Author: kannadanewsnow05

ಬೆಂಗಳೂರು : ರಾಜ್ಯಾದ್ಯಂತ ಬಿಪಿಎಲ್ ಕಾರ್ಡ್ ಪರಿಷ್ಕರಣೆಗೆ ಮುಂದಾಗಿದ್ದ ರಾಜ್ಯ ಸರ್ಕಾರ ಇದೀಗ, ಜನರ ಆಕ್ರೋಶಕ್ಕೆ ಮಣಿದು, ಬಿಪಿಎಲ್ ಕಾರ್ಡ್ ಗಳ ಪರಿಷ್ಕರಣೆಯನ್ನು ಸ್ಥಗಿತಗೊಳಿಸಿದೆ. ಹೀಗಾಗಿ ಬಿಪಿಎಲ್ ಕಾರ್ಡ್ ದಾರರು ತಮ್ಮ ಕಾರ್ಡ್ ಗಳನ್ನು ಸರಿಪಡಿಸಿಕೊಳ್ಳಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಎದುರು ಸಾಲುಗಟ್ಟಿ ನಿಂತಿದ್ದಾರೆ. ಹೌದು ಬಿಪಿಎಲ್ ಕಾರ್ಡ್ ಗಳ ಪರಿಷ್ಕರಣೆ ನಿಲ್ಲಿಸಿದ ರಾಜ್ಯ ಸರ್ಕಾರ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಇದೀಗ ಬಿಪಿಎಲ್ ಕಾರ್ಡ್ ಪರಿಷ್ಕರಣೆಯನ್ನು ಸ್ಥಗಿತಗೊಳಿಸಲಾಗಿದೆ. ರದ್ದಾಗಿರುವ ಕಾರ್ಡ್ ಲಿಸ್ಟ್ ಪಡೆದು ಸರಿಪಡಿಸಲು ಸೂಚನೆ ನೀಡಲಾಗಿದೆ. ಒಂದು ವಾರದಲ್ಲಿ ಕಾರ್ಡ್ ಸರಿಪಡಿಸುವಂತೆ ಸೂಚನೆ ನೀಡಲಾಗಿದೆ. ಹಾಗಾಗಿ ಇದೀಗ ರದ್ದಾಗಿರುವ ಅರ್ಹ ಬಿಪಿಎಲ್ ಕಾರ್ಡ್ ಫಲಾನುಭವಿಗಳು ದಾಖಲೆಗಳನ್ನು ತೆಗೆದುಕೊಂಡು ತಮ್ಮ ಕಾರ್ಡ್ ಗಳನ್ನು ಸರಿಪಡಿಸಿಕೊಳ್ಳುತ್ತಿರುವ ಫಲಾನುಭವಿಗಳು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗಳತ್ತ ಫಲಾನುಭವಿಗಳು ತೆರಳುತ್ತಿದ್ದಾರೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗಳ ಆವರಣದಲ್ಲಿ ಇದೀಗ ಜನಜಂಗುಳಿ ಕಂಡುಬಂದಿದೆ.

Read More

ಬೆಂಗಳೂರು : ವಕ್ಫ್ ವಿವಾದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಕಚೇರಿಗೆ ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಅವರನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ಇಂದು ವಕ್ಫ್ ವಿರುದ್ಧ ಶ್ರೀರಾಮ ಸೇನೆಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಪ್ರತಿಭಟನೆಗೂ ಮುನ್ನ ಚಾಮರಾಜಪೇಟೆಯ ಮಹದೇಶ್ವರ ದೇಗುಲದಲ್ಲಿ ಪೂಜೆ ಸಲ್ಲಿಸಲಾಯಿತು. ಪೂಜೆಯ ಬಳಿಕ ಶಾಸಕ ಜಮೀರ್ ಕಚೇರಿಯ ವರೆಗೂ ಶ್ರೀಮರಾಮ ಸೇನೆ ಪಾದಯಾತ್ರೆ ನಡೆಸಿತು. ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಪುತಾಲಿಕ್ ನೇತೃತ್ವದಲ್ಲಿ ರ್‍ಯಾಲಿ ನಡೆಯಿತು. ಈ ವೇಳೆ ಸಚಿವ ಜಮೀರ್ ಅಹ್ಮದ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದ ಮುತಾಲಿಕ್ ಗೆ ತಡೆ ಒಡ್ಡಲಾಯಿತು. ರ್‍ಯಾಲಿ ಬೇಡ ವಾಹನದಲ್ಲಿ ತೆರಳಿ ಮನವಿಪತ್ರ ಸಲ್ಲಿಸುವಂತೆ ಈ ವೇಳೆ ಪೊಲೀಸರು ಸೂಚನೆ ನೀಡಿದರು. ಮನವೊಲಿಕೆಗೆ ಒಪ್ಪದ ಹಿನ್ನೆಲೆಯಲ್ಲಿ ಪೊಲೀಸರು ಮುತಾಲಿಕ್ ಅವರನ್ನ ವಶಕ್ಕೆ ಪಡೆದುಕೊಂಡಿದ್ದಾರೆ.

Read More

ರಾಯಚೂರು : ತನ್ನ ಊರಿಗೆ ಹೋಗಲು ಬಸ್‌ ಸಿಗಲಿಲ್ಲ ಎಂದು ಪುಂಡನೊಬ್ಬ ಸಿಕ್ಕ ಸಿಕ್ಕ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ರಾಯಚೂರಿನಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ಬಂಧಿತ ಆರೋಪಿಯನ್ನು ಲಿಂಗಸುಗೂರಿನ ಗೋಲಪಲ್ಲಿಯ ತಿಮ್ಮಣ್ಣ ಎಂದು ಗುರುತಿಸಲಾಗಿದೆ. ಗ್ರಾಮದ ಬಳಿ ನ.19ರ ಬೆಳಗಿನ ಜಾವ 2ರ ವೇಳೆ ಆರೋಪಿ ತನ್ನ ಸ್ನೇಹಿತರೊಂದಿಗೆ ಸೇರಿಕೊಂಡು ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದ. ಕಲ್ಲು ತೂರಾಟದಲ್ಲಿ ಮೂರು ಸಾರಿಗೆ ಬಸ್, ಕಾರು ಹಾಗೂ ಲಾರಿಗಳ ಗಾಜುಗಳು ಒಡೆದು ಹೋಗಿದ್ದವು. ಅಲ್ಲದೇ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದವು. ಘಟನೆಯಿಂದಾಗಿ ಮೂರು ಸಾರಿಗೆ ಬಸ್, ಕಾರು ಹಾಗೂ ಲಾರಿಗಳ ಗಾಜುಗಳು ಒಡೆದು ಹೋಗಿದ್ದವು. ಅಲ್ಲದೇ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದವು. ಆರೋಪಿಗಳು ಕುಡಿದ ಅಮಲಿನಲ್ಲಿ ಕಲ್ಲುತೂರಾಟ ನಡೆಸಿರುವುದು ತನಿಖೆಯಲ್ಲಿ ತಿಳಿದು ಬಂದಿತ್ತು. ಮಾತ್ರವಲ್ಲದೇ ಕಳ್ಳನ ಮಾಡಲು ಈ ಕೃತ್ಯ ನಡೆಸಲಾಗಿದೆ ಎಂದು ಶಂಕಿಸಲಾಗಿತ್ತು. ಬಂಧಿತ ಆರೋಪಿ ತನ್ನ ಅಕ್ಕ, ಬಾವನನ್ನ ಬೆಂಗಳೂರಿಗೆ…

