Subscribe to Updates
Get the latest creative news from FooBar about art, design and business.
Author: kannadanewsnow05
ತುಮಕೂರು : ತುಮಕೂರಿನ ಚಿಕ್ಕನಾಯಕನಹಳ್ಳಿ ತಾಲೂಕಿನ ಹಂದನಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಗೋಪಾಲಪುರ ಗ್ರಾಮದಲ್ಲಿ ದಲಿತ ಮಹಿಳೆಯನ್ನು ಭೀಕರವಾಗಿ ಕೊಲೆ ಮಾಡಿದ್ದ 21 ಆರೋಪಿಗಳಿಗೆ ಇದೀಗ ಜೀವಾವಧಿ ಶಿಕ್ಷೆ ಪ್ರಕಟಿಸಿ ತುಮಕೂರಿನ ಮೂರನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ನಿಂದ ಈ ಒಂದು ತೀರ್ಪು ಪ್ರಕಟಿಸಿ ಆದೇಶ ಹೊರಡಿಸಿದೆ. ಗೋಪಾಲಪುರ ಗ್ರಾಮದ 21 ಅಪರಾಧಿಗಳಿಗೆ ಇದೀಗ ಜೀವಾವಧಿ ಶಿಕ್ಷೆಯನ್ನು ಪ್ರಕಟಿಸಿದೆ. ತುಮಕೂರಿನ 3ನೇ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಶಿಕ್ಷೆ ಪ್ರಕಟಿಸಲಿದೆ. ಒಟ್ಟು 27 ಆರೋಪಿಗಳಲ್ಲಿ 6 ಮಂದಿ ಈಗಾಗಲೇ ಸಾವನ್ನಪ್ಪಿದ್ದು, ಉಳಿದ 21 ಮಂದಿ ಆರೋಪಿಗಳು ಎಂದು ಕೋರ್ಟ್ ಆದೇಶಿಸಿದೆ. ಐಪಿಸಿ ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ ಅಡಿ ಶಿಕ್ಷೆಯ ಪ್ರಮಾಣವನ್ನು ನ್ಯಾಯಾಧೀಶರು ಪ್ರಕಟಿಸಲಿದ್ದಾರೆ. ಜೀವಾವಧಿ ಶಿಕ್ಷೆ ಹಾಗೂ ಅಪರಾಧಿಗಳಿಗೆ ತಲಾ 13, 500 ದಂಡ ವಿಧಿಸಿ ಒಟ್ಟು 2,83,500 ತಂಡ ವಿಧಿಸಿದೆ. ಪ್ರಕರಣ ಹಿನ್ನೆಲೆ? 2010 ಜೂನ್ 28 ರಂದು ಚಿಕ್ಕನಾಯಕನಹಳ್ಳಿ ತಾಲೂಕಿನ…
ನವದೆಹಲಿ : ಗ್ಯಾರಂಟಿ ಯೋಜನೆ ಪರೀಕ್ಷೆ ಬಗ್ಗೆ ಪದೇಪದೇ ಪ್ರತಾಪ್ ಇಸಿರುವ ವಿಚಾರವಾಗಿ, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸುಯಾವುದೇ ಕಾರಣಕ್ಕೂ ‘ಗ್ಯಾರಂಟಿ’ ಯೋಜನೆ ನಿಲ್ಲುವುದಿಲ್ಲ, ಪರಿಷ್ಕರಣೆಯು ಇಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆವುದಿಲ್ಲ. ಅಲ್ಲದೇ ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಣೆ ಕೂಡ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಇಂದು ದೆಹಲಿಯ ಅಶೋಕ ಹೋಟೆಲ್ ನಲ್ಲಿ ನಂದಿನಿ ಉತ್ಪನ್ನಗಳ ಬಿಡುಗಡೆ ಹಾಗೂ ಮಾರಾಟಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದರು. ಗ್ಯಾರೆಂಟಿ ಯೋಜನೆಗೆ ಬಿಜೆಪಿ ಅವರ ಬಳಿ ದುಡ್ಡು ಕೇಳಿದ್ವಾ? ಬಿಪಿಎಲ್ ಕಾರ್ಡ್ ವಿಚಾರದಲ್ಲಿ ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಆಹಾರ ಭದ್ರತಾ ಕಾಯ್ದೆ ರಾಜ್ಯಸಭೆಯಲ್ಲಿ ಮಂಡಿಸಿದಾಗ ವಿರೋಧಿಸಿದ್ದರು. ಮುರಳಿ ಮನೋಹರ ಜೋಶಿ ವೋಟ್ ಸೆಕ್ಯೂರಿಟಿ ಆಕ್ಟ್ ಎಂದಿದ್ದರು. ನಾನು ಈ ಹಿಂದೆ ಸಿಎಂ ಆಗಿದ್ದಾಗ 7 ಕೆಜಿ ಅಕ್ಕಿಯನ್ನು ಕೊಡುತ್ತಿದ್ದೆ. ಬಿಎಸ್ ಯಡಿಯೂರಪ್ಪ ಸಿಎಂ ಆದ ಬಳಿಕ 7 ಕೆಜಿಯಿಂದ 5 ಕೆಜಿಗೆ ಇಳಿಸಿದರು. ಅಂದಿನ ಬಿ ಎಸ್ ಯಡಿಯೂರಪ್ಪ ಸಂಪುಟದಲ್ಲಿ…
ಮೈಸೂರು : ಮನೆ ನಿರ್ಮಾಣಕ್ಕೆ ಖಾತೆ ಹಾಗೂ ನಕ್ಷೆ ಅನುಮೋದನೆಗಾಗಿ ರೂ. 40,000 ಲಂಚ ಸ್ವೀಕರಿಸುತ್ತಿದ್ದ ವೇಳೆ ಬಿಲ್ ಕಲೆಕ್ಟರ್ ಒಬ್ಬ ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಹೌದು 40 ಸಾವಿರ ರೂ.ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ದಿನೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಮನೆ ನಿರ್ಮಾಣಕ್ಕೆ ಖಾತೆ ಹಾಗೂ ನಕ್ಷೆ ಅನುಮೋದನೆಗೆ 2 ಲಕ್ಷ ರೂ. ಲಂಚ ಕೇಳಿದ್ದ ದಿನೇಶ್, ಮುಂಗಡವಾಗಿ 40 ಸಾವಿರ ರೂ. ಲಂಚ ತೆಗೆದುಕೊಳ್ಳುವಾಗ ಬಲೆಗೆ ಬಿದಿದ್ದಾರೆ. ಎಸ್ಪಿ ಟಿಜೆ ಉದೇಶ್ ಮಾರ್ಗದರ್ಶನದಲ್ಲಿ ಈ ಒಂದು ಕಾರ್ಯಾಚರಣೆ ಮಾಡಿದ್ದು, ಇನ್ಸಪೆಕ್ಟರ್ ರವಿಕುಮಾರ್ ನೇತೃತ್ವದಲ್ಲಿ ಟ್ರ್ಯಾಪ್ ಮಾಡಲಾಗಿದೆ. ದಿನೇಶ್ಗೆ ಸಹಕಾರ ನೀಡುತ್ತಿದ್ದ ಮಧ್ಯವರ್ತಿ ಚಂದನ್ ಕೂಡ ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು : ತುಪ್ಪದ ವ್ಯಾಪಾರಿಯ ಮೇಲೆ ಮಚ್ಚಿನಿಂದ ದಾಳಿ ಮಾಡಿದ ದುಷ್ಕರ್ಮಿಗಳು ತಲೆಗೆ ಮೆಚ್ಚಿನಿಂದ ಭೀಕರವಾಗಿ ಹಲ್ಲೆ ನಡೆಸಿ, ಕೊಲೆ ಮಾಡಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಬಳ್ಳೂರಿನಲ್ಲಿ ನಡೆದಿದೆ. ಹತ್ಯೆಯಾದ ವ್ಯಕ್ತಿಯನ್ನು ಮಧುರೈ ಮೂಲದ ಅಲಗರಾಜ್(31) ಎಂದು ಗುರುತಿಸಲಾಗಿದೆ. ಶರಾವತಿ ಬಾರ್ ಬಳಿ ಅರೆನಗ್ನ ಸ್ಥಿತಿಯಲ್ಲಿ ಅಲಗರಾಜ್ ಶವ ಪತ್ತೆಯಾಗಿದೆ. ಇನ್ನು ಘಟನಾ ಸ್ಥಳದಲ್ಲಿ TVS ಎಕ್ಸೆಲ್ ಬೈಕ್, ಹಾಗೂ ತುಪ್ಪದ ಟಿನ್ ಪತ್ತೆಯಾಗಿದ್ದು, ಚಿಂದಿ ಆಯುವವರು ಮೃತದೇಹವನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಅತ್ತಿಬೆಲೆ ಠಾಣೆ ಪೊಲೀಸರು, ಶ್ವಾನದಳ, ಎಫ್ಎಸ್ಎಲ್ ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಹಳೇ ವೈಷಮ್ಯದ ಹಿನ್ನೆಲೆ ತಲೆಗೆ ಮಚ್ಚಿನಿಂದ ಹೊಡೆದು ಹತ್ಯೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಈ ಸಂಬಂಧ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಚಿಕ್ಕಬಳ್ಳಾಪುರ : ಗಂಡನ ಮನೆಯವರ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು, ಮಹಿಳೆಯೊಬ್ಬಳು ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ಚಿಕ್ಕಬಳ್ಳಾಪುರ ಜಿಲ್ಲೆಯ ಗುಮ್ಮನಹಳ್ಳಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ರೂಪಾ (29) ಎಂದು ತಿಳಿದುಬಂದಿದೆ. ಕಳೆದ ಎರಡು ವರ್ಷಗಳ ಹಿಂದೆ ರೂಪ ಸುರೇಶ್ ಎನ್ನುವ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಳು. ಮದುವೆ ವೇಳೆ ರೂಪಾ ಕುಟುಂಬಸ್ಥರು 100 ಗ್ರಾಂ ಒಡವೆ ಸಹಿತ, ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಮದುವೆ ಸಹ ಮಾಡಿಕೊಟ್ಟಿದ್ದರು. ಸುರೇಶ್ ಕೂಡ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಡಾಟಾ ಎಂಟ್ರಿ ಆಪರೇಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ. ಆದರೆ ಸುರೇಶ್ ಕುಟುಂಬಸ್ಥರು ಮದುವೆಗೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿದ್ದೇವೆ. ಆ ಹಣವನ್ನು ತೆಗೆದುಕೊಂಡು ಬಾ ಎಂದು ಆಕೆಗೆ ಕಿರುಕುಳ ನೀಡುತ್ತಿದ್ದರು. ಕಿರುಕುಳಕ್ಕೆ ಬೇಸತ್ತ ರೂಪಾ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಸಾವಿಗೂ ಮುನ್ನ ರೂಪಾ ಡೆತ್ ನೋಟ್ ಬರೆದಿಟ್ಟು, ಅದರಲ್ಲಿ ನನ್ನ ಸಾವಿಗೆ ಗಂಡ ಸುರೇಶ್, ಮಾವ ನರಸಿಂಹಮೂರ್ತಿ ಅತ್ತೆ ದೇವಮ್ಮ ಕಾರಣ…
