ್ ಪಕ್ಕದಲ್ಲಿ ತಾನು ಬಳಸುತ್ತಿದ್ದ ಮೊಬೈಲ್ ಹಾಗೂ ಗಂಡ ಕಟ್ಟಿದ್ದ ತಾಳಿಯನ್ನು…
ಮಂಡ್ಯ : ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮೂಲದ ಇಬ್ಬರನ್ನು ಬಂಧಿಸಲಾಗಿದೆ ಎಂದು ಸಚಿವ ಚೆಲುವರಾಯ ಸ್ವಾಮಿ ಸ್ಪಷ್ಟನೆ ನೀಡಿದರು. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಗಮಂಗಲ ಗಲಭೆಯಲ್ಲಿ ಸಂಬಂಧ ಅಲ್ಲೇ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಕೇರಳ ಮೂಲದವರನ್ನು ಘಟನೆಯಲ್ಲಿ ಭಾಗಿಯಾಗಿದ್ದಾರೆ ಎಂದು ಬಂಧಿಸಲಾಗಿದೆ. ಹಾಗಂತ ಕೇರಳದವರು ಗಲಭೆಗೆ ಬಂದು ಹೋಗಿದ್ದಾರೆ ಎಂದಲ್ಲ. ಗಲಭೆ ಸಂಬಂಧ ಸಂಪೂರ್ಣವಾಗಿ ವರದಿ ತರಿಸಿಕೊಳ್ಳೋಣ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು. ಗಣೇಶಮೂರ್ತಿ ನಿಮಜ್ಜನ ಮೆರವಣಿಗೆ ಎರಡು ಕೋಮುಗಳ ನಡುವೆ ಘರ್ಷಣೆ ಆಗಲಿಕ್ಕೆ ಅವಕಾಶವಾಗಿದೆ. ನಾಳೆ ಕೂಡ ಮುಸ್ಲಿಂ ಹಬ್ಬ ಈದ್ ಮಿಲಾದ್ ಇದೆ. ಅಂಗಡಿಗಳಿಗೆ ಬೆಂಕಿ ಹಾಕಿದ್ದು ಮತ್ತು ಕಲ್ಲು ತೂರಲು ಮೊದಲು ಪ್ರಾರಂಭ ಮಾಡಿದ್ದು ಯಾರು ಎಂಬ ಮಾಹಿತಿ ಬೇಕಾಗುತ್ತದೆ. ಒಟ್ಟಾರೆ ಎರಡೂ ಕೋಮಿನವರು ಒಟ್ಟಾಗಿ ಎಲ್ಲಾ ಹಬ್ಬಗಳನ್ನು ಮಾಡಬೇಕೆಂಬ ತೀರ್ಮಾನವನ್ನು ಸಭೆಯಲ್ಲಿ ತೆಗೆದುಕೊಂಡಿದ್ದೇವೆ ಎಂದು ತಿಳಿಸಿದರು.
ಮೈಸೂರು : ಪತಿ ಬೇರೆ ಮಹಿಳೆಯೊಂದಿಗೆ ಸಲುಗೆಯಿಂದ ಇದ್ದಿದ್ದನ್ನು ನೋಡಿ ಪತ್ನಿ ಇದಕ್ಕೆ ವಿರೋಧಿಸಿದ್ದಾಳೆ. ಇದೇ ವಿಚಾರಕ್ಕೆ ಆಗಾಗ ಪತಿ-ಪತ್ನಿ ಮಧ್ಯ ಗಲಾಟೆ ನಡೆಯುತ್ತಿತ್ತು. ಆದರೆ ಇಂದು ಗಲಾಟೆ ವಿಕೋಪಕ್ಕೆ ತಿರುಗಿ, ಪತಿ ಪತ್ನಿಯನ್ನು ಮಚ್ಚಿನಿಂದ ಭೀಕರವಾಗಿ ಕೊಲೆ ಮಾಡಿ, ಠಾಣೆಗೆ ಬಂದು ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಬೆಂಕಿಪುರ ಗ್ರಾಮದಲ್ಲಿ ನಡೆದಿದೆ. ಹೌದು ಮಚ್ಚಿನಿಂದ ಕೊಚ್ಚಿ ಪತ್ನಿಯನ್ನು ಕೊಲೆಗೈದು ಪೊಲೀಸರಿಗೆ ಶರಣಾಗಿರುವ ಘಟನೆ ಬೆಂಕಿಪುರದಲ್ಲಿ ನಡೆದಿದೆ. ಪತ್ನಿ ರೋಜಾ (37) ಹತ್ಯೆಗೈದ ಪತಿ ಸ್ವಾಮಿನಾಯ್ಕ್. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಬೆಂಕಿಪುರ ಗ್ರಾಮದಲ್ಲಿ ಈ ಒಂದು ಕೊಲೆ ನಡೆದಿದೆ ಮತ್ತೊಬ್ಬ ಮಹಿಳೆಯ ಜೊತೆ ಸ್ವಾಮಿ ನಾಯ್ಕ್ ಸಲುಗೆಯಿಂದ ಇದ್ದ. ಇದೇ ವಿಚಾರಕ್ಕೆ ದಂಪತಿಯ ನಡುವೆ ಆಗಾಗ ಜಗಳವಾಗುತ್ತಿತ್ತು. ಇಂದು ಮಧ್ಯಾಹ್ನ ಮಚ್ಚಿನಿಂದ ಕೊಚ್ಚಿ ಪತ್ನಿ ರೋಜಾಳನ್ನು ಸ್ವಾಮೀ ನಾಯಕ್ ಕೊಲೆ ಬಳಿಕ, ಬಿಳಿಕೆರೆ ಠಾಣೆಗೆ ಬಂದು ಶರಣಾಗಿದ್ದಾನೆ. ಈ ಬಗ್ಗೆ ಬಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತುಮಕೂರು : ಗಣೇಶ ಹಬ್ಬದ ಸಂದರ್ಭದಲ್ಲಿ ಗಣೇಶ ಮೂರ್ತಿಯ ವಿಸರ್ಜನೆ ವೇಳೆ ಎಷ್ಟೇ ಎಚ್ಚರಿಕೆಯಿಂದ ಇದ್ದರೂ ಕೂಡ ದುರಂತಗಳು ಸಂಭವಿಸುತ್ತವೆ. ಇದೀಗ ಇಂತಹದ್ದೇ ಘಟನೆ ತುಮಕೂರಿನಲ್ಲಿ ನಡೆದಿದ್ದು, ಗಣೇಶ ಮೂರ್ತಿ ವಿಸರ್ಜನೆಯ ವೇಳೆ ತಂದೆ ಮಗ ಸೇರಿದಂತೆ ಒಟ್ಟು ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೌದು ಗಣೇಶ ವಿಸರ್ಜನೆ ವೇಳೆ ತಂದೆ ಮಗ ಸೇರಿ ಮೂವರ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾರಸಂದ್ರ ಸಮೀಪದ ರಂಗನ ಹಟ್ಟಿ ಕೆರೆಯಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ತಂದೆ ರೇವಣ್ಣ (46) ಪುತ್ರ ಶರತ್ (26) ಹಾಗೂ ದಯಾನಂದ ಮೃತ ದುರ್ದೈವಿಗಳು ಎಂದು ತಿಳಿದುಬಂದಿದ್ದು, ಸದ್ಯ ಶವಗಳಿಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳದಲ್ಲಿ ಬೀಡು ಬಿಟ್ಟಿದ್ದು, ಶೋಧ ಕಾರ್ಯ ಮುಂದುವರಿದಿದೆ. ಸ್ಥಳಕ್ಕೆ ದಂಡಿನಯಿವರ ಠಾಣೆಯ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ಮಂಡ್ಯ : ಮಂಡ್ಯ ಜಿಲ್ಲೆ ನಾಗಮಂಗಲ ಪಟ್ಟಣದಲ್ಲಿ ಗಣೇಶ ವಿಸರ್ಜನೆ ವೇಳೆ ಕೋಮುಗಲಭೆ ನಡೆದಿತ್ತು. ಮುಸ್ಲಿಮರು ಮೆರವಣಿಗೆ ವೇಳೆ ಕಲ್ಲುತೂರಿದ್ದರು. ಅಲ್ಲದೇ, ಕೆಲ ಅಂಗಡಿಗಳಿಗೂ ಬೆಂಕಿ ಹಾಕಲಾಗಿತ್ತು. ಇದೀಗ ಈ ಒಂದು ಗಲಭೆಗೆ ಸ್ಪೋಟಕವಾದಂತಹ ಟ್ವಿಸ್ಟ್ ಸಿಕ್ಕಿದ್ದು ಗಳಭೆಗು ಮುನ್ನ ಕಿಡಿಗೇಡಿಗಳು ಸಿಸಿಟಿವಿ ಗಳನ್ನು ಒಡೆದು ಹಾಕುತ್ತಿರುವ ದೃಶ್ಯ ಸೆರೆಯಾಗಿದೆ. ಹೌದು ನಾಗಮಂಗಲದಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಸಿಸಿಟಿವಿಯಲ್ಲಿ ಬೆಚ್ಚಿ ಬೀಳಿಸುವಂತಹ ದೃಶ್ಯ ಸೆರೆಯಾಗಿದೆ. ಅಂಗಡಿಗಳಿಗೆ ಬೆಂಕಿ ಹಚ್ಚುವ ಮುನ್ನ ಸಿಸಿಟಿವಿಗಳನ್ನು ದ್ವಂಸ ಮಾಡಲಾಗಿದೆ. ಹಾರೆಯಿಂದ ಸಿಸಿಟಿವಿ ಒಡೆದು ಹಾಕಿದ್ದಾರೆ. ಬೆಂಕಿ ಹಚ್ಚುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಬಾರ್ದು ಎಂದು ಕಿಡಿಗೇಡಿಗಳು ಕಳ್ಳಾಟ ನಡೆಸಿದ್ದಾರೆ. ಕಟ್ಟಡದ ಪಕ್ಕವೇ ಓಡಿ ಹೋಗುತ್ತಿದ್ದ, ಯುವಕರ ಗುಂಪಿನಲ್ಲಿ ಅಂಗಡಿ ಮುಂಭಾಗ ಓಡಿ ಬಂದ ಗುಂಪಿನಲ್ಲಿ ಇಬ್ಬರು ಇದ್ದಿದ್ದು ಕಂಡು ಬಂದಿದ್ದು, ಹಾರೆ ತೆಗೆದುಕೊಂಡು ಸಿಸಿಟಿವಿ ಒಡೆದು ಹಾಕುತ್ತಿರು ಮತ್ತು ಕೃತ್ಯ ಎಸಗುವಾಗ ಮುಖಕ್ಕೆ ಮಸ್ಕ್ ಕಟ್ಟಿಕೊಂಡಿರುವ ದೃಶ್ಯ ಇದೀಗ ಸೆರೆಯಾಗಿದೆ. ಹಾಗಾಗಿ ಇದು ಗಲಭೆ ಫ್ರೀ ಪ್ಲಾನ್…