Read More

ಬೆಂಗಳೂರು : ವ್ಯಕ್ತಿಯೊಬ್ಬರಿಗೆ ಮಹಿಳೆಯೊಬ್ಬಳು ಖಾಸಗಿ ಫೋಟೋ ಕಳುಹಿಸಿ, ಹನಿಟ್ರ್ಯಾಪ್ ಮೂಲಕ 2 ಕೋಟಿಗೂ ಅಧಿಕ ರೂಪಾಯಿ ಹಣ ವಸೂಲಿ ಮಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಹನಿ ಟ್ರ್ಯಾಪ್ ಮಾಡಿದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೌದು ಸರ್ಕಾರಿ ಸಂಸ್ಥೆಯಲ್ಲಿ ನೌಕರನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯಿಂದ 2.5 ಕೋಟಿ ರೂಪಾಯಿಗಳನ್ನು ವಸೂಲಿ ಮಾಡಲಾಗಿದ್ದು, ಬಂಧಿತ ಆರೋಪಿಗಳನ್ನು ತಬ್ಸಂ ಬೇಗಂ, ಅಜೀಮ್ ಉದ್ದಿನ್, ಆನಂದ್ ಹಾಗೂ ಅಭಿಷೇಕ್ ಎಂದು ಗುರುತಿಸಲಾಗಿದೆ. ವಂಚನೆಗೆ ಒಳಗಾದ ವ್ಯಕ್ತಿಯನ್ನು ಜಿಮ್ ಒಂದರಲ್ಲಿ ಆರೋಪಿ ತಬ್ಸಂ ಬೇಗಂ ಪರಿಚಯ ಮಾಡಿಕೊಂಡಿದ್ದಳು. ಮಗುವನ್ನು ದತ್ತು ಪಡೆದುಕೊಳ್ಳುವ ವಿಚಾರವಾಗಿ ಆರೋಪಿಯು, ವ್ಯಕ್ತಿಗೆ ಹತ್ತಿರವಾಗಿ ವಾಟ್ಸಪ್ ಮೂಲಕ ಚಾಟಿಂಗ್ ಆರಂಭಿಸಿದ್ದಾರೆ. ಈ ವೇಳೆ ಖಾಸಗಿ ಫೋಟೋಗಳನ್ನು ಮಹಿಳೆ ಕಳುಹಿಸಿದ್ದಾಳೆ. 2021 ರಿಂದ ಇಲ್ಲಿಯವರೆಗೂ ಬೆದರಿಸಿ ಹಂತಹಂತವಾಗಿ 2.5 ಕೋಟಿಯವರೆಗೂ ಹಣ ವಸೂಲಿ ಮಾಡಿದ್ದಾರೆ. ಇದೀಗ ವ್ಯಕ್ತಿ ಸಿಸಿಬಿಗೆ ಈ ಕುರಿತು ದೂರು ನೀಡಿದ್ದು, ಸಿಸಿಬಿ ಪೊಲೀಸರು ಆರೋಪಗಳನ್ನು ಅವಶ್ಯಕ ಪಡೆದು…