BIG NEWS : ರಾಜ್ಯ ಬಿಜೆಪಿಯಲ್ಲಿ ಮುಂದುವರೆದ ‘ಬಣ’ ಬಡಿದಾಟ : ಪ್ರತ್ಯೇಕ ಸಭೆ ನಡೆಸಿ ಬಿವೈವಿಗೆ ಸೆಡ್ಡು ಹೊಡೆದ ನಾಯಕರು
ಬೆಂಗಳೂರು : ಬಿಜೆಪಿಯಲ್ಲಿ ಬಣ ರಾಜಕೀಯ ಇದೀಗ ಮತ್ತೆ ಮುಂದುವರೆದಿದ್ದು, ಮಾಜಿ ಸಚಿವ ಕುಮಾರ್ ಬಂಗಾರಪ್ಪ ನಿವಾಸದಲ್ಲಿ ಅತೃಪ್ತ ನಾಯಕರು ಭೇಟಿ ನೀಡಿ ಸಭೆ ನಡೆಸಿದ್ದಾರೆ. ಅರವಿಂದ್ ಲಿಂಬಾವಳಿ, ರಮೇಶ್ ಜಾರಕಿಹೊಳಿ, ಪ್ರತಾಪ್ ಸಿಂಹ ಸೇರಿದಂತೆ ಅತೃಪ್ತ ಬಣದ ನಾಯಕರು ಭೇಟಿ ನೀಡಿ, ವಕ್ಫ್ ಹೋರಾಟದ ಕುರಿತು ಸುಮಾರು 20 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಹೌದು ಬೆಂಗಳೂರಿನ ಸದಾಶಿವ ನಗರದಲ್ಲಿರುವ ಕುಮಾರ್ ಬಂಗಾರಪ್ಪ ನಿವಾಸದಲ್ಲಿ ಸುಮಾರು 20 ನಿಮಿಷಗಳ ಕಾಲ ಅತೃಪ್ತ ನಾಯಕರು ಸಭೆ ನಡೆಸಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಪ್ರತ್ಯೇಕವಾಗಿ ಸಭೆ ನಡೆಸಿದ್ದಾರೆ ಎನ್ನಲಾಗಿದೆ ಈ ಮೂಲಕ ಬಿಜೆಪಿಯ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರಗೆ ಈ ನಾಯಕರು ಸೆಡ್ಡು ಹೊಡೆದಿದ್ದಾರೆ. ಭೇಟಿ ಬಳಿ ಒಂದೇ ಕಾರಿನಲ್ಲಿ ನಾಯಕರು ತೆರಳಿದ್ದಾರೆ ಹೀಗಾಗಿ ಅತೃಪ್ತ ನಾಯಕರು ಸಭೆ ಇದೀಗ ತೀವ್ರ ಕುತೂಹಲ ಮೂಡಿಸಿದೆ ಎಂದು ಹೇಳಲಾಗುತ್ತಿದೆ.
ಮೈಸೂರು : ಮುಡಾ ಹಗರಣಕ್ಕೆ ಸಂಬಂಧ ಪಟ್ಟಂತೆ ಈಗಾಗಲೇ ಲೋಕಾಯುಕ್ತ ಅಧಿಕಾರಿಗಳು ಹಾಗೂ ಇಡಿ ಅಧಿಕಾರಿಗಳು ತನಿಖೆಯನ್ನು ಚುರುಕು ಗೊಳಿಸಿದ್ದು, ಇದರ ಬೆನ್ನಲ್ಲೇ ಎಂಬ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಸ್ನೇಹಮಯಿ ಕೃಷ್ಣ ಅವರ ಆಡಿಯೋ ಒಂದು ಸಿಕ್ಕಿದ್ದು, ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಮತ್ತೊಂದು ದೂರು ದಾಖಲಿಸುತ್ತೇನೆ ಎಂದು ತಿಳಿಸಿದ್ದಾರೆ. ಮೈಸೂರಿನಲ್ಲಿ ನಡೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸ್ನೇಹಮಯಿ ಕೃಷ್ಣ ಈಗ ಹುಚ್ಚರಾಗಿದ್ದಾರೆ. ರಾತ್ರಿ ವೇಳೆಯಲ್ಲೂ ಲೋಕಾಯುಕ್ತ ಕಚೇರಿಯ ಸುತ್ತ ಸುತ್ತುತ್ತಿದ್ದಾರೆ. ಅವರ ಇನ್ನೊಂದು ಆಡಿಯೋ ನನಗೆ ಸಿಕ್ಕಿದೆ. ಈ ಬಗ್ಗೆ ಕಾನೂನಾತ್ಮವಾಗಿ ಹೋರಾಟ ಮಾಡುತ್ತೇನೆ. ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ದೂರನ್ನ ದಾಖಲಿಸುತ್ತೇನೆ ಎಂದು ಕೆಪಿಸಿಸಿ ಮಾಧ್ಯಮ ವಕ್ತಾರ ಎಂ. ಲಕ್ಷ್ಮಣ್ ಹೇಳಿದ್ದಾರೆ. ಕೆ. ಆರ್ ಕ್ಷೇತ್ರದ ಶಾಸಕ ಶ್ರೀವತ್ಸ, ಸಿಎಂ ಸಿದ್ದರಾಮಯ್ಯ ಅವರು ಮುಡಾದ 14 ಸೈಟ್ಗಳನ್ನ ವಾಪಸ್ ಕೊಡುವವರೆಗೆ ಹೋರಾಟ ಮಾಡಿ ಈಗ ಸುಮ್ಮನಿದ್ದಾರೆ. ಆದರೆ ನಾನು ಯಾವುದೇ ಕಾರಣಕ್ಕೂ ಸುಮ್ಮನಿರುವುದಿಲ್ಲ ಸ್ನೇಹ ಮೈ ಕೃಷ್ಣ…
ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಗೂ ಇದೀಗ ನಂದಿನಿ ಉತ್ಪನ್ನಗಳು ಕಾಲಿಟ್ಟಿದ್ದು, ಇಂದು ದೆಹಲಿಯ ಅಶೋಕ್ ಹೋಟೆಲ್ ನಲ್ಲಿ ಸಿಎಂ ಸಿದ್ದರಾಮಯ್ಯ ನಂದಿನಿ ಉತ್ಪನ್ನಗಳನ್ನು ಬಿಡುಗಡೆ ಮಾಡಿ ಮಾರಾಟಕ್ಕೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು ಹಿಂದಿನ ಕಾಲದಲ್ಲಿ ದೇವತೆಗಳು ಸಾರಾಯಿ ಕುಡಿಯುತ್ತಿದ್ದರು. ಆದರೆ ನಿಮಗೆ ಸಾರಾಯಿ ಕುಡೀರಿ ಎಂದು ಹೇಳಲ್ಲ. ಹಾಲು ಕುಡಿಯಿರಿ ಹಾಲು ಕಂಪ್ಲೀಟ್ ಫುಡ್ ಎಂದು ತಿಳಿಸಿದರು. ಇಂದು ದೆಹಲಿಯ ಅಶೋಕ್ ಹೋಟೆಲ್ ನಲ್ಲಿ ಹಮ್ಮಿಕೊಂಡಿದ್ದ ನಂದಿನಿ ಉತ್ಪನ್ನಗಳ ಬಿಡುಗಡೆ ಹಾಗೂ ಮಾರಾಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪಶು ಸಂಗೋಪನೆ ರೈತರು ಉಪ ಕಸುಬಾಗಿದೆ. ಗುಜರಾತ್ ನಲ್ಲಿ ಕುರಿಯನ್ ಹಾಲು ಉತ್ಪಾದಕರ ಸಂಘಟನೆ ಮಾಡಿದರು. ಹಾಗಾಗಿ ಇಡೀ ದೇಶಾದ್ಯಂತ ಗುಜರಾತ್ ಪ್ರಥಮ ಸ್ಥಾನದಲ್ಲಿದೆ. ಹೈನುಗಾರಿಕೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದರು. ನಾನು ಪಶು ಸಂಗೋಪನೆ ಇಲಾಖೆಯ ಸಚಿವನಾಗಿ ಕೆಲಸ ಮಾಡಿದ್ದೇನೆ. ಅಲ್ಲದೆ ಒಂದು ವರ್ಷ ಕೆಎಂಎಫ್ ಅಧ್ಯಕ್ಷನಾಗಿ ಕೂಡ ಕೆಲಸ ಮಾಡಿದ್ದೇನೆ. ಕರ್ನಾಟಕಕ್ಕೆ ಒಂದು…
