Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಇತ್ತೀಚಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ವಿಧಾನಸಭೆಯಲ್ಲಿ ಗ್ರೇಟರ್ ಬೆಂಗಳೂರು ವಿಧೇಯಕ-2025 ಅನ್ನು ಮಂಡಿಸಿದರು. ಇದಕ್ಕೆ ವಿಪಕ್ಷ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿತು. ಇದೀಗ ಗ್ರೇಟರ್ ಬೆಂಗಳೂರು ವಿಧೇಯಕ ವಿಚಾರವಾಗಿ ರಾಜ್ಯಪಾಲರಿಗೆ ಬಿಜೆಪಿ ನಿಯೋಗವು ದೂರು ನೀಡಿದೆ. ಇಂದು ಗ್ರೇಟರ್ ಬೆಂಗಳೂರು ವಿಧೇಯಕ ವಿಚಾರವಾಗಿ ರಾಜ್ಯಪಾಲರಿಗೆ ದೂರು ಸಲ್ಲಿಸಲಾಗಿದೆ. ವಿರೋಧ ಪಕ್ಷ ಬಿಜೆಪಿ ನಿಯೋಗದಿಂದ ರಾಜಭವನದಲ್ಲಿ ಇಂದು ರಾಜಪಾಲ ಥಾವರ್ ಚಂದ್ ಗೆಹ್ಲೊಟ್ ಅವರಿಗೆ ದೂರು ಸಲ್ಲಿಸಲಾಯಿತು. ವಿಪಕ್ಷ ನಾಯಕರಾದ ಆರ್ ಅಶೋಕ್, ನಾರಾಯಣಸ್ವಾಮಿ ನೇತ್ರತ್ವದಲ್ಲಿ ದೂರು ಸಲ್ಲಿಸಲಾಗಿದೆ. ರಾಜ್ಯಪಾಲ ಥಾವರ್ ಚೆಂದ ಗೆಹ್ಲೋಟ್ ಅವರನ್ನು ಭೇಟಿಯಾಗಿ ದೂರು ಸಲ್ಲಿಸಿದ್ದಾರೆ.
ಬೆಂಗಳೂರು : ರಾಜ್ಯದ ತೊಗರಿ ಬೆಳೆಗಾರರಿಗೆ ಸಿಹಿಸುದ್ದಿ ನೀಡಿದ ಸರ್ಕಾರ, ತೊಗರಿ ಖರೀದಿ ನೋಂದಣಿ ಅವಧಿಯು ಮಾರ್ಚ್ ತಿಂಗಳಾಂತ್ಯದವರೆಗೆ ಅಂದರೆ ಮಾರ್ಚ್ 31 ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಕೃಷಿ ಇಲಾಖೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದರು. ಈ ಕುರಿತು ಕೃಷಿ ಮಾರುಕಟ್ಟೆ ಇಲಾಖೆ ಸಚಿವ ಶಿವಾನಂದ್ ಪಾಟೀಲ್ ಮಾತನಾಡಿ, ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ತೊಗರಿ ಖರೀದಿಯ ನೊಂದಣಿ ಅವಧಿಯನ್ನು ಮಾರ್ಚ್ 31 ವರೆಗೆ ವಿಸ್ತರಣೆ ಮಾಡಲಾಗಿದೆ. ಪ್ರಾಥಮಿಕ ಪತ್ತಿನ ಸಹಕಾರ ಸಂಘ, ರೈತ ಸಹಕಾರ ಕಂಪನಿ, ಹುಟ್ಟುವಳಿ ಸಹಕಾರ ಸಂಘಗಳಲ್ಲಿ ರೈತರು ನೋಂದಣಿ ಮಾಡಿಕೊಳ್ಳಬೇಕು. ಕೇಂದ್ರ ಸರ್ಕಾರ ಕ್ವಿಂಟಲ್ ಗೆ ರೂ. 7550 ಬೆಲೆ ನಿಗದಿಪಡಿಸಿದೆ. ರಾಜ್ಯ ಸರ್ಕಾರ ಕೂಡ 450 ಪ್ರೋತ್ಸಾಹ ಧನ ಘೋಷಣೆ ಮಾಡಿತ್ತು. ಕೆಲವು ಕಡೆ ರಾಜ್ಯದ ಪ್ರೋತ್ಸಾಹ ಧನ ಬಿಲ್ ನಲ್ಲಿ ಸೇರ್ಪಡೆ ಆಗುತ್ತಿಲ್ಲ. ಈ ಕುರಿತು ದೂರುಗಳು ಬಂದಿದ್ದು ಅದನ್ನು ಪರಿಶೀಲನೆ ಮಾಡುತ್ತೇವೆ. ರೈತರಿಗೆ ಪ್ರತಿ ಕುಂಟಲ್ ಗೆ ರೂ.…
ಕಲಬುರ್ಗಿ : ಕಳೆದ ಎರಡು ದಿನಗಳ ಹಿಂದೆ ಕಲ್ಬುರ್ಗಿಯ ಕೇಂದ್ರ ಬಸ್ ನಿಲ್ದಾಣದ ಪಕ್ಕದಲ್ಲಿ ಬಿಕ್ಷಾಟನೆ ಮಾಡಿದ್ದ ಹಣದಲ್ಲಿ ಪಾಲು ನೀಡಿಲ್ಲವೆಂದು ಮಂಗಳಮುಖಿಯರೇ ಸೇರಿಕೊಂಡು ಓರ್ವ ಮಂಗಳಮುಖಿಯನ್ನು ಬೆತ್ತಲೆಗೊಳಿಸಿ, ತಲೆ ಬೋಳಿಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಶೀಲಾ ಅಲಿಯಾಸ್ ವಿಜಯಕುಮಾರ್ (38), ಭವಾನಿ ಅಲಿಯಾಸ್ ಬಸವರಾಜ್ (24) ಮತ್ತು ಅಂಕೀತಾ ಅಲಿಯಾಸ್ ಅಂಕುಶ್ ಬಂಧಿತ ಮಂಗಳಮುಖಿಯರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಬಂಧಿತ ಆರೋಪಿಗಳು ಹಲ್ಲೆಗೆ ಒಳಗಾದ ಮಂಗಳಮುಖಿಯ ಜೊತೆಗೆ ಹಣಕಾಸಿನ ವಿಚಾರಕ್ಕೆ ಗಲಾಟೆ ಮಾಡಿದ್ದಾರೆ. ಈ ವೇಳೆ ಹಲ್ಲೆಗೆ ಒಳಗಾದ ಮಂಗಳ ಮುಖಿಯನ್ನು ಉಳಿದ ಮಂಗಳಮುಖಿಯರು ಬೆತ್ತಲೆಗೊಳಿಸಿ ತಲೆ ಬೋಳಿಸಿ ಹಲ್ಲೆ ಮಾಡಿದ್ದಾರೆ ಈ ಒಂದು ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿದ್ದು, ಸಾರ್ವಜನಿಕರು ಈ ಒಂದು ಕೃತಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು ಬಳಿಕ ಅಶೋಕ್ ನಗರ ಠಾಣೆ ಪೊಲೀಸರು ಸಧ್ಯ ಮೂವರನ್ನು ಅರೆಸ್ಟ್ ಮಾಡಿದ್ದಾರೆ.