Read More

ಉತ್ತರಕನ್ನಡ : ಜಿಲ್ಲೆಯ ಮುಂಡಗೋಡು ವಸತಿ ಶಾಲೆಯ ಮಕ್ಕಳಲ್ಲಿ ಮಂಗನಬಾವು ಪತ್ತೆ ಹಿನ್ನೆಲೆಯಲ್ಲಿ ಮುಂಡಗೋಡು ಇಂದಿರಾ ವಸತಿ ಶಾಲೆಗೆ ಮೂರು ದಿನಗಳ ಕಾಲ ರಜೆ ನೀಡಲಾಗಿದೆ ಎಂದು ಕಾರವಾರದಲ್ಲಿ ಉತ್ತರ ಕನ್ನಡದ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಈ ಕುರಿತು ಮಾಹಿತಿ ನೀಡಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ವಸತಿ ಶಾಲೆಯ ಕೆಲವು ಮಕ್ಕಳಲ್ಲಿ ಜ್ವರ ಕಾಣಿಸಿಕೊಂಡಿದೆ. ವಸತಿ ಶಾಲೆಗೆ ಒಂದು ವೈದ್ಯಕೀಯ ತಂಡ ನಿಯೋಜನೆ ಮಾಡಲಾಗುತ್ತದೆ. ಮನೆಗೆ ಹೋಗಲು ಬಯಸುವವರೆಗೆ ಮನೆಗೆ ಕಳುಹಿಸುತ್ತೇವೆ ಎಂದು ಅವರು ತಿಳಿಸಿದರು. ಅಲ್ಲದೇ ಮನೆಗೆ ಹೋದಾಗ ಸೋಂಕು ಹರಡದಂತೆ ಮುನ್ನೆಚ್ಚರಿಕೆಗೆ ಸೂಚನೆ ನೀಡಿದ್ದೇವೆ. ಮನೆಗೆ ಹೋದವರನ್ನು ಐಸೋಲೇಶನ್ ನಲ್ಲಿ ಇರುವಂತೆ ಸೂಚನೆ ನೀಡಲಾಗಿದೆ. ಐಸೋಲೇಶನ್ ನಲ್ಲಿರುವವರ ಬಗ್ಗೆ ನಿಗಾ ವಹಿಸಲು ಗ್ರಾಮ ಪಂಚಾಯಿತಿಗಳಿಗೆ ಸೂಚಿಸಲಾಗಿದೆ ಎಂದು ಉತ್ತರ ಕನ್ನಡದ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಮಾಹಿತಿ ನೀಡಿದರು.

Read More

ಮೈಸೂರು : ಮುಡಾ ಹಗರಣಕ್ಕೆ ಇದೀಗ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಈ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸೆಡ್ಡು ಹೊಡೆದು ರಾಜ್ಯದ ಗಮನ ಸೆಳೆದ ಸ್ನೇಹಮಯಿ ಕೃಷ್ಣ ಅವರು, ಇದೀಗ ಲೋಕಾಯುಕ್ತಕ್ಕೆ ಮತ್ತೊಂದು ದೂರು ದಾಖಲಿಸಿದ್ದು , ನಗರಾಭಿವೃದ್ಧಿ ಸಚಿವ ಭರತಿ ಸುರೇಶ್ ಅವರನ್ನು ಬಂಧಿಸುವಂತೆ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಹೌದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರನ್ನು ಕೂಡಲೇ ಸ್ಪಂದಿಸುವಂತೆ ಸ್ನೇಹಮಯಿ ಕೃಷ್ಣ ಅವರು ಇದೀಗ ಮೈಸೂರು ಲೋಕಾಯುಕ್ತ ಎಸ್ ಪಿ ಟಿಜೆ ಉದೇಶ್ ಅವರಿಗೆ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಮೈಸೂರು ಲೋಕಾಯುಕ್ತ ಕಚೇರಿಗೆ ತೆರಳಿ ವಿಚಾರಣೆಯನ್ನು ಕೂಡ ಎದುರಿಸಿದ್ದಾರೆ. ಅಲ್ಲದೆ ಇತ್ತೀಚಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕೂಡ ಈ ಒಂದು ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದು, ಕಳೆದ ಕೆಲವು ದಿನಗಳ ಹಿಂದೆ ಮುಡಾದ ಮಾಜಿ ಆಯುಕ್ತರು, ಸಿಎಂ ಸಿದ್ದರಾಮಯ್ಯ ಅವರ ಬಾಮೈದ ಮಲ್ಲಿಕಾರ್ಜುನ ಸ್ವಾಮಿ, ಸೇರಿದಂತೆ ಹಲವರನ್ನು ತೀವ್ರ ವಿಚಾರಣೆಗೆ ಒಳಪಡಿಸಿತ್ತು.ಇದೀಗ ಸ್ನೇಹಮಯಿ…