ಚಿಕ್ಕಮಗಳೂರು : ರದ್ದುಪಡಿಸಿರುವ BPL ಕಾರ್ಡ್ ನಲ್ಲಿ ಬಡವರಿದ್ದರೆ, ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡ್ತೀರಾ?ಎಂದು ಚಿಕ್ಕಮಂಗಳೂರಿನಲ್ಲಿ ವಿಧಾನಪರಿಷತ್ ಬಿಜೆಪಿ ಸದಸ್ಯ ಸಿಟಿ ರವಿ ಸಿಎಂ ಸಿದ್ದರಾಮಯ್ಯಗೆ ಸವಾಲು ಹಾಕಿದ್ದಾರೆ. ಚಿಕ್ಕಮಗಳೂರುನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅನರ್ಹರರನ್ನು, ನೌಕರರನ್ನು, ಟ್ಯಾಕ್ಸ್ ಕಟ್ಟುವವರ ಕಾರ್ಡುಗಳನ್ನು ರದ್ದುಪಡಿಸಲಿ. ಕಾನೂನು ಪ್ರಕಾರ ಹೋದರೆ ಎಷ್ಟು ಕಾರ್ಡ್ ರದ್ದಾಗುತ್ತದೆ ಲೆಕ್ಕ ಹಾಕಿದ್ದೀರಾ? ಕೆಲವು ವಿಧಾನಸಭಾ ಕ್ಷೇತ್ರದಲ್ಲಿ ಆಡಳಿತ ಪಕ್ಷದ ಶಾಸಕರುಗಳು ಇವರು ನಮ್ಮ ಪಕ್ಷದವರೆಂದು ಕೆಲ ಕಾಡುಗಳನ್ನು ಉಳಿಸಿಕೊಂಡಿದ್ದಾರೆ. ಮುಸ್ಲಿಮರಿಗೆ ಮಾತ್ರ ಬಿಪಿಎಲ್ ಕಾರ್ಡ್, ಹಿಂದುಗಳಿಗೆ ಇಲ್ವಾ? ಒಂದು ಕೋಮಿನವರನ್ನು ತೆಗೆದು ಮತ್ತೊಬ್ಬರನ್ನು ಬಿಡುವುದು ಯಾವ ನ್ಯಾಯ? ಎಂದು ಚಿಕ್ಕಮಗಳೂರಿನಲ್ಲಿ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿಟಿ ರವಿ ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಉಡುಪಿ : ಬಿಪಿಎಲ್ ಕಾರ್ಡ್ ಗಳ ಪರಿಷ್ಕರಣೆಯ ವೇಳೆ ಅರ್ಹ ಫಲಾನುಭವಿಗಳ ಬಿಪಿಎಲ್ ಕಾರ್ಡುಗಳು ರದ್ದಾಗಿರುವ ಕುರಿತಾಗಿ, ಇಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಅರ್ಹ ಬಿಪಿಎಲ್ ಕಾರ್ಡ್ ದಾರರಿಗೆ ಸರ್ಕಾರ ಹಾಗೂ ಕಾಂಗ್ರೆಸ್ ಪಕ್ಷ ಯಾವುದೇ ರೀತಿಯ ಅನ್ಯಾಯ ಮಾಡಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಭರವಸೆ ನೀಡಿದರು. ಉಡುಪಿಯ ಕೊಲ್ಲೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಈ ಕುರಿತಂತೆ ಹೇಳಿಕೆ ನೀಡಿದ್ದು, ಯಾರ್ಯಾರ ಕಾರ್ಡ್ ವಜಾ ಮಾಡಿದ್ದಾರೆ ಪಟ್ಟಿ ಕೊಡಬೇಕು ಎಂದು ಈಗಾಗಲೇ ಆಯಾ ಜಿಲೆಗಳ ಮಂತ್ರಿಗಳಿಗೆ ಸೂಚಿಸಲಾಗಿದೆ. ಯಾರು ಬಿಪಿಎಲ್ ಕಾರ್ಡ್ ಗಳಿಗೆ ಅರ್ಹರಿದ್ದಾರೋ ಅದನ್ನು ಸರಿ ಮಾಡಿ ಮರು ಅರ್ಜಿ ಸಲ್ಲಿಸಬೇಕು. ಅರ್ಹರಿಗೆ ನ್ಯಾಯ ಕೊಡುವ ಕೆಲಸವನ್ನು ಸರ್ಕಾರ ಮಾಡುತ್ತದೆ ಯಾರು ಕೂಡ ಭಯಪಡಬಾರದು ಎಂದು ತಿಳಿಸಿದರು. ಬಿಪಿಎಲ್ ಅರ್ಹರಿಗೆ ಸರ್ಕಾರ ಅನ್ಯಾಯ ಆಗೋಕೆ ನಮ್ಮ ಪಕ್ಷ ಸರ್ಕಾರ ಬಿಡುವುದಿಲ್ಲ. ನಾವು ಈಗಾಗಲೇ ಮಂತ್ರಿಗಳಿಗೆ ಹೇಳಿದ್ದೇವೆ ಅದರ ಪಟ್ಟಿ ಕೊಡಬೇಕು ಎಂದು ಹೇಳಿದ್ದೇವೆ. ಅದಕ್ಕೆ ನಮ್ಮ ಗ್ಯಾರಂಟಿಗಳ…