ಬೆಂಗಳೂರು : ಇದೇ ಮಾರ್ಚ್ 22ರಂದು ಅಖಂಡ ಕರ್ನಾಟಕ ಬಂದ್ ಗೆ ಈಗಾಗಲೇ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಸೇರಿದಂತೆ ಹಲವು ಕನ್ನಡ ಸಂಘಟನೆಗಳು ಬೆಂಬಲ ನೀಡಿದ್ದು, ಮಾರ್ಚ್ 22 ರಂದು ಅಖಂಡ ಕರ್ನಾಟಕ ಬಂದ್ ಇರಲಿದೆ. ಕೆಲವು ಸಾರ್ವಜನಿಕರಿಗೆ ಅಗತ್ಯತೆಗಳನ್ನು ಹೊರತುಪಡಿಸಿ ಉಳಿದೆಲ್ಲವೂ ಬಂದ್ ಇರಲಿದೆ. ಇದೀಗ ಬೆಂಗಳೂರಿನಲ್ಲಿ ಆಟೋ ಚಾಲಕರ ಸಂಘಟನೆ ಕೂಡ ಕರ್ನಾಟಕ ಬಂದ್ ಗೆ ಬೆಂಬಲ ನೀಡಿದೆ. ಹೌದು ಕರ್ನಾಟಕ ಬಂದ್ ಗೆ ಆಟೋ ಚಾಲಕರು ಸಂಪೂರ್ಣ ಬೆಂಬಲ ಘೋಷಿಸಿದ್ದಾರೆ. ಈ ಬಗ್ಗೆ ಆಟೋ ಚಾಲಕರ ಸಂಘಟನೆ ಅಧ್ಯಕ್ಷ ಶ್ರೀನಿವಾಸ್ ಈ ಕುರಿತು ಹೇಳಿಕೆ ನೀಡಿದ್ದಾರೆ. ಎಲ್ಲಾ ಆಟೋರಿಕ್ಷಾದವರು ಮಾರ್ಚ್ 22 ರಂದು ಅಖಂಡ ಕರ್ನಾಟಕ ಬಂದ್ ಗೆ ಬೆಂಬಲ ಕೊಡುತ್ತೇವೆ. 22ರಂದು ಆಟೋ ರಿಕ್ಷಾ ಚಾಲಕರ ಸಂಘಟನೆ ಬೆಂಬಲ ನೀಡಿದ್ದು, ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ನಡೆಸಿದ ಹಾಲೆಯನ್ನು ಖಂಡಿಸಿ ಮಾರ್ಚ್ 22ರಂದು ನಡೆಯುವ ಬಂದ್ ಗೆ ಬೆಂಬಲ ನೀಡುತ್ತಿದ್ದೇವೆ ಎಂದು ತಿಳಿಸಿದರು.
ಬಳ್ಳಾರಿ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಬಳ್ಳಾರಿಯಲ್ಲಿ ಬಿಜೆಪಿ ಮುಖಂಡನೊಬ್ಬ 7 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿಬರುತ್ತಿದೆ. ಬಳ್ಳಾರಿ ಜಿಲ್ಲೆಯ ಸಿರಾಗುಪ್ಪದಲ್ಲಿ ಬಿಜೆಪಿ ಮುಖಂಡ ದೇವು ನಾಯಕ ಎಂಬಾತನಿಂದ ಈ ಒಂದು ಕೃತ್ಯ ಎಸಗಿರುವ ಆರೋಪ ಕೇಳಿ ಬಂದಿದೆ. ಹೌದು ಬಿಜೆಪಿ ಯುವ ಮುಖಂಡನಿಂದ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಆರೋಪ ಕೇಳಿಬಂದಿದೆ. ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನಲ್ಲಿ ಈ ಒಂದು ದುಷ್ಕೃತ್ಯ ನಡೆದಿದೆ ಎಂದು ತಿಳಿದುಬಂದಿದೆ. ಬಿಜೆಪಿ ಯುವ ಮುಖಂಡ ದೇವು ನಾಯಕ ಎಂಬಾತನಿಂದ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಆಗಿರುವ ಆರೋಪ ಕೇಳಿ ಬರುತ್ತಿದೆ. 7 ವರ್ಷದ ಬಾಲಕಿಯ ಮೇಲೆ ದೇವು ನಾಯಕ್ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗುತ್ತಿದೆ. ದೇವು ನಾಯಕ್ ಓರ್ವ ಮಹಿಳೆಯ ಸಹಾಯದಿಂದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿರುವ ಆರೋಪ ಕೇಳಿ ಬಂದಿದೆ. ಆರೋಪಿ ದೇವು ನಾಯಕ ನನ್ನು ಸದ್ಯಕ್ಕೆ ಸಿರಿಗೇರಿ ಪೊಲೀಸರು ವಶಕ್ಕೆ ಪಡೆಸಿಕೊಂಡಿದ್ದಾರೆ ಸಾಮಾಜಿಕ ಜಾಲತಾಣದಲ್ಲಿ ನಾಯಕರ ಜೊತೆಗಿನ ಫೋಟೋ…