Read More

ಉತ್ತರಕನ್ನಡ : ಕರಾವಳಿ ಭಾಗದಲ್ಲಿ ಅತ್ಯಂತ ದೊಡ್ಡ ಮಟ್ಟದಲ್ಲಿ ಪ್ರವಾಸೋದ್ಯಮ ನೀತಿಯನ್ನು ರೂಪಿಸಿ ಈ ಒಂದು ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಸೂಕ್ತವಾದಂತಹ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು. ಮುರುಡೇಶ್ವರದ ಆರ್.ಎನ್.ಎಸ್ ಗಾಲ್ಫ್ ಕ್ಲಬ್ ರೆಸಾರ್ಟ್​ನಲ್ಲಿ ಆಯೋಜಿಸಿದ್ದ ವಿಶ್ವ ಮೀನುಗಾರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ಕರಾವಳಿಯಲ್ಲಿ ಒಂದು ಪೈವ್ ಸ್ಟಾರ್ ಹೊಟೇಲ್​​ಗಳಿಲ್ಲ. ಆದರೆ ಇದೀಗ ನಮಗೆ ಅವಕಾಶ ಸಿಕ್ಕಿದ್ದು, ನಾವು ಕರಾವಳಿಯನ್ನು ಅಭಿವೃದ್ಧಿಪಡಿಸುತ್ತಿದ್ದೇವೆ ಎಂದರು. ಈ ಭಾಗದಲ್ಲಿ ಬದುಕಿಗಾಗಿ ಹಲವರು ಹೊರಗಡೆ ಹೋಗುತ್ತಿದ್ದಾರೆ. ಕರಾವಳಿಯಲ್ಲಿ ಪ್ರವಾಸೋದ್ಯಮ ಚಟುವಟಿಕೆ ಉತ್ತೇಜಿಸಲು ಮೂರು ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದಿದ್ದು, ಸದ್ಯದಲ್ಲಿಯೇ ಹೊಸ ನೀತಿ ಬರಲಿದೆ.ಬೆಲೆ ಏರಿಕೆಯಿಂದ ತತ್ತರಿಸಿದ ಕಾರಣ ಗ್ಯಾರಂಟಿ ನೀಡಿದ್ದೆವು. ಆದರೆ ಬಿಜೆಪಿಯವರಿಗೂ ಕೂಡ ಬೆಲೆ ಏರಿಕೆ ಅರ್ಥ ಆಗಿಲ್ಲ. ಇದೀಗ ಮಹಾರಾಷ್ಟ್ರ ಸೇರಿದಂತೆ ಹಲವೆಡೆ ಗ್ಯಾರಂಟಿ ಹಣ ಘೋಷಣೆ ಮಾಡಿದೆ ಎಂದರು. ಮೀನುಗಾರರ ಬದುಕನ್ನು ಹಸನಾಗಿಸಲು ಸರ್ಕಾರ ಬದ್ಧವಾಗಿದೆ. ಮೀನುಗಾರರು ಮೃತಪಟ್ಟರೆ ಇದೀಗ 8…