ಯಾದಗಿರಿ : ಯಾದಗಿರಿಯಲ್ಲಿ ತಡರಾತ್ರಿ ಕಾರು ಹಾಗೂ ಬೈಕ್ ನಡುವೆ ಭೀಕರವಾದ ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ, ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನಲ್ಲಿ ನಡೆದಿದೆ. ಮೃತ ಯುವಕರು ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಚಾಮನಾಳ ಗ್ರಾಮದ ನಿವಾಸಿಗಳು ಎಂದು ತಿಳಿದು ಬಂದಿದೆ. ಯುವಕರು ಶಹಪುರದಿಂದ ಚಾಮನಾಳಕ್ಕೆ ಹೋಗುತ್ತಿದ್ದಾಗ ಕಾರು ಮತ್ತು ಬೈಕ್ ಮುಖಾಂತರ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಘಟನೆ ಕುರಿತು ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಾಸನ : ಹಾಸನದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು 2 ಕಾರುಗಳ ಮಧ್ಯ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಪಾಳ್ಯ ಬಳಿ ನಡೆದಿದೆ. 2 ಕಾರುಗಳ ಮಧ್ಯೆ ಡಿಕ್ಕಿ ಆಗಿ ಐವರಿಗೆ ಗಂಭೀರವಾಗಿ ಗಾಯಗಳಾಗಿವೆ. ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ರಸ್ತೆ ಬದಿಗೆ ಎರಡು ಕಾರುಗಳು ಉರುಳಿ ಬಿದ್ದಿವೆ. ಗಾಯಾಳುಗಳಿಗೆ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಆಲೂರು ಪೊಲೀಸ್ ಠಾಣೆಯಲ್ಲಿ ಅಪಘಾತದ ಕುರಿತು ಪ್ರಕರಣ ದಾಖಲಾಗಿದೆ.
ಕಲಬುರ್ಗಿ : ಕಲ್ಬುರ್ಗಿಯಲ್ಲಿ ಘೋರವಾದಂತಹ ದುರಂತ ಸಂಭವಿಸಿದ್ದು, ಆಟವಾಡುತ್ತಿದ್ದಾಗ ಸಂಪ್ಗೆ ಬಿದ್ದು ಇಬ್ಬರು ಮಕ್ಕಳು ಸಾವನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಕೋಳಕೂರ ಗ್ರಾಮದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಮೃತ ಮಕ್ಕಳನ್ನು ಗಿರೀಶ್ ತಿಪ್ಪಣ್ಣ (3) ಹಾಗೂ ತಿಪ್ಪಣ್ಣ ಅವರ ಸಹೋದರಿಯ ಮಗಳು ಶ್ರೇಷ್ಠಾ ಮಹೇಶ್ (2) ಎಂದು ತಿಳಿದುಬಂದಿದೆ. ಆಟವಾಡುತ್ತಿದ್ದಾಗ ಇಬ್ಬರು ಮಕ್ಕಳು ಕಣ್ಮರೆ ಆಗಿದ್ದರು. ಪೋಷಕರು ಎಷ್ಟೇ ಹುಡುಕಾಡಿದರು ಮಕ್ಕಳು ಸಿಕ್ಕಿರಲಿಲ್ಲ. ಮಕ್ಕಳು ಕಾಣದೆ ಇದ್ದಾಗ ಗಾಬರಿಯಾದ ಪೋಷಕರು ಗ್ರಾಮದ ಸಿದ್ದಬಸವೇಶ್ವರ ದೇವಸ್ಥಾನದ ಮೈಕ್ ಮೂಲಕ ಮಕ್ಕಳು ಕಾಣೆಯಾಗಿರುವ ಬಗ್ಗೆ ಗ್ರಾಮಸ್ಥರಿಗೆ ವಿಷಯ ಮುಟ್ಟಿಸಿದರು. ಕೊನೆಗೆ ಪೊಲೀಸರು ಸಂಪ್ ತೆರೆದು ನೋಡಿದಾಗ ಮಕ್ಕಳು ಬಿದ್ದಿರುವುದು ಗೊತ್ತಾಗಿದೆ. ಜೇವರ್ಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊಪ್ಪಳ : ಕೊಪ್ಪಳದಲ್ಲಿ ಇಂದು ಭೀಕರವಾದ ರಸ್ತೆ ಅಪಘಾತ ಸಂಭವಿಸಿದ್ದು, ಮರಳು ತುಂಬಿದ ಟಿಪ್ಪರ್ ಹರಿದು ಬೈಕ್ ಸವಾರರಿಬ್ಬರು ಸಾವನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ನವಲಿ ಬಳಿ ಈ ಒಂದು ಅಪಘಾತ ನಡೆದಿದೆ. ಮೃತಪಟ್ಟವರನ್ನು ರಮೇಶ್ (27) ಸಿದ್ದಪ್ಪ (34) ಎಂದು ತಿಳಿದುಬಂದಿದೆ. ಯುವಕರು ಕನಕಗಿರಿ ತಾಲೂಕಿನ ಗುಡೂರಿನ ನಿವಾಸಿಗಳು ಎಂದು ಹೇಳಲಾಗುತ್ತಿದೆ. ಅಕ್ರಮ ಮರಳು ದಂಧೆಗೆ ಯುವಕರಿಬ್ಬರು ಬಲಿ ಆಗಿರುವ ಆರೋಪ ಕೇಳಿ. ಬರುತ್ತಿದೆ. ಅಕ್ರಮ ಮರಳು ದಂಧೆಗೆ ಬ್ರೇಕ್ ಹಾಕಲು ಜನರು ಆಗ್ರಹಿಸುತ್ತಿದ್ದಾರೆ. ಅಪಘಾತದ ಕುರಿತು ಕನಕಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ : ಕಳೆದ ವರ್ಷ ಬೆಳಗಾವಿ ತಾಲೂಕಿನ ವಂಟಮೂರಿ ಎಂಬ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ನಡು ರಸ್ತೆಯಲ್ಲೆ ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿದ್ದ ಘಟನೆ ಇಡೀ ದೇಶದಾದ್ಯಂತ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ಇದೀಗ ಅಂತದ್ದೇ ಘಟನೆ ನಡೆದಿದ್ದು, ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹರ್ಲಾಪುರ ಗ್ರಾಮದಲ್ಲಿ ಜಮೀನು ವಿಚಾರಕ್ಕೆ ಗಲಾಟೆ ನಡೆದು ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಹೌದು 4 ಎಕರೆ 19 ಗುಂಟೆ ಜಮೀನು ವಿಚಾರಕ್ಕೆ ಸಂಬಂಧ ಪಟ್ಟಂತೆ ನಡೆದ ಗಲಾಟೆಯಲ್ಲಿ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಆರೋಪ ಕೇಳಿಬಂದಿದೆ. 15ಕ್ಕೂ ಹೆಚ್ಚು ಜನ ರೈತ ಸಂಘದವರ ಮುಂದಾಳತ್ವದಲ್ಲಿ ಬಂದು ಹಲ್ಲೆ ನಡೆಸಿದರು. ನಾನು ತಕ್ಷಣವೇ ಪೊಲೀಸರಿಗೆ ಕರೆ ಮಾಡಿದೆ. ಆದರೆ, ಅವರು ಸ್ಥಳಕ್ಕೆ ತಲುಪಿದ ಬಳಿಕವೂ ನನ್ನ ಬಟ್ಟೆ ಹರಿದು ಹಲ್ಲೆ ನಡೆಸಿದ್ದಾರೆ. ಅರಬೆತ್ತಲೆಯಾಗಿಯೇ ನಾನು ಸವದತ್ತಿ ಪೊಲೀಸ್ ಠಾಣೆಗೆ ಹೋದೆ. ಆದರೆ, ಪೊಲೀಸರು ದೂರು ದಾಖಲಿಸಲಿಲ್ಲ ಎಂದು ಸಂತ್ರಸ್ತ ಮಹಿಳೆ ಆರೋಪಿಸಿದ್ದಾರೆ. ಘಟನೆ…