Read More

ದಕ್ಷಿಣಕನ್ನಡ : ಮಾರುಕಟ್ಟೆಯಲ್ಲಿ ಮೂವರು ಪುಂಡರು ಯುವಕನ ಮೇಲೆ ಪುಂಡಾಟ ಮೆರೆದಿದ್ದು, ಸ್ಟೈಲಿಶ್ ಬಟ್ಟೆ ಧರಿಸಿ ಮಾರುಕಟ್ಟೆಗೆ ಬಂದಿದ್ದ ಯುವಕನನ್ನು ಹಿಡಿದು ದಬ್ಬಳದಿಂದ ಆತನ ಪ್ಯಾಂಟ್ ಹೊಲಿಗೆ ಹಾಕಿದ್ದಾರೆ, ಇದರಿಂದ ಮನನೊಂದು ಯುವಕ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ಹೌದು ಮಾರುಕಟ್ಟೆಯಲ್ಲಿ ಹುಡುಗರು ಪುಂಡಾಟಿಕೆ ಮೆರೆದಿದ್ದು, ಯುವಕನ ಪ್ಯಾಂಟಿಗೆ ದಬ್ಬಳದಿಂದ (ಡಬ್ಬಣ) ಹೋಲಿದಿದ್ದಾರೆ. ಇದರಿಂದ ನೊಂದ ಯುವಕ ಆತ್ಮಹತ್ಯೆಗೆ ಯತ್ನಿಸಿ ಇದೀಗ ಆಸ್ಪತ್ರೆಗೆ ದಾಖಲಾಗಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಈ ಒಂದು ಘಟನೆ ನಡೆದಿದೆ. ಸ್ಟೈಲಿಶ್ ಪ್ಯಾಂಟ್ ಧರಿಸಿ ಯುವಕ ಮಾರುಕಟ್ಟೆಗೆ ಬಂದಿದ್ದ. ಮೂವರು ಯುವಕರ ಪುಂಡರ ಗುಂಪು ಆತನನ್ನು ತಡೆದು ನಿಲ್ಲಿಸಿತ್ತು. ಈ ವೇಳೆ ಆತನ ಎರಡು ಕೈಗಳನ್ನು ಹಿಂದಕ್ಕೆ ಲಾಕ್ ಮಾಡಿ, ಪ್ಯಾಂಟನ್ನು ದಬ್ಬಳದಿಂದ ಹೊಲೆದು ವಿಡಿಯೋ ಮಾಡಿದ್ದರು. ಪಣಕಜೆ ನಿವಾಸಿ ಮೊಹಮ್ಮದ್ ಆಯುಬ್ ಎಂಬ ಯುವಕನ ಮೇಲೆ ಶಬ್ಬೀರ್, ಅನಿಶ್ ಪಣಕಜ ಹಾಗೂ ಲಾಯಿಲರಿಂದ ಈ ಒಂದು ಕೃತ್ಯ ನಡೆದಿದೆ.…

Read More

ನವದೆಹಲಿ : ಇತ್ತೀಚಿಗೆ ಸೈಬರ್ ಮುಂಚೆನೇ ಡಿಜಿಟಲ್ ಬಂಧನ ಸೇರಿದಂತೆ ಹಲವು ವಂಚನೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇವೆ. ಇಷ್ಟು ದಿನ ವೆಡ್ಡಿಂಗ್ ಸೈಬರ್ ಕ್ರೈಂ, ಮ್ಯಾಟ್ರಿಮೋನಿಯಲ್ಲಿ ಲಕ್ಷಾಂತರ ರೂಪಾಯಿ ಕಳೆದುಕೊಂಡ ಪ್ರಕರಣಗಳನ್ನು ನೋಡಿದ್ದೇವೆ ಕೇಳಿದ್ದೇವೆ. ವ್ಯಕ್ತಿ ಸತ್ತ ಮೇಲೂ ಅಂತ್ಯಸಂಸ್ಕಾರದಲ್ಲಿ ಸೈಬರ್ ಕ್ರೈಂ ವಂಚಕರು ಮೋಸ ಎಸಗುವ ಹೊಸ ಹಾದಿಯನ್ನು ಕಂಡುಹಿಡಿದುಕೊಂಡಿದ್ದಾರೆ. ಹೌದು ಇಂದಿನ ವೇಗದ ಜಗತ್ತಿನಲ್ಲಿ ಜನರಿಗೆ ಊಟ ತಿಂಡಿ ಮಾಡಲು ಸಹ ಸಮಯವಿಲ್ಲ. ಇನ್ನು ಮನೆಯ ಪ್ರೀತಿಪಾತ್ರರು ಸತ್ತಾಗ ಅವರ ಅಂತ್ಯಕ್ರಿಯೆಗೆ ಎಲ್ಲಿ ಟೈಮ್ ಇರುತ್ತೆ ಹೇಳಿ? ಹಾಗಾಗಿ ಅಂತ್ಯ ಸಂಸ್ಕಾರಕ್ಕೂ ಕೂಡ ಇದೀಗ ಕೆಲವು ಏಜೆನ್ಸಿಗಳು ಕಾರ್ಯನಿರ್ವಹಿಸುತ್ತಿದ್ದು, ಅವುಗಳನ್ನೇ ದುರುಪಯೋಗಪಡಿಸಿಕೊಂಡು ಕೆಲವು ಸೈಬರ್ ವಂಚಕರು ಅಂತ್ಯಸಂಸ್ಕಾರ ಹೆಸರಿನಲ್ಲಿ ವಂಚನೆ ಎಸಗುವ ಹೊಸ ದಾರಿಯನ್ನು ಕಂಡುಕೊಂಡಿವೆ. ಈ ರೀತಿ ಅಂತ್ಯಸಂಸ್ಕಾರ ನಡೆಸುವ ಹಲವು ಎಜೆನ್ಸಿಗಳ ಜಾಹೀರಾತು, ನಂಬರ್ ಸುಲಭವಾಗಿ ಸಿಗುತ್ತದೆ. ಹೀಗೆ ನೀವು ಆಪ್ತರನ್ನು ಕಳೆದುಕೊಂಡ ನೋವಿನಲ್ಲಿ ಎಜೆನ್ಸಿಗೆ ಕರೆ ಮಾಡಿ ಅಂತ್ಯಸಂಸ್ಕಾರಕ್ಕೆ ನಡೆಸಬೇಕು ಎಂದು ಕೇಳಿಕೊಂಡರೆ…

Read More

ಬೆಂಗಳೂರು : ದಾರಿ ಬಿಡುವ ವಿಚಾರಕ್ಕೆ ವಿದ್ಯಾರ್ಥಿಗಳ ನಡುವೆ ಕಿರಿಕ್ ಆಗಿದ್ದು, ವಿದ್ಯಾರ್ಥಿಯೋರ್ವನಿಗೆ ಕುತ್ತಿಗೆಗೆ ಚಾಕು ಇರಿದು ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ರಾಜಾನುಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರೇಸಿಡೆನ್ಸಿ ವಿಶ್ವವಿದ್ಯಾಲಯದ ಬಳಿ ಈ ಒಂದು ಘಟನೆ ನಡೆದಿದೆ. ದಾರಿ ಬಿಡದಿದ್ದಕ್ಕೆ ಗುರಾಯಿಸಿದ ಅಂತ ಹೇಳಿ ಲಿಖಿತ್ ಗೌಡ ಎಂಬ ವಿದ್ಯಾರ್ಥಿಯ ಮೇಲೆ ಜಯಂತ್ ಮತ್ತು ಮಾದೇಶ ಎನ್ನುವ ವಿದ್ಯಾರ್ಥಿಗಳು ಹಲ್ಲೆ ಮಾಡಿದ್ದಾರೆ. ವಿಶ್ವವಿದ್ಯಾಲಯ ಹೊರಗಿನ ಬೈಕ್ ಪಾರ್ಕಿಂಗ್ ಬಳಿ ಜಯಂತ ತಂಡ ದಾಳಿ ಮಾಡಿದೆ ಎನ್ನಲಾಗಿದೆ. ಚಾಕುವಿನಿಂದ ಹಲ್ಲೆ ಮಾಡಿದ ಹಿನ್ನೆಲೆಯಲ್ಲಿ ಲಿಖಿತ್ ಕುತ್ತಿಗೆಗೆ ಗಂಭೀರವಾದ ಗಾಯಗಳಾಗಿವೆ. ಜಗಳ ಬಿಡಿಸಿ ಗಾಯಾಳುಗಳನ್ನು ತಕ್ಷಣ ಸಹಪಾಠಿಗಳು ಆಸ್ಪತ್ರೆಗೆ ಸೇರಿಸಿದ್ದಾರೆ. ರಾಜನಕುಂಟೆ ಠಾಣೆಯಲ್ಲಿ ಗಾಯಾಳು ಲಿಖಿತ್ ಗೌಡ ದೂರು ದಾಖಲಿಸಿದ್ದಾನೆ ಎಂದು ಹೇಳಲಾಗುತ್ತಿದೆ.

Read